ಕಳೆ ಸೇವಂತಿಗೆ ಸಸ್ಯದ ಸ್ವಾಭಾವಿಕ ನಿಯಂತ್ರಣ ಸಾಧ್ಯ.
ಯಾವುದೇ ಒಂದು ಸಸ್ಯ ಶಾಶ್ವತವಾಗಿ ಉಳಿಯುವುದೇ ಇಲ್ಲ. ಸಸ್ಯಗಳನ್ನು ಭೂಮಿಯಿಂದ ನಿರ್ಮೂಲನೆ ಮಾಡಲು ಮನುಷ್ಯ ಮಾತ್ರರಿಂದ ಸಾಧ್ಯವಿಲ್ಲ. ಮನುಷ್ಯ ಏನಾದರೂ ಮಾಡಿದರೆ ಅದು ತಾತ್ಕಾಲಿಕ ಮಾತ್ರ. ಕಳೆ ನಾಶಕ ಹೊಡೆದರೆ 2 ತಿಂಗಳಲ್ಲಿ ಮತ್ತೆ ಬೆಳೆಯುತ್ತದೆ. ಕೈಯಿಂದ ಕಿತ್ತರೆ ಮತ್ತೆ ಒಂದು ವಾರದಲ್ಲಿ ಚಿಗುರುತ್ತದೆ. ಯಂತ್ರದಿಂದ ಕಿತ್ತರೆ ಸಹ ಹೀಗೆಯೇ. ಆದರೆ ಅನಾದಿ ಕಾಲದಿಂದಲೂ ಒಂದೊಂದು ಕಳೆಯಂತೆ ಬಾಧಿಸುವ ಸಸ್ಯ ಅಥವಾ ಹುಲ್ಲು ಸಸ್ಯ ಹುಟ್ಟಿ ಮೆರೆದು ತನ್ನಷ್ಟಕ್ಕೆ ಅಳಿದು ಮತ್ತೊಂದು ಬಂದು ಚಕ್ರ ಮುಂದುವರಿಯುತ್ತಲೇ ಇದೆ….
