ಅಡಿಕೆ ಬೆಳೆಯಲ್ಲಿ ಹೆಚ್ಚಳವಾಗುತ್ತಿರುವ ಸಮಸ್ಯೆ

ಅಡಿಕೆ ಬೆಳೆಯಲ್ಲಿ ಈ ಸಮಸ್ಯೆ ಬಾರೀ ಹೆಚ್ಚಳವಾಗಲು ಕಾರಣ.

ಇತ್ತೀಚೆಗೆ ಬಹುತೇಕ ಎಲ್ಲಾ ಅಡಿಕೆ ಬೆಳೆಗಾರರಲ್ಲೂ ಈ ಸಮಸ್ಯೆ ಹೆಚ್ಚಾಗುತ್ತಿದೆ. ಎಲ್ಲರೂ ಇದಕ್ಕೆ ಏನು ಪರಿಹಾರ ಎಂದು ಕೇಳುವವರು. ಆದರೆ ಯಾಕಾಗಿ ಈ  ಸಮಸ್ಯೆ ಹೆಚ್ಚಾಯಿತು ಎಂದು ಯಾರೂ ಹೇಳುತ್ತಿಲ್ಲ.ಇದು ಹೊಸ ಸಮಸ್ಯೆ ಅಲ್ಲ. ಅಡಿಕೆ ಬೆಳೆ ಪ್ರಾರಂಭವಾದಾಗಿನಿಂದಲೂ ಇದ್ದುದೇ. ಆದರೆ ಈಗ ಅದು ಮಿತಿ ಮೀರಿ ಹೆಚ್ಚಳವಾಗುತ್ತಿದೆ.ಎಲ್ಲಾ ಕಡೆಯಲ್ಲೂ ಇದು ಅಡಿಕೆ ಬೆಳೆಯನ್ನು ಪೀಡಿಸುತ್ತಿದೆ. ಅಡಿಕೆ ಮರ/ ಸಸಿಗಳ ಎಲೆಯನ್ನು ಹಾಳು ಮಾಡುವ ಒಂದು ರೀತಿಯ ತಿಗಣೆ ಇತ್ತೀಚಿನ ವರ್ಷಗಳಲ್ಲಿ  ಭಾರೀ ಸಮಸ್ಯೆ ಉಂಟು ಮಾಡುತ್ತಿದೆ….

Read more
ಬೂದಿಯ ಮೂಲಕ ಕೀಟ ನಿಯಂತ್ರಣ

ಸಾವಯವ ಕೀಟ –ರೋಗ-ನಿಯಂತ್ರಣ ವಿಧಾನ.

ಸರ್ವ ರೋಗಕ್ಕೆ ಬೂದಿ ಮದ್ದು ಎಂಬುದನ್ನು ಎಲ್ಲರೂ ಕೇಳಿರಬಹುದು. ಬೂದಿ ಎಂದರೆ ಅದು ಮರವನ್ನು ಸುಟ್ಟಾಗ ಸಿಗುವ ವಸ್ತು, ಇದು ಕ್ಷಾರೀಯ. ಇದನ್ನು ಬೆಳೆಗಳ  ಮೇಲೆ ಚೆಲ್ಲಿದಾಗ ಅದು ಒಂದು ಪೊಟ್ಯಾಶಿಯಂ ಸತ್ವದ ಪೋಷಕವಾಗಿಯೂ ,  ಕೀಟ ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತದೆ. ಇದನ್ನು ಬಹುಸ್ತರದ ಸಾವಯವ ಕೀಟ –ರೋಗ-ನಿಯಂತ್ರ ಕ ಎಂಬುದಾಗಿ ಹಿರಿಯರು ಹೇಳುತ್ತಾ ಬಂದಿದ್ದಾರೆ. ದುರದೃಷ್ಟವೆಂದರೆ ಈಗ  ಅಡುಗೆ ಒಲೆಗೆ ಗ್ಯಾಸ್  ಬಂದಿದೆ. ಬಿಸಿ ನೀರ ಸ್ನಾನಕ್ಕೆ ಸೋಲಾರ್ ಬಂದಿದೆ. ಕಟ್ಟಿಗೆ ಸುಟ್ಟ ಬೂದಿ…

Read more
ಮಾವಿನ ಮರ ಕಾಂಡ ಕೊರಕಕ್ಕೆ ಬಲಿ

ಮರಮಟ್ಟುಗಳ ಕೊಲೆಗಾರ ಕೀಟ. ಇದು ನಿಮ್ಮಲ್ಲೂ ಇದೆ.

ನಾವೆಲ್ಲಾ ಮಾವು, ಹಲಸು, ರಾಂಬುಟಾನ್, ಬಟರ್ ಫ್ರೂಟ್, ಲವಂಗ, ಜಾಯಿ ಕಾಯಿ ಹೀಗೆಲ್ಲಾ ಹಣ್ಣಿನ, ಮತ್ತು ಸಾಂಬಾರ ಮರಗಳನ್ನು ಬೆಳೆಸುತ್ತೇವೆ. ಕೆಲವೊಮ್ಮೆ ಈ ಸಸಿಗಳ/ ಮರಗಳ ಗೆಲ್ಲುಗಳು ಅಥವಾ ಮರವೇ  ಕಾಣು ಕಾಣುತ್ತಿದ್ದಂತೆ ಒಣಗಿ ಸಾಯುತ್ತವೆ. ಇದನ್ನು ಕೆಲವರು ಯಾವುದೋ ರೋಗ ಎಂದು ಭಾವಿಸುತ್ತಾರೆ. ಇದು ರೋಗ ಅಲ್ಲ. ಇದೊಂದು ಕೀಟ. ಈ ಕೀಟಕ್ಕೆ ಮರಮಟ್ಟುಗಳ ಕೊಲೆಗಾರ ಕೀಟ ಎಂದು ಕರೆಯುತ್ತಾರೆ. ಒಮ್ಮೆ ನಿಮ್ಮ   ಹೊಲಕ್ಕೆ ಪ್ರವೇಶವಾದರೆ ಅದಕ್ಕೆ ಸೂಕ್ತ ನಿರ್ವಹಣೆ ಅಥವಾ ಅದರ ಪರಭಕ್ಷಕಗಳು…

Read more
ಕೊಡಬೇಕಾದ ಪೋಷಕಾಂಶಗಳನ್ನು ಪೂರೈಸಿದಾಗ ಇಂಥಃ ಇಳುವರಿ ಸಾಧ್ಯ.

ಅಕ್ಟೋಬರ್ ತಿಂಗಳಲ್ಲಿ ಅಡಿಕೆ ,ತೆಂಗು ಬೆಳೆಗೆ ಕೊಡಬೇಕಾದ ಪೋಷಕಾಂಶಗಳು.

ತೋಟಗಾರಿಕಾ ಬೆಳೆಗಳಾದ ಅಡಿಕೆ, ತೆಂಗು ಬೆಳೆಗಳಿಗೆ ಕನಿಷ್ಟ ವರ್ಷದಲ್ಲಿ 3-4  ಕಂತುಗಳಲ್ಲಿ ಗೊಬ್ಬರಗಳನ್ನು ಕೊಡಬೇಕು. ಅದು ರಾಸಾಯನಿಕವೇ ಇರಲಿ, ಸಾವಯವವೇ ಇರಲಿ, ಬೆಳೆಗಳ  ಹಸಿವಿಗೆ ಅನುಗುಣವಾಗಿ ಜೂನ್, ಅಕ್ಟೋಬರ್, ಜನವರಿ ಮತ್ತು ಎಪ್ರೀಲ್ ನಲ್ಲಿ ಪೋಷಕಾಂಶಗಳನ್ನು ಕೊಡುವುದು ತುಂಬಾ ಪರಿಣಾಮಕಾರಿ. ಅಡಿಕೆ ,ತೆಂಗಿನ ಬೆಳೆಗಳಿಗೆ ಸಾಮಾನ್ಯವಾಗಿ ಮೊದಲ ಕಂತು ಗೊಬ್ಬರವನ್ನು ಮಳೆಗಾಲ ಪ್ರಾರಂಭದ ಸಮಯದಲ್ಲಿ ಕೊಡುವುದು ವಾಡಿಕೆ. ನಂತರದ ಕಂತನ್ನು ಮಳೆ ಅವಲಂಭಿಸಿ ಅಕ್ಟೋಬರ್ ತಿಂಗಳ ಒಳಗೆ ಕೊಡಬೇಕು.  ಅಡಿಕೆಗೆ ಶಿಫಾರಿತ ಪ್ರಮಾಣವಾದ 100:40:120  ಅನ್ನು ಸರಿಯಾಗಿ…

Read more
ಮ್ಯುರೇಟ್ ಆಫ್ ಪೊಟ್ಯಾಶ್ ಎಲ್ಲಾ ಕಡೆ ಸಿಗುವಂತದ್ದು

ಪೊಟ್ಯಾಶ್ ಇಲ್ಲವೇ? ಚಿಂತಿಸಬೇಡಿ. ಪೊಟ್ಯಾಶ್ ಇಲ್ಲದೆಯೂ ಬೆಳೆ ತೆಗೆಯಬಹುದು!

ಮಾರುಕಟ್ಟೆಯಲ್ಲಿ ಪೊಟ್ಯಾಶ್ ಇಲ್ಲ ಎಂದು ಕಾಳಸಂತೆಯಲ್ಲಿ ಸಿಗುವ ಪೊಟ್ಯಾಶ್ ಖರೀದಿಗೆ ಹೋಗಬೇಡಿ. ಪೊಟ್ಯಾಶ್ ಗೊಬ್ಬರ ಶಾಶ್ವತವಾಗಿ  ಲಭ್ಯವಿಲ್ಲ ಎಂದು ಯಾರೂ ಹೇಳಿಲ್ಲ. ಆಮದು ಪ್ರಕ್ರಿಯೆ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಬರಲಿದೆ. ಆ ತನಕ ರೈತರು ಪೊಟ್ಯಾಶ್ ಗಾಗಿ ಏನು ಮಾಡಬೇಕು ಇಲ್ಲಿದೆ ಮಾಹಿತಿ. ಸಸ್ಯಗಳಿಗೆ ಬೆಳವಣಿಗೆಯ ವಿವಿಧ ಹಂತಕ್ಕನುಗುಣವಾಗಿ ಪೊಟ್ಯಾಶಿಯಂ ಸತ್ವ ಬೇಕಾಗುತ್ತದೆ. ಪೊಟ್ಯಾಶ್ ಬರೇ ಮ್ಯುರೇಟ್ ಆಫ್ ಪೊಟ್ಯಾಶ್ ನಲ್ಲಿ ಮಾತ್ರ ಇರುವುದಲ್ಲ. ಬೇರೆ ಗೊಬ್ಬರಗಳಲ್ಲೂ ಇದೆ. ಹೆಚ್ಚಾಗಿ ನಾವು ಬೆಳೆಗಳಿಗೆ  ಬಳಸುವ ಪೊಟ್ಯಾಶ್ ಗೊಬ್ಬರ…

Read more

ಕೊಳೆ ರೋಗ ಬಂದಿದೆಯೇ?ಹಾಗಿದ್ದರೆ ನೀವು ಮಾಡಬೇಕಾದ ಅಗತ್ಯ ಕೆಲಸ ಏನು?

ಈ ವರ್ಷ ಮಳೆಯ ಅರ್ಭಟ ಸ್ವಲ್ಪ ಕಡಿಮೆಯಾದ ಕಾರಣ ಕೊಳೆ ರೋಗ ಬಂದ ಪ್ರಮಾಣ ತುಂಬಾ ಕಡಿಮೆ. ಒಂದು ವೇಳೆ ಕೊಳೆ ರೋಗ ಬಂದಿದ್ದರೆ ನೀವು ತೋಟದಲ್ಲಿ ಏನು ಮಾಡಬೇಕು. ಇದರ ಪ್ರತಿಫಲ ಏನು ಇಲ್ಲಿದೆ ಮಾಹಿತಿ. ಅಡಿಕೆ ಮರಗಳಲ್ಲಿ ಕಾಯಿಗಳು ಬಲಿಯುತ್ತಿರುವಾಗ ಒಂದು ಶಿಲೀಂದ್ರ ಕಾಯಿಯ ಒಳಗೆ ಹೋಗಿ ಅದನ್ನು ಹಾನಿ ಮಾಡಿ ಕೊಳೆಯುವಂತೆ ಮಾಡುತ್ತದೆ. ಈ ಶಿಲೀಂದ್ರವು ಒಂದು ಪರಾವಲಂಭಿ ಜೀವಿಯಾಗಿದ್ದು, ಅಡಿಕೆಯ ಕಾಯಿಯ ಒಳಗೆ ಅದು ಸಂಖ್ಯಾಭಿವೃದ್ದಿಯಾಗಿ  ಅಲ್ಲಿಂದ ಹೊರ ಬರುವ ಸಮಯಕ್ಕೆ…

Read more
ಬೂದಿ

ಕೃಷಿ ಸುಣ್ಣ – ಯಾವುದನ್ನು ಹಾಕಿದರೆ ಹೇಗೆ?

ಪ್ರಾದೇಶಿಕವಾಗಿ ಕೃಷಿ ಸುಣ್ಣದ ನೈಸರ್ಗಿಕ ಮೂಲಗಳು ಬೇರೆ ಬೇರೆ ಇರುತ್ತವೆ. ಸಾಮಾನ್ಯವಾಗಿ ಕರಾವಳಿ ಪ್ರದೇಶದಲ್ಲಿ ಕಪ್ಪೆ ಚಿಪ್ಪಿನಲ್ಲಿ ಸುಣ್ಣದ ಅಂಶ ಇದ್ದರೆ, ಅರೆ ಮಲೆನಾಡು ಮತ್ತು ಮೈದಾನ ಪ್ರದೇಶಗಳಲ್ಲಿ ಸುಣ್ಣದ ಕಲ್ಲುಗಳು, ಡೊಲೋ ಮೈಟ್  ಖನಿಜಗಳು ನೈಸರ್ಗಿಕ ಸುಣ್ಣದ ಮೂಲಗಳಾಗಿವೆ. ಇದಲ್ಲದೆ ಕೆಲವು ಕಾರ್ಖಾನೆಗಳ ತ್ಯಾಜ್ಯಗಳಲ್ಲೂ ಸುಣ್ಣದ ಅಂಶ ಇರುತ್ತದೆ. ಎಲ್ಲಿ ಯಾವುದು ಅಗ್ಗದಲ್ಲಿ ಲಭ್ಯವೋ ಅದನ್ನು  ಬಳಕೆ ಮಾಡಬೇಕು. ಬರೇ ಸುಣ್ಣದ ಅಂಶ ಮಾತ್ರ ಇರುವ ಮೂಲವಸ್ತುವನ್ನು ಬಳಕೆ ಮಾಡುವ ಬದಲಿಗೆ ಮೆಗ್ನೀಶಿಯಂ ಸಹ ಇರುವ…

Read more
ಸೂಕ್ಷ್ಮ ಪೋಷಕಾಂಶಗಳ ಸಿಂಪರಣೆ ಮತ್ತು ಬಳಕೆಯಿಂದ ಬೆಳೆದ ಅಡಿಕೆ ಸಸಿಗಳು.

ಸೂಕ್ಷ್ಮ ಪೋಷಕಾಂಶಗಳಿಂದ ಬೆಳೆಗಳು ನಳನಳಿಸುತ್ತದೆ- ಯಾಕೆ?

ಕೆಲವು ಬೆಳೆಗಳನ್ನು  ಬೆಳೆಯುವಾಗ ನೆಲಕ್ಕೆ ಬಿಸಿಲು ಬೀಳುವುದಿಲ್ಲ. ಜೊತೆಗೆ ಈಗ ಹಿಂದಿನಂತೆ ನಾವು ಬೇರೆ ಬೇರೆ ಹಸುರು ಸೊಪ್ಪು ಸದೆಗಳನ್ನೂ ಮಣ್ಣಿಗೆ ಸೇರಿಸುವುದಿಲ್ಲ. ಕೊಟ್ಟಿಗೆ ಗೊಬ್ಬರವನ್ನೂ ಕೊಡುವುದಿಲ್ಲ. ಕೆಲವರು ಕುರಿ ಹಿಕ್ಕೆ, ಮತ್ತೆ ಕೆಲವರು ಕೋಳಿ  ಹಿಕ್ಕೆ ಬಳಸುತ್ತಾರೆ. ಇದರಿಂದಾಗಿ ಮಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶಗಳ ಕೊರತೆ ಉಂಟಾಗುತ್ತದೆ. ಇದನ್ನು ಪೂರೈಸಲು ಬೇರೆ ಮೂಲಗಳಿಂದ ಈ ಪೋಷಕಗಳನ್ನು ಬಳಸುವುದು ಸೂಕ್ತ. ಅಡಿಕೆ ನಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆ. ಇತ್ತೀಚಿನ  ಕೆಲವು ವರ್ಷಗಳಿಂದ ಅಡಿಕೆ ಧಾರಣೆ ಏರಿಕೆಯ ಗತಿಯಲ್ಲಿದ್ದು,…

Read more
ನೀರಾವರಿಯೊಂದಿಗೆ ಗೊಬ್ಬರ ಕೊಟ್ಟು ಇಳುವರಿ

ನೀರಾವರಿಯೊಂದಿಗೆ ಗೊಬ್ಬರ ಕೊಟ್ಟರೆ ದುಪ್ಪಟ್ಟುಇಳುವರಿ .

ಒಮ್ಮೆಲೇ ತಿನ್ನುವುದಕ್ಕಿಂತ ಹಸಿವಾದಾಗ ತಿಂದರೆ ಅದು ದೇಹಕ್ಕೆ ಸಮರ್ಪಕವಾಗಿ  ಬಳಕೆಯಾಗುತ್ತದೆ. ಈ ಸಿದ್ದಾಂತ ಸಸ್ಯಗಳಿಗೂ ಅನ್ವಯ. ಈ ಸಿದ್ದಾಂತದ ಮೇರೆಗೆ ಬೆಳೆಗಳಿಗೆ ಬೇರಿನ ಸನಿಹಕ್ಕೆ, ಕ್ರಿಯಾತ್ಮಕ ಬೇರುಗಳು ಇರುವಲ್ಲಿಗೆ,  ಬೇಕಾದಾಗ ಬೇಕಾಗುವುದನ್ನೇ, ಬೇಕಾದಷ್ಟೇ  ಪ್ರಮಾಣದಲ್ಲಿ ಕೊಡುವ ಪದ್ದತಿಯನ್ನು ಪ್ರಚಲಿತಕ್ಕೆ ತರಲಾಗಿದೆ. ಇದಕ್ಕೆ ನೀರಿನ ಜೊತೆಗೆ ಗೊಬ್ಬರ ಕೊಡುವುದು ಅಥವಾ ರಸಾವರಿ ಎಂಬ ಹೆಸರನ್ನು ಕೊಡಲಾಗಿದೆ. ದುಪ್ಪಟ್ಟು ಇಳುವರಿ: ತರಕಾರಿ ಮುಂತಾದ ಅಲ್ಪಾವಧಿ ಬೆಳೆಗಳಿಗೆ ತಕ್ಷಣ ಪೋಷಕಾಂಶಗಳು ದೊರೆತು, ಉತ್ತಮ ಇಳುವರಿ ಪಡೆಯಲು ಈ ತಂತ್ರಜ್ಞಾನ ಪ್ರಾರಂಭವಾಯಿತು. ಇದರ…

Read more
ರಸಾವರಿ ವ್ಯವಸ್ಥೆಗಳು

ರಸಾವರಿಯಿಂದ 50% ಕೆಲಸ ಉಳಿತಾಯವಾಗುತ್ತದೆ.

ಬೆಳೆಗಳಿಗೆ ನೀರನ್ನು ಹಾಯಿಸುವಾಗ ಅದರ ಜೊತೆಗೆ ಪೋಷಕಗಳನ್ನು ಸೇರಿಸಿ ಕೊಡಲು ಕೆಲವು ವಿಧಾನಗಳಿವೆ. ಅದನ್ನು ಇಂಜೆಕ್ಟಿಂಗ್ ಎನ್ನುತ್ತಾರೆ.ಅದರಲ್ಲಿ ಅನುಕೂಲಕ್ಕಾಗಿ ರೈತರೇ ಮಾಡಿಕೊಂಡ ಕೆಲವು ವಿಧಾನಗಳಿದ್ದರೆ, ಮತ್ತೆ  ಕೆಲವು ನೀರಾವರಿ ವ್ಯವಸ್ಥೆ ತಯಾರಕರ ವಿನ್ಯಾಸವಾಗಿರುತ್ತದೆ. ವೆಂಚುರಿ ವ್ಯವಸ್ಥೆ: ಇದು ಮುಖ್ಯ ಕೊಳವೆಯಲ್ಲಿ ನೀರಿನ ಹರಿವನ್ನು ವಾಲ್ವ್ ಹಾಕಿ ಮಿತಿಗೊಳಿಸಿ, ಸ್ವಲ್ಪ ನೀರನ್ನು ಪಥ ಬದಲಿಸಿ  ಹರಿಸಿದಾಗ ಗ್ರಾವಿಟಿ ನಿಯಮದಂತೆ  ಪೋಷಕಗಳು ಹೀರಲ್ಪಡುವ ವ್ಯವಸ್ಥೆ. ಯಾವ ದ್ರವ ಇದೆಯೋ ಅದನ್ನು ಹೀರಿಕೊಳ್ಳುತ್ತದೆ. ಇದಕ್ಕೆ ಬೇಕಾದುದು ವೆಂಚುರಿ ಇಂಜೆಕ್ಟರ್ ಮತ್ತು ಪೈಪು…

Read more
error: Content is protected !!