ರಂಜಕ ಗೊಬ್ಬರವನ್ನು ಹೀಗೆ ಕೊಟ್ಟರೆ ಉತ್ತಮ.

ರಂಜಕ ಎಂಬುದು ಚಲಿಸುವ ಪೋಷಕವಲ್ಲ. ಕೆಲವು ನೀರಿನಲ್ಲಿ ಕರಗುತ್ತದೆ. ಇನ್ನು ಕೆಲವು  ಕರಗುವುದಿಲ್ಲ. ಹೊಲದ ಮಣ್ಣಿನ ಗುಣ ಹೇಗಿದೆ ಎಂಬುದರ ಮೇಲೆ ಅದಕ್ಕೆ ಹೊಂದುವ ರಂಜಕ ಗೊಬ್ಬರವನ್ನು ಕೊಡಬೇಕು. ಹಾಗೆಯೇ ಕೊಟ್ಟ ರಂಜಕವು ಬೆಳೆಗೆ ಲಭ್ಯವಾಗುವ ಸ್ಥಿತಿಯನ್ನು ಉಂಟುಮಾಡಬೇಕು. ಬಹಳಷ್ಟು  ರೈತರು ರಂಜಕ ಪೋಷಕದ ಬಳಕೆಯನ್ನು ಕಡಿಮೆ ಮಾಡುವುದಿಲ್ಲ. ಡಿಎಪಿ ಹಾಕಿದ್ದೇನೆ ಎನ್ನುತ್ತಾರೆ. ಆದರ ಬಹಳಷ್ಟು ರೈತರ ಹೊಲದ ಮಣ್ಣು ಪರೀಕ್ಷೆಯಲ್ಲಿ ರಂಜಕ ಪೋಷಕದ ಕೊರತೆ ಕಂಡು ಬರುತ್ತದೆ. ಇದಕ್ಕೆ ಕಾರಣ ಬಳಕೆ ಕ್ರಮ ಸರಿಯಿಲ್ಲದಿರುವಿಕೆ. ಹೇಗೆ…

Read more

ನಿಮ್ಮ ಹೊಲದಲ್ಲಿ ರಂಜಕ ಎಷ್ಟು ಲಭ್ಯ ಸ್ಥಿತಿಯಲ್ಲಿದೆ- ತಿಳಿಯುವುದು ಹೀಗೆ.

ಎಲ್ಲದಕ್ಕೂ ತಜ್ಞರನ್ನು ಸಂಪರ್ಕಿಸಿ  ಮಾರ್ಗದರ್ಶನ ಪಡೆಯುವ ಬದಲು  ನಾವೇ ಒಂದಷ್ಟು ತಜ್ಞತೆಯನ್ನು ಸಂಪಾದಿಸುವುದು ಉತ್ತಮ. ಈ ನಿಟ್ಟಿನಲ್ಲಿ ನಾವು ಬೆಳೆಗಳಿಗೆ ಬಳಕೆ ಮಾಡುವ ರಂಜಕ ಗೊಬ್ಬರ  ಸಸ್ಯಗಳಿಗೆ ದೊರೆಯುತ್ತದೆಯೇ ಎಂದು ತಿಳಿಯುವ ಸರಳ ವಿಧಾನಗಳು ಇವೆ. ನಿಮ್ಮ ಹೊಲದ ದ್ವಿದಳ ಸಸ್ಯಗಳು, ಅಧಿಕ ಪ್ರಮಾಣದಲ್ಲಿ ಹುಲ್ಲು ಬೆಳೆಯುತ್ತದೆಯೋ ಅಲ್ಲಿ ರಂಜಕ ಅಂಶ ಇದೆ ಎಂದರ್ಥ. ಇದು ನಿಖರವಾದ ಲಕ್ಷಣ ಅಲ್ಲದಿದ್ದರೂ ಬಹುತೇಕ ಇದು ರಂಜಕದ ಲಭ್ಯತೆಯನ್ನು ಸೂಚಿಸುತ್ತದೆ. ರಂಜಕಾಂಶ ಎಂಬುದು ಫಲಾಪೇಕ್ಷೆ ಇದ್ದು ಬೆಳೆ ಬೆಳೆಯುವಾಗ ನಿರೀಕ್ಷಿತ…

Read more
cotton

ಹತ್ತಿ ಬೆಳೆಯ ಗುಲಾಬಿ ಕಾಯಿ ಕೊರಕ ನಿಯಂತ್ರಣ.

ಹತ್ತಿ ಬೆಳೆಗಾರರಿಗೆ ಗಣನೀಯ ಬೆಳೆ ನಷ್ಟ ಮಾಡುವ ಕೀಟ ಎಂದರೆ  ಗುಲಾಬಿ ಕಾಯಿ ಕೊರಕ. ಹತ್ತಿಯ ಕಾಯಿಗಳು ಬೆಳೆಯುತ್ತಿದ್ದಂತೆ ಇದು ಪ್ರವೇಶವಾಗಿ  ಒಳಗಿನ ಹತ್ತಿಯ ಅರಳನ್ನು ಹಾನಿ ಮಾಡುತ್ತದೆ. ಮಾರುಕಟ್ಟೆಯಲ್ಲಿ ಈ ಹತ್ತಿಗೆ ಬೆಲೆಯೇ ಇರುವುದಿಲ್ಲ.  ಈ ಕೀಟದ ನಿಯಂತ್ರಣಕ್ಕಾಗಿ ಅತ್ಯಧಿಕ ಕೀಟನಾಶಕ ಬಳಕೆ ಮಾಡಲಾಗುತ್ತದೆ. ಇದರಿಂದಾಗಿಯೇ ಕಳೆದ ವರ್ಷ ಕೆಲವು ರೈತರು ಜೀವ ಕಳೆದುಕೊಂಡದ್ದೂ ಇದೆ.  ಸರಳ ಮತ್ತು ಮಿತವ್ಯಯದ ಬೇಸಾಯ ಕ್ರಮದಲ್ಲಿ ಇದನ್ನು ಗಣನೀಯ ಪ್ರಮಾಣದಲ್ಲಿ ನಿಯಂತ್ರಣ ಮಾಡಬಹುದು. ಜೀವನ ಚಕ್ರ ಹೀಗಿರುತ್ತದೆ: ಗುಲಾಬಿ…

Read more
ಮಣ್ಣಿನ ಆರೋಗ್ಯ ತಿಳಿಯಲು ಅದರ ಪರೀಕ್ಷೆ

ಮಣ್ಣಿನ ಆರೋಗ್ಯ ತಿಳಿಯಲು ಅದರ ಪರೀಕ್ಷೆ .

ಮಣ್ಣು ಅದರಷ್ಟಕ್ಕೇ ಇದ್ದರೆ ಅಂದರೆ ಕಾಡು , ಮರಮಟ್ಟು ಬೆಳೆಯುತ್ತಾ ಇದ್ದರೆ ಅದರ ಆರೋಗ್ಯ ಸ್ಥಿತಿ ವ್ಯತ್ಯಾಸ ಆಗುವುದಿಲ್ಲ. ಬೆಳೆ ಬೆಳೆಸುವಾಗ ಬಳಸುವ ಬೆಳೆ ಪೋಷಕಗಳು ಮಣ್ಣಿನ ಗುಣವನ್ನು ಸ್ವಲ್ಪ ಮಟ್ಟಿಗೆ ವ್ಯತ್ಯಾಸ ಮಾಡುತ್ತವೆ. ಇದನ್ನು ಮಣ್ಣಿನ ಆರೋಗ್ಯ ಕೆಡುವುದು ಎಂದು ಹೇಳಬಹುದು. ಮಣ್ಣಿನ ಆರೋಗ್ಯ ಗುಣದ ಮೇಲೆ ನಾವು ಬೆಳೆಸುವ ಬೆಳೆಯ ಪ್ರತಿಫಲ ಇರುತ್ತದೆ. ಇದನ್ನು ತಿಳಿದು ಕೃಷಿ ಮಾಡಿದರೆ ನಿರೀಕ್ಷೆಯ ಫಲಿತಾಂಶ ಲಭ್ಯವಾಗುತ್ತದೆ. ಮಣ್ಣು ಸೃಷ್ಠಿಯ ಅತ್ಯದ್ಬುತ ಕೊಡುಗೆ. ಮಣ್ಣಿಲ್ಲದೆ ಯಾವಜೀವಿಯೂ ಬದುಕಲಾರದು, ಮಣ್ಣಿನಿಂದ…

Read more
method of green leaf mulching

ಹೊಲಕ್ಕೆ ಈ ಸೊಪ್ಪುಗಳನ್ನು ಹಾಕಿದರೆ ಗೊಬ್ಬರ ಉಳಿಸಬಹುದು.

ಮೆದು ಸ್ವರೂಪದ ಹಸುರು ಸೊಪ್ಪು ಅಧಿಕ ಸಾರಗಳನ್ನು ಒಳಗೊಂಡಿರುತ್ತದೆ. ಹೆಚ್ಚಾಗಿ ದ್ವಿದಳ ಜಾತಿಯವು ಉತ್ಕೃಷ್ಟ. ಇಂತಹ ಸಸ್ಯಗಳಲ್ಲಿ ಕೆಲವು ಅಲ್ಪಾವಧಿಯ ಸಸ್ಯಗಳು  ಮತ್ತು ಕೆಲವು ಧೀರ್ಗಾವಧಿಯ ಮರಮಟ್ಟುಗಳು. ಇದನ್ನು ನಾವು ಗುರುತಿಸಿ ಬೆಳೆಸಿ ಬಳಸಬೇಕು. ಇವು ಮಣ್ಣಿಗೆ ಹೊಸ ಜೀವ ಚೈತನ್ಯವನ್ನು ಕೊಡುತ್ತವೆ. ಬೆಳೆ ಉತ್ತಮವಾಗುತ್ತದೆ. ಬಹಳ ಜನ ತಮ್ಮ ಹೊಲಕ್ಕೆ ಬೇರೆ ಬೇರೆ ಸಾವಯವ ಗೊಬ್ಬರಗಳನ್ನು ಬಳಕೆ ಮಾಡುತ್ತಾರೆ. ಕೆಲವರು ಒಣ ತರೆಗೆಲೆ ಹಾಗೂ ಒಣ ತ್ಯಾಜ್ಯಗಳನ್ನು ಬಳಕೆ ಮಾಡುತ್ತಾರೆ. ಇದರಲ್ಲಿ ಹಾನಿ ಏನೂ ಇಲ್ಲವಾದರೂ…

Read more
ಸಲ್ಫೇಟ್ ಆಫ್ ಪೊಟ್ಯಾಶ್ SOP

ನಿಮ್ಮ ಬೆಳೆಗೆ ಯಾವ ರಂಜಕ ಗೊಬ್ಬರ ಸೂಕ್ತ.

ರಂಜಕ ಎಂಬುದರ ಮೂಲ ಶಿಲೆ ಅಥವಾ ಖನಿಜ.  ಇದರ ಅಧಾರದಲ್ಲಿ ರಾಸಾಯನಿಕ ಮೂಲದಲ್ಲಿ ರಂಜಕ ಗೊಬ್ಬರವನ್ನು ತಯಾರಿಸಲಾಗುತ್ತದೆ. ರಂಜಕ ಎಂಬ ಧಾತುವನ್ನು ಸಸ್ಯಗಳು ನೇರವಾಗಿ ಬಳಕೆ ಮಾಡುವುದೇ ಇಲ್ಲ. ಇದು ಒಂದು ಸ್ವತಂತ್ರ ಪೊಷಕ ಅಲ್ಲ. ಇದನ್ನು ಮಣ್ಣಿನಲ್ಲಿರುವ ರಂಜಕ ಕರಗಿಸಿ ಕೊಡುವ ಬ್ಯಾಕ್ಟೀರಿಯಾ, ಶಿಲೀಂದ್ರಗಳು ಸಸ್ಯಗಳಿಗೆ  ಲಭ್ಯವಾಗುವಂತೆ ಮಾಡುತ್ತವೆ. ರಂಜಕ ಗೊಬ್ಬರದಲ್ಲಿ ಮೂರು  ವಿಧ. ಎರಡು ಬಗೆಯವು ನೀರಿನಲ್ಲಿ ಕರಗುವ ರೂಪದ ರಂಜಕ ಮತ್ತು ಒಂದು  ನೀರಿನಲ್ಲಿ ಕರಗದ ರೂಪದ ರಂಜಕ.  ಮಾರುಕಟ್ಟೆಯಲ್ಲಿ ಲಭ್ಯವಿರುವ  ಸಿಂಗಲ್…

Read more
ನಾವೇ ಮಣ್ಣು ಪರೀಕ್ಷಿಸುವ ವಿಧಾನ

ಮಣ್ಣು ಪರೀಕ್ಷೆ ನೀವೇ ಮಾಡುವುದು ಹೀಗೆ.

ಮಣ್ಣು ಬೆಳೆ ಉತ್ಪಾದನೆಗೆ ಒಂದು ಶಕ್ತಿ.  ಇದರ ಬೌತಿಕ ಗುಣಧರ್ಮ , ಜೈವಿಕ ಗುಣದರ್ಮ, ರಾಸಾಯನಿಕ ಗುಣ ಸರಿಯಾಗಿದ್ದರೆ ಅದರಲ್ಲಿ ಬೆಳೆಯುವ ಬೆಳೆ ಉತ್ತಮ ಫಲವನ್ನು ಕೊಡುತ್ತದೆ. ಮಣ್ಣಿನ ಬೌತಿಕ ಗುಣಧರ್ಮಗಳ ಮೇಲೆ ಮಣ್ಣು ಹೇಗಿದೆ, ಇದರಲ್ಲಿ ಫಸಲು ಹೇಗೆ ಪಡೆಯಬಹುದು ಎಂಬುದನ್ನು ನಿರ್ಧರಿಸಬಹುದು. ಬಹಳಷ್ಟು ಜನ ರೈತರ ಹೊಲದಲ್ಲಿ ಬೆಳೆಗಳು ಕೈಕೊಡುವುದಕ್ಕೆ ಮೂಲ ಕಾರಣ ಅವರ ಹೊಲದ ಮಣ್ಣಿನ  ಗುಣಧರ್ಮ. ಮಣ್ಣು ಸಸ್ಯ ಬೆಳವಣಿಗೆಗೆ ಅನುಕೂಲಕರವಾಗಿದ್ದರೆ ಮಾತ್ರ ಎಲ್ಲವೂ ಸುಲಭ. ಜಮೀನಿನಲ್ಲಿ ಅಗೆಯುವಾಗ ಯಾವ ರೀತಿಯ…

Read more
ಹೂ ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ

ಹೂವು ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ ಅಗತ್ಯ.

ಕರಾವಳಿ ಮಲೆನಾಡಿನಲ್ಲಿ ಅಡಿಕೆ , ತೆಂಗು, ಕರಿಮೆಣಸು ಬೆಳೆಗಾರರು  ಕೊಳೆ ರೋಗಕ್ಕೆ ರಾಮಬಾಣವಾಗಿ ಬಳಸಿದ್ದ ಪೊಟ್ಯಾಶಿಯಂ ಫೋಸ್ಪೋನೇಟ್ ಎಂಬ ತಯಾರಿಕೆಯಲ್ಲಿ ಇದ್ದದ್ದು ಬಹುಪಾಲು ರಂಜಕ. ಇದು ಸಸ್ಯಗಳಿಗೆ ರೋಗ ನಿರೋಧಕ ಶಕ್ತಿ ಕೊಡುವ  ತಾಕತ್ತು ಇದೆ. ಸರಿಯಾದ ಪ್ರಮಾಣದಲ್ಲಿ ಇದನ್ನು ಕೊಟ್ಟರೆ ಅದು ಫಸಲು ಹೆಚ್ಚಳಕ್ಕೂ ಸಹಾಯಕ. ಸಸ್ಯಕ್ಕೆ ಜೀವ ಕೊಡುತ್ತದೆ: ಒಂದು ಸಸ್ಯ ಬದುಕಬೇಕಾದರೆ ಅದಕ್ಕೆ ಬೇರು ಬರಲೇ ಬೇಕು. ಈ ಬೇರು ಬರಲು ಪ್ರೇರಣೆ ಕೊಡುವ ಪೊಷಕ ಎಂದರೆ ಅದು ರಂಜಕ. ಇದು ಸಸ್ಯಗಳಿಗೆ…

Read more
ಚೆನ್ನಾಗಿ ಬಿಸಿಲು ಪಡೆಯುವ ತೆಂಗಿನ ಮರಗಳು.

ಗೊಬ್ಬರ ನಂತರ ಕೊಡಿ- ಉಚಿತವಾಗಿ ಸಿಗುವ ಇದನ್ನು ಮೊದಲು ಒದಗಿಸಿ.

ನಾವು ಬೆಳೆ ಬೆಳೆಸುವಾಗ ಯಾವ ಗೊಬ್ಬರ ಕೊಡಬೇಕು, ಎಷ್ಟು ಕೊಡಬೇಕು. ಮತ್ತೆ ಏನೇನು ಕೊಡಬೇಕು ಎಂದು ಕೇಳುತ್ತೇವೆ. ಅದೆಲ್ಲಾ ನಂತರ. ಮೊದಲು ಉಚಿತವಾಗಿ ಸಿಗುವ ಬಿಸಿಲು ಪೂರ್ಣವಾಗಿ ಸಿಗುವಂತೆ ಮಾಡಿ. ದಾರಿ  ಬದಿಯ ತೆಂಗಿನ ಮರದಲ್ಲಿ ಫಸಲು ಯಾಕೆ ಹೆಚ್ಚು, ತೋಟದೊಳಗಿನ ಅಡಿಕೆ ಮರಳು ಉದ್ದುದ್ದ ಬೆಳೆಯುವುದೇಕೆ? ಬೆಳಗ್ಗಿನಿಂದ ಸಂಜೆ ತನಕ ಬಿಸಿಲು ಪಡೆಯುವ ದೊಡ್ಡ ಮರಗಳಲ್ಲಿ ಫಸಲು ಹೆಚ್ಚು ಏಕೆ? ಎತ್ತರ  ಬೆಳೆದ ಮರದಲ್ಲಿ ಫಸಲು ಹೆಚ್ಚು ಯಾಕೆ? ಇದಕ್ಕೆಲ್ಲಾ ಪ್ರಮುಖ ಕಾರಣ ಸೂರ್ಯನ ಬೆಳಕಿನ ಲಭ್ಯತೆ….

Read more

ಸಾರಜನಕ ಗೊಬ್ಬರ ನಮ್ಮ ಹೊಲದಲ್ಲೇ ಇದೆ ಗೊತ್ತೇ?

ಸಾರಜನಕ  ಗೊಬ್ಬರವಾಗಿ ರಾಸಾಯನಿಕ ರೂಪದ ಯೂರಿಯಾ, ಅಮೋನಿಯಂ ಸಲ್ಫೇಟ್ ಅಥವಾ ನೈಟ್ರೇಟ್ ಮುಂತಾದವುಗಳನ್ನೇ  ಬಳಸಬೇಕಾಗಿಲ್ಲ. ನಿಸರ್ಗ ಸಾರಜನಕ ಸತ್ವದ ಖಣಜ. ನಮ್ಮ ತುರ್ತು ಅವಶ್ಯಕತೆಗಾಗಿ ರಾಸಾಯನಿಕ ವಿಧಾನದ ಮೂಲಕ ಸಾರಜನಕ ಗೊಬ್ಬರವನ್ನು ಉತ್ಪಾದಿಸಿದ್ದು. ನಮ್ಮ ಸುತ್ತಮುತ್ತ ಇರುವ ಸಸ್ಯ ಮತ್ತು ಸಾವಯವ ವಸ್ತುಗಳಲ್ಲಿ  ನೈಸರ್ಗಿಕ ಸಾರಜನಕ ಸಾಕಷ್ಟು ಇದೆ. ಮಣ್ಣಿನಲ್ಲಿ ಸಾಕಷ್ಟು ಸಾರಜನಕದ ಅಂಶ ಇದೆಯಾದರೂ ನಾವು ಯಾಕೆ ಬೇರೆ ಮೂಲದಿಂದ ಸಾರಜನಕವನ್ನು ಬಳಸುತ್ತಿದ್ದೇವೆ ಎಂಬುದು ಎಲ್ಲರ ಭಾವನೆ. ಇದು ಸತ್ಯ. ಕಾರಣ ಇಷ್ಟೇ ಇವು ಬೇರೆ…

Read more
error: Content is protected !!