ಹನಿ ನೀರಾವರಿಯಲ್ಲಿ ನಿಮ್ಮ ಅನುಭವ- ರೈತರು ರೇಟಿಂಗ್ ಕೊಡುವುದು ಅಗತ್ಯ

ಹನಿ ನೀರಾವರಿಯಲ್ಲಿ ನಿಮ್ಮ ಅನುಭವ- ರೈತರಿಂದ ರೇಟಿಂಗ್ ಅಗತ್ಯ.

ನೀರಾವರಿಯಲ್ಲಿ ಅಮೂಲ್ಯವಾದ ನೀರಿನ ಉಳಿತಾಯಕ್ಕಾಗಿ ಹನಿ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹನಿ ನೀರಾವರಿ ಸಾಮಾಗ್ರಿಗಳನ್ನು ತಯಾರಿಸಿ ಪೂರೈಕೆ ಮಾಡುವವರ ಸಂಖ್ಯೆಯೂ ತುಂಬಾ ಹೆಚ್ಚಾಗುತ್ತಿದೆ. ಹೀಗಿರುವಾಗ ನೀವು ಅಳವಡಿಸಿಕೊಂಡ ಬ್ರಾಂಡ್ ನಲ್ಲಿ ನೀವೆಷ್ಟು ತೃಪ್ತರು ಎಂಬ ಬಗ್ಗೆ ಜನಾಭಿಪ್ರಾಯ ಸಂಗ್ರಹಣೆ ಮಾಡುವ ಕಿರು ಪ್ರಯತ್ನ ಇದು.  ಹನಿ ನೀರಾವರಿ ಅಳವಡಿಸಿಕೊಂಡ ಪ್ರತೀಯೊಬ್ಬರೂ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದರಿಂದ  ಹೊಸಬರಿಗೆ ಯಾವ ಬ್ರಾಂಡ್ ಒಳ್ಳೆಯದು ಎಂಬುದನ್ನು ತೀರ್ಮಾನಿಸುವುದಕ್ಕೆ  ಅನುಕೂಲವಾಗುತ್ತದೆ. ಈ ಉದ್ದೇಶಕ್ಕಾಗಿಯೇ ಈ ಬರಹ. ಸಾಮಾನ್ಯವಾಗಿ…

Read more
ಅಡಿಕೆ ಬೆಳೆಗೆ ಯಾವಾಗ ಸಮಯಕ್ಕೆ ಯಾವ ಗೊಬ್ಬರ

ಅಡಿಕೆ ಬೆಳೆಗೆ ಯಾವ ಸಮಯಕ್ಕೆ ಯಾವ ಗೊಬ್ಬರ ಸೂಕ್ತ?

ಅಡಿಕೆ, ತೆಂಗು ಮುಂತಾದ ತೋಟಗಾರಿಕಾ ಬೆಳೆಗಳಿಗೆ ಆಯಾಯಾ ಬೆಳವಣಿಗೆ ಹಂತದಲ್ಲಿ ನಿರ್ದಿಷ್ಟ ಪೋಷಕಗಳನ್ನು ಕೊಡುವುದರಿಂದ ಫಸಲು  ಹೆಚ್ಚಾಗುತ್ತದೆ, ಫಸಲಿನ ಗುಣಮಟ್ಟವೂ ಸಹ ಉತ್ತಮವಾಗಿರುತ್ತದೆ. ಸಸ್ಯದ ಹಸುರು ಭಾಗದ  ಬೆಳವಣಿಗೆಗೆ ಅನುಕೂಲವಾಗುವ ಪೋಷಕವನ್ನು ವರ್ಷದುದ್ದಕ್ಕೂ, ಹೂವು ಬರಲು ಸಹಾಯಕವಾಗಿವ ಗೊಬ್ಬರವನ್ನು ವರ್ಷದಲ್ಲಿ ಕೆಲವೇ ತಿಂಗಳುಗಳಲ್ಲಿಯೂ, ಕಾಯಿ ಬೆಳವಣಿಗೆಗೆ ಸಹಾಯಕವಾಗುವ ಪೋಷಕವನ್ನು ವರ್ಷದುದ್ದಕ್ಕೂ ಕೊಡುತ್ತಾ ಇದ್ದರೆ ಫಲಿತಾಂಶ ಉತ್ತಮವಾಗಿರುತ್ತದೆ. ಅಡಿಕೆಯೊಂದೇ ಅಲ್ಲ ಎಲ್ಲಾ ಬೆಳೆಗಳಲ್ಲೂ ಅದರ ನಿರ್ದಿಷ್ಟ ಹಂತದ ಬೆಳವಣಿಗೆಗೆ ಅನುಕೂಲವಾಗುವಂತೆ ಪೊಷಕಗಳನ್ನು ಕೊಟ್ಟರೆ ಅದರ ಫಲವೇ ಭಿನ್ನವಾಗಿರುತ್ತದೆ. ಈ…

Read more
10:26:26 ಗೊಬ್ಬರ

10:26:26  ಗೊಬ್ಬರ ಸಿಗುತ್ತಿಲ್ಲವೇ? ಬದಲಿಗೆ ಏನು ಹಾಕಬಹುದು?

ನಮ್ಮ ಕೃಷಿಕರಿಗೆ ಅಚ್ಚುಮೆಚ್ಚಿನ ಗೊಬ್ಬರ 10:26:26 ಸಂಯೋಜನೆಯ NPK.ಯಾವುದೋ ಕಾರಣಕ್ಕೆ ಈ ಗೊಬ್ಬರದ ಕೊರತೆ ಉಂಟಾಗಿದೆ. ಮಾರುಕಟ್ಟೆಗೆ ಸರಬರಾಜು ಆಗುತ್ತಿಲ್ಲ. ಹಾಗಾಗಿ ಜನ ಕೇಳುವುದು ಈ ಗೊಬ್ಬರ ಎಲ್ಲಿ ಸಿಗುತ್ತದೆ ತಿಳಿಸಿ ಎಂದು? ಈ ಒಂದು ಸಂಯೋಜನೆಯ ಗೊಬ್ಬರ ಇಲ್ಲದಿದ್ದರೆ ಆಕಾಶ ಏನೂ ತಲೆಗೆ ಬೀಳಲಾರದು. ಇದರ ಬದಲು ಬೇರೆ ಗೊಬ್ಬರಗಳನ್ನು ಅದೇ ಪ್ರಮಾಣಕ್ಕೆ ಅಥವಾ ಶಿಫಾರಿತ ಪ್ರಮಾಣಕ್ಕೆ ಅನುಗುಣವಾಗಿ ತಯಾರಿಸಬಹುದು. ಇಷ್ಟಕ್ಕೂ ಈ ಗೊಬ್ಬರ ಅಡಿಕೆಗೆ ಸಮತೋಲನ ಗೊಬ್ಬರ ಅಲ್ಲ.  ಈ ಸಂಯೋಜನೆಯ ಗೊಬ್ಬರ ಮಾರುಕಟ್ಟೆಗೆ…

Read more
ಎಲೆ ಚುಕ್ಕೆ ಪೀಡಿತ ಅಡಿಕೆ ಮರ

ಎಲೆ ಚುಕ್ಕೆ ರೋಗ-ಅಡಿಕೆ ಬೆಳೆಗಾರರ ಪಾಲಿಗೆ ಯಾವತ್ತೂ ಭಯ.

ಎಲೆ ಚುಕ್ಕೆ ರೋಗ ಎಂಬ ಅಡಿಕೆ ತೆಂಗು ಬೆಳೆಯ ಪ್ರಾಮುಖ್ಯ ರೋಗ ಈಗ ಎಲ್ಲಾ ಪ್ರದೇಶಗಳಲ್ಲಿ  ವ್ಯಾಪಿಸಲಾರಂಭಿದೆ. ಕೆಲವರು ಗುರುತಿಸಿರಬಹುದು. ಇನ್ನು ಕೆಲವರು ಗುರುತಿಸದೆಯೂ ಇರಬಹುದು. ಆದರೆ 90% ಕ್ಕೂ ಹೆಚ್ಚಿನ ಅಡಿಕೆ ತೋಟಗಳಲ್ಲಿ ಎಲೆ ಚುಕ್ಕಿ ರೋಗ ಇದೆ ಎಂದರೆ ಅಚ್ಚರಿಯಾಗಬಹುದು.  ಈಗ ಇದು ಚುಕ್ಕೆಯಾಗಿ ಕಂಡರೂ ಇದು ಮುಂದೆ ದೊಡ್ಡದಾದರೂ ಅಚ್ಚರಿ ಇಲ್ಲ.ಕ್ರಮೇಣ ಅಡಿಕೆ ಬೆಳೆಗಾರರ ಬದುಕಿನ ಮೇಲೆಯೇ ಇದು ಸವಾರಿ ಮಾಡಿದರೂ ಅಚ್ಚರಿ ಇಲ್ಲ.  ಬಹಳಷ್ಟು ಜನ ಅಡಿಕೆ ಬೆಳೆಗಾರರು ಶಿವಮೊಗ್ಗ ಜಿಲ್ಲೆಯಲ್ಲಿ…

Read more
banana plants

ಮಳೆಗಾಲದಲ್ಲಿ ಬಾಳೆ ಸಸ್ಯ ಮಗುಚಿ ಬೀಳುವುದಕ್ಕೆ ಕಾರಣ- ಪರಿಹಾರ.

ಮಳೆಗಾಲದಲ್ಲಿ ಬಾಳೆ ದಂಟು ಮುರಿದು ಬೀಳುವ ಸಮಸ್ಯೆ ಎಲ್ಲಾ ಕಡೆಯಲ್ಲೂ ಕಂಡು ಬರುತ್ತದೆ. ಅಂತಹ ಬಾಳೆಯ ಕಾಂಡವನ್ನು ಸ್ವಲ್ಪ ಕಡಿದು ನೋಡಿದರೆ ಕಾಂಡ ಹಾಳಾಗಿರುತ್ತದೆ. ಬಾಳೆಯ ಸಸ್ಯಗಳು ಇನ್ನೇನೋ ಗೊನೆ ಹಾಕಬೇಕು ಎಂಬ ಹಂತದಲ್ಲಿ, ಅಥವಾ ಗೊನೆ ಹಾಕಿ ಬೆಳೆಯುತ್ತಿರುವ ಹಂತದಲ್ಲಿ ಇದಕ್ಕೆ ಇಂದು ಕೀಟ ತೊಂದರೆ  (Pseudostem borer,and Rhizome weevil)ಮಾಡುತ್ತದೆ. ಈ ಕೀಟದ ಚಟುವಟಿಕೆ ಮಳೆಗಾಲ ಪ್ರಾರಂಭದಲ್ಲಿ ಮತ್ತು ಕೊನೆಗೆ ಹೆಚ್ಚು. ಇದರಿಂದ ಇಡೀ  ಗೊನೆ ಹಾಳಾಗುತ್ತದೆ. ಉಳಿದ ಬಾಳೆಗೂ ಪ್ರಸಾರವಾಗುತ್ತದೆ. ಬಾಳೆ ಗೊನೆ…

Read more
ಸರ್ಕಾರೀ ಗೊಬ್ಬರಗಳು

ಸರ್ಕಾರೀ ಗೊಬ್ಬರಗಳನ್ನು ಬಳಸಿ- 75% ದಷ್ಟು ಗೊಬ್ಬರದ ಖರ್ಚು ಉಳಿಸಿ.

 ಭಾರತ ಸರಕಾರ ರೈತರಿಗೆ ಸಹಾಯಧನದ ಮೂಲಕ ಒದಗಿಸುವ ಸರ್ಕಾರೀ ಗೊಬ್ಬರವನ್ನೇ ಬಳಸಿದರೆ ರೈತರ ಗೊಬ್ಬರದ ಖರ್ಚು 75% ಕ್ಕೂ ಹೆಚ್ಚು ಉಳಿತಾಯವಾಗುತ್ತದೆ.  ಇತ್ತೀಚೆಗೆ ಅಡಿಕೆ ತೋಟಕ್ಕೂ ಸಾಲ್ಯುಬಲ್ ಗೊಬ್ಬರಗಳನ್ನು ಕೊಟ್ಟು ಬೆಳೆಸುವ ಕ್ರೇಜಿ ಪ್ರಾರಂಭವಾಗಿದೆ.  ಇದಕ್ಕಾಗಿ ಸಾಕಷ್ಟು ಖರ್ಚುಗಳನ್ನೂ ಮಾಡಿ ದುಬಾರಿ ಬೆಲೆಯ ಸಾಲ್ಯುಬಲ್ ಗೊಬ್ಬರಗಳನ್ನು ಖರೀದಿಸಿ ತಂದು ಬಳಸಲಾರಂಭಿಸಿದ್ದಾರೆ. ಅಡಿಕೆಗೆ ಬೆಲೆ ಬಂದಿದೆ ಎಂದೋ ಕೈಯಲ್ಲಿ ದುಡ್ಡು ತುಳುಕುವ ಕಾರಣದಿಂದಲೋ ಜನ ಹೊಸ ಹೊಸತಕ್ಕೆ ಬೇಗ ಮರುಳಾಗುತ್ತಿದ್ದಾರೆ.ಧೀರ್ಘಾವಧಿ ಬೆಳೆಗಳಿಗೆ ದಿನಕ್ಕೊಮ್ಮೆ, ವಾರಕ್ಕೊಮ್ಮೆ ಗೊಬ್ಬರ ಕೊಡಬೇಕಾದ ಅಗತ್ಯ…

Read more
miracle weed Sphagneticola trilobata

Nature protect its resources! How this  miracle weed Sphagneticola trilobata protected our soil

Nature will protect  its resources  by its own way!. Imagine the heavy rainfall and afforestation in recent years. What happens if there is an absence of this weed Sphagneticola trilobata? Can weeds help farmers? Or does it suppresses the yield?   If you think weed is an enemy you will lose soil fertility. If you consider…

Read more
cashew

ಗೇರು – ಈಗ ಮರಗಳ ಮೇಲೆ ಒಮ್ಮೆ ದೃಷ್ಟಿ ಹರಿಸುತ್ತಿರಿ

ಈ ಸಮಯದಲ್ಲಿ ಗೇರು ಮರಗಳಲ್ಲಿ ಗೇರು ಬೀಜದ ಕೊಯಿಲು ನಡೆಯುತ್ತಿರುತ್ತದೆ. ಗೇರು ಬೀಜ ಕೊಯಿಲಿಗೆ ಹೋಗುವ ಸಮಯದಲ್ಲಿ ಬುಡ ಭಾಗವನ್ನು ತಪ್ಪದೇ ಗಮನಿಸಿರಿ. ಈ ಸಮಯದಲ್ಲಿ ಬುಡದ ಕಾಂಡಕ್ಕೆ ಕಾಂಡ ಕೊರಕ ಹುಳು ಬಾಧಿಸುತ್ತದೆ. ಈ ಹುಳು ಬಾಧಿಸಿದ ಸಮಯದಲ್ಲಿ ಉಪಚಾರ ಮಾಡಿದರೆ  ಮಾತ್ರ ಅದನ್ನು ಬದುಕಿಸಲು ಸಾಧ್ಯ.  ಪತ್ತೆ ಕ್ರಮ: ಗೇರು ಮರಕ್ಕೆ ಮಾರಣಾಂತಿಕವಾಗಿ ಹಾನಿ ಮಾಡುವ ಕೀಟ ಕಾಂಡ ಕೊರಕ (Stem borer of cashew). ಈ ಸಮಯದಲ್ಲಿ ಕಾಂಡ ಕೊರಕ ಕೀಟ ಕಾಡದ…

Read more
ಗೇರು ಮರಕ್ಕೆ ಪುನಃಶ್ಚೇತನ

ಗೇರು – ಮಾವು- ಹಲಸು ಹಳೆ ಮರಗಳಿಗೆ ಪುನಃಶ್ಚೇತನ.

ನಮ್ಮಲ್ಲಿ ಇರುವಂತಹ ಹಳೆಯ ಮಾವು- ಗೇರು-ಹಲಸು ಇನ್ಯಾವುದೇ ಹಣ್ಣಿನ  ತೊಟಗಳಲ್ಲಿ ಹೆಚ್ಚಿನವುಗಳು ಅನಾಮಧೇಯ ತಳಿಯ ಬೀಜಗಳಿಂದ ಆದವುಗಳು. ಇವು ಈಗಲೇ  ಹಳೆಯದಾಗಿ ಅನುತ್ಪಾದಕವೂ ಆಗಿರಬಹುದು. ಇಂತಹ ಮರಗಳು ಹೆಚ್ಚಾಗಿ ನಿರ್ವಹಣೆ ಇಲ್ಲದೇ ನಿರ್ಲಕ್ಷ್ಯದಿಂದ ಬೆಳೆದಿರುತ್ತವೆ. ಇವುಗಳನ್ನು ಇಳುವರಿ ಅಭಿವೃದ್ಧಿಯ ದೃಷ್ಟಿಯಿಂದ ಪುನಶ್ಚೇತನ ಮಾಡುವುದು ಉತ್ತಮ.  ಹಳೆಯ ಅಥವಾ ಕಡಿಮೆ ಇಳುವರಿ ಕೊಡುವಂತಹ ಮರಗಳನ್ನು ಸವರುವಿಕೆಯಿಂದ ಹಾಗು ಕಸಿ ವಿಧಾನದ ಮೂಲಕ ಪುನಶ್ಚೇತನಗೊಳಿಸಿದರೆ  ಹೊಸ ಮರವನ್ನಾಗಿ ಪರಿವರ್ತಿಸಬಹುದು. ಪುನಶ್ಚೇತನದ ಉದ್ದೇಶಗಳು : ಹಳೆಯ ಹಾಗೂ ಕಡಿಮೆ ಇಳುವರಿಯ ಗಿಡಗಳ…

Read more
ಕೊಳೆರೋಗ ಹೆಚ್ಚಳಕ್ಕೂ ಸಸ್ಯ ಆರೋಗ್ಯ

ಕೊಳೆ ರೋಗ ಹೆಚ್ಚಳಕ್ಕೂ ಸಸ್ಯ ಆರೋಗ್ಯಕ್ಕೂ  ಸಂಬಂಧಗಳಿರಬಹುದೇ ಯೋಚಿಸಿ.

ಈ ವರ್ಷ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಕಾಯಿಗಳಿಗೆ ಕೊಳೆ ರೋಗ ಬಂದಿದೆ ಎಂದು ಹೇಳುತ್ತಿದ್ದಾರೆ.  ಹೆಚ್ಚಿನ ಕಡೆ ಕೊಳೆ ರೋಗ ಬಂದಿದೆ. ಇದಕ್ಕೆ ಸಸ್ಯ ಆರೋಗ್ಯ  ಕಾರಣ ಇರಬಹುದೇ? ಕೆಲವು ದೃಷ್ಟಿಕೋನದಲ್ಲಿ ಇದು ನಿಜ ಎನ್ನಿಸುತ್ತದೆ. ಅಡಿಕೆಯ ಕೊಳೆ ರೋಗ ಬಂದಂತೆ ಅಡಿಕೆ ಸಸಿ/ ಮರಗಳಿಗೆ , ತೆಂಗಿನ ಮರಗಳಿಗೆ ಸುಳಿ ಕೊಳೆ ರೋಗವೂ  ಇತ್ತೀಚೆಗೆ ಬಹಳಷ್ಟು ಹೆಚ್ಚಾಗುತ್ತಿದೆ. ಪೋಷಕಾಂಶಗಳು ಅಸಮತೋಲನವಾಗಿ ಸಸ್ಯಕ್ಕೆ ಲಭ್ಯವಾಗದಿರುವುದೇ ಇದಕ್ಕೆ ಒಂದು ಕಾರಣ ಇರಬಹುದೇ ಎಂಬ ಬಗ್ಗೆ ಸಂಶಯವಿದೆ.  ನಾವೆಲ್ಲಾ…

Read more
error: Content is protected !!