ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ

ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ?

ಮಳೆಗಾಲದಲ್ಲಿ ಕೊಳೆ ನಿವಾರಣೆಗೆ ಸಿಂಪಡಿಸುವ ಬೋರ್ಡೋ ದ್ರಾವಣವನ್ನು ಈಗ ಸಿಂಪಡಿಸುವುದರಿಂದ ಅನುಕೂಲ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ. ಕೊಳೆ ರೋಗಕ್ಕೆ ಸಿಂಪಡಿಸುವ ಮೈಲುತುತ್ತೆ ಮತ್ತು ಸುಣ್ಣ ಇವುಗಳ ಸಮತೋಲಿತ ಮಿಶ್ರಣಕ್ಕೆ ಬೋರ್ಡೋ ದ್ರಾವಣ Bordeaux mixture ಎನ್ನುತ್ತಾರೆ. ಈ ದ್ರಾವಣವು ಶೇ. 1  ರ ಪ್ರಮಾಣದಲ್ಲಿ ಸಿಂಪಡಿಸಬೇಕು ಎಂಬುದು ಶಿಫಾರಸು. ಇದು ತಟಸ್ಥ ಮಿಶ್ರಣವಾಗಿರಬೇಕು. ಇದರಿಂದ ಫಲ ಹೆಚ್ಚು. ಇದನ್ನು ಮಳೆ ಬಂದ ನಂತರವೇ ಸಿಂಪಡಿಸಬೇಕಾಗಿಲ್ಲ. ಮಳೆ ಬರುವ ಮುಂಚೆಯೂ ಇದನ್ನು ಸಿಂಪರಣೆ ಮಾಡಬಹುದು. ಈಗಾಗಲೇ ಅಡಿಕೆ…

Read more
rain and water storing tank

ಮಳೆ ನೀರು ಕೊಯಿಲು- ಎಲ್ಲಿ ಸಾಧ್ಯ? ಎಲ್ಲಿ ಅಸಾಧ್ಯ?

ಮಳೆ ಎಂದರೆ ಅದು ಪ್ರಕೃತಿಯ ಕೊಡುಗೆ. ಇದು ಇಷ್ಟೇ ಬರುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಕೆಲವೊಮ್ಮೆ ಹೆಚ್ಚೂ ಬರಬಹುದು. ಕೆಲವೊಮ್ಮೆ ಕಡಿಮೆಯೂ ಬರಬಹುದು. ಅದನ್ನು ಸಂಗ್ರಹಿಸಲು ಬೇಕಾದ ಪಾತ್ರೆಗಳಿಗೆ ಅಳತೆ ಇಲ್ಲ. ಮಳೆ ನೀರು ಕೊಯಿಲು ಇದು ಒಂದು ಸುಂದರವಾದ ವಾಕ್ಯ ಅಷ್ಟೇ. ಧಾರಾಕಾರವಾಗಿ ಸುರಿಯುವ ಕರಾವಳಿ ಮಲೆನಾಡಿನ ಮಳೆ ನೀರನ್ನು ಸಂಗ್ರಹಿಸಲು ಪಾತ್ರೆ ಗಾತ್ರವನ್ನು ಯಾರಾದರೂ ಅಳತೆ ಮಾಡಿದ್ದುಂಟೇ? ಮಳೆ ನೀರನ್ನು  ಹಿಡಿದಿಟ್ಟಾಕ್ಷಣ ಅದು ಎಲ್ಲಾ ಸಮಸ್ಯೆಗೂ ಉತ್ತರವೇ? ಖಂಡಿತವಾಗಿಯೂ ಅಲ್ಲ. ಮಳೆ ನೀರನ್ನು ಸಂಗ್ರಹಿಸುವುದಲ್ಲ….

Read more
Lighting effected coconut palm

ತೆಂಗಿನ ಮರಗಳಿಗೆ ಸಿಡಿಲು ಬಡಿದರೆ ಏನು ಮಾಡಬೇಕು?

ಈಗಾಗಲೇ ಮುಂಗಾರು ಪೂರ್ವ ಮಳೆ ಬರಲಾರಂಭಿಸಿದೆ. ಮಿಂಚು ಸಿಡಿಲಿನ ಅಬ್ಬರದಲ್ಲಿ ಬಹಳಷ್ಟು ಕಡೆ ಅಡಿಕೆ, ತೆಂಗಿನ ಮರಗಳು ಬಲಿಯಾಗುತ್ತಿವೆ. ಮಳೆಗಾಲ ಪ್ರಾರಂಭದಲ್ಲಿ ಮತ್ತು ಮಳೆಗಾಲ ಕೊನೆಯಲ್ಲಿ ಮಿಂಚು ಸಿಡಿಲಿನ ಆರ್ಭಟ ಅಧಿಕ. ಮಳೆ ಬಾರದಿದ್ದರೂ ಪ್ರಭಲವಾದ ಈ ಗುಡುಗು ಸಿಡಿಲಿನ ಆರ್ಭಟ ಇದ್ದೇ ಇರುತ್ತದೆ. ಈ ಸಿಡಿಲು ಮೋಡಗಳ ಅಪ್ಪಳಿಸುವಿಕೆಯಿಂದ ಉತ್ಪಾದನೆಯಾಗುವ ಒಂದು ವಿದ್ಯುತ್ ಶಕ್ತಿ. ಇದು ಉತ್ಪಾದನೆಯಾಗಿ  ಅರ್ಥಿಂಗ್ ಆಗಬೇಕು. ಅದು ಎತ್ತರದ ಮರಗಳು, ಅಥವಾ ಕೆಲವು ಮಿಂಚು ಆಕರ್ಶಕಗಳ ಕಡೆಗೆ ಹೆಚ್ಚಿನ ಪ್ರಮಾಣದಲ್ಲಿ  ತಲುಪುತ್ತದೆ….

Read more
ನೆಲದ ಮೇಲೆ ಹುಲುಸಾಗಿ ಬೆಳೆದ ಹಾವಸೆ

ನೆಲದಲ್ಲಿ ಹಾವಸೆ ಬೆಳೆದರೆ ತೆಗೆಯಬೇಡಿ- ಇದರಿಂದ ಭಾರೀ ಲಾಭವಿದೆ.

ಕೆಲವು ರೈತರ ತೋಟದ ನೆಲದಲ್ಲಿ  ಹಾವಸೆ  ಸಸ್ಯ ಬೆಳೆಯುತ್ತದೆ. ಈ ಸಸ್ಯ ಬೆಳೆಯುವುದು ಯಾಕೆ ಮತ್ತು ಇದರ ಅನುಕೂಲ ಏನು? ನಿಮ್ಮ ತೋಟದಲ್ಲಿ, ಮನೆಯ ಕಂಪೌಂಡ್ ಗೊಡೆಯಲ್ಲಿ, ಅಡಿಕೆ, ತೆಂಗಿನ ಮರದ ಕಾಂಡದಲ್ಲಿ ಅಂಟಿಕೊಂಡಿರುವ ಒಂದು ಹಾವಸೆ ಸಸ್ಯ ನಮಗೆಷ್ಟು ಉಪಕಾರಿ ಎಂಬುದನ್ನು ಪ್ರತೀಯೊಬ್ಬರೂ ತಿಳಿದಿರಬೇಕು. ಮಳೆಗಾಲ ಬಂತೆಂದರೆ ಸಾಕು ಹಾವಸೆ ಸಸ್ಯಗಳು ಜೀವತುಂಬಿಕೊಂಡು ಎಲ್ಲೆಡೆ ಆವರಿಸುತ್ತವೆ. ಬೇಸಿಗೆಯಲ್ಲಿ ಸಾಕಷ್ಟು ತೇವಾಂಶ ಲಭ್ಯವಿರುವಲ್ಲಿ ಬೆಳೆಯುತ್ತದೆ. ಒಟ್ಟಿನಲ್ಲಿ ತೇವಾಂಶವನ್ನು ಬಳಸಿ ಬದುಕುವ ಈ ಸಸ್ಯ ವರ್ಗ ಕೃಷಿಕನ ಮಿತ್ರ…

Read more
ಪೌಷ್ಟಿಕ ಸೊಪ್ಪು ಕೊಡಿ

ಕುರಿ – ಮೇಕೆ ಗೊಬ್ಬರ ಯಾಕೆ ಉತ್ತಮ?

ಹೆಚ್ಚಿನ ರೈತರು ಸಾವಯವ ಗೊಬ್ಬರವಾಗಿ ಬಳಸುವ  ಕುರಿ, ಮೇಕೆ ಹಿಕ್ಕೆಯಲ್ಲಿ ಏನು ಇದೆ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ. ಕುರಿ, ಮೇಕೆಗಳ ಹಿಕ್ಕೆ ಒಂದು ಉತ್ತಮ ಬೆಳೆ ಪೋಷಕ ಗೊಬ್ಬರ ಮಾತ್ರವಲ್ಲ ,ಮಣ್ಣಿನ ತರಗತಿಯನ್ನು  ಉತ್ತಮ ಪಡಿಸುವ ಸಾವಯವ ವಸ್ತು ಎಂದರೆ ಅತಿಶಯೋಕ್ತಿಯಲ್ಲ. ಸಾವಯವ ಗೊಬ್ಬರ ಎಂದರೆ ಅದು ದೊಡ್ದ ಪ್ರಮಾಣದ್ದಾಗಿರಬೇಕು. ಹೆಚ್ಚು ಸಮಯ ಮಣ್ಣಿನಲ್ಲಿ ಉಳಿದು, ಸೂಕ್ಷ್ಮಾಣು ಜೀವಿಗಳಿಗೆ ಆಹಾರವಾಗಿ ನಿಧಾನವಾಗಿ ಲಭ್ಯವಾಗುತ್ತಾ ಇರಬೇಕು. ಇಂತಹ ಗೊಬ್ಬರಗಳಲ್ಲಿ ಕೊಟ್ಟಿಗೆ ಗೊಬ್ಬರ, ಸೊಪ್ಪು ಸದೆಗಳನ್ನು ಒಟ್ಟು ಸೇರಿಸಿ…

Read more

ಇಳುವರಿ ಕಡಿಮೆಯಾಗಲು ಕಾರಣ ಏನು ಗೊತ್ತೇ?

ಕೆಲವು ದೇಶಗಳಿಗೆ ಹೋಲಿಕೆ ಮಾಡಿದರೆ ನಮ್ಮ ಯಾವುದೇ ಬೆಳೆಯ ಇಳುವರಿ 50% ಕ್ಕೂ ಕಡಿಮೆ. ಬೇಸಾಯದ ಖರ್ಚು 50% ಹೆಚ್ಚು. ಇದು ಯಾಕೆ ಹೀಗಾಗುತ್ತಿದೆ ಎಂಬುದರ ಮಾಹಿತಿ ಇಲ್ಲಿದೆ. ವಿಯೆಟ್ನಾಂ ದೇಶದ ಕೃಷಿಯ ಮುಂದೆ ನಮ್ಮ ಕೃಷಿ ಏನೂ ಅಲ್ಲ. ಮಲೇಶಿಯಾದಲ್ಲಿ ತೆಂಗಿನ ಮರದಲ್ಲಿ 200 ಕ್ಕೂ ಹೆಚ್ಚು ಕಾಯಿಗಳಾಗುತ್ತವೆ. ಬ್ರೆಝಿಲ್ ನ ಕಾಫಿಯ ಇಳುವರಿ ನಮ್ಮದಕ್ಕಿಂತ ದುಪ್ಪಟ್ಟು. ಅದೇ ರೀತಿಯಲ್ಲಿ ಚೀನಾ ದೇಶದಲ್ಲೂ ನಮ್ಮಲ್ಲಿ ಬೆಳೆಯಲಾಗುವ ಎಲ್ಲಾ ನಮೂನೆಯ ಬೆಳೆಗಳಲ್ಲಿ ಇಳುವರಿ ತುಂಬಾ ಹೆಚ್ಚಾಗಿದೆ. ಎಲ್ಲಾ…

Read more
ತೆಂಗಿನ ಸಸಿ ಆರೋಗ್ಯವಾಗಿದ್ದರೆ ಹೀಗೆ ಇರುತ್ತದೆ.

ತೆಂಗಿನ ಸಸಿ ಬೇಗ ಫಲಕೊಡಬೇಕಾದರೆ ಮಾಡಬೇಕಾದ ಅಗತ್ಯ ಕೆಲಸ.

ತೆಂಗಿನ ಸಸಿ ಹಾಗೂ ತಾಳೆ ಜಾತಿಯ ಎಲ್ಲಾ ಮರಗಳಿಗೂ ಕುರುವಾಯಿ ದುಂಬಿ ಕಾಟ ಇಲ್ಲದಿದ್ದರೆ, ಸಸಿ ಆರೋಗ್ಯವಾಗಿ ಬೆಳೆದು ಬೇಗ ಫಲ ಕೊಡುವುದರಲ್ಲಿ ಅನುಮಾನ ಇಲ್ಲ. ತೆಂಗು ಜಾತಿಯ ಮರಗಳಲ್ಲಿ ಒಂದೇ ಮೊಳಕೆ (Bud) ಇರುವುದು. ಇವುಗಳ ತಲೆ ಕಡಿದರೆ ಅವು ಮತ್ತೆ ಇತರ ಮರಗಳಂತೆ ಚಿಗುರಿ ಬೆಳೆಯಲಾರದು. ಆದರೆ ಇತರ ಮರ ಮಟ್ಟುಗಳ  ಎಲ್ಲಾ ಎಲೆ ಗೆಲ್ಲು ಕಡಿದರೂ ಅದು ಮತ್ತೆ ಚಿಗುರಿ ಬೆಳೆಯುತ್ತದೆ. ಆದ ಕಾರಣ ತೆಂಗಿನಂತಹ ಮರಗಳಿಗೆ ಎಲೆಯೇ ಆಧಾರ. ಕೆಲವು ಸಂದರ್ಭಗಳಲ್ಲಿ…

Read more

ಹೈನುಗಾರಿಕೆ- ನೊಣಗಳ ನಿಯಂತ್ರಣಕ್ಕೆ ಸುರಕ್ಷಿತ ಉಪಾಯ.

ಹಟ್ಟಿ, ಮನೆ, ಬೆಳೆ ಮುಂತಾದ ಕಡೆಗಳಲ್ಲಿ ತುಂಬಾ ಕಿರಿ ಕಿರಿ ಉಂಟುಮಾಡುವ ಹಾರುವ ಕೀಟಗಳ ನಿಯಂತ್ರಣಕ್ಕೆ ಈ ವ್ಯವಸ್ಥೆ ಯನ್ನು ಮಾಡಿಕೊಂಡರೆ ಯಾವ ಕೀಟನಾಶಕವೂ ಬೇಕಾಗಿಲ್ಲ. ಬಹುತೇಕ ರೈತರು ತಿಳಿದಿರುವಂತೆ ಹಾರುವ ಕೀಟಗಳನ್ನು ನಿಯಂತ್ರಿಸಲು ವಿಷ ರಾಸಾಯನಿಕ ಫಲಕೊಡುವುದಕ್ಕಿಂತ ಹೆಚ್ಚು, ಕೆಲವು ಉಪಾಯಗಳು ಫಲ ಕೊಡುತ್ತವೆ. ಹಾರುವ ನೊಣ, ಪತಂಗಗಳಿಗೆ ಕೀಟನಾಶಕ  ಸರಿಯಾಗಿ ತಗಲುವುದಿಲ್ಲ. ಅವು  ತಪ್ಪಿಸಿಕೊಳ್ಳುತ್ತವೆ. ಅವುಗಳನ್ನು ಬಂಧಿಸಲು ಕೆಲವು ಸುರಕ್ಷಿತ ಉಪಾಯಗಳಿವೆ. ಇದರ ಬಳಕೆಯಿಂದ ಯಾರಿಗೂ ಯಾವ ಹಾನಿಯೂ ಇರುವುದಿಲ್ಲ. ನಾವು ಯಾವಾಗಲೂ ಕೈಯಿಂದ…

Read more
ಮಣ್ಣಿನ ಬಣ್ಣ ಮತ್ತು ಅದರ ಫಲವತ್ತತೆ

ಮಣ್ಣಿನ ಬಣ್ಣ ಮತ್ತು ಅದರ ಫಲವತ್ತತೆ

ಮಣ್ಣಿನಲ್ಲಿ ಬೆಳೆ ಬೆಳೆಯುವ ಪ್ರತೀಯೊಬ್ಬ ರೈತನೂ ಮಣ್ಣಿನ ಬಣ್ಣದ ಮೇಲೆ ಅದರ ಉತ್ಪಾದನಾ ಶಕ್ತಿಯನ್ನು ತಿಳಿಯಬಹುದು. ಮಣ್ಣಿನ ಉತ್ಪಾದನಾ ಶಕ್ತಿ ( ಬೆಳೆ ಬೆಳೆದಾಗ ಅದರ ಬೆಳವಣಿಗೆ ಮತ್ತು ಅದರಲ್ಲಿ ಫಸಲು) ಅದರ ಭೌತಿಕ ಗುಣಧರ್ಮದ ಮೇಲೆ ಅವಲಂಭಿತವಾಗಿರುತ್ತದೆ.  ಜಮೀನಿನ ಮಣ್ಣು ಜೇಡಿಯಿಂದ ಕೂಡಿದೆಯೇ, ಮರಳಿನಿಂದ ಕೂಡಿದೆಯೇ, ಬಣ್ಣ ಹೇಗಿದೆ ಎಂಬುದನ್ನು ಪರಿಶೀಲಿಸಿ ಅದರ ಉತ್ಪಾದಕತೆಯನ್ನು ನಿರ್ಧರಿಸಬಹುದು. ಕೆಲವರು ಮಣ್ಣು ನೋಡಿಯೇ ಈ ಮಣ್ಣಿನಲ್ಲಿ ಕೃಷಿ ಮಾಡುವಾಗ ಎಷ್ಟು ಹಾಕಿದರೂ ಸಾಲದು ಎನ್ನುತ್ತಾರೆ. ಇನ್ನು ಕೆಲವರು ಜಮೀನು…

Read more

ನಿಮ್ಮ ಬೋರ್ ವೆಲ್ ನಲ್ಲಿ ನೀರು ಎಷ್ಟು ಇದೆ ಎಂದು ತಿಳಿಯುವುದು ಹೇಗೆ?

ಹೆಚ್ಚಿನ ರೈತರು ಕೃಷಿ ನೀರಾವರಿಗೆ  ಬೋರ್ ವೆಲ್ ನೀರಿನ ಮೂಲವನ್ನು ಆಶ್ರಯಿಸಿದ್ದಾರೆ. ಕೊಳವೆ ಬಾವಿಯಲ್ಲಿ  ನೀರು ಎಷ್ಟು ಇದೆ, ಪಂಪು ಎಷ್ಟು ಆಳಕ್ಕೆ ಇಳಿಸಬೇಕು ಎಂದು ತಿಳಿಯುವುದು ಹೀಗೆ. ಕೊಳವೆ ಬಾವಿ ಎಂದರೆ ಅದು ಶಿಲಾ ಪದರದಲ್ಲಿ ಜಿನುಗುವ ನೀರು. ಇದನ್ನು ಬರಿಗಣ್ಣಿನಿಂದ  ಎಷ್ಟು ಇದೆ ಎಂದು ನೋಡುವುದು ಅಸಾಧ್ಯ. ಕೆರೆ, ಬಾವಿಯ ನೀರನ್ನು ಎಷ್ಟು  ಇದೆ, ಎಷ್ಟು ತೆಗೆಯಬಹುದು ಎಂದು ಕರಾರುವಕ್ಕಾಗಿ ತಿಳಿಯಬಹುದು. ಆದರೆ ಕೊಳವೆ ಬಾವಿಯ ನೀರಿಗೆ ಅದು ಸಾಧ್ಯವಿಲ್ಲ. ಕೆಲವು ಪಳಗಿದವರು ಸ್ವಲ್ಪ…

Read more
error: Content is protected !!