Zink deficiency in plant

ಝಿಂಕ್ ಬಳಸಿದರೆ ಸಸ್ಯ ಆರೋಗ್ಯ ಮತ್ತು ಫಸಲು ಹೆಚ್ಚುತ್ತದೆ.

ಬೆಳೆಗಳು ಆರೋಗ್ಯವಾಗಿದ್ದು, ಫಲಧಾರಣಾ ಶಕ್ತಿ ಉತ್ತಮವಾಗಿ, ಪೌಷ್ಟಿಕ ಫಲ ಕೊಡಲು ಸತು ಎಂಬ ಸೂಕ್ಷ್ಮ ಪೊಷಕಾಂಶ ಅಗತ್ಯವಾಗಿ ಬೇಕು ಎನ್ನುತ್ತಾರೆ ಬೆಳೆ ತಜ್ಞರು. ಇತ್ತೀಚೆಗೆ ಬೆಳೆ ತಜ್ಞರುಗಳು ಸತುವಿನ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಕೆಲವು ಗೊಬ್ಬರ ತಯಾರಕರು ತಮ್ಮ ಕೆಲವು ಗೊಬ್ಬರಗಳನ್ನು (ವಿಶೇಷವಾಗಿ ಡಿಎಪಿ) ಸತುವಿನ ಮೂಲಕ ಬ್ಲೆಂಡ್ ಮಾಡಿ ಕೊಡುತ್ತಾರೆ. ಕರ್ನಾಟಕ ಸರಕಾರದ  ಕೃಷಿ ನಿಯಮಾವಳಿ ಪ್ರಕಾರ ಇಲ್ಲಿನ ಮಣ್ಣಿಗೆ ಸೂಕ್ಷ್ಮ ಪೋಷಕಾಂಶಗಳ ಜೊತೆಗೆ ಗರಿಷ್ಟ ಪ್ರಮಾಣ (3%) ದಲ್ಲಿ ಸತು ಸೇರಿಸಿರಬೇಕು. ಕರ್ನಾಟಕದ…

Read more

ಈ ಕಳೆ ಸಸ್ಯ ನಿಯಂತ್ರಿಸಲು ಕೆಲವು ಸರಳ ಉಪಾಯ.

ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ಮಾತಿನಂತೆ ಕಳೆ ಗಿಡವನ್ನು ಇನ್ನೊಂದು ಗಿಡದ ಸಹಾಯದಿಂದ ತೆಗೆಯಲು ಸಾಧ್ಯ. ಅಂಥಹ ಗಿಡಗಳು ನಮ್ಮಲ್ಲಿ ಹಲವು ಇವೆ. ಒಂದು ಸಸ್ಯವನ್ನು ಮತ್ತೊಂದು ಸಸ್ಯದಿಂದ ನಿಯಂತ್ರಿಸಬಹುದು ಎಂಬುದು ಮನಗೆಲ್ಲಾ ಗೊತ್ತಿದೆ. ರಬ್ಬರ್ ಬೆಳೆಗಾರರು  ತೋಟದಲ್ಲಿ ಇತರ ಸಸ್ಯಗಳು ಬೆಳೆಯದೆ ಇರುವ ಸಲುವಾಗಿ ಮುಚ್ಚಲು ಬೆಳೆಯನ್ನು ಬೆಳೆಸುತ್ತಾರೆ. ಅದೇ ಸಿದ್ದಾಂತದಲ್ಲಿ  ಹಳದಿ ಸೇವಂತಿಕೆ ಹೂವಿನ ಸಸ್ಯ (Singapore daisy) Scientific name : Sphagneticola trilobata  ವನ್ನು ನಿಯಂತ್ರಿಸಬಹುದು. ದ್ವಿದಳ ಜಾತಿಯ ಸಸ್ಯಗಳನ್ನು ಹಳದಿ ಹೂವಿನ…

Read more
poultry farm

ಕೋಳಿ ಗೊಬ್ಬರದಲ್ಲಿ ಏನಿದೆ? ಪ್ರಯೋಜನ ಏನು?.

ರೈತರು ತಮ್ಮ ಬೆಳೆ ಪೋಷಣೆಗಾಗಿ ಬಳಕೆ ಮಾಡುವ ಕೋಳಿ ಹಿಕ್ಕೆಯ ಗೊಬ್ಬರದಲ್ಲಿ ಏನಿದೆ, ಇದರ ಫಲಿತಾಂಶ ಏನು ಎಂಬುದರ ಪೂರ್ಣ ಪರಿಚಯ ಇಲ್ಲಿದೆ. ಕೋಳಿ ಗೊಬ್ಬರದ ಬಳಕೆಗೆ ಬಹಳ ಹಿಂದಿನ ಇತಿಹಾಸ ಇದೆ.ಇತ್ತೀಚಿನ 20-30 ವರ್ಷಗಳಿಂದೀಚೆಗೆ ಕೋಳಿ ಸಾಕಾಣಿಕೆ ಭಾರೀ ವಾಣಿಜ್ಯಿಕವಾದ ನಂತರ ಕೋಳಿ ಸಾಕಾಣಿಕಾ ಶೆಡ್ ಗಳಿಂದ ಗೊಬ್ಬರ ತಂದು ಬೆಳೆಗಳಿಗೆ ಬಳಸುವಿಕೆ ಪ್ರಾರಂಭವಾಯಿತು. ಅದಕ್ಕೂ ಹಿಂದೆ ಸಾಮಾನ್ಯವಾಗಿ ಪ್ರತೀ ಮನೆಗಳಲ್ಲೂ ಅಲ್ಪ ಸ್ವಲ್ಪ ಕೋಳಿಗಳನ್ನು ಸಾಕುತ್ತಿದ್ದರು. ಅವುಗಳ ಕಾಲಿನ ಬುಡಕ್ಕೆ ಮರ ಸುಟ್ಟ ಬೂದಿ…

Read more
Mite infection

ತರಕಾರಿ ಬೆಳೆಗಳಲ್ಲಿ ಎಲೆ ಮುರುಟುವುದಕ್ಕೆ ಸುರಕ್ಷಿತ ಪರಿಹಾರ.

ಚಳಿಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಈ ಎಲೆ ಮುರುಟುವ ಸಮಸ್ಯೆಗೆ ಕಾರಣ ಏನು ಮತ್ತು ಸುರಕ್ಷಿತ ಪರಿಹಾರ ಯಾವುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ತರಕಾರಿ  ಬೆಳೆ ವಾಣಿಜ್ಯಿಕವಾಗಿ ಮಾಡಿದರೂ ಈ ಸಮಸ್ಯೆ ಇದೆ.  ಮನೆಬಳಕೆಗೆ ಬೇಕಾದಷ್ಟೇ ಮಾಡಿದರೂ ಈ ಸಮಸ್ಯೆ  ಬೆನ್ನು ಬಿಡುವುದಿಲ್ಲ. ತರಕಾರಿ ಬೆಳೆಗಳು ವಿಶೇಷವಾಗಿ ರಾಸಾಯನಿಕ ಮುಕ್ತವಾಗಿದ್ದರೆ ಬೆಳೆಗಾರರಿಗೂ ಒಳ್ಳೆಯದು. ಬಳಕೆದಾರರಿಗೂ  ಒಳ್ಳೆಯದು. ಕೃಷಿಕರು ಕೀಟನಾಶಕ ಬಳಸುವುದರಿಂದ ಮೊದಲಾಗಿ ದೊಡ್ಡ ದುಷ್ಪರಿಣಾಮ ಉಂಟಾಗುವುದು ಸಿಂಪಡಿಸಿದವರಿಗೆ. ಅದನ್ನು ಉಸಿರಾಡಿದವರಿಗೆ, ಮೈಗೆ ಕೈಗೆ ತಾಗಿಸಿಕೊಂಡವರಿಗೆ ಪ್ರಾಥಮಿಕ…

Read more
ಡ್ರಿಪ್ - ಕಟ್ಟಿಕೊಳ್ಳುವಂತೆ ಮಾಡುವ ಕಶ್ಮಲಗಳನ್ನು ನಿವಾರಿಸುವ ವ್ಯವಸ್ಥೆ

ಡ್ರಿಪ್ – ಕಟ್ಟಿಕೊಳ್ಳುವಂತೆ ಮಾಡುವ ಕಶ್ಮಲಗಳು.

ಬಹಳಷ್ಟು ಜನ ರೈತರು ಡ್ರಿಪ್ ನೀರಾವರಿಯಲ್ಲಿ ಕಟ್ಟಿಕೊಳ್ಳುವ ಸಮಸ್ಯೆ ರಗಳೆ ಎಂದು ಒಮ್ಮೆ ಅಳವಡಿಸಿ ನಂತರ ಕಿತ್ತು ಬಿಸಾಡುತ್ತಾರೆ. ಹೀಗೆ ಆಗುವುದು ಕಶ್ಮಲಗಳು  ಸೇರಿಕೊಂಡು. ಒಂದು ದಿನದ ಕೆಲಸ ಮತ್ತು ಸ್ವಲ್ಪ ತಾಳ್ಮೆ ಇದ್ದರೆ ಅದನ್ನು ಸ್ವಚ್ಚ ಮಾಡುವುದು ತುಂಬಾ ಸುಲಭ. ಹನಿ ನೀರಾವರಿ ವ್ಯವಸ್ಥೆಯಲ್ಲಿ ನೀರಿನ ಗುಣ ಹೊಂದಿಕೊಂಡು ಕಟ್ಟಿಕೊಳ್ಳುವ ಸಮಸ್ಯೆ ಉಂಟಾಗುತ್ತದೆ.ಇದನ್ನು ನಿವಾರಿಸಲು ಸೂಕ್ತ ಫಿಲ್ಟರ್ ಮತ್ತು ಆಗಾಗ ಪೈಪನ್ನು  ಪ್ಲಶ್ ಮಾಡುವುದು ವರ್ಷಕ್ಕೊಮ್ಮೆ , ಆಮ್ಲ ಉಪಚಾರ ಮಾಡುವುದು ಪರಿಹಾರ. ಹನಿ ನೀರಾವರಿಗೆ …

Read more
Good yield in Arecanut

ನಿರೀಕ್ಷಿಸಿದಂತೆ ಇಳುವರಿ ಪಡೆಯಬೇಕೇ? ರಸಾವರಿ ಮಾಡಿ.

ನೀರಾವರಿಯೊಂದಿಗೆ ಪೊಷಕಗಳನ್ನು ಕೊಡುವ ಕ್ರಮಕ್ಕೆ ರಸಾವರಿ ಎನ್ನುತ್ತಾರೆ. ಕರಾರುವಕ್ಕಾಗಿ ಇಷ್ಟು ಇಳುವರಿ ಪಡೆಯುತ್ತೇನೆ ಎಂಬವರಿಗೆ ಇದು ಕೈಹಿಡಿಯುತ್ತದೆ. ಸಸ್ಯಗಳು ಯಾವುದೇ ಇರಲಿ. ಅವು ಪೊಷಕಗಳನ್ನು ಬಳಸಿಕೊಳ್ಳಬೇಕಾದರೆ ಜೊತೆಗೆ ನೀರು ಬೇಕು. ನೀರು ಮಣ್ಣನ್ನು ತೇವ ಮಾಡುತ್ತದೆ.  ತೇವ ಇರುವ ಇರುವಲ್ಲಿ  ಪೊಷಕಗಳು ಲಭ್ಯವಿದ್ದರೆ ಅದನ್ನು ಸಸ್ಯಗಳು ತಮ್ಮ  ಬೇರಿನ ಮೂಲಕ ಬಳಸಿಕೊಳ್ಳುತ್ತವೆ. ತೇವಾಂಶ ಇಲ್ಲದಲ್ಲಿ ನಾವು ಎಷ್ಟೇ ಪೋಷಕಾಂಶ ಸುರಿದರೂ ಅದು ಪ್ರಯೋಜನಕ್ಕೆ ಬರಲಾರದು. ಇದರಿಂದಾಗಿ ನಾವು ಪೋಷಕಗಳನ್ನು ಹೆಚ್ಚು ಹೆಚ್ಚು ಬಳಸಿದರೂ  ಅದರ ಫಲ ಚೆನ್ನಾಗಿ…

Read more
ಡ್ರಿಪ್ ವ್ಯವಸ್ಥೆಯಲ್ಲಿ ಅಡಿಕೆ ಬೆಳೆ

ಡ್ರಿಪ್ ಸಮಸ್ಯೆ ಕೊಡುತ್ತಿದೆಯೇ ? ಕಾರಣ ಇಲ್ಲಿದೆ.

ಸರಕಾರ ಡ್ರಿಪ್ ನೀರಾವರಿಗೆ  ಸಹಾಯಧನ ಕೊಡುತ್ತದೆ ಎಂದು ಹನಿ ನೀರಾವರಿ ಮಾಡಿಸಿಕೊಳ್ಳಬೇಡಿ. ನಿಮಗೆ ಅದರ ಮೇಲ್ವಿಚಾರಣೆ ಮಾಡಲು ಜ್ಞಾನ  ಇದ್ದರೆ ಮಾತ್ರ ಮಾಡಿಕೊಳ್ಳಿ. ಗರಿಷ್ಟ ಪ್ರಮಾಣದಲ್ಲಿ ನೀರು ಉಳಿಸುವ ನೀರಾವರಿ ವ್ಯವಸ್ಥೆ ಎಂದರೆ ಹನಿ ನೀರಾವರಿ. ಇದು ಸಸ್ಯಗಳಿಗೆ ಎಷ್ಟು ನೀರು ಬೇಕೋ ಅಷ್ಟನ್ನು ಮಾತ್ರ ಒದಗಿಸಿಕೊಡುವ ವ್ಯವಸ್ಥೆ. ಗಂಟೆಗೆ ಕೆಲವೇ ಲೀಟರುಗಳಷ್ಟು  ನೀರನ್ನು ಸಸ್ಯದ ಬೇರು ವಲಯದ ಒಂದು ಅಥವಾ ಎರಡು ಕಡೆಗೆ ತೊಟ್ಟಿಕ್ಕುವ ಈ ವ್ಯವಸ್ಥೆ ಉತ್ತಮ ಹೌದು ಆದರೆ ಮಣ್ಣು, ನೀರು  ಮುಂತಾದವುಗಳನ್ನು …

Read more
PVC pipe

ನೀವು ಕೊಳ್ಳುವ ಪಿ ವಿ ಸಿ ಪೈಪು ಗುಣಮಟ್ಟ ಪರೀಕ್ಷಿಸುವುದು ಹೇಗೆ?

ಮಾರುಕಟ್ಟೆಯಲ್ಲಿ  ನಾನಾ ನಮೂನೆಯ   ಪಿ ವಿ ಸಿ ಪೈಪುಗಳು ಲಭ್ಯವಿದೆ. ಖರೀದಿ ಮಾಡುವ ಜನರಿಗೆ ಯಾವುದು ಉತ್ತಮ ಯಾವುದು ಕಳಫೆ ಎಂಬುದನ್ನು ತಿಳಿಯುವ ವಿಧಾನ ಗೊತ್ತಿದ್ಡರೆ ಉತ್ತಮ ಸಾಮಾಗ್ರಿಯನ್ಣೇ ಅಯ್ಕೆ ಮಾಡಭಹುದು. PVC  ಪೈಪಿನಲ್ಲಿ  ಉತ್ತಮ ಗುಣಮಟ್ಟದ್ದು  ಯಾವುದು  ಎಂದು ತಿಳಿಯುವ ವಿಧಾನ ಹೀಗೆ. ನೀರಾವರಿಗೆ ಪ್ರತೀಯೊಬ್ಬ ಕೃಷಿಕರೂ ಬಳಸುವ ಪೈಪು ಪಿ ವಿ ಸಿ  (ಪಾಲಿ ವಿನೈಲ್ ಕ್ಲೋರೈಡ್ ) ಇದು ಒಂದು ಪೆಟ್ರೋಲಿಯಂ ಉತ್ಪನ್ನವಾಗಿರುತ್ತದೆ, ಈ ಪೈಪುಗಳು ಕೃಷಿ ನೀರಾವರಿಗೆ ಪ್ರವೇಶವಾದ ತರುವಾಯ  ಕೃಷಿ…

Read more
ginger in sprinkler irrigation

ಶುಂಠಿ ಬೆಳೆದ ಭೂಮಿ ಹಾಳಾಗುವುದು ನಿಜವೇ?

ಕೆಲವರು ಹೇಳುತ್ತಾರೆ ಶುಂಠಿ ಬೆಳೆದರೆ ಆ ಮಣ್ಣು ಹಾಳಾಗುತ್ತದೆ. ಮತ್ತೆ ಅಲ್ಲಿ ಬೆಳೆ ಬೆಳೆಯಲಿಕ್ಕಾಗುವುದಿಲ್ಲ ಎಂದು. ಇದು ನಿಜವೇ? ಶುಂಠಿ ಬೆಳೆಗೆ ಬೇರೆ ಬೇರೆ ಪೊಷಕಾಂಶಗಳನ್ನು ಹಾಕುತ್ತಾರೆ. ಆದ ಕಾರಣ ಮಣ್ಣು ಜೀವ ಕಳೆದುಕೊಳ್ಳುತ್ತದೆ ಎಂಬ ಮಾತನ್ನು ಬಹಳ ಜನ ಇನ್ನೂ ನಂಬಿದ್ದಾರೆ. ಇದನ್ನು ಕೆಲವು ಜನ ರಂಗು ರಂಗಾಗಿ ವಿವರಿಸುತ್ತಾ  ಈ ವಿಷಯದಲ್ಲಿ ತಜ್ಞರಾಗುತ್ತಾರೆ. ಆದರೆ ವಾಸ್ತವವೇ ಬೇರೆ. ಶುಂಠಿ ಬೆಳೆ ಇರಲಿ ಇನ್ಯಾವುದೇ ಬೆಳೆ ಇರಲಿ ಅದು ಮಣ್ಣಿನಲ್ಲಿ ಪೊಷಕ ಇದ್ದರೆ ಅದನ್ನು ಬಳಸಿಕೊಳ್ಳುತ್ತದೆ….

Read more
ಉಪ್ಪು ಹಾಕುವ ಭಾಗ

ತೆಂಗಿನ ಮರಗಳಿಗೆ ಉಪ್ಪು ಹಾಕಿದರೆ ಏನು ಪ್ರಯೋಜನ.

ತೆಂಗಿನ ಮರದ ಬುಡಕ್ಕೆ ಉಪ್ಪು ಹಾಕುವ ಬಗ್ಗೆ ತಿಳಿದುಕೊಳ್ಳಲು ಕೂತೂಹಲವೇ? ಇಲ್ಲಿದೆ ಇದರ ಕುರಿತಾಗಿ ಸಂಪೂರ್ಣ ಮಾಹಿತಿ. ನಮ್ಮ ಹಿರಿಯರು ಅದರಲ್ಲೂ ಕರಾವಳಿ ಭಾಗದ ತೆಂಗು ಬೆಳೆಗಾರರು ತೆಂಗಿನ ಮರದ ಬುಡಕ್ಕೆ ವರ್ಷಕ್ಕೊಮ್ಮೆ 2 ಸೇರು ಉಪ್ಪು ಹಾಕುತ್ತಿದ್ದರು. ಇದಕ್ಕೆ ಇವರು ಕೊಡುತ್ತಿದ್ದ ಕಾರಣ ಉಪ್ಪು ಹಾಕಿದರೆ ಮಣ್ಣಿನಲ್ಲಿ ತೇವಾಂಶ ಉಳಿಯುತ್ತದೆ ಎಂದು. ಹಿಂದೆ ಈಗಿನಂತೆ ತೆಂಗಿಗೆ ನೀರು ಉಣಿಸುವ ಪದ್ದತಿ ಕಡಿಮೆ ಇತ್ತು. ಆಗ ಬೇಸಿಗೆಯಲ್ಲಿ ತೇವಾಂಶವನ್ನು ಇದು ಉಳಿಸಿ ತೆಂಗನ್ನು ರಕ್ಷಿಸುತ್ತದೆ ಎನ್ನುತ್ತಿದ್ದರು. ಇದಲ್ಲದೆ …

Read more
error: Content is protected !!