ಹುಳ ತಿಂದು ಸತ್ತ ತೆಂಗಿನ ಮರ

ತೆಂಗಿನ ಮರಗಳು ಸಾಯುತ್ತಿರುವುದಕ್ಕೆ ಕಾರಣ ಏನು?

ಸಿಡಿಲು, ಸುಳಿ ಕೊಳೆ, ಅಥವಾ ಇನ್ನೇನಾದರೂ ಕೀಟ ಬಾಧೆಯಿಂದ ತೆಂಗಿನ ಮರ ಸತ್ತರೆ ಅದನ್ನು ತಕ್ಷಣ ಕಡಿದು ಏನಿಲ್ಲವಾದರೂ ಸೌದೆ ಮಾಡಿಯಾದರೂ ವಿಲೇವಾರಿ ಮಾಡಿ. ಹೆಚ್ಚಿನ ರೈತರು  ತೆಂಗಿನ ಮರ ಸತ್ತು ಹೋದರೆ ಅದರಿಂದ ನಮಗೇನು ನಷ್ಟ ಎಂದು ಅದನ್ನು ಹಾಗೆ  ಬಿಡುತ್ತಾರೆ. ಸತ್ತು ಒಣಗಿ ಶಿಥಿಲವಾದ ಮೇಲೆ ವಿಲೇವಾರಿ ಸುಲಭ ಎಂಬ ಕಾರಣಕ್ಕೆ ಹೀಗೆ ಮಾಡುತ್ತಾರೆ. ಆದರೆ ಸತ್ತ ಮರವನ್ನು ಹಾಗೇ ಬಿಟ್ಟರೆ ಮತ್ತೆ ಒಂದೆರಡು ಮರ ಸಸಿ ಸಾಯುತ್ತದೆ ಏಕೆ ಗೊತ್ತೇ? ನಮ್ಮಲ್ಲಿ ಹಿರಿಯರು…

Read more
ಲಾಭದಾಯಕ ಕೃಷಿಗೆ ಬೇಕಾದ ಫಲವತ್ತಾದ ಮಣ್ಣು

ಕೃಷಿ ಲಾಭದಾಯಕವಾಗಲು ಬೇಕಾಗುವುದೇ ಉತ್ತಮ ಮಣ್ಣು – ಹೇಗೆ?

ಕೃಷಿ ಮಾಡುವ ನಾವೆಲ್ಲಾ ಮಣ್ಣಿನ ಬಗ್ಗೆ ಎಷ್ಟು ತಿಳಿದುಕೊಂಡರೂ ಸಾಲದು. ಮಣ್ಣು ಮೊದಲು. ಕೃಷಿ ಅನಂತರ.ಮಣ್ಣಿನಲ್ಲಿ ಫಲವತ್ತತೆ ಇದ್ದರೆ ಮಾತ್ರ ಅದರಲ್ಲಿ ಕೃಷಿ ಮಾಡಿ. ಫಲವತ್ತತೆ ಇಲ್ಲದಲ್ಲಿ ಕೃಷಿ ಯಾವಾಗಲೂ ಲಾಭದಾಯಕವಾಗುವುದಿಲ್ಲ. ಇತ್ತೀಚೆಗೆ ಈಶ ಫೌಂಡೇಶನ್ ನ ಸಧ್ಗುರುಗಳು ತಮ್ಮ ವೀಡಿಯೊದಲ್ಲಿ ಕ್ಯಾಲಿಫೋರ್ನಿಯಾ ದೇಶವು ಅಕ್ಕಿಯನ್ನು ಥೈಲ್ಯಾಂಡ್ ದೇಶದಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ. ಯಾಕೆ ಭಾರತದಿಂದ ಮಾಡುವುದಿಲ್ಲ ಎಂಬ ಬಗ್ಗೆ ಕೇಳಿದಾಗ ಭಾರತದ ಅಕ್ಕಿಯಲ್ಲಿ ಯಾವ ಪೋಷಕಾಂಶಗಳೂ ಇಲ್ಲ ಎನ್ನುತ್ತಾರೆ ಎಂದಿದ್ದಾರೆ. ಅದೇ ರೀತಿ ವಿಯೆಟ್ ನಾಂ ದೇಶ…

Read more
ಜಂಬಿಟ್ಟಿಗೆ ಮಣ್ಣು

ಈ ಮಣ್ಣು ಬೆಳೆಯ ಗುಣಮಟ್ಟ ಹೆಚ್ಚಿಸುತ್ತದೆ. ಯಾಕೆ?

ಮಣ್ಣಿನ ಗುಣ ಎಂಬುದು ನಮಗೆಲ್ಲಾ ಗೊತ್ತಿರುವ ಸಂಗತಿ. ಮಣ್ಣಿನ ಗುಣ ಚೆನ್ನಾಗಿದ್ದರೆ ಕೃಷಿ ಲಾಭದಾಯಕವಾಗುತ್ತದೆ. ನಾವು ಬೆಳೆಯುವ ಬೆಳೆಯ ಫಸಲಿಗೆ ಗುಣಮಟ್ಟ ಬರುತ್ತದೆ.  ಮಣ್ಣು ಎಂಬುದು ಶಿಲಾ ಶಿಥಿಲತೆಯಿಂದ ಆದ ವಸ್ತು. ಶಿಲೆಯಲ್ಲಿರುವ ಖನಿಜಗಳು,  ಸಸ್ಯ , ಪ್ರಾಣಿಗಳ ಕಳಿಯುವಿಕೆಯಿಂದಾದ ಸಾವಯವ ವಸ್ತುಗಳು ಸೇರಿ, ಅದು ಬೇರೆ ಬೇರೆ ರೂಪಾಂತರ ಹೊಂದಿವೆ. ಒಂದೊಂದು ಕಡೆಯ ಮಣ್ಣು ಒಂದೊಂದು ರೀತಿಯಲ್ಲಿ ಇರುತ್ತವೆ. ಇದಕ್ಕೆಲ್ಲಾ ಕಾರಣ ಅಲ್ಲಿ ಆದ ಶಿಲೆ ಮತ್ತು ಅದರ ರೂಪಾಂತರ. ಕರಾವಳಿಯ ಮಣ್ಣು, ಮಲೆನಾಡಿನ ಮಣ್ಣು,…

Read more
caskuta plant

ಇದು ಔಷಧೀಯ ಗಿಡ ಅಲ್ಲ – ಬದನಿಕೆ ಕಳೆ.

ಇದರ ಒಂದು ತುಂಡು ಚೂರನ್ನು ತಂದು ನಿಮ್ಮ ಮನೆಯ ಅಥವಾ ಹೊಲದ ಗಿಡದ ಮೇಲೆ ಎಲ್ಲಿಯಾದರೂ ಹಾಕಿ. ಅದು ಬದುಕುತ್ತದೆ. ಇದಕ್ಕೆ ಎಲೆ ಇಲ್ಲ. ಬೇರೂ ಇಲ್ಲ. ಬದುಕಲು ಮಣ್ಣೂ ಬೇಕಾಗಿಲ್ಲ. ಎಲೆ , ಕಾಂಡ ಎಲ್ಲೆಲ್ಲೂ ಬದುಕುತ್ತದೆ. ಕಡಿದು ತೆಗೆದು ಸುಟ್ಟರೆ ಸಾಯಬಹುದು. ಇಲ್ಲವಾದರೆ ಮತ್ತೆ ಅಲ್ಲೇ ಹುಟ್ಟಿಕೊಳ್ಳುತ್ತದೆ. ಇದು ಒಂದು ಪರಾವಲಂಭಿ ಸಸ್ಯವಾಗಿದ್ದು, ಇದನ್ನು ಬದನಿಕೆ ಎನ್ನುತ್ತಾರೆ. ಕೆಲವರು ಈ ಬಳ್ಳಿಯನ್ನು ಔಷಧೀಯ ಬಳ್ಳಿ ಎನ್ನುತ್ತಾರೆ. ಆದರೆ ಇದು ಔಷಧೀಯ ಬಳ್ಳಿ ಅಲ್ಲ. ಬದಲಿಗೆ…

Read more
snail

ಅಡಿಕೆ ಮರದ ಸಿಂಗಾರ ತಿನ್ನುವ ಸಿಂಬಳದಹುಳು ನಿಯಂತ್ರಣ

ಸಿಂಬಳದ ಹುಳುವಿನ ಉಪಟಳ ಇಬ್ಬನಿ ಬೀಳುವ ಚಳಿಗಾಲದಲ್ಲಿ ಹೆಚ್ಚು. ಈ ಹುಳುಗಳು ನೆಲದಲ್ಲಿ ಇರುತ್ತವೆ. ಅವು ಆಹಾರ ಹುಡುಕುತ್ತಾ ಮರವನ್ನು ಏರಿ ಅಲ್ಲಿ ಎಳೆ ಹೂ ಗೊಂಚಲನ್ನು ತಿನ್ನುತ್ತವೆ. ಬರೇ ಅಡಿಕೆ ಹೂ ಗೊಂಚಲು ಮಾತ್ರವಲ್ಲ ಇವು ಆಹಾರವಾಗಿ ಹಣ್ಣು ತರಕಾರಿಗಳನ್ನೂ ತಿನ್ನುತ್ತವೆ. ಇದನ್ನು ನಿಯಂತ್ರಿಸದೆ ಇದ್ದರೆ  ಒಂದೆರಡು ಸಿಂಗಾರ ಹಾಳಾಗುತ್ತದೆ. ಇಳುವರಿ ನಷ್ಟವಾಗುತ್ತದೆ. ಬಸವನ ಹುಳುಗಳು, ಸಿಂಬಳದ ಹುಳುಗಳು , ಮಳೆಗಾಲದಲ್ಲಿ ನೆಲದಲ್ಲಿ ಅಲ್ಲಲ್ಲಿ ಸಂಚರಿಸುತ್ತಾ ಇರುತ್ತವೆ. ಹಾವಸೆ ಇತ್ಯಾದಿಗಳು ಇದರ ಆಹಾರ. ಅದನ್ನು ತಿನ್ನುತ್ತಾ…

Read more
ಮಣ್ಣು ಪರೀಕ್ಷೆ ಬೇಕಾಗಿಲ್ಲದ ಮಣ್ಣು ಇದು

ಮಣ್ಣು ಪರೀಕ್ಷೆ -ನಿಮ್ಮ ಸ್ವ ಅನುಭವದಲ್ಲೇ ಮಾಡಬಹುದು.

ಮಣ್ಣು ಪರೀಕ್ಷೆ ಮಾಡುವುದರಿಂದ ಗೊಬ್ಬರವನ್ನು  ಎಷ್ಟು ಬಳಸಬೇಕು, ಯಾವುದು ಬೇಕು, ಯಾವುದು ಬೇಕಾಗಿಲ್ಲ ಎಂಬುದು ತಿಳಿಯುತ್ತದೆ. ಇದು ಸತ್ಯವಾದರೂ ಮಣ್ಣು ಎಂಬುದು ಕಾಲಕಾಲಕ್ಕೆ  ಸ್ಥಿತಿಗತಿ ಬದಲಾವಣೆಯಾಗುವ ಕಾರಣ ಅದನ್ನು ಹೇಗೆ ಪರೀಕ್ಷಿಸಿ ಅದನ್ನು ತಿಳಿಯುವುದು ಎಂಬುದೇ  ಪ್ರಶ್ನೆ. ಇದಕ್ಕೆಇರುವ ಉತ್ತರ ರೈತರೇ  ಪರೀಕ್ಷೆ ವಿಚಾರದಲ್ಲಿ ತಜ್ಞತೆ ಹೊಂದುವುದು. ಹಾಗೆಂದು ಮಣ್ಣು ಪರೀಕ್ಷೆ ಎಂಬುದು ಬೇಡ ಎಂದಲ್ಲ. ಅನುಕೂಲ ಇದ್ದವರು ಇದನ್ನು ಸಮೀಪದ ಕೃಷಿ ಇಲಾಖೆಯಲ್ಲಿ ಮಾಡಿಸಿಕೊಳ್ಳಬಹುದು. ಕೆಲವು ಖಾಸಗಿ ಮಣ್ಣು ಪರೀಕ್ಷಾ ಪ್ರಯೋಗಾಲಯದಲ್ಲಿ ಮಾಡಿಸಿಕೊಳ್ಳಬಹುದು. ಕೆಲವು ಭಾರತ…

Read more
soft wood grated plant

‘ಮೃದು ಕಾಂಡ ಕಸಿ’ ಎಲ್ಲರೂ ಮಾಡಬಹುದಾದ ಸರಳ ಕಸಿ.

ಈಗ ನಿಮ್ಮಲ್ಲಿ ಹಲಸಿನ ಕಾಯಿ ಇದೆ. ಮಾವಿನ ಹಣ್ಣಿನ ಗೊರಟು ಇದೆ. ಹಾಗೆಯೇ ತಿಂದ ಇತರ ಹಣ್ಣು ಹಂಪಲುಗಳೂ  ಇರಬಹುದು. ಅದನ್ನು ಎಲ್ಲೆಂದರಲ್ಲಿ ಬಿಸಾಡಬೇಡಿ. ಪ್ಲಾಸ್ಟಿಕ್ ತೊಟ್ಟೆಗೆ ಹಾಕಿ ಸಸಿ ಮಾಡಿಕೊಳ್ಳಿ. ಯಾವಾಗಲಾದರೂ ಒಂದು ಉತ್ತಮ ಹಲಸು, ಮಾವು ಹಣ್ಣು ಹಂಪಲು, ಕೊಡುವ ಮರ ಸಿಕ್ಕರೆ ಅಲ್ಲಿಂದ ಒಂದೆರಡು ಗೆಲ್ಲು ತಂದು ಸಸಿ ಮಾಡಿಕೊಳ್ಳಬಹುದು. ಕಸಿ ಕಲಿಯುವುದೇ ಹಾಗೆ. ಯಾರನ್ನೂ ಅವಲಂಭಿಸದೇ ಬರೇ ಓದಿ, ನೋಡಿ ಮಾಡಬಹುದಾದ ಕಸಿ ವಿಧಾನ ಎಂದರೆ ಮೃದು ಕಾಂಡ ಕಸಿ. ಇದರಲ್ಲಿ…

Read more
ಬಯೋ ಚಾರ್

ಮಣ್ಣಿನ ಸ್ನೇಹಿತ -ಬಯೋ ಚಾರ್.

ಮಣ್ಣಿಗೆ ಒಂದು ಜೀವ ಚೈತನ್ಯ ಎಂಬುದಿದೆ. ಮಣ್ಣಿನ ಜೀವಾಣುಗಳಿಗೆ ಬದುಕಲು ಸೂಕ್ತವಾದ ವಾತಾವರಣ ಬೇಕು. ಅದೇ ರೀತಿಯಾಗಿ ತೇವಾಂಶ ಭರಿತ ತಂಪಾದ ವಾತಾವರಣವೂ ಬೇಕು. ಇದನ್ನು ಒದಗಿಸಿಕೊಡುವಂತದ್ದೇ  ಬಯೋ ಚಾರ್. ಅರೆ ಸುಟ್ಟ ಕೃಷಿ ತ್ಯಾಜ್ಯಗಳು ಮಣ್ಣಿನಲ್ಲಿ ಸಾವಯವ ಇಂಗಾಲದ ಅಂಶವನ್ನು ಹೆಚ್ಚಿಸಿ, ಮಣ್ಣಿಗೆ ಜೀವ ಚೈತನ್ಯವನ್ನು ಕೊಡುತ್ತದೆ. ಮಣ್ಣಿಗೆ ಒಂದಷ್ಟು ತರಗೆಲೆ ಹಾಕಿ. ಅದು ಮಣ್ಣಿನಲ್ಲಿರುವ ಅಸಂಖ್ಯಾತ ಜೀವಾಣುಗಳ ಸಹಯೋಗದಿಂದ ಕರಗಿ ಮಣ್ಣಾಗುತ್ತದೆ. ಹೆಚ್ಚೆಂದರೆ  ವರ್ಷ ತನಕ ಇರಬಹುದು. ಅದೇ ರೀತಿಯಲ್ಲಿ ಒಂದು ಕಟ್ಟಿಗೆಯನ್ನು ಹಾಕಿದರೂ…

Read more
ಪರಭಕ್ಷಕ ಇರುವೆ

ಇರುವೆಗಳಿಂದ ಬೆಳೆಗೆ ತೊಂದರೆ ಇದೆಯೇ?

ಇರುವೆಗಳು ನಮ್ಮ ಹೊಲದಲ್ಲಿ ಅಲ್ಲಲ್ಲಿ ನೆಲದ ಮಣ್ಣನ್ನು ತಿರುವಿ ಹಾಕುವ  ಕೆಲಸವನ್ನು ಮಾಡುತ್ತವೆ. ಕೆಲವೊಮ್ಮೆ  ಹಣ್ಣು ಹಂಪಲುಗಳ ಮೇಲೆಯೂ ವಾಸಿಸುತ್ತವೆ. ಎಲೆಯಲ್ಲಿ ಗೂಡುಕಟ್ಟಿ ಕುಳಿತಿರುತ್ತವೆ. ಇವುಗಳಿಂದ ರೈತನಿಗೆ ಯಾವ ಹಾನಿಯೂ ಇಲ್ಲ. ಇವು ಒಂದು ದೃಷ್ಟಿಯಲ್ಲಿ  ಮಣ್ಣನ್ನು ಸುಸ್ಥಿತಿಯಲ್ಲಿಡುವ ಜೀವಿಗಳು. ಯಾರ ಮಣ್ಣಿನಲ್ಲಿ ಇರುವೆಗಳು ಚಟುವಟಿಕೆಯಲ್ಲಿ ಇರುತ್ತವೆಯೋ ಆ ಮಣ್ಣು ಫಲವತ್ತಾದ ಮಣ್ಣಾಗಿರುತ್ತದೆ. ಇರುವೆಗಳಲ್ಲಿ ಪ್ರಕಾರಗಳು: ನೆಲದಲ್ಲಿ ಹಲವಾರು ಬಗೆಯ ಇರುವೆಗಳು ವಾಸವಾಗಿರುತ್ತವೆ. ಸಾಮಾನ್ಯವಾಗಿ ನೆಲದಲ್ಲಿ  ಹರಿದಾಡುವ ಇರುವೆಗಳು ಬೇರೆ ಕಡೆ ವಾಸಿಸುವುದು ಅಪರೂಪ. ಕೆಲವು ಇರುವೆಗಳು…

Read more
ಸಾಮಾನ್ಯವಾಗಿ ಎಲ್ಲಾ ಕಡೆಯಲ್ಲೂ ಇರುವ ಬಂಬು ಕೀಟ

ಈ ವಾಸನೆ ಕೀಟಗಳ ಹಾವಳಿಯಿಂದ ಪಾರಾಗುವುದು ಹೇಗೆ?

ಬಹುತೇಕ ಎಲ್ಲಾ ಬೆಳೆಗಳಿಗೂ ರಸ ಹೀರಲು ಒಂದು ತಿಗಣೆ ಪ್ರಭೇದದ ಕೀಟ ಬರುತ್ತದೆ. ಇದು ತರಕಾರಿಗಳು, ಭತ್ತ, ಮೆಣಸು ಮುಂತಾದವುಗಳಲ್ಲಿ ಕುಳಿತು ರಸ ಹೀರಿ ಗಣನೀಯ   ಬೆಳೆ ಹಾನಿ ಮಾಡುತ್ತವೆ. ಸಾಮಾನ್ಯ ಆಡು ಭಾಷೆಯಲ್ಲಿ ಇದನ್ನು ಬಂಬು ಕೀಟ ಎನ್ನುತ್ತಾರೆ. ಇವು ತಿಗಣೆಗಳು. ವಾಸನೆಯಿಂದ ಕುಡಿವೆ. ಹಾಸಿಗೆಯ ಎಡೆಗಳಲ್ಲಿ ವಾಸ ಮಾಡುವ ತಿಗಣೆಯಂತೆ ಇದು. ಇದು ರಸ ಹೀರಿದ ತರಕಾರಿ, ಹಣ್ಣು ಹಂಪಲುಗಳು ವಾಸನೆಯಿಂದ ಕೂಡಿರುತ್ತದೆ. ಕೈಯಲ್ಲಿ ಮುಟ್ಟಿದರೆ ಸಾಕು ಅಸಹ್ಯ ವಾಸನೆ ಕೊಡಬಲ್ಲ ಸಾವಿರಾರು ಬಗೆಯ…

Read more
error: Content is protected !!