ಅಡಿಕೆ- ಈ ರೀತಿಯಾಗಿ ಯಾಕೆ ಉದುರುತ್ತಿದೆ?

ಈ ವರ್ಷ ಅಡಿಕೆ ಬೆಳೆಗಾರರು ಬಹಳ ಸಮಸ್ಯೆಯನ್ನು  ಅನುಭವಿಸಿದ್ದಾರೆ. ಮೊದಲು ಸಿಂಗಾರ ಒಣಗುವ ಸಮಸ್ಯೆ , ನಂತರ ಮಿಡಿ ಕಾಯಿ ಉದುರುವುದು, ಈಗ ಮತ್ತೆ ಬಲಿಯುತ್ತಿರುವ (ಹಸ) ಕಾಯಿಗಳ ಉದುರುವಿಕೆ. ಬರೇ ಉದುರುವುದು ಮಾತ್ರವಲ್ಲ. ಕಾಯಿಯಲ್ಲಿ  ಸುಟ್ಟಂತಹ ಕಪ್ಪು ಕಲೆಗಳಿವೆ. ಕೊಳೆತ ಇಲ್ಲ. ಇದು ಯಾವ ಸಮಸ್ಯೆ ಎಂಬುದು ನಿಘೂಢವಾಗಿದೆ. ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ಹೇಳುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ  ಅದೇನೂ ಮಹಾ ಮಳೆಯೋ, ಅಡಿಕೆಗೆ ಭಾರೀ ಕೊಳೆ ರೋಗ ಬಂತು. ಸುಮಾರು 25-30% ಬೆಳೆ ನಷ್ಟವಾಯಿತು. ಈ…

Read more
ಎಲೆ ಹಳದಿಯಾಗುವುದಕ್ಕೆ ಒಂದು ಕಾರಣ ಗಂಧಕದ ಕೊರತೆ.Yellowing of leaves is one of sulphur deficiency symptom

ಗಂಧಕ- ಬೆಳೆಗಳಿಗೆ ಅಗತ್ಯವಾಗಿ ಬೇಕಾಗುವ ಪೋಷಕಾಂಶ.

ಬಹಳ ರೈತರು ತಮ್ಮ ಅಡಿಕೆ ಮರದ ಗರಿಗಳು ಹಳದಿಯಾಗಿವೆ, ಮರದ ಸುಳಿಗಳು ಸಣ್ಣದಾಗುತ್ತಿವೆ. ತೆಂಗಿನ  ಮರದಲ್ಲಿ ಕಾಯಿ ಆಗುತ್ತಿಲ್ಲ. ರಸ ಹೀರುವ ಕೀಟಗಳ ಸಮಸ್ಯೆ ಎಂದೆಲ್ಲಾ  ಹೇಳುತ್ತಾರೆ. ಇದಕ್ಕೆ ಒಂದದು ಕಾರಣ ಗಂಧಕ ಎಂಬ ಅಗತ್ಯ ಪೋಷಕದ ಕೊರತೆ. ಬೆಳೆಗಳಲ್ಲಿ ಎಲೆಗಳು (Chlorosis)ಹಳದಿಯಾಗುವುದು, ಬೇರಿನ ಬೆಳವಣಿಗೆ ಕುಂಠಿತವಾಗುವುದು, ರೋಗ, ಕೀಟಗಳಿಗೆ ಬೇಗ ತುತ್ತಾಗುವುದು ಮುಂತಾದ ಕೆಲವು ಸಮಸ್ಯೆಗಳಿಗೆ  ಗಂಧಕದ ಕೊರತೆಯು ಒಂದು ಕಾರಣ. ಪ್ರತೀಯೊಂದು ಬೆಳೆಯೂ ಗಂಧಕವನ್ನು  ಅಪೇಕ್ಷಿಸುತ್ತದೆ. ರೈತರು ಸಲ್ಫೇಟ್ ರೂಪದ ಗೊಬ್ಬರವನ್ನು ಬೆಳೆಗಳಿಗೆ ಕೊಡುತ್ತಿದ್ದರೆ…

Read more
paddy leaf damage by caterpillar

ಭತ್ತದ ಗರಿ ತಿನ್ನುವ ಹುಳ- ನಿಯಂತ್ರಣ.

ಭತ್ತದ ಗದ್ದೆಗಳಲ್ಲಿ ಪೈರು ಬೆಳೆಯುತ್ತಿದೆ. ಈ ಸಮಯದಲ್ಲಿ ಗರಿಗಳು ಬಿಳಿಯಾಗಿ ಕಾಣುವ ಸಮಸ್ಯೆ   ಹಾಗೆಯೇ ಹರಿದು ಹೋದ ಗರಿಗಳು,ಎಲ್ಲಾ ಕಡೆ ಇರುತ್ತದೆ. ದೂರದಿಂದ ನೋಡುವಾಗ ಗರಿಯಲ್ಲಿ ಹರಿತ್ತು ಇಲ್ಲದೆ ಬಿಳಿಯಾಗಿ ಕಾಣಿಸುತ್ತದೆ. ಸಮೀಪ ಹೋಗಿ ನೊಡಿದಾಗ  ಗರಿಯ ಹಸುರು ಭಾಗವನ್ನು ತಿಂದು ಬರೇ ಪತ್ರ ನಾಳಗಳು ಮಾತ್ರ ಉಳಿದುಕೊಂಡಿರುತ್ತವೆ. ಇದಕ್ಕೆ  ಸ್ಕಿಪ್ಪರ್ ಮತ್ತು ಗ್ರೀನ್ ಹಾರ್ನ್ ಕ್ಯಾಟರ್ ಪಿಲ್ಲರ್  ಎಂಬ ಹುಳು ಕಾರಣವಾಗಿರುತ್ತದೆ.Skipper & Green horned catterpiller) ಇದರ ಹೆಸರು philopidus mathyyas & melanitis…

Read more

ತೆಂಗಿನ ಮರದಲ್ಲಿ ಹರಳು(ಮಿಡಿ ) ಉದುರುವುದು ಯಾಕೆ?

ಬಹಳ ಜನ ತಮ್ಮ ತೆಂಗಿನ ಮರದ ಹೂ ಗೊಂಚಲಿನಲ್ಲಿ ಮಿಡಿ ಕಾಯಿ (ಹರಳು) ಉಳಿಯುವುದೇ ಇಲ್ಲ ಎನ್ನುತ್ತಾರೆ. ಕೆಲವರು ಒಂದು ಎರಡು ಮಾತ್ರ ಉಳಿಯುತ್ತದೆ ಎನ್ನುತ್ತಾರೆ. ಕೆಲವರು ಎಲ್ಲಾ ಮಿಡಿಗಳೂ ಪೊಳ್ಳೇ ಆಗುತ್ತವೆ ಎನ್ನುತ್ತಾರೆ. ತೆಂಗಿನ ಮರದ ಹೂ ಗೊಂಚಲಿನಲ್ಲಿ ಮಿಡಿಗಳು ಉದುರಲು ಬೇರೆ ಬೇರೆ ಕಾರಣಗಳು ಇರುತ್ತವೆ. ಮರದ ಲಕ್ಷಣ , ನೀಡುವ ಪೋಷಕಾಂಶ, ಹವಾಮಾನ ಮತ್ತು ಹೊಲದ ಸ್ಥಿತಿಗಳನ್ನು ಅವಲಂಭಿಸಿ ಅದಕ್ಕೆ ಯವ ಕಾರಣ ಎಂಬುದನ್ನು ನಿರ್ಧರಿಸಬಹುದು. ತೆಂಗಿನ ಮರದ ಹೂವು ವ್ಯವಸ್ಥೆ: ತೆಂಗು…

Read more
Rain water to bore well

ಮಳೆ ನೀರು ಇಂಗಿಸುತ್ತೀರಾ – ಜಾಗ್ರತೆ ಇರಲಿ !

ಅಧಿಕ ಮಳೆಯಾಗುವ ಕರಾವಳಿ, ಮಲೆನಾಡಿನಲ್ಲಿ  ಜನ ಇತ್ತೀಚಿನ ವರ್ಷಗಳಲ್ಲಿ ಬೋರ್ ವೆಲ್ ರೀಚಾರ್ಜ್ , ವಿಫಲವಾದ ಬೋರ್ ವೆಲ್ ಗಳಿಗೆ ನೀರಿನ ಮರುಪೂರಣ , ಹಾಗೆಯೇ ಅಲ್ಲಲ್ಲಿ ಇಂಗು ಗುಂಡಿಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಪೋಲಾಗಿ ಸಾಗರ ಸೇರುತ್ತಿರುವ ನೀರಿನ ಮೇಲೆ ಇವರಿಗೆ ಕಾಳಜಿ, ಇದು ಮತ್ತೊಂದು ಕಡೆಯಲ್ಲಿ  ಅನಾಹುತದ ರೂಪದಲ್ಲಿ ಹೊರಹೋಗುತ್ತಿದೆಯೋ ತಿಳಿಯದಾಗಿದೆ. ಒಟ್ಟಿನಲ್ಲಿ ಇತ್ತೀಚೆಗೆ ಪ್ರಾರಂಭವಾದ ಭೂ ಕುಸಿತದಂತಹ ಘೋರ ಸಮಸ್ಯೆಗೆ  ಇಂತಹ ಯಾವುದೋ ಮಾನವ ಕೃತ ಕಾರ್ಯಗಳು ಕಾರಣ ಇರಲೇ ಬೇಕು. ಕರಾವಳಿಯ- ಮಲೆನಾಡಿನಲ್ಲಿ…

Read more

ಬೀಜ – ಸಸಿ ಖರೀದಿಸುವಾಗ ಈ ವಿಚಾರಗಳನ್ನು ತಪ್ಪದೆ ತಿಳಿದುಕೊಳ್ಳಿ.

ಹಿರಿಯರು ಹೇಳುವುದುಂಟು , ಪರವೂರಿನ ಸುಭಗನಿಗಿಂತ ( ನಯ ವಿನಯದ ವ್ಯಕ್ತಿ) ಊರಿನ ಕಳ್ಳನಾದರೂ ಆಗಬಬಹುದು ಎಂದು. ಇದು ನಿಜ. ರೈತರು ಖರೀದಿ ಮಾಡುವ ಸಸಿ, ಬೀಜ  ಇವುಗಳನ್ನು ಗೊತ್ತು ಪರಿಚಯ ಇರುವವರಿಂದಲೇ ಖರೀದಿ ಮಾಡಿ. ನಾಳೆ ಮೋಸವಾದರೆ ಅವರು ನಿಮ್ಮ ಕಣ್ಣು ಮುಂದೆಯೇ ಇರುತ್ತಾರೆ. ನೆಡು ಸಾಮಾಗ್ರಿಗಳಾದ ಬೀಜ, ಸಸಿಗಳ ವ್ಯವಹಾರ ಎಂದರೆ ಬಲವಾದ ನಂಬಿಕೆ. ಇದು ದೇವರಿಗೆ ನಮಸ್ಕರಿಸಿ ಆಶೀರ್ವಾದ ಬೇಡುವುದಕ್ಕಿಂತಲೂ ಮಿಕ್ಕಿದ ನಂಬಿಕೆಯ ವ್ಯವಹಾರ. ಒಬ್ಬ ರೈತ ಒಂದು ಬೀಜ ಅಥವಾ ಸಸಿಯನ್ನು…

Read more
root puller

ಕಳೆ ಗಿಡಗಳನ್ನು ಬೇರು ಸಮೇತ ತೆಗೆಯಬಹುದಾದ ಸಾಧನ.

    ಕೃಷಿ ಹೊಲದಲ್ಲಿ ಯಾವಾಗಲೂ ಕಳೆ ಸಸ್ಯಗಳು ಸಹಜವಾಗಿ ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಬೆಳೆದಂತೆ ಅದನ್ನು ಬೇರು ಸಹಿತ ತೆಗೆಯಲು ಸಾಧ್ಯವಾಗುವುದಿಲ್ಲ. ಅಂಥಹ ಕಳೆ ಸಸ್ಯಗಳನ್ನು ಬೇರು ಸಹಿತ ಯಾವ ಶ್ರಮದ ಅಗತ್ಯವೂ ಇಲ್ಲದೆ ತೆಗೆಯಬಹುದಾದ ಸಾಧನವನ್ನು  ಸಾಗರದ ಹೆಗಡೆ ಡೈನಾಮಿಕ್ಸ್ ಪ್ರೈ ಲಿಮಿಟೆಡ್ ಇವರು ಅಭಿವೃದ್ಧಿಪಡಿಸಿದ್ದಾರೆ. ಕೆಲವು ಸಾಧಾರಣ ಗಾತ್ರದ ಗಿಡಗಳನ್ನು ಕೀಳಲು ಹಾರೆ, ಗುದ್ದಲಿ ಮುಂತಾದ ಸಾಧನಗಳು ಬೇಕಾಗಿಲ್ಲ. ಇವುಗಳಿಂದ ಕೀಳಿಸುವ ಶ್ರಮಕ್ಕಿಂತ ತುಂಬಾ ಕಡಿಮೆ ಶ್ರಮದಲ್ಲಿ ಯುಕ್ತಿ ಆಧಾರಿತ ಸಾಧನದಲ್ಲಿ ಅದನ್ನ್ನು ತೆಗೆಯಬಹುದು. ಮುಖ್ಯವಾಗಿ…

Read more

ಸರಳ ವಿನ್ಯಾಸದ ಬಹು ಉಪಯೋಗಿ ಡ್ರೈಯರ್.

ಕೃಷಿ ಎಂದದೆ ಮಳೆಗಾಲದಲ್ಲಿ ಏನಾದರೂ ಒಣಗಿಸುವುದು ಇದ್ದೇ ಇರುತ್ತದೆ. ಅಂಗಡಿಯಿಂದ ತರುವ ಕೊತ್ತಂಬರಿ ಮೆಣಸು, ಮುಂತಾದವುಗಳನ್ನು ತೊಳೆದು ಒಣಗಿಸಿಯೇ ಬಳಸಬೇಕಾಗುತ್ತದೆ. ಮಳೆಗಾಲದಲ್ಲಿ ಇದು ತುಂಬಾ ಕಷ್ಟವಾಗುತ್ತದೆ. ಇಂಥ ಉದ್ದೇಶಕ್ಕೆ ಹಾಗೂ ಹಣ್ಣು ಹಂಪಲು, ಜಾಯೀಕಾಯಿ, ಕರಿಮೆಣಸು ಮುಂತಾದ ಆಹಾರ ವಸ್ತುಗಳು ಹಾಗೂ ಬೆಳೆಗಳಾದ ಅಲ್ಪ ಸ್ವಲ್ಪ ಕೊಬ್ಬರಿ, ಅಡಿಕೆ ಮುಂತಾದವುಗಳನ್ನು ಒಣಗಿಸಲು ಅವರರವರ ಅವಶ್ಯಕತೆಗೆ ಅನುಗುಣವಾಗಿ ಡ್ರೈಯರ್ ಗಳನ್ನು ಹೊಂದುವುದು ಉತ್ತಮ. ಇದರ ಒಂದು ವಿನ್ಯಾಸ ಇಲ್ಲಿ ಕೊಡಲಾಗಿದೆ. ಡ್ರೈಯರುಗಳಲ್ಲಿ ಅನುಕೂಲಕ್ಕೆ ತಕ್ಕುದಾಗಿ ಬೇರೆ ಬೇರೆ ಪ್ರಮಾಣ…

Read more

ಅಡಿಕೆ ಉತ್ಪಾದನೆ ಹೆಚ್ಚುತ್ತಿದೆ- ಮಿಶ್ರ ಬೆಳೆಗೆ ಗಮನ ಕೊಡಿ.

ನಾಗಾಲೋಟದಿಂದ ಹೆಚ್ಚುತ್ತಿರುವ ಅಡಿಕೆ ತೋಟಗಳು ಎಷ್ಟು ಸಮಯದ ತನಕ ರೈತರ ಬದುಕನ್ನು ಆಧರಿಸಬಲ್ಲವು ತಿಳಿಯದು. ಕೆಲವೇ ಸಮಯದಲ್ಲಿ ಬೆಲೆ ಕುಸಿತವಾದರೂ ಆಗಬಹುದು ಇಂತಹ ಸಂದರ್ಭದಲ್ಲಿ ನಮ್ಮ ಬದುಕಿನ ಬಧ್ರತೆಗೆ ಮಿಶ್ರ ಬೆಳೆ ಅಥವಾ ಬದಲಿ ಬೆಳೆ ಬೇಕೇ ಬೇಕು. ಅಡಿಕೆ ಯಿಂದ  ಬರುವಷ್ಟು ಬರಲಿ. ಕೈ ಬಿಟ್ಟಾಗ ಮಿಶ್ರ ಬೆಳೆ ನಮ್ಮನ್ನ ಆಧರಿಸುವಂತಿರಲಿ. ಒಂದು  ಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಅಡಿಕೆ ಬೆಳೆಯುವುದರಲ್ಲಿ ಪ್ರಥಮ ಸ್ಥಾನದಲ್ಲಿತ್ತು. ಕ್ರಮೇಣ  ಇಲ್ಲಿ  ಬೆಳೆ ಪ್ರದೇಶ ಕಡಿಮೆಯಾಗದಿದ್ದರೂ ಸಹ ಅವಕಾಶದ ಮಿತಿಯಿಂದಾಗಿ…

Read more

ಬೆಳೆಗಳಿಗೆ ಸುಣ್ಣ ಯಾಕೆ ಕೊಡಬೇಕು ಗೊತ್ತೇ?

ಬೆಳೆ ಬೆಳೆಸುವ ಮಣ್ಣಿಗೆ ಸುಣ್ಣ ಹಾಕುವುದು ಹಸಿರು ಕ್ರಾಂತಿಯ ತರುವಾಯ ಬಂದ ಪದ್ಧತಿ. ಮಣ್ಣಿಗೆ ಸುಣ್ಣ ಹಾಕಿದಾಗ ಮಣ್ಣಿನ ಸ್ಥಿತಿಗತಿ ಬದಲಾವಣೆಯಾಗುತ್ತದೆ. ಈ ಬದಲಾವಣೆ ಅಲ್ಲಿ ಬೆಳೆಯುವ ಸಸ್ಯಗಳಿಗೆ ಮಣ್ಣಿನ ಮೂಲಕ  ಪೋಷಕಾಂಶಗಳನ್ನು ಸಮರ್ಪಕವಾಗಿ ಬಳಕೆ ಮಾಡುವುದಕ್ಕೆ ಸಹಕರಿಸುತ್ತದೆ. ಸಸ್ಯಗಳಿಗೆ ಬರೇ ಸಾರಜಕನ, ರಂಜಕ ಮತ್ತು ಪೊಟ್ಯಾಶ್ ಎಂಬ ಮೂರು ಮುಖ್ಯ ಪೋಷಕಗಳು ಬೇಕು. ಅದರ ಜೊತೆಗೆ ದ್ವಿತೀಯ ಮಧ್ಯಮ ಪೋಷಕಗಳಾದ ಕ್ಯಾಲ್ಸಿಯಂ ಗಂಧಕ, ಮತ್ತು ಮೆಗ್ನೀಶಿಯಂ ಸಹ ಅಗತ್ಯವಾಗಿ ಬೇಕಾಗುತ್ತದೆ. ಇವು ಮುಖ್ಯ ಪೋಷಕಗಳಷ್ಟು ಪ್ರಮಾಣದಲ್ಲಿ…

Read more
error: Content is protected !!