coconut palm

ತೆಂಗಿನ ಸಸಿ ಬೆಳವಣಿಗೆಗೆ ಇದು ದೊಡ್ದ ತಡೆ.

 ಮುಸ್ಸಂಜೆ ಮತ್ತು ಕತ್ತಲೆಗೆ ದೀಪದ ಬೆಳಕಿಗೆ ಬಂದು ಬಿಳುವ ದುಂಬಿಗಳಲ್ಲಿ ಕುರುವಾಯಿ ಕೀಟ ಒಂದು.ಈ ದುಂಬಿ ತೆಂಗಿನ ಬೆಳೆಗಾರರ ಅತೀ ದೊಡ್ದ ಶತ್ರು.   ನಮ್ಮ ಹಿರಿಯರು ಹೇಳುವುದಿದೆ, ಒಂದು ಕುರುವಾಯಿ ಕೊಂದರೆ 1 ದೇವಾಸ್ಥಾನ ಕಟ್ಟಿದ ಪುಣ್ಯವಿದೆ ಎಂದು. ಯಾಕೆಂದರೆ ಕುರುವಾಯಿ ಅಷ್ಟು ಹಾನಿ ಮಾಡುತ್ತದೆ.. ಆದ ಕಾರಣ  ವೃಕ್ಷಕ್ಕೆ ತೊಂದರೆ ಕೊಡುವ ಕೀಟ ಎಂಬ ಭಾವನೆಯಿಂದಲಾದರೂ ಅದು ನಶಿಸಲಿ ಎಂದು ಹಾಗೆ ಹೇಳಿರಬೇಕು. ಬಾಧೆಯ ಲಕ್ಷಣ: ತೆಂಗಿನ ಸಸಿಯ/ಮರದ ಮೂಡುತ್ತಿರುವ ಇನ್ನೂ ಅರಳಿರದ ಸುಳಿಯ…

Read more

ಪೊಟ್ಯಾಶಿಯಂ ಫೋಸ್ಫೋನೇಟ್- ಶಿಲೀಂದ್ರ ರೋಗಕ್ಕೆ ರಾಮಬಾಣ.

ಪೊಟ್ಯಾಶಿಯಂ ಫೋಸ್ಫೋನೇಟ್ ಅಥವಾ ಪೊಟಾಶಿಯಂ ಸಾಲ್ಟ್ ಆಫ್ ಫೋಸ್ಫೊರಸ್ ಅಸಿಡ್, ಅಥವಾ ಫೊಟ್ಯಾಶಿಯಂ ಸಾಲ್ಟ್ ಆಫ್ ಫೊಸ್ಫೋನಿಕ್ ಅಸಿಡ್   ಇದು ನೀರಿನಲ್ಲಿ ಕರಗುವ ಒಂದು ಅಂತರ್ ವ್ಯಾಪೀ ಶಿಲೀಂದ್ರ ನಾಶಕ.  ಇದು ನೋಡಲು ಬಿಳಿ ಹರಳು ರೂಪದಲ್ಲಿರುತ್ತದೆ.  ಇದರ ಪಿಎಚ್ ಮೌಲ್ಯ 5.29  ರಷ್ಟು ಇರುತ್ತದೆ.    ಇದು ವಿಶ್ವದಾದ್ಯಂತ ಬಳಕೆಯಲ್ಲಿರುವ ಒಂದು ಪರಿಣಾಮಕಾರೀ ಅಂತರ್ ವ್ಯಾಪೀ ಶಿಲೀಂದ್ರ ನಾಶಕ. ಅಡಿಕೆ, ದ್ರಾಕ್ಷಿ, ಕಾಳುಮೆಣಸು ಬೆಳೆಗಳ ಶಿಲೀಂದ್ರ ರೋಗಕ್ಕೆ ಇದು ಪರಿಣಾಮಕಾರೀ ಎಂದು ನಮ್ಮಲ್ಲೂ ಸಾಬೀತಾಗಿದೆ. ಇದರ…

Read more

ಬಾಳೆ ಜೊತೆ ಮಿಶ್ರ ಬೆಳೆ – ಎಕ್ರೆಗೆ 5 ಲಕ್ಷದಷ್ಟು ಆದಾಯ.

ಬಾಳೆ 9-11 ತಿಂಗಳ ಬೆಳೆ. ಈ ಅವಧಿಯಲ್ಲಿ ಕೆಲವು ಲೆಕ್ಕಾಚಾರ ಹಾಕಿಕೊಂಡು ಮಿಶ್ರ  ಬೆಳೆಯನ್ನು ಬೆಳೆಸಲಿಕ್ಕಾಗುತ್ತದೆ. ಕೆಲವು ಬೆಳೆಗಳ ಜೊತೆಗೆ ಬಾಳೆ ಮಿಶ್ರ ಬೆಳೆಯೂ ಆಗುತ್ತದೆ. ಇದನ್ನು ಹಲವು ರೈತರು ಮಾಡುತ್ತಾರೆ.ಬಾಳೆ ನಾಟಿ ಮಾಡಿ 3-4 ತಿಂಗಳ ತನಕ ಮಧ್ಯಂತರದಲ್ಲಿ ಸಾಕಷ್ಟು ಬೆಳೆಕು ಇರುತ್ತದೆ. ಈ ಸಮಯದಲ್ಲಿ ಅಲ್ಪಾವಧಿ ಬೆಳೆಗಳನ್ನು ಎಡೆಯಲ್ಲಿ ಬೆಳೆಸಬಹುದು. ಕೆಲವು ಬೆಳೆಗಳನ್ನು ಮುಂಚೆಯೇ ಬೆಳೆಸಿ ಅದು ಕಠಾವಿಗೆ 3-4 ತಿಂಗಳು ಇರುವಾಗ ಬಾಳೆ ಹಾಕಿದರೆ ಅದನ್ನು ಕಠಾವು ಅಥವಾ ಒಕ್ಕಣೆ  ಮಾಡುವಾಗ ಅದರ…

Read more
ಅಡಿಕೆ ಯಾಕೆ ಸುರಿ ಬೀಳುತ್ತದೆ

ಅಡಿಕೆ ಯಾಕೆ ಸುರಿ ಬೀಳುತ್ತದೆ? – ಪರಿಹಾರ.

ದಾಸ್ತಾನು ಇಟ್ಟ ಧವಸ ಧಾನ್ಯ ಏನೇ ಇದ್ದರೂ ಸಮರ್ಪಕವಾಗಿ ಇಲ್ಲದಿದರೆ ಅದಕ್ಕೆ ದಾಸ್ತಾನು ಕೀಟ (Storage pest) ಬಂದು ಸುರಿ ಬೀಳುವುದು  ಸಾಮಾನ್ಯ. ಈ ಕೀಟಗಳಲ್ಲಿ ಹಲವು ವಿಧಗಳು ಇದ್ದು, ಅಕ್ಕಿಗೆ ಬರುವ ಗುಗ್ಗುರು,ಅಡಿಕೆಗೆ ಬರುವ ಡಂಕಿ ಬೇರೆ ಹೀಗೆ ಬೇರೆ  ಬೇರೆ ಇದೆ. ಸಾಮಾನ್ಯವಾಗಿ ಸುಲಿದು ದಾಸ್ತಾನು ಇಡುವ ಅಡಿಕೆಗೆ ಈ ಸಮಸ್ಯೆ ಹೆಚ್ಚು. ಹಾಗೆಂದು ಸುಲಿಯದೇ ಇಡುವಲ್ಲಿಯೂ ಇಲ್ಲದಿಲ್ಲ. ಇದು ಮಹಾ ಮಾರಿ ಶತೃ ಎಂತಲೇ ಹೇಳಬಹುದು. ಒಮ್ಮೆ ಈ ಕೀಟ ಬಂದರೆ ಅದನ್ನು ಓಡಿಸುವುದೂ…

Read more

ಹೀಗೆ ಮಾಡಿದರೆ ನೀರು ತುಂಬಾ ಕಡಿಮೆ ಸಾಕು.

ಕೆಲವು ಮಣ್ಣಿನಲ್ಲಿ  ಮಳೆ ಬಂದರೆ  ನೀರು ವಾರಗಟ್ಟಲೆ  ಆರುವುದೇ ಇಲ್ಲ. ಬಿಸಿಲು ಬಂದರೆ  ನೆಲ ಟಾರು ರಸ್ತೆ  ತರಹ. ಇಂತಲ್ಲಿ   ಇಬ್ಬನಿ ರೂಪದಲ್ಲಿ ಬಿದ್ದ ನೀರೂ ಸಹ ಪೋಲಾಗದೆ ಬೆಳೆಗೆ ದೊರೆಯುವಂತಾಗಲು ರೈತರು ಕಂಡುಕೊಂಡ ವಿಧಾನ ಉಸುಕು ಹಾಕುವಿಕೆ.   ಕಪ್ಪು ಹತ್ತಿ ಮಣ್ಣು  ಒಂದು ಮಳೆ ಬಂದರೆ ಅಂಟು ಅಂಟಾಗುತ್ತದೆ. ಇದಕ್ಕೆ ಮಳೆ ಹನಿ ಬಿದ್ದಾಗ ಮಣ್ಣು ಕರಗಿ ಹೋಗುತ್ತದೆ. ನೀರು ಕಡಿಮೆಯಾದಾಗ ಮಣ್ಣು ಒಡೆದು ಹೂಗುತ್ತದೆ. ರಾಜ್ಯದಲ್ಲಿ  ಬಿಜಾಪುರ, ಗದಗ, ನರಗುಂದ ಧಾರವಾಡದ ಕೆಲ…

Read more

ಬಾಳೆಯ ಕಾಂಡದ ಈ ರೋಗಕ್ಕೆ ಪರಿಹಾರ ಇದು.

ಬಾಳೆಯಲ್ಲಿ ಕಾಂಡ ಎಂಬುದು ಎಲೆಯ ಕವಚಗಳು ಪರಸ್ಪರ ಒತ್ತೊತ್ತಾಗಿ ಸೇರಿದಾಗ ಉಂಟಾಗುತ್ತದೆ. ಬಾಳೆಗೆ ಕಾಂಡ ಎಂಬುದು ಇಲ್ಲ. ಇದನ್ನು ಹುಸಿ ಕಾಂಡ ಎನ್ನುತ್ತಾರೆ. ಹುಸಿ ಕಾಂಡ ಉಂಟಾಗಬೇಕಾದರೆ  ಎಲೆಯ ತೊಟ್ಟಿನ ಭಾಗ (petiole)ಗಳು ಪರಸ್ಪರ ಅಂಟಿಕೊಂಡು ಬೆಳೆಯಬೇಕು. ಅದು ಬಿಚ್ಚಿಕೊಂಡಿದ್ದರೆ ಅದು ಒಂದು ರೋಗ. ಇದು ಒಂದು ನಂಜಾಣು ರೋಗದ ಲಕ್ಷಣ.  ಬಾಳೆ ಸಸ್ಯ 2-3 ತಿಂಗಳ ಬೆಳೆವಣಿಗೆಯಲ್ಲಿ ಇದು ಜಾಸ್ತಿ.   ಪ್ರಾರಂಭದಲ್ಲಿ ಎಲೆದಂಟು ಕಾಂಡದಿಂದ ಬೇರ್ಪಟ್ಟು ಕಾಂಡ ಸಪುರವಾಗುತ್ತಾ ಹೋಗುತ್ತದೆ. ಇಂತಹ ಬಾಳೆ ಕೆಲವೊಮ್ಮೆ…

Read more
rose apple red

ತಿನ್ನಲು ಸಿಗದ ಈ ಹಣ್ಣುಗಳು- ಏನು ಪರಿಹಾರ?

ಒಂದು ವರ್ಷ  ಈ ಹಣ್ಣುಗಳು ತಿನ್ನಲು ಸಿಕ್ಕರೆ ಮತ್ತೆ ಇಲ್ಲವೇ ಇಲ್ಲ. ರಾಶಿ ರಾಶಿ ಹಣ್ಣುಗಳಾಗುತ್ತವೆ. ಆದರೆ ಎಲ್ಲವೂ ಬುಡದಲ್ಲಿ ಬಿದ್ದು, ಹಾಳೇ ಆಗುವುದು. ಇದು ನಮ್ಮ ಬಹುತೇಕ ರೈತರಲ್ಲಿ ಇರುವ ರೋಸ್ ಆಪಲ್ ಹಾಗೂ ವುಡ್ ಆಪಲ್ ಎಂಬ ಬಹು ಬಗೆಯ ಬೇಸಿಗೆ ಹಣ್ಣುಹಂಪಲುಗಳ  ಗತಿ. ಇದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ವಿಧಾನ ಇಲ್ಲಿದೆ. ಇದು ಹಣ್ಣು ನೊಣದಿಂದ ಆಗುವ ತೊಂದರೆ , ಇದನ್ನು ಪ್ರಾರಂಭಿಕ ಹಂತದಲ್ಲಿ ಬಾರದಂತೆ ಮಾಡಿದರೆ ಸ್ವಲ್ಪ ಮಟ್ಟಿಗೆಯಾದರೂ ಉತ್ತಮ ಹಣ್ಣನ್ನು ಉಳಿಸಬಹುದು….

Read more

ರಜೆಯ ಈ ದಿನಗಳಲ್ಲಿ ಕಲಿಯಿರಿ – ಸರಳ ಕಸಿ ವಿಧಾನ.

ಈಗ   ಕಲಿಯಲು ಬೇಕಾದಷ್ಟು  ಬಿಡುವು ಇದೆ. ಇದು ಮಾಡಿ ಕಲಿಯುವ ಸಮಯ. ಯಾರೋ ಕಸಿ ಮಾಡಿದ ಗಿಡವನ್ನು ತಂದು ನೆಡುವ ಬದಲಿಗೆ ನಿಮ್ಮಲ್ಲೇ ಇರುವ ಅನುತ್ಪಾದಕ ಮರಕ್ಕೆ ಕಸಿ ಮಾಡಿ ಅದರಲ್ಲೇ ಫಲ ಪಡೆಯಬಹುದು. ಬಹಳ ಜನ  ನಮ್ಮ ಮನೆಯಲ್ಲಿ ಒಂದು ಮಾವಿನ ಮರ ಇದೆ. ಮಾವೇ ಆಗುತ್ತಿಲ್ಲ ಎನ್ನುತ್ತಾರೆ. ಹಾಗೆಯೇ ಲಿಂಬೆ, ಮೂಸಂಬಿ, ನೇರಳೆ, ಗೇರು ಯಾವುದೇ ಅನುತ್ಪಾದಕ  ಮರಗಳಿರುವುದೂ  ಇದೆ. ಇಲ್ಲಿ ನಾವು ಒಂದು ಮರದಲ್ಲಿ ಹಲವು ಬಗೆಯ ಮಾವು ಪಡೆಯುವ ವಿಧಾನವನ್ನು ತಿಳಿಸುತ್ತಿದ್ದೇವೆ….

Read more

ಬಾಳೆಗೊನೆ ಯಾಕೆ ಹೀಗಾಗುತ್ತದೆ ಗೊತ್ತೇ?.

ಬಾಳೆಗೆ ಎಲ್ಲಾ ಗೊಬ್ಬರ, ನಿರ್ವಹಣೆ ಮಾಡಿದಾಗಲೂ ನಿಸ್ತೇಜವಾಗಿ ಎಲೆ ಹಳದಿಯಾಗುತ್ತಾ ಸಣಕಲು ಕಾಯಿಯ ಗೂನೆ ಬಿಡುವುದು, ಕಾಂಡದ ಭಾಗದಿಂದ ಅಥವಾ ಗೊನೆ ಭಾಗದಿಂದ ಮುರಿದು ಬೀಳುವುದು, ನಾವೆಲ್ಲಾ ಕಂಡ ಸಮಸ್ಯೆ. ಇದು ಗೊಬ್ಬರ ಅಥವಾ ಇನ್ಯಾವುದೇ ನಿರ್ವಹಣೆಯ ಕೊರತೆಯಿಂದ ಆಗುವುದಲ್ಲ. ಕೀಟ ಸಮಸ್ಯೆಯಿಂದ. ಯಾಕೆ ಹೀಗಾಗುತ್ತದೆ? ಒಂದು ಜಾತಿಯ ದುಂಬಿ ಬಾಳೆಯ ಗಡ್ಡೆಯಲ್ಲಿ ಸೇರಿ ಅಲ್ಲಿ ಮೊಟ್ಟೆ ಇಟ್ಟು ಹುಳವಾಗುತ್ತದೆ. ಈ ಹುಳವು ಮಧ್ಯದ ದಂಟಿನ ಮೂಲಕ ಮೇಲೇರಿ ದಂಟನ್ನು ಭಕ್ಷಿಸಿ ಬೆಳೆಯುತ್ತದೆ. ಮತ್ತೆ ಪುನಹ ಲಾರ್ವಾ…

Read more

ಬೇಗ ಮಳೆ ಬರುವ ಸೂಚನೆ ಇದೆ- ಎಚ್ಚರ.

ಕಳೆದ ಕೆಲವು ದಿನಗಳಿಂದ ಸುಡುಬಿಸಿಲಿನ ಪ್ರಭಾವ ಹೆಚ್ಚಾಗಿದ್ದು, ಇದು ಮಳೆ ಬರುವ ಮುನ್ಸೂಚನೆಯಾಗಿದೆ. ವಾತಾವರಣದಲ್ಲಿ ಬಿಸಿ ಹೆಚ್ಚಾದಂತೆ ಮಳೆ ಬರುವ ಸಾಧ್ಯತೆ ಹೆಚ್ಚು. ನಮ್ಮ  ಹಿರಿಯರು  ಕೆಲವು  ಹವಾಮಾನ ಮುನ್ಸೂಚನೆಗಳನ್ನು ಹೇಳಿದ್ದಾರೆ. ಗಣಪತಿ ಜಾತ್ರೆಯ ಓಕುಳಿಯಂದು ಮಳೆ ಬರುತ್ತದೆ. ಧರ್ಮಸ್ಥಳ ದೀಪೋತ್ಸವದಂದು ಮಳೆ ಬರುತ್ತದೆ. ಹಾಗೆಯೇ ಇನ್ನೂ ಕೆಲವು ವಿಷೇಶ ದಿನಗಳ ಸಂಧರ್ಭದಲ್ಲಿ ಮಳೆ ಬರುವ ಸೂಚನೆಯನ್ನು ಕೊಟ್ಟಿದ್ದಾರೆ. ಅದು ಸುಮ್ಮನೆ ಅಲ್ಲ. ಸಾಮಾನ್ಯವಾಗಿ ಅಥವಾ ಹೆಚ್ಚಿನ ಸಂದರ್ಭಗಳಲ್ಲಿ  ಇದು ನಿಜವಾಗುತ್ತದೆ. ಮಳೆಯ ಈ ಮುನ್ಸೂಚನೆಯು ಹವಾಮಾನಕ್ಕೂ…

Read more
error: Content is protected !!