ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿನ ಮರ, ಗಿಡಗಳಿಗೆ ಇತ್ತೀಚೆಗೆ ಕೆಂಪು ಮೂತಿ ಕೀಟದ ಹಾವಳಿ ಭಾರೀ ಹೆಚ್ಚಾಗುತ್ತಿದೆ. ರೈತರು ತೆಂಗು ಬೆಳೆಯುವುದೇ ಅಸಾಧ್ಯ ಎನ್ನಲಾರಂಭಿಸಿದ್ದಾರೆ. ಹೀಗೇ ಮುಂದುವರಿದರೆ ರೈತರಿಗೆ ಸಸಿ ನೆಡುವುದೇ ಕೆಲಸವಾದರೂ ಅಚ್ಚರಿ ಇಲ್ಲ. ಇದನ್ನು ಸರಿಯಾಗಿ ಹದ್ದುಬಸ್ತಿಗೆ ತಾರದೆ ಇದ್ದರೆ ಮುಂದೆ ರೈತರು ತೆಂಗು ಬೆಳೆಸುವುದನ್ನೇ ಬಿಡುವ ಸ್ಥಿತಿ ಬಂದರೂ ಅಚ್ಚರಿ ಇಲ್ಲ. ಯಾವ ಕಾರಣಕ್ಕೆ ಈ ದುಂಬಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣ ಹೇಗೆ? ತೆಂಗಿನ ಮರಗಳಿಗೆ ಬರುವ ಎಲ್ಲಾ ರೋಗಗಳಿಂದಲೂ, ಕೀಟಗಳಿಂದಲೂ  ಪ್ರಭಲವಾದದ್ದು  ಕೆಂಪು ಮೂತಿ ದುಂಬಿ…

Read more
ಎಲೆಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ. ಯಾಕೆ ಗೊತ್ತೇ?

ಸಿಂಪರಣೆಯಿಂದ ಎಲೆ ಚುಕ್ಕೆರೋಗ ವಾಸಿ ಅಸಾಧ್ಯ. ಯಾಕೆ?

ಅಡಿಕೆಗೆ ಬಾದಿತವಾದ ಎಲೆ ಚುಕ್ಕೆರೋಗ ವಾಸಿ ಮಾಡುವುದಕ್ಕೆ ತಜ್ಞರು ಬಹಳಷ್ಟು ಸಲಹೆಗಳನ್ನು ನೀಡುತ್ತಿದ್ದಾರೆ.  ಅವರ ಸಲಹೆಯನ್ನು ಪಾಲಿಸಿದವರಲ್ಲಿ ಈ ರೋಗ ಒಮ್ಮೆ ಹತೋಟಿಯಾದಂತೆ ಕಂಡರೂ ಮತ್ತೆ ನಾನಿದ್ದೇನೆ ಎಂದು ಮರುಕಳಿಸುತ್ತಿದೆ. ದುಬಾರಿ ಬೆಲೆಯ ಶಿಲೀಂದ್ರ ನಾಶಕ- ದುಬಾರಿ ಕೂಲಿ ಸಂಭಾವನೆಯೊಂದಿಗೆ ಎಲೆಚುಕ್ಕೆ ರೋಗ ಓಡಿಸುವ ರೈತರ ಶ್ರಮ ಹೇಳತೀರದು. ಎಲೆ ಚುಕ್ಕೆ ರೋಗವನ್ನು ಅಲ್ಪ ಕಾಲದ ತನಕ ಹತೋಟಿ ಮಾಡಬಹುದೇ ಹೊರತು ಇಲ್ಲದಂತೆ ಮಾಡಲು  ಪ್ರಕೃತಿಯೇ ಸಹಕರಿಸಬೇಕು. ಎಲೆ ಚುಕ್ಕೆರೋಗ ಅಡಿಕೆ ಬೆಳೆಗಾರರ ಪಾಲಿಗೆ ಇಷ್ಟು ದೊಡ್ಡ …

Read more
ಕೀಟನಾಶಕ- ರೋಗನಾಶಕವನ್ನು ಪ್ರಮಾಣಕ್ಕಿಂತ ಹೆಚ್ಚು ಬಳಸಿದರೆ ಏನಾಗುತ್ತದೆ

ಕೀಟನಾಶಕ- ರೋಗನಾಶಕವನ್ನು ಪ್ರಮಾಣಕ್ಕಿಂತ ಹೆಚ್ಚು ಬಳಸಿದರೆ ಏನಾಗುತ್ತದೆ?   

ಕೃಷಿಕರಾದವರೆಲ್ಲರೂ ಒಂದಿಲ್ಲೊಂದು ಉದ್ದೇಶಕ್ಕೆ ಕೀಟನಾಶಕ- ರೋಗನಾಶಕ ಸಿಂಪಡಿಸಿರಬಹುದು. ಇವುಗಳನ್ನು ಸಿಂಪಡಿಸುವಾಗ ನಾವು ಅನುಸರಿಸಿದ ಕ್ರಮ ಎಷ್ಟು ಸರಿ- ಎಷ್ಟು ತಪ್ಪು  ಎಂಬುದನ್ನು ಒಮ್ಮೆ ಯೋಚನೆ ಮಾಡಲೇಬೇಕು.  ಪ್ರತೀಯೊಂದು ಸಸ್ಯ ಸಂರಕ್ಷಣಾ ಔಷಧಿಗಳ ಬಳಕೆಗೆ ನಿರ್ದಿಷ್ಟ ಪ್ರಮಾಣ ಎಂಬುದಿದೆ. ಅದಕ್ಕಿಂತ ಹೆಚ್ಚು ಬಳಕೆ ಮಾಡಿದಾಗ ಆಗುವ ಅನಾಹುತಗಳೇನು? ಈಗಾಗಲೇ ಆದದ್ದು ಏನು ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ವೈಧ್ಯರು ರೋಗಿಗೆ ಒಂದು ಔಷಧಿ ಕೊಡುತ್ತಾರೆ, ಯಾವ ವೈಧ್ಯರೂ ಕೊಡುವಾಗ ಇದನ್ನು ಇಂತಹ (ಬೆಳಿಗ್ಗೆ+ ಮಧ್ಯಾನ್ಹ+ ರಾತ್ರೆ) ಹೊತ್ತಿನಲ್ಲಿ, ಇಂತಹ ಸಮಯದಲ್ಲಿ…

Read more
ನ್ಯಾನೋ ಯೂರಿಯಾ ಮತ್ತು DAP ಬಳಕೆ ಕ್ರಮ ಮತ್ತು ಪ್ರತಿಫಲ.

ನ್ಯಾನೋ ಯೂರಿಯಾ ಮತ್ತು DAP ಬಳಕೆ ಕ್ರಮ ಮತ್ತು ಪ್ರತಿಫಲ.

ಇತ್ತೀಚೆಗೆ ಮಾರುಕಟ್ಟೆಗೆ ಬಂದ ನ್ಯಾನೋ ಯೂರಿಯಾ ಮತ್ತು DAP ದ್ರವ ಗೊಬ್ಬರಗಳನ್ನು ಹೇಗೆ ಬಳಕೆ ಮಾಡುವುದು, ಇದರಿಂದ ಏನು ಪ್ರತಿಫಲ ಇದೆ ಎಂಬ ಬಗ್ಗೆ ಹೆಚ್ಚಿನವರಿಗೆ ಗೊತ್ತಿಲ್ಲ. ಈ ಗೊಬ್ಬರಗಳು ಎಂದರೆ ನಮ್ಮ ಸಾಂಪ್ರದಾಯಿಕ ಗೊಬ್ಬರಗಳಿಗಿಂತ ಗಾತ್ರದಲ್ಲಿ (size) ಮತ್ತು ಆಕಾರದಲ್ಲಿ (Shape)  ಸಂಸ್ಲೇಶಣೆ (synthesize) ನಡೆಸಿ ತಯಾರಿಸಲಾದ ಗೊಬ್ಬರಗಳು. ಇದರ ಸಾರಾಂಶಗಳು ನೇರವಾಗಿ (Shortcut way ) ತಲುಪಬೇಕಾದ ಸಸ್ಯಾಂಗಕ್ಕೆ ಲಭ್ಯವಾಗಿ  ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಇದನ್ನು SMART FERTILIZER ಎಂಬುದಾಗಿಯೂ ಕರೆಯಲಾಗುತ್ತದೆ. ಇದನ್ನು ವಿಶೇಷ…

Read more
ಅಡಿಕೆ ಕಾಯಿಗಳು ಯಾಕೆ ಹೀಗಾಗುತ್ತವೆ? ಏನು ಪರಿಹಾರ?

ಅಡಿಕೆ ಕಾಯಿಗಳು ಯಾಕೆ ಹೀಗಾಗುತ್ತವೆ? ಏನು ಪರಿಹಾರ?

ಬಹಳಷ್ಟು ಅಡಿಕೆ ಬೆಳೆಗಾರರ ತೋಟದಲ್ಲಿ ಈಗ ಇಂತಹ ಕಾಯಿಗಳು ಉದುರಿ ಬೀಳುತ್ತಿವೆ. ಸರಿಯಾಗಿ ಬಲಿತು ಹಣ್ಣಾಗಿರದ, ಮೇಲ್ಮೈಯಲ್ಲಿ ಸುಟ್ಟಂತಹ ಕಲೆ ಇರುವ ಈ ಅಡಿಕೆಗೆ  ಗುಣಮಟ್ಟ ಇರುವುದಿಲ್ಲ. ಸಿಪ್ಪೆ ಅಂಟಿರುವ ಉಳ್ಳಿ ಅಡಿಕೆ ಆಗಬಹುದು.  ಒಡೆದ ಪಟೋರಾವೂ ಆಗಬಹುದು. ಇಲ್ಲವೇ ಕೆಂಪು ಬಣ್ಣದ ಕರಿಗೋಟು ಆಗಬಹುದು. ಹೀಗಾಗುವುದಕ್ಕೆ ಕಾರಣ ಏನು ಎಂಬುದು ಬಹಳಷ್ಟು ಕೃಷಿಕರಿಗೆ ಗೊತ್ತಿಲ್ಲ. ಇದು ಹೊಸ ಸಮಸ್ಯೆ ಅಲ್ಲವಾದರೂ ಈಗೀಗ ಇದರ ತೊಂದರೆ ಹೆಚ್ಚಾಗುತ್ತಿದೆ. ಅಡಿಕೆ ಬೆಳೆಗೆ ಈಗೀಗ ಒಂದಿಲ್ಲೊಂದು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.ಇದಕ್ಕೆ ಕಾರಣ…

Read more
ಜೀವ ವೈವಿಧ್ಯಗಳ ನಾಶ – ಭಾರತದ ಕೃಷಿಗೆ ಅತೀ ದೊಡ್ಡ ಆತಂಕ

ಜೀವ ವೈವಿಧ್ಯಗಳ ನಾಶ – ಭಾರತದ ಕೃಷಿಗೆ ಅತೀ ದೊಡ್ಡ ಆತಂಕ.

ನೈಸರ್ಗಿಕ ವಿಕೋಪಗಳು, ಮಾನವನ ಕೃತ್ಯಗಳಿಂದ  ಸ್ಥಳೀಯ ಜೀವ ವೈವಿಧ್ಯಗಳ ನಾಶ ಅವ್ಯಾಹತವಾಗುತ್ತಿದೆ. ಇದು ನಮ್ಮ ದೇಶದ ಕೃಷಿ, ಮಳೆ, ಇತ್ಯಾದಿಗಳಿಗೆ ಭಾರೀ ತೊಂದರೆಯನ್ನು ಉಂಟುಮಾಡಲಿದೆ. ಸೂಕ್ಷ್ಮವಾಗಿ ಗಮನಿಸಿದವರಿಗೆ ಇದರ ಅರಿವು ಆಗಿರಬಹುದು. ಅರಿವು ಆಗದವರಿಗೆ ಕೆಲವೇ ವರ್ಷಗಳಲ್ಲಿ ಅರಿವಿಗೆ ಬರಲಿದೆ.  ಕಾಸರಕನ ಮರ ಗೊತ್ತಾ ? ಈ ಪ್ರಶ್ನೆಯನ್ನು ಯಾರಲ್ಲಿಯಾದರೂ ಕೇಳಿದರೆ ಹಿಂದೆ ಹೇರಳವಾಗಿತ್ತು. ಈಗ ಹುಡುಕಿದರೆ ಮಾತ್ರ ಸಿಗುತ್ತದೆ ಎನ್ನುತ್ತಾರೆ. ಹಾಗೆಯೇ ಇನ್ನೊಂದು ಮರ ಇತ್ತು. “ಕನಪ್ಪಡೆ” ಎಂಬ ಹೆಸರಿನ ಈ ಮರ ಗುಡ್ಡ, ಕಾಡುಗಳಂಚಿನಲ್ಲಿ…

Read more
ಹವಾಮಾನ ಬದಲಾವಣೆಯಿಂದ ಅಂತರ್ಜಲ 3 ಪಟ್ಟು ಕುಸಿತವಾಗಲಿದೆ!

ಹವಾಮಾನ ಬದಲಾವಣೆಯಿಂದ ಅಂತರ್ಜಲ 3 ಪಟ್ಟು ಕುಸಿತವಾಗಲಿದೆ!

ಹವಾಮಾನ ಬದಲಾವಣೆ ಎಂದರೆ ಏನು ಎಂಬುದರ ಸಾಧಾರಣ ಚಿತ್ರಣ ನಮ್ಮ ಗಮನಕ್ಕೆ ಈಗಾಗಲೇ ಬಂದಾಗಿದೆ. ಇನ್ನು ಇದರ ಪರಿಣಾಮವನ್ನು ಒಂದೊಂದಾಗಿ ನಮ್ಮ ಅನುಭವಕ್ಕೆ ಬರಲಿದೆ. ಈ ಸನ್ನಿವೇಶದಿಂದಾಗಿ  ಎಲ್ಲದಕ್ಕಿಂತ ಮುಂಚೆ ಅಂತರ್ಜಲದ ಮೇಲಿನ ಒತ್ತಡ ಹೆಚ್ಚಾಗಿ ಅದು ಭಾರೀ ಕುಸಿತವಾಗುವ ಸಂಭವ ಇದೆ. ಮುಂದಿನ ದಿನಗಳಲ್ಲಿ ಮಳೆ ಕಡಿಮೆಯಾಗುವುದು ಅಥವಾ ಮಳೆಯ ಹಂಚಿಕೆ ವ್ಯತ್ಯಾಸವಾಗುವುದು ಮಾಮೂಲಿಯಾಗುತ್ತದೆ. ಇದೆಲ್ಲದ ಪರಿಣಾಮ  ಕುಡಿಯಲು ಮತ್ತು ಕೃಷಿಗೆ ನೀರಿನ ಕೊರೆತೆ. ನೀರಿಗಾಗಿ ಅಂತರ್ಜಲಕ್ಕೆ ಕೈಹಾಕಿ ಅದನ್ನು ಇನ್ನೂ ಇನ್ನೂ ಬರಿದು ಮಾಡಬೇಕಾಗುತ್ತದೆ….

Read more
ಅಡಿಕೆ ಸಸಿ ನೆಡುವವರು ಗಮನಿಸಿ- ಇಂತಹ ಅಡಿಕೆ ಸಸಿ ನೆಡಬೇಡಿ.

ಅಡಿಕೆ ಸಸಿ ನೆಡುವವರು ಗಮನಿಸಿ- ಇಂತಹ ಅಡಿಕೆ ಸಸಿ ನೆಡಬೇಡಿ.

ಅಡಿಕೆ ತೋಟ ಮಾಡಿದರೆ ನಮ್ಮ ಆರ್ಥಿಕ ಸ್ಥಿತಿ ಸ್ವಲ್ಪವಾದರೂ ಸುಧಾರಿಸಬಹುದು ಎಂದು ಎಲ್ಲರೂ ಈ ಕೃಷಿ ಮಾಡಲಾರಂಭಿಸಿದ್ದಾರೆ. ಬೆಳೆಯುವವರು ಹೆಚ್ಚಾದಂತೆ ಅದಕ್ಕನುಗುಣವಾಗಿ ಸಸಿಗಳೂ ಲಭ್ಯವಾಗಬೇಕು. ಹಲವಾರು ನರ್ಸರಿಗಳು ಈ ಕೆಲಸವನ್ನು ಮಾಡುತ್ತಿವೆ. ಸಸಿ ನರ್ಸರಿಯದ್ದಿರಲಿ, ಸ್ವಂತ ತಯಾರಿಸಿದ್ದು ಇರಲಿ, ನೀವು ನೆಡಲು ಉದ್ದೇಶಿಸಿರುವ ಗಿಡದಲ್ಲಿ ಈ ಚಿನ್ಹೆಗಳಿದ್ದರೆ ಅಂತಹ ಸಸಿ ನೆಡಬೇಡಿ. ಇದು ಎಲೆ ಚುಕ್ಕೆ ರೋಗ ತಗಲಿದ ಸಸಿಯಾಗಿರುತ್ತದೆ. ಇದನ್ನು ನೆಟ್ಟರೆ ಎಲೆ ಚುಕ್ಕೆ ರೋಗ ನಿಮ್ಮ ತೋಟಕ್ಕೆ ಹೊಸ ಅತಿಥಿ ಬಂತೆಂದೇ ತಿಳಿಯಿರಿ. ಅಡಿಕೆ…

Read more
ಹೊಲದಲ್ಲಿ ಯಾಕೆ ಅಣಬೆ ಯಾಕೆ ಬೆಳೆಯುತ್ತದೆ? ಅದರಿಂದ ಕೃಷಿಗೆ ಲಾಭ ಏನು?

ಹೊಲದಲ್ಲಿ ಅಣಬೆ ಯಾಕೆ ಬೆಳೆಯುತ್ತದೆ?  ಕೃಷಿಗೆ ಇದರ ಲಾಭ ಏನು?

ನಾವೆಲ್ಲ ಮಳೆಗಾಲದಲ್ಲಿ ನೆಲದಲ್ಲಿ, ಮರದ ದಿಮ್ಮಿಗಳಲ್ಲಿ, ಗೊಬ್ಬರದಲ್ಲಿ ಹಾಗೆಯೇ ಎಲ್ಲಾ ನಮೂನೆಯ ಸಾವಯವ ವಸ್ತುಗಳಲ್ಲಿ ಅಣಬೆ ಬೆಳೆಯುವುದನ್ನು ಕಂಡಿದ್ದೇವೆ. ಈ ಅಣಬೆಗಳು ರೈತನಗೆ ಹೇಗೆ ಆಪ್ತ ಮಿತ್ರಗೊತ್ತೇ? ಎಲ್ಲರೂ ಎರೆಹುಳು ರೈತನ ಮಿತ್ರ ಎನ್ನುತ್ತೇವೆ. ಎರೆಹುಳುವಿಗಿಂತಲೂ  ಪ್ರಾಮುಖ್ಯವಾದ ಆಪ್ತಮಿತ್ರ ಎಂದರೆ ಅಣಬೆಗಳು. ಇವು ರೈತನ ಕೃಷಿಗೆ ಏನೆಲ್ಲಾ ನೆರವನ್ನು ನೀಡುತ್ತವೆ. ಇವುಗಳ ಅಸ್ತಿತ್ವ ಇಲ್ಲದಿದ್ದರೆ ಏನಾಗಬಹುದು ಎಂಬುದರ ಬಗ್ಗೆ ಇಲ್ಲಿ ಚರ್ಚಿಸೋಣ. ಶಿಲೀಂದ್ರಗಳು ,ಅಣಬೆಗಳು  ಏಕಕೋಶ ಮತ್ತು ಸಂಕೀರ್ಣವಾದ ಬಹುಕೋಶೀಯ ಜೀವಿಗಳು. ಇವುಗಳಲ್ಲಿ ಪತ್ತೆ ಹಚ್ಚಿದ ಜಾತಿಗಳಿಗಿಂತ…

Read more
error: Content is protected !!