ಪರಿಶುದ್ಧ ತುಪ್ಪ

ಆನ್ ಲೈನ್ ಕೃಷಿ ಉತ್ಪನ್ನಗಳ ವ್ಯವಹಾರ- ಗ್ರಾಹಕರೇ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಅಮಾಯಕ ರೈತರನ್ನು ಹಾಗೆಯೇ ಪೇಟೆ ಪಟ್ಟಣದ ಜನರನ್ನು  ಮೋಸ ಮಾಡಿ  ಹಣ ಸಂಪಾದನೆ ಮಾಡುವ ಹೈಟೆಕ್ ಆನ್ ಲೈನ್ ಕೃಷಿ ಉತ್ಪನ್ನ ಮಾರಾಟ ಜಾಲಗಳು ಹೆಚ್ಚುತ್ತಿದೆ.  ರೈತರು ಹಾಗೆಯೇ ಪೇಟೆ ಪಟ್ಟಣದ ಜನ ಕಣ್ಣಾರೆ ಕಂಡರೂ ಪರಾಂಬರಿಸಿ ನೋಡದೆ ಕೊಳ್ಳಬೇಡಿ. ಈ ರೀತಿ ಕೊರೋನಾ ಮಹಾಮಾರಿ, ಹಾಗೆಯೇ ನೆರೆ, ಬರ ಮುಂತಾದ ಅವಘಡಗಳು ಮನುಕುಲದ ಬೆನ್ನು ಹತ್ತುತ್ತಿದ್ದರೂ ಇನ್ನೂ ಪರರನ್ನು ಸುಲಿಗೆ ಮಾಡಿ ಹಣ ಮಾಡಬೇಕೆಂಬಾಸೆ ಕೆಲವರಲ್ಲಿ.  ಎಲ್ಲಿ ಇಡುತ್ತಾರೋ ಹಣವನ್ನು ಗೊತ್ತಿಲ್ಲ.  ಇವೆಲ್ಲಾ…

Read more
ವಿದ್ಯುತ್ ಸರಬರಾಜು ವ್ಯವಸ್ಥೆ

ಕೇಂದ್ರ ವಿದ್ಯುತ್ ಕಾಯಿದೆ – ರೈತರಿಗೆ ತೊಂದರೆ ಇದೆಯೇ?

ಸರಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಿದರೆ ರೈತರಿಗೆ ವಿದ್ಯುತ್ ಉಚಿತವಾಗಿ ಸಿಗುವುದಿಲ್ಲ. ಅದನ್ನು ನಾವು ವಿರೋಧಿಸಬೇಕು. ಖಾಸಗೀಕರಣ ಹಾಗೆ ಹೀಗೆ ಎಂದೆಲ್ಲಾ ರೈತರ ಕಿವಿ ತುಂಬಿ ಅವರನ್ನೂ ತಮ್ಮ ಬೆಂಬಲಕ್ಕೆ ಸೇರಿಸಿಕೊಳ್ಳಲು ಹವಣಿಕೆ ನಡೆಯುತ್ತಿದೆ. ಸರಕಾರ ಹಂತ ಹಂತವಾಗಿ ಎಲ್ಲಾ ಸರಕಾರೀ ವ್ಯವಸ್ಥೆಗಳನ್ನು ಖಾಸಗೀಕರಣ ಮಾಡುವ ತಯಾರಿಯಲ್ಲಿದೆ. ನಮ್ಮ ಪ್ರತಿನಿಧಿಗಳು ಯೋಗ್ಯರೇ ಆಗಿದ್ದರೆ  ಇದರಿಂದ  ಸಾರ್ವಜನಿಕರಿಗೆ ಅನುಕೂಲವೇ ಆಗುವುದು. ಕೇಂದ್ರ ಸರಕಾರ ನಾಳೆ ನಡೆಯಲಿರುವ ಮುಂಗಾರು ಅಧಿವೇಶನದಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯ Electricity Amendment Bill 2021…

Read more
ಅಡಿಕೆಯ ಬಳಕೆಯ ಚೂರುಗಳು

ನಾವು ಬೆಳೆಯುವ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಗೊತ್ತೇ?

ನಾವೆಲ್ಲಾ ಅಡಿಕೆ ಬೆಳೆಗಾರರು. ಆದರೆ ನಮಗೆ ಇನ್ನೂ ಸ್ಪಷ್ಟವಾಗಿ  ನಾವು ಬೆಳೆದ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಎಂದು ಗೊತ್ತೇ ಇಲ್ಲ.ನಾವು ಬೆಳೆಯುವ ಅಡಿಕೆ ಸಧ್ಯದ ಮಟ್ಟಿಗೆ ಬಳಕೆಯಾಗುವುದು ಈ ಎಲ್ಲಾ ರೂಪಗಳಲ್ಲಿ ಜಗಿದು ಉಗುಳುವುದಕ್ಕೆ ಮಾತ್ರ. ಅಡಿಕೆ ಎಂದರೆ ಅದು ಟ್ಯಾನಿನ್ (ಚೊಗರು) ಒಳಗೊಂಡ ಒಂದು ಬೀಜ ಎಂದು ವ್ಯಾಖ್ಯಾನಿಸಬಹುದು. ಅಡಿಕೆ ಕಾಯಿ  ಬೆಳೆದು ಹಣ್ಣಾದ ಮೇಲೆ ಕೊಯಿಲು ಮಾಡಿ  ನಿರ್ದಿಷ್ಟ ದಿನಗಳ ವರೆಗೆ  ಸೂರ್ಯನ ಬೆಳಕಿನಲ್ಲಿ ಒಣಗಿಸಿ, ಸಿಪ್ಪೆ ಸುಲಿದಾಗ  ದೊರೆಯುವುದು ಚಾಲಿ ಅಥವಾ ಸುಪಾರಿ…

Read more
ಚೂರು ಮಾಡಿದ ಅಡಿಕೆ

ಅಡಿಕೆಗೆ ಬೇಡಿಕೆ ಹೆಚ್ಚುತ್ತಿದೆ- ಬೆಲೆ ಏರುತ್ತಿದೆ.

ಚಾಲಿ ಅಡಿಕೆಗೆ ದರ ಏರುತ್ತಲೇ ಇದ್ದು, ಸದ್ಯವೇ ಅದು ಕ್ವಿಂಟಾಲಿಗೆ ರೂ. 50,000 ತಲುಪಬಹುದು ಎಂಬುದಾಗಿ ಸುದ್ದಿ ಹಬ್ಬುತ್ತಿದೆ. ಚಾಲಿ ಅಡಿಕೆಗೆ ಭಾರೀ ಬೇಡಿಕೆ ಬರುತ್ತಿದ್ದು, ಶಿರಸಿ , ಸಿದ್ದಾಪುರ, ಸಾಗರಲ್ಲಿ ಭಾರೀ ಮುತುವರ್ಜಿಯಿಂದ ಖರೀದಿ ನಡೆಯುತ್ತಿದೆ. ಇಂದು (6-08-21) ಶಿರಸಿ ಮಾರುಕಟ್ಟೆಯಲ್ಲಿ ಚಾಲಿ 41,800 ಕ್ಕೂ,  ಯಲ್ಲಾಪುರದಲ್ಲಿ 41500 ,ಸಾಗರ ಮಾರುಕಟ್ಟೆಯಲ್ಲಿ 40,000 ಹಾಗೂ ಸಿದ್ದಾಪುರದಲ್ಲಿ 41,100 ಕ್ಕೂ ಖರೀದಿ ನಡೆದಿದೆ. ಪುತ್ತೂರು, ಸುಳ್ಯ ಮಂಗಳೂರಿನಲ್ಲಿ 45,000,ಪುತ್ತೂರು, ಸುಳ್ಯ ವಿಟ್ಲಗಳಲ್ಲಿ ಖಾಸಗಿ ವರ್ತಕರು 46,500ಕ್ಕೂ ಖರೀದಿ…

Read more
ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ.

ರೈತರ ಮಕ್ಕಳಿಗೆ ಸ್ಕಾಲರ್ಶಿಪ್ ನೂತನ ಮುಖ್ಯ ಮಂತ್ರಿಗಳ ಕೊಡುಗೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರೇ  ರೈತರಿಗೆ ಕೊಡುವುದರಲ್ಲಿ ಎತ್ತಿದ  ಕೈಯಾದರೆ ಈಗಿನ ಹೊಸ ಮುಖ್ಯಮಂತ್ರಿಗಳಾಗಿ ಅಧಿಕಾರ  ಸ್ವೀಕರಿಸಿದ  ಬಸವರಾಜ ಬೊಮ್ಮಾಯಿಯವರೂ ಅವರಿಗಿಂತ ಏನೂ ಕಡಿಮೆ ಇಲ್ಲ. ಇಂದು (28-07-2021) ರಂದು ಕರ್ನಾಟಕದ ಮುಖ್ಯಮಂತ್ರಿ  ಸ್ಥಾನವನ್ನೇರಿದ  ಶ್ರೀ ಬಸವರಾಜ್ ಬೊಮ್ಮಾಯಿಯವರು  ರೈತರಿಗೆ ಏನು ಕೊಡುವುದು ಎಂದು ಯೋಚಿಸಿ ಹೊಸತಾಗಿ ಯಾರೂ ಕೊಡದೆ ಇರುವ ಹೊಸ ಯೋಜನೆಗೆ ಚಾಲನೆ ನೀಡಿದ್ದಾರೆ. ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ರೂ.1000 ಕೋಟಿಯನ್ನು  ಮಿಸಲಿಟ್ಟು ಹೊಸ ದಾಖಲೆ ಮಾಡಿದ್ದಾರೆ. ಶ್ರೀಯುತ  ಎಸ್…

Read more
ಉತ್ತಮ ಚಾಲಿ ಅಡಿಕೆ

ಅಡಿಕೆಗೆ ಮತ್ತೆ ಬೆಲೆ ಏರಿಕೆ ಪ್ರಾರಂಭ- ಇಂದು ದೊಡ್ಡ ಜಂಪ್.

ಕಳೆದ ಮೂರು ನಾಲ್ಕು ದಿನಗಳಿಂದ ಬೆಳಗ್ಗೆ ಗೂಬೆ ಕೂಗಲು ಪ್ರಾರಂಭವಾಗಿದೆ. ಚಾಲಿ 43,000 ದಲ್ಲಿದ್ದ ಬೆಲೆ 45,000.ಕ್ಕೆ ಏರಿದೆ. ಮುನ್ಸೂಚನೆಗಳು ಅಡಿಕೆ ಧಾರಣೆಯನ್ನು ಮೇಲೆ ಒಯ್ಯುವ ಸಂಭವವಿದೆ. ಚಾಲಿ ಅಡಿಕೆಗೆ ಉತ್ತರ ಭಾರತದಿಂದ ಬೇಡಿಕೆ ಪ್ರಾರಂಭವಾಗಿದೆ ಎಂಬ ವದಂತಿ ಇದೆ. ಕೊರೋನಾ ಲಾಕ್ ಡೌನ್ ಸಮಯದಿಂದಲೂ ವ್ಯಾಪಾರಿಗಳಲ್ಲಿ  ದಾಸ್ತಾನು ಉಳಿದಿದೆ. ಆ ಕಾರಣದಿಂದ ಬೆಲೆ ಏರಿಕೆ ಆಗುವ ಎಲ್ಲಾ ಸಾಧ್ಯತೆಗಳೂ ಕಂಡು ಬರುತ್ತಿದೆ. ಚಾಲಿ ಅಡಿಕೆಗೆ ಜೂನ್ ತಿಂಗಳ ಕೊನೆಗೆ ಬೆಲೆ ಏರಿಕೆ ಪ್ರಾರಂಭವಾದುದು, ಜುಲೈ ಮೊದಲ…

Read more
ಕಿಸಾನ್ ಸಮ್ಮಾನ್ ಫಲಾನುಭವಿ ರೈತ

ರೈತರಿಂದ ಕಿಸಾನ್ ಸಮ್ಮಾನ್ ನಿಧಿ ದುರುಪಯೋಗ- ಮರುಪಾವತಿಗೆ ಆದೇಶ.

ಭಾರತ ಸರಕಾರ ಕೃಷಿಕರಿಗೆ ಸನ್ಮಾನ ಮಾಡುವುದಕ್ಕಾಗಿ ಕೊಡುತ್ತಿರುವ ವಾರ್ಷಿಕ 6000 ರೂ.ಗಳಿಗೂ ನಕಲಿ ರೈತರು ನುಸುಳಿದ್ದಾರಂತೆ. ಕೇಂದ್ರ ಕೃಷಿ ಮಂತ್ರಿಗಳಾದ ನರೇಂದ್ರ ಸಿಂಗ್ ತೋಮರ್ ಇವರು ಪಾರ್ಲಿಮೆಂಟ್ ಗೆ ನೀಡಿದ ಹೇಳಿಕೆಯಂತೆ, ನಮ್ಮ ದೇಶದಲ್ಲಿ ಅರ್ಹತೆ ಇಲ್ಲದ  ಸುಮಾರು 42 ಲಕ್ಷ  ಮಂದಿ, ಸುಮಾರು 3000 ಕೋಟಿ ಮೊತ್ತದ ಕಿಸಾನ್ ಸಮ್ಮಾನ್ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರಂತೆ. ಸರಕಾರ ಇದೆಲ್ಲದರ ಲೆಕ್ಕ ತೆಗೆದಿದೆ. ಮತ್ತು ಅದನ್ನು ಪಾವಾಸು ಪಡೆಯಲು ಮುಂದಾಗಿದೆ. ಸರಕಾರಕ್ಕೆ ಜನ ಮೋಸ ಮಾಡುವುದೋ ಅಥವಾ ಸರಕಾರ…

Read more
ರೈತರು ಸಾಲ ಸೋಲ ಮಾಡಿ ಬೆಳೆದ ಅನನಾಸು ಮಾರಾಟಕ್ಕೆ ಕಷ್ಟವಾಗಿ ಹಾಳಾಗಿದೆ.

ರೈತರ ಸಾಲ ಮನ್ನಾ? ಸರಕಾರ ತೆಗೆದುಕೊಂಡಿದೆ ಸಣ್ಣ ನಿರ್ಧಾರ.

ಕರ್ನಾಟಕದ ರೈತ ಪರ ಸರಕಾರ ಕೊರೋನಾ ಕಾರಣದಿಂದ ಸತ್ತಂತಹ ರೈತರಿಗೆ ನೆರವಾಗಲು ಸಾಲಮನ್ನಾ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದೆ. ಸಾಲ ಮನ್ನಾ ಎಂದಾಕ್ಷಣ  ರೈತರಲ್ಲದವರ  ಕಿವಿ ನೆಟ್ಟಗಾಗುತ್ತದೆ. ಹಾಗೇನೂ ನೆಟ್ಟಗೆ ಮಾಡಿಕೊಳ್ಳಬೇಡಿ. ಇದು ಬರೇ ಕೊರೋನಾ ದಿಂದ ಮೃತಪಟ್ಟವರಿಗೆ ಮಾತ್ರ. ಉಳಿದವರ ಪ್ರಸ್ತಾಪ ಇಲ್ಲ. ಕಳೆದ ವರ್ಷ ಕೊರೋನಾ ಕಾರಣದಿಂದ ರೈತರಿಗೆ ಬಹಳಷ್ಟು ತೊಂದರೆ ಉಂಟಾಗಿದೆ. ಅದರ ಕಹಿ ನೆನಪು ಮಾಸುವ ಮುನ್ನ ಮತ್ತೆ ಈ ವರ್ಷ ಲಾಕ್ ಡೌನ್ ಮಾಡಲಾಗಿದೆ. ಈ ವರ್ಷವೂ ರೈತರಿಗೆ ಬಹಳಷ್ಟು ತೊಂದರೆಗಳಾಗಿದೆ….

Read more
ಬೆಂಬಲ ಬೆಲೆ ಪಡೆದ ಭತ್ತ

ಬೆಂಬಲ ಬೆಲೆಯ ಹೆಚ್ಚಳ- ರೈತರಿಗೆ ಸರಕಾರದ ನೆರವು.

ಭಾರತ ಸರಕಾರವು ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ  ಬೆಂಬಲ ಬೆಲಯನ್ನು ಹೆಚ್ಚಿಸಿದೆ. ಭಾರತ ಸರಕಾರದ  ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ದೇಶದ ವಿವಿಧ ಬೆಳೆಗಳಿಗೆ ಭರ್ಜರಿ ಬೆಂಬಲಬೆಲೆಯನ್ನು ಘೋಷಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ.   ದೇಶದಲ್ಲಿ ಆಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ರೈತರು ಬಿತ್ತನೆ ಇತ್ಯಾದಿ ಕೃಷಿ ಕೆಲಸಗಳಲ್ಲಿ ತೊಡಗಿದ್ದಾರೆ. ಕೆಲವು ಬೆಳೆಗಳಿಗೆ ಕೊರೋನಾ ಕಾರಣದಿಂದ ಸ್ವಲ್ಪ ಮಾರುಕಟ್ಟೆ ಸಮಸ್ಯೆ ಉಂಟಾಗಿದ್ದರೂ, ಸರಕಾರ ಕಳೆದ ವರ್ಷದಂತೆ ಬಿಗುವನ್ನು ಸಡಿಲಿಕೆ ಮಾಡಿದ್ದ…

Read more
ಅಂಡರ್ ಗ್ರೌಂಡ್ ಡ್ರೈನೇಜ್ ವ್ಯವಸ್ಥೆ -Underground Drainage system

ಅಂಡರ್ ಗ್ರೌಂಡ್ ಡ್ರೈನೇಜ್ – ನೀರು ಬಸಿಯಲು ಸುಲಭ- ಶಾಶ್ವತ ವ್ಯವಸ್ಥೆ.

ಅಡಿಕೆ ತೋಟ, ತೆಂಗಿನ ತೋಟ ಅಥವಾ ಇನ್ಯಾವುದೇ ಬೇಸಾಯದ ಹೊಲದಲ್ಲಿ ನೆಲದಿಂದ ಒಸರುವ (ಒರತೆ) ನೀರನ್ನು ಅಡಿಕೆಯಲ್ಲೇ ಬಂಧಿಸಿ ಅದನ್ನು ವಿಲೇವಾರಿ ಮಾಡಲು ಇರುವ ಅತ್ಯುತ್ತಮ ವ್ಯವಸ್ಥೆಯೊಂದಿದ್ದರೆ ಅದು ಅಂಡರ್ ಗ್ರೌಂಡ್ ಡೈನೇಜ್. ಈ ವ್ಯವಸ್ಥೆ ಮಾಡಿಕೊಂಡರೆ ಜೌಗು ಜಾಗವನ್ನೂ ಒಣ ಜಾಗವನ್ನಾಗಿ ಪರಿವರ್ತಿಸಬಹುದು. ತೋಟದಲ್ಲಿ ಓಡಾಡುವಾಗ ಯಾವುದೇ ಬಸಿಗಾಲುವೆ ಕಾಣುವುದಿಲ್ಲ. ನೆಲದಲ್ಲಿ ಒರತೆ ರೂಪದಲ್ಲಿ ಹೊರ ಉಕ್ಕುವ ನೀರನ್ನು ಅಲ್ಲೇ ಟ್ಯಾಪ್ ಮಾಡಿ, ಮೇಲೆ ಬಾರದಂತೆ ತಡೆಯುವ ವ್ಯವಸ್ಥೆಗೆ  ಅಂಡರ್ ಗ್ರೌಂಡ್ ಡ್ರೈನೇಜ್ ಎಂದು ಹೆಸರು….

Read more
error: Content is protected !!