ಕಾಡು ಹಣ್ಣು ತಿನ್ನುತ್ತಿರುವ ಗುಬ್ಬಿ

ಗುಬ್ಬಿಗಳ ನಾಶಕ್ಕೆ ಟವರ್ ಮಾತ್ರ ಕಾರಣವಲ್ಲ.

ಗುಬ್ಬಿಗಳ ಸಂಖ್ಯೆ ಕಡಿಮೆಯಾಗಲು ಒಂದು ಕಾರಣ ಮೊಬೈಲ್ ಟವರ್ ಎನ್ನಲಾಗುತ್ತದೆ. ಆದರೆ ಮೊಬೈಲ್ ಟವರ್ ಬರುವ ಮುಂಚೆಯೇ ಇವು ಕಡಿಮೆಯಾಗಲಾರಂಭಿಸಿವೆ ಗೊತ್ತೇ? ಗುಬ್ಬಿಗಳ ನಾಶಕ್ಕೆ ಮೊಬೈಲ್ ಟವರ್ ಒಂದೇ ಕಾರಣ ಅಲ್ಲ. ನಮ್ಮ ಕೃಷಿ ಚಟುವಟಿಕೆ ಮತ್ತು ಹವಾಮಾನಗಳೂ ಒಂದು ಕಾರಣ. ಗುಬ್ಬಿಗಳು ಹಿಂದೆ ನಾವು ಸಣ್ಣವರಿದ್ದಾಗ ಮನೆಯ ಮಾಡಿನ ಸಂದುಗಳಲ್ಲಿ , ಚಾವಡಿಯ  ಆಡ್ದದ ಎಡೆಯಲ್ಲಿ ಗೂಡು ಕಟ್ಟಿ ಕುಳಿತುಕೊಳ್ಳುತ್ತಿತ್ತು. ಅದು ತನ್ನಷ್ಟಕ್ಕೇ ಅಲ್ಲಿಗೆ ಬಂದು ವಾಸ್ತವ್ಯ ಮಾಡುವುದು ವಾಡಿಕೆ. ಗುಬ್ಬಿಗಳು ಮನೆಯ ಮಕ್ಕಳಂತೆ ಆಗಿದ್ದವು.  ಅದು…

Read more

ಬೆಳೆಗಾರರೇ – ಮೈಲುತುತ್ತೆ ಖರೀದಿಸುವಾಗ ಬುದ್ದಿವಂತರಾಗಿರಿ.

ಇನ್ನೇನೋ ಮಳೆಗಾಲ ಬರಲಿದೆ. ಅಡಿಕೆಗೆ ಭಾರೀ ಬೆಲೆ ಬಂದಿದೆ. ಅಡಿಕೆ ಬೆಳೆಗಾರರಲ್ಲಿ ದುಡ್ಡು ಇದೆ. ಅದರಲ್ಲಿ ತಮ್ಮ ಹೆಚ್ಚಳವಾಗುತ್ತದೆ. ಈಗಲೇ ಖರೀದಿ ಮಾಡಿ ಎಂದು ವ್ಯಾಪಾರಿಗಳು ಹಳೆ ಸ್ಟಾಕು ಮುಗಿಸಿ ಮುಂದಿನ ಹೊಸ ಸ್ಟಾಕು ಮಾಡಲು ಬಂಡವಾಳ ಕ್ರೋಢೀಕರಣದಲ್ಲಿದ್ದಾರೆ. ಅಡಿಕೆ ಬೆಳೆಗಾರರೇ ನೀವು ಈಗ ಬುದ್ದಿವಂತರಾಗುವುದು ಅಗತ್ಯವಾಗಿದೆ. ಅಡಿಕೆ ಕೊಳೆ ರೋಗಕ್ಕೆ ಮೈಲುತುತ್ತೆ ಬೇಕು. ಹಾಗೆಂದು ಖರೀದಿಸಿದರೆ ದರ ಕಡಿಮೆ, ಮುಂದೆ ಹೆಚ್ಚು. ಇದೆಲ್ಲಾ ಯಾವ ಕ್ರಮವೋ ತಿಳಿಯದು. ಸರಕಾರದ ಸಂಬಂಧಿಸಿದ ಇಲಾಖೆ ಇದನ್ನೆಲ್ಲಾ ಗಮನಿಸಿದೆಯೋ ಇಲ್ಲವೋ…

Read more

ಹಿರಿಯ ಕೃಷಿ ವಿಜ್ಞಾನಿ ಪದ್ಮಭೂಷಣ ಡಾ. ಎಂ. ಮಹದೇವಪ್ಪ ನಮ್ಮನ್ನಗಲಿದ್ದಾರೆ.

ಅಂತರ ರಾಷ್ಟ್ರೀಯ ಖ್ಯಾತಿಯ ಕನ್ನಡ ನಾಡಿನ ಹಿರಿಯ ಕೃಷಿ ವಿಜ್ಞಾನಿ ಡಾ. ಎಂ. ಮಹದೇವಪ್ಪನವರು ಕೃಷಿ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅನನ್ಯ. ಕಳೆದ 60 ವರ್ಷಗಳಿಂದ ಕೃಷಿ ಕ್ಷೇತ್ರಕ್ಕೆ ತನ್ನ ಜೀವನವನ್ನು ಮುಡುಪಾಗಿಟ್ಟ ನಮ್ಮೆಲ್ಲರ ಗುರುಗಳು ಆಗಿದ್ದ ಡಾ. ಮಹಾದೇವಪ್ಪ ಇಂದು ನಮ್ಮನ್ನಗಲಿದರು. ನಾವು ಉಣ್ಣುವ ಅನ್ನದ ಜೊತೆಗೆ ಅವರ ಹೆಸರು ಇದೆ ಎಂಬುದು ಎಲ್ಲಾ ಕೃಷಿಕರಿಗೂ ತಿಳಿದಿರಬೇಕು. ಮೈಸೂರಿನವರಾದ  ಮಾದಾಪುರ ಮಹದೇವಪ್ಪ ಇವರು ಓರ್ವ ತಳಿ ವಿಜ್ಞಾನಿ.Genetics and Plant breeder ಇವರನ್ನು ಅನ್ನದ ವಿಜ್ಞಾನಿ…

Read more

ನಮ್ಮ ಕೃಷಿ ವ್ಯವಸ್ಥೆಯಲ್ಲಿ ಮಹಾನ್ ಸಂಚಲನ ಇದರಿಂದ ಮಾತ್ರ ಸಾಧ್ಯ.

ತಜ್ಞರು ಕ್ಷೇತ್ರ  ಜ್ಞಾನ ಇಲ್ಲದೆ ಏನೋನೋ ಸುಧಾರಣೆಗಳನ್ನು ಸರಕಾರಕ್ಕೆ ಶಿಫಾರಸು ಮಾಡುತ್ತಾರೆ. ಇದು ಕೃಷಿಕರ ಬದುಕನ್ನು ಉತ್ತಮಪಡಿವುದು ಅಷ್ಟಕ್ಕಷ್ಟೇ. ನಿಜವಾಗಿ ಮೂಲಭೂತ ಅಗತ್ಯ ಬೇರೆಯೇ ಇದೆ. ಭಾರತ ದೇಶದ ರೈತ ತನ್ನ ಜೀವಮಾನದಲ್ಲಿ  ನೆಮ್ಮದಿಯ ಜೀವನವನ್ನು ಕಳೆಯುವುದು ಬರೇ ಮಕ್ಕಳಾಟಿಕೆಯ ವಯಸ್ಸಿನಲ್ಲಿ ಮಾತ್ರ. ಜವಾಬ್ಧಾರಿ ಬಂದ ನಂತರ ತನ್ನ ಕೊನೇ ಉಸಿರಿನ ತನಕವೂ ರೈತ ನೆಮ್ಮದಿಯ ಜೀವನ ನಡೆಸಲಾರ. ಒಂದಿಲ್ಲೊಂದು ತಲೆಬಿಸಿಯಲ್ಲೇ (Tension)ಅವನು ಅಲ್ಪಾಯುಷಿಯಾಗಿ ಅಂತ್ಯವನ್ನು ಕಾಣುತ್ತಾನೆ. ವ್ಯಕ್ತಿಯೊಬ್ಬನಿಗೆ ಬದುಕುವ ಹಕ್ಕು ಇರುವಾಗ ನೆಮ್ಮದಿಯ ಬದುಕಿಗೆ ಬೇಕಾಗುವ…

Read more
Organic University

ಕರ್ನಾಟಕದಲ್ಲಿ ಸಾವಯವ ಕೃಷಿಗಾಗಿ ವಿಶ್ವ ವಿಧ್ಯಾನಿಲಯ!

ಮಾನ್ಯ ಕೃಷಿ ಮಂತ್ರಿಗಳು ಸಾವಯವ ಕೃಷಿ ಸಂಶೋಧನೆಗಾಗಿ ಒಂದು ವಿಶ್ವ ವಿಧ್ಯಾನಿಲಯವನ್ನು ಸ್ಥಾಪಿಸಬೇಕು ಎಂಬ ಚಿಂತನೆ ನಡೆಸಿದ್ದಾರೆ. ಸುಮಾರು 10 ವರ್ಷಕ್ಕೆ ಹಿಂದೆ ನಮ್ಮ ರಾಜ್ಯದಲ್ಲಿ ಎರಡು ಕೃಷಿ ವಿಶ್ವ ವಿಧ್ಯಾನಿಲಯಗಳಿದ್ದವು. ಮತ್ತೊಂದು ಕೃಷಿ ವಿಶ್ವ ವಿಧ್ಯಾನಿಲಯ ಸೇರ್ಪಡೆಯಾಯಿತು. ತೋಟಗಾರಿಕಾ ವಿಶ್ವ ವಿಧ್ಯಾನಿಲಯವಾಯಿತು. ಪಶು ಸಂಗೋಪನಾ ವಿಶ್ವ ವಿಧ್ಯಾನಿಲಯ, ತೋಟಗಾರಿಕೆ ಮತ್ತು  ಕೃಷಿ ಜಂಟಿ ವಿಶ್ವ ವಿಧ್ಯಾನಿಲಯಗಳಾಯಿತು. ಇನ್ನು  ಉಳಿದದ್ದು ಸಾವಯವ ಕೃಷಿ ಒಂದೇ ಏನೋ ಎಂಬುದು ಮಾನ್ಯ ಕೃಷಿ ಸಚಿವರ ಇಂಗಿತದಲ್ಲಿ ಕಾಣುತ್ತದೆ. ಹಾಲೀ ಇರುವ…

Read more
ಬೆಳೆಗಳಿಗೆ ಹಾನಿ ಮಾಡುವ ಮಂಗ

ಕಾಡುಪ್ರಾಣಿಗಳಿಂದ ಬೆಳೆಹಾನಿ- ಪರಿಹಾರಕ್ಕೆ ಸರ್ಕಾರದ ವಿಮೆ.

ಈ ವರ್ಷದಿಂದ  ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಲ್ಲಿ ರೈತರಿಗೆ ಕಾಡು ಪ್ರಾಣಿಗಳಿಂದಾಗುವ ನಷ್ಟಕ್ಕೆ ಪರಿಹಾರ ಕೊಡುವ ಬಗ್ಗೆ ವಿಮೆ ಮಾಡುವ  ವ್ಯವಸ್ಥೆ ಬರಲಿದೆ. ಮಾನ್ಯ ಸಭಾಪತಿಗಳು  ಮೊನ್ನೆ ಕೃಷಿಕರ ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದೆ ಇದಕ್ಕೆ ಪರಿಹಾರವಾದರೂ ಕೊಡಿ ಎಂದು ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದು ಕಾರ್ಯಗತವಾಗಲು ರೈತರೂ ತಮ್ಮ ಕೆಲಸ ಮಾಡಬೇಕು. ಕಾಡುಪ್ರಾಣಿ ಯಾವುದೇ ಇದ್ದರೂ ಅದನ್ನು ಕೊಲ್ಲುವುದು ಅಪರಾಧ. ಕೊಲ್ಲಲು ಅದು ಎದೆಯೊಡ್ಡಿ ಬರುವುದೂ ಇಲ್ಲ. ಮಂಗಗಳು ತೆಂಗಿನಕಾಯಿ , ಹಣ್ಣು ಹಂಪಲುಗಳನ್ನು…

Read more
farmers grow but price fixed by others

ಕೃಷಿಕರ ಆದಾಯ ದ್ವಿಗುಣವಾಗಲೇ ಇಲ್ಲ –ಯಾಕೆ?

ಸರಕಾರ ಕೃಷಿಕರ ಆದಾಯ ದುಪ್ಪಟ್ಟಾಗಬೇಕು ಎಂದು ಕಾರ್ಯಕ್ರಮಗಳನ್ನು ಹಾಕಿಕೊಂದಂತೆ ದೇಶದಲ್ಲಿ ರೈತರ ಆದಾಯ ಕುಂಠಿತವಾಗುತ್ತಲೇ  ಬರುತ್ತಿದೆ. ಇತ್ತೀಚೆಗೆ ಎಲ್ಲೋ ಖ್ಯಾತ ರೈತ ಪರ ಹೋರಾಟಗಾರರಾದ ಶ್ರೀ ದೇವೇಂದ್ರ ಶರ್ಮ ಇವರು ಹೇಳಿಕೆಕೊಟ್ಟದ್ದು ಗಮನಿಸಿದ್ದೆ. ಇವರು ಹೇಳುತ್ತಾರೆ ಸರಕಾರ ಗ್ರಹಿಸಿದಂತೆ ಆದಾಯ ಹೆಚ್ಚಳವಾಗುವ ಬದಲಿಗೆ ಕಡಿಮೆಯೇ ಆಗುತ್ತಿದೆಯಂತೆ. ಅಷ್ಟೇ ಅಲ್ಲ. ಕೃಷಿಕರ ಆದಾಯವನ್ನು ಕೃಷಿ ನಿರ್ವಹಣೆಯೇ ತಿಂದು ಹಾಕುತ್ತಿದೆಯಂತೆ. ಈ ಬಗ್ಗೆ ಅವರು ಕೊಡುವ ಕೆಲವು ಲೆಕ್ಕಾಚಾರಗಳು ಹೀಗಿವೆ. ನಮ್ಮ ದೇಶದಲ್ಲಿ ಕೃಷಿ ಹೊಲದ ಮಾಲಿಕನಿಗಿಂತ ಕೃಷಿ ಕೂಲಿ…

Read more
flood in channel

ಅಕಾಲಿಕ ಮಳೆ- ಮುಂದಿನ ತೊಂದರೆಗಳು ಮತ್ತು ಮುಂಜಾಗ್ರತೆ.

ಯಾರೂ ಗ್ರಹಿಸಿರದ ಈ ಸಮಯದಲ್ಲಿ ಮಳೆಯಾಗಿದೆ. ರೈತರಿಗೆ ಬಹಳ ತೊಂದರೆ ಆಗಿದೆ. ಕರ್ನಾಟಕದಲ್ಲಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಲ್ಲೆಲ್ಲಾ ಅಕಾಲಿಕ ಮಳೆಯಾಗುತ್ತಿದೆ.ಬರೇ ಕರ್ನಾಟಕ ಮಾತ್ರವಲ್ಲ  ಮಹಾರಾಷ್ಟ್ರ, ತಮಿಳುನಾಡು, ಕೇರಳ, ಮುಂತಾದ ರಾಜ್ಯಗಳಲ್ಲಿಯೂ ಮಳೆ ಸುರಿಯುತ್ತಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಇದಕ್ಕೆ ಕಾರಣವಾಗಿದ್ದು, ಈ ಮಳೆ ಇನ್ನೂ ಮುಂದಿನ 3 ದಿನಗಳ ತನಕ ವೂ ಮುಂದುವರಿದು ಪ್ರಮಾಣ ಹೆಚ್ಚಾಗಲಿದೆ. The weather is expected to remain more or less the same for…

Read more
spider nest in soil surface

ಜೇಡರ ಬಲೆಗಳು ನಮಗೆಷ್ಟು ಉಪಕಾರ ಮಾಡುತ್ತವೆ ಗೊತ್ತೇ?

ಸೃಷ್ಟಿಯ ವ್ಯವಸ್ಥೆಗಳನ್ನು ನಾವು ಕಲ್ಪನೆ ಮಾಡುವುದೂ  ಸಾಧ್ಯವಿಲ್ಲ ಸೃಷ್ಟಿಗೆ ಸೃಷ್ಟಿಯೇ ಸರಿಸಾಠಿ. ಇದರ ಕುರಿತಾದ ಕೆಲವು ಸಾಕ್ಷ್ಯಗಳು ಇಲ್ಲಿವೆ. ಹೀಗೇ ಒಮ್ಮೆ ಬಿಡುವು ಮಾಡಿಕೊಂಡು ಕತ್ತೆಲೆ ಆದ ನಂತರ ನಿಮ್ಮ ಹೊಲಕ್ಕೆ ಹೋಗಿ ನೆಲಮಟ್ಟದಲ್ಲಿ ಟಾರ್ಚ್ ಲೈಟ್ ಬಿಟ್ಟು ನೋಡಿ, ಸ್ವಲ್ಪ ಹೊತ್ತು ಗಮನ ಇಟ್ಟು ಟಾರ್ಚ್ ಬೆಳೆಕು ಬೀಳುವ  ಕಡೆಯೆಲ್ಲಾ ನೋಡಿ. ಏನು ಕಾಣುತ್ತದೆ ಎಂದು ಗಮನಿಸಿ. ಮತ್ತೇನೂ ಕಾಣುವುದಿಲ್ಲ. ನೆಲದಲ್ಲಿ ಟಾರ್ಚ್ ಲೈಟಿನ ಬೆಳೆಕಿಗೆ  ಪ್ರತಿಫಲನ ಕೊಡುವ ಮಿಣುಕು ಕಾಣಿಸುತ್ತದೆ. ಹಾಗೆಯೇ ಒಂದು ಮಿಣುಕಿನ…

Read more
coconut tree full of nuts

ತೆಂಗಿನ ತೋಟ – ಬೇಸಿಗೆಯಲ್ಲಿ ತೇವಾಂಶ ರಕ್ಷಣೆಗೆ ಹೀಗೆ ಮಾಡಿ.

ಬೇಸಿಗೆಯ ಕಾಲದಲ್ಲಿ ತೆಂಗಿನ ಮರ/ ಸಸಿಯ ಬೇರುಗಳಿರುವ ಭಾಗ ತೇವಾಂಶದಿಂದ ಕೂಡಿದ್ದರೆ ಇಳುವರಿ ಹೆಚ್ಚುತ್ತದೆ.ತೇವಾಂಶ ರಕ್ಷಣೆಗೆ ಹೀಗೆ ಮಾಡಬಹುದು. ಬೇಸಿಗೆಯ ಸಮಯದಲ್ಲಿ ನೀರಾವರಿ ಅತೀ ಪ್ರಾಮುಖ್ಯ ಕೆಲಸ. ಅದರ ಜೊತೆಗೆ ಮಣ್ಣಿನಲ್ಲಿ ಸೂಕ್ಷ್ಮಾಣು ಜೀವಿಗಳ ಚಟುವಟಿಕೆಯೂ ನಡೆಯುತ್ತಿರಬೇಕು. ಹೀಗೆ ಆಗಲು ಬೆಳೆಗಾರರು ಮಾಡಬೇಕಾದ ಕೆಲವು ಅಗತ್ಯ ಕೆಲಸಗಳು ಹೀಗಿವೆ. ತೆಂಗಿನ ಮರ ಎಂದರೆ ನಾವು ಅದಕ್ಕೆ ಎಲ್ಲಾ ಸಾವಯವ ತ್ಯಾಜ್ಯಗಳನ್ನು ಬುಡಕ್ಕೆ ಹಾಕುತ್ತೇವೆ. ಅವು ಮಳೆಗಾಲದಲ್ಲಿ ಕರಗಿ ಬುಡದಲ್ಲಿ ಗೊಬ್ಬರವಾಗುತ್ತದೆ. ಬೇಸಿಗೆಯಲ್ಲಿ ಬಿಸಿಲಿಗೆ ಒಣಗುತ್ತಾ ಇರುತ್ತದೆ. ಬೇಸಿಗೆ…

Read more
error: Content is protected !!