ಸ್ವಸ್ಥ ಆರೋಗ್ಯಕ್ಕೆ ಬೇಕು – ಸುರಕ್ಷಿತ ಆಹಾರ.

ನಾವು ತಿನ್ನುವ ಆಹಾರ ಸುರಕ್ಷಿತವಾಗಿದ್ದರೆ ಎಲ್ಲವೂ ಕ್ಷೇಮ. ಇಂದು ಆಗುತ್ತಿರುವ ಕೆಲವು ಅನಾಹುತಗಳಿಗೆ ಮೂಲ ಕಾರಣ ನಮ್ಮ ಆಹಾರ ಅಭ್ಯಾಸಗಳು. ಇದನ್ನು ಸ್ವಲ್ಪ ಸ್ವಲ್ಪವೇ ಸರಿ  ಮಾಡಿಕೊಂಡು ಬದುಕುವುದನ್ನು ಕಲಿಯೋಣ. ಈ ದಿನದಿಂದಲೇ  ಅದನ್ನು ಪ್ರಾರಂಭಿಸೊಣ. ಕೃಷಿ ಕ್ಷೇತ್ರದಲ್ಲಿ ಆಹಾರ ಉತ್ಪಾದನೆಯಾಗುವಾಗಲೇ ಅದು  ಆರೋಗ್ಯಕ್ಕೆ ಕಂಠಕವಾದ ಒಳಸುರಿಗಳಿಂದ ಕಲುಷಿತವಾಗುತ್ತದೆ. ಇನ್ನು ದಾಸ್ತಾನು ಕ್ಷೇತ್ರದಲ್ಲಿ ಇನ್ನಷ್ಟು ಅದು ಕಲುಷಿತವಾಗುತ್ತದೆ. ಮಾರಾಟ ಕ್ಷೇತ್ರದಲ್ಲಿ   ಎಲ್ಲಾ ಕಡೆಯಲ್ಲೂ ಕಲುಷಿತಗೊಂಡು ಅದು ಗ್ರಾಹಕನಿಗೆ ದೊರೆಯುತ್ತದೆ. ಅದು ಒಟ್ಟಾರೆ ಯಾಗಿ ಮನುಕುಲದ ದೇಹಾರೋಗ್ಯಕ್ಕೆ ಹಾನಿಕಾರಕ…

Read more

ಪರಿಸರದೊಂದಿಗೆ ಬದುಕಿದರೆ ಮಾತ್ರ ನಮಗೆ ಉಳಿಗಾಲ

ಪರಿಸರ ಎಂಬುದು ಮನುಷ್ಯನಿಗಿಂತ ಮುಂಚೆಯೇ ಸೃಷ್ಟಿಯಾಗಿದೆ. ಇದನ್ನು ಹಾಳು ಮಾಡಲು ಮನುಷ್ಯ ಮಾತ್ರರಿಂದ ಸಾಧ್ಯವಿಲ್ಲ. ಒಂದು ವೇಳೆ ಏನಾದರೂ ಕೆಣಕಲು ಹೋದರೆ ಅದು ತಿರುಗಿ ಬೀಳುತ್ತದೆ. ಪ್ರಕೃತಿ  ತನ್ನದೇ ಆದ ವ್ಯವಸ್ಥೆಗಳ ಮೂಲಕ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತದೆ. ಅದರೊಂದಿಗೆ ಬದುಕಿದರೆ ಮಾತ್ರ ನಮಗೆ ಉಳಿಗಾಲ. ಇಂದು ಆಗುತ್ತಿರುವ ಕೆಲವು ಅನಾಹುತಗಳು, ಮನುಕುಲಕ್ಕೆ ಎದುರಾಗಿರುವ ಕೆಲವು ಸಂಧಿಗ್ಧ ಪರಿಸ್ಥಿತಿಗಳು ಇವೆಲ್ಲಾ ಪ್ರಕೃತಿಯ ಮುನಿಸೇ ಹೊರತು ಬೇರೇನೂ ಅಲ್ಲ. ಪ್ರಕೃತಿ ಮನಸ್ಸು ಮಾಡಿದರೆ ಸಾಂಕ್ರಾಮಿಕ ರೋಗ ಇರಲಿ, ಬರ ಇರಲಿ…

Read more

ಮಿಡತೆಗಳಿಗೆ ಅಂಜಬೇಕಾಗಿಲ್ಲ.

ಜನರಲ್ಲಿ ಭಯ ಮೂಡಿಸಿದ ಮಿಡತೆ ಹಾವಳಿ ಬಗ್ಗೆ ಹಿರಿಯ ಕೀಟ ಶಾಸ್ತ್ರಜ್ಞ, ಕರಾವಳಿ ಕರ್ನಾಟಕದ ಕೃಷಿ ತೋಟಗಾರಿಕಾ ವಲಯ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಶ್ರೀ ಎಸ್ ಯು ಪಾಟೀಲ್ ರವರು ಹೇಳುವ ಮಾತುಗಳು ಇವು. ಮೇಲಿನ ಧ್ವನಿ ಮುದ್ರಿಕೆಯಲ್ಲಿ ಈ ವಿಚಾರದ ಬಗ್ಗೆ ಶ್ರೀಯುತರು ವಿವರವಾಗಿ ಹೇಳಿದ್ದಾರೆ. ಈ ಮಿಡತೆಗಳಿಂದ ಯಾವ ಹಾನಿಯೂ ಉಂಟಾಗದು ಭಯಪಡುವ ಅಗತ್ಯ ಇಲ್ಲ.ಮಹಾರಾಷ್ಟ್ರ ದಾಟಿ ಬರುವುದೇ ಸಂದೇಹ. ಮಿಡತೆಗಳಲ್ಲಿ ಉದ್ದ ಮೀಸೆಯವು ಪರಭಕ್ಷಕಗಳು. ಗಿಡ್ಡ ಮೀಸೆಯವು ಮಾತ್ರ ಸ್ವಲ್ಪ ಹಸುರನ್ನು ತಿನ್ನುವವುಗಳು….

Read more

ಮಿಡತೆಗಳು – ನಮ್ಮ ತಲೆಯೊಳಗೆ ಹೊಕ್ಕಿದ ಹುಳಗಳು!

ಉತ್ತರ ಭಾರತದ ಹರ್ಯಾಣ, ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನ , ಮಧ್ಯಪ್ರದೇಶ ಮುಂತಾದ ಕಡೆ ಮಿಡತೆಗಳು ರೈತರ ಹೊಲಕ್ಕೆ ಧಾಳಿ ಮಾಡಿ ದ ವರದಿ ಇದೆ. ಈಗ ಅದು ಮಹಾರಾಷ್ಟ್ರದ  ನಾಗ್ಪುರ ಸುತ್ತಮುತ್ತ  ಇದೆಯಂತೆ. ಇನ್ನು ಇದು ಮಹಾರಾಷ್ಟ್ರದ ಗಡಿಯಾದ ಗುಲ್ಬರ್ಗಾಕ್ಕೆ ಬಂದರೆ ಏನು ಗತಿ ಎಂದು ರೈತರು ಆತಂಕದಲ್ಲಿದ್ದಾರೆ. ಅಂತದ್ದೇನೂ ಆಗುವುದಿಲ್ಲ. ಮೂಲದಲ್ಲಿ ಇದ್ದಷ್ಟು ಸಂಖ್ಯೆ ಮುಂದುವರಿದಂತೆ ಕಡಿಮೆಯಾಗಿದೆ. ಇನ್ನು ಕರ್ನಾಟಕಕ್ಕೆ ಬಂದಾಗ ಅದರ ಸಂಖ್ಯೆ ತುಂಬಾ ಕಡಿಮೆಯಾಗಬಹುದು.  ಈ ಮಿಡತೆಗೆಳು ನಾವು ಕರೆಯುವ ಗ್ರಾಸ್…

Read more

ಕಿಸಾನ್ ಕ್ರೆಡಿಟ್ ಕಾರ್ಡ್ ಸರಕಾರದ ಕೊಡುಗೆಯೇ ?

ಕೇಂದ್ರ ಸರಕಾರ  ಮೇ. 14-2020 , ರಂದು ವಿಶೇಷ ಪ್ಯಾಕೇಜ್  ಅಡಿಯಲ್ಲಿ 2.5 ಕೋಟಿ ಹೊಸ ಕೃಷಿಕರಿಗೆ  ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸುವ ಯೋಜನೆ ಹಾಕಿಕೊಂಡಿದೆ. ಬಹಳಷ್ಟು ಜನ ಈ ಕಿಸಾನ್ ಕ್ರೆಡಿಟ್ ಕಾರ್ಡ್ ಅಂದರೆ ಸರಕಾರ  ಸರಕಾರ  ಕೊಡುವ ಸವಲತ್ತು ಎಂದು ಭಾವಿಸಿದೆ. ಇದು ಹಾಗಲ್ಲ. ರೈತರು ಬ್ಯಾಂಕ್ ವ್ಯವಹಾರ ಮಾಡುವಾಗ ಹಣ  ತೆಗೆಯಲು ಆನುಕೂಲವಾಗುವಂತೆ ಕೊಡುವ ಕ್ರೆಡಿಟ್  ಕಾರ್ಡ್ ಇದು. ಇದರಲ್ಲಿ ನಿಮ್ಮ ಖಾತೆಯಲ್ಲಿ ಜಮಾ ಇದ್ದರೆ ಅದು ಮುಗಿಯುವ  ತನಕ  ಹಣ ತೆಗೆಯಬಹುದು….

Read more
ಗುಲಗುಂಜಿ ಹುಳ ಕೀಟ ಭಕ್ಷಕ

ಈ ಕೀಟಗಳಿದ್ದರೆ ಕೀಟನಾಶಕ ಬೇಕಾಗಿಲ್ಲ.

ನಮಗೆಲ್ಲಾ ಗೊತ್ತಿರುವಂತೆ ಗುಡ್ದಕೆ ಗುಡ್ಡ ಅಡ್ದ ಇದ್ದೇ ಇದೆ. ಪ್ರತೀಯೊಂದು ಜೀವಿಗೂ ಮತ್ತೊಂದು ವೈರಿ ಜೀವಿ ಇರುತ್ತದೆ. ಇದನ್ನು ಪ್ರಕೃತಿ ಸೃಷ್ಟಿ ಮಾಡಿರುತ್ತದೆ. ಯಾವುದು ಪ್ರಭಲವಾಗುತ್ತದೆಯೋ ಆಗ  ಅದರ ವೈರಿ ಜೀವಿ ಕಾಣಿಸಿಕೊಳ್ಳುತ್ತದೆ. ಇದನ್ನು ನಮ್ಮ ಹಿರಿಯರು ತನ್ನಷ್ಟಕೇ ಕಡಿಮೆಯಾಗುವ  ವಿಧಾನ ಎಂದಿರುವುದು. ನಿಜವಾಗಿ ಇದು ಮಿತಿ ಮೀರುವುದನ್ನು ಪ್ರಕೃತಿ ಹದ್ದುಬಸ್ತಿನಲ್ಲಿಡುವ ವ್ಯವಸ್ಥೆ. ನಮ್ಮಲ್ಲಿ ಹಲವು ಕೀಟಗಳು ಕಣ್ಮರೆಯಾಗಿ ಈಗ ಕೀಟನಾಶಕ ಅನಿವಾರ್ಯವಾಗಿದೆ. ಇಂದಿನ ನಮ್ಮ ಬೇಸಾಯ ಪದ್ದತಿ ಮತ್ತು ವಾತಾವರಣದ ಸ್ಥಿತಿಗತಿಯ ಏರು ಪೇರಿನಿಂದ ಇದೆಲ್ಲವೂ…

Read more

ರೈತರಿಗೆ ಕೇಂದ್ರ ಸರಕಾರದಿಂದ ಮುಷ್ಟಿ ಸಹಾಯ.

ಇಂದು ಗ್ರಾಮೀಣ ಭಾಗದ ಸಣ್ಣ – ಅತೀ ಸಣ್ಣ ರೈತರು, ಈಗಾಗಲೇ ಸರಾಸರಿ ತಲಾ 1 ಲಕ್ಷಕ್ಕೂ ಹೆಚ್ಚಿನ ಸಾಲದಲ್ಲಿ ಮುಳುಗಿದ್ದಾರೆ. ದೊಡ್ಡ ರೈತರ ಬದುಕೇ ಸಾಲ. ಇದರ ಮೇಲೆ ಇವರಿಗೆ ಮತ್ತೆ ಸಾಲ ಕೊಡುವ ಪ್ಲಾನ್ ನಲ್ಲಿದೆ ಕೇಂದ್ರ ಸರಕಾರ. ವಿಶೇಷ ಪ್ಯಾಕೇಜ್ ಮೂಲಕ ಸಾಲಕೊಟ್ಟು ಭಾರತದ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು ಸಾಧ್ಯವೇ ? ಇದರ ಪರಿಣಾಮ ಏನಾಗಬಹುದು? ಕೇಂದ್ರ ಸರಕಾರ ರೈತರ ಕಲ್ಯಾಣಕ್ಕಾಗಿ ಭಾರೀ ಸವಲತ್ತುಗಳನ್ನು ನೀಡಲಿದೆ ಎಂಬ  ಪ್ರತೀಯೊಬ್ಬ ರೈತರ ಆಶಯ …

Read more

ಅಡಿಕೆ ಬೆಲೆ ಕುಸಿಯುವ ಆತಂಕ ಇದೆ.

ಕ್ಯಾಂಪ್ಕೋ ಸಂಸ್ಥೆ, ಹಾಗೂ ಕೆಲವು ಖಾಸಗಿ ವ್ಯಾಪಾರಿಗಳು ಚಾಲಿ ಅಡಿಕೆ ಖರೀದಿಯ ಉತ್ಸಾಹದಲ್ಲಿದ್ದಾರೆ.  ಅತ್ತ ಕೆಂಪಡಿಕೆ ವ್ಯವಹಾರದಲ್ಲಿ ಶಿರಸ್ಸಿಯ TSS  ವ್ಯಾಪಾರಕ್ಕೆ ಇಳಿದು ಚಾಲಿಗೆ 32,000 ದಾಟಿಸಿ ಕೆಲವೇ ದಿನಗಳಲ್ಲಿ ಮತ್ತೆ 26,000 ಕ್ಕೆ ಇಳಿಸಿದೆ. ಎಲ್ಲಿಯೂ ಅಡಿಕೆ ಟೆಂಡರ್ ಆಗಿ ಮಾರಾಟ ಆಗಿಲ್ಲ. ಇದು ಬೆಲೆ ಸ್ಥಿತರೆಯ ಬಗ್ಗೆ ಆತಂಕ ಉಂಟು ಮಾಡುತ್ತಿದೆ. ಕೆಂಪಡಿಕೆಗೆ ನಾಲ್ಕು ದಿನಕ್ಕೆ ಹಿಂದೆ 32,000 ಕ್ಕೆ ಒಂದು ಬಿಡ್ಡಿಂಗ್ ನಡೆಯುವುದರಲ್ಲಿತ್ತು. ಆದರೆ  ಕೆಲವು ದೊಡ್ಡ ವ್ಯಾಪಾರೀ  ಕುಳಗಳ ಒತ್ತಡದಿಂದ ಅದು…

Read more

ಅಂತರ್ಜಲ ಬಳಕೆಗೂ ಬೇಕು – ಲಾಕ್ ಡೌನ್ .

ಒಂದುವರೆ ತಿಂಗಳ ಕಾಲ ಅಂತರ್ಜಲದೊಂದಿಗಿನ  ಅತ್ಯಾಚಾರಕ್ಕೆ ಸ್ವಲ್ಪ ಬಿಡುವಾಗಿತ್ತು. ಆದರೂ ರಾತ್ರೆ ಹೊತ್ತು ಹಳ್ಳಿಯ ಮೂಲೆಗಳಲ್ಲಿ ವ್ಯವಹಾರ ನಡೆಯುತ್ತಿತ್ತು. ಈಗ ಮತ್ತೆ ಅತ್ಯಾಚಾರ ಪ್ರಾರಂಭವಾಗಿದೆ. ಹಳ್ಳಿಯ ಪೆಟ್ರೋಲ್ ಪಂಪುಗಳ ಮುಂದೆ ಮೂರು ನಾಲ್ಕು ಬೋರ್ ಲಾರಿಗಳು ಮೊಕ್ಕಾಂ ಹೂಡಿವೆ. ಒಂದು ತಿಂಗಳು ಅಂತರ್ಜಲಕ್ಕೆ ಬಿಡುಗಡೆ ಸಿಕ್ಕಿದೆ. ಹಾಗೆಯೇ ವರ್ಷದಲ್ಲಿ 2-3 ತಿಂಗಳು ಬಿಡುವು ಕೊಟ್ಟರೆ ಅದೆಷ್ಟೋ ಅಂತರ್ಜಲ ಶೋಷಣೆ ಕಡಿಮೆಯಾಗಬಹುದು. ಅಂತರ್ಜಲದ ಕ್ಷೀಣಿಸುತ್ತಿದೆ: ನಮ್ಮಲ್ಲಿ ಒಂದಷ್ಟು ಜನ ಬೆಳೆಗಳ ಅವಶ್ಯಕತೆಗೆ  ಬೇಕಾದಷ್ಟೇ ಬಳಸಲು ಅಂತರ್ಜಲವನ್ನು ಆವಲಂಭಿಸಿಲ್ಲ. ಅದನ್ನು…

Read more
Suresh nayak on his farm

ರೈತರ ಉದ್ದಾರಕ್ಕೆ ಇದೊಂದೇ ಪರಿಹಾರ.

ರೈತನೊಬ್ಬ ತಾನು ಬೆಳೆದ ಉತ್ಪನ್ನವನ್ನು ತಾನೇ ಮಾರಿ ಸಮಾನ ಮನಸ್ಕರಿಗೂ ಮಾರುಕಟ್ಟೆ ಒದಗಿಸಿಕೊಟ್ಟಿರುವುದು ಬಹುಷಃ  ಇನ್ನೆಲ್ಲೂ ಇರಲಿಕ್ಕಿಲ್ಲ. ಇದು ಈ ಹಿಂದೆಯೂ ಆದ ಉದಾಹರಣೆ ಇಲ್ಲ. ಇದೊಂದು ಹೊಸ ಪರಿಕಲ್ಪನೆ. ಕೊರೋನಾ ಮಹಾಮಾರಿ ದೇಶದ ಅಸಂಖ್ಯಾತ ಜನರಿಗೆ ಬಾರೀ ತೊಂದರೆಯನ್ನು ಉಂಟು ಮಾಡಿತು. ಉದ್ದಿಮೆಗಳು ಮುಚ್ಚಿದವು. ಕೆಲಸಗಾರರು ಕೆಲಸ ಕಳೆದುಕೊಂಡರು. ರೈತರು ಬದುಕಿಗಾಗಿ ಬೆಳೆದ ಬೆಳೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬಂತಾಯಿತು. ಇಂತಹ ಸಂದರ್ಭದಲ್ಲಿ  ಒಬ್ಬ ಕೃಷಿಕ ಮಾಡಿದ ಸಾಧನೆ  ಮಾತ್ರ ಕೃಷಿಕರೆಲ್ಲರಿಗೂ ಅನುಕರಣೀಯ. ಹಿರಿಯಡ್ಕದ…

Read more
error: Content is protected !!