ಡ್ರಾಗನ್ ಹಣ್ಣಿನ ಬೆಳೆಯಿಂದ ರೈತರ ಆದಾಯ

ಡ್ರಾಗನ್ ಹಣ್ಣಿನ ಬೆಳೆಯಿಂದ ರೈತರ ಆದಾಯ ಹೆಚ್ಚಲಾರಂಭಿಸಿದೆ

ಡ್ರಾಗನ್ ಹಣ್ಣಿನ ಬೆಳೆಗೆ ಭಾರೀ ಮಹತ್ವ ಬರುತ್ತಿದ್ದು, ಮಾರುಕಟ್ಟೆಯಲ್ಲಿ ಬೇಡಿಕೆಯೂ ಉತ್ತಮವಾಗಿದೆ. ಈ ಬೆಳೆ ರೈತರ ಆದಾಯ ಹೆಚ್ಚಳಕ್ಕೆ ನೆರವಾಗುತ್ತಿದೆ. ನಮ್ಮ ದೇಶವಲ್ಲದೆ ಬೇರೆ ದೇಶಗಳಲ್ಲೂ ಡ್ರಾಗನ್ ಹಣ್ಣಿನ ಬೆಳೆ ಜನಪ್ರಿಅತೆ ಗಳಿಸುತ್ತಿದ್ದು, ಇದಕ್ಕೆ ಪ್ರಾಪಂಚಿಕ ಮಾರುಕಟ್ಟೆ ಇದೆ. ಇಲ್ಲೊಬ್ಬರು ಹೂವಿನ ಹಡಗಲಿಯ ಕಾಲ್ವಿ ಗ್ರಾಮದ ರೈತ  ಡ್ರಾಗನ್ ಹಣ್ಣಿನ ಬೆಳೆ ಬೆಳೆದು ಹೇಗೆ ಆದಾಯ ಹೆಚ್ಚಿಸಿಕೊಂಡರು ನೋಡೋಣ. ಕರ್ನಾಟಕ ರಾಜ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕಾಲ್ವಿ ಗ್ರಾಮದ ಬಣಕಾರ ಶಿವನಾಗಪ್ಪ ದೊಡ್ಡತೋಟಪ್ಪ( 65) ಒಬ್ಬ…

Read more
ಇಂದಿನಿಂದ 4 ದಿನ ಬೆಂಗಳೂರು ಕೃಷಿಕರನ್ನು ಆಹ್ವಾನಿಸುತ್ತದೆ.

ಇಂದಿನಿಂದ 4 ದಿನ  ಬೆಂಗಳೂರು ಕೃಷಿಕರನ್ನು ಆಹ್ವಾನಿಸುತ್ತದೆ. 

ಬೆಂಗಳೂರಿಗೆ ಕೃಷಿಕರು ಹೋಗಬೇಕಿದ್ದರೆ ಅಲ್ಲಿ ಅವರ ಆಕರ್ಷಣೆಯ ವಿಷಯ ವಸ್ತು ಇರಬೇಕು. ಇಲ್ಲಿನ ಕೃಷಿ ವಿಶ್ವ ವಿಧ್ಯಾನಿಲಯವು ಕೃಷಿ ಮೇಳದ ಮೂಲಕ ರಾಜ್ಯ ಹೊರ ರಾಜ್ಯದ ಕೃಷಿಕರನ್ನು ಆಹ್ವಾನಿಸುತ್ತಿದೆ. ಇಂದಿನಿಂದ 4 ದಿನ ನವೆಂಬರ್  2022  ರ ದಿನಾಂಕ 3 -4-5-6 ರ ಗುರುವಾರ, ಶುಕ್ರವಾರ, ಶನಿವಾರ  ಮತ್ತು ಭಾನುವಾರಗಳಂದು ಬೆಂಗಳೂರು ಕೃಷಿ ವಿಶ್ವ ವಿಧ್ಯಾನಿಲಯದಲ್ಲಿ  (ಜಿಕೆವಿಕೆ GKVK)  ನಡೆಸಲಾದ ಎಲ್ಲಾ ಕೃಷಿ, ತೋಟಗಾರಿಕೆ ಮುಂತಾದ  ತಂತ್ರಜ್ಞಾನಗಳನ್ನು ರೈತರಿಗೆ ತಿಳಿಸಿಕೊಡುವ ಉತ್ಸವ ಇದಾಗಿರುತ್ತದೆ. ರೈತ ಇಲ್ಲಿಗೆ ಭೇಟಿ…

Read more
ಅಡಿಕೆ ಧಾರಣೆ ನೀರಸ- ಮುಂದಿನ ಸ್ಥಿತಿ ಏನು

ಅಕ್ಟೋಬರ್ ತಿಂಗಳು ಅಡಿಕೆ ಧಾರಣೆ ನೀರಸ- ಮುಂದಿನ ಸ್ಥಿತಿ ಏನು?

ಅಕ್ಟೋಬರ್ ತಿಂಗಳಲ್ಲಿ ನವರಾತ್ರೆ. ದೀಪಾವಳಿ ಹಬ್ಬಗಳ ಕಾರಣ ಅಡಿಕೆ ಧಾರಣೆ ಏರಿಕೆ ಕಾಣಬಹುದು ಎಂಬ ಆಶಯ ಇತ್ತು. ಆದರೆ ಅದು ನೀರಸವಾಗಿ ಮುಂದುವರಿದಿದೆ. ಮುಂದೆ ಏರಿಕೆ ಆಗಬಹುದೇ ಅಥವಾ ಇಳಿಕೆಯೇ ಎಂಬ ಅನುಮಾನ  ಬೆಳೆಗಾರರನ್ನು ಸಹಜವಾಗಿ ಕಾಡುತ್ತಿದೆ. ಕೆಲವು ಬೆಳವಣಿಗೆಗಳ ಪ್ರಕಾರ ಕೆಂಪಡಿಕೆ ಧಾರಣೆ ಇನ್ನು ಒಂದೆರಡು ತಿಂಗಳ ಕಾಲ ಏರಿಕೆ ಆಗದೆ ಮುಂದುವರಿಯುವ ಸಾಧ್ಯತೆ ಇದೆ. ಚಾಲಿ ಸ್ವಲ್ಪ ಏರಿಕೆ ಆಗುವ ಲಕ್ಷಣ ಕಾಣಿಸುತ್ತಿದೆ. ಚಾಲಿಗೆ 500 ಆಗುತ್ತದೆ ಎಂದು ಕಾದು ಕಾದು ಕಡೆಗೆ 480-485…

Read more
ಭೂತಾನ್ ದೇಶದ ಅಡಿಕೆ – ಸಾಗರಕ್ಕೆ ಒಂದು ಕೊಡ ನೀರು ಚೆಲ್ಲಿದಂತೆ

ಭೂತಾನ್ ದೇಶದ ಅಡಿಕೆ – ಸಾಗರಕ್ಕೆ ಒಂದು ಕೊಡ ನೀರು ಚೆಲ್ಲಿದಂತೆ.

ಭಾರತ ಸರಕಾರ ನೆರೆಯ ಭೂತಾನ್ ನಿಂದ ಹಸಿ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಕುರಿತು ಅನುಮತಿ ನೀಡಿದೆ   ಇದು ನಮ್ಮ ದೇಶದ ಉತ್ಪಾದನೆಗೆ ಹೋಲಿಸಿದರೆ ಸಾಗರಕ್ಕೆ ಒಂದು ಕೊಡ ನೀರು ಚೆಲ್ಲಿದಂತೆ. ಸುದ್ದಿ  ಮಾತ್ರ ಭಾರೀ ಎಲ್ಲರಲ್ಲೂ ಆತಂಕವನ್ನು ಸೃಷ್ಟಿಸಿದೆ. ಭಾರತ ಸರಕಾರದ ವಿದೇಶಿ ವ್ಯಾಪಾರದ ನಿರ್ಧೇಶನಾಲಯದ (Directorate general of Foreign Trade ) ಈ ಆಮದಿಗೆ ಅನುಮತಿಸಿದೆ ಎನ್ನಲಾಗುತ್ತಿದೆ. ಈ ನಿರ್ಧೇಶನಾಲಯದ ಅಧಿಕೃತ ವೆಬ್ ಸೈಟ್ ನಲ್ಲಿ ಈ ಕುರಿತಂತೆ ಒಂದು ಸುತ್ತೋಲೆಯೂ ಇದೆ. ಹಾಗಾಗಿ…

Read more
ಅಡಿಕೆಯ ಧಾರಣೆ ಏನಾಗಬಹುದು? ಇಳಿಕೆಯೋ ಏರಿಕೆಯೋ

ಅಡಿಕೆಯ ಧಾರಣೆ ಏನಾಗಬಹುದು? ಇಳಿಕೆಯೋ ಏರಿಕೆಯೋ?

ಅಡಿಕೆ ಧಾರಣೆಯ ಈಗಿನ ಪರಿಸ್ಥಿತಿ ಬೆಳೆಗಾರರನ್ನು ಚಿಂತೆಗೀಡುಮಾಡಿದ್ದು, ಇಳಿಕೆಯಾದೀತೋ ಎಂಬ ಆತಂಕ ಉಂಟುಮಾಡಿದೆ. ಬೆಳೆಗಾರರು ಆತಂಕ ಪಡಬೇಕಾಗಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಈಗ ದರ ಇಳಿಕೆ ಆಗಿದೆ. ಮುಂದೆ ಇದು ಸರಿಯಾಗುತ್ತದೆ. ಈ ಸಮಯದಲ್ಲಿ ದರ ಇಳಿಕೆ ಆಗುವುದು ಸಹಜವಾಗಿದೆ.ಈಗ ಕೃಷಿಕರಿಗೆ ಹಣದ ಅಗತ್ಯ ಇರುತ್ತದೆ. ಬೆಳೆಗಾರರಿಗೆ ಮಾರಾಟ ಮಾಡದೆ ನಿರ್ವಾಹ ಇಲ್ಲದ ಸ್ಥಿತಿ ಇರುತ್ತದೆ. ಅದಕ್ಕೆ ಅನುಗುಣವಾಗಿ ದರ ಇಳಿಕೆ ಆಗುತ್ತದೆ. ಈಗ ಅದದ್ದೂ ಇದೆ. ಬೆಳೆಗಾರರೆಲ್ಲರೂ ಅಧಿಕ ಬೆಲೆ ಸಿಗಬೇಕು ಎಂದು ಬಯಸುತ್ತಾರೆ. ಅದಕ್ಕಾಗಿ ಸಾಧ್ಯವಾದಷ್ಟು…

Read more
ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ

ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ ಕಡಿಮೆ -ಮಾರುಕಟ್ಟೆಗೆ ಮಾಲು ಇಲ್ಲ.

ಕೆಂಪು ರಾಶಿ ಅಡಿಕೆ ಮಾರುಕಟ್ಟೆ ಹೇಗಾದರೂ ಒಮ್ಮೆ 55,000 ತಲುಪಿತು. ಆದರೆ ಶುಕ್ರವಾರದ ಮಾರುಕಟ್ಟೆ, ಭಾನುವಾರದ ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಹಾಗೂ ಇಂದು 12-09-2022 ಸಾಗರ, ಶಿವಮೊಗ್ಗದಲ್ಲಿನ ವ್ಯವಹಾರ ನೋಡುವಾಗ ಸ್ವಲ್ಪ ಸ್ವಲ್ಪ ಹಿಂದೆ ಬರುವ ಲಕ್ಷಣ ಕಾಣಿಸುತ್ತಿದೆ.  ನಿಖರವಾಗಿ ಹಿಂದೆ ಬಂತು ಎಂಬಂತಿಲ್ಲ. ಇನ್ನೂ ಒಂದೆರಡು ದಿನಗಳ ಮಾರುಕಟ್ಟೆ ಸ್ಥಿತಿ ನೋಡಿ ಅಂದಾಜು ಮಾಡಬಹುದಷ್ಟೇ. ಚಾಲಿ ಮಾರುಕಟ್ಟೆಯಲ್ಲಿ ಖಾಸಗಿಯವರು ಸ್ವಲ್ಪ ಮುಂದೆ ಬಂದಿದ್ದಾರೆ. ಅಡಿಕೆ ಬರುತ್ತಿಲ್ಲ ಎಂಬ ಕಾರಣಕ್ಕೆ ದರ ಏರಿಸಲಾಗಿದೆ ಎನ್ನುತ್ತಾರೆ. ಚಾಲಿ ದರ ಏರಿಕೆ-…

Read more
ಎನ್ ಸಿ ಪಟೇಲ್ ರವರಿಗೆ ಗೌರವ ಡಾಕ್ಟರೇಟ್

ಎನ್ ಸಿ ಪಟೇಲ್ ರವರಿಗೆ ಗೌರವ ಡಾಕ್ಟರೇಟ್ – ಯೋಗ್ಯ ವ್ಯಕ್ತಿಗೆ ಯೋಗ್ಯ ಪುರಸ್ಕಾರ.

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇವರು ತಮ್ಮ  56 ನೇ ಘಟಿಕೋತ್ಸವದಲ್ಲಿ ಎನ್ ಸಿ ಪಟೇಲ್  ಎಂಬ  ಅ ತ್ಯುತ್ತಮ ಕೃಷಿಕರಿಗೆ ಗೌರವ ಡಾಕ್ಟರೇಟ್ ನೀಡಿದ್ದು ಯೋಗ್ಯ ವ್ಯಕ್ತಿಗೆ ಯೋಗ್ಯ ಪುರಸ್ಕಾರ ಎನ್ನಿಸಿದೆ. ಶ್ರಿಯುತ  ಎನ್ ಸಿ ಪಟೇಲ್ ಇವರು ತಮ್ಮ ಇಡೀ ಜೀವಮಾನವನ್ನೇ ಕೃಷಿಗಾಗಿ ಮುಡಿಪಾಗಿಟ್ಟವರು. ತೋಟಗಾರಿಕಾ ಬೆಳೆಗಳಾದ ಮಾವು, ದ್ರಾಕ್ಷಿ, ದಾಳಿಂಬೆ, ಸೀಬೆ, ನೇರಳೆ ಮುಂತಾದ ಬೆಳೆಗಳನ್ನು ಅಚ್ಚುಕಟ್ಟಾಗಿ ಬೆಳೆಯುತ್ತಿರುವ ಮಾದರಿ ರೈತ. ನಾಗದಾಸನಹಳ್ಳಿ ಚಿಕ್ಕಕೆಂಪಣ್ಣ ಪಟೇಲ್ (Nagadasanahalli Chikakempanna patel) ಬೆಂಗಳೂರು ಹೊರವಲಯದ ಯಲಹಂಕದ…

Read more
ಚಾಲಿ ಅಡಿಕೆ ತುಸು ಹಿಮ್ಮುಖ- ಕೆಂಪು ರಾಶಿ ಮಾರುಕಟ್ಟೆ ಸ್ಥಿರ

ಚಾಲಿ ಅಡಿಕೆ ತುಸು ಹಿಮ್ಮುಖ- ಕೆಂಪು ರಾಶಿ ಮಾರುಕಟ್ಟೆ ಸ್ಥಿರ.

ಚಾಲಿ ಅಡಿಕೆ ಧಾರಣೆಯಲ್ಲಿ ಸ್ವಲ್ಪ ಹಿಮ್ಮುಖವಾಗಿದೆ ಎಂಬ ಸುದ್ದಿ. ಹಾಗೆಂದು ದೊಡ್ಡ ಇಳಿಕೆ ಆಗಿಲ್ಲ. ದರ ಮೇಲೆ ಏರಲಿಲ್ಲ ಎಂದಷ್ಟೇ ಹೇಳಬಹುದು. ಕ್ಯಾಂಪ್ಕೋ ತನ್ನ ಸೂಚಿತ ಮಾಮೂಲಿ ದರವನ್ನೇ ಮುಂದುವರಿಸಿದೆ. ಆದರೆ ಗುಣಮಟ್ಟದ ಹೆಸರಿನಲ್ಲಿ ಅಡಿಕೆ ಖರೀದಿಯಲ್ಲಿ  ಸ್ವಲ್ಪ ಹಿಮ್ಮುಖ ಅಷ್ಟೇ. ಒಳ್ಳೆಯ ಅಡಿಕೆಗೆ ಖಾಸಗಿಯವರು 48,000-48500  ತನಕ ಖರೀದಿ ಮಾಡುತ್ತಿದ್ದಾರೆ. ಪರಿಸ್ಥಿತಿ  ಪಿತೃ ಪಕ್ಷ ಮುಗಿಯುವ ತನಕ ಹೀಗೇ ಮುಂದುವರಿಯಲಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಬೆಳೆಗಾರರು ನಿರಾಶರಾಗಬೇಕಾಗಿಲ್ಲ. ಅಡಿಕೆಗೆ ಬೇಡಿಕೆ ಇದೆ. ಬೆಲೆಯೂ ಬರುತ್ತದೆ….

Read more
ಸಕ್ಕರೆ ಹೆಚ್ಚಾಗಿದೆ- ರೈತರು ಕಬ್ಬು ಬೆಳೆಯಬೇಡಿ

ಸಕ್ಕರೆ ಉತ್ಪಾದನೆ ಹೆಚ್ಚಿದೆ- ರೈತರು ಕಬ್ಬು ಬೆಳೆಯಬೇಡಿ. ಸರಕಾರದ ಹೇಳಿಕೆ.

ದೇಶದಲ್ಲಿ ಸಕ್ಕರೆ ಉತ್ಪಾದನೆ ಹೆಚ್ಚಾಗಿದೆ. ಹಾಗಾಗಿ ಕಬ್ಬು ಬೆಳೆಯುವ ರೈತರು ಇನ್ನು ಬೆಳೆಯಬೇಡಿ. ಬೆಳೆ ಪರಿವರ್ತನೆ ಮಾಡಿ, ಇಂಧನ ಮತ್ತು ಶಕ್ತಿ ಉತ್ಪಾದನೆ ಕಡೆಗೆ ಗಮನಹರಿಸಬೇಕು ಎಂಬುದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಮಂತ್ರಿಗಳಾದ ನಿಥಿನ್ ಗಡ್ಕರಿಯವರ ಮಾತು.  ಭಾರತ ದೇಶದಲ್ಲಿ ಕಬ್ಬು ಬೆಳೆ ಹೆಚ್ಚಾಗುತ್ತಿದ್ದು, ಎಲ್ಲರೂ ಸಕ್ಕರೆ ಕಾರ್ಖಾನೆಗೆ ಕಬ್ಬು ಹಾಕುತ್ತಾರೆ. ಉತ್ಪಾದಿಸಿದ ಸಕ್ಕರೆ ಮಿಗತೆಯಾಗಿ ಕಾರ್ಖಾನೆಗಳು ನಷ್ಟಕ್ಕೊಳಗಾಗುತ್ತಿವೆಯಂತೆ. ನಮ್ಮ ದೇಶದಲ್ಲಿರುವ ಬಹುತೇಕ ಸಕ್ಕರೆ ಕಾರ್ಖಾನೆಗಳು ಈಗ ಸಕ್ಕರೆ ಉತ್ಪಾದನೆಗಾಗಿ ಕೆಲಸ ಮಾಡುತ್ತಿಲ್ಲ. ಬದಲಿಗೆ…

Read more
ಡಿಜಿಟಲೀಕರಣದ ಪ್ರಯೋಜನ ಪಡೆಯುತ್ತಿರುವವರಲ್ಲಿ ವಯಸ್ಕರೂ ಇದ್ದಾರೆ.

ಡಿಜಿಟಲೀಕರಣದಲ್ಲಿ ಹೊಸ ಆಯಾಮವನ್ನು ಸೃಷ್ಟಿಸಿದ ನಮ್ಮ ದೇಶದ ಜನಸಮೂಹ.

ಭಾರತ ಸರಕಾರದ ಡಿಜಿಟಲೀಕರಣ  ದೇಶದಲ್ಲಿಹೊಸ ಆಯಾಮವನ್ನು ಸೃಷ್ಟಿಸಿದೆ. ನಮ್ಮ ಜನ ಇದಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ನಮ್ಮೂರಿನ ಜನ ತರಕಾರಿ ಅಂಗಡಿಗೆ ಹೋದರೂ ಈಗ ಕೇಳುತ್ತಾರೆ, ಪೆಟಿಯಂ ಇದೆಯಾ,ಎಂದು.ಅಂಗಡಿಯವನಿಗೂ ಇದು ಒಂದು ಘನತೆಯ ವಿಷಯವಾಗಿದೆ.ಪಾನ್ ಬೀಡಾ ಅಂಗಡಿಯಲ್ಲೂ ಆನ್ ಲೈನ್ ಪೇಮೆಂಟ್.  ಒಂದಲ್ಲ ಎರಡು ಮೂರು ಕಡೆ QR ಕೋಡ್ ಹಾಳೆ ನೇತಾಡಿಸಿರುತ್ತಾರೆ. ಅಂಗಡಿಯವರು ಹೇಳುತ್ತಾರೆ, ಹಿಂದೆ ನಾಳೆ ಕೊಡುತ್ತೇನೆ ಎಂದು ಸಾಲ ಕೊಂಡೋಗುವ ಪ್ರಶ್ಣೆ ಇಲ್ಲ.  ಫೋನ್ ಹಿಡಿದು ತಟ್ಟನೆ ಹಣ ಹಾಕುತ್ತಾರೆ. ನಿಜ ಹಿಂದೆ ನಾವೆಲ್ಲಾ ಅಂಗಡಿಯಿಂದ…

Read more
error: Content is protected !!