areca palm

ಮಳೆ ಬಂತೆಂದು ಚಿಂತೆ ಮಾಡಬೇಡಿ. ಇದರಿಂದ ಬೆಳೆ ನಷ್ಟ ಆಗದು.

ಈಗ ಮಳೆ ಬಂದು ಅಡಿಕೆಯಲ್ಲಿ ಮುಂದಿನ ಫಸಲು ಕಡಿಮೆಯಾಗಿ ನಷ್ಟ ಆಗಬಹುದು ಎಂದು ಆತಂಕದಲ್ಲಿರುವ ಬೆಳೆಗಾರರಿಗೆ ಇದು ಕಿವಿ ಮಾತು.ಬೆಳೆ ನಷ್ಟ ಆಗದು. ಅನುಕೂಲವೇ ಆಗುವುದು. ಎಪ್ರೀಲ್ ತಿಂಗಳಲ್ಲಿ ಮಳೆ ಬರುವುದು ಇತ್ತೀಚಿನ ದಿನಗಳಲ್ಲಿ ಅಪರೂಪವಾದರೂ ಹಿಂದೆ ಬಹುತೇಕ ವಿಶೇಷ ದಿನಗಳ ಸಂದರ್ಭದಲ್ಲಿ ಮಳೆ ಆಗುತ್ತಿತ್ತು. ಕಳೆದ ವರ್ಷ ಇದಕ್ಕಿಂತಲೂ ಬೇಗ ಮಳೆ  ಬಂದಿದೆ. ಆದರೆ  ಫಸಲಿಗೆ ತೊಂದರೆ ಆಗಿರಲಿಲ್ಲ.  ಈ ವರ್ಷ ಎಪ್ರೀಲ್ ನಲ್ಲಿ ಮಳೆ ಧಾರಾಕಾರವಾಗಿ ಬಂದಿದೆ. ತಾಪಮಾನ  ತುಂಬಾ ಇಳಿಕೆಯಾಗಿದೆ. ಇಂತಹ ವಾತಾವರಣದಿಂದ…

Read more
ಹಳ್ಳಿಯ ಮನೆಗಳಲ್ಲಿ ರಾಶಿ ರಾಶಿ ದುಂಬಿ

ಹಳ್ಳಿಯ ಮನೆಗಳಿಗೆಲ್ಲಾ ನುಗ್ಗಿದೆ- ‘ಕೆಲ್ಲು’ ಎಂಬ ಈ ಅನಾಹುತಕಾರಿ ದುಂಬಿ.

ಹಳ್ಳಿಗಳಲ್ಲಿ, ಹಳ್ಳಿಗೆ ತಾಗಿದ ಪಟ್ಟಣಗಳಲ್ಲಿ ಈಗ ಬೆಳಕಿನ ದೀಪವನ್ನು ಹುಡುಕಿ ಬರುವ ಹಿಂಡು ಹಿಂಡು ದುಂಬಿಗಳು (ಕೆಲ್ಲು) ಜನರಲ್ಲಿ ಆತಂಕವನ್ನು ಉಂಟು ಮಾಡಿದೆ. ಕೆಲವು ಜನ ಇದು ಯಾವುದೋ ಮಾರಿ. ದೆವ್ವದ ಉಪಟಳ ಎಂದು ಮಾತಾಡುತ್ತಿದ್ದಾರೆ. ವಾಸ್ತವವಾಗಿ ಇದು ನಾವೇ ಮಾಡಿಕೊಂಡ ಆವಾಂತರ. ಬಹುತೇಕ ಎಲ್ಲಾ ಮನೆಗಳಲ್ಲೂ ಇದು ಇದೆ. ರಸ್ತೆ ಸಂಚರಿಸುವಾಗ ಮೈಗೆ ತಾಗಿ ಮನೆ ಮನೆಗೆ ಪ್ರಸಾರವಾಗುತ್ತಿದೆ.ಮನೆಯ ಕಿಟಕಿ ಬಾಗಿಲು ಸಂದು, ಬಟ್ಟೆ ಬರೆ, ಪುಸ್ತಕಗಳು, ಹಂಚಿನ ಛಾವಣಿಯ ರೀಪು ಪಕ್ಕಾಸುಗಳಲ್ಲಿ, ಗೊಡೆ ಸಂದುಗಳಲ್ಲಿ,…

Read more
ಅಡಿಕೆಗೆ ಸಿಂಪರಣೆ

ಅಡಿಕೆಗೆ ಬಳಸುತ್ತಿರುವ ಕೀಟ- ಶಿಲೀಂದ್ರ ನಾಶಕ ಕೆಲಸ ಮಾಡುವುದಿಲ್ಲವಂತೆ. 

ಭಾರತ ಸರಕಾರದ ಕೃಷಿ ಮಂತ್ರಾಲಯವು ಕೆಲವು ಕೀಟನಾಶಕಗಳನ್ನು ಬ್ಯಾನ್ ಮಾಡುವ ಬಗ್ಗೆ ಪ್ರಸ್ತಾಪ ಎತ್ತಿದೆ. ಕಾರಣ ಅವು ಕೆಲಸ ಮಾಡುವುದಿಲ್ಲವಂತೆ. ಸುಮಾರು 27 ಬೆಳೆಸಂರಕ್ಷಗಳನ್ನು ಬ್ಯಾನ್ ಮಾಡಲು ಮುಂದಾಗಿದೆ. ಹೌದು ನಾವು ಅಡಿಕೆ ಮಿಳ್ಳೆ ಉದುರದಂತೆ ತಡೆಯಲು ಬಳಸುವ ಕೆಲವು ಕೀಟನಾಶಕ, ಶಿಲೀಂದ್ರ ನಾಶಕಗಳೂ ಸೇರಿದಂತೆ  ಬಹಳಷ್ಟು ಕೃಷಿ ಒಳಸುರಿಗಳು ಬಳಸಿಯೂ  ಕೆಲಸ ಮಾಡದೆ ನಮ್ಮ ಜೇಬು ಖಾಲಿ ಮಾಡಿದ್ದಷ್ಟೇ. ಅದೆಷ್ಟೋ ರೈತರು ಬೆಳೆಗಳಿಗೆ ಬರುವ ರೋಗಕ್ಕೆ, ಕೀಟಕ್ಕೆ ಔಷಧಿ ಸಿಂಪಡಿಸುತ್ತಾರೆ. ಒಂದನ್ನು ಸಿಂಪಡಿಸಿ ಫಲಿತಾಂಶ ಸಿಗದಿದ್ದರೆ…

Read more
ಅಡಿಕೆ

ವರ್ಷಾಂತ್ಯದಲ್ಲೂ ಸ್ಥಿರತೆ ಉಳಿಸಿಕೊಂಡ ಅಡಿಕೆ ಧಾರಣೆ- ಮುಂದೆ ಇದೆ ಚಾನ್ಸ್.

ಸಾಮಾನ್ಯವಾಗಿ ಮಾರ್ಚ್ ವರ್ಷಾಂತ್ಯದಲ್ಲಿ ದರ ಇಳಿಕೆ ಸಾಮಾನ್ಯ. ಆದರೆ ಈ ವರ್ಷ ಹಾಗೆ ಆಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಮುಂದಿನ ತಿಂಗಳಲ್ಲಿ ಚಾಲಿ- ಕೆಂಪಡಿಕೆ ಎರಡೂ ಏರಿಕೆ ಆಗಲಿದೆ. ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಸೂಚನೆ ದರ ಸ್ಥಿರತೆಯಲ್ಲಿ ಗಮನಿಸಬಹುದು.  ಚಾಲಿ ಎರಡು ತಿಂಗಳಿಂದ ಸ್ಥಿರವಾಗಿತ್ತು. ಈಗ  ಸಾಗರ, ಹೊಸನಗರ, ಇಲ್ಲೆಲ್ಲಾ ಸಿಪ್ಪೆ ಗೋಟಿಗೆ ಬೇಡಿಕೆ ಬರಲಾರಂಭಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಚಾಲಿ ದರ ಏರಿಕೆ ಪ್ರರಾಂಭವಾಗಿದೆ. ಸಿಪ್ಪೆ ಗೋಟು ದರ ಏರಿಕೆ ಚಾಲಿಗೆ ಬೇಡಿಕೆಯ ಸೂಚನೆಯಾಗಿದ್ದು, ಚಾಲಿ…

Read more
ಅಡಿಕೆ

ಅಡಿಕೆ ಧಾರಣೆ ಏನಾಗಬಹುದು? ಯಾಕೆ ಏನೂ ಸಂಚಲನ ಇಲ್ಲ ?

ಅಡಿಕೆ ಧಾರಣೆ ಕಳೆದ ಎರಡು ತಿಂಗಳಿಂದ ನಿಂತ ನೀರಿನ ತರಹ ಮುಂದುವರಿದಿದೆ. ಯಾವ ಏರಿಕೆಯೂ ಇಲ್ಲ. ಇಳಿಕೆಯೂ ಇಲ್ಲ. ಕರಾವಳಿಯ ಅಡಿಕೆ ಬೆಳೆಗಾರರು ಅಡಿಕೆ ಕೊಡುವುದನ್ನು ಕಡಿಮೆಮಾಡಿದ್ದಾರೆ. ಕೆಂಪಡಿಕೆ ಮಾಡುವ ಕಡೆಯೂ ಜನ ದರ ಏರಿಕೆಗೆ ಕಾಯುತ್ತಿದ್ದಾರೆ. ಮಾರುಕಟ್ಟೆಗೆ ಬರುವ ಅಡಿಕೆ ಪೂರ್ತಿ ಚೇಣಿ ಮಾಡಿದವರ ಕಮಿಟ್ಮೆಂಟ್ ಹಾಗೂ ಮುಂದಿನ ಚೇಣಿ ವಹಿಸಿಕೊಳ್ಳುವುದಕ್ಕೇ ಬೇಕಾದ  ಫಂಡ್ ಕ್ರೋಡೀಕರಣಕ್ಕೆ ಎಂಬ ಸುದ್ದಿಗಳಿವೆ. ಇಷ್ಟಕ್ಕೂ ಮುಂದೆ ಅಡಿಕೆ ಧಾರಣೆ ಏನಾಗಬಹುದು, ಏನಾದರೂ ಸಂಚಲನ ಉಂಟಾಗಬಹುದೇ ಎಂಬ ಕುತೂಹಲ ಎಲ್ಲರದ್ದೂ. ಅಡಿಕೆ…

Read more
ಕೊಡದಲ್ಲಿ ನೀರು ಸೇದಿ ಕುಡಿಯುವ ಭಾಗ್ಯ

ಜಲ –ಇದು ಲಕ್ಷ್ಮಿ . ಜಲವನ್ನು ಸಂರಕ್ಷಿಸೊಣ- ಗೌರವಿಸೋಣ.

ನಮಗೆ ಬಾವಿ ತೋಡಿದಾಗ ಹೇರಾವರಿ ನೀರು ಸಿಕ್ಕಿದರೆ ಅದು ನಮ್ಮ ಮನೆಗೆ ಲಕ್ಷ್ಮಿಯ ಕೃಪೆ ದಯಪಾಲಿಸಿದೆ ಎಂದರ್ಥ. ಲಕ್ಷ್ಮಿ ಒಲಿದಳೆಂದು ಸ್ವೇಚ್ಚಾಚಾರ ಮಾಡಿದರೆ ಯಾವುದೇ ಸಮಯದಲ್ಲಿ ಆಕೆ ನಿರ್ಗಮಿಸಿದರೂ ಅಚ್ಚರಿ ಇಲ್ಲ. ಇದು ನೀರು ಸಂಪತ್ತು ಎಲ್ಲದಕ್ಕೂ ಅನ್ವಯ.ಭಯ ಭಕ್ತಿ  ಗೌರವದಿಂದ ಪ್ರಾಕೃತಿಕ ಕೊಡುಗೆಗಳನ್ನು ಅನುಭವಿಸಬೇಕು.   ವಿಶ್ವ ಜಲ ದಿನ ಮಾರ್ಚ್ 22. ಜೀವ ಜಲದ ಪ್ರಾಮುಖ್ಯತೆ ಬಗ್ಗೆ ನಾವೆಲ್ಲರೂ ಜಾಗೃತರಾಗಬೇಕು. ವರ್ಷ ವರ್ಷವೂ ನಾವು ಜಲ ದಿನ ಎಂದು ಈ ದಿನವನ್ನು ಆಚರಿ ಸುತ್ತೇವೆ….

Read more
ಕೆಂಪಡಿಕೆ

ಕೆಂಪಡಿಕೆ ಬಲ- ಚಾಲಿಹಿನ್ನೆಡೆ- ಇಂದು 08-03-2022 ಅಡಿಕೆ ಧಾರಣೆ.

ಹಿಂದಿನ ಲೆಕ್ಕಾಚಾರಗಳು ಹಾಗೂ ಪರಿಸ್ಥಿತಿಗಳಂತೆ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಅತ್ಯಲ್ಪ ಪ್ರಮಾಣದ ಅಡಿಕೆ ಮಾತ್ರ ಉತ್ತಮ ದರಕ್ಕೆ ಖರೀದಿಯಾಗುತ್ತಿದ್ದು, ಪ್ರಕಟಣೆಯ ದರಕ್ಕೂ ಕೊಳ್ಳುವ ದರಕ್ಕೂ ಸಂಬಂಧವೇ ಇಲ್ಲದಾಗಿದೆ. ಆದರೆ ಕೆಂಪಡಿಕೆ ಮಾರುಕಟ್ಟೆ ಮಾತ್ರ  ಬಲ ಕಳೆದುಕೊಳ್ಳದೆ ಉಳಿದಿದೆ. ಬಹುತೇಕ ಕೆಂಪಡಿಕೆ ಉಳ್ಳವರು ಉತ್ತಮ ದರದ ನಿರೀಕ್ಷೆಯಲ್ಲಿ ಮಾರಾಟ ಮಾಡುವುದನ್ನು ಮುಂದೂಡುತ್ತಿದ್ದಾರೆ.ಈ ವರ್ಷ ಹಿಂದೆಲ್ಲಾ ಆಗುತ್ತಿದ್ದಂತೆ ಕೆಂಪಡಿಕೆ ದರವನ್ನು ಹಿಂಬಾಲಿಸುತ್ತಾ ಚಾಲಿ ದರ ಮುಂದುವರಿಯಲಿದೆ ಎಂಬ ವದಂತಿಗಳಿವೆ.   ನಿನ್ನೆ ದಿನಾಂಕ 07-03-2022 ರಂದು ಕೆಂಪಡಿಕೆಯ…

Read more
ಅಡಿಕೆ ರಾಸಿ

ಮುಂದಿನ ತಿಂಗಳಲ್ಲಿ ಅಡಿಕೆ ಧಾರಣೆ ಹೇಗಾಗಬಹುದು?

ಜನವರಿ 2022 ಅಡಿಕೆ ಬೆಳೆಗಾರರು ಹೊಸ ಚಾಲಿ ಅದೂ ಸಾಧಾರಣ ಗುಣಮಟ್ಟದ ಅಡಿಕೆಗೆ ಕಿಲೋ 430-440  ತನಕ ಪೆಡೆದಿದ್ದರು. ಫೆಬ್ರವರಿಯಲ್ಲಿ ಧಾರಣೆ ಕುಂಟುತ್ತಾ  ಸಾಗಿದೆ.  ಕ್ಯಾಂಪ್ಕೋ ಬೆಂಬಲದಲ್ಲಿ ದರ ಬೀಳಲಿಲ್ಲ ಎನ್ನಲಾಗುತ್ತಿದೆ. ಖಾಸಗಿಯವರು ದರ ಇಳಿಸಿ, ನಾವು ಸ್ಪರ್ಧೆಗೆ ಇಲ್ಲ ಎಂದು ಹಿಂದೆ ಸರಿದಿದ್ದಾರೆ. ಈ ಎಲ್ಲಾ ಕಾರಣಗಳಿಂದ ಮುಂದಿನ ತಿಂಗಳು ಚಾಲಿ ಅಡಿಕೆ ದರ ಸ್ವಲ್ಪ ಹಿಂದೆ ಬರುವ ಸಾಧ್ಯತೆ ಕಂಡು ಬರುತ್ತಿದೆ. ಆದಾಗ್ಯೂ ಸ್ವಲ್ಪ ಪ್ರಮಾಣದಲ್ಲಿ  ಆಮದು ಆಗಿದೆಯಾದರೂ, ಇದನ್ನು ಸರಕಾರದ ಗಮನಕ್ಕೆ ತಂದು…

Read more
ಕೆಂಪಡಿಕೆ ರಾಸೀ

ಕೆಂಪಡಿಕೆ ಉಮೇದು – ಚಾಲಿ ನಡುಕ- ಕರಿಮೆಣಸು ಕುಸಿತ.22-02-2022 ಮಾರುಕಟ್ಟೆ.

ಈ ವರ್ಷದ ನಿರೀಕ್ಷೆಯಂತೆ ಕೆಂಪಡಿಕೆ ದರಕ್ಕೆ ಅಂಜಿಕೆ ಇಲ್ಲ. ಇದು ಏರಿಕೆಯಾಗುವುದು ತಡವಾದರೂ ಇಳಿಕೆ ಆಗುವ ಸಾಧ್ಯತೆ ತುಂಬಾ ಕಡಿಮೆ. ಚಾಲಿ ಮಾತ್ರ ಈ ವರ್ಷ ಭಾರೀ ಏರಿಕೆಯ ನಿರೀಕ್ಷೆ ಇಲ್ಲ. ಹಾಗೆಂದು ಬಾರೀ ಇಳಿಕೆಯೂ ಆಗದು. ಇಂದು ದಿನಾಂಕ 22-02-2022 ಮಂಗಳವಾರ ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅಡಿಕೆ, ಕರಿಮೆಣಸು, ಕೊಬ್ಬರಿ, ರಬ್ಬರ್, ಕಾಫೀ ದರ ಹೇಗಿತ್ತು ಗಮನಿಸಿ. ಚಾಲಿ ದರ ಖಾಸಗಿಯವರ ಸ್ಪರ್ಧೆ ಇಲ್ಲದೆ ಅಲ್ಲಾಡುತ್ತಿಲ್ಲ. ಹಾಗೆಂದು ಕರಾವಳಿಯಲ್ಲಿ ಅಡಿಕೆ ಬೆಳೆಗಾರರು…

Read more
ಕರಿಮೆಣಸು ಜಂಪ್

ಕರಿಮೆಣಸಿನ ಬೆಲೆ ಸಡನ್ ಜಂಪ್- ಕ್ವಿಂಟಾಲಿಗೆ ರೂ. 3000 ಏರಿಕೆ: ಅಡಿಕೆ ಕುಂಟು ನಡೆ.

ಕರಿಮೆಣಸಿನ ಧಾರಣೆ ಅನಿಶ್ಚಿತತೆ ಬಗ್ಗೆ ಈ ಹಿಂದೆಯೇ ಹೇಳಲಾಗಿತ್ತು. ಕೊಚ್ಚಿನ್ ಮಾರುಕಟ್ಟೆಯಲ್ಲಿ  ಸ್ವಲ್ಪ ದರ ಇಳಿದಾಗ ಇಲ್ಲಿ ಭಾರೀ ದರ ಇಳಿಸಲಾಗಿತ್ತು. ಆದರೆ ರಾಜ್ಯದ ಪ್ರಮುಖ ಬೆಳೆ ಪ್ರದೇಶಗಳಾದ ಚಿಕ್ಕಮಗಳೂರು, ಮೂಡಿಗೆರೆ ಸಕಲೇಶಪುರಗಳಲ್ಲಿ ಅಂತಹ ದರ ಕುಸಿತ ಆಗಿರಲಿಲ್ಲ. ಇಂದು ಎಲ್ಲಾ ಕಡೆ ಕರಿಮೆಣಸಿನ ಧಾರಣೆ ಕ್ವಿಂಟಾಲಿಗೆ 2500 -3000 ತನಕ ಸಡನ್ ಜಂಪ್ ಆಗಿದೆ. ಕೊಚ್ಚಿನ್ ಮರುಕಟ್ಟೆಯ ಏರಿಕೆ ಇದಕ್ಕೆಲ್ಲಾ ಕಾರಣ ಎನ್ನಲಾಗುತ್ತಿದೆ.ಚಾಲಿ ಅಡಿಕೆ ಯಾಕೋ ಕುಂಟು ನಡೆಯಲ್ಲಿದೆ. ಕರಿಮೆಣಸಿಗೆ ಇನ್ನು ಎರಡು ಮೂರು ವರ್ಷ…

Read more
error: Content is protected !!