ಬೋರ್ಡೋ ದ್ರಾವಣ ಸಿಂಪಡಿಸಿದ ಮರ

ಬೋರ್ಡೋ ದ್ರಾವಣ ತಾಯಾರಿಕೆ ವಿಧಾನ ಇದು.

ಸುಣ್ಣ ಮತ್ತು ಮೈಲು ತುತ್ತೆಯನ್ನು ಸರಿಯಾದ ಪ್ರಮಾಣದಲ್ಲಿ ಮಿಶ್ರಣ ಮಾಡಿ ತಯಾರಿಸುವ ದ್ರಾವಣಕ್ಕೆ ಬೋರ್ಡೋ  ದ್ರಾವಣ (Bordeaux mixture )ಎಂದು ಹೆಸರು. ಇದು  ಕೊಳೆಯುವ ರೋಗಕ್ಕೆ ಕಾರಣವಾದ  ಶಿಲೀಂದ್ರದ ಬೀಜಾಣುಗಳನ್ನು ಮೊಳಕೆಯೊಡೆಯದಂತೆ  ಪ್ರತಿಬಂಧಿಸುವ ಶಕ್ತಿಯನ್ನು ಹೊಂದಿದೆ. ಪ್ರಾನ್ಸ್ ದೇಶದ ಬೊರ್ಡೋ ಎಂಬ ಪ್ರದೇಶದಲ್ಲಿ ದ್ರಾಕ್ಷಿ ತೋಟಗಳಲ್ಲಿ ಸಸ್ಯಾಣುಗಳಿಂದ ಉಂಟಾಗುವ ರೋಗವನ್ನು ನಿಯಂತ್ರಿಸಲು ಈ ಸಾಮಾಗ್ರಿಗಳ ಪಾಕವನ್ನು ಬಳಸಲಾಗುತ್ತಿತ್ತಂತೆ. ಅದನ್ನು ಮೈಸೂರು ಪ್ರಾಂತ್ಯದಲ್ಲಿ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಪರಿಚಯಿಸಿದವರು  ಲೆಸ್ಲಿ ಸಿ ಕೋಲ್ ಮನ್ Leslie Charles Coleman…

Read more

ಕೊಳೆ ರೋಗ ಬಾರದಿರುವಂತೆ ಮುನ್ನೆಚ್ಚರಿಕೆ.

ಕೊಳೆ ರೋಗಕ್ಕೆ ಕಾರಣವಾದ ಶಿಲೀಂದ್ರ ನಮ್ಮ ವಾತಾವರಣದಲ್ಲಿ ಎಲ್ಲಾ  ಕಡೆ ಬೀಜಾಣು ರೂಪದಲ್ಲಿ ಇರುತ್ತದೆ, ಇದು ಅನುಕೂಲ ಪರಿಸ್ಥಿತಿ  ಕೂಡಿ ಬಂದಾಗ ಬೀಜಾಂಕುರವಾಗುತ್ತದೆ. ಸಂತಾನಾಭಿವೃದ್ದಿ ಹೊಂದಿ ಅಡಿಕೆಯ ಎಳೆ ಕಾಯಿಗಳಿಗೆ ಹಾನಿ ಮಾಡಿ ಬೆಳೆ ನಷ್ಟಕ್ಕೆ  ಕಾರಣವಾಗುತ್ತದೆ. ಪ್ರಾರಂಭದಲ್ಲೇ ಬೀಜಾಂಕುರವನ್ನು ತಡೆದರೆ  ಪರಿಣಾಮ ಹೆಚ್ಚು. ತಜ್ಞರು ಕೊಳೆ ಔಷಧಿಯನ್ನು ಮುಂಗಾರು ಮಳೆ ಪ್ರಾರಂಭವಾಗುವ ಮುಂಚೆಯೇ ಅಡಿಕೆ ಗೊನೆಗಳಿಗೆ ಸಿಂಪರಣೆ ಮಾಡಬೇಕು ಎನ್ನುತ್ತಾರೆ. ನಾವು ಇನ್ನೂ ಅಡಿಕೆ  ಮಿಡಿಗಳು ಸಣ್ಣದಿವೆ. ಅದಕ್ಕೆ ಹೇಗಪ್ಪಾ ಔಷಧಿ ತಗಲುವುದು ಎಂದು ಸಾಧ್ಯವಾದಷ್ಟು…

Read more
Mulching to whole ground

ಅಡಿಕೆ – ಕಬ್ಬು ಬೆಳೆಯ ಬೇರು ದುಂಬಿ ನಿಯಂತ್ರಣ.

ಅಡಿಕೆಗೆ ಮಾತ್ರ ಬೇರು ಹುಳದ ಕಾಟ ಅಲ್ಲ. ಕಬ್ಬು, ಹಿಪ್ಪು ನೇರಳೆ ಹೀಗೆ ಬಹಳಷ್ಟು ಬೆಳೆಗಳಿಗೆ ಈ ಹುಳದ ಕಾಟ ಇದೆ. ಇದರ ದುಂಬಿಗಳು ಈಗ ಹೊರಗೆ ಹಾರಾಡುವ ಸಮಯ. ಈಗ ಅದನ್ನು ನಿಯಂತ್ರಿಸುವ ಉಪಾಯ ಇದು.ಮರದ ಆರೋಗ್ಯಕ್ಕೆ  ಮತ್ತು ಬೆಳೆವಣಿಗೆಗೆ  ಆಧಾರವೇ ಅದರ ಬೇರು. ಆ ಬೇರನ್ನು ತಿನ್ನುವ ಒಂದು ಹುಳ ಅದನ್ನು ಏಳಿಗೆಯಾಗಲು ಬಿಡುವುದಿಲ್ಲ. ಕೆಲವು ಮಣ್ಣಿನಲ್ಲಿ ಈ ಬೇರು ಹುಳದ ಸ್ತೊಂದರೆ ಹೆಚ್ಚು. ಮತ್ತೆ ಕೆಲವು ಕಡೆ ಕಡಿಮೆ. ಬೇರು ಹುಳಗಳನ್ನು  ಒಡಿಸದಿದ್ದರೆ…

Read more
ಸುಳಿ ಕೊಳೆಗೆ ತುತ್ತಾದ ಅಡಿಕೆ ಸಸಿ

ಅಡಿಕೆ – ಸುಳಿ ಕೊಳೆಯುವುದಕ್ಕೆ ಕಾರಣ ಮತ್ತು ಪರಿಹಾರ.

ಕಳೆದ ಕೆಲವು ವರ್ಷಗಳಿಂದ ಅಡಿಕೆ ಬೆಳೆಗಾರರು ಸಸಿ/ ಮರದ  ಸುಳಿ ಕೊಳೆಯುವ/ ಬುಡ ಕೊಳೆಯುವ ತೊಂದರೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಎದುರಿಸುತ್ತಿದ್ದಾರೆ. ಹವಾಮಾನ ವೆತ್ಯಾಸ ಮತ್ತು ಇನ್ನಿತರ ಕಾರಣಗಳಿಂದ ಇದು ಆಗುತ್ತದೆ. ಸಂಜೆ  ಮಳೆ ಬರುತ್ತದೆ, ಹಗಲು ಭಾರೀ ಪ್ರಖರವಾದ ಬಿಸಿಲು. ಈ ಸನ್ನಿವೇಶದಲ್ಲಿ  ಅಡಿಕೆ, ತೆಂಗು ಮುಂತಾದ ಸಸಿ/ ಮರದ ಎಳೆಯ ಸುಳಿ ಭಾಗದಲ್ಲಿ ಒಂದು ಶಿಲೀಂದ್ರ ಬೆಳೆದು ಅದು ಆ ಭಾಗವನ್ನು ಕೊಳೆಯುವಂತೆ  ಮಾಡಿ ಮರದ ಮೊಳೆಕೆ ತನಕ ವ್ಯಾಪಿಸಿ ಗಿಡವನ್ನು  ಸಾಯುವಂತೆ  ಮಾಡುತ್ತದೆ. ಇದು ಈಗ ಎಲ್ಲಾ…

Read more

ಅಡಿಕೆ ಮರದಲ್ಲಿ ಅಂಟು ಸ್ರವಿಸುವುದಕ್ಕೆ ಕಾರಣ ಮತ್ತು ಪರಿಹಾರ.

ಇತ್ತೀಚಿಗೆ ಮಲೆನಾಡು ಮತ್ತು ಬಯಲುಸೀಮೆಯ ಕೆಲವು ತೋಟಗಳಲ್ಲಿ ಅಡಿಕೆ ಮರದಕಾಂಡ ಮತ್ತು ಸೋಗೆಯ ದಿಂಡಿನಿಂದ ಅಂಟು (ಮೇಣದಂತಹ ಪದಾರ್ಥ) ಸೋರುತ್ತಿರುವುದು ಕಂಡುಬಂದಿದೆ.ಇದನ್ನು ಎಂದೂ ಕಂಡಿಲ್ಲದ ಬೆಳೆಗಾರರು ಸಹಜವಾಗಿ ಗೊಂದಲಕ್ಕೀಡಾಗಿದ್ದಾರೆ. ಈ ವಿದ್ಯಮಾನದ ಬಗ್ಗೆ ಲಭ್ಯವಿರುವ ವೈಜ್ಞಾನಿಕ ಮಾಹಿತಿಯನ್ನು ಈ ಲೇಖನದ ಮೂಲಕ ಬೆಳೆಗಾರ ಅನುಕೂಲಕ್ಕಾಗಿ ನೀಡಲಾಗಿದೆ. ಅಂಟು ಸೋರಲು ಕಾರಣವೇನು? ಕೇವಲ ಅರ್ಧ ಸೆಂಟಿಮೀಟರ್‍ ಉದ್ದವಿರುವ ಯೂಪ್ಲಾಟಿಪಸ್ ಪ್ಯಾರಲ್ಲೆಲಸ್ ಎಂಬ ಕೀಟ. ಇದು  ಅಡಿಕೆ ಮರದಕಾಂಡ ಮತ್ತು ಸೋಗೆಯ ದಿಂಡನ್ನು ಕೊರೆದು ಒಳಗೆ ಪ್ರವೇಶಿಸಿಸುತ್ತದೆ. ಕೀಟವು ಪ್ರವೇಶಿಸಿದ…

Read more

ಅಡಿಕೆಯ ಮಿಡಿಗಳು ಯಾಕೆ ಉದುರುತ್ತವೆ?

ಬೇಸಿಗೆಯಲ್ಲಿ ಏನೇನೋ ಕಸರತ್ತು ಮಾಡಿ ಹೂಗೊಂಚಲಿನಲ್ಲಿ ಮಿಡಿಗಳನ್ನು ಉಳಿಸಿರುತ್ತೇವೆ. ಆದರೆ ಅದು ಒಂದೆರಡು ಮಳೆ ಬಂದ ತಕ್ಷಣ ಉದುರಲಾರಂಭಿಸುತ್ತದೆ. ಕೆಲವು ಮುಂಚೆಯೇ ಉದುರುತ್ತದೆ. ಇದಕ್ಕೆ ಹಲವು ಕಾರಣಗಳಿದ್ದು, ರೈತರು ತಮ್ಮಲ್ಲಿ ಯಾವ ಸ್ಥಿತಿ ಇದೆಯೋ ಅದಕ್ಕನುಗುಣವಾಗಿ ಉಪಚಾರ ಮಾಡಿ ಅದನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಬಹುದು. ಮಳೆ ಒಂದು ಬಂದರೆ ಸಾಕು, ಅಡಿಕೆ ಮರದಲ್ಲಿ ಮಿಡಿಗಳು ಉದುರುತ್ತವೆ. ಕೆಲವೊಮ್ಮೆ ಒಂದೆರಡು  ಸಂಖ್ಯೆಯಲ್ಲಿ ಉದುರಿದರೆ  ಕೆಲವೊಮ್ಮೆ ಬಹುತೇಕ ಉದುರುತ್ತದೆ. ಅಂತಹಹ ಮಿಡಿಗಳಲ್ಲಿ ಆ ದಿನ ಉದುರಿದ ಮಿಡಿಯನ್ನು ಒಮ್ಮೆ ಸರಿಯಾಗಿ…

Read more

ಅಡಿಕೆ ಬೆಲೆ ಕುಸಿಯುವ ಆತಂಕ ಇದೆ.

ಕ್ಯಾಂಪ್ಕೋ ಸಂಸ್ಥೆ, ಹಾಗೂ ಕೆಲವು ಖಾಸಗಿ ವ್ಯಾಪಾರಿಗಳು ಚಾಲಿ ಅಡಿಕೆ ಖರೀದಿಯ ಉತ್ಸಾಹದಲ್ಲಿದ್ದಾರೆ.  ಅತ್ತ ಕೆಂಪಡಿಕೆ ವ್ಯವಹಾರದಲ್ಲಿ ಶಿರಸ್ಸಿಯ TSS  ವ್ಯಾಪಾರಕ್ಕೆ ಇಳಿದು ಚಾಲಿಗೆ 32,000 ದಾಟಿಸಿ ಕೆಲವೇ ದಿನಗಳಲ್ಲಿ ಮತ್ತೆ 26,000 ಕ್ಕೆ ಇಳಿಸಿದೆ. ಎಲ್ಲಿಯೂ ಅಡಿಕೆ ಟೆಂಡರ್ ಆಗಿ ಮಾರಾಟ ಆಗಿಲ್ಲ. ಇದು ಬೆಲೆ ಸ್ಥಿತರೆಯ ಬಗ್ಗೆ ಆತಂಕ ಉಂಟು ಮಾಡುತ್ತಿದೆ. ಕೆಂಪಡಿಕೆಗೆ ನಾಲ್ಕು ದಿನಕ್ಕೆ ಹಿಂದೆ 32,000 ಕ್ಕೆ ಒಂದು ಬಿಡ್ಡಿಂಗ್ ನಡೆಯುವುದರಲ್ಲಿತ್ತು. ಆದರೆ  ಕೆಲವು ದೊಡ್ಡ ವ್ಯಾಪಾರೀ  ಕುಳಗಳ ಒತ್ತಡದಿಂದ ಅದು…

Read more
Weed less arecanut garden

ಕಳೆ ಹೆಚ್ಚು ಇದ್ದಲ್ಲಿ ಬೆಳೆ ತುಂಬಾ ಕಡಿಮೆ.

ಬಹಳ ಜನ ಬೆಳೆಗಳಿಗೆ ನೀರು ಕೊಟ್ಟಷ್ಟೂ ಒಳ್ಳೆಯದು ಎಂಬು ಭಾವಿಸುತ್ತಾರೆ. ಮಳೆಗಾಲದ ಮಳೆಗೆ ನೆಲ ಮತ್ತು ಸಸ್ಯಗಳು ಹೇಗೆ ಇರುತ್ತವೆಯೋ ಅದೇ  ರೀತಿ ಬೇಸಿಗೆಯಲ್ಲಿಯೂ ಇರುವಂತೆ ನೋಡಿಕೊಳ್ಳುತ್ತಾರೆ.  ನಮ್ಮ ಈ ವಿಧಾನದಿಂದಾಗಿ ಭೂಮಿಯಲ್ಲಿ ವರ್ಷದಿಂದ ವರ್ಷಕ್ಕೆ ಫಲವತ್ತತೆ ಕ್ಷೀಣಿಸುತ್ತದೆ. ಇಳುವರಿಯೂ ಕಡಿಮೆಯಾಗುತ್ತದೆ. ಇದು ನಮ್ಮೆಲ್ಲರ ಸಮಸ್ಯೆ: ಸಾಮಾನ್ಯವಾಗಿ ನಿರಂತರ 3-4  ವರ್ಷ ಗೊಬ್ಬರ  ಕೊಡುತ್ತಿದ್ದರೆ , ಒಂದು ವರ್ಷ ಏನೂ ಗೊಬ್ಬರ ಕೊಡದಿದ್ದರೂ ಬೆಳೆಯಲ್ಲಿ ಇಳುವರಿ ಕಡಿಮೆಯಾಗಬಾರದು. ಆದರೆ ಆಗುತ್ತದೆ. ಕಾರಣ ನಾವು ವರ್ಷ ವರ್ಷ ಕೊಡುವ…

Read more
Good yield of arecanut

ಅಡಿಕೆ – ಅಧಿಕ ಇಳುವರಿಗೆ ಹೀಗೆ ಗೊಬ್ಬರ ಕೊಡಿ.

ಬಹಳ ಜನ ಅಡಿಕೆ ಬೆಳೆಯಲ್ಲಿ ಭವಿಷ್ಯ ಕಾಣುವವರಿದ್ದಾರೆ. ಅಧಿಕ ಇಳುವರಿ ಬೇಕು, ಯಾವ ಗೊಬ್ಬರ ಕೊಡಬೇಕು ಎಂಬ ಮಾಹಿತಿಗೆ ಕಾಯುತ್ತಿದ್ದಾರೆ. ಇಂಥ ಮಾಹಿತಿ ಇಲ್ಲಿದೆ. ಒಂದು ಅಡಿಕೆ ಮರದ  ಗರಿಷ್ಟ ಉತ್ಪಾದಕತೆ  ಸುಮಾರು  ಮೂರು ಗೊನೆ. ಒಂದು ಗೊನೆಯಲ್ಲಿ ಸರಾಸರಿ 1 ಕಿಲೋ ಅಡಿಕೆ. ನಾಲ್ಕು  ಕಿಲೋ ಅಡಿಕೆ ಬರುವುದು ಅಪರೂಪ. ಸುಮಾರು 2 -3 ಕಿಲೋ ಅಡಿಕೆ ಉತ್ಪಾದನೆ ಪಡೆಯಲು  ವ್ಯವಸ್ಥಿತವಾದ  ಬೇಸಾಯ ಕ್ರಮ ಮತ್ತು ಪೋಷಕಾಂಶ ನಿರ್ವಹಣೆ ಅಗತ್ಯ. ಯಾವ ನಿರ್ವಹಣೆ: ಅಡಿಕೆ ಮರಗಳ…

Read more

ಅಡಿಕೆ ಮರಗಳು ಹೀಗೆ ಯಾಕೆ ಆಗುತ್ತವೆ?

ಸಹಜ ಸ್ಥಿತಿಯಲ್ಲಿ ಅಡಿಕೆ ಮರದ ಗಂಟುಗಳು  ಒಂದೇ ನೇರಕ್ಕೆ  ಸುತ್ತು ಬಂದಿರಬೇಕು.ಆದರೆ  ಕೆಲವು ತೊಟಗಳಲ್ಲಿ ಕೆಲವು ಮರಗಳಲ್ಲಿ ಅದರ ಗಂಟು ವಿಚಿತ್ರವಾಗಿ ಗರಗಸದ ತರಹ ಬೆಳೆಯುತ್ತವೆ. ಇದ್ದು ರೋಗವೋ ಎಂಬ ಸಂದೇಹ ರೈತರಲ್ಲಿದೆ. ಇದು ರೋಗವಲ್ಲ.  ಪೊಷಕಾಂಶದ ಅಸಮತೋಲನ. ಗರಗಸ ಗಂಟು ಹೇಗೆ ಆಗುತ್ತದೆ? ಅದು 2005 ನೇ ಇಸವಿ. ಬಂಟ್ವಾಳ ತಾಲೂಕು, ಕಾಅವಳ ಮುಡೂರು ಗ್ರಾಮದ ಕೆದ್ದಳಿಕೆ ಗಣೇಶ್ ಭಟ್ ಇವರ ತೋಟಕ್ಕೆ  ಹೋಗಿದ್ದೆ. ಆಗ ಅವರು ತಮ್ಮ ಅಡಿಕೆ ಮರಗಳಿಗೆ ಕೊಡುತ್ತಿದ್ದ ಗೊಬ್ಬರ ಹರಳಿನ ಹಿಂಡಿ. ಹನಿ…

Read more
error: Content is protected !!