ಮಾತ್ರೆ ಬಳಸದೆ ಅಡಿಕೆ ದಾಸ್ತಾನು ಇಡುವ ವಿಧಾನ

ಮಾತ್ರೆ ಬಳಸದೆ ಅಡಿಕೆ ದಾಸ್ತಾನು ಇಡುವ ವಿಧಾನ

ಅಡಿಕೆ ದಾಸ್ತಾನು ಇಡುವವರು ಉಗ್ರಾಣ ಕೀಟದ ತೊಂದರೆ ಉಂಟಾಗದಂತೆ ತಡೆಯಲು ಅಲ್ಯೂಮೀನಿಯಂ ಫೋಸ್ಫೇಡ್ ಮಾತ್ರೆಗಳನ್ನು ಬಳಸುತ್ತಿದ್ದು, ಅದು ದಾಸ್ತಾನು ಇಟ್ಟ ಅಡಿಕೆಯನ್ನು ನಿಜವಾಗಿಯೂ ರಕ್ಷಿಸುತ್ತದೆಯೇ ಅಥವಾ ಅದು ಒಂದು ಭ್ರಮೆಯೇ? ಮಾತ್ರೆಗಳನ್ನು ಬಳಸದೆ ದಾಸ್ತಾನು ಇಟ್ಟುರೆ ಅಡಿಕೆ ಹಾಳಾಗದಂತೆ ತಡೆಯುವ ವಿಧಾನ ಯಾವುದು?  ಅಡಿಕೆಯನ್ನು ಸುಲಿದು ಇಟ್ಟರೆ ಯಾವಾಗ ಬೆಲೆ ಬರುತ್ತದೆಯೋ ಆಗ ಮಾರಾಟ ಮಾಡಲು ಅನುಕೂಲವಾಗುತ್ತದೆ. ಅದಕ್ಕಾಗಿ ಹೆಚ್ಚಿನ ಬೆಳೆಗಾರರು ಸುಲಿಯುವವರು ಸಿಕ್ಕಾಗ ಪೂರ್ತಿ ಅಡಿಕೆಯನ್ನು ಸುಲಿದು ಗಾಳಿಯಾಡದಂತೆ  ಗೋಣಿ ಚೀಲಕ್ಕೆ ಪ್ಲಾಸ್ಟಿಕ್ ಹಾಕಿ ದಾಸ್ತಾನು…

Read more
ಅಡಿಕೆ ಗಿಡ ಮಾಡಲು ಮೊಳಕೆ ಬರಿಸುವ ಸೂಕ್ತ ವಿಧಾನ

ಅಡಿಕೆ ಗಿಡ ಮಾಡಲು ಮೊಳಕೆ ಬರಿಸುವ ಸೂಕ್ತ ವಿಧಾನ.

ಅಡಿಕೆ ಗಿಡ ಮಾಡುವಾಗ ಬೀಜದ ಗೋಟು ಅಥವಾ ಹಣ್ಣು ಅಡಿಕೆಯನ್ನು ಗರಿಷ್ಟ ಪ್ರಮಾಣದಲ್ಲಿ ಮೊಳಕೆ ಬರುವಂತೆ ಮಾಡಲು ಕೆಲವು ಸರಳ ಕ್ರಮಗಳನ್ನು ಅನುಸರಿಸಬೇಕು. ಸಾಮಾನ್ಯವಾಗಿ ನಾವು 100 ಬೀಜಗಳನ್ನು ಮೊಳಕೆ ಬರಿಸಲು ಇಟ್ಟರೆ ಅದರಲ್ಲಿ  60-80 ರಷ್ಟು ಮಾತ್ರ ಮೊಳಕೆ ಪಡೆಯುತ್ತೇವೆ. ಇದು ನಾವು ಮೊಳಕೆಗೆ ಇಡುವ ಕ್ರಮ ಸರಿಯಿಲ್ಲದೆ ಆಗುವ ಸಮಸ್ಯೆ. ಸರಿಯಾದ ಮೊಳಕೆಗೆ ಇಡುವ ವಿಧಾನ ಹೀಗಿದೆ. ಅಡಿಕೆ ತೋಟ ಇದ್ದವರು ಹಣ್ಣಾಗಿ ಬಿದ್ದು, ಹೆಕ್ಕಲು ಸಿಕ್ಕದೆ ಅವಿತುಕೊಂಡು ಬಾಕಿಯಾದ ಅಡಿಕೆ ಹೇಗೆ ತನ್ನಷ್ಟೆಕ್ಕೆ…

Read more
ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣಿಕೆ. ಮುಂದಿದೆ ಭಾರೀ ಅನಿಶ್ಚಿತತೆ

ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣಿಕೆ. ಮುಂದಿದೆ ಭಾರೀ ಅನಿಶ್ಚಿತತೆ.

ಅಡಿಕೆ ಮಾರುಕಟ್ಟೆಯಲ್ಲಿ ಭಾರೀ ತಲ್ಲಣಿಕೆ ಉಂಟಾಗಿದ್ದು, ವ್ಯಾಪಾರಿಗಳಿಗೇ ಅಂಜಿಕೆ ಹುಟ್ಟಿದೆ. ಎಲ್ಲಾ ಅಡಿಕೆ ವರ್ತಕರಿಗೂ ಮುಂದೇನಾಗುವುದೋ ಎಂಬ ಚಿಂತೆ ಉಂಟಾಗಿದೆ. ಇರುವ ದಾಸ್ತಾನನ್ನು ಹೇಗಾದರೂ ವಿಲೇವಾರಿ ಮಾಡುವ ಚಿಂತೆಯಲ್ಲಿದ್ದಾರೆ. ಖರೀದಿದಾರರು ಭಾರೀ ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ಧಾರಣೆ ಕುಸಿತವೂ ಆಗಬಹುದು. ಹೀಗೆಯೇ ಮುಂದುವರಿಯಲೂ ಬಹುದು.   ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಚೋಲ್ ಅಡಿಕೆ ಬೇಡ ಎಂಬ ಸ್ಥಿತಿ ಉಂಟಾಗಿ ಅಘೋಷಿತ ದರ ಕುಸಿತ ಉಂಟಾಗಿದೆ. ಖರೀದಿದಾರರಲ್ಲಿ ಭಾರೀ ಪ್ರಮಾಣದ ಸ್ಟಾಕು ಇದೆ ಎಂಬ ವರ್ತಮಾನ ಇದೆ….

Read more
ಚಳಿ ಇಳಿಮುಖ – ರಾಶಿ - ಚಾಲಿ 50,000!

ಉತ್ತರ ಭಾರತದ ಚಳಿ – ರಾಶಿ 50,000!- ಚಾಲಿ ಅನುಮಾನ.

ಉತ್ತರ ಭಾರತದಲ್ಲಿ ಚಳಿ ಹೆಚ್ಚಾದಾಗ ಸಂಸ್ಕರಣಾ ಉದ್ದಿಮೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕೆಲಸ ನಡೆಯದ ಕಾರಣ ರಾಶಿ ಮತ್ತು ಚಾಲಿ ಎರಡಕ್ಕೂ ಬೇಡಿಕೆ ಕಡಿಮೆಯಾಗಿತ್ತು. ಈಗ  ಚಳಿ ಕಡಿಮೆಯಾಗಲಿಲ್ಲವಾದರೂ ಕೆಂಪಡಿಕೆ ಮತ್ತೆ ಚೇತರಿಸಿಕೊಳ್ಳಲಾರಂಭಿಸಿದೆ. ಚಾಲಿ ಸ್ಟಾಕು ಹೆಚ್ಚು ಇರುವ ಕಾರಣ ತಕ್ಷಣಕ್ಕೆ ಅನುಮಾನ ಎನ್ನುತ್ತಾರೆ. ಚಳಿ ಇದ್ದರೂ ಅಡಿಕೆಗೆ ಮತ್ತೆ ಬೇಡಿಕೆ ಪ್ರಾರಂಭವಾಗಿದೆ. ಬೆಲೆ ಚೇತರಿಕೆಯ  ಹಾದಿಯಲ್ಲಿದೆ. ಗುಟ್ಕಾ ಇತ್ಯಾದಿ ಅಡಿಕೆ ಸೇರಿಸಿದ ಉತ್ಪನ್ನ ತಯಾರಿಸುವಾಗ ಅವು ತೇವಾಂಶ ಎಳೆದುಕೊಳ್ಳಬಾರದು.  ವಿಶೇಷ ಚಳಿ, ಇಬ್ಬನಿ ಇದ್ದಾಗ ಅವುಗಳ ಸಂಸ್ಕರಣೆಗೆ…

Read more
ಅಡಿಕೆ ಬೆಳೆಗಾರೇ ಆತಂಕ ಬೇಡ- ಉತ್ಪಾದನೆ ಹೆಚ್ಚಾಗಿ ಬೆಲೆ ನೆಲಕಚ್ಚುವ ಸಾಧ್ಯತೆ ಇಲ್ಲ

ಅಡಿಕೆ ಬೆಳೆಗಾರೇ ಆತಂಕ ಬೇಡ- ಉತ್ಪಾದನೆ ಹೆಚ್ಚಾಗಿ ಬೆಲೆ ನೆಲಕಚ್ಚುವ ಸಾಧ್ಯತೆ ಇಲ್ಲ.

ಬಹಳಷ್ಟು ಅಡಿಕೆ ಬೆಳೆಗಾರರು, ತಜ್ಞರು ಅಡಿಕೆ ಬೆಳೆಪ್ರದೇಶ ವಿಸ್ತರಣೆ ಆಗಿ ಮುಂದೇನು ಎಂದು ಆತಂಕದಲ್ಲಿದ್ದಾರೆ. ಆದರೆ ಅಂತಹ ಆತಂಕದ ಅಗತ್ಯವಿಲ್ಲ. ಬೆಳೆ ಹೆಚ್ಚಾದರೆ ಈಗಿರುವ ಬೆಲೆ ಸ್ವಲ್ಪ ಕಡಿಮೆಯಾಗಬಹುದು. ಅಲ್ಲದೆ ಕೆಲವು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಪ್ರಾಕೃತಿಕ ಅನುಕೂಲ  ಇಲ್ಲದೆ ಬೆಳೆ ಇದ್ದರೂ ಉತ್ಪತ್ತಿ ಹೆಚ್ಚಾಗಲಾರದು. ಈ ಹಿಂದೆಯೂ ಅಡಿಕೆ ಬೆಳೆ ಪ್ರದೇಶ ವಿಸ್ತರಣೆ ಆದಾಗಲೂ ಇದೇ ಮಾತನ್ನು ಎಲ್ಲರೂ ಹೇಳುತ್ತಿದ್ದರು. ಎಲ್ಲರ  ಭವಿಶ್ಯವೂ , ಉಪದೇಶವೂ ಹುಸಿಯಾಗಿದೆ. ಅಡಿಕೆ ಬೆಳೆ ಪ್ರದೇಶ ಎಲ್ಲೆಲ್ಲಾ ವಿಸ್ತರಿಸಲ್ಪಡುತ್ತದೆ ಎಂದರೆ…

Read more
ಅಡಿಕೆ ಕ್ರಯ ಏರಲಿದೆ- ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ

ಅಡಿಕೆ ಕ್ರಯ ಏರಲಿದೆ-  ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ.

ಯಾವ ಲೆಕ್ಕಾಚಾರಕ್ಕೂ ಸಿಗದ ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆಯತ್ತ ಮುಖಮಾಡಿದೆ. ಸಾಮಾನ್ಯವಾಗಿ ವಸ್ತುವೊಂದರ ಬೆಲೆ ಬೇಡಿಕೆ ಮತ್ತು ಪೂರೈಕೆಯನ್ನು ಅವಲಂಭಿಸಿ ಹೆಚ್ಚು ಕಡಿಮೆ ಆಗುತ್ತಿರುತ್ತದೆ. ಆದರೆ ಅಡಿಕೆ ಹಾಗಿಲ್ಲ. ಬೆಳೆ ಹೆಚ್ಚಾದರೂ ಬೆಲೆ ಏರಬಹುದು. ಬೆಳೆ ಕಡಿಮೆಯಾದರೂ ಬೆಲೆ ಏರದೆ ಇರಬಹುದು. ಇದೆಲ್ಲಾ ಅಡಿಕೆ ಮಾರುಕಟ್ಟೆಯಲ್ಲಿ ಯಾವಾಗಲೂ ನಡೆಯುತ್ತಿರುವಂತದ್ದು.ವರ್ಷದುದ್ದಕ್ಕೂ ಗುಟ್ಕಾ ಫ್ಯಾಕ್ಟರಿ ನಡೆಯುತ್ತಿರುತ್ತದೆ. ಗುಟ್ಕಾ ತಿನ್ನುವವರು, ಪಾನ್ ತಿನ್ನುವವರು ಅದಕ್ಕೆ ರಜೆ / ವಿರಾಮ ಕೊಡುವ ಕ್ರಮವೇ ಇಲ್ಲ. ಆದರೂ  ಬೆಲೆ ಮಾತ್ರ ಒಮ್ಮೊಮ್ಮೆ ಏರುತ್ತಾ ಹೋಗುತ್ತದೆ….

Read more
ಎಲೆ ಚುಕ್ಕೆ ರೋಗ ಔಷದೋಪಚಾರ – ತಿಳಿದು ಮಾಡದಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು

ಎಲೆ ಚುಕ್ಕೆ ರೋಗ ಉಪಚಾರ – ತಿಳಿದು ಮಾಡದಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು.

ಎಲೆ ಚುಕ್ಕೆ ರೋಗಕ್ಕೆ ಸಿಕ್ಕ ಸಿಕ್ಕ ಔಷದೋಪಚಾರ ಮಾಡಬೇಡಿ. ಯಾರೋ ಹೇಳಿದರು ಎಂದು ಅದನ್ನು ಸಿಂಪಡಿಸುವುದು, ಅಥವಾ ನಾವೇ ಪ್ರಯೋಗ ಮಾಡಿ ನೋಡುವುದು ಮಾಡುವುದರ ಬದಲು ಸ್ವಲ್ಪ ಯೋಚಿಸಿ ಅಥವಾ ಈ ಬಗ್ಗೆ ಸ್ವಲ್ಪ ತಿಳಿದವರಲ್ಲಿ ಕೇಳಿಕೊಳ್ಳಿ. ರೋಗಗಳಿಗೆ ಕೆಲವು ಔಷಧಿಗಳು ನಿರೋಧಕ ಶಕ್ತಿ ಪಡೆದಿರಬಹುದು ಅಥವಾ ಅದು ಸಂಬಂಧಿಸಿದ ರೋಗಾಣುವಿಗೆ ಸೂಕ್ತ ಔಷದೋಪಚಾರ ಆಗಿರದೇ ಇರಬಹುದು. ಹಾಗಾಗಿ ಹುರುಳಿಲ್ಲದ ಸಲಹೆಗಳಿಗೆ ಮಾನ್ಯತೆ ಕೊಡುವ ಬದಲು ಸ್ವಲ್ಪ ನೀವೇ ವಿಮರ್ಶೆ ಮಾಡಿಕೊಳ್ಳಿ. ಒಬ್ಬರು ಎಲೆ ಚುಕ್ಕೆ ರೋಗ…

Read more
ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ತೋಟ ಮಾಡುವವರು  ಹಿಂದೆ ಇಂತಹ ಸಸಿ ಒಳ್ಳೆಯಯದು, ಇದನ್ನು ಆಯ್ಕೆ ಮಾಡಬೇಕು ಎಂದೆಲ್ಲಾ ಮುಂಜಾಗ್ರತಾ ಕ್ರಮ ಅನುಸರಿಸುತ್ತಿದ್ದರು. ಈಗಿನ ಪರಿಸ್ಥಿತಿಯಲ್ಲಿ ಗಮನಿಸಬೇಕಾದದ್ದು ಗಿಡದ ತಳಿ, ಬೆಳವಣಿಗೆ ಲಕ್ಷಣ ಮಾತ್ರವಲ್ಲದೆ ಗಿಡದ ಆರೋಗ್ಯವೂ ಸಹ. ಎಳೆ ಗಿಡಗಳ ಆರೋಗ್ಯ ಹೇಗಿದೆ ಎಂಬುದನ್ನು ಕೂಲಂಕುಶವಾಗಿ ನೋಡಿ ನಂತರ ಆಯ್ಕೆ ಮಾಡಿ ನೆಡಬೇಕು. ಬರೇ ಅಡಿಕೆ ಮಾತ್ರವಲ್ಲ ತೆಂಗಿನ ಸಸಿಯೂ ಹಾಗೆಯೇ.  ಅಡಿಕೆ ಸಸಿ ನೆಡುವವರು ಅದು ಅವರೇ ಮಾಡಿದ ಗಿಡ ಇರಬಹುದು ಅಥವಾ ನರ್ಸರಿಯಿಂದ ಖರೀದಿ ಮಾಡಿ ನೆಡುವುದೇ…

Read more
ದಿನಾಂಕ:13-12-2022 ಚಾಲಿ, ಕೆಂಪುಅಡಿಕೆ, ಕರಿಮೆಣಸು, ರಬ್ಬರ್ , ಕಾಫೀ

ದಿನಾಂಕ:13-12-2022 ಚಾಲಿ,ಕೆಂಪುಅಡಿಕೆ, ಕರಿಮೆಣಸು, ರಬ್ಬರ್ , ಕಾಫೀ ಧಾರಣೆ.

ಚಾಲಿ ದರ ಭಾರೀ ಕುಸಿತ ಆಗಲಿಲ್ಲ.ಏರಿಕೆಯ ಸೂಚನೆಯೂ ಇಲ್ಲ.ಕೆಂಪುಅಡಿಕೆ ಧಾರಣೆ ಮಾತ್ರ ಯಾವ ಬೆಳೆಗಾರನೂ ಕಲ್ಪಿಸಿರದ ಮಟ್ಟಕ್ಕೆ ಬಂದಿದೆ.ಯಾಕೆ ಎಂಬ ಕಾರಣ ಯಾರಿಗೂ ಗೊತ್ತಿಲ್ಲ. ಗುಟ್ಕಾ ತಿನ್ನುವುದು ಕಡಿಮೆಯಾಗಿಲ್ಲ.ಗುಟ್ಕಾ ತಯಾರಿಕೆ ನಿಂತಿಲ್ಲ. ಆದರೆ ಅಡಿಕೆಗೆ ಬೆಲೆ ಇಲ್ಲ. ಕರಿಮೆಣಸು ಒಮ್ಮೆ ಚೇರಿಸಿಕೊಂಡರೂ  ಮತ್ತೆ ಮುಗ್ಗರಿಸಿದೆ. ರಬ್ಬರ್ ಬೆಲೆ ಏರಿಕೆ ಸಾಧ್ಯತೆ ಇಲ್ಲ.ಕೊಬ್ಬರಿಯೂ ಸಹ ನೆಲಕಚ್ಚಿದ ಸ್ಥಿತಿಯಲ್ಲಿದೆ. ಒಟ್ಟಿನಲ್ಲಿ ಕೃಷಿ ಉತ್ಪನ್ನಗಳ ಬೆಲೆ ಭಾರೀ ಅಸ್ತಿರವಾಗಿದೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ಕಳೆದ ವಾರದಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಮಾರುಕಟ್ಟೆಗೆ ಬರುತ್ತಿದೆ. ಸಾಗರ,…

Read more

ಅಡಿಕೆ ಧಾರಣೆ ಕುಸಿಯುತ್ತಿದೆ – ಏನು ಕಾರಣ ಇರಬಹುದು? ಯಾವಾಗ ಏರಬಹುದು?

ಕಳೆದ ಒಂದು ತಿಂಗಳಿಂದ ಕೆಂಪಡಿಕೆ ಧಾರಣೆ ಶೇ.40 ರಷ್ಟು ಕಡಿಮೆಯಾಗಿದೆ. ಸಪ್ಟೆಂಬರ್ ತಿಂಗಳಲ್ಲಿ ಹಸಿ ಅಡಿಕೆ ಕ್ವಿಂಟಾಲಿಗೆ 7200 ತನಕ ಇದ್ದುದು, ಇಳಿಕೆಯಾಗುತ್ತಾ ಸಪ್ಟೆಂಬರ್ ಕೊನೆಗೆ 6600 ಕ್ಕೆ ಕುಸಿಯಿತು. ಹಾಗೆಯೇ ಕಡಿಮೆಯಾಗುತ್ತಾ  ಈಗ 5200-5000 ಕ್ಕೆ ಇಳಿದಿದೆ.ವರ್ತಮಾನ ಪರಿಸ್ಥಿತಿಯಲ್ಲಿ ಇನ್ನೂ ಇಳಿಕೆಯ ಸಾದ್ಯತೆಗಳು ಕಾಣಿಸುತ್ತಿದೆ. ಹಾಗೆಯೇ ಧಾರಣೆ 55,000 ಕ್ಕೆ ಏರಿದ್ದು, ಈಗ ಸರಾಸರಿ-40,000 ದ ಸಮೀಪಕ್ಕೆ ಬಂದಿದೆ. ಎಲ್ಲಾ ಅಡಿಕೆ ಬೆಳೆಗಾರರ ಕುತೂಹಲ ಧಾರಣೆ ಯಾವಾಗ ಏರಬಹುದು ಎಂಬುದು ಒಂದೇ. ಅಡಿಕೆ ಚೇಣಿ ವಹಿಸಿಕೊಳ್ಳುವವರು…

Read more
error: Content is protected !!