ಅಡಿಕೆ ಸಸಿ ನೆಡುವ ಕ್ರಮ

ಅಡಿಕೆ ಸಸಿ ನೆಡುವವರು ಗಮನಿಸಿ- ಹೇಗೆ ನೆಡಬೇಕು- ಹೇಗೆ ರಕ್ಷಿಸಬೇಕು?

ಅಡಿಕೆ ಸಸ್ಯ ಏಕದಳ ಸಸ್ಯವಾಗಿದ್ದು, ಇದಕ್ಕೆ ತಾಯಿ ಬೇರು ಇಲ್ಲ. ಕವಲು ಬೇರುಗಳಿರುವ ಏಕದಳ ಸಸ್ಯದ, ಬೇರಿನ ಗುಣ ಮೇಲು ಭಾಗದಲ್ಲಿ ಪಸರಿಸುತ್ತಾ  ಬೆಳೆಯುವುದಾಗಿರುತ್ತದೆ. ಮೊದಲಾಗಿ ಎಲ್ಲಾ ಅಡಿಕೆ ಬೆಳೆಸುವ ರೈತರು ಸಸ್ಯ ಬೆಳವಣಿಗೆಯ ಕ್ರಮವನ್ನು  ತಿಳಿದು, ಅದಕ್ಕನುಗುಣವಾದ ಬೇಸಾಯ ಕ್ರಮವನ್ನು ಅನುಸರಿಸಬೇಕು. ಅಡಿಕೆ ಸಸಿ ನೆಡುವ ಹೊಂಡ ಹೇಗಿರಬೇಕು, ಹೇಗೆ ನೆಡಬೇಕು- ಹೇಗೆ ರಕ್ಷಿಸಬೇಕು? ಎಂಬುದರ ಫೂರ್ತಿ ಮಾಹಿತಿ ಇಲ್ಲಿದೆ. ಎಳವೆಯಲ್ಲಿ ಒಂದು ಗಿಡವನ್ನು  ಸರಿಯಾಗಿ ಪೋಷಣೆ ಮಾಡಿದರೆ ಮಾತ್ರ ಅದರ ಮುಂದಿನ ಬೆಳವಣಿಗೆಗೆ ಅಡಿಪಾಯ…

Read more
ಪ್ರೂನಿಂಗ್ ಮಾಡಿದ ಅಡಿಕೆ ಸಸ್ಯ

ಪ್ರೂನಿಂಗ್ ಮಾಡಿ  ಅಡಿಕೆ ಸಸ್ಯ ಬೆಳವಣಿಗೆ  ಹೆಚ್ಚಿಸಿ.

ಸಸ್ಯಗಳಲ್ಲಿ ಹಿತಮಿತವಾಗಿ ಎಲೆ ಗೆಲ್ಲು ಕಡಿದರೆ ಮತ್ತೆ ಬರುವ ಹೊಸ ಚಿಗುರುಗಳು ಸಧೃಢವಾಗಿ ಬರುತ್ತವೆ. ಏಕದಳ ಸಸ್ಯಗಳ ಗೆಲ್ಲು ಕಡಿದರೆ  ನಿರಾಯಾಸವಾಗಿ ಅದು ಚಿಗುರಿ ಬದುಕಿಕೊಳ್ಳುತ್ತದೆ. ಹಾಗೆಂದು ದ್ವಿದಳ ಸಸ್ಯಗಳಲ್ಲಿ ಎಲ್ಲಾ ಎಲೆ ಕಡಿಯುವ ಕ್ರಮ ಇಲ್ಲ. ಅದನ್ನು ಹಿತ ಮಿತವಾಗಿ ಸ್ವಲ್ಪ ಪ್ರೂನಿಂಗ್ ಮಾಡಿ ಬೆಳವಣಿಗೆಗೆ ಬೂಸ್ಟ್ ಕೊಡಬಹುದು. ಅಡಿಕೆ ಸಸಿಗಳಲ್ಲಿ ಒಂದು ಎರಡು ವರ್ಷ ಪ್ರಾಯದಲ್ಲಿ  ಬೆಳವಣಿಗೆ ಹೆಚ್ಚಿಸಲು ಕೆಳಭಾಗದ ಎರಡು ಎಲೆಯನ್ನು ಅರ್ಧ ದಷ್ಟು ತುಂಡು ಮಾಡಿದರೆ ಸಸ್ಯ ಬೆಳವಣಿಗೆಗೆ ಅನುಕೂಲವಾಗುತ್ತದೆ. ಅಡಿಕೆ…

Read more
ಹಳೆ ಆಡಿಕೆ

ಹಳೆ ಅಡಿಕೆ- ಹೊಸ ಅಡಿಕೆ ಬೆಲೆ ವ್ಯತ್ಯಾಸ ರೂ.100 ಯಾಕೆ?

ಅಡಿಕೆ ಹಳೆಯದಾದರೆ ಅದಕ್ಕೆ ವಾರ್ಷಿಕ ಶೇ.25 ರ ಬಡ್ಡಿ ಬರುತ್ತದೆ ಎಂಬುದು ಈ ವರ್ಷದ  ಧಾರಣೆಯಲ್ಲಿ ಮನವರಿಯಾಗಿದೆ. ದರ ಹೀಗೇ ಉಳಿದರೆ ಮುಂದೆ ಬೆಳೆಗಾರರು ಯಾವುದಾದರೂ ಬ್ಯಾಂಕ್ ನಲಿ ಸಾಲ ಮಾಡಿ ಅದರ ಬಡ್ಡಿ ಕಟ್ಟಿದರೂ ಹೊಸ ಅಡಿಕೆ ಮಾರಾಟ ಮಾಡಬೇಕಾಗಿಲ್ಲ. ಹೊಸ ಅಡಿಕೆ ಮುಂದಿನ ಫಸಲು ಬರುವ ವರೆಗೆ ಉಳಿಸಿಕೊಂಡರೆ ಅದಕ್ಕೆ ಕಿಲೋ ಮೇಲೆ 100 ರೂ. ಹೆಚ್ಚು ಸಿಗುತ್ತದೆ. ಈ ತನಕ ಹಳೆ ಅಡಿಕೆಗೂ ಹೊಸ ಅಡಿಕೆಗೂ ವ್ಯತ್ಯಾಸ ರೂ. 30-40 ಇರುತ್ತಿತ್ತು.  ಆದರೆ…

Read more
ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ.

ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ- ಚಾಲಿಗೆ ಮುಹೂರ್ತ ಕೂಡಿಲ್ಲ. ರಾಶಿ 50,000 ದಾಟಿದೆ.

ಕೆಂಪಡಿಕೆ ರಾಶಿಗೆ ಶಿರಸಿಯಲ್ಲಿ, ಹೊಸನಗರದಲ್ಲಿ ಇಂದು ಕ್ವಿಂಟಾಲಿಗೆ 50,000 ದಾಟಿದೆ. ಯಲ್ಲಾಪುರದಲ್ಲಿ 54,000 ದಾಟಿದೆ. ಇನ್ನೇನು ಕೆಲವೇ ವಾರಗಳಲ್ಲಿ ಇನ್ನೂ ಚೇತರಿಕೆ ಆಗುವ ಸಂಭವ ಇದೆ ಎನ್ನುತ್ತಾರೆ ಶಿವಮೊಗ್ಗದ ವರ್ತಕರೊಬ್ಬರು. ಚಾಲಿ ದರ ಮಾತ್ರ ಏರಿಲ್ಲ. ಆದರೆ ಮಾರುಕಟ್ಟೆಗೆ ಅಡಿಕೆ ಬಾರದ ಕಾರಣ ಏನಾಗುತ್ತದೆ ವ್ಯಾಪಾರಿ ತಂತ್ರ ಎಂಬುದನ್ನು ಕಾದು ನೋಡಬೇಕಾಗಿದೆ. ಚಾಲಿಗೂ ಬೇಡಿಕೆ ಇದೆ. ಕೆಂಪಡಿಕೆಗೂ ಬೇಡಿಕೆ ಇದೆ. ಆದರೆ ದರ ಏರಿಕೆಗೆ ಸೂಕ್ತ ಮುಹೂರ್ತ ಕೂಡಿ ಬರಬೇಕು. ಬಹಳ ಜನ ಈ ವರ್ಷ ಅಡಿಕೆಗೆ…

Read more
ಅಡಿಕೆ ಮಾರುಕಟ್ಟೆ ಸ್ಥಿರ

ಅಡಿಕೆ ಮಾರುಕಟ್ಟೆ ಸ್ಥಿರ : ಕುಸಿಯುವ ಭೀತಿ ಇಲ್ಲ.

ಎಪ್ರೀಲ್ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಸ್ವಲ್ಪ ಚೇತರಿಕೆ ಆಗಬಹುದು ಎಂಬ ಊಹನೆ ಇತ್ತು. ಊಹನೆಯಂತೆ ಹಳೆ ಚಾಲಿ ಮತ್ತು ಪಟೋರಾ ಅಡಿಕೆ ದರ ಸ್ವಲ್ಪ ಏರಿತಾದರೂ ಹೊಸ ಅಡಿಕೆ ದರ ಸ್ಥಿರವಾಗಿಮುಂದುವರಿದಿದೆ. ಅಡಿಕೆ ಉತ್ಪಾದನೆ ಜಾಸ್ತಿ ಇದೆ ಎಂಬ ಮಾಹಿತಿಗಳ ನಡುವೆ, ದರ ಕುಸಿಯುವ ಭೀತಿ ಇಲ್ಲ ಎಂಬುದಾಗಿ ವರ್ತಕರ ಹೇಳಿಕೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಧಾರಣೆ ಸ್ವಲ್ಪ ಏರಿಕೆಯಲ್ಲೇ ಇದೆ. ಕಳೆದ ವರ್ಷದಷ್ಟು ಇಳಿಕೆಯ ಅಂಜಿಕೆಯೂ ಇಲ್ಲ. ಒಟ್ಟಿನಲ್ಲಿ ಅಡಿಕೆ ಆಮದು ಆಗುವ…

Read more
ಮಳೆಗಾಲಕ್ಕೆ ಮುಂಚೆ ಬಸಿಗಾಲುವೆ ಸ್ವಚ್ಚ ಮಾಡಬೇಕಾದದ್ದು ಅಗತ್ಯ ಕೆಲಸ

ಮಳೆಗಾಲಕ್ಕೆ ಮುಂಚೆ ಅಡಿಕೆ ತೋಟದಲ್ಲಿ ಮಾಡಬೇಕಾದ ಅಗತ್ಯ ಕೆಲಸಗಳು.

ಇನ್ನೇನು ಮಳೆಗಾಲ ಬರುವುದಕ್ಕೆ ಹೆಚ್ಚು ಸಮಯ ಇಲ್ಲ. ಅಡಿಕೆ ತೋಟದಲ್ಲಿ ಈಗ ನೀವು ಮಾಡಬೇಕಾದ ಕೆಲವು ಕೆಲಸಗಳು ತೋಟದ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಮಳೆಗಾಲದಲ್ಲಿ ಯಾವ ಕೆಲಸವನ್ನೂ ಓರಣವಾಗಿ ಮಾಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ಕೆಲಸಗಾರರ ಲಭ್ಯತೆಯೂ ಕಡಿಮೆ ಇರುತ್ತದೆ. ಇದಕ್ಕಿಂತೆಲ್ಲಾ ಮುಖ್ಯವಾಗಿ ಮಳೆಗಾಲದಲ್ಲಿ ಮಾಡಲೇ ಬಾರದ ಕೆಲವು ಕೆಲಸಗಳಿವೆ ಅದನ್ನು ಈಗಲೇ ಮಾಡುವುದು ಬಹಳ ಒಳ್ಳೆಯದು. ಈ ಸಮಯದಲ್ಲಿ  ಕಳೆ ತೆಗೆಯುವುದು, ಬಸಿ ಗಾಲುವೆ ಸ್ವಚ್ಚ ಮಾಡುವುದು ಮಾಡಿದರೆ ಉದುರಿ ಹೆಕ್ಕಲು ಸಿಕ್ಕದ ಅಡಿಕೆ ಸಿಗುತ್ತದೆ. ಅದರಿಂದ…

Read more
ಹೊಸ ಅಡಿಕೆ ತೋಟ

ಈಗ ಹೊಸ ಅಡಿಕೆ ತೋಟ ಮಾಡಬೇಡಿ- ಹಳೆ ತೋಟ ಚೆನ್ನಾಗಿ ಸಾಕಿ.

ಅಡಿಕೆಗೆ ದರ ಏರಿಕೆಯಾದಾಗ  ರೈತರು ಮಾಡಬೇಕಾಗ ಕೆಲಸ ಇರುವ ತೋಟಕ್ಕೆ ಹೆಚ್ಚು ಆರೈಕೆ ಮಾಡಿ, ಅದರಲ್ಲಿ ಹೆಚ್ಚು ಫಲಪಡೆಯುವುದು ಹೊರತು ಹೊಸ ತೋಟ ಮಾಡುವುದಲ್ಲ. ಅಡಿಕೆ ಬೆಳೆಯುವ ಆಸಕ್ತರಿಗಾಗಿ ಕೊಟ್ಯಾಂತರ ಸಂಖ್ಯೆಯ ಅಡಿಕೆ ಸಸಿಗಳು ಕಾಯುತ್ತಿವೆ. ಅಡಿಕೆ ಬೆಳೆಗಾರರನ್ನು ಗುರಿಯಾಗಿಟ್ಟುಕೊಂಡು  ನಾನಾನಮೂನೆಯ ಗೊಬ್ಬರ ತಯಾರಕರು ರಂಗಕ್ಕೆ ಇಳಿದಿದ್ದಾರೆ. ಬರೇ ಕರ್ನಾಟಕ ಮಾತ್ರವಲ್ಲ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಕೇರಳ, ಆಂದ್ರ ಪ್ರದೇಶಗಳ ರೈತರೂ  ಅಡಿಕೆ ಬೆಳೆಯಲು ಮುಂದಾಗಿದ್ದಾರೆ. ಈ ವರ್ಷದಷ್ಟು ಬಿತ್ತನೆ ಅಡಿಕೆ ಈ ತನಕ ಮಾರಾಟ ಆಗಲಿಲ್ಲ,…

Read more
ಅಡಿಕೆ

ವರ್ಷಾಂತ್ಯದಲ್ಲೂ ಸ್ಥಿರತೆ ಉಳಿಸಿಕೊಂಡ ಅಡಿಕೆ ಧಾರಣೆ- ಮುಂದೆ ಇದೆ ಚಾನ್ಸ್.

ಸಾಮಾನ್ಯವಾಗಿ ಮಾರ್ಚ್ ವರ್ಷಾಂತ್ಯದಲ್ಲಿ ದರ ಇಳಿಕೆ ಸಾಮಾನ್ಯ. ಆದರೆ ಈ ವರ್ಷ ಹಾಗೆ ಆಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಮುಂದಿನ ತಿಂಗಳಲ್ಲಿ ಚಾಲಿ- ಕೆಂಪಡಿಕೆ ಎರಡೂ ಏರಿಕೆ ಆಗಲಿದೆ. ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಸೂಚನೆ ದರ ಸ್ಥಿರತೆಯಲ್ಲಿ ಗಮನಿಸಬಹುದು.  ಚಾಲಿ ಎರಡು ತಿಂಗಳಿಂದ ಸ್ಥಿರವಾಗಿತ್ತು. ಈಗ  ಸಾಗರ, ಹೊಸನಗರ, ಇಲ್ಲೆಲ್ಲಾ ಸಿಪ್ಪೆ ಗೋಟಿಗೆ ಬೇಡಿಕೆ ಬರಲಾರಂಭಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಚಾಲಿ ದರ ಏರಿಕೆ ಪ್ರರಾಂಭವಾಗಿದೆ. ಸಿಪ್ಪೆ ಗೋಟು ದರ ಏರಿಕೆ ಚಾಲಿಗೆ ಬೇಡಿಕೆಯ ಸೂಚನೆಯಾಗಿದ್ದು, ಚಾಲಿ…

Read more
ಉತ್ತಮ ಇಳುವರಿ ಅಡಿಕೆ

ಅಡಿಕೆ – ತಳಿ ಬೆರಕೆ ಆದರೆ ಇಳುವರಿ ಹೆಚ್ಚುತ್ತದೆ.

ತಳಿ ಯಾವುದೇ ಇದ್ದರೂ ಬರೇ ಒಂದೇ ತಳಿಯನ್ನು ನೆಡುವ  ಬದಲು ಸ್ವಲ್ಪ ಪ್ರಮಾಣದಲ್ಲಿ ಬೇರೆ ತಳಿಗಳನ್ನೂ ಮಿಶ್ರಣ ಮಾಡಿದರೆ ಪರಾಗ ಸ್ಪರ್ಶಕ್ಕೆ ಅನುಕೂಲವಾಗಿ ಇಳುವರಿ ಹೆಚ್ಚು ಬರುತ್ತದೆ. ಯಾವಾಗಲು ಬೆರಕೆ ತಳಿಗಳಿದ್ಡಲ್ಲಿ   ನೈಸರ್ಗಿಕವಾಗಿ ತಳಿ ಅಭಿವ್ರುದ್ಧಿಯೂ ಆಗುತ್ತದೆ. ಇದು ತೆಂಗು, ಅಡಿಕೆಗೆರಡಕ್ಕೂ ಅನುಕೂಲ. ಅಡಿಕೆ ಬೆಳೆಸಲು ಈಗ  ಪ್ರಾದೇಶಿಕ ಇತಿಮಿತಿಗಳು ದೂರವಾಗಿ ಬಯಲು ಸೀಮೆಯಲ್ಲೂ ಬೆಳೆ ಬೆಳೆಯಲಾಗುತ್ತಿದೆ.  ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಅಡಿಕೆ  ಬೆಳೆ ಇದೆ.ಕರಾವಳಿ ಪ್ರದೇಶಕ್ಕೆ ಚಾಲಿಗೆ ಸೂಕ್ತವಾದ ತಳಿಗಳನ್ನು ಆಯ್ಕೆ ಮಾಡಬೇಕು. ಮಲೆನಾಡು ಮತ್ತು…

Read more
ಕೆಂಪಡಿಕೆ

ಕೆಂಪಡಿಕೆ ಬಲ- ಚಾಲಿಹಿನ್ನೆಡೆ- ಇಂದು 08-03-2022 ಅಡಿಕೆ ಧಾರಣೆ.

ಹಿಂದಿನ ಲೆಕ್ಕಾಚಾರಗಳು ಹಾಗೂ ಪರಿಸ್ಥಿತಿಗಳಂತೆ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಅತ್ಯಲ್ಪ ಪ್ರಮಾಣದ ಅಡಿಕೆ ಮಾತ್ರ ಉತ್ತಮ ದರಕ್ಕೆ ಖರೀದಿಯಾಗುತ್ತಿದ್ದು, ಪ್ರಕಟಣೆಯ ದರಕ್ಕೂ ಕೊಳ್ಳುವ ದರಕ್ಕೂ ಸಂಬಂಧವೇ ಇಲ್ಲದಾಗಿದೆ. ಆದರೆ ಕೆಂಪಡಿಕೆ ಮಾರುಕಟ್ಟೆ ಮಾತ್ರ  ಬಲ ಕಳೆದುಕೊಳ್ಳದೆ ಉಳಿದಿದೆ. ಬಹುತೇಕ ಕೆಂಪಡಿಕೆ ಉಳ್ಳವರು ಉತ್ತಮ ದರದ ನಿರೀಕ್ಷೆಯಲ್ಲಿ ಮಾರಾಟ ಮಾಡುವುದನ್ನು ಮುಂದೂಡುತ್ತಿದ್ದಾರೆ.ಈ ವರ್ಷ ಹಿಂದೆಲ್ಲಾ ಆಗುತ್ತಿದ್ದಂತೆ ಕೆಂಪಡಿಕೆ ದರವನ್ನು ಹಿಂಬಾಲಿಸುತ್ತಾ ಚಾಲಿ ದರ ಮುಂದುವರಿಯಲಿದೆ ಎಂಬ ವದಂತಿಗಳಿವೆ.   ನಿನ್ನೆ ದಿನಾಂಕ 07-03-2022 ರಂದು ಕೆಂಪಡಿಕೆಯ…

Read more
error: Content is protected !!