ಅಡಿಕೆ ಸಸಿ ನೆಡುವಾಗ ಬಾಳೆ ನೆಟ್ಟರೆ ಏನು ಪರಿಣಾಮ?

ಅಡಿಕೆ ತೋಟದಲ್ಲಿ ಅನುತ್ಪಾದಕ ಮರಗಳ ಪ್ರಮಾಣ  ಹೆಚ್ಚಳವಾಗಲು ಮುಖ್ಯ ಕಾರಣ ಸ್ಪರ್ಧೆ ಕೊಡುವ ಮಿಶ್ರ ಬೆಳೆ. ಅಡಿಕೆ ಸಸಿಗಳಲ್ಲಿ ಅಸಮತೋಲನ ಬೆಳವಣಿಗೆ, ಸಣಕಲು ಸಸ್ಯ , ಎಲೆಗಳು ಕಡಿಮೆ ಯಾಗುವುದು ಸರಿಯಾಗಿ ಬೆಳವಣಿಗೆ ಹೊಂದರೆ ಇರುವುದು,ಬಿಸಿಲಿನ ತಾಪಕ್ಕೆ ಹೊಂದಿಕೊಳ್ಳುವ ಶಕ್ತಿ ಕಡಿಮೆಯಾಗುವುದು  ಎಲ್ಲದಕ್ಕೂ ಕಾರಣ ಸೂಕ್ತವಲ್ಲದ ಮಿಶ್ರ ಬೆಳೆ. ಮೊದಲ ಒಂದೆರಡು ವರ್ಷ  ಮಿಶ್ರ ಬೆಳೆಯಾಗಿ ಬಾಳೆ ಬೆಳೆಯುವುದು. ಸಾಮಾನ್ಯವಾಗಿ ಹೆಚ್ಚಿನವರು ಅಡಿಕೆ ಸಸಿ ನೆಡುವಾಗ ಬಾಳೆ ನಾಟಿ ಮಾಡಲು ಬಯಸುತ್ತಾರೆ. ಬಾಳೆ ಬೆಳೆದರೆ ಅಡಿಕೆ ತೋಟದ…

Read more
ಒಂದು ವರುಷದ ಗಿಡ ಹೀಗೆ ಇರಬೇಕು.

ಬೇಗ ಫಲ ಕೊಡುವ ತೆಂಗಿನ ಸಸಿಯ ಲಕ್ಷಣ- ಗಿಡದಲ್ಲೇ ತಿಳಿಯಿರಿ.

ತೆಂಗಿನ ಸಸಿ ಅಥವಾ ಅಡಿಕೆ ಸಸಿ ನೆಡುವವರು ಮೊದಲಾಗಿ ಸಸಿಯ ಲಕ್ಷಣವನ್ನು ಸ್ವಲ್ಪ ನೋಡಿ ಆಯ್ಕೆ ಮಾಡಬೇಕು.ಬೇಗ ಫಲ ಕೊಡುವ ಸಸಿಯ ಲಕ್ಷಣಗಳು ಎಳೆ ಸಸಿಯ ಹಂತದಲ್ಲೇ ಗೊತ್ತಾಗುತ್ತದೆ. ಯೋಗ್ಯ ಲಕ್ಷಣ ಉಳ್ಳ ಸಸಿಗಳನ್ನು ಮಾತ್ರ ಆಯ್ಕೆ ಮಾಡಿ ನೆಟ್ಟರೆ ನಂತರ ಫಲ ಬರುವ ಸಮಯದಲ್ಲಿ ಪಶ್ಚಾತಾಪ ಪಡಬೇಕಾಗಿಲ್ಲ. ಒಂದು ಕರು ಸಣ್ಣ ಪ್ರಾಯದಲ್ಲಿ ತನ್ನತಾಯಿಯ ಗಿಣ್ಣು ಹಾಲನ್ನು ಯಥೇಚ್ಚವಾಗಿ ಕುಡಿದರೆ ಅದರ ಇಡೀ ಜೀವಮಾನಕೆ ಬೇಕಾಗುವ ಶಕ್ತಿ ದೊರೆಯುತ್ತದೆ. ಅದೇ ರೀತಿ ಮಾನವನಿಗೂ. ಎಳೆ ಪ್ರಾಯದಲ್ಲಿ…

Read more
A village towards economic empowerment

A village towards economic empowerment

This small village provides permanent employment and gives economic empowerment through an arecanut dehusking unit. It is called “Adike Kana”. Its story is very impressive and interesting. What is special about this unit? Where it is located and what are the advantages of this type of unit? We can see here. About the KANA, or unit:…

Read more
‘ಅಡಿಕೆ ಕಣ’

‘ಅಡಿಕೆ ಕಣ’ ಬೆಳೆಗಾರರ ಪಾಲಿಗೆ ಈ ವ್ಯವಸ್ಥೆ ಇದ್ದರೆ ನಿಶ್ಚಿಂತೆ.

ಅಡಿಕೆಗೆ ಬೆಲೆ ಚೆನ್ನಾಗಿದೆ, ಬೆಳೆಗಾರರು ಖುಷಿಯಾಗಿದ್ದಾರೆ ಎಂದೆಣಿಸದಿರಿ. ಬೆಲೆ ಹೆಚ್ಚಾದಂತೆ ಅದರ ಉತ್ಪಾದನಾ ವೆಚ್ಚವೂ ಹೆಚ್ಚಳವಾಗುತ್ತದೆ. ಕೆಲಸದವರ ಸಂಬಳ ವರ್ಷಕ್ಕೆ 10% ದಂತೆ ಹೆಚ್ಚಳವಾಗುತ್ತದೆ. ಬೆಳೆ ಬಂದರೆ ಕೊಯ್ಯುವ ಸಮಸ್ಯೆ. ಕೊಯಿಲು ಮುಗಿದ ಮೇಲೆ ಸುಲಿಯುವ ಸಮಸ್ಯೆ. ಎಲ್ಲಾ ಕೆಲಸಕ್ಕೂ ಹಣ ಕೊಟ್ಟರೂ ಮಾಡುವವರಿಲ್ಲದಿದ್ದರೆ ಏನು ಮಾಡುವುದು? ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾನ್ಲೆ ಊರಿನಲ್ಲಿ ಇಂತಹ ಸಮಸ್ಯೆಗೆ ಪರಿಹಾರ ಇದೆ. ಈ ಊರಿನ ಒಂದು ಪಂಗಡದ ಜನರೆಲ್ಲಾ ಒಟ್ಟು ಸೇರಿ ‘ಅಡಿಕೆ ಕಣ’ ಎಂಬ ವ್ಯವಸ್ಥೆಯನ್ನು…

Read more
ಬೋರ್ಡೋ ದ್ರಾವಣ ಸಿಂಪರಣೆ

ಬೋರ್ಡೋ ದ್ರಾವಣ ಸಿಂಪರಣೆ ಮತ್ತು ಕೆಲವು ಸೂಕ್ಷ್ಮಗಳು.

ಅಡಿಕೆಯ ಕೊಳೆ ರೋಗ ನಿಯಂತ್ರಿಸುವ ಉಪಚಾರವಾಗಿ ಬೋರ್ಡೋ ದ್ರಾವಣದ ಸಿಂಪರಣೆಯನ್ನು ಮಾಡಲಾಗುತ್ತದೆ. ವಿವಿಧ ನಮೂನೆಯ ತುತ್ತೆ, ಸುಣ್ಣ, ಗಮ್ ಗಳು ಇರುವಾಗ ರೈತರಿಗೆ ದ್ವಂದ್ವ ಉಂಟಾಗುವುದು ಸಹಜ. ಈ ನಿಟ್ಟಿನಲ್ಲಿ ಕೆಲವು ಸೂಕ್ಷ್ಮ ವಿಚಾರಗಳೊಳಗೊಂಡ ಮಾಹಿತಿ ಇಲ್ಲಿದೆ. ಬೊರ್ಡೋ ದ್ರಾವಣವನ್ನು ಪ್ರಪ್ರಥಮವಾಗಿ,  ಪ್ರಾನ್ಸ್ ದೇಶದ ಬೋರ್ಡೋ ಎಂಬ ಪ್ರಾಂತದಲ್ಲಿ ದ್ರಾಕ್ಷಿ ಬೆಳೆಗೆ ಶಿಲೀಂದ್ರಗಳಿಂದ ಉಂಟಾಗುವ ರೋಗ ನಿಯಂತ್ರಣಕ್ಕೆ ಬಳಸುತ್ತಿದ್ದರಂತೆ. ಅದನ್ನು ಬ್ರಿಟೀಷರ ಕಾಲದಲ್ಲಿ ಆಗಿನ ಮೈಸೂರು ಸರಕಾರದ ಕೃಷಿ ಅಧಿಕಾರಿಯಾಗಿದ್ದ ಲೆಸ್ಲಿ ಸಿ ಕೋಲ್ಮನ್ ಇವರು  ನಮ್ಮ…

Read more
ಬದನೆಯ ಕಾಯಿ ಕೊಳೆತ

ಬದನೆಯ ಕಾಯಿಗಳು ಯಾಕೆ ಕೊಳೆಯುತ್ತವೆ.

ಬದನೆ  ಪ್ರಮುಖ ತರಕಾರಿ ಬೆಳೆಯಾಗಿದ್ದು, ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಇದನ್ನು ಬೆಳೆಸುತ್ತಾರೆ. ಹೆಚ್ಚಿನ ಕೃಷಿಕರು ಅಧಿಕ ಬೇಡಿಕೆ –ಬೆಲೆ ಕಾರಣಕ್ಕೆ ನಾಟಿ ತಳಿಯನ್ನೇ ಬೆಳೆಸುತ್ತಿದ್ದು, ಇತ್ತೀಚಿಗಿನ ಬೇಸಾಯ ಕ್ರಮ, ಹವಾಮಾನದಿಂದಾಗಿ ಬೆಳೆಗೆ ಸೊರಗು ರೋಗದ ಬಾಧೆ ಅಧಿಕವಾಗಿದೆ. ಇದರಿಂದ ಕಾಯಿ ಕೊಳೆಯುವಿಕೆ ಹಚ್ಚಾಗುತ್ತದೆ. ಹೆಚ್ಚಿನ ಬೆಳೆಗಾರರು ಸಣ್ಣ  ಮತ್ತು ಅತೀ ಸಣ್ಣ ಬೆಳೆಗಾರರಾಗಿದ್ದು ಇದು ರೋಗವೋ – ಕೀಟವೂ ಎಂಬುದರ ಜ್ಞಾನ ಹೊಂದಿರುವುದಿಲ್ಲ.   ಸಮೀಪದ  ಗೊಬ್ಬರ– ಕೀಟನಾಶಕ ಮಾರಾಟ ಅಂಗಡಿಯವರ ಸಲಹೆಯ ಮೇರೆಗೆ  ಅದಕ್ಕೆ ಉಪಚಾರ …

Read more
ಚಾಲಿ ಅಸ್ಥಿರ

ಅಡಿಕೆ ಮಾರುಕಟ್ಟೆಯ ಸ್ಥಿತಿ- ಕೆಂಪಡಿಕೆ ಅಬಾಧಿತ- ಚಾಲಿ ಅಸ್ಥಿರ.

ಕೆಂಪಡಿಕೆ ಮಾರುಕಟ್ಟೆಯಲ್ಲಿ ದೊಡ್ದ ಸಂಚಲನ ಇಲ್ಲ. ಆದರೆ ಚಾಲಿ ಮಾತ್ರ ಬಹಳ ಅಸ್ಥಿರತೆಯಲ್ಲಿ ಮುನ್ನಡೆಯುತ್ತಿದೆ. ಖಾಸಗಿಯವರ ದರ ಸಾಂಸ್ಥಿಕ ಮಾರುಕಟ್ಟೆಗಿಂತ ಕಡಿಮೆಯಾಗಿದೆ. ಸಾಂಸ್ಥಿಕ ಮಾರುಕಟ್ಟೆಯಲ್ಲಿ  ಪ್ರಕಟಣೆಯ ದರಕ್ಕೂ ಖರೀದಿ ದರಕ್ಕೂ  ತುಂಬಾ ವ್ಯತ್ಯಾಸ ಇದೆ. ಗುಣಮಟ್ಟಕ್ಕೆ ಹೆಚ್ಚಿನ ಪ್ರಾತಿನಿಧ್ಯ ಬಂದಿದೆ. ಗುಣಮಟ್ಟದ ಅಡಿಕೆಗೆ ಮಾತ್ರ  ಗರಿಷ್ಟ ದರ ಇದೆ. ಖಾಸಗಿಯವರ ನಿರುತ್ಸಾಹ ಚಾಲಿ ಅಡಿಕೆ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸ್ವಲ್ಪ ಹಿಂದೆ ಬರುವಂತೆ ಮಾಡುತ್ತದೆಯೋ ಎಂಬ ಅನುಮಾನ ಉಂಟಾಗಿದೆ. ವಿದೇಶಗಳಿಂದ ಸರಕಾರದ ಅನುಮತಿಯ ಮೇರೆಗೆ ಅಡಿಕೆ ಆಮದಾಗುತ್ತಿದೆ ಎಂಬ…

Read more
ತೆಂಗಿನ ಮರಗಳ ಶಿರ ಸ್ವಚ್ಚತೆ

ತೆಂಗಿನ ಮರಗಳ ಶಿರ ಭಾಗ ಸ್ವಚ್ಚತೆ ಮತ್ತು ಇಳುವರಿ

ಯಾರ ತೆಂಗಿನ ಮರದಲ್ಲಿ ಪ್ರತೀ ವರ್ಷವೂ ಅಧಿಕ ಇಳುವರಿ ಬರುತ್ತದೆಯೋ ಅಂತವರ ತೆಂಗಿನ ಮರದ ಶಿರಭಾಗವನ್ನು ಒಮ್ಮೆ ನೋಡಿ. ಬಹಳ ಸ್ವಚ್ಚವಾಗಿ ಇರುತ್ತದೆ. ತೆಂಗಿನ ಮರಗಳಿಗೆ ಗೊಬ್ಬರ, ನೀರು ಕೊಡುವುದಲ್ಲದೆ ಅಗತ್ಯವಾಗಿ ಮಾಡಬೇಕಾದ ಕೆಲಸ ಶಿರ ಭಾಗದ ಸ್ವಚ್ಚತೆ. ಹೀಗೆ ಮಾಡುವುದರಿಂದ ಮರ ಆರೋಗ್ಯವಾಗಿರುತ್ತದೆ. ಉತ್ತಮ ಇಳುವರಿಯೂ ಬರುತ್ತದೆ. ತೆಂಗಿನ ಮರದ ಶಿರ ಬಾಗವನ್ನು  ಸ್ವಚ್ಚ ಮಾಡುವ ಕ್ರಮ ಅನಾದಿ ಕಾಲದಿಂದಲೂ ನಡೆದು ಬಂದಿರುವ ನಿರ್ವಹಣೆಗಳಲ್ಲಿ ಒಂದು. ನಮ್ಮ ಹಿರಿಯರು ವರ್ಷಕ್ಕೊಮ್ಮೆ ಶಿರಭಾಗವನ್ನು ಪೂರ್ಣ ಸ್ವಚ್ಚ ಮಾಡುತ್ತಿದ್ದರು….

Read more
ಅಡಿಕೆ ಸಸಿ ನೆಡುವ ಕ್ರಮ

ಅಡಿಕೆ ಸಸಿ ನೆಡುವವರು ಗಮನಿಸಿ- ಹೇಗೆ ನೆಡಬೇಕು- ಹೇಗೆ ರಕ್ಷಿಸಬೇಕು?

ಅಡಿಕೆ ಸಸ್ಯ ಏಕದಳ ಸಸ್ಯವಾಗಿದ್ದು, ಇದಕ್ಕೆ ತಾಯಿ ಬೇರು ಇಲ್ಲ. ಕವಲು ಬೇರುಗಳಿರುವ ಏಕದಳ ಸಸ್ಯದ, ಬೇರಿನ ಗುಣ ಮೇಲು ಭಾಗದಲ್ಲಿ ಪಸರಿಸುತ್ತಾ  ಬೆಳೆಯುವುದಾಗಿರುತ್ತದೆ. ಮೊದಲಾಗಿ ಎಲ್ಲಾ ಅಡಿಕೆ ಬೆಳೆಸುವ ರೈತರು ಸಸ್ಯ ಬೆಳವಣಿಗೆಯ ಕ್ರಮವನ್ನು  ತಿಳಿದು, ಅದಕ್ಕನುಗುಣವಾದ ಬೇಸಾಯ ಕ್ರಮವನ್ನು ಅನುಸರಿಸಬೇಕು. ಅಡಿಕೆ ಸಸಿ ನೆಡುವ ಹೊಂಡ ಹೇಗಿರಬೇಕು, ಹೇಗೆ ನೆಡಬೇಕು- ಹೇಗೆ ರಕ್ಷಿಸಬೇಕು? ಎಂಬುದರ ಫೂರ್ತಿ ಮಾಹಿತಿ ಇಲ್ಲಿದೆ. ಎಳವೆಯಲ್ಲಿ ಒಂದು ಗಿಡವನ್ನು  ಸರಿಯಾಗಿ ಪೋಷಣೆ ಮಾಡಿದರೆ ಮಾತ್ರ ಅದರ ಮುಂದಿನ ಬೆಳವಣಿಗೆಗೆ ಅಡಿಪಾಯ…

Read more
ಪ್ರೂನಿಂಗ್ ಮಾಡಿದ ಅಡಿಕೆ ಸಸ್ಯ

ಪ್ರೂನಿಂಗ್ ಮಾಡಿ  ಅಡಿಕೆ ಸಸ್ಯ ಬೆಳವಣಿಗೆ  ಹೆಚ್ಚಿಸಿ.

ಸಸ್ಯಗಳಲ್ಲಿ ಹಿತಮಿತವಾಗಿ ಎಲೆ ಗೆಲ್ಲು ಕಡಿದರೆ ಮತ್ತೆ ಬರುವ ಹೊಸ ಚಿಗುರುಗಳು ಸಧೃಢವಾಗಿ ಬರುತ್ತವೆ. ಏಕದಳ ಸಸ್ಯಗಳ ಗೆಲ್ಲು ಕಡಿದರೆ  ನಿರಾಯಾಸವಾಗಿ ಅದು ಚಿಗುರಿ ಬದುಕಿಕೊಳ್ಳುತ್ತದೆ. ಹಾಗೆಂದು ದ್ವಿದಳ ಸಸ್ಯಗಳಲ್ಲಿ ಎಲ್ಲಾ ಎಲೆ ಕಡಿಯುವ ಕ್ರಮ ಇಲ್ಲ. ಅದನ್ನು ಹಿತ ಮಿತವಾಗಿ ಸ್ವಲ್ಪ ಪ್ರೂನಿಂಗ್ ಮಾಡಿ ಬೆಳವಣಿಗೆಗೆ ಬೂಸ್ಟ್ ಕೊಡಬಹುದು. ಅಡಿಕೆ ಸಸಿಗಳಲ್ಲಿ ಒಂದು ಎರಡು ವರ್ಷ ಪ್ರಾಯದಲ್ಲಿ  ಬೆಳವಣಿಗೆ ಹೆಚ್ಚಿಸಲು ಕೆಳಭಾಗದ ಎರಡು ಎಲೆಯನ್ನು ಅರ್ಧ ದಷ್ಟು ತುಂಡು ಮಾಡಿದರೆ ಸಸ್ಯ ಬೆಳವಣಿಗೆಗೆ ಅನುಕೂಲವಾಗುತ್ತದೆ. ಅಡಿಕೆ…

Read more
error: Content is protected !!