snail

ಅಡಿಕೆ ಮರದ ಸಿಂಗಾರ ತಿನ್ನುವ ಸಿಂಬಳದಹುಳು ನಿಯಂತ್ರಣ

ಸಿಂಬಳದ ಹುಳುವಿನ ಉಪಟಳ ಇಬ್ಬನಿ ಬೀಳುವ ಚಳಿಗಾಲದಲ್ಲಿ ಹೆಚ್ಚು. ಈ ಹುಳುಗಳು ನೆಲದಲ್ಲಿ ಇರುತ್ತವೆ. ಅವು ಆಹಾರ ಹುಡುಕುತ್ತಾ ಮರವನ್ನು ಏರಿ ಅಲ್ಲಿ ಎಳೆ ಹೂ ಗೊಂಚಲನ್ನು ತಿನ್ನುತ್ತವೆ. ಬರೇ ಅಡಿಕೆ ಹೂ ಗೊಂಚಲು ಮಾತ್ರವಲ್ಲ ಇವು ಆಹಾರವಾಗಿ ಹಣ್ಣು ತರಕಾರಿಗಳನ್ನೂ ತಿನ್ನುತ್ತವೆ. ಇದನ್ನು ನಿಯಂತ್ರಿಸದೆ ಇದ್ದರೆ  ಒಂದೆರಡು ಸಿಂಗಾರ ಹಾಳಾಗುತ್ತದೆ. ಇಳುವರಿ ನಷ್ಟವಾಗುತ್ತದೆ. ಬಸವನ ಹುಳುಗಳು, ಸಿಂಬಳದ ಹುಳುಗಳು , ಮಳೆಗಾಲದಲ್ಲಿ ನೆಲದಲ್ಲಿ ಅಲ್ಲಲ್ಲಿ ಸಂಚರಿಸುತ್ತಾ ಇರುತ್ತವೆ. ಹಾವಸೆ ಇತ್ಯಾದಿಗಳು ಇದರ ಆಹಾರ. ಅದನ್ನು ತಿನ್ನುತ್ತಾ…

Read more
ಅಡಿಕೆ ಮರಗಳಿಗೆ ಸುಣ್ಣ ಬಳಿದು ಬಿಸಿಲಿನಿಂದ ರಕ್ಷಣೆ

ಅಡಿಕೆ ಮರಕ್ಕೆ ಸುಣ್ಣ ಯಾಕೆ ಕೊಡಲೇ ಬೇಕು? ಇದರಿಂದಾಗಿ ಲಾಭ ಎಷ್ಟು?

ಅಡಿಕೆ ಮರದ ಕಾಡಕ್ಕೆ ನಿರಂತರ ಬಿಸಿಲಿನ ಹೊಡೆತ ಬೀಳುವುದರಿಂದ ಆ ಭಾಗ ಬಿಸಿಯಾಗುತ್ತದೆ. ಮೊದಲಿಗೆ ಬಿಸಿಲು ತಾಗಿದ ಭಾಗ ಹಳದಿ ಮಿಶ್ರ ಕೆಂಪು ಬಣ್ಣದಲ್ಲಿ ಕಾಣಿಸುತ್ತದೆ. ವರ್ಷ ಕಳೆದಾಗ ಅಲ್ಲಿ ಸಣ್ಣ ಒಡಕು ಕಾಣಿಸುತ್ತದೆ. ಎರಡು ಮೂರು ವರ್ಷ ಕಳೆದಾಗ ಆ ಭಾಗ ನಿರ್ಜೀವವಾಗುತ್ತದೆ. ಅದು ಎದ್ದು ಬರಲೂ ಬಹುದು. ಗಾಳಿಗೆ ಬೀಳಲೂ ಬಹುದು. ಇದನ್ನು ತಡೆಯುವ ಉಪಾಯ ಮರದ ಕಾಂಡಕ್ಕೆ ಎಅರಡನೇ ವರ್ಷದಿಂದ ಸಾದ್ಯವಾದಷ್ಟು ವರ್ಷದ ತನಕ ಸುಣ್ಣದ ಲೇಪನ ಒಂದೇ. ಚಳಿಗಾಲ ಪ್ರಾರಂಭವಾಗುವ ಕಾರ್ತಿಕ…

Read more
arecanut planting and shade- ನೆಡುವಾಗ ನೆರಳು ಮಾಡಿ.

ಅಡಿಕೆ ಸಸಿ ನೆಡುವಾಗ ಮುಖ್ಯವಾಗಿ ಅರಿತುಕೊಳ್ಳಬೇಕಾದ ವಿಚಾರ.

ನಾನು ಅಡಿಕೆ ಸಸಿ ಹಾಕಿದ್ದೀನೆ. ಸಾವಿರ ಸಾವಿರ ಲೆಕ್ಕ ಕೊಡಬಹುದು. ಎಂಬುದಾಗಿ ಜನ ಹೇಳುತ್ತಾರೆ. ಒಂದು ವರ್ಷದ ನಂತರ ನೆಟ್ಟ ಗಿಡದಲ್ಲಿ ಹಲವು ಗಿಡ ಸತ್ತು ಹೋಗಿದೆ ಎನ್ನುತ್ತಾರೆ. ಕೆಲವು ಗಿಡ ಮಾತ್ರ ಚೆನ್ನಾಗಿ ಬೆಳೆದಿದೆ. ಉಳಿದವು ನೆಟ್ಟ ಹಾಗೆ ಇದೆ ಎನ್ನುತ್ತಾರೆ. ಇದಕ್ಕೆ ಕಾರಣ ಮತ್ತೇನೂ ಅಲ್ಲ. ಪಾಲನೆಯಲ್ಲಿ ನಿರ್ಲಕ್ಷ್ಯ. ಎಳೆಯ ಪ್ರಾಯದಲ್ಲಿ ಸಸಿಗಳನ್ನು ಬೆಳೆಸುವುದು ಒಂದು ತಪಸ್ಸಿನ ತರಹ. ಗಿಡ ನೆಟ್ಟು ಬಿಟ್ಟು, ನೀರಾವರಿ ಮಾಡಿ ಗೊಬ್ಬರ ಕೊಟ್ಟರೆ ಸಾಲದು. ಎಳೆಯ ಪ್ರಾಯದಲ್ಲಿ ಅದನ್ನು ನಿತ್ಯ ಗಮನಿಸುತ್ತಿದ್ದು,…

Read more
6 ವರ್ಷಕ್ಕೆ ಅಡಿಕೆ -ಫಲ – High yield in arecanut

ಅಡಿಕೆ -ಫಲ ಬರುವ ಸಮಯಕ್ಕೇ ತೋಟ ಫ್ರೀ –ಹೇಗೆ?

ಅಡಿಕೆ ತೋಟ ಎಂದರೆ  ನಿರ್ದಿಷ್ಟ ವರ್ಷಕ್ಕೇ ಇಳುವರಿ ಬರಬೇಕು. ಗರಿಷ್ಟ  ಇಳುವರಿ ಸಿಗಬೇಕು. ಅದಕ್ಕೆ ಎಳವೆಯಲ್ಲಿ ಸೂಕ್ತ ಮಿಶ್ರ ಬೆಳೆ ಆರಿಸಬೇಕು. ಅಡಿಕೆ ಬೆಳೆಸುವಾಗ ಪ್ರಾರಂಭದ ಮೂರು ನಾಲ್ಕು ವರ್ಷಗಳ ಕಾಲ ಯಾವ ಮಿಶ್ರ ಬೆಳೆ ಬೆಳೆಯುತ್ತೇವೆಯೋ ಅದನ್ನು ಅವಲಂಭಿಸಿ, ಅದರ ಇಳುವರಿ ನಿರ್ಧಾರವಾಗುತ್ತದೆ. ಎಳೆ ಪ್ರಾಯದಲ್ಲಿ ಮಗುವನ್ನು ಯೋಗ್ಯ ರೀತಿಯಲ್ಲಿ ಸಾಕಿದರೆ ಮಾತ್ರ ಅದರ ಮುಂದಿನ ಭವಿಷ್ಯ ಉತ್ತಮವಾಗುತ್ತದೆ. ಇದರಂತೆ ಅಡಿಕೆ, ತೆಂಗು ಮುಂತಾದ  ಧೀರ್ಘಾವಧಿ ಬೆಳೆಗಳೂ ಸಹ. ಮಿಶ್ರ ಬೆಳೆಗಳಿಂದ ಬರುವ ಆದಾಯದಿಂದ ಇಡೀ ಹೊಲವೇ…

Read more
ಆರೋಗ್ಯವಂತ ಅಡಿಕೆ ಮರ

ಅಡಿಕೆ ಮರದ ಆರೋಗ್ಯ –ಅದರ ಬೇರು ವ್ಯವಸ್ಥೆ.

ಯಾವುದೇ ಸಸ್ಯವಿರಲಿ, ಬೇರು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರುತ್ತದೆ. ಸಸ್ಯಕ್ಕೆ ಬೇರು ಮುಖ್ಯ ಆಧಾರ ಸ್ಥಂಭ.  ಇದು ಮಣ್ಣು, ನೀರು, ಕೀಟಗಳು ಮತ್ತು ಪೋಷಕಗಳ ಅಸಮತೋಲನದಿಂದ ತೊಂದರೆಗೆ ಒಳಗಾಗುತ್ತದೆ. ಇದನ್ನು ಪ್ರತೀಯೊಬ್ಬ ರೈತರೂ ಗಮನಿಸಿ ಅದನ್ನು ಸರಿಪಡಿಸಿದರೆ ಮರ ಆರೋಗ್ಯವಾಗಿರುತ್ತದೆ. ಅಡಿಕೆ ಮರ, ತೆಂಗಿನ ಮರ ಮುಂತಾದ ಎಲ್ಲಾ ಏಕದಳ ಸಸ್ಯಗಳ ಬೇರುಗಳು ತಳಕ್ಕೆ ಇಳಿಯದೇ ಮೇಲ್ಭಾಗದಲ್ಲೇ ಪೋಷಕಗಳನ್ನು ಹುಡುಕುತ್ತಾ ಪಸರಿಸುತ್ತಿರುತ್ತವೆ. ಇವು ಸಸ್ಯದ ಕಾಂಡದಿಂದ ಹುಟ್ಟಿಕೊಂಡು ಬೆಳವಣಿಗೆಯಾಗುತ್ತದೆ. ಸಸ್ಯದ ಸುತ್ತಲೂ ಇದು ಪಸರಿಸಿರುತ್ತದೆ.  Monocot roots are…

Read more
ಕೊಕ್ಕೋ ಕೋಡು

ಕೊಕ್ಕೋ ಬೆಳೆದರೆ ಹಸುರು ಸೊಪ್ಪಿಗೆ ಬರವಿಲ್ಲ.

ಇತ್ತೀಚಿನ ದಿನಗಳಲ್ಲಿ ನಮಗೆ ಹಿಂದಿನಂತೆ ತೋಟಕ್ಕೆ ಹಸಿ ಸೊಪ್ಪು ಸದೆ ಹಾಕಲು ಸಂಪನ್ಮೂಲಗಳಿಲ್ಲ. ಕಾಡು ಇಲ್ಲ. ತರುವ ಮಜೂರಿಯೂ ಅಧಿಕ. ಕೊಕ್ಕೋ ಬೆಳೆ ತೋಟದಲ್ಲಿದ್ದರೆ ವರ್ಷಕ್ಕೆ ಸಾಕಷ್ಟು ಹಸುರು ಸೊಪ್ಪು ದೊರೆಯುತ್ತದೆ. ಈ ಸೊಪ್ಪಿನಲ್ಲಿ ಪೋಷಕಾಂಶಗಳು ಹೆಚ್ಚು ಇರುತ್ತವೆ.  ರಾಸಾಯನಿಕ ಮೂಲದ ಸೂಕ್ಷ್ಮ ಪೋಷಕ, ಸುಣ್ಣ, ಮೆಗ್ನೀಶಿಯಂ ಬಳಸುವ ಖರ್ಚನ್ನು ಇದು ಉಳಿಸುತ್ತದೆ. ಹಸಿ ಸೊಪ್ಪು ಮಣ್ಣಿನ ಸೂಕ್ಷ್ಮಾಣು ಜೀವಿಗಳಿಗೆ ಒಳ್ಳೆಯ ಆಹಾರ. ಅಡಿಕೆ ಮರಗಳ ಮಧ್ಯಂತರದಲ್ಲಿ ಕೊಕ್ಕೋ ಬೆಳೆದಾಗ  ಕೊಕ್ಕೋ ಸಸ್ಯವು ತನ್ನ ಪಾಲಿನ ಪೋಷಕಾಂಶವನ್ನು …

Read more
ಗೇರು ಮರಕ್ಕೆ ಗೊಬ್ಬರ ಕೊಡುವ ವಿಧಾನ

ಗೇರು – ಗೊಬ್ಬರ ಕೊಟ್ಟರೆ ಬಂಪರ್ ಇಳುವರಿ ಪಡೆಯಬಹುದು.

ಗೇರು ಬೆಳೆಗೆ ವರ್ಷದಲ್ಲಿ 3 ತಿಂಗಳು ಮಾತ್ರ ಕೆಲಸ, ನೀರಾವರಿ ಬೇಡ. ಉತ್ತಮವಾಗಿ ಗೊಬ್ಬರ ಕೊಟ್ಟು ನಿಗಾ ವಹಿಸಿ ಬೆಳೆದರೆ 5-6  ವರ್ಷದ ಮರದಲ್ಲಿ 10 ಕಿಲೋ ತನಕ ಇಳುವರಿ ಪಡೆಯಬಹುದು. ಕನಿಷ್ಟ 1000 ರೂ ಆದಾಯಕ್ಕೆ ತೊಂದರೆ ಇಲ್ಲ ಎಂಬ ಕಾರಣಕ್ಕೆ ರೈತರು ತಮ್ಮಲ್ಲಿ ಖಾಲಿ ಇರುವ ಸ್ಥಳದಲ್ಲಿ ಗೇರು ಬೆಳೆ ಬೆಳೆಸಿದ್ದಾರೆ. ಬರೇ ನೆಟ್ಟರೆ ಸಾಲದು ಅದಕ್ಕೆ ಅಗತ್ಯ ಪೊಷಕಗಳನ್ನು ಕಾಲ ಕಾಲಕ್ಕೆ ಕೊಟ್ಟರೆ ಉತ್ತಮ ಇಳುವರಿ ಪಡೆಯಲು ಸಾಧ್ಯ.     ಗೇರು ಮರ ಚೆನ್ನಾಗಿ…

Read more
ಮಂಗಳ ಆಡಿಕೆ

ಜಲ್ಲಿ ಮಂಗಳ ಎಂಬ ಹೊಸ ತಳಿ ಇದೆಯೇ?

ಮಂಗಳ ಎಂಬ ತಳಿಯನ್ನು ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯು 1972 ರಲ್ಲಿ ಚೀನಾ ದಿಂದ ಮೂಲ ತಂದು ಇಲ್ಲಿ ಅಭಿವೃದ್ದಿಪಡಿಸಿದ್ದು ಬಿಟ್ಟರೆ, ಈ ತನಕ ಬೇರೆ ಮಂಗಳ ತಳಿಯನ್ನು ಬಿಡುಗಡೆ ಮಾಡಿಲ್ಲ. ಅದರ ಮೂಲ ಗುಣ ಕ್ಷೀಣವಾದುದಕ್ಕೆ ಅದರಲ್ಲೇ ಆಂತರಿಕ ಕ್ರಾಸಿಂಗ್  ಮಾಡಿ ಇಂಟರ್ ಮಂಗಳವನ್ನು 1984 ರಲ್ಲಿ ಪಡೆಯಯಲಾಗಿದೆ.  ಚೀನಾದಲ್ಲಿ ಇದಕ್ಕೆ ಯಾವ ಹೆಸರಿತ್ತೋ ಗೊತ್ತಿಲ್ಲ. ಇಲ್ಲಿ ಅಭಿವೃದ್ದಿಪಡಿಸಿ ಬಿಡುಗಡೆ ಮಾಡುವಾಗ ಮಂಗಳ ಹೆಸರನ್ನು ನೀಡಲಾಗಿದೆ. ಹಾಗೆ ನೋಡಿದರೆ ಕೆಲವು ಚಾಲಿ ಅಡಿಕೆಗೆ ಹೊಂದುವ…

Read more
ಶುದ್ಧ ತೆಂಗಿನ ಎಣ್ಣೆ

ಶುದ್ಧ ತೆಂಗಿನೆಣ್ಣೆಯಲ್ಲಿದೆ – ಅಪರಿಮಿತ ಆರೋಗ್ಯ ಗುಣಗಳು

ಪ್ರಕೃತಿ ಸೃಷ್ಟಿಸಿದ ಹಲವಾರು ಔಷಧೀಯ ಸಸ್ಯ , ಮೂಲಿಕೆಗಳಲ್ಲಿ ತೆಂಗು ಒಂದು. ಇದು ಇಂದು ನಿನ್ನೆಯ ವಿಚಾರ ಅಲ್ಲ. ಅನಾದಿ ಕಾಲದಿಂದಲೂ ಇದ್ದದ್ದು. ಆದರೆ ಗೊತ್ತೀದ್ದೋ ಗೊತ್ತಿಲ್ಲದೆಯೋ ನಾವು ಬಳಸುವುದು ಕಡಿಮೆ ಮಾಡುತ್ತಿದೇವೆ.ತೆಂಗಿನ ಎಣ್ಣೆ ತಿಂದವರಿಗೆ ರೋಗ ಇಲ್ಲ.  ಕೊಬ್ಬರಿ ಎಣ್ಣೆ ಎಂಬುದು ಹಸುವಿನ ತುಪ್ಪಕ್ಕೆ ಸರಿಸಾಟಿಯಾದ ವಸ್ತು ಎನ್ನುತ್ತಾರೆ. ಇದು ಸಸ್ಯಜನ್ಯ ಎಣ್ಣೆಯಾಗಿದ್ದು, ತುಪ್ಪಕ್ಕಿಂತಲೂ ಮಿಗಿಲಾದ ಔಷಧೀಯ ಗುಣವನ್ನು ಪಡೆದಿದೆ. ನಮ್ಮಲ್ಲಿ ಈಗಲೂ ಹಳ್ಳಿಯ ಜನ ಕಣ್ಣು ತುರಿಕೆ, ಮೈ ತುರಿಕೆ ಆದರೆ ಆ ಭಾಗಕ್ಕೆ…

Read more
ಬೇರು ಮೇಲೆ ಬಂದ ಅಡಿಕೆ ಗಿಡ

ಅಡಿಕೆ ಮರದ ಬೇರುಗಳು ಮೇಲೆ ಬರುವುದಕ್ಕೆ ಕಾರಣ ಇದು.

ಅಡಿಕೆ ಮರಗಳ ಬೇರು ಮೇಲೆ ಬರಬಾರದು ಎಂದು  ಕರಾವಳಿ ಮಲೆನಾಡಿನ ಬಹುತೇಕ ಬೆಳೆಗಾರರು ಹೊಂಡ ಮಾಡಿ ಸಸಿ ನೆಡುತ್ತಾರೆ. ಎಷ್ಟೇ ಹೊಂಡ ಮಾಡಿದರೂ ಮರ ಬೆಳೆದಂತೆ ಬೇರು ಮೇಲೆ ಬರಲಾರಂಭಿಸುತ್ತದೆ.  ನೆಲಮಟ್ಟದಿಂದ 1 ಅಡಿ ಮೇಲೆ ಬರುವುದೂ ಇದೆ. ಇದು ಯಾವುದೇ ರೋಗ ಅಲ್ಲ. ಇದಕ್ಕೆ ಕಾರಣ ಬೇರೆಯೇ ಇದೆ.  ಅಡಿಕೆ ಸಸ್ಯದ ಬೇರು ಮೇಲೆ ಬಂದಿದೆ ಎಂದರೆ ಮಣ್ಣಿನಲ್ಲಿ ಸಸ್ಯದ ಬೇರುಗಳ ಬೆಳವಣಿಗೆಗೆ ಏನೋ ಅಡ್ದಿ ಉಂಟಾಗಿದೆ ಎಂದರ್ಥ. ಒಮ್ಮೆ ಹುಟ್ಟಿದ ಬೇರು ಸಮರ್ಪಕವಾಗಿ ಬೆಳವಣಿಗೆ…

Read more
error: Content is protected !!