ಅಡಿಕೆ- ಕರಿಮೆಣಸು ಬೆಳೆಗಳ ತೋಟಕ್ಕೆ ಅಗತೆ ವರ್ಜ್ಯ

ಅಡಿಕೆ- ಕರಿಮೆಣಸು ಬೆಳೆಗಳ  ತೋಟಕ್ಕೆ ಅಗತೆ, ಉಳುಮೆ ವರ್ಜ್ಯ.

ಅಡಿಕೆ ಮರಗಳ ಬೇರುಗಳು ಮೆತ್ತನೆಯ ಮೇಲ್ಮಣ್ಣಿನಲ್ಲಿ ಹರಡಿ ಬೆಳೆಯುವ ಗುಣದ ಸಸ್ಯಗಳು. ಆದ ಕಾರಣ ಮೇಲು ಭಾಗವನ್ನು ಅಗತೆ, ಉಳುಮೆ ಮಾಡುವುದರಿಂದ  ಬೇರಿಗೆ ಹಾನಿಯಾಗುತ್ತದೆ. ಅಲ್ಲದೆ ಬೇರೆ ಬೇರೆ ತೊಂದರೆಗಳೂ ಉಂಟಾಗುತ್ತವೆ.ಅಡಿಕೆ ಮರದ ಬುಡದಲ್ಲಿ ಕರಿಮೆಣಸು ಇದ್ದರೆ ಯಾವ ಕಾರಣಕ್ಕೂ ಬುಡ ಭಾಗವನ್ನು  ಕೆರೆಯುವುದೂ ಸಹ ಮಾಡಬಾರದು. ಇದರಿಂದ ಕರಿಮೆಣಸಿನ ಬಳ್ಳಿ ಸಾಯಬಹುದು, ಅಥವಾ ಸೊರಗಬಹುದು. ಬುಡ ಬುಡಿಸುವುದು ಹಳೆ ಪದ್ದತಿ: ನಮ್ಮ ಹಿರಿಯರು ತಿಳಿದೋ ತಿಳಿಯದೆಯೋ ಕೆಲವು ಬೇಸಾಯ ಕ್ರಮಗಳನ್ನು ಅನುಸರಿಸುತ್ತಿದ್ದರು. ಅದರಲ್ಲಿ ಒಂದು ಬುಡ…

Read more
areca nut palm with full yield

ಅಡಿಕೆ – ಉತ್ತಮ ಫಲ ಕೊಡುವ ಮರದ ಲಕ್ಷಣ ಹೇಗಿರಬೇಕು.

ಇತ್ತೀಚೆಗಿನ ಅಡಿಕೆ ತೋಟಗಳಲ್ಲಿ ಶೇ.50 ಮಾತ್ರ ಉತ್ತಮ ಫಲನೀಡಿ, ಉಳಿದವು ಅನುತ್ಪಾದಕ ಮರಗಳಂತೆ ಇರುವ ಕಾರಣ ತೋಟಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದರೂ ಉತ್ಪಾದನೆ ಆ ಮಟ್ಟಕ್ಕೆ ಏರುತ್ತಿಲ್ಲ. ಬೆಳೆಗಾರರು ಹೆಚ್ಚು ಹೆಚ್ಚು ಸಸಿ ನೆಡುವ ಬದಲು ಇರುವ ತೋಟದಲ್ಲೇ ಬಹುತೇಕ ಉತ್ಪಾದಕ ಮರಗಳಿರುವಂತೆ ತೋಟವನ್ನು ಪುನಃಶ್ಚೇತನ ಮಾಡುವುದು ಎಲ್ಲಾ ದೃಷ್ಟಿಯಿಂದ ಉತ್ತಮ. ಸ್ವಲ್ಪ ಬಿಡುವು ಮಾಡಿಕೊಂಡು ತೋಟ ಸುತ್ತುತ್ತಾ ಬನ್ನಿ. ಹಿಂದೆ ಸುತ್ತುದಾಗ ಗಮನಿಸಿದ ಮರ, ಕಳೆದ ವರ್ಷ ಸುತ್ತುವಾಗ ಗಮನಿಸಿದ ಮರ , ಅದಕ್ಕಿಂತ ಹಿಂದಿನ…

Read more

ಸರಕಾರೀ ವ್ಯವಸ್ಥೆಗಳಲ್ಲೂ ಇಷ್ಟು ವ್ಯಾಪಾರ ಬೇಕೇ?

ಮೊನ್ನೆ ಸುಬ್ರಮಣ್ಯ ಸಮೀಪದ ನೆಟ್ಟಣದ ಕೇಂದ್ರೀಯ ತೋಟದ ಬೆಳೆಗಳ ಸಂಶೊಧಾನ ಸಂಸ್ಥೆಯ  ಬೀಜ ಕೇಂದ್ರಕ್ಕೆ ತೆಂಗಿನ ಸಸಿ ತರಲು ಹೋಗಿದ್ದೆ. ಇಲ್ಲಿ ಆದ ಅನುಭವ ಯಾಕೋ ರೈತರ ಜೊತೆ ಹಂಚಿಕೊಳ್ಳಬೇಕೆನಿಸುತ್ತಿದೆ.  ಸರಕಾರೀ ವ್ಯವಸ್ಥೆಗಳಲ್ಲಿ ಇಷ್ಟೊಂದು ವ್ಯಾಪಾರ ಬೇಕಾ?. ಬೀಜ- ಸಸಿ ಎಂಬ ರೈತರ ಭವಿಷ್ಯದ ಇನ್ವೆಸ್ಟ್ಮೆಂಟ್ ನಲ್ಲಿ ಯಾರೂ ಮಕ್ಕಳಾಟಿಕೆ ಮಾಡಬಾರದು.  ಒಂದು ಕುಬ್ಜ ತಳಿಯ ಬೀಜದ ತೆಂಗಿನ ಕಾಯಿ. ಬೆಲೆ ಎಷ್ಟು ಗೊತ್ತೇ? ಬರೋಬ್ಬರಿ 120 ರೂ. ಒಂದು ಸಸಿಯ ಬೆಲೆ ಎಷ್ಟು ಗೊತ್ತೇ 210…

Read more
ಅಡಿಕೆ ಗರಿ ತಿನ್ನುವ ಹುಳದ ವಾಸಸ್ಥಾನ

ಅಡಿಕೆಗೆ ಹರಿತ್ತು ತಿನ್ನುವ ಹುಳುವಿನ ತೊಂದರೆ ಮತ್ತು ಪರಿಹಾರ.

ಅಡಿಕೆಯ ಮರದ ಗರಿಗಳನ್ನು ಹಾನಿಮಾಡುವ ಕೀಟಗಳಲ್ಲಿ ಮುಖ್ಯವಾಗಿ ಸುಳಿ ತಿಗಣೆ ಒಂದು ಎಂದು ನಾವು ತಿಳಿದಿದ್ದೇವೆ, ಆದರೆ ಇದನ್ನು ಸಿಂಗಾರ ತಿನ್ನುವ  ಹುಳದ ತರಹವೇ ಇರುವ ಇನ್ನೊಂದು ಎಲೆ ತಿನ್ನುವ ಹುಳ ಸಹ ಅಡಿಕೆಯ ಎಳೆಯ ಗರಿಗಳನ್ನು ತಿನ್ನುತ್ತವೆ. ಇದರಿಂದ ಬಹಳ ಹಾನಿ ಉಂಟಾಗುತ್ತಿದೆ. ದಾವಣಗೆರೆ ಸುತ್ತಮುತ್ತ ಹಲವು ರೈತರ ಹೊಲದಲ್ಲಿ ಈ ಕೀಟದ  ಹಾವಳಿ ಹೆಚ್ಚಾಗಿದ್ದು, ಹೆಚ್ಚು ಹೆಚ್ಚು ಪ್ರದೇಶಕ್ಕೆ ವ್ಯಾಪಿಸುತ್ತಿದೆ. ಅಡಿಕೆಯ ಮರದ ಗರಿಗಳಿಗೆ ಆಗುವ ಹಾನಿ ಇಳುವರಿಯ ಮೇಲೆ ಪ್ರತಿಕೂಲ ಪರಿಣಾಮವನ್ನು ಉಂಟು…

Read more

ಇಪಿಎನ್ (EPN) ಸಿಂಪಡಿಸಿ- ಬೇರು ಹುಳ ನಿಯಂತ್ರಿಸಿ.

ಬೇರು ಹುಳ ಎಂಬುದು ಪ್ರಕೃತಿಯಲ್ಲಿಯೇ ಇರ್ವ ಒಂದು ಜೀವಿ. ನಿಸರ್ಗದಲ್ಲಿರುವ ಬೇರೆ ಬೇರೆ ಸಸ್ಯಗಳಿಗೆ  ಬೇರೆ ಬೇರೆ ನಮೂನೆಯ ಬೇರು ಹುಳಗಳು ತೊಂದರೆ ಮಾಡುತ್ತವೆ. ಹಾಗೆಯೇ ಪ್ರಕೃತಿಯಲ್ಲಿ ಅದನ್ನು ನಾಶಮಾಡುವ ಜೀವಿಯೂ ಇದೆ. ಅಂತಹ ಒಂದು ಜೀವಿ EPN. ಇದನ್ನು ಹೊಲದಲ್ಲಿ ಬಿಡುವುದರಿಂದ ಅವು ನೈಸರ್ಗಿಕವಾಗಿ ಬೇರು ಹುಳವನ್ನು ನಾಶ ಮಾಡುತ್ತವೆ.   ಇದು ಸಕಾಲ: ಮೇ ತಿಂಗಳಲ್ಲಿ ಬೇರು ಹುಳದ ದುಂಬಿ ಭೂಮಿಯಿಂದ ಹೊರಬಂದು ಗಂಡು ಹೆಣ್ಣು ಜೋಡಿಯಾಗಿ ಮತ್ತೆ ಮಣ್ಣಿಗೆ ಸೇರಿ ಅಲ್ಲಿ ಮೊಟ್ಟೆ…

Read more

ಕೊಕ್ಕೋ ಗಿಡ – ಪ್ರೂನಿಂಗ್ ಮಾಡುವ ವಿಧಾನ.

ಕೊಕ್ಕೋ ಸಸ್ಯ ಬೆಳೆಯಲು ಬಿಟ್ಟರೆ ಮರವೇ ಆಗಬಹುದು. ಹಾಗೆಂದು ಯಾವ ಬೆಳೆಗೂ ತೊಂದರೆ ಇಲ್ಲವಾದರೆ  ಅದನ್ನು ಅದರಷ್ಟಕ್ಕೇ ಬೆಳೆಯಲು ಬಿಡಿ. ಇಳುವರಿ ಹೆಚ್ಚುತ್ತದೆ. ಮಿಶ್ರ ಬೆಳೆಯಾಗಿ ಅಡಿಕೆ ತೋಟದಲ್ಲಿ ಬೆಳೆಸುವಾಗ ನಿಮ್ಮ ಒಡಾಟಕ್ಕೆ,ನೀರಾವರಿ, ಕೊಯಿಲು ಮತ್ತು ಇನ್ನಿತರ ಅನುಕೂಲಕ್ಕೆ ಸಮರ್ಪಕವಾಗಿ ಪ್ರೂನಿಂಗ್ ಮಾಡಬೇಕು. ಕೊಕ್ಕೋ ಬೆಳೆ ಕರಾವಳಿ, ಮಲೆನಾಡು, ಅರೆ ಮಲೆನಾಡು, ಹಾಗೆಯೇ  ಅಡಿಕೆ ತೆಂಗು ಬೆಳೆಯುವ ಬಯಲು ನಾಡಿಗೂ ಇದು  ಉತ್ತಮ ಅದಾಯದ  ಬೆಳೆ. ಕೊಕ್ಕೋವನ್ನು  ಅಡಿಕೆ, ತೆಂಗಿನ ತೋಟದಲ್ಲಿ ಮಿಶ್ರ ಬೆಳೆಯಾಗಿ ಬೆಳೆಯಬಹುದು. ಕೊಕ್ಕೋ…

Read more

ಅಡಿಕೆ- ಈ ರೀತಿಯಾಗಿ ಯಾಕೆ ಉದುರುತ್ತಿದೆ?

ಈ ವರ್ಷ ಅಡಿಕೆ ಬೆಳೆಗಾರರು ಬಹಳ ಸಮಸ್ಯೆಯನ್ನು  ಅನುಭವಿಸಿದ್ದಾರೆ. ಮೊದಲು ಸಿಂಗಾರ ಒಣಗುವ ಸಮಸ್ಯೆ , ನಂತರ ಮಿಡಿ ಕಾಯಿ ಉದುರುವುದು, ಈಗ ಮತ್ತೆ ಬಲಿಯುತ್ತಿರುವ (ಹಸ) ಕಾಯಿಗಳ ಉದುರುವಿಕೆ. ಬರೇ ಉದುರುವುದು ಮಾತ್ರವಲ್ಲ. ಕಾಯಿಯಲ್ಲಿ  ಸುಟ್ಟಂತಹ ಕಪ್ಪು ಕಲೆಗಳಿವೆ. ಕೊಳೆತ ಇಲ್ಲ. ಇದು ಯಾವ ಸಮಸ್ಯೆ ಎಂಬುದು ನಿಘೂಢವಾಗಿದೆ. ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ಹೇಳುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ  ಅದೇನೂ ಮಹಾ ಮಳೆಯೋ, ಅಡಿಕೆಗೆ ಭಾರೀ ಕೊಳೆ ರೋಗ ಬಂತು. ಸುಮಾರು 25-30% ಬೆಳೆ ನಷ್ಟವಾಯಿತು. ಈ…

Read more

ತೆಂಗಿನ ಮರದಲ್ಲಿ ಹರಳು(ಮಿಡಿ ) ಉದುರುವುದು ಯಾಕೆ?

ಬಹಳ ಜನ ತಮ್ಮ ತೆಂಗಿನ ಮರದ ಹೂ ಗೊಂಚಲಿನಲ್ಲಿ ಮಿಡಿ ಕಾಯಿ (ಹರಳು) ಉಳಿಯುವುದೇ ಇಲ್ಲ ಎನ್ನುತ್ತಾರೆ. ಕೆಲವರು ಒಂದು ಎರಡು ಮಾತ್ರ ಉಳಿಯುತ್ತದೆ ಎನ್ನುತ್ತಾರೆ. ಕೆಲವರು ಎಲ್ಲಾ ಮಿಡಿಗಳೂ ಪೊಳ್ಳೇ ಆಗುತ್ತವೆ ಎನ್ನುತ್ತಾರೆ. ತೆಂಗಿನ ಮರದ ಹೂ ಗೊಂಚಲಿನಲ್ಲಿ ಮಿಡಿಗಳು ಉದುರಲು ಬೇರೆ ಬೇರೆ ಕಾರಣಗಳು ಇರುತ್ತವೆ. ಮರದ ಲಕ್ಷಣ , ನೀಡುವ ಪೋಷಕಾಂಶ, ಹವಾಮಾನ ಮತ್ತು ಹೊಲದ ಸ್ಥಿತಿಗಳನ್ನು ಅವಲಂಭಿಸಿ ಅದಕ್ಕೆ ಯವ ಕಾರಣ ಎಂಬುದನ್ನು ನಿರ್ಧರಿಸಬಹುದು. ತೆಂಗಿನ ಮರದ ಹೂವು ವ್ಯವಸ್ಥೆ: ತೆಂಗು…

Read more
ಸುಳಿ ಮುರುಟಿದ ಅಡಿಕೆ ಗಿಡ

ಅಡಿಕೆ ಸಸ್ಯಗಳು ಮುರುಟಿಕೊಳ್ಳುವುದೇಕೆ? ಪರಿಹಾರ ಏನು?

ಅಡಿಕೆ ಸಸ್ಯಗಳ ಸುಳಿ ಮುರುಟಿಕೊಳ್ಳುವಿಕೆ ಮತ್ತು ಶಿರಭಾಗ ಬಾಗಿ ತಿರುಗುವಿಕೆ, ಗರಗಸ ಗಂಟು ಇವೆಲ್ಲಾ ಒಂದು ಶಾರೀರಿಕ ಸಮಸ್ಯೆಗಳು.ಕೆಲವು ಪ್ರಾಥಮಿಕ ಹಂತದಲ್ಲಿರುವವುಗಳನ್ನು ಸರಿಪಡಿಸಲು ಸಾಧ್ಯವಾಗುತ್ತದೆ. ಆದರೆ ಇದು ಸ್ವಲ್ಪ ನಿಧಾನ ಪ್ರಕ್ರಿಯೆ. ಗೊಬ್ಬರ ನಿರ್ವಹಣೆ ಮತ್ತು ಅಗತ್ಯ ಬೇಸಾಯ ಕ್ರಮದಲ್ಲೇ ಇದನ್ನು  ಸರಿಪಡಿಸಿಕೊಳ್ಳಲು ಸಾಧ್ಯ. ನೂರು ಅಡಿಕೆ ಮರಗಳಲ್ಲಿ ಕನಿಷ್ಟ 10 ಆದರೂ ಈ ತರಹ ಸುಳಿ ಮುರುಟುವುದು, ಗರಿ ಬಿಡಿಸಿಕೊಳ್ಳದೆ ಅಲ್ಲಿಗೆ ಗುಛ್ಛವಾಗುವುದು ಇರುತ್ತದೆ. ಇದಕ್ಕೆ ಪ್ರಾದೇಶಿಕ ಇತಿ ಮಿತಿ ಇಲ್ಲ. ಇದನ್ನು ಕೆಲವರು ಹಿಡಿ…

Read more

ಅಡಿಕೆಯ ಗೊನೆ ಕಳಚಿ ಬೀಳುವುದಕ್ಕೆ ಕಾರಣ ಇದು.

ಅಡಿಕೆ  ಬೆಳೆಯುವವರು  ತಾವು ಬೆಳೆಸಿದ ಸಸಿಗಳ ಚೊಚ್ಚಲ ಫಸಲನ್ನು  ನೋಡಿ ಖುಷಿ ಪಡುತ್ತಾರೆ. ಅದರೆ  ಕೆಲವೊಮ್ಮೆ ಮಳೆಗಾಲದಲ್ಲಿ ಈ ಹೊಸ ಫಸಲು ಗೊನೆ ಸಮೇತ ಕೆಳಗೆ ಬೀಳುತ್ತದೆ.   ಯಾಕೆ ಹೀಗಾಯಿತು. ಯಾವ ರೋಗ ಎಂದು ಸಿಕ್ಕ ಸಿಕ್ಕವರ ಜೊತೆಯಲ್ಲಿ ಸಲಹೆ , ಔಷಧಿ ಕೇಳಬೇಡಿ. ಇದು ಮೊದಲ ಫಸಲಿನಲ್ಲಿ ಸಾಮಾನ್ಯ. ಇದಕ್ಕೆ ಯಾವ ಔಷಧಿಯೂ ಬೇಕಾಗಿಲ್ಲ. ಪೋಷಕಾಂಶಗಳ ಬಳಕೆಯಲ್ಲಿ ಸಮತೋಲನ ಕಾಯ್ದುಕೊಳ್ಳಿ. ಯಾಕೆ ಗೊನೆ ಬೀಳುತ್ತದೆ: ಅಡಿಕೆ ಸಸಿಗಳಲ್ಲಿ ಫಸಲು ಪ್ರಾರಂಭವಾಗಲು ಮೂರು-ನಾಲ್ಕು- ಐದು ವರ್ಷ  ಬೇಕಾಗುತ್ತದೆ…

Read more
error: Content is protected !!