ಬೋರ್ಡೋ ದ್ರಾವಣ ಸಿಂಪಡಿಸಿದ ಮರ

ಬೋರ್ಡೋ ದ್ರಾವಣ ತಾಯಾರಿಕೆ ವಿಧಾನ ಇದು.

ಸುಣ್ಣ ಮತ್ತು ಮೈಲು ತುತ್ತೆಯನ್ನು ಸರಿಯಾದ ಪ್ರಮಾಣದಲ್ಲಿ ಮಿಶ್ರಣ ಮಾಡಿ ತಯಾರಿಸುವ ದ್ರಾವಣಕ್ಕೆ ಬೋರ್ಡೋ  ದ್ರಾವಣ (Bordeaux mixture )ಎಂದು ಹೆಸರು. ಇದು  ಕೊಳೆಯುವ ರೋಗಕ್ಕೆ ಕಾರಣವಾದ  ಶಿಲೀಂದ್ರದ ಬೀಜಾಣುಗಳನ್ನು ಮೊಳಕೆಯೊಡೆಯದಂತೆ  ಪ್ರತಿಬಂಧಿಸುವ ಶಕ್ತಿಯನ್ನು ಹೊಂದಿದೆ. ಪ್ರಾನ್ಸ್ ದೇಶದ ಬೊರ್ಡೋ ಎಂಬ ಪ್ರದೇಶದಲ್ಲಿ ದ್ರಾಕ್ಷಿ ತೋಟಗಳಲ್ಲಿ ಸಸ್ಯಾಣುಗಳಿಂದ ಉಂಟಾಗುವ ರೋಗವನ್ನು ನಿಯಂತ್ರಿಸಲು ಈ ಸಾಮಾಗ್ರಿಗಳ ಪಾಕವನ್ನು ಬಳಸಲಾಗುತ್ತಿತ್ತಂತೆ. ಅದನ್ನು ಮೈಸೂರು ಪ್ರಾಂತ್ಯದಲ್ಲಿ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಪರಿಚಯಿಸಿದವರು  ಲೆಸ್ಲಿ ಸಿ ಕೋಲ್ ಮನ್ Leslie Charles Coleman…

Read more
ಉಳುಮೆ ರಹಿತ ತೆಂಗಿನ ತೋಟ

ತೆಂಗಿನ ಮರದ ರಸ ಸೋರುವಿಕೆಗೂ ಉಳುಮೆಗೂ ಏನು ಸಂಬಂಧ?

ತೆಂಗಿನ ಮರಕ್ಕೆ ಅತೀ ದೊಡ್ಡ ರೋಗ ಎಂದರೆ ಕಾಂಡದಲ್ಲಿ ರಸ ಸೋರುವಿಕೆ. ರಸ ಸೋರುವಿಕೆ ಪ್ರಾರಂಭವಾಗಿ ಕೆಲವು ವರ್ಷಗಳ ನಂತರ ಮರ ಕಾಯಿ ಬಿಡುವುದು ನಿಲ್ಲಿಸುತ್ತದೆ. ನಿಧಾನವಾಗಿ ಮರ ಕೃಶವಾಗುತ್ತಾ ಬರುತ್ತದೆ. ಇದಕ್ಕೆ ಮೂಲ ಕಾರಣ ಮರದ ಬೇರು ಸಮೂಹಕ್ಕೆ ತೊಂದರೆ ಮಾಡಿರುವುದೇ ಆಗಿರುತ್ತದೆ. ಮರದ ಬುಡ  ಭಾಗ ಉಳುಮೆ ಮಾಡುವಾಗ ಬೇರುಗಳಿಗೆ ಗಾಯ ಅಗಿ ಈ ತೊಂದರೆ ಉಂಟಾಗುತ್ತದೆ. ಪ್ರತೀಯೊಬ್ಬ ತೆಂಗು ಬೆಳೆಯುವವರೂ ತೆಂಗಿನ ಮರದ ಬೇರು ವ್ಯವಸ್ಥೆ ಹೇಗೆ ಇದೆ. ಯಾಕೆ ಅದಕ್ಕೆ ಗಾಯ…

Read more

ಕೊಳೆ ರೋಗ ಬಾರದಿರುವಂತೆ ಮುನ್ನೆಚ್ಚರಿಕೆ.

ಕೊಳೆ ರೋಗಕ್ಕೆ ಕಾರಣವಾದ ಶಿಲೀಂದ್ರ ನಮ್ಮ ವಾತಾವರಣದಲ್ಲಿ ಎಲ್ಲಾ  ಕಡೆ ಬೀಜಾಣು ರೂಪದಲ್ಲಿ ಇರುತ್ತದೆ, ಇದು ಅನುಕೂಲ ಪರಿಸ್ಥಿತಿ  ಕೂಡಿ ಬಂದಾಗ ಬೀಜಾಂಕುರವಾಗುತ್ತದೆ. ಸಂತಾನಾಭಿವೃದ್ದಿ ಹೊಂದಿ ಅಡಿಕೆಯ ಎಳೆ ಕಾಯಿಗಳಿಗೆ ಹಾನಿ ಮಾಡಿ ಬೆಳೆ ನಷ್ಟಕ್ಕೆ  ಕಾರಣವಾಗುತ್ತದೆ. ಪ್ರಾರಂಭದಲ್ಲೇ ಬೀಜಾಂಕುರವನ್ನು ತಡೆದರೆ  ಪರಿಣಾಮ ಹೆಚ್ಚು. ತಜ್ಞರು ಕೊಳೆ ಔಷಧಿಯನ್ನು ಮುಂಗಾರು ಮಳೆ ಪ್ರಾರಂಭವಾಗುವ ಮುಂಚೆಯೇ ಅಡಿಕೆ ಗೊನೆಗಳಿಗೆ ಸಿಂಪರಣೆ ಮಾಡಬೇಕು ಎನ್ನುತ್ತಾರೆ. ನಾವು ಇನ್ನೂ ಅಡಿಕೆ  ಮಿಡಿಗಳು ಸಣ್ಣದಿವೆ. ಅದಕ್ಕೆ ಹೇಗಪ್ಪಾ ಔಷಧಿ ತಗಲುವುದು ಎಂದು ಸಾಧ್ಯವಾದಷ್ಟು…

Read more
ಮಾವಿನ ಹಣ್ಣು

ರಾಸಾಯನಿಕ ಬಳಸದೆ ಹಣ್ಣು ಮಾಡುವ ಸರಳ ವಿಧಾನ

ಹೆಚ್ಚಾಗಿ ಮಾವಿನ ಕಾಯಿ ಹಣ್ಣು ಮಾಡಲು ಹಿಂದಿನಿಂದಲೂ ಕ್ಯಾಲ್ಸಿಯಂ ಕಾರ್ಬೇಟ್ ಎಂಬ ಅಪಾಯಕಾರೀ ವಸ್ತುವನ್ನು ಬಳಸಲಾಗುತ್ತಿತ್ತು. ಈಗ ಹಾಗಿಲ್ಲ. ಅದರ ಬದಲಿಗೆ  ಅರೋಗ್ಯಕ್ಕೆ ಹಾನಿ ಇಲ್ಲದ ಹಣ್ಣು ಮಾಡುವ ವಿಧಾನವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯವರು ಬೆಳೆಗಾರರಿಗೆ ತಿಳಿಸಿಕೊಟ್ಟಿದ್ದಾರೆ. ಇದನ್ನು ಬಹಳಷ್ಟು ಬೆಳೆಗಾರರು ಅಳವಡಿಸಿಕೊಂಡಿದ್ದಾರೆ. ನಮ್ಮ ರಾಜ್ಯದ ಮಾವಿನ ರಾಜದಾನಿ ಎಂದೇ  ಖ್ಯಾತವಾದ ಶ್ರೀನಿವಾಸಪುರದಿಂದ ಸಂಜೆ ಹೊತ್ತು ಲಾರಿಗೆ ಲೊಡ್ ಆದ ಮಾವು ಮರುದಿನ ತಲುಪಬೇಕಾದಲ್ಲಿಗೆ ತಲುಪುವಾಗ ಮೆತ್ತಗಾಗುತ್ತದೆ.  ಅದನ್ನು ಖರೀದಿಸಿವರು ಮರುದಿನ ಮಾರಾಟ ಮಾಡುವಾಗ ಬಣ್ಣ…

Read more
Mulching to whole ground

ಅಡಿಕೆ – ಕಬ್ಬು ಬೆಳೆಯ ಬೇರು ದುಂಬಿ ನಿಯಂತ್ರಣ.

ಅಡಿಕೆಗೆ ಮಾತ್ರ ಬೇರು ಹುಳದ ಕಾಟ ಅಲ್ಲ. ಕಬ್ಬು, ಹಿಪ್ಪು ನೇರಳೆ ಹೀಗೆ ಬಹಳಷ್ಟು ಬೆಳೆಗಳಿಗೆ ಈ ಹುಳದ ಕಾಟ ಇದೆ. ಇದರ ದುಂಬಿಗಳು ಈಗ ಹೊರಗೆ ಹಾರಾಡುವ ಸಮಯ. ಈಗ ಅದನ್ನು ನಿಯಂತ್ರಿಸುವ ಉಪಾಯ ಇದು.ಮರದ ಆರೋಗ್ಯಕ್ಕೆ  ಮತ್ತು ಬೆಳೆವಣಿಗೆಗೆ  ಆಧಾರವೇ ಅದರ ಬೇರು. ಆ ಬೇರನ್ನು ತಿನ್ನುವ ಒಂದು ಹುಳ ಅದನ್ನು ಏಳಿಗೆಯಾಗಲು ಬಿಡುವುದಿಲ್ಲ. ಕೆಲವು ಮಣ್ಣಿನಲ್ಲಿ ಈ ಬೇರು ಹುಳದ ಸ್ತೊಂದರೆ ಹೆಚ್ಚು. ಮತ್ತೆ ಕೆಲವು ಕಡೆ ಕಡಿಮೆ. ಬೇರು ಹುಳಗಳನ್ನು  ಒಡಿಸದಿದ್ದರೆ…

Read more
ಸುಳಿ ಕೊಳೆಗೆ ತುತ್ತಾದ ಅಡಿಕೆ ಸಸಿ

ಅಡಿಕೆ – ಸುಳಿ ಕೊಳೆಯುವುದಕ್ಕೆ ಕಾರಣ ಮತ್ತು ಪರಿಹಾರ.

ಕಳೆದ ಕೆಲವು ವರ್ಷಗಳಿಂದ ಅಡಿಕೆ ಬೆಳೆಗಾರರು ಸಸಿ/ ಮರದ  ಸುಳಿ ಕೊಳೆಯುವ/ ಬುಡ ಕೊಳೆಯುವ ತೊಂದರೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಎದುರಿಸುತ್ತಿದ್ದಾರೆ. ಹವಾಮಾನ ವೆತ್ಯಾಸ ಮತ್ತು ಇನ್ನಿತರ ಕಾರಣಗಳಿಂದ ಇದು ಆಗುತ್ತದೆ. ಸಂಜೆ  ಮಳೆ ಬರುತ್ತದೆ, ಹಗಲು ಭಾರೀ ಪ್ರಖರವಾದ ಬಿಸಿಲು. ಈ ಸನ್ನಿವೇಶದಲ್ಲಿ  ಅಡಿಕೆ, ತೆಂಗು ಮುಂತಾದ ಸಸಿ/ ಮರದ ಎಳೆಯ ಸುಳಿ ಭಾಗದಲ್ಲಿ ಒಂದು ಶಿಲೀಂದ್ರ ಬೆಳೆದು ಅದು ಆ ಭಾಗವನ್ನು ಕೊಳೆಯುವಂತೆ  ಮಾಡಿ ಮರದ ಮೊಳೆಕೆ ತನಕ ವ್ಯಾಪಿಸಿ ಗಿಡವನ್ನು  ಸಾಯುವಂತೆ  ಮಾಡುತ್ತದೆ. ಇದು ಈಗ ಎಲ್ಲಾ…

Read more
ಬೇಗ ಇಳುವರಿ ಕೊಡಬಲ್ಲ ತೆಂಗಿನ ಸಸಿ ಲಕ್ಷಣ - Early yielding nature of plant

ಉತ್ತಮ ಇಳುವರಿ ನೀಡಬಲ್ಲ ತೆಂಗಿನ ಸಸಿಯ ಲಕ್ಷಣಗಳು ಹೇಗೆ ಇರಬೇಕು?

 ಧೀರ್ಘಾವಧಿ ಬೆಳೆಗಳಲ್ಲಿ ಸಸ್ಯ ಮೂಲವನ್ನು ಆರಿಸುವಾಗ ನಮಗೆ ಸ್ವಲ್ಪ ಮಟ್ಟಿಗೆ ಸಸಿ ಹೀಗೆ ಇದ್ದರೆ ಉತ್ತಮ ಎಂಬ ಮಾನದಂಡಗಳನ್ನು ತಿಳಿದಿದ್ದರೆ ಒಳ್ಳೆಯದು.  ಕಾರಣ ಈ ಗಿಡ ನೆಟ್ಟು ಪ್ರತಿಫಲ ತೋರಿಸಲು 5-6 ವರ್ಷ ಬೇಕು. ಆಗ ನಮ್ಮ ಆಯ್ಕೆ ಸ್ವಲ್ಪ ತಪ್ಪಿದ್ದರೆ ಅಷ್ಟೂ ವರ್ಷ ನಷ್ಟ. ಇದಕ್ಕಾಗಿ ಪ್ರತೀಯೊಬ್ಬ ತೆಂಗು ಬೆಳೆಯುವವನೂ ತೆಂಗಿನ ಉತ್ತಮ ಗಿಡದ ಲಕ್ಷಣಗ ಗಳು ಹೀಗೆ ಇರಬೇಕು ಎಂಬುದನ್ನು ತಿಳಿದಿದ್ದರೆ ಒಳ್ಳೆಯದು. ತೆಂಗು ಮಿಶ್ರ ಪರಾಗಸ್ಪರ್ಷದ ಮೂಲಕ ಕಾಯಿ ಕಚ್ಚುವ ಸಸ್ಯವಾಗಿದು, ಯಾವ ಮರದ ಕಾಯಿಯನ್ನು…

Read more
ಮೈದಾನ ಪ್ರದೇಶಕ್ಕೆ ಹೊಂದುವ ನೀರಾವರಿ ಬೇಕಾಗದ ಗೋಡಂಬಿ ತಳಿಗಳು.

ಮೈದಾನ ಪ್ರದೇಶಕ್ಕೆ ಹೊಂದುವ ನೀರಾವರಿ ಬೇಕಾಗದ ಗೋಡಂಬಿ ತಳಿಗಳು.

ಅರೆ ಮಲೆನಾಡು ಮತ್ತು ಬಯಲು ಸೀಮೆಗಳಾದ ತುಮಕೂರು, ಶಿರಾ, ಕೊಲಾರ, ರಾಮನಗರ, ಹಾಗೆಯೇ ಬಾಗಲಕೋಟೆ, ಬೆಳಗಾವಿಯ ಕೆಲವು ಭಾಗಗಳಲ್ಲಿ  ರೈತರು ಈಗಾಗಲೇ ಗೇರು ಬೆಳೆಸುತ್ತಿದ್ದು, ಇಲ್ಲಿನ ಹವಾಮಾನದಲ್ಲಿ ಉತ್ತಮ ಇಳುವರಿ ಬರುತ್ತಿದೆ. ಇಲ್ಲಿನ ಒಣ ಭೂಮಿಗೆ ಇದು ಚೆನ್ನಾಗಿ ಹೊಂದಿಕೊಂಡು ನೀರಾವರಿ ಮಾಡುವುದಿದ್ದರೂ ಅತೀ ಕಡಿಮೆ ನೀರಾವರಿ ಸಾಕು. ಬಾಗಲಕೋಟೆಯ ತೋಟಗಾರಿಕಾ ವಿಶ್ವವಿಧ್ಯಾನಿಲಯ, ಹುಲಕೋಟಿಯ ಕೃಷಿ ಸಂಶೋಧನಾ ಕೇಂದ್ರ, ಚಿಂತಾಮಣಿಯ ತೋಟಗಾರಿಕಾ ಸಂಶೋಧನಾ  ಕೇಂದ್ರಗಳು ಗೋಡಂಬಿ ಬೆಳೆಯನ್ನು  ಬೆಳೆಸುವ ರೈತರಿಗೆ ಮನವರಿಕೆ ಮಾಡಿಕೊಡಲು ಶ್ರಮಿಸುತ್ತಿದ್ದಾರೆ. ಮೈದಾನ ಪ್ರದೇಶಕ್ಕೆ…

Read more

ಕರಾವಳಿ ಮಲೆನಾಡಿಗೆ ಹೊಂದುವ ಉತ್ತಮ ಗೇರು ತಳಿಗಳು

ಗೇರು ಒಂದು ವಿದೇಶಿ ವಿನಿಮಯ ಗಳಿಸುವ ವಾಣಿಜ್ಯ ಬೆಳೆ. ನಮ್ಮ ದೇಶದಲ್ಲಿ ಇದನ್ನು ಕೇರಳ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಒರಿಸ್ಸಾ ಈಶಾನ್ಯ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲೆಲ್ಲಾ ಬೆಳೆಯಲಾಗುತ್ತಿದೆ. ಹೆಚ್ಚು ಪ್ರೊಟೀನ್ ಹಾಗೂ ಕಡಿಮೆ ಪ್ರಮಾಣದ ಶರ್ಕರ ಹೊಂದಿರುವ ಗೇರುಬೀಜಕ್ಕೆ ಪಾಶ್ಚಿಮಾತ್ಯ ದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದೆ. ಇದು ನಮ್ಮ ರಾಜ್ಯದ ಕರಾವಳಿ, ಮಲೆನಾಡು ಅರೆ ಮಲೆನಾಡು ಪ್ರದೇಶಗಳಿಗೆ  ಚೆನ್ನಾಗಿ ಹೊಂದಿಕೆಯಾಗುವ ಬೆಳೆಯಾಗಿದೆ. ಕಡಿಮೆ ನೀರಿನಲ್ಲಿ ಬೆಳೆದು ಆದಾಯ ಕೊಡಬಲ್ಲ ಬೆಳೆ ಎಂದು…

Read more

ಅಡಿಕೆ ಮರದಲ್ಲಿ ಅಂಟು ಸ್ರವಿಸುವುದಕ್ಕೆ ಕಾರಣ ಮತ್ತು ಪರಿಹಾರ.

ಇತ್ತೀಚಿಗೆ ಮಲೆನಾಡು ಮತ್ತು ಬಯಲುಸೀಮೆಯ ಕೆಲವು ತೋಟಗಳಲ್ಲಿ ಅಡಿಕೆ ಮರದಕಾಂಡ ಮತ್ತು ಸೋಗೆಯ ದಿಂಡಿನಿಂದ ಅಂಟು (ಮೇಣದಂತಹ ಪದಾರ್ಥ) ಸೋರುತ್ತಿರುವುದು ಕಂಡುಬಂದಿದೆ.ಇದನ್ನು ಎಂದೂ ಕಂಡಿಲ್ಲದ ಬೆಳೆಗಾರರು ಸಹಜವಾಗಿ ಗೊಂದಲಕ್ಕೀಡಾಗಿದ್ದಾರೆ. ಈ ವಿದ್ಯಮಾನದ ಬಗ್ಗೆ ಲಭ್ಯವಿರುವ ವೈಜ್ಞಾನಿಕ ಮಾಹಿತಿಯನ್ನು ಈ ಲೇಖನದ ಮೂಲಕ ಬೆಳೆಗಾರ ಅನುಕೂಲಕ್ಕಾಗಿ ನೀಡಲಾಗಿದೆ. ಅಂಟು ಸೋರಲು ಕಾರಣವೇನು? ಕೇವಲ ಅರ್ಧ ಸೆಂಟಿಮೀಟರ್‍ ಉದ್ದವಿರುವ ಯೂಪ್ಲಾಟಿಪಸ್ ಪ್ಯಾರಲ್ಲೆಲಸ್ ಎಂಬ ಕೀಟ. ಇದು  ಅಡಿಕೆ ಮರದಕಾಂಡ ಮತ್ತು ಸೋಗೆಯ ದಿಂಡನ್ನು ಕೊರೆದು ಒಳಗೆ ಪ್ರವೇಶಿಸಿಸುತ್ತದೆ. ಕೀಟವು ಪ್ರವೇಶಿಸಿದ…

Read more
error: Content is protected !!