Kare Ishaad

ಉತ್ತರ ಕನ್ನಡದ ವಿಶೇಷ ಮಾವು- ಕರೇ ಈಶಾಡ್.

ಕುಮಟಾ ಅಂಕೋಲಾ ಮಧ್ಯೆ ಹೆಚ್ಚಿನವರ ಮನೆ ಬಾಗಿಲಿನಲ್ಲಿ ಒಂದೆರಡು ಮಾವಿನ ಮರ ಇದ್ದೇ ಇರುತ್ತದೆ. ಇಲ್ಲಿ ಜನ ಯಾವುದಾದರೂ ಮರ ಕಡಿದಾರು ಆದರೆ ಮನೆ ಹಿತ್ತಲಿನಲ್ಲಿರುವ ಕರೇ ಈಶಾಡ್ ಮಾವಿನ ಮರಕ್ಕೆ  ಕೊಡಲಿ ಇಡಲಾರರು. ಕಾರಣ ಇದು ಆ ಪ್ರದೇಶದ ಪ್ರಸಿದ್ದ ಮಾವಿನ ತಳಿ. ಜೊತೆಗೆ ಹಣ್ಣಿನ ಸೀಸನ್‍ನಲ್ಲಿ ಸ್ವಲ್ಪ ಉತ್ಪತ್ತಿ ತಂದುಕೊಡುವ ಬೆಳೆ.    ಕರೇ ಈಶಾಡ್ ಎಂಬುದು ಕುಮಟಾ ಅಂಕೋಲಾ ಮಧ್ಯದ ಪ್ರದೇಶಗಳಲ್ಲಿ ಬೆಳೆಯಲ್ಪಡುವ ಸ್ಥಳೀಯ ಮಾವಿನ ತಳಿ. ಸುಮಾರಾಗಿ ಮುಂಡಪ್ಪದ ಗಾತ್ರದಲ್ಲಿರುವ ಈ…

Read more

ಅಡಿಕೆಯ ಮಿಡಿಗಳು ಯಾಕೆ ಉದುರುತ್ತವೆ?

ಬೇಸಿಗೆಯಲ್ಲಿ ಏನೇನೋ ಕಸರತ್ತು ಮಾಡಿ ಹೂಗೊಂಚಲಿನಲ್ಲಿ ಮಿಡಿಗಳನ್ನು ಉಳಿಸಿರುತ್ತೇವೆ. ಆದರೆ ಅದು ಒಂದೆರಡು ಮಳೆ ಬಂದ ತಕ್ಷಣ ಉದುರಲಾರಂಭಿಸುತ್ತದೆ. ಕೆಲವು ಮುಂಚೆಯೇ ಉದುರುತ್ತದೆ. ಇದಕ್ಕೆ ಹಲವು ಕಾರಣಗಳಿದ್ದು, ರೈತರು ತಮ್ಮಲ್ಲಿ ಯಾವ ಸ್ಥಿತಿ ಇದೆಯೋ ಅದಕ್ಕನುಗುಣವಾಗಿ ಉಪಚಾರ ಮಾಡಿ ಅದನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಬಹುದು. ಮಳೆ ಒಂದು ಬಂದರೆ ಸಾಕು, ಅಡಿಕೆ ಮರದಲ್ಲಿ ಮಿಡಿಗಳು ಉದುರುತ್ತವೆ. ಕೆಲವೊಮ್ಮೆ ಒಂದೆರಡು  ಸಂಖ್ಯೆಯಲ್ಲಿ ಉದುರಿದರೆ  ಕೆಲವೊಮ್ಮೆ ಬಹುತೇಕ ಉದುರುತ್ತದೆ. ಅಂತಹಹ ಮಿಡಿಗಳಲ್ಲಿ ಆ ದಿನ ಉದುರಿದ ಮಿಡಿಯನ್ನು ಒಮ್ಮೆ ಸರಿಯಾಗಿ…

Read more
coconut in close dense

ತೆಂಗಿನ ಸಸಿ ನೆಡುವಾಗ ಎಲ್ಲಿ ಯಾವ ಅಂತರ ಸೂಕ್ತ?

ತೆಂಗನ್ನು 30 ಅಡಿ ಅಂತರದಲ್ಲೂ ಬೆಳೆಯಬಹುದು. ಹಾಗೆಯೇ 15 ಅಂತರದಲ್ಲೂ ಬೆಳೆಯಬಹುದು. ಅದು ಸ್ಥಳ ಮತ್ತು ಪರಿಸ್ಥಿತಿ ಯನ್ನು ಹೊಂದಿಕೊಂಡು. ತೆಂಗನ್ನು ಪ್ಲಾಂಟೇಶನ್ ಆಗಿ ಬೆಳೆಯಲಾಗುತ್ತದೆ. ಅದೇ ರೀತಿಯಲ್ಲಿ ಮನೆ ಹಿತ್ತಲ ಗಿಡವಾಗಿಯೂ, ರಸ್ತೆ ದಾರಿ ಮಗ್ಗುಲಿನ ಬೆಳೆಯಾಗಿಯೂ  ಬೆಳೆಯಲಾಗುತ್ತದೆ. ಇದು ಮುಖ್ಯ ಬೆಳೆಯೂ ಹೌದು. ಮಿಶ್ರ ಬೆಳೆಯೂ ಹೌದು. ತೆಂಗನ್ನು  ಬೆಳೆಸುವಾಗ ಎಲ್ಲಿ ಬೆಳೆಯುತ್ತೀರಿ ಅದರ ಮೇಲೆ ಅಂತರವನ್ನು ನಿರ್ಧರಿಸಿಕೊಳ್ಳಬೇಕು. ಪ್ಲಾಂಟೇಶನ್ ಬೆಳೆಯಾಗಿ: ತೆಂಗಿನ ತೋಟ ಮಾಡುತ್ತೀರೆಂದಾದರೆ  ಅಲ್ಲಿ ಪಾಲಿಸಬೇಕಾದ ಅಂತರ ಭಿನ್ನ. ಮರದಿಂದ ಮರಕ್ಕೆ…

Read more

ಅಡಿಕೆ ಬೆಲೆ ಕುಸಿಯುವ ಆತಂಕ ಇದೆ.

ಕ್ಯಾಂಪ್ಕೋ ಸಂಸ್ಥೆ, ಹಾಗೂ ಕೆಲವು ಖಾಸಗಿ ವ್ಯಾಪಾರಿಗಳು ಚಾಲಿ ಅಡಿಕೆ ಖರೀದಿಯ ಉತ್ಸಾಹದಲ್ಲಿದ್ದಾರೆ.  ಅತ್ತ ಕೆಂಪಡಿಕೆ ವ್ಯವಹಾರದಲ್ಲಿ ಶಿರಸ್ಸಿಯ TSS  ವ್ಯಾಪಾರಕ್ಕೆ ಇಳಿದು ಚಾಲಿಗೆ 32,000 ದಾಟಿಸಿ ಕೆಲವೇ ದಿನಗಳಲ್ಲಿ ಮತ್ತೆ 26,000 ಕ್ಕೆ ಇಳಿಸಿದೆ. ಎಲ್ಲಿಯೂ ಅಡಿಕೆ ಟೆಂಡರ್ ಆಗಿ ಮಾರಾಟ ಆಗಿಲ್ಲ. ಇದು ಬೆಲೆ ಸ್ಥಿತರೆಯ ಬಗ್ಗೆ ಆತಂಕ ಉಂಟು ಮಾಡುತ್ತಿದೆ. ಕೆಂಪಡಿಕೆಗೆ ನಾಲ್ಕು ದಿನಕ್ಕೆ ಹಿಂದೆ 32,000 ಕ್ಕೆ ಒಂದು ಬಿಡ್ಡಿಂಗ್ ನಡೆಯುವುದರಲ್ಲಿತ್ತು. ಆದರೆ  ಕೆಲವು ದೊಡ್ಡ ವ್ಯಾಪಾರೀ  ಕುಳಗಳ ಒತ್ತಡದಿಂದ ಅದು…

Read more
Weed less arecanut garden

ಕಳೆ ಹೆಚ್ಚು ಇದ್ದಲ್ಲಿ ಬೆಳೆ ತುಂಬಾ ಕಡಿಮೆ.

ಬಹಳ ಜನ ಬೆಳೆಗಳಿಗೆ ನೀರು ಕೊಟ್ಟಷ್ಟೂ ಒಳ್ಳೆಯದು ಎಂಬು ಭಾವಿಸುತ್ತಾರೆ. ಮಳೆಗಾಲದ ಮಳೆಗೆ ನೆಲ ಮತ್ತು ಸಸ್ಯಗಳು ಹೇಗೆ ಇರುತ್ತವೆಯೋ ಅದೇ  ರೀತಿ ಬೇಸಿಗೆಯಲ್ಲಿಯೂ ಇರುವಂತೆ ನೋಡಿಕೊಳ್ಳುತ್ತಾರೆ.  ನಮ್ಮ ಈ ವಿಧಾನದಿಂದಾಗಿ ಭೂಮಿಯಲ್ಲಿ ವರ್ಷದಿಂದ ವರ್ಷಕ್ಕೆ ಫಲವತ್ತತೆ ಕ್ಷೀಣಿಸುತ್ತದೆ. ಇಳುವರಿಯೂ ಕಡಿಮೆಯಾಗುತ್ತದೆ. ಇದು ನಮ್ಮೆಲ್ಲರ ಸಮಸ್ಯೆ: ಸಾಮಾನ್ಯವಾಗಿ ನಿರಂತರ 3-4  ವರ್ಷ ಗೊಬ್ಬರ  ಕೊಡುತ್ತಿದ್ದರೆ , ಒಂದು ವರ್ಷ ಏನೂ ಗೊಬ್ಬರ ಕೊಡದಿದ್ದರೂ ಬೆಳೆಯಲ್ಲಿ ಇಳುವರಿ ಕಡಿಮೆಯಾಗಬಾರದು. ಆದರೆ ಆಗುತ್ತದೆ. ಕಾರಣ ನಾವು ವರ್ಷ ವರ್ಷ ಕೊಡುವ…

Read more
ತೆಂಗಿನ ಮರ

ತೆಂಗಿನ ತೋಟದಲ್ಲಿ ಗರಿಷ್ಟ ಆದಾಯ ಕೊಡಬಲ್ಲ ಮಿಶ್ರ ಬೆಳೆ.

ಮಿಶ್ರ ಬೆಳೆ ಬೆಳೆಸಲು ಅತೀ ಸೂಕ್ತ ವಾದ ತೋಟ ಎಂದರೆ ತೆಂಗಿನ ತೋಟ. ಇದರ ಮಧ್ಯಂತರದಲ್ಲಿರುವ ಸ್ಥಳಾವಕಾಶ ಬೇರೆ ಯಾವ ಬೆಳೆಯಲ್ಲೂ ಸಿಗದು. ಆದ ಕಾರಣ  ತೆಂಗನ್ನು ಏಕ ಬೆಳೆಯಾಗಿ  ಉಳಿಸಿಕೊಳ್ಳದೆ ಸಾಧ್ಯವಾದಷ್ಟು ಮಿಶ್ರ ಬೆಳೆಗಳನ್ನು  ಬೆಳೆಸಿರಿ. ಒಂದು ತೆಂಗಿನ ತೋಟದಲ್ಲಿ ಮರವೊಂದರಲ್ಲಿ 100 ಕಾಯಿ ಸಿಕ್ಕರೂ ಸಹ  ಒಂದು ಎಕ್ರೆಯಲ್ಲಿ ಸುಮಾರು 8000  ಕಾಯಿಗಳು. ಇದರ ಮಾರಾಟದಿಂದ ಸಿಗಬಹುದಾದ ಸರಾಸರಿ ಉತ್ಪತ್ತಿ, ಸುಮಾರು 80,000 ರೂ. ಗಳು. ಒಂದು ಎಕ್ರೆಗೆ ಇಷ್ಟು ಉತ್ಪತ್ತಿ ಸಾಕೇ?  ಖಂಡಿತವಾಗಿಯೂ …

Read more
Good yield of arecanut

ಅಡಿಕೆ – ಅಧಿಕ ಇಳುವರಿಗೆ ಹೀಗೆ ಗೊಬ್ಬರ ಕೊಡಿ.

ಬಹಳ ಜನ ಅಡಿಕೆ ಬೆಳೆಯಲ್ಲಿ ಭವಿಷ್ಯ ಕಾಣುವವರಿದ್ದಾರೆ. ಅಧಿಕ ಇಳುವರಿ ಬೇಕು, ಯಾವ ಗೊಬ್ಬರ ಕೊಡಬೇಕು ಎಂಬ ಮಾಹಿತಿಗೆ ಕಾಯುತ್ತಿದ್ದಾರೆ. ಇಂಥ ಮಾಹಿತಿ ಇಲ್ಲಿದೆ. ಒಂದು ಅಡಿಕೆ ಮರದ  ಗರಿಷ್ಟ ಉತ್ಪಾದಕತೆ  ಸುಮಾರು  ಮೂರು ಗೊನೆ. ಒಂದು ಗೊನೆಯಲ್ಲಿ ಸರಾಸರಿ 1 ಕಿಲೋ ಅಡಿಕೆ. ನಾಲ್ಕು  ಕಿಲೋ ಅಡಿಕೆ ಬರುವುದು ಅಪರೂಪ. ಸುಮಾರು 2 -3 ಕಿಲೋ ಅಡಿಕೆ ಉತ್ಪಾದನೆ ಪಡೆಯಲು  ವ್ಯವಸ್ಥಿತವಾದ  ಬೇಸಾಯ ಕ್ರಮ ಮತ್ತು ಪೋಷಕಾಂಶ ನಿರ್ವಹಣೆ ಅಗತ್ಯ. ಯಾವ ನಿರ್ವಹಣೆ: ಅಡಿಕೆ ಮರಗಳ…

Read more

ಅಡಿಕೆ ಮರಗಳು ಹೀಗೆ ಯಾಕೆ ಆಗುತ್ತವೆ?

ಸಹಜ ಸ್ಥಿತಿಯಲ್ಲಿ ಅಡಿಕೆ ಮರದ ಗಂಟುಗಳು  ಒಂದೇ ನೇರಕ್ಕೆ  ಸುತ್ತು ಬಂದಿರಬೇಕು.ಆದರೆ  ಕೆಲವು ತೊಟಗಳಲ್ಲಿ ಕೆಲವು ಮರಗಳಲ್ಲಿ ಅದರ ಗಂಟು ವಿಚಿತ್ರವಾಗಿ ಗರಗಸದ ತರಹ ಬೆಳೆಯುತ್ತವೆ. ಇದ್ದು ರೋಗವೋ ಎಂಬ ಸಂದೇಹ ರೈತರಲ್ಲಿದೆ. ಇದು ರೋಗವಲ್ಲ.  ಪೊಷಕಾಂಶದ ಅಸಮತೋಲನ. ಗರಗಸ ಗಂಟು ಹೇಗೆ ಆಗುತ್ತದೆ? ಅದು 2005 ನೇ ಇಸವಿ. ಬಂಟ್ವಾಳ ತಾಲೂಕು, ಕಾಅವಳ ಮುಡೂರು ಗ್ರಾಮದ ಕೆದ್ದಳಿಕೆ ಗಣೇಶ್ ಭಟ್ ಇವರ ತೋಟಕ್ಕೆ  ಹೋಗಿದ್ದೆ. ಆಗ ಅವರು ತಮ್ಮ ಅಡಿಕೆ ಮರಗಳಿಗೆ ಕೊಡುತ್ತಿದ್ದ ಗೊಬ್ಬರ ಹರಳಿನ ಹಿಂಡಿ. ಹನಿ…

Read more
coconut palm

ತೆಂಗಿನ ಸಸಿ ಬೆಳವಣಿಗೆಗೆ ಇದು ದೊಡ್ದ ತಡೆ.

 ಮುಸ್ಸಂಜೆ ಮತ್ತು ಕತ್ತಲೆಗೆ ದೀಪದ ಬೆಳಕಿಗೆ ಬಂದು ಬಿಳುವ ದುಂಬಿಗಳಲ್ಲಿ ಕುರುವಾಯಿ ಕೀಟ ಒಂದು.ಈ ದುಂಬಿ ತೆಂಗಿನ ಬೆಳೆಗಾರರ ಅತೀ ದೊಡ್ದ ಶತ್ರು.   ನಮ್ಮ ಹಿರಿಯರು ಹೇಳುವುದಿದೆ, ಒಂದು ಕುರುವಾಯಿ ಕೊಂದರೆ 1 ದೇವಾಸ್ಥಾನ ಕಟ್ಟಿದ ಪುಣ್ಯವಿದೆ ಎಂದು. ಯಾಕೆಂದರೆ ಕುರುವಾಯಿ ಅಷ್ಟು ಹಾನಿ ಮಾಡುತ್ತದೆ.. ಆದ ಕಾರಣ  ವೃಕ್ಷಕ್ಕೆ ತೊಂದರೆ ಕೊಡುವ ಕೀಟ ಎಂಬ ಭಾವನೆಯಿಂದಲಾದರೂ ಅದು ನಶಿಸಲಿ ಎಂದು ಹಾಗೆ ಹೇಳಿರಬೇಕು. ಬಾಧೆಯ ಲಕ್ಷಣ: ತೆಂಗಿನ ಸಸಿಯ/ಮರದ ಮೂಡುತ್ತಿರುವ ಇನ್ನೂ ಅರಳಿರದ ಸುಳಿಯ…

Read more
error: Content is protected !!