ಕಲ್ಪರಸ – ನೀವು ಇನ್ನೂ ಕುಡಿದಿಲ್ಲವೇ – ಇಲ್ಲಿಗೆ ಹೋಗಿ.

ತೆಂಗಿನ ಮರದ ಹೂ ಗೊಂಚಲಿನಲ್ಲಿ ಒಂದು ರಸ (SAP) ಇದೆ. ಈ ರಸದಿಂದಲೇ, ಎಳನೀರು, ತೆಂಗಿನ ಕಾಯಿ ಆಗುತ್ತದೆ.  ಎಳನೀರು, ಕಾಯಿ ಆಗುವುದಕ್ಕೂ ಮುನ್ನ ನಾವು  ಇದನ್ನು ಸವಿಯಬಹುದು. ಅದೂ ಪರಿಶುದ್ಧವಾಗಿ. ಅದುವೇ ಕಲ್ಪರಸ.. ನಮ್ಮ ಪೂರ್ವಜರ ಕಾಲದಿಂದಲೂ ತೆಂಗಿನ ಮರ, ತಾಳೆ ಮರ, ಈಚಲು ಮರದ ಹೂ ಗೊಂಚಲಿನ ಅಮೃತ ಸಮಾನವಾದ ರಸದ ಮಹತ್ವವನ್ನು  ತಿಳಿಯಲಾಗಿತ್ತು. ಆದನ್ನು ತೆಗೆಯುವ ಕ್ರಮ ಮತ್ತು ದಾಸ್ತಾನು  ವಿಧಾನಗಳಿಂದ ಅದು ಕಲ್ಪರಸವಾಗದೆ  ಅಮಲು ಬರಿಸುವ ಸೇಂದಿ ಎಂಬ ಹೆಸರನ್ನು ಪಡೆದಿತ್ತು….

Read more
ಅಡಿಕೆ ಮರದಲ್ಲಿ ವೀಳ್ಯದೆಲೆ ಮಿಶ್ರ ಬೆಳೆ

ಅಡಿಕೆಯೊಂದಿಗೆ ವೀಳ್ಯದೆಲೆ- ಲಾಭದ ಮಿಶ್ರ ಬೆಳೆ.

ವೀಳ್ಯದೆಲೆಯ ಬೆಲೆ ಗೊತ್ತೇ?  100 ಎಲೆಗೆ 100 ರೂ. ತನಕವೂ ಆಗುವುದುಂಟು. ಅಲ್ಲದೆ ಇದು ವಾರ ವಾರ ಆದಾಯ ಕೊಡುವ ಬೆಳೆ. ಅಡಿಕೆ ಮರಕ್ಕೆ  ಇದನ್ನು ಹಬ್ಬಿಸಿದರೆ ಒಳ್ಳೆಯ ಲಾಭ. ಅಡಿಕೆ ಬೆಳೆಯುವ ಕೆಲವು ಭಾಗಗಳಲ್ಲಿ ಇದೇ ಅಡಿಕೆಯೊಂದಿಗೆ ಮಿಶ್ರ ಬೆಳೆ. ಅಡಿಕೆ  ತೋಟಕ್ಕೆ ಹೊಂದುವ ಮಿಶ್ರ ಬೆಳೆಗಳ  ಸಾಲಿನಲ್ಲಿ ಕರಿಮೆಣಸು–ಕೊಕ್ಕೋ, ಬಾಳೆ ಮಾತ್ರವಲ್ಲ, ವೀಳ್ಯದೆಲೆ ಬೆಳೆಯೂ ಲಾಭದಾಯಕ . ದಿನಾ ಆದಾಯ ತಂದು ಕೊಡಬಲ್ಲ ಈ ಬೆಳೆಯನ್ನು ರಾಜ್ಯದ ಹೆಚ್ಚಿನ ಕಡೆ ಅಡಿಕೆ ಮರಗಳಿಗೆ ಹಬ್ಬಿಸಿಯೇ…

Read more
ತೆಂಗಿನ ಮರಗಳು ನೋಡು ನೋಡುತ್ತಿದ್ದಂತೆ ಕಳೆಗುಂದಿ ಸಾಯುತ್ತವೆ.ಇದಕ್ಕೆ ಕಾರಣ ಏನಿರಬಹುದು

ತೆಂಗಿನ ಸಸಿ ಕಳೆಗುಂದಿ ಸಾಯುವುದಕ್ಕೆ ಇದು ಕಾರಣ.

ಬಹಳಷ್ಟು ಕೃಷಿಕರ ತೆಂಗಿನ ಮರಗಳು ನೋಡು ನೋಡುತ್ತಿದ್ದಂತೆ ಕಳೆಗುಂದಿ ಸಾಯುತ್ತವೆ.ಇದಕ್ಕೆ ಕಾರಣ ಏನಿರಬಹುದು? ನಮ್ಮ ಹಿರಿಯರು ತೆಂಗಿನ ಮರದ ಯಾವುದೇ ಹಸಿ ಭಾಗ ಕಡಿಯಬಾರದು ಎಂದಿದ್ದಾರೆ. ಹಾಗೆಯೇ ತೆಂಗಿನ ಮರ ಕಡಿಯಬಾರದು ಎಂದು ತಾಕೀತು ಮಾಡಿದ್ದಾರೆ. ಇದು ಯಾಕೆ ಗೊತ್ತೇ? ಒಂದು ಮರ ಕಡಿದರೆ ಅದರ ಫಲವಾಗಿ ನಾಲು ಮರ ಹೋಗುತ್ತದೆ. ಕಾರಣ ಮರದ ರಸದ ಆ ವಾಸನೆಯನ್ನು ಹುಡುಕಿಕೊಂಡು ಕೆಂಪು ಮೂತಿ ಹುಳ ಬರುತ್ತದೆ.ಅದು ಯಾವುದಾದರೂ ಮರದಲ್ಲಿ ತನ್ನ ಸಂತಾನಾಭಿವೃದ್ದಿ ಮಾಡುತ್ತದೆ. ತೆಂಗಿನ  ಮರಗಳಿಗೆ ಕುರುವಾಯಿ…

Read more

ಆಡಿಕೆ ಗರಿ ಹಳದಿಯಾಗಲು ಇದು ಕಾರಣ.

ಸಸ್ಯಗಳಿಗೆ ಉತ್ತಮ ಬಿಸಿಲು ದೊರೆತಾಗ ಅವುಗಳ ಎಲೆಗಳು ಹೆಚ್ಚು ಹೆಚ್ಚು ಉಸಿರಾಟ  ಕ್ರಿಯೆ  ನಡೆಸಿ ಚೆನ್ನಾಗಿ ಬೆಳೆಯುತ್ತವೆ. ಆದರೆ  ಕೆಲವೊಮ್ಮೆ ಈ ಅತಿಯಾದ ತಾಪಮಾನ ಕೆಲವು ಕೀಟಗಳನ್ನು ಆಕರ್ಷಿಸುತ್ತವೆ. ಇಂತದ್ದರಲ್ಲಿ ಒಂದು ಅಡಿಕೆಯ ಗರಿಯಲ್ಲಿ ವಾಸ ಮಾಡುವ ಕೆಂಪು ಮತ್ತು ಬಿಳಿ ತಿಗಣೆ. ಅಡಿಕೆ ಬೆಳೆಗೆ  ಸಹ್ಯ ತಾಪಮಾನ 35 ಡಿಗ್ರಿ  ತನಕ. ಅದಕ್ಕಿಂತ ಹೆಚ್ಚಾದರೆ ಅದು ಸಹಿಸಿಕೊಳ್ಳುವುದಿಲ್ಲ. ಅದಕ್ಕಾಗಿಯೇ  ನಮ್ಮ ಹಿರಿಯರು ಅಡಿಕೆ ತೋಟವನ್ನು ಅದಕ್ಕೆ ಸೂಕ್ತವಾದ ಜಾಗದಲ್ಲಿ ಮಾತ್ರ ಮಾಡಬೇಕು ಎನ್ನುತ್ತಿದ್ದರು. ಅಡಿಕೆ ಬೆಳೆಯಲು…

Read more
ಈರುಳ್ಳಿ

ಈರುಳ್ಳಿ ಬೆಳೆಸುವವರಿಗೆ- ಇಲ್ಲಿದೆ ವಿಶೇಷ ತಳಿಗಳು!

ಈರುಳ್ಳಿ ನಮ್ಮ ದೇಶದ ಪ್ರಮುಖ  ತರಕಾರಿ ಬೆಳೆ. ಇದನ್ನು ಬಲ್ಬ್ ಕ್ರಾಪ್ ಎನ್ನುತ್ತಾರೆ. ಪ್ರಪಂಚದಲ್ಲೇ ಈರುಳ್ಳಿ ಬೆಳೆಯುವ ಎರಡನೇ ದೊಡ್ಡ ದೇಶ ನಮ್ಮದು. ಮಹಾರಾಷ್ಟ್ರ ಮೊದಲ ಸ್ಥಾನದಲ್ಲೂ  ಕರ್ನಾಟಕ ಎರಡನೇ ಅತೀ ದೊಡ್ಡ ಈರುಳ್ಳಿ ಬೆಳೆಯುವ ರಾಜ್ಯ. ಈರುಳ್ಳಿ ತಳಿ ಅಭಿವೃದ್ದಿಯಲ್ಲಿ  ಕರ್ನಾಟಕದ ಪಾಲು ಅತೀ ದೊಡ್ದದು.  ಇದೇ ಕಾರಣಕ್ಕೆ ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ,ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯನ್ನು  ಈರುಳ್ಳಿ ತಳಿ ಅಭಿವೃದ್ದಿಗೆ ನಿಯೋಜಿಸಿದೆ. ಇಲ್ಲಿ ಅರ್ಕಾ ಹೆಸರಿನ ಸುಮಾರು 10 ಬೇರೆ ಬೇರೆ…

Read more

ತೆಂಗು – ಹೈಬ್ರೀಡ್ ತಳಿ ಮಾತ್ರ ಬೆಳೆಸಿ.

ಹೈಬ್ರೀಡ್ ತಳಿಗಳು ಎಂದರೆ ಎರಡು ಉತ್ತಮ ತಳಿಗಳ ಮಧ್ಯೆ ಕ್ರಾಸಿಂಗ್ ಮಾಡಿ ಪಡೆಯಲಾದ ಹೊಸ ತಳಿ.   ಹೈಬ್ರೀಡ್  ಎಂದರೆ ಖಾತ್ರಿಯಾಗಿ ಅಧಿಕ ಇಳುವರಿ ನೀಡಬಲ್ಲ ತಳಿಗಳು. ಹೈಬ್ರೀಡ್ ಬೆಳೆದರೆ ಬೇಗ ಇಳುವರಿ ಪ್ರಾರಂಭವಾಗಿ, ಕೊಯಿಲು ಸುಲಭವಾಗುತ್ತದೆ.  ನಮ್ಮ ಸುತ್ತಮುತ್ತ ಇರುವ ಬಹುತೇಕ ತಳಿಗಳು ಎತ್ತರದ ತಳಿಗಳು. ಇದರಲ್ಲಿ ಫಸಲು ಪ್ರಾರಂಭವಾಗಲು 5-7 ವರ್ಷ ಬೇಕು. ಹಾಗೆಯೇ ನಮ್ಮಲ್ಲಿ ಕೆಲವು ಹತ್ತಿರದ ಗಂಟಿನ ಗಿಡ್ಡ ತಳಿಗಳಾದ ಗೆಂದಾಳಿ(COD, CYD) ಹಸಿರು (CGD Gangabondam) ತಳಿಗಳು ಇವೆ. ಗಿಡ್ಡ ತಳಿಯ…

Read more

ಮೆಣಸಿನ ಎಲೆ ಮುರುಟುವಿಕೆ ನಿಯಂತ್ರಣ

ಮೆಣಸಿನ ಕಾಯಿಯ ಅತೀ ದೊಡ್ದ ಆರ್ಥಿಕ ಬೆಳೆಯಾಗಿದ್ದು, ಮೆಣಸು ಬೆಳೆಗಾರರು ಈ ಬೆಳೆ ಉಳಿಸಿಕೊಳ್ಳುವುದಕ್ಕಾಗಿ ಸಾಕಷ್ಟು ಖರ್ಚು ಮಾಡುತ್ತಾರೆ. ಇದರಲ್ಲಿ ಹೆಚ್ಚಿನ ಪಾಲು ಕೀಟ ನಿರ್ವಹಣೆಗೇ ತಗಲುತ್ತದೆ. ಈ ಕೀಟಗಳಲ್ಲಿ ಮುಖ್ಯವಾದುದು, ಥ್ರಿಪ್ಸ್ ನುಶಿ ಮತ್ತು ಜೇಡರ ನುಶಿ. ಯಾರೇ ಬೆಳೆ ಬೆಳೆದರೂ ಈ ಕೀಟ ಅವರನ್ನು  ಬಿಟ್ಟಿದ್ದಿಲ್ಲ. ಇನ್ನೇನು ಸಸಿ ಬೆಳೆದು ಹೂ ಬಿಡಲು ಪ್ರಾರಂಭವಾಗುತ್ತದೆ ಎನ್ನುವಾಗಈ ಕೀಟ ಹಾಜರ್. ಎಲೆಗಳು ಮುರುಟಿಕೊಂಡು ಅಲ್ಲಿಗೇ ಬೆಳೆವಣಿಗೆ ಕುಂಠಿತವಾಗುತ್ತದೆ. ಥಿಪ್ಸ್ ನುಶಿ ಏನು – ಹೇಗೆ: ಇದು…

Read more

ಕೀಟನಾಶಕ ಇಲ್ಲದೆ ಅಡಿಕೆ ಉಳಿಸಬಹುದು.

ಕೀಟನಾಶಕ ಬಳಸದೆ ಅಡಿಕೆ ಉಳಿಸಿಕೊಂಡವರು ಇದ್ದಾರೆ. ಕೆಲವರು ಅಡಿಕೆ ಮಿಡಿ ಉಳಿಸಲು ಪ್ರತೀ ಹೂ ಗೊಂಚಲಿಗೂ ತಿಂಗಳು ತಿಂಗಳು ಕೀಟ ನಾಶಕ ಸಿಂಪಡಿಸುವವರೂ ಇದ್ದಾರೆ. ಸಿಂಪಡಿಸದವರಲ್ಲೂ ಫಸಲು ಇದೆ. ಸಿಂಪಡಿಸಿದಲ್ಲಿಯೂ ಫಸಲು ಇದೆ. ಹೀಗಿರುವಾಗ ಅಡಿಕೆ ಮರದ ಆರೋಗ್ಯ ಹೊಂದಿಕೊಂಡು ಹೂ ಗೊಂಚಲಿನಲ್ಲಿ ಮಿಡಿ ಕಾಯಿ ಉಳಿಯುತ್ತದೆ ಎಂದರೆ ತಪ್ಪಾಗಲಾರದು. ಅಡಿಕೆ ಮರದ ಹೂ ಗೊಂಚಲಿಗೆ ಬರುವ ಕೀಟಗಳಲ್ಲಿ ಈ ತನಕ ಗುರುತಿಸಲಾದದ್ದು, ಸಿಂಗಾರ ತಿನ್ನುವ ಕಂಬಳಿ ಹುಳ. ಬಸವನ ಹುಳ ಪೆಂಟಟೋಮಿಡ್  ಬಗ್. ಇದಲ್ಲದೆ ಬೇರೆ…

Read more

ಗುಳ್ಳಕ್ಕೆ ಇದು ಬದಲಿ ತಳಿ.

ಬದನೆ ಬೆಳೆಸುವ ರೈತರು ಬೆಳೆ ಉಳಿಸಿಕೊಳ್ಳುವುದಕ್ಕಾಗಿ ಮಾಡುವ ಖರ್ಚು ಅತೀ ಹೆಚ್ಚು. ಸಾಕಷ್ಟು ಕೀಟನಾಶಕ – ರೋಗ ನಾಶಕ ಬಳಸಿ  ಬೆಳೆ ಉಳಿಸಿಕೊಳ್ಳುತ್ತಾರೆ. ಇಷ್ಟೆಲ್ಲಾ ಖರ್ಚು ಮಾಡಿದಾಗ ರೈತರಿಗೆ ಉಳಿಯುವುದು ಅಷ್ಟಕ್ಕಷ್ಟೇ.  ಖರ್ಚು ಕಡಿಮೆ ಮಾಡಿ ಬೆಳೆ ಬೆಳೆಸಬೇಕಿದ್ದರೆ ಇರುವುದು ರೋಗ ನಿರೋಧಕ ಶಕ್ತಿ ಪಡೆದ ತಳಿಯನ್ನು ಆಯ್ಕೆ ಮಾಡುವುದು ಒಂದೇ. ಗುಳ್ಳ ಬದನೆಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ. ಆದರೆ ಈಗಿತ್ತಲಾಗಿ ಗುಳ್ಳ ಬದನೆ ಬೆಳೆಸುವುದೇ ಕಷ್ಟವಾಗುತ್ತಿದೆ. ಬೆಳೆಸು ರೈತರು ಗುಳ್ಳ ತಿನ್ನುವುದನ್ನೇ ಕಡಿಮೆ ಮಾಡಿದ್ದೂ ಇದೆ….

Read more

ಕೊಕ್ಕೋ ಬೆಳೆದರೆ ಪ್ರೂನಿಂಗ್ ಅಗತ್ಯ.

ಕೊಕ್ಕೋವನ್ನು  ಅಡಿಕೆ, ತೆಂಗಿನ ತೋಟದಲ್ಲಿ ಮಿಶ್ರ ಬೆಳೆಯಾಗಿ ಬೆಳೆಯಬಹುದು. ಕೊಕ್ಕೋ ಸಸ್ಯಗಳನ್ನು  ಉತ್ತಮವಾಗಿ ಆರೈಕೆ ಮಾಡಿದಲ್ಲಿ ಹೆಚ್ಚುವರಿ ಕೊಡು ಪಡೆಯಬಹುದು. ನಾವು ಕಂಡುಕೊಂಡಂತೆ  ಅರೆಮಲೆನಾಡು  ಭಾಗದಲ್ಲಿ ಕೊಕ್ಕೋ ಬಹಳ ಉತ್ತಮವಾಗಿ ಬರುತ್ತದೆ. ರೋಗ ತೊಂದರೆ ಇಲ್ಲ. ಕೊಕ್ಕೋ ಸಸ್ಯವು ವರ್ಷದಲ್ಲಿ ಎರಡು ಬಾರಿ ಹೂ ಬಿಟ್ಟು ಎರಡು  ಬೆಳೆ  ಕೊಡುತ್ತದೆ. ಮೊದಲನೇ ಬೆಳೆ ಬೇಸಿಗೆ ಕಾಲದಲ್ಲೂ ಎರಡನೇ ಬೆಳೆ ಮಳೆಗಾಲದಲ್ಲೂ  ದೊರೆಯುತ್ತದೆ. ಹೂವು ಬಿಟ್ಟು 6 ತಿಂಗಳಿಗೆ  ಬೆಳೆಯುತ್ತದೆ. ಮಾರ್ಚ್ ತಿಂಗಳಿನಿಂದ ಜುಲೈ ತನಕ ಅಧಿಕ ಇಳುವರಿ….

Read more
error: Content is protected !!