ಅಡಿಕೆಯ ಮಿಳ್ಳೆ ಉದುರುವುದಕ್ಕೆ ಇದು ಕಾರಣ.

ಬೇಸಿಗೆಯಲ್ಲಿ ಅಡಿಕೆ ಬೆಳೆಗಾರರ ನಿದ್ದೆಗೆಡಿಸುವ ಸಮಸ್ಯೆ ಇದು. ಬೆಳೆಗಾರರು ಇದನ್ನು ಉಳಿಸಲು ಯಾವ ಉಪಚಾರಕ್ಕೂ ಸಿದ್ದರು. ಇದಕ್ಕೆ ಈ ತನಕ ಯಾರೂ ನಿಖರ ಕಾರಣವನ್ನು ನೀಡಿದವರಿಲ್ಲ.  ಆದರೆ ಯಾರೂ ಪರಿಹಾರ ಇಲ್ಲ ಎಂದು ಹೇಳುವವರಿಲ್ಲ. ಇದರ ಬಗ್ಗೆ ಕೆಲವು ಯಾರೂ ಹೇಳದ ವಿಚಾರಗಳು ಇಲ್ಲಿವೆ. ಅಡಿಕೆಯ ಮರದ ಹೂ ಗೊಂಚಲಿನಲ್ಲಿ ಗಂಡು  ಹಾಗೂ ಹೆಣ್ಣು ಹೂವುಗಳು ಇರುತ್ತವೆ. ಗಂಡು ಹೂವು ಉದುರಲಿಕ್ಕೇ ಇರುವುದು. ಹೆಣ್ಣು ಹೂವು ಮಾತ್ರ ಉದುರಬಾರದು. ಆದೆಲ್ಲವೂ ಉಳಿದರೆ ಅಡಿಕೆ ಫಸಲು ಉತ್ತಮವಾಗಿರುತ್ತದೆ. ಆದರೆ…

Read more

ವರ್ಜಿನ್ ಕೋಕೋನಟ್ (VCO) ಎಂಬುದು ಎಲ್ಲಾ ಸತ್ಯವಲ್ಲ.

ಕೊರೋನಾ ರೋಗದ ವಿರುದ್ಧ ದೇಹದ ಅಂತಃ ಶಕ್ತಿ ಹೆಚ್ಚಿಸಲು ವರ್ಜಿನ್ ಕೋಕೋನಟ್ ಆಯಿಲ್ ಒಳ್ಳೆಯದು ಎಂದು ಪ್ರಚಾರ ಪ್ರಾರಂಭವಾಗಿದೆ. ಅದರ ಜೊತೆಗೆ ಈ ಎಣ್ಣೆಗೆ ಬೇಡಿಕೆ ಹೆಚ್ಚಿದೆ. ನಿಜವಾಗಿ ವರ್ಜಿನ್ ಕೋಕೋನಟ್ ಆಯಿಲ್ ಮತ್ತು ತೆಂಗಿನೆಣ್ಣೆಗೆ ಏನು ವ್ಯತ್ಯಾಸ. ತೆಂಗಿನ ಕಾಯಿಯಿಂದಲೇ ಹಿಂದಿನಿಂದಲೂ ಎಣ್ಣೆ ತೆಗೆಯುತ್ತಿದ್ದುದು. ಇತ್ತೀಚಿನ ಕೆಲವು ವರ್ಷಗಳ ಹಿಂದೆ ನಮ್ಮಲ್ಲಿ ಶತಮಾನಗಳಿಂದ ಪ್ರಚಲಿತದಲ್ಲಿದ್ದ ಗಾಣದಿಂದ ಎಣ್ಣೆ ತೆಗೆಯುವ ತಂತ್ರಜ್ಞಾನ ವನ್ನು ಓವರ್ ಟೇಕ್ ಮಾಡಿ ಬಂದ ತಂತ್ರಜ್ಞಾನವೇ ವರ್ಜಿನ್ ಕೋಕೋನಟ್ ಆಯಿಲ್. ತೆಂಗಿನ ಕಾಯಿಯಿಂದ…

Read more
ripped coco beans

ಕೊಕ್ಕೋ – ಹಸಿ ಬೀಜದ ಸಂಸ್ಕರಣೆಯ ವಿಧಾನ .

ಅಡಿಕೆ – ರಬ್ಬರ್ ಒಂದಷ್ಟು ಸಮಯ ದಾಸ್ತಾನು ಇಟ್ಟು ನಂತರ ಮಾರಾಟ ಮಾಡಬಹುದು. ಆದರೆ ಕೊಕ್ಕೊ ಹಸಿ ಬೀಜವನ್ನು ಕೋಡು ಒಡೆದ ದಿನವೇ ಮಾರಾಟ ಮಾಡಬೇಕು. ಖರೀದಿದರಾರೇ ಇಲ್ಲದ ಮೇಲೆ ಮಾರುವುದು ಯಾರಿಗೆ? ಚಿಂತೆ ಬೇಡ ಅದನ್ನು ಒಣಗಿಸಿ. ಮತ್ತೆ ಮಾರಾಟ ಮಾಡಬಹುದು.    ನಮ್ಮಿಂದ ಖರೀದಿ ಮಾಡಿದ  ಕೊಕ್ಕೋ ಹಸಿ ಬೀಜಗಳನ್ನು ಖರೀದಿದಾರರು ವೈಜ್ಞಾನಿಕ ಹುಳಿ ಬರಿಸಿ  ಒಣಗಿಸುತ್ತಾರೆ. ನಂತರ ಅದರ ಉತ್ಪನ್ನಗಳನ್ನು ತಯಾರಿ ಮಾಡುತ್ತಾರೆ. ಸರಿಯಾಗಿ ಒಣಗಿಸಿ ನಾವು ಮಾರಾಟ ಮಾಡಿದರೂ ಸಹ ಅವರು…

Read more

ಅಡಿಕೆ ನಿಷೇಧವಾದರೂ ಅಚ್ಚರಿ ಇಲ್ಲ.

ಉತ್ತರ ಪ್ರದೇಶದಲ್ಲಿ ಸರಕಾರೀ ಕಚೇರಿಗಳ ಪರಿಸರದಲ್ಲಿ ಗುಟ್ಕಾ ,ಪಾನ್ ಮಸಾಲೆ ತಿನ್ನಬಾರದು ಎಂದು ಅಲ್ಲಿನ ಮುಖ್ಯಮಂತ್ರಿಗಳು  ಆದೇಶ ನೀಡಿದ್ದಾರೆ. UP CM Yogi Adityanath bans gutkha, paan masala in all government offices – India today) ಇತರ ರಾಜ್ಯಗಳೂ ಇದನ್ನು ಅನುಸರಿಸಿದರೆ ಅಡಿಕೆ ಬೆಳೆಗಾರರ ಪಾಡು ಹೇಳ ತೀರದು. ಸ್ವಚ್ಚ ಪರಿಸರದಲ್ಲಿ ಸ್ವಾವಲಂಬಿಗಳಾಗಿ ಬದುಕುತ್ತಿದ್ದ ಕೃಷಿಕರು ಮತ್ತು ಕೃಷಿ ವ್ಯವಸ್ಥೆ ಯ ಮೇಲೆ ದೊಡ್ಡ ಹೊಡೆತವೇ  ಬಿದ್ದಿದೆ. ಎಷ್ಟು ಸಮಯವೋ ತಿಳಿಯದಾಗಿದೆ.  ಎಲ್ಲಾ…

Read more

ತೆಂಗಿನೆಣ್ಣೆ-ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

ತೆಂಗಿನೆಣ್ಣೆಯೂ ವೈರಸ್ ವಿರುದ್ಧ ಕೆಲಸ ಮಾಡುತ್ತದೆ. ಇದು ಕೊರೋನಾ ವೈರಸ್ ಗೆ ಔಷಧಿ ,ತೆಂಗಿನೆಣ್ಣೆ ತಿನ್ನಿ ಎನ್ನುತ್ತಿದ್ದಾರೆ.  ಇದು ಸುಮ್ಮನೆ ಹೇಳಿದ ವಿಚಾರ ಅಲ್ಲ. ಈ ಬಗ್ಗೆ ಕೆಲವು ಅಧ್ಯಯನಗಳು ನಡೆಯುತ್ತಿವೆ.ಇತ್ತೀಚೆಗೆ ಕೆಲವರು ಈ ಬಗ್ಗೆ ಸಾರ್ವಜನಿಕ ಹೇಳಿಕೆ ನೀಡಲಾರಂಭಿಸಿದ್ದಾರೆ. ಶುದ್ಧ ತೆಂಗಿನೆಣ್ಣೆ ಎಂಬುದು ಅನಾದಿ ಕಾಲದಿಂದಲೂ ಪರಮೌಷಧಿ ಎಂದೇ ಪರಿಗಣಿಸಲ್ಪಟ್ಟಿದೆ.  ಕ್ಕೊಬ್ಬರಿ ಎಣ್ಣೆಯನ್ನು ತಲೆಗೆ ಹಾಕಿದರೆ ಕೂದಲು ಬೆಳೆಯುತ್ತದೆ.  ತುಟಿ ಒಡೆದರೆ ತೆಂಗಿನೆಣ್ಣೆ. ಗಾಯವಾದರೆ ತೆಂಗಿನೆಣ್ಣೆ. ಅಲರ್ಜಿ ಇಂದ ಕಣ್ಣು ಉರಿ, ಮೈ ಉರಿ ಬಂದರೆ…

Read more

ಅಡಿಕೆಯ ಕಥೆ ವ್ಯಥೆಯಾಗುವ ಮುನ್ಸೂಚನೆ

ರಾಜ್ಯ ಸರಕಾರ  ಜನತೆಗೆ ಮನೆ ಹೊರಡದಂತೆ ಕರ್ಫ್ಯೂ  ವಿಧಿಸಿದೆ. ಅಗತ್ಯ ಸಾಮಾಗ್ರಿಗಳಿಗೆ ವಿನಾಯಿತಿ ನೀಡಿದ್ದರೂ ಅಡಿಕೆ ಎಂಬುದು ಅಗತ್ಯ ಸಾಮಾಗ್ರಿಗಳ ಅಡಿಯಲ್ಲಿ ಬಾರದ ಕಾರಣ ಅಡಿಕೆ ಕೊಳ್ಳುವವರು ತಮ್ಮ ವ್ಯವಹಾರ ನಿಲ್ಲಿಸುವುದು ಗ್ಯಾರಂಟಿ.  ಇನ್ನು ವ್ಯಾಪಾರ ಏನಿದ್ದರೂ ಪರಿಸ್ಥಿತಿ ಅನುಕೂಲಕರವಾಗಿ ಬಂದರೆ ಎಪ್ರೀಲ್ 1 ತರುವಾಯ. ಅಡಿಕೆ, ಕರಿಮೆಣಸು , ಶುಂಠಿ ಮುಂತಾದ ಕೃಷಿ ಉತ್ಪನ್ನಗಳ ಮಾರುಕಟ್ಟೆ  ಎಂಬುದು ಪರಿಸ್ಥಿತಿ ಸರಿಯಾಗಿದ್ದರೆ ಎಲ್ಲವೂ ಸಲೀಸಾಗಿ ಮುಂದುವರಿಯುತ್ತದೆ. ಎಲ್ಲಾದರೂ ಸ್ವಲ್ಪ  ಪರಿಸ್ಥಿತಿ  ಬಿಗಡಾಯಿಸಿದರೆ  ಹೇಗೆ ಮಾರುಕಟ್ಟೆ ಕುಸಿಯುತ್ತದೆ ಎಂದೇ…

Read more

ಗೇರು ಬೀಜಕ್ಕೆ ಬೇಕಾಗಿದೆ ನ್ಯಾಯ ಬೆಲೆ.

ಕರ್ನಾಟಕದಲ್ಲಿ ಕರಾವಳಿ ಮಲೆನಾಡು  ಭಾಗಗಳಲ್ಲಿ ಸುಮಾರು 750  ಮಿಕ್ಕಿ ಅತ್ಯಾಧುನಿಕ ಗೋಡಂಬಿ ಸಂಸ್ಕರಣೆ ಮತ್ತು ರಪ್ತು ಉದ್ದಿಮೆಗಳಿವೆ.  1000 ಕೂ ಮಿಕ್ಕಿ ಪೀಸ್ ವರ್ಕ್ ಮಾಡಿ ಕೊಡುವ ಸಣ್ಣ ಸಣ್ಣ ಘಟಕಗಳಿವೆ.  ಆದರೆ ಬೆಳೆಗಾರರಿಗೆ ಮಾತ್ರ ಸಿಗುವುದು ಯಾವಾಗಲೂ ಉತ್ಪಾದನಾ ವೆಚ್ಚಕ್ಕಿಂತ ಬೆಲೆ ಕಡಿಮೆ… ಒಂದು ಗೇರು ಮರದಿಂದ ಗೇರು ಹಣ್ಣುಗಳನ್ನು ಕೊಯಿಲು ಮಾಡಿ ಅದರ  ಬೀಜ ಬೇರ್ಪಡಿಸಿ ಒಣಗಿಸಿ ಅದನ್ನು ಕೊಳ್ಳುವವರಲ್ಲಿಗೆ ಒಯ್ಯುವ  ಕೆಲಸದ ಮಜೂರಿ  ಕಿಲೋಗೆ 100 ಕ್ಕೂ ಮಿಕ್ಕಿ  ತಗಲುತ್ತದೆ. ಆದರೆ ಅದರ…

Read more
good yielded plant

ಒರಿಜಿನಲ್ ಮಂಗಳ ಅಡಿಕೆ ಮರ ಹೀಗಿರುತ್ತದೆ.

ಮಂಗಳ ಅಡಿಕೆ ತಳಿ ಪ್ರಸ್ತುತ ಅಡಿಕೆ ಬೆಳೆಗಾರರ ಹಿತ ದೃಷ್ಟಿಯಲ್ಲಿ ಪರಿಚಯಿಸಲಾದ ತಳಿ ಎಂದೇ ಹೇಳಬಹುದು. 30  ವರ್ಷವಾದರೂ 35-40 ಅಡಿ ಎತ್ತರ. ಹೆಚ್ಚು ಪೋಷಕಾಂಶ ಕೊಟ್ಟಷ್ಟೂ ಹೆಚ್ಚು ಇಳುವರಿ. ಮರದಲ್ಲಿ 4-5 ಭರ್ತಿ ಕಾಯಿಗಳ ಗೊನೆ.  ಅಡಿಕೆ ಬೆಳೆಯುವವರ ಅಂಗಳದ ತುಂಬಾ ಅಡಿಕೆ ಹರಡಿದ ಸಮೃದ್ಧಿ ಉಂಟಾದುದೇ ಈ ತಳಿ ಬಂದ ನಂತರ. ಆದರೆ ಈ ಮೂಲ ತಳಿ ಈಗ ಭಾರೀ ಅಪರೂಪವಾಗಿದೆ.  ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಕುಬಳಬೆಟ್ಟು ಗುತ್ತುವಿನ ಪ್ರಗತಿಪರ ಕೃಷಿಕರಾಗಿದ್ದ ದಿವಂಗತ…

Read more

ಅಡಿಕೆ- ಬೆಲೆ ಏರಿಕೆಗೆ ಕಾಲ ಕೂಡಿಬಂದಿದೆ.

ಸಿದ್ದನಿಗೆ ಯಾವುದೇ ಕೆಲಸ ಇಲ್ಲ. ಮನೆಯಲ್ಲೇ ಠಿಖಾಣಿ. ಉದ್ಯೋಗಕ್ಕೆ ಹೋಗುವುದಕ್ಕೂ ಅವಕಾಶ ಇಲ್ಲ. ಮನೆಯಲ್ಲಿ ಕುಳಿತು ಬೋರು ಹೊಡೆಯುತ್ತಿದೆ. ಸರಕಾರ ಅಕ್ಕಿ ದಿನಸಿ ಮನೆಗೇ ಸರಬರಾಜು ಮಾಡಬಹುದು. ಇನ್ನು ಖರ್ಚಿಗೆ ಸಾಲವನ್ನೂ ಕೊಡಬಹುದು. ಕಾಲಹರಣ ಮಾಡುವ ಹೊತ್ತಿನಲ್ಲಿ ದಿನಕ್ಕೆ ಒಂದು ಗುಟ್ಕಾ ತಿನ್ನುವವ 2- 4  ತಿಂದರೂ ಅಚ್ಚರಿ ಇಲ್ಲ. ಮನುಷ್ಯನ ಮನಶಾಸ್ತ್ರ ಪ್ರಕಾರ ಚಟಕ್ಕೆ ಸಂಬಂಧಿಸಿದ ವಸ್ತುಗಳ ಬಳಕೆ ಹೆಚ್ಚಾಗುವುದು ಅವನಿಗೆ ಮಾಡಲು ಕೆಲಸ ಕಡಿಮೆ ಇದ್ದಾಗ. ಕೆಲಸದ ಒತ್ತಡಗಳ ಮಧ್ಯೆ ಚಟದ ನೆನಪಾಗುವುದಿಲ್ಲ. ಚಟದ…

Read more

ಕಲ್ಪರಸ – ನೀವು ಇನ್ನೂ ಕುಡಿದಿಲ್ಲವೇ – ಇಲ್ಲಿಗೆ ಹೋಗಿ.

ತೆಂಗಿನ ಮರದ ಹೂ ಗೊಂಚಲಿನಲ್ಲಿ ಒಂದು ರಸ (SAP) ಇದೆ. ಈ ರಸದಿಂದಲೇ, ಎಳನೀರು, ತೆಂಗಿನ ಕಾಯಿ ಆಗುತ್ತದೆ.  ಎಳನೀರು, ಕಾಯಿ ಆಗುವುದಕ್ಕೂ ಮುನ್ನ ನಾವು  ಇದನ್ನು ಸವಿಯಬಹುದು. ಅದೂ ಪರಿಶುದ್ಧವಾಗಿ. ಅದುವೇ ಕಲ್ಪರಸ.. ನಮ್ಮ ಪೂರ್ವಜರ ಕಾಲದಿಂದಲೂ ತೆಂಗಿನ ಮರ, ತಾಳೆ ಮರ, ಈಚಲು ಮರದ ಹೂ ಗೊಂಚಲಿನ ಅಮೃತ ಸಮಾನವಾದ ರಸದ ಮಹತ್ವವನ್ನು  ತಿಳಿಯಲಾಗಿತ್ತು. ಆದನ್ನು ತೆಗೆಯುವ ಕ್ರಮ ಮತ್ತು ದಾಸ್ತಾನು  ವಿಧಾನಗಳಿಂದ ಅದು ಕಲ್ಪರಸವಾಗದೆ  ಅಮಲು ಬರಿಸುವ ಸೇಂದಿ ಎಂಬ ಹೆಸರನ್ನು ಪಡೆದಿತ್ತು….

Read more
error: Content is protected !!