ಬಾಟಲಿ, ಕ್ಯಾನುಗಳಲ್ಲಿ ಜೈವಿಕ ಗೊಬ್ಬರ

ಬಾಟಲಿ, ಕ್ಯಾನುಗಳ ಜೈವಿಕ ಗೊಬ್ಬರಗಳು ಮತ್ತು ಅದರ ಉಪಯುಕ್ತತೆ.

ಇತ್ತೀಚೆಗೆ ಸುಮಾರು 10 ವರ್ಷಗಳಾಗಿರಬಹುದು. ಬೇರೆ ಬೇರೆ ತಯಾರಕರು ಲೀಟರು ಬಾಟಲಿಗಳಲ್ಲಿ, 5 ಲೀ. ಕ್ಯಾನುಗಳಲ್ಲಿ ಜೈವಿಕ ಗೊಬ್ಬರ ತುಂಬಿಸಿ ಬೆಳೆ ಪೋಷಕ ಎಂಬ ಹೆಸರಿನಲ್ಲಿ ಮಾರಾಟ ಮಾಡಲಾರಭಿಸಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಈ ವ್ಯವಹಾರ ಭಾರೀ ಚುರುಕಾಗಿದೆ.  ಜನ ಇಷ್ಟೊಂದು ಕಡಿಮೆ ಪ್ರಮಾಣದಲ್ಲಿ ಗೊಬ್ಬರ ಹಾಕಿ ಬೆಳೆ ಬರುವುದೇ ಆದರೆ ಯಾಕೆ ಬಳಸಿ ನೊಡಬಾರದು ಎಂದು ಎಲ್ಲರೂ ಒಂದೊಂದು ಪ್ರಯತ್ನ ಮಾಡುತ್ತಲೇ ಇದ್ದಾರೆ.  ಹಳೆ ಗಿರಾಕಿ ಹೋದಂತೆ ಹೊಸ ಹೊಸ ಗಿರಾಕಿಗಳು ಸಿಗುತ್ತಾ ಇದ್ದಾರೆ. ಬಾಟಲಿ ಗೊಬ್ಬರಗಳ…

Read more
ತಾಜಾ ಸೊಪ್ಪು ತರಕಾರಿ ಮಾರುವವರು

ನಮ್ಮ ಕಾಲಿಗೆ ನಾವೇ ಮೊಳೆ ಹೊಡೆದುಕೊಳ್ಳುವುದು ಹೀಗೆ.

ಯಾವುದೇ ಕೆಲಸ ಮಾಡಬೇಕಾರೂ ಅದು ನಮ್ಮ ಮೈಮೇಲೆ ಬರಬಹುದೇ ಎಂದು ಒಂದಲ್ಲ ಹತ್ತಾರು ಸಲ ಯೋಚಿಸಬೇಕು. ನಾವು ಕಾಲಹರಣಕ್ಕಾಗಿ ಮಾಡುವ ಕೆಲವು ಕೆಲಸಗಳು ನಮ್ಮ ವೃತ್ತಿಗೇ ತೊಂದರೆ ಕೊಡುವಂತಾಗಬಾರದು.ಕೃಷಿಕರು ಬೆಳೆಯುವ ಉತ್ಪನ್ನಗಳಿಗೆ ಅಪಪ್ರಚಾರ ಮಾಡಿ ನಮ್ಮ ಕಾಲಿಗೆ ನಾವೇ ಮೊಳೆ ಹೊಡೆದುಕೊಳ್ಳಬಾರದು. ಕಳೆದ ಎರಡು ದಿನಗಳಿಂದ ನಾವೆಲ್ಲಾ ಚಾಚೂ ತಪ್ಪದೆ ವೀಕ್ಷಿಸುವ ವಾಟ್ಸ್ ಅಪ್, ಫ಼್ಹೇಸ್ ಬುಕ್ ಮುಂತಾದವುಗಳಲ್ಲಿ ಹರಿದಾಡುವ ಒಂದು ವೀಡಿಯೋ ಬಗ್ಗೆ ಇಲ್ಲಿ ಹೇಳಲಿಚ್ಚಿಸುತ್ತೆವೆ. ಇದು ಸೊಪ್ಪು ತರಕಾರಿಗಳನ್ನು ಬಾಡದಂತೆ ಹಚ್ಚ ಹಸುರಾಗಿ ಉಳಿಸಲು…

Read more
tasty vegetable grown with out manure

ನಾವು ತಿನ್ನುವ ಆಹಾರ ರುಚಿ ಇರುವುದಿಲ್ಲ ಕಾರಣ ಇಷ್ಟೇ

ಮಣ್ಣು ಫಲವತ್ತಾಗಿದ್ದರೆ ಅದರಲ್ಲಿ ಬೆಳೆದ ಬೆಳೆಯ ಗುಣಮಟ್ಟ ಉತ್ತಮವಾಗಿರುತ್ತದೆ. ಅದಕ್ಕೆ ರುಚಿಯೂ ಇರುತ್ತದೆ. ಆರೋಗ್ಯಕ್ಕೂ ಉತ್ತಮ. ಮಣ್ಣಿಗೆ ಜೀವ ಇದೆ.ಇದು ಕೃಷಿಗೆ ಜೀವ ಕೊಡುತ್ತದೆ . ಮಣ್ಣಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಕಣ್ಣಿಗೆ ಕಾಣದ ಸೂಕ್ಷ್ಮ ಜೀವಿಗಳು ಸೇರಿಕೊಂಡಿವೆ . ಮಣ್ಣು ಇಲ್ಲದೆ ಯಾವುದೇ ಜೀವಿ ಬದುಕಲು ಸಾಧ್ಯವಿಲ್ಲ. ಅದೇ ರೀತಿ ಯಾವುದೇ ಜೀವಿ ಇಲ್ಲದೇ ಮಣ್ಣು ಆಗಲು ಸಾಧ್ಯವಿಲ್ಲ. ಒಂದು ಇಂಚು ಮಣ್ಣು ಆಗಬೇಕಾದರೆ ಸಾವಿರಾರು ವರ್ಷಗಳೇ ಬೇಕಾಗುತ್ತದೆ. ಇಂದು ಅವೈಜ್ಞಾನಿಕ ರಾಸಾಯನಿಕಗಳ ಬಳಕೆಯಿಂದ ಮಣ್ಣು,…

Read more
Trichoderma Packet

ಟ್ರೈಕೋಡರ್ಮಾ ಬಳಸುವವರಿಗೆ ಉಪಯುಕ್ತ ಮಾಹಿತಿ.

ರೈತರು ತಮ್ಮ ಬೆಳೆಗಳಿಗೆ ಬರುವ ಶಿಲೀಂದ್ರ ರೋಗಗಳನ್ನು ಧೀರ್ಘಾವಧಿ ತನಕ  ನಿಯಂತ್ರಣಕ್ಕೆ ತರಲು ಟ್ರೈಕೋಡರ್ಮಾ ಬಳಸಬಹುದು.  ಇದು  ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಸಂಶೋಧನಾ ಕೇಂದ್ರ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳಲ್ಲಿ ಲಭ್ಯ ಇರುತ್ತದೆ. ಇತ್ತಿಚೀನ ದಿನಗಳಲ್ಲಿ ಸಾವಯವ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಶಿಲೀಂದ್ರ , ಕೀಟ ನಾಶಕಗಳ  ಬಳಕೆ ಹೆಚ್ಚುತ್ತಿದೆ. ಸಸ್ಯಗಳಲ್ಲಿ ಕಂಡು ಬರುವರೋಗದ ಹತೋಟಿಯನ್ನು ರಾಸಾಯನಿಕ ಶಿಲೀಂಧ್ರನಾಶಕಗಳಿಂದ ಮಾಡುವುದು ಒಂದು. ಆದರೆ ಅದರಲ್ಲಿ  ರಾಸಾಯನಿಕ ಶೇಷ ವಸ್ತುಗಳು ಮಣ್ಣಿನಲ್ಲಿ ಹಾಗೂ ಸಸ್ಯ ಭಾಗಗಳಲ್ಲಿ…

Read more

ಸಾವಯವ ಕೃಷಿಗೆ ದೊಣ್ಣೆ ನಾಯಕರ ಸಲಹೆ ಬೇಕಾಗಿಲ್ಲ.

ಸಾವಯವ ಕೃಷಿ ಎಂಬುದು ನಮ್ಮ ಪರಂಪರೆಯಿಂದ ನಡೆದು ಬಂದ ಕೃಷಿ ಪದ್ದತಿ. ಇತ್ತೀಚೆಗೆ ಕೆಲವು ಜನರಿಗೆ ಸಾವಯವ  ಹೆಸರೇ  ಮೈಮೇಲೆ ದೆವ್ವ ಬಂದಂತೆ  ಬರುತ್ತಿರುವುದು ವಿಪರ್ಯಾಸ. ಸಾವಯವ ಕೃಷಿ ಎಂದರೆ ಮಣ್ಣನ್ನು ಫಲವತ್ತಾಗಿಸಿಕೊಂಡು ಅದನ್ನೇ ಪೊಷಕಾಂಶ ಭರಿತವಾದ ಬೆಳೆ ಮಾಧ್ಯಮವಾಗಿ ಮಾಡಿ ಕೃಷಿ ಮಾಡುವುದು.  ಮಣ್ಣು ಫಲವತ್ತಾಗಿದ್ದರೆ ಅದರಲ್ಲಿ ಬೆಳೆಯುವ ಬೆಳೆಗೆ ಬೇರೆ ಪೋಷಕಾಂಶಗಳು ಬೇಕಾಗುವುದಿಲ್ಲ. ಬೆಳೆ ಬೆಳೆದಂತೆ ಫಲವತ್ತಾದ ಮಣ್ಣಿನ ಪೋಷಕಗಳು ಉಪಯೋಗವಾಗಿ ಕಡಿಮೆಯಾಗುತ್ತಾ ಬರುತ್ತದೆ. ಅದನ್ನು ಮತ್ತೆ ಮತ್ತೆ ನವೀಕರಿಸುತ್ತಾ ಬೆಳೆ ಬೆಳೆಯಬಹುದು. ಈ…

Read more

ಜೈವಿಕ ಬೆಳೆ ಪೋಷಕಗಳನ್ನು ಬಳಸುವಾಗ ಎಚ್ಚರವಿರಲಿ.

ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಬಗ್ಗೆ ಹೇಳುವುದೇ ಆದರೆ ಅವುಗಳ ಅಸಮತೋಲನ ಉಂಟಾದರೆ ಅದೂ ಸಹ ತೊಂದರೆದಾಯಕ. ಇದು ಜೈವಿಕ ಉತ್ಪನ್ನಗಳ ಪ್ರಚಾರದ ಕಾಲ. ಸಾವಯವ , ಹಾನಿ ರಹಿತ, ಪರಿಸರ ಸ್ನೇಹಿ, ಎಂದೆಲ್ಲಾ ಪ್ರಚಾರಗಳ ಮೂಲಕ ರೈತರಿಗೆ ಜೈವಿಕ ಉತ್ಪನ್ನಗಳನ್ನು ಪರಿಚಯಿಸಲಾಗುತ್ತದೆ. ಜೈವಿಕ ಉತ್ಪನ್ನ್ಗಗಳ ಬಗ್ಗೆ ಹೇಳುವುದೆಲ್ಲಾ ನಿಜವಲ್ಲ. ಇದೂ ಸಹ ಅತಿಯಾದರೆ ತೊಂದರೆ ಉಂಟು. ಕೃಷಿಕರಲ್ಲಿ ಕೆಲವರಿಗೆ ಕಾಲು ಹಿಮ್ಮಡಿ ಒಡೆಯುವ ಸಮಸ್ಯೆ ಇದೆ. ಹೆಚ್ಚಾಗಿ ಇದು ತೋಟದಲ್ಲಿ ಒಡಾಡುವಾಗ, ಧೂಳು ಇರುವ ಸ್ಥಳದಲ್ಲಿ ಹೋಗುವಾಗ…

Read more

ರಸಗೊಬ್ಬರದ ಬಳಕೆ 50% ಕಡಿಮೆ ಮಾಡಬಹುದಾದ ವಿಧಾನ.

ಕೃಷಿಗೆ ರಸಗೊಬ್ಬರ ಅನಿವಾರ್ಯವಲ್ಲ. ಇದರಿಂದ ಇಳುವರಿ ಹೆಚ್ಚಳವಾಗಲು ಅನುಕೂಲವಾಗುತ್ತದೆ. ಬುದ್ಧಿವಂತಿಕೆ ಮಾಡಿದರೆ 50% ರಸ ಗೊಬ್ಬರವನ್ನು ಉಳಿಸಬಹುದು. ನಮ್ಮ ಕೃಷಿಕರಿಗೆ ಇದು ಗೊತ್ತಿದೆಯೋ ಇಲ್ಲವೋ ತಿಳಿಯದು. ನಮ್ಮ ದೇಶದಲ್ಲಿ ಸ್ಥಳೀಯ ಕಚ್ಚಾ ವಸ್ತುಗಳನ್ನು ಬಳಸಿ ರಸ ಗೊಬ್ಬರ ತಯಾರಾಗುವುದು ತೀರಾ ಕಡಿಮೆ. ಬೇರೆ ದೇಶಗಳಿಂದ ಕಚ್ಚಾ ಸಾಮಾಗ್ರಿಯನ್ನು ತರಿಸಿ, ಇಲ್ಲಿ ಉತ್ಪಾದನೆ ಮಾಡಲಾಗುತ್ತದೆ. ಆದ ಕಾರಣ ಬೆಲೆ ನಮ್ಮ ಕೈಯಲ್ಲಿ ಇರುವುದಿಲ್ಲ. ಯಾವಾಗಲೂ ಇದು ಹೆಚ್ಚಳವಾಗುವುದೇ ಹೊರತು ಕಡಿಮೆಯಾಗಬಹುದು ಎಂಬ ಆಕಾಂಕ್ಷೆ ಕೃಷಿಕರಿಗೆ ಬೇಡ.   ರಸಗೊಬ್ಬರ …

Read more
Y C Rudrappa Organic farmer

ನೀವು ಕೃಷಿಕರಾಗಿದ್ದರೆ ಇದನ್ನು ಒಮ್ಮೆ ಓದಿ. ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ.

ಒಬ್ಬ ಸರಕಾರಿ ನೌಕರನಿಗೆ ಸಾಯುವ ತನಕ ಸರಕಾರ ಜೀವನ ಬಧ್ರತೆ ಕೊಡುತ್ತದೆ. ಕೃಷಿಕ ತನ್ನ ಜೀವನಕ್ಕೆ ಬಧ್ರ ಅಡಿಪಾಯವನ್ನು ತಾನೇ ಹಾಕಿಕೊಳ್ಳಬೇಕಾಗುತ್ತದೆ. ಪ್ರತೀಯೊಬ್ಬ ಕೃಷಿಕನೂ ತನ್ನ ದುಡಿಯುವ  ವಯಸ್ಸು ಮೀರಿದ ನಂತರ ಏನು ಎಂದು ಎಂಬುದನ್ನು ದುಡಿಯುವ ವಯಸ್ಸು ಇರುವಾಗ ಯೋಚಿಸಬೇಕು. ಮತ್ತು ಅದಕ್ಕೆ ಬೇಕಾದ ಅಡಿಪಾಯವನ್ನು ಹಾಕಬೇಕು. ಸಾಮಾನ್ಯವಾಗಿ ಸಾಧಿಸುವುದೇನಾದರೂ ಇದ್ದರೆ ಅದನ್ನು 50 ವರ್ಷಗಳ ಒಳಗೇ  ಸಾಧಿಸಿ ಮುಗಿಸಬೇಕು. ಆ ನಂತರ ಮಾಡಬಾರದೆಂದೇನೂ ಇಲ್ಲ.  ಅದೆಲ್ಲವೂ ಪ್ಲಸ್. ಆದರೆ ಅದಕ್ಕಿಂತ ಮುಂಚೆ ಮಾಡಿದರೆ ಒಳ್ಳೆಯದು…

Read more
border crops to pest attraction

ಕೀಟಗಳ ನಿಯಂತ್ರಣಕ್ಕೆ ಇದು ಸುರಕ್ಷಿತ ವಿಧಾನ.

ಕೀಟನಾಶಕ ಬಳಕೆಯಿಂದ ತಿನ್ನುವವರಿಗಿಂತ ಬಳಸುವವರಿಗೆ ತೊಂದರೆ ಜಾಸ್ತಿ. ಅದ ಕಾರಣ ಸಾಧ್ಯವಾದಷ್ಟು ಅದರ ಬಳಕೆ ಕಡಿಮೆ ಮಾಡಿ.  ಬಲೆ ಬೆಳೆ ಎಂದರೆ ಒಂದು ಬೆಳೆಗೆ ಬರುವ ಕೀಟವನ್ನು ಮತ್ತೊಂದು ಬೆಳೆಯ ಮೂಲಕ ಆಕರ್ಷಿಸುವುದು. ಮತ್ತು ಮುಖ್ಯ ಬೆಳೆಯನ್ನು ರಕ್ಷಿಸುವುದು.ಎಲ್ಲದಕ್ಕೂ ಕೀಟ  ನಾಶಕ ಪರಿಹಾರ ಅಲ್ಲ. ಅದು ಸಮಂಜಸ ಪರಿಹಾರವೂ ಅಲ್ಲ.  ಸುಲಭದಲ್ಲಿ  ಕೊಯ್ಯುವುದು ಸಾಧ್ಯವಿದ್ದರೆ ಅದರಿಂದಲೇ  ಕೊಯಿಲು ಮಾಡಬೇಕು. ಅಲ್ಲಿಗೆ ಕೊಕ್ಕೆ ಬೇಡ. ನಾವು ಈಗ ಕೊಕ್ಕೆ ಅನಿವಾರ್ಯವಾದಂತೆ  ವರ್ತಿಸುತ್ತೇವೆ. ಹುಳ ಬಿದ್ದಿದೆ ಯಾವ ಕೀಟ ನಾಶಕ…

Read more
ಗೋಲ್ಡನ್ ಫ಼್ಹಿಶ್ ಅಕ್ವೇರಿಯಂ ಮೀನು

ಬಣ್ಣದ ಮೀನು ಸಾಕಾಣಿಕೆ -ಅದಾಯ ಕೊಡುವ ವೃತ್ತಿ.

ಅಲಂಕಾರಕ್ಕಾಗಿ ಮೀನು ಸಾಕುವುದೇ ಅಕ್ವೇರಿಯಂ. ಇದು ಕೃಷಿಕರಿಗೆ  ಹೊಂದುವ ಉಪ ವೃತ್ತಿ. ಪುರಾತನ ಕಾಲದಿಂದಲೂ ಜನ ಆನಂದಕ್ಕಾಗಿ ಮೀನು ಸಾಕಣೆ ಮಾಡುತ್ತಿದ್ದರು. ರಾಜ ಮಹಾರಾಜರ ಕಾಲದಿದಲೂ ಇದು ಇತ್ತು ಎನುತ್ತಾರೆ. ಈಗ ಅಕ್ವೇರಿಯಂ ಮನೆಗೆ ಒಂದು ವಾಸ್ತು ಜೊತೆಗೆ ಪ್ರತಿಷ್ಟೆಯ ವಿಚಾರ. ಅಕ್ವೇರಿಯಂ ಅಥವಾ ಬಣ್ಣದ ಮೀನಿನ ವ್ಯವಹಾರ ಎಂದರೆ  ಸಣ್ಣದೇನಲ್ಲ. ಪ್ರಪಂಚದಲ್ಲಿ ಇದು  30,000 ಕೋಟಿಯ ವ್ಯವಹಾರ. ಇದರಲ್ಲಿ ಭಾರತದ ಪಾಲು 0.008 % ಮಾತ್ರ.  ಅವಕಾಶ ಮಾತ್ರ. ನಮ್ಮ ದೇಶದಲ್ಲಿ  ಅಕ್ವೇರಿಯಂ ಒಳಗೆ ಸಾಕಬಹುದಾದ…

Read more
error: Content is protected !!