Y C Rudrappa Organic farmer

ನೀವು ಕೃಷಿಕರಾಗಿದ್ದರೆ ಇದನ್ನು ಒಮ್ಮೆ ಓದಿ. ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ.

ಒಬ್ಬ ಸರಕಾರಿ ನೌಕರನಿಗೆ ಸಾಯುವ ತನಕ ಸರಕಾರ ಜೀವನ ಬಧ್ರತೆ ಕೊಡುತ್ತದೆ. ಕೃಷಿಕ ತನ್ನ ಜೀವನಕ್ಕೆ ಬಧ್ರ ಅಡಿಪಾಯವನ್ನು ತಾನೇ ಹಾಕಿಕೊಳ್ಳಬೇಕಾಗುತ್ತದೆ. ಪ್ರತೀಯೊಬ್ಬ ಕೃಷಿಕನೂ ತನ್ನ ದುಡಿಯುವ  ವಯಸ್ಸು ಮೀರಿದ ನಂತರ ಏನು ಎಂದು ಎಂಬುದನ್ನು ದುಡಿಯುವ ವಯಸ್ಸು ಇರುವಾಗ ಯೋಚಿಸಬೇಕು. ಮತ್ತು ಅದಕ್ಕೆ ಬೇಕಾದ ಅಡಿಪಾಯವನ್ನು ಹಾಕಬೇಕು. ಸಾಮಾನ್ಯವಾಗಿ ಸಾಧಿಸುವುದೇನಾದರೂ ಇದ್ದರೆ ಅದನ್ನು 50 ವರ್ಷಗಳ ಒಳಗೇ  ಸಾಧಿಸಿ ಮುಗಿಸಬೇಕು. ಆ ನಂತರ ಮಾಡಬಾರದೆಂದೇನೂ ಇಲ್ಲ.  ಅದೆಲ್ಲವೂ ಪ್ಲಸ್. ಆದರೆ ಅದಕ್ಕಿಂತ ಮುಂಚೆ ಮಾಡಿದರೆ ಒಳ್ಳೆಯದು…

Read more
border crops to pest attraction

ಕೀಟಗಳ ನಿಯಂತ್ರಣಕ್ಕೆ ಇದು ಸುರಕ್ಷಿತ ವಿಧಾನ.

ಕೀಟನಾಶಕ ಬಳಕೆಯಿಂದ ತಿನ್ನುವವರಿಗಿಂತ ಬಳಸುವವರಿಗೆ ತೊಂದರೆ ಜಾಸ್ತಿ. ಅದ ಕಾರಣ ಸಾಧ್ಯವಾದಷ್ಟು ಅದರ ಬಳಕೆ ಕಡಿಮೆ ಮಾಡಿ.  ಬಲೆ ಬೆಳೆ ಎಂದರೆ ಒಂದು ಬೆಳೆಗೆ ಬರುವ ಕೀಟವನ್ನು ಮತ್ತೊಂದು ಬೆಳೆಯ ಮೂಲಕ ಆಕರ್ಷಿಸುವುದು. ಮತ್ತು ಮುಖ್ಯ ಬೆಳೆಯನ್ನು ರಕ್ಷಿಸುವುದು.ಎಲ್ಲದಕ್ಕೂ ಕೀಟ  ನಾಶಕ ಪರಿಹಾರ ಅಲ್ಲ. ಅದು ಸಮಂಜಸ ಪರಿಹಾರವೂ ಅಲ್ಲ.  ಸುಲಭದಲ್ಲಿ  ಕೊಯ್ಯುವುದು ಸಾಧ್ಯವಿದ್ದರೆ ಅದರಿಂದಲೇ  ಕೊಯಿಲು ಮಾಡಬೇಕು. ಅಲ್ಲಿಗೆ ಕೊಕ್ಕೆ ಬೇಡ. ನಾವು ಈಗ ಕೊಕ್ಕೆ ಅನಿವಾರ್ಯವಾದಂತೆ  ವರ್ತಿಸುತ್ತೇವೆ. ಹುಳ ಬಿದ್ದಿದೆ ಯಾವ ಕೀಟ ನಾಶಕ…

Read more
ಗೋಲ್ಡನ್ ಫ಼್ಹಿಶ್ ಅಕ್ವೇರಿಯಂ ಮೀನು

ಬಣ್ಣದ ಮೀನು ಸಾಕಾಣಿಕೆ -ಅದಾಯ ಕೊಡುವ ವೃತ್ತಿ.

ಅಲಂಕಾರಕ್ಕಾಗಿ ಮೀನು ಸಾಕುವುದೇ ಅಕ್ವೇರಿಯಂ. ಇದು ಕೃಷಿಕರಿಗೆ  ಹೊಂದುವ ಉಪ ವೃತ್ತಿ. ಪುರಾತನ ಕಾಲದಿಂದಲೂ ಜನ ಆನಂದಕ್ಕಾಗಿ ಮೀನು ಸಾಕಣೆ ಮಾಡುತ್ತಿದ್ದರು. ರಾಜ ಮಹಾರಾಜರ ಕಾಲದಿದಲೂ ಇದು ಇತ್ತು ಎನುತ್ತಾರೆ. ಈಗ ಅಕ್ವೇರಿಯಂ ಮನೆಗೆ ಒಂದು ವಾಸ್ತು ಜೊತೆಗೆ ಪ್ರತಿಷ್ಟೆಯ ವಿಚಾರ. ಅಕ್ವೇರಿಯಂ ಅಥವಾ ಬಣ್ಣದ ಮೀನಿನ ವ್ಯವಹಾರ ಎಂದರೆ  ಸಣ್ಣದೇನಲ್ಲ. ಪ್ರಪಂಚದಲ್ಲಿ ಇದು  30,000 ಕೋಟಿಯ ವ್ಯವಹಾರ. ಇದರಲ್ಲಿ ಭಾರತದ ಪಾಲು 0.008 % ಮಾತ್ರ.  ಅವಕಾಶ ಮಾತ್ರ. ನಮ್ಮ ದೇಶದಲ್ಲಿ  ಅಕ್ವೇರಿಯಂ ಒಳಗೆ ಸಾಕಬಹುದಾದ…

Read more

ಅಧಿಕಇಳುವರಿಗೆ ನೆರವಾಗುವ ರಾಸಾಯನಿಕ ಇಲ್ಲದ NPK ಪೋಷಕ.

ಕೆಲವು ರೈತರು ಬೆಳೆಗಳಿಗೆ ಎಲ್ಲಾ ರೀತಿಯ ಗೊಬ್ಬರಗಳನ್ನು ಕೊಡುತ್ತಾರೆ. ವರ್ಷದಿಂದ ವರ್ಷಕ್ಕೆ ಗೊಬ್ಬರ ಕೊಡುವ ಪ್ರಮಾಣವನ್ನೂ ಹೆಚ್ಚಿಸುತ್ತಾರೆ. ಆದರೆ ವರ್ಷದಿಂದ ವರ್ಷಕ್ಕೆ ಫಸಲು ಕಡಿಮೆಯಾಗುತ್ತದೆ. ಸಸ್ಯ ದ ಆರೋಗ್ಯವೂ ಹಾಳಾಗುತ್ತದೆ. ಇದಕ್ಕೆ ಕಾರಣ ಮಣ್ಣಿನ ಜೈವಿಕತೆ ಕ್ಷೀಣಿಸುವುದು. ಪರಿಸ್ಥಿತಿಗೆ ಸಹಜವಾಗಿ ಮಣ್ಣಿಗೆ ಸಾವಯವ ವಸ್ತುಗಳನ್ನು ಹೇರಳವಾಗಿ ಪೂರೈಕೆ ಮಾಡಲು ಆಗುತ್ತಿಲ್ಲ. ಇದರಿಂದಾಗಿ ಮಣ್ಣಿನ ಜೈವಿಕ ಗುಣ ಕ್ಷೀಣವಾಗುತ್ತಾ ಬರುತ್ತದೆ. ಹಾಕಿದ ಗೊಬ್ಬರವನ್ನು ಲಭ್ಯಸ್ಥಿತಿಗೆ ತಂದು ಅಧಿಕಇಳುವರಿ ಪಡೆಯಲು ಈ ಜೈವಿಕ ಸಮ್ಮಿಶ್ರಣ ನೆರವಾಗುತ್ತದೆ. ನಾವು ತಿನ್ನುವ ಆಹಾರ ದೇಹದಲ್ಲಿ…

Read more
ಸಗಣಿ ಗೊಬ್ಬರ

ಸಗಣಿ ಗೊಬ್ಬರ – ಪರಿಪೂರ್ಣ ಸಾವಯವ ಪೋಷಕವಲ್ಲ.

ಕೆಲವು ರೈತರು ನಾನು ನನ್ನ ಬೆಳೆಗಳಿಗೆ ಹಸುವಿನ ಸಗಣಿ ಗೊಬ್ಬರವನ್ನು ಮಾತ್ರ ಕೊಡುವುದು ಎನ್ನುತ್ತಾರೆ. ಮರಗಳು ಹಚ್ಚ ಹಸುರಾಗಿ ಬೆಳೆಯುತ್ತವೆಯಾದರೂ ಪರಿಪೂರ್ಣ ಪೋಷಕಗಳು ಇಲ್ಲದ ಕಾರಣ ಫಸಲು ಅಷ್ಟಕ್ಕಷ್ಟೇ.ಯಾವುದೇ ಪ್ರಾಣಿಯ ತ್ಯಾಜ್ಯಗಳಿಂದ ಪಡೆಯುವ ಹಿಕ್ಕೆ ಅಥವಾ ಮಲದಲ್ಲಿ  ಎಷ್ಟು ಪೋಷಕಗಳಿರುತ್ತವೆ ಎಂಬುದು ಹಲವಾರು ಸಂಗತಿಗಳ ಮೇಲೆ ಅವಲಂಭಿಸಿದೆ. ಪ್ರಾಣಿಯ ದೇಹ, ಅವುಗಳ ತಳಿ, ವಯಸ್ಸು, ತೂಕ, ಆಹಾರ ಸೇವಿಸುವುದರ ಮೇಲೆ ಅವು ಮಾಡಿಕೊಡುವ ಗೊಬ್ಬರದ ಪ್ರಮಾಣ ಹೊಂದಿರುತ್ತದೆ. ಇಷ್ಟು ಮಾತ್ರವಲ್ಲ ಆ ಪ್ರಾಣಿಯ ಆರೋಗ್ಯ  ಮತ್ತು ಅದು…

Read more
ವೇಸ್ಟ್ ಡಿ ಕಂಪೊಸರ್

“ವೇಸ್ಟ್ ಡಿ ಕಂಪೋಸರ್ “ ಒಂದು ಗೊಬ್ಬರ ಅಲ್ಲ.

ಹೆಸರೇ ಹೇಳುತ್ತದೆ, ಇದು ಕೃಷಿ ತ್ಯಾಜ್ಯಗಳನ್ನು ಕಳಿಯಿಸಿ ಕೊಡುವ ಜೀವಾಣುಗಳನ್ನು ಹೊಂದಿರುವ ಉತ್ಪನ್ನ ಎಂದು. ಆದರೆ ಜನ ಇದನ್ನೇ ಗೊಬ್ಬರ ಎಂದು ಭಾವಿಸಿ, ಎಲ್ಲದಕ್ಕೂ ವೇಸ್ಟ್ ಡಿ ಕಂಪೋಸರ್ ಬಳಸಿ ಎಂದು ಸಲಹೆ ಕೊಡುತ್ತಾರೆ.  ಯಾವ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆಯೋ ತಿಳಿಯದು. ಬರೇ ಇದನ್ನು ಬಳಸಿ ಬೆಳೆಗಳಿಗೆ ಪೋಷಕಾಂಶದ ತೃಷೆ ತೀರಿತೆಂದಾದರೆ ಅದು ಒಂದು ಅದ್ಭುತವೇ ಸರಿ. ಗೊಬ್ಬರಗಳು ಅಥವಾ ಪೊಷಕಾಂಶಗಳಲ್ಲಿ ಸ್ಥೂಲ ಗೊಬ್ಬರಗಳು ಮತ್ತು ತೀಕ್ಷ್ಣ ಗೊಬ್ಬರಗಳು ಎಂದು ಎರಡು ವಿಧ. ಈಗ ಅದರಲ್ಲಿ ನ್ಯಾನೋ…

Read more
Healthy pepper vine

“ಟ್ರೈಕೋಡರ್ಮಾ’ ರೋಗ ನಿರೋಧಕ ಶಕ್ತಿಗೆ ಸಂಜೀವಿನಿ

ಟ್ರೈಕೋಡರ್ಮಾ ಅಥವಾ ಇನ್ಯಾವುದೇ ಜೀವಾಣುಗಳನ್ನು ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಜೈವಿಕ ಗುಣಧರ್ಮ ಬದಲಾಗುತ್ತದೆ. ಎಲ್ಲಾ ಜೀವಾಣುಗಳೂ ಮಣ್ಣು ಮೂಲದವುಗಳೇ ಆಗಿದ್ದು, ಅವುಗಳನ್ನು ಸಂಸ್ಲೇಶಿಸಿ ಕೃತಕವಾಗಿ ಬೆಳೆಸಿ ಸೂಕ್ತ ಮಾದ್ಯಮದಲ್ಲಿ ಸೇರಿಸಿ ರೈತರಿಗೆ ಬೇರೆ ಬೇರೆ ಬೆಳೆಗೆ ಬಳಕೆ ಮಾಡಲು ಕೊಡಲಾಗುತ್ತದೆ. ಇದು ಸಸ್ಯಗಳಿಗೆ  ರೋಗ ನಿರೋಧಕ ಶಕ್ತಿಯನ್ನು ಕೊಡಬಲ್ಲ ಮತ್ತು ರೋಗಕಾರಕ ಸೂಕ್ಷ್ಮಾಣು ಜೀವಿಗಳ ಜೊತೆಗೆ ಬದುಕಿ ಅದನ್ನು ನಿಶ್ಕ್ರಿಯಗೊಳಿಸುವ ಶಕ್ತಿಯನ್ನು ಹೊಂದಿದೆ. ಟ್ರೈಕೋಡರ್ಮಾ  ಎಂಬ ಶಿಲೀಂದ್ರವನ್ನು ಬಹಳ ಹಿಂದೆಯೇ ಸೂಕ್ಷ್ಮಾಣು ಜೀವಿ ಶಾಸ್ತ್ರಜ್ಞರು (1974)ಮಣ್ಣಿನಲ್ಲಿರುವುದನ್ನು ಗುರುತಿಸಿದ್ದಾರೆ….

Read more

ಈ ಆಪ್ ಗಳು ನಿಮಗೆ ತುಂಬಾ ಜ್ಞಾನ ಕೊಡುತ್ತವೆ.

ಮಾಹಿತಿಯ ಕೊರತೆಯಿಂದ ನಮ್ಮ ದೇಶದ ರೈತರು ಮಾರುಕಟ್ಟೆ, ಹವಾಮಾನ, ಸರಕಾರದ ಸವಲತ್ತು ಮತ್ತು  ತಾಂತ್ರಿಕ ನೆರವುಗಳಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಸರಿಪಡಿಸಿ, ರೈತರಿಗೆ ಅನುಕೂಲ ಮಾಡಿಕೊಡಲು ಭಾರತ ಸರಕಾರದಿಂದ ಬಿಡುಗಡೆಯಾದ ಆಪ್ಲಿಕೇಶನ್ ಗಳು ಇವು.  ಕೃಷಿಗೆ ಬೇಕಾದ ಮಾಹಿತಿ ಎಂದರೆ ಕೇವಲ ಮಾರುಕಟ್ಟೆಗೆ ಸಂಬಂಧಿಸಿದ್ದು ಎಂದಲ್ಲ, ರೈತರಿಗೆ ಬಿತ್ತನೆಗೆ ಭೂಮಿ ಸಿದ್ದಪಡಿಸಿ, ಅದನ್ನು ಮಾರಾಟ ಮಾಡಿ, ನಂತರ ಯಾವ ಬೆಳೆ ಬೆಳೆಯಬಹುದು ಎಂಬುದನ್ನು ಒಳಗೊಂಡ ಮಾಹಿತಿ ಅತ್ಯವಶ್ಯಕ. ಕೃಷಿ ಚಟುವಟಿಕೆ ಎಂದರೆ ಅದು ನಿರಂತರ ಚಟುವಟಿಕೆ. ರೈತರು ತಮಗೆ…

Read more
organic manure

ಸಾವಯವ ಗೊಬ್ಬರಗಳನ್ನು ನೀವೇ ತಯಾರಿಸಿಕೊಳ್ಳಿ- ಅದೇ ಉತ್ತಮ

ಆತ್ಮ ನಿರ್ಭರ ವನ್ನು ನೀವು ಇಚ್ಚೆ ಪಡುವುದೇ ಆಗಿದ್ದರೆ, ನಿಮ್ಮ ಗೊಬ್ಬರದ ಅಗತ್ಯಗಳನ್ನು ನೀವೇ  ಮಾಡಿಕೊಳ್ಳಿ. ಆತ್ಮ ನಿರ್ಭರ ರೈತರಾಗಿ. ನೀವು ಗೊಬ್ಬರ ಮಾರಾಟಗಾರರನ್ನು ಪೋಷಿಸಬೇಕಾಗಿಲ್ಲ. ನಿಮ್ಮ ಶ್ರಮ, ನಿಮ್ಮ ಸಂಪಾದನೆ ಯಾವುದೋ ಕಂಪೆನಿಯನ್ನು, ಯಾವುದೋ ಗೊಬ್ಬರ ಮಾರಾಟ ಮಾಡಿ ಜೀವನ ನಡೆಸುವವನ ಏಳಿಗೆಗಾಗಿ ಇರುವುದಲ್ಲ. ಅದು ನಿಮ್ಮ ವೃತ್ತಿ ಕ್ಷೇತ್ರವನ್ನು ಸಧೃಢಪಡಿಸಲಿಕ್ಕೆ , ನಿಮ್ಮ ಏಳಿಗೆಗೆ ಇರುವಂತದ್ದು.  ಸಾವಯವ ಗೊಬ್ಬರ ಎಂದರೆ ಅದರಲ್ಲಿ ಯಾವ ಹೊಸ ತಾಂತ್ರಿಕತೆಯೂ ಇಲ್ಲ. ಇದನ್ನು ತಯಾರಿಸಿ ಕೊಡಲು ಯಾರ ನೆರವೂ…

Read more
ಜೀವಾಮೃತ ಸಾರ

“ಜೀವಾಮೃತ” ಇದರಲ್ಲಿ ಏನಿರುತ್ತದೆ ಗೊತ್ತೇ?

ಜೀವಾಮೃತ ಎಂಬುದು  ಸುಮಾರು 10-15 ವರ್ಷಗಳಿಂದೀಚೆಗೆ ನಮಗೆ ಪರಿಚಯವಾದ  ಹೆಸರು. ಅದಕ್ಕೂ ಮುಂಚೆ ಒಬ್ಬರು ಇಂಥಹ ತಯಾರಿಕೆಯನ್ನು ಅಮೃತ ಪಾನಿ ಎಂದು ಕರೆದಿದ್ದರು. ಈಗ ಮತ್ತೆ ಗೋ ಕೃಪಾಮೃತ ಎಂಬ  ಉತ್ಪನ್ನ ಹೆಚ್ಚು ಸುದ್ದಿಯಲ್ಲಿದೆ. ಇವೆಲ್ಲವೂ ಜೈವಿಕವಾಗಿ ಮಣ್ಣನ್ನು ಶ್ರೀಮಂತಗೊಳಿಸಲು ಇರುವ ಬೆಳೆ ಪೋಷಕಗಳು. ಇದರಲ್ಲಿ ಏನು ಇದೆ ಎನ್ನುದಕ್ಕಿಂತ ಇದನ್ನು ಬಳಕೆ ಮಾಡಿದರೆ ಹಾನೀ ಏನೂ ಇಲ್ಲ ಎಂಬುದಂತೂ ಸತ್ಯವಾದದ್ದು. ಕೃಷಿ ಮಾಡುವ ಮಣ್ಣು ಜೈವಿಕವಾಗಿ ಸಂಪಧ್ಭರಿತವಾಗಿದ್ದರೆ  ಎಲ್ಲಾ ಕೃಷಿಯೂ ಸರಾಗ. ಯಾವುದೇ ಮಣ್ಣು ಜೈವಿಕತೆಯಿಂದ…

Read more
error: Content is protected !!