ನೀರಿಗೆ ಬರ ಬಂದರೆ ? -. ಕಡಿಮೆ ನೀರಿನಲ್ಲಿ ಹೇಗೆ ಬೆಳೆ ಉಳಿಸಿಕೊಳ್ಳುವುದು

ನೀರಿಗೆ ಬರ ಬಂದರೆ ? ಕಡಿಮೆ ನೀರಿನಲ್ಲಿ ಹೇಗೆ ಬೆಳೆ ಉಳಿಸಿಕೊಳ್ಳುವುದು?  

2023 ನೇ ಇಸವಿ ನಮಗೆ ಮಳೆ ಇಲ್ಲದೆ ಬರಗಾಲದ ಸನ್ನಿವೇಶವನ್ನು ತೋರಿಸಿಯೇ ಬಿಡುತ್ತದೆಯೋ ಎಂಬ ಅನುಮಾನ ಮೂಡುತ್ತಿದೆ. ಜುಲೈ ತಿಂಗಳ ಕೊನೆಗೆ ಕಾಣೆಯಾದ ಮಳೆ ಮತ್ತೆ ಬಂದುದು ಆಗಾಗ ನೆಂಟರಂತೆ.  ಹೀಗೆ ಮುಂದುವರಿದರೆ ಬರಗಾಲ ಗ್ಯಾರಂಟಿ. ಯಾವುದಕ್ಕೂ ನಾವು ಸಿದ್ದರಾಗಿರಬೇಕು. ಕೆಲವು ಮೂಲಗಳ ಪ್ರಕಾರ ಇನ್ನು ಬರುವ  ಮಳೆ ಅಲ್ಪ ಸ್ವಲ್ಪ ಪ್ರಮಾಣದ್ದೇ ಹೊರತು, ತಳಕ್ಕಿಳಿದ ನೀರಿನ ಮಟ್ಟವನ್ನು ಮತ್ತೆ ಮೇಲಕ್ಕೇರಿಸುವಷ್ಟು  ಬಲವಾಗಿರುವುದಿಲ್ಲ. ಹಾಗಾಗಿ ನೀರಿನ ಕ್ಷಾಮ ಉಂಟಾಗಲೂಬಹುದು. ಅದಕ್ಕಾಗಿ ಈಗಲೇ ಸಿದ್ದರಾಗೋಣ. ಪ್ರಕೃತಿಯ ಮುಂದೆ ಮಾನವ…

Read more
ಟಿ ಸೊಳ್ಳೆ ಬಾಧಿಸದ ಗೇರು ಮಿಡಿ

ಟಿ- ಸೊಳ್ಳೆ ನಿಯಂತ್ರಣಕ್ಕೆ – ಸಿಂಪರಣೆ ಬೇಕಾಗಿಲ್ಲ.

ಗೋಡಂಬಿ ಅಥವಾ ಗೇರು ಒಣ ಭೂಮಿಯಲ್ಲಿ ಬೆಳೆಯಬಹುದಾದ ಲಾಭದಾಯಕ ಬೆಳೆ. ಇದರ ಪ್ರಮುಖ ಸಮಸ್ಯೆ ಎಂದರೆ ಟಿ- ಸೊಳ್ಳೆ. ಇದರ ನಿಯಂತ್ರಣಕ್ಕೆ ಈ ತನಕ ವಿಷ  ರಾಸಾಯನಿಕ ಸಿಂಪರಣೆಯನ್ನು  ಶಿಫಾರಸು ಮಾಡಲಾಗುತ್ತಿದ್ದರೆ  ಈಗ ಸುರಕ್ಷಿತ ವಿಷ  ರಹಿತ  ಪರಿಹಾರ ಫಲಿತಾಂಶ ಕೊಟ್ಟಿದೆ. ಇನ್ನು “ಟಿ” ಸೊಳ್ಳೆ ನಿಯಂತ್ರಣಕ್ಕೆ ಸಿಕ್ಕ ಸಿಕ್ಕ ವಿಷ ಕೀಟ ನಾಶಕ ಬಳಸಬೇಕಾಗಿಲ್ಲ. “ಟಿ” ಸೊಳ್ಳೆಯಿಂದ ಗೋಡಂಬಿ ಬೆಳೆಯಲ್ಲಿ ಸುಮಾರು 50% ಕ್ಕೂ ಹೆಚ್ಚಿನ ಫಸಲು ನಷ್ಟವಾಗುತ್ತದೆ. ಗೇರು ಸಸಿಗಳು ಚಿಗುರುವ ಸಮಯದಿಂದ ಪ್ರಾರಂಭವಾಗಿ …

Read more

ಆರೋಗ್ಯಬೇಕೇ- ಕೀಟನಾಶಕ ಮಿತಿಗೊಳಿಸಿ.

ಅಡಿಕೆ ಉಳಿಯಬೇಕು. ದುಡ್ಡು ಆಗಬೇಕು ನಿಜ. ಆದರೆ ದುಡ್ಡಿನಲ್ಲಿ ಆರೋಗ್ಯವನ್ನು ಖರೀದಿಸಲಿಕ್ಕೆ ಆಗುವುದಿಲ್ಲ. ಅನಾರೋಗ್ಯ ಬಂದರೆ ನಮ್ಮ ಸಂಪಾದನೆಯಲ್ಲಿ ಆಸ್ಪೆತ್ರೆಯವರು- ವೈದ್ಯರು ಪಾಲುದಾರರಾಗುತ್ತಾರೆ. ಅವರನ್ನು ಸಾಕುವ ಕೆಲಸ ಬೇಡ. ಅಡಿಕೆ ಬೆಳೆಗಾರರಿಗೆ ಸಲಹೆಗಳ ಸುರಿಮಳೆಗಳೇ ಹರಿದು ಬರುತ್ತಿವೆ. ಯಾವ ರೈತರು ಪ್ರಧಾನ ಮಂತ್ರಿಗಳ ಕೃಷಿ ವಿಕಾಸ ಯೋಜನೆಯ 6000 ರೂ. ಫಲಾನುಭವಿಗಳಿದ್ದಾರೆಯೋ ಅವರಿಗೆ  ಮೊಬೈಲ್ ನಂಬ್ರಕ್ಕೆ ಸಂದೇಶಗಳು ಬರುತ್ತಿವೆ. ಇದರಲ್ಲೆಲ್ಲಾ ಅಷ್ಟು ಇಷ್ಟು ರಾಸಾಯನಿಕ ಬಳಕೆ ಮಾಡಿ ಬೆಳೆ ಸಂರಕ್ಷಿಸಿಕೊಳ್ಳಿ ಎಂಬ ಸಂದೇಶ ಇದೆ. ರೈತರೇ ಇದನ್ನು…

Read more
ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?

 ಮಣ್ಣಿನ pH ಎಂದರೇನು? ಕಡಿಮೆ-ಹೆಚ್ಚು ಆದಾಗ ಏನಾಗುತ್ತದೆ?    

ಮಣ್ಣಿನ ಸಮಸ್ಥಿತಿಯನ್ನು ವೈಜ್ಞಾನಿಕ ಭಾಷೆಯಲ್ಲಿ pH (Potentila hydrogen) ಎಂಬುದಾಗಿ ಕರೆಯುತ್ತಾರೆ. ಇದನ್ನು ಕನ್ನಡದಲ್ಲಿ ರಸ ಸಾರ ಎಂಬುದಾಗಿ ಕರೆಯುತ್ತಾರೆ. ಹುಳಿ ಹೆಚ್ಚಾದರೆ  ಅದು  ಆಮ್ಲ,  ಸುಡುವಿಕೆ  ಆದರೆ ಅದು ಕ್ಷಾರ. ಇವೆರಡೂ ಆಗದಿದ್ದರೆ ಅದು ಸಮಸ್ಥಿತಿ. ಇದನ್ನು  ಸಹನಾ ಸ್ಥಿತಿ ಎಂಬುದಾಗಿ  ಹೇಳಬಹುದು.ಇದು ಮಣ್ಣಿಗೆ ಮಾತ್ರವಲ್ಲ. ಪ್ರತೀಯೊಂದು ಜೀವಿಗೂ ಇರುವಂತದ್ದು. ಮನುಷ್ಯನ ಶರೀರದಲ್ಲಿ ಜೊಲ್ಲು, ರಕ್ತ ಇವುಗಳಲ್ಲೂ ಆಮ್ಲ, ಕ್ಷಾರ, ಮತ್ತು ತಟಸ್ಥ ಎಂಬುದಿದೆ. ಮಣ್ಣು ಎಂಬುದು ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ…

Read more
ಒಂದೆಲಗ

ಒಂದೆಲಗಕ್ಕೆ ಭಾರಿ ಬೇಡಿಕೆ ಮತ್ತು ಬೆಲೆ ಇದೆ.

ಒಂದೆಲಗ ಇನ್ನೊಂದು ದಿನ ಕಾಣುವುದಕ್ಕೇ ಸಿಗದ ಸ್ಥಿತಿ ಉಂಟಾದರೂ ಅಚ್ಚರಿ ಇಲ್ಲ. ಈಗ ಹಿಂದಿನಂತೆ ಇದು ಕಾಣಸಿಗುತ್ತಿಲ್ಲ. ಬೆಳೆಸಿ ಉಳಿಸದಿದ್ದರೆ ಇನ್ನು ಕೆಲವೇ ವರ್ಷ . ಕಳೆ ನಾಶಕಗಳು, ಮಣ್ಣು ಅಗೆಯುವ ಯಂತ್ರಗಳು ಇದನ್ನು  ಬಲಿ ತೆಗೆದುಕೊಂಡಾವು. ಇದು ಇಂದಿನ ಅತೀ ದೊಡ್ಡ ಸಮಸ್ಯೆಯಾದ  ಬೊಜ್ಜು ಕರಗಳು ಉತ್ತಮ ಔಷಧಿ. ಜೊತೆಗೆ  ಬೇಡಿಕೆ. ಒಂದೆಲಗ  ಒಂದು ಅತ್ಯುತ್ತಮ ಮೂಲಿಕಾ ಸಸ್ಯ. ಇದು ಎಲ್ಲರ ಹೊಲಗಳಲ್ಲಿ ಕಂಡು ಬರುವ ಒಂದು ನೆಲದಲ್ಲಿ ಹಬ್ಬಿ ಬೆಳೆಯುವ  ಬಳ್ಳಿ ಸಸ್ಯ. ಇದರ…

Read more
ಅಡಿಕೆ ಮರದ ಸುಳಿ ಬಂದ್ ರೋಗ ನಿವಾರಣೆ

ಅಡಿಕೆ ಮರದ ಸುಳಿ ಬಂದ್ ರೋಗ ನಿವಾರಣೆ ಹೇಗೆ ?

ಅಡಿಕೆ ಸಸ್ಯದ ಸುಳಿಯ ಭಾಗದ ಎಲೆಗಳು ಮುರುಟಿ, ತುದಿ ಗಂಟು ಕಟ್ಟಿದಂತೆ ಅಗುವುದಕ್ಕೆ “ಬಂದ್ ರೋಗ” ಎನ್ನುತ್ತಾರೆ. ಇದು ರೋಗವಲ್ಲ ಬೇರು ಜಂತು ಹುಳ ಮುಖ್ಯ ಕಾರಣ. ಇದು ಬೇರನ್ನು ಬೆಳೆಯಲು ಬಿಡದೆ ಸಸ್ಯಕ್ಕೆ ಆಹಾರ ಸರಬರಾಜು ಕಡಿಮೆಯಾಗಿ ಅದರ ಬೆಳೆವಣಿಗೆಯನ್ನು ಹತ್ತಿಕ್ಕುತ್ತದೆ. ಇದನ್ನು ರಾಸಾಯನಿಕವಾಗಿಯೂ, ಜೈವಿಕವಾಗಿಯೂ ಹತೋಟಿ ಮಾಡಬಹುದು. ವರ್ಷದಿಂದ ವರ್ಷಕ್ಕೆ ಅಡಿಕೆ ಬೆಳೆಗಾರರ ತೋಟದಲ್ಲಿ ಮರಗಳ ಸುಳಿ ಭಾಗ ಕುಬ್ಜವಾಗುವುದು ಹೆಚ್ಚಾಗುತ್ತಿದೆ. ಮಲೆನಾಡಿನ ಶಿವಮೊಗ್ಗ ಭಾಗದಲ್ಲಿ  ಇದು ಸುಮಾರು 30-40  ವರ್ಷದ ಹಿಂದೆಯೇ ಇತ್ತು….

Read more

ಬಾಳೆಯ ಕಾಂಡದ ಈ ರೋಗಕ್ಕೆ ಪರಿಹಾರ ಇದು.

ಬಾಳೆಯಲ್ಲಿ ಕಾಂಡ ಎಂಬುದು ಎಲೆಯ ಕವಚಗಳು ಪರಸ್ಪರ ಒತ್ತೊತ್ತಾಗಿ ಸೇರಿದಾಗ ಉಂಟಾಗುತ್ತದೆ. ಬಾಳೆಗೆ ಕಾಂಡ ಎಂಬುದು ಇಲ್ಲ. ಇದನ್ನು ಹುಸಿ ಕಾಂಡ ಎನ್ನುತ್ತಾರೆ. ಹುಸಿ ಕಾಂಡ ಉಂಟಾಗಬೇಕಾದರೆ  ಎಲೆಯ ತೊಟ್ಟಿನ ಭಾಗ (petiole)ಗಳು ಪರಸ್ಪರ ಅಂಟಿಕೊಂಡು ಬೆಳೆಯಬೇಕು. ಅದು ಬಿಚ್ಚಿಕೊಂಡಿದ್ದರೆ ಅದು ಒಂದು ರೋಗ. ಇದು ಒಂದು ನಂಜಾಣು ರೋಗದ ಲಕ್ಷಣ.  ಬಾಳೆ ಸಸ್ಯ 2-3 ತಿಂಗಳ ಬೆಳೆವಣಿಗೆಯಲ್ಲಿ ಇದು ಜಾಸ್ತಿ.   ಪ್ರಾರಂಭದಲ್ಲಿ ಎಲೆದಂಟು ಕಾಂಡದಿಂದ ಬೇರ್ಪಟ್ಟು ಕಾಂಡ ಸಪುರವಾಗುತ್ತಾ ಹೋಗುತ್ತದೆ. ಇಂತಹ ಬಾಳೆ ಕೆಲವೊಮ್ಮೆ…

Read more
ಅನನಾಸು ಹಣ್ಣು

ಸಾವಯವ ಅನನಾಸು ಬೆಳೆ- ಸುಲಭ. ಹೇಗೆ?

ಸಾವಯವ ಅನನಾಸು ಬೆಳೆ ಏನೂ ಕಷ್ಟದ್ದಲ್ಲ. ಇದು  ಬರಸಹಿಷ್ಣು ಸಸ್ಯ. ಆದುದರಿಂದ ಇದನ್ನು ನೀರು ಗೊಬ್ಬರ ಇಲ್ಲದೆ ಸಾವಯವ ವಿಧಾನದಲ್ಲೇ ಬೆಳೆಯಬಹುದು.  ಆದರೆ ಕೆಲವು ಜನ ಇದಕ್ಕೆ ಒಂದಷ್ಟು ರಾಸಾಯನಿಕ ಬಳಕೆ ಮಾಡುತ್ತಾರೆ, ಕಾರಣ ಇಷ್ಟೇ  ಗ್ರಾಹಕರಿಗೆ ನೋಟ ಚೆನ್ನಾಗಿರುವ, ದೊಡ್ದದಾದ ಹಣ್ಣು ಬೇಕು. ಗ್ರಾಹಕರ ಓಲೈಕೆಗಾಗಿ ಬೆಳೆಗಾರರು ರಾಸಾಯನಿಕ ಬಳಸುತ್ತಾರೆ. ಇದನ್ನು ಬಳಸದೆ ಬೆಳೆಯಲು ಯಾವುದೇ ಕಷ್ಟ ಇಲ್ಲ. ಅನನಾಸು ಬೆಳೆಗೆ ಪ್ರಮುಖವಾಗಿ ಬೇಕಾಗುವುದು, ಉತ್ತಮ ಬೆಳಕು. ನೀರು ಹೆಚ್ಚು ಬೇಡ. ಇಬ್ಬನಿಯ ನೀರಿನಲ್ಲೂ ಬದುಕುತ್ತದೆ. ಇದರ…

Read more
ಸುಣ್ಣದ ಹುಡಿ ಚೆಲ್ಲುವುದು

ಸುಣ್ಣ ಹಾಕುತ್ತಿರಾ? ಈ ಮಾಹಿತಿಯನ್ನುಮೊದಲು ತಿಳಿದಿರಿ.

ಸುಣ್ಣ ಹಾಕುವುದರಿಂದ ಮಣ್ಣಿನ ರಸಸಾರ ತಟಸ್ಥ ಸ್ಥಿತಿಯತ್ತ ತಲುಪುತ್ತದೆ, ಅಥವಾ ಸ್ವಲ್ಪ ಕ್ಷಾರೀಯವೂ ಆಗುತ್ತದೆ. ಮಣ್ಣಿನ ಸ್ಥಿತಿ  ಹುಳಿಯಿಂದ ಕ್ಷಾರದತ್ತ ಬದಲಾವಣೆ ಆದ ನಂತರ ಗೊಬ್ಬರ ಬಳಸಿದರೆ ಅದನ್ನು ಸಸ್ಯಗಳು ಸುಭೋಜ್ಯವಾಗಿ ಬಳಸಿಕೊಳ್ಳುತ್ತವೆ. ಜೀರ್ಣ ಶಕ್ತಿ ಸರಿಯಾಗಿ  ಇರುವಾಗ ಆಹಾರ ತಿಂದರೆ ಅದು ಶರೀರಕ್ಕೆ ಚೆನ್ನಾಗಿ ತೆಗೆದುಕೊಳ್ಳುತ್ತದೆ ಹಾಗೆಯೇ ಇದೂ ಸಹ. ಮಣ್ಣಿನ ಜೀರ್ಣ ಶಕ್ತಿಯನ್ನು ಉತ್ತಮಪಡಿಸಿ ಪೋಷಕಾಂಶ ನೀಡುವುದು ಒಳ್ಳೆಯ ಕ್ರಮ. ಸಾಗುವಳಿಗೆ ಒಳಪಟ್ಟ ಅಥವಾ ಬೆಳೆ ಬೆಳೆಯುವ ಭೂಮಿಯ ಸಾರಾಂಶಗಳನ್ನು ಬೆಳೆಗಳು ಬಳಕೆ ಮಾಡಿಕೊಂಡಾಗ…

Read more
ಅಡಿಕೆ ಮಾರುಕಟ್ಟೆ ಸ್ಥಿರ

ಅಡಿಕೆ ಮಾರುಕಟ್ಟೆ ಸ್ಥಿರ : ಕುಸಿಯುವ ಭೀತಿ ಇಲ್ಲ.

ಎಪ್ರೀಲ್ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಸ್ವಲ್ಪ ಚೇತರಿಕೆ ಆಗಬಹುದು ಎಂಬ ಊಹನೆ ಇತ್ತು. ಊಹನೆಯಂತೆ ಹಳೆ ಚಾಲಿ ಮತ್ತು ಪಟೋರಾ ಅಡಿಕೆ ದರ ಸ್ವಲ್ಪ ಏರಿತಾದರೂ ಹೊಸ ಅಡಿಕೆ ದರ ಸ್ಥಿರವಾಗಿಮುಂದುವರಿದಿದೆ. ಅಡಿಕೆ ಉತ್ಪಾದನೆ ಜಾಸ್ತಿ ಇದೆ ಎಂಬ ಮಾಹಿತಿಗಳ ನಡುವೆ, ದರ ಕುಸಿಯುವ ಭೀತಿ ಇಲ್ಲ ಎಂಬುದಾಗಿ ವರ್ತಕರ ಹೇಳಿಕೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಧಾರಣೆ ಸ್ವಲ್ಪ ಏರಿಕೆಯಲ್ಲೇ ಇದೆ. ಕಳೆದ ವರ್ಷದಷ್ಟು ಇಳಿಕೆಯ ಅಂಜಿಕೆಯೂ ಇಲ್ಲ. ಒಟ್ಟಿನಲ್ಲಿ ಅಡಿಕೆ ಆಮದು ಆಗುವ…

Read more
error: Content is protected !!