ಕೆಂಪಡಿಕೆ

ಅಡಿಕೆ ಧಾರಣೆ- ದಿನಾಂಕ 18-09-2021.

ದಿನಾಂಕ 18-09-2021 ರಂದು ರಾಜ್ಯದ ವಿವಿಧ ಅಡಿಕೆ ಬೆಳೆಯುವ ಪ್ರದೇಶಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಟೆಂಡರ್ ಆದ ದರ ವಿವರ ಹೀಗಿದೆ. ಕೆಲವು ಕಡೆ ಈ ದಿನ ಟೆಂಡರ್ ನಡೆದಿಲ್ಲ. ಅಲ್ಲಿ ಹಿಂದಿನ ದಿನದ ದರವನ್ನೇ ನಮೂದಿಸಲಾಗಿದೆ. ಊರು ದಿನಾಂಕ   ವಿಧ  ಕನಿಷ್ಟ  ದರ ಗರಿಷ್ಟ ದರ  ಸರಾಸರಿ ದರ ಬಂಟವಾಳ: 18/09/2021, Coca, 7, 10000, 22500, 20000 BANTWALA, 18/09/2021, New Variety, 2, 23500, 49000, 44500 BANTWALA, 18/09/2021, Old Variety,…

Read more

ಅಂತರ್ಜಲ ಬಳಕೆಗೂ ಬೇಕು – ಲಾಕ್ ಡೌನ್ .

ಒಂದುವರೆ ತಿಂಗಳ ಕಾಲ ಅಂತರ್ಜಲದೊಂದಿಗಿನ  ಅತ್ಯಾಚಾರಕ್ಕೆ ಸ್ವಲ್ಪ ಬಿಡುವಾಗಿತ್ತು. ಆದರೂ ರಾತ್ರೆ ಹೊತ್ತು ಹಳ್ಳಿಯ ಮೂಲೆಗಳಲ್ಲಿ ವ್ಯವಹಾರ ನಡೆಯುತ್ತಿತ್ತು. ಈಗ ಮತ್ತೆ ಅತ್ಯಾಚಾರ ಪ್ರಾರಂಭವಾಗಿದೆ. ಹಳ್ಳಿಯ ಪೆಟ್ರೋಲ್ ಪಂಪುಗಳ ಮುಂದೆ ಮೂರು ನಾಲ್ಕು ಬೋರ್ ಲಾರಿಗಳು ಮೊಕ್ಕಾಂ ಹೂಡಿವೆ. ಒಂದು ತಿಂಗಳು ಅಂತರ್ಜಲಕ್ಕೆ ಬಿಡುಗಡೆ ಸಿಕ್ಕಿದೆ. ಹಾಗೆಯೇ ವರ್ಷದಲ್ಲಿ 2-3 ತಿಂಗಳು ಬಿಡುವು ಕೊಟ್ಟರೆ ಅದೆಷ್ಟೋ ಅಂತರ್ಜಲ ಶೋಷಣೆ ಕಡಿಮೆಯಾಗಬಹುದು. ಅಂತರ್ಜಲದ ಕ್ಷೀಣಿಸುತ್ತಿದೆ: ನಮ್ಮಲ್ಲಿ ಒಂದಷ್ಟು ಜನ ಬೆಳೆಗಳ ಅವಶ್ಯಕತೆಗೆ  ಬೇಕಾದಷ್ಟೇ ಬಳಸಲು ಅಂತರ್ಜಲವನ್ನು ಆವಲಂಭಿಸಿಲ್ಲ. ಅದನ್ನು…

Read more

ಅಧಿಕಇಳುವರಿಗೆ ನೆರವಾಗುವ ರಾಸಾಯನಿಕ ಇಲ್ಲದ NPK ಪೋಷಕ.

ಕೆಲವು ರೈತರು ಬೆಳೆಗಳಿಗೆ ಎಲ್ಲಾ ರೀತಿಯ ಗೊಬ್ಬರಗಳನ್ನು ಕೊಡುತ್ತಾರೆ. ವರ್ಷದಿಂದ ವರ್ಷಕ್ಕೆ ಗೊಬ್ಬರ ಕೊಡುವ ಪ್ರಮಾಣವನ್ನೂ ಹೆಚ್ಚಿಸುತ್ತಾರೆ. ಆದರೆ ವರ್ಷದಿಂದ ವರ್ಷಕ್ಕೆ ಫಸಲು ಕಡಿಮೆಯಾಗುತ್ತದೆ. ಸಸ್ಯ ದ ಆರೋಗ್ಯವೂ ಹಾಳಾಗುತ್ತದೆ. ಇದಕ್ಕೆ ಕಾರಣ ಮಣ್ಣಿನ ಜೈವಿಕತೆ ಕ್ಷೀಣಿಸುವುದು. ಪರಿಸ್ಥಿತಿಗೆ ಸಹಜವಾಗಿ ಮಣ್ಣಿಗೆ ಸಾವಯವ ವಸ್ತುಗಳನ್ನು ಹೇರಳವಾಗಿ ಪೂರೈಕೆ ಮಾಡಲು ಆಗುತ್ತಿಲ್ಲ. ಇದರಿಂದಾಗಿ ಮಣ್ಣಿನ ಜೈವಿಕ ಗುಣ ಕ್ಷೀಣವಾಗುತ್ತಾ ಬರುತ್ತದೆ. ಹಾಕಿದ ಗೊಬ್ಬರವನ್ನು ಲಭ್ಯಸ್ಥಿತಿಗೆ ತಂದು ಅಧಿಕಇಳುವರಿ ಪಡೆಯಲು ಈ ಜೈವಿಕ ಸಮ್ಮಿಶ್ರಣ ನೆರವಾಗುತ್ತದೆ. ನಾವು ತಿನ್ನುವ ಆಹಾರ ದೇಹದಲ್ಲಿ…

Read more
ರಾಸಾಯನಿಕ ಗೊಬ್ಬರ ಬಳಸಿ ಇಳುವರಿ

ರಾಸಾಯನಿಕ ಗೊಬ್ಬರಗಳಿಂದ ನೈಜ ತೊಂದರೆ ಏನು?

ಕೆಲವು ರಾಸಾಯನಿಕ ಗೊಬ್ಬರಗಳ ವಿರೋಧಿಗಳು  ಹುಟ್ಟಿಕೊಂಡು  ಉಳಿದ ರೈತರಿಗೆ ತುಂಬಾ ದ್ವಂದ್ವ ಉಂಟಾಗಿದೆ. ಇದು ಒಂದು ರೈತ ಕಳಕಳಿ ವಿಚಾರವೊ ಅಥವಾ ಒಂದು ಅಪರೋಕ್ಷ  ವ್ಯವಹಾರ ದಂಧೆಯೋ ಗೊತ್ತಾಗುತ್ತಿಲ್ಲ. ಕೃಷಿಕ ಸಮುದಾಯದಲ್ಲಿ ರಾಸಾಯನಿಕ ಬಳಕೆ ಮಾಡುವವರನ್ನು ಅಸ್ಪೃಷ್ಯರ ತರಹ ಕಾಣುವವರೂ ಸೃಷ್ಟಿಯಾಗಿದ್ದಾರೆ.   ರಾಸಾಯನಿಕ ಗೊಬ್ಬರ ಎಂದ ಮಾತ್ರಕ್ಕೆ ಅದರ ವಿರೋಧಿಗಳು ಮೈಮೇಲೆ ಬಂದವರಂತೆ ಮಾತನಾಡಬೇಕಾಗಿಲ್ಲ. ಇದು ಅವರರವರ ವೈಯಕ್ತಿಕ ಆಯ್ಕೆ. ಆದರೆ ಬರೇ ರಾಸಾಯನಿಕ ಮಾತ್ರ ಬಳಸುವುದರಿಂದ ಮಣ್ಣಿನ ರಚನೆ ಹಾಳಾಗುತ್ತದೆ. ಹಾಗಾಗಿ ರಸಗೊಬ್ಬರ ಹಾಕುವವರು ಸಾವಯವ…

Read more
ಅಡಿಕೆ -ದರ ಎರಿಕೆ

ಅಡಿಕೆ -ದರ ಏರಿಕೆಗೆ ಮುಹೂರ್ತ ಕೂಡಿ ಬರುವ ಮುನ್ಸೂಚನೆ.

ಈ ಹಿಂದೆ ನಾವು ಕೆಲವು ವರ್ತಕರು ಮತ್ತು  ಅನುಭವಿಗಳ ಹೇಳಿಕೆಯಂತೆ ಊಹಿಸಿದ್ದ ಬೆಲೆ ಏರಿಕೆಯ  ಕಾಲ ಈಗ ಕೂಡಿ ಬರುವ ಸೂಚನೆ ಕಾಣುತ್ತಿದೆ. ನಿನ್ನೆ ಪಟೋರಾ ಅಡಿಕೆಗೆ 20 ರೂ, ಜಂಪ್. ಇಂದು ಹಳೆ ಅಡಿಕೆಗೆ 10 ರೂ. ಜಂಪ್. ಇನ್ನೇನು ಮುಂದಿನ ವಾರದ ಒಳಗೆ ಚಾಲಿ ಮತ್ತು ಕೆಂಪಡಿಕೆ ಎರಡೂ ಏರಿಕೆ ಪ್ರಾರಂಭವಾಗುವ ಮುನ್ಸೂಚನೆ ಇದೆ. ದರ ಏರಿಕೆಯ ಮುಹೂರ್ತ ಖಾಸಗಿ ವ್ಯಾಪಾರಿಗಳಿಂದ ಪ್ರಾರಂಭವಾಗಿದೆ. ಈಗ ಏರಿಕೆ ಆಗುವುದು ಮುಂದಿನ ಮಳೆಗಾಲದ ಹಂಗಾಮಿಗೆ ದಾಸ್ತಾನು ಮಾಡಿಕೊಳ್ಳುವುದಕ್ಕೆ…

Read more
one year areca plant

ಮೊದಲ ವರ್ಷದ ಅಡಿಕೆ ಸಸಿಗೆ ಎಷ್ಟು ಗೊಬ್ಬರ ಕೊಡಬೇಕು

ಅಡಿಕೆ ಮರಗಳು – ಸಸಿಗಳಿಗೆ  , ತೆಂಗಿನ ಮರದ  ಹಾಗೆಯೇ ಇನ್ನಿತರ ಎಲ್ಲಾ ಧೀರ್ಘಾವಧಿ ಬೆಳೆಗಳಲ್ಲಿ ಮುಂಗಾರು ಮಳೆ ಪ್ರಾರಂಭವಾಗುವ ಸಮಯದಲ್ಲಿ ಹೊಸ ಬೇರುಗಳ ಉತ್ಪತ್ತಿ ಜಾಸ್ತಿ. ಹೊಸ ಬೇರು ಮೂಡುತ್ತದೆ. ಹಳೆ  ಬೇರು ಹೆಚ್ಚು ಚುರುಕಾಗಿ ಆಹಾರ ಬಯಸುತ್ತವೆ. ಈ ಸಮಯದಲ್ಲಿ  ಕೊಡುವ ಪೋಷಕಾಂಶ ಅದರ ತುರ್ತು ಅಗತ್ಯಕ್ಕೆ ಲಭ್ಯವಾಗಿ ಬೆಳೆವಣಿಗೆಗೆ ಸಹಾಯಕವಾಗುತ್ತದೆ. ನೆಟ್ಟ ಮೊದಲ ವರ್ಷದ ಅಡಿಕೆ ಸಸಿಗೆ ಎಷ್ಟು ಗೊಬ್ಬರ ಕೊಡಬೇಕು ಎಂಬುದರ ಮಾಹಿತಿ ಇಲ್ಲಿದೆ. ಎಲ್ಲಾ ನಮೂನೆಯ ಧೀರ್ಘಾವಧಿ ಬೆಳೆಗಳಿಗೆ ಅವುಗಳ…

Read more
ಅಡಿಕೆ ಕಾಯಿಗಳು ಯಾಕೆ ಹೀಗಾಗುತ್ತವೆ? ಏನು ಪರಿಹಾರ?

ಅಡಿಕೆ ಕಾಯಿಗಳು ಯಾಕೆ ಹೀಗಾಗುತ್ತವೆ? ಏನು ಪರಿಹಾರ?

ಬಹಳಷ್ಟು ಅಡಿಕೆ ಬೆಳೆಗಾರರ ತೋಟದಲ್ಲಿ ಈಗ ಇಂತಹ ಕಾಯಿಗಳು ಉದುರಿ ಬೀಳುತ್ತಿವೆ. ಸರಿಯಾಗಿ ಬಲಿತು ಹಣ್ಣಾಗಿರದ, ಮೇಲ್ಮೈಯಲ್ಲಿ ಸುಟ್ಟಂತಹ ಕಲೆ ಇರುವ ಈ ಅಡಿಕೆಗೆ  ಗುಣಮಟ್ಟ ಇರುವುದಿಲ್ಲ. ಸಿಪ್ಪೆ ಅಂಟಿರುವ ಉಳ್ಳಿ ಅಡಿಕೆ ಆಗಬಹುದು.  ಒಡೆದ ಪಟೋರಾವೂ ಆಗಬಹುದು. ಇಲ್ಲವೇ ಕೆಂಪು ಬಣ್ಣದ ಕರಿಗೋಟು ಆಗಬಹುದು. ಹೀಗಾಗುವುದಕ್ಕೆ ಕಾರಣ ಏನು ಎಂಬುದು ಬಹಳಷ್ಟು ಕೃಷಿಕರಿಗೆ ಗೊತ್ತಿಲ್ಲ. ಇದು ಹೊಸ ಸಮಸ್ಯೆ ಅಲ್ಲವಾದರೂ ಈಗೀಗ ಇದರ ತೊಂದರೆ ಹೆಚ್ಚಾಗುತ್ತಿದೆ. ಅಡಿಕೆ ಬೆಳೆಗೆ ಈಗೀಗ ಒಂದಿಲ್ಲೊಂದು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.ಇದಕ್ಕೆ ಕಾರಣ…

Read more
ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ ಸಾಧ್ಯತೆ.

ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ  ಸಾಧ್ಯತೆ.

ಅಡಿಕೆ ಮಾರುಕಟ್ಟೆಯಲ್ಲಿ ದರ ಕುಸಿತದ ಸುದ್ದಿ ಹಬ್ಬುತ್ತಿದೆ. ಕೆಂಪಡಿಕೆ  ಕೊಯಿಲು ಪ್ರಾರಂಭವಾಗಿದೆ. ಚಾಲಿ ಅಡಿಕೆ ಮಾಡುವ ಪ್ರದೇಶಗಳಲ್ಲೂ  ಒಂದು ಕೊಯಿಲಿನ ಅಡಿಕೆ  ಹಣ್ಣಾಗಿ ಅಗಿದೆ. ಹೊಸತು ಹಳತಾಗಿದೆ. ಹೊಚ್ಚ ಹೊಸತು ಬರಲಾರಂಭಿಸಿದೆ. ಈ ಮಧ್ಯೆ ಅಡಿಕೆ ಧಾರಣೆ ಏರಿಕೆ ಆಗುವ ಸುಳಿವು ಇಲ್ಲ. ಹೊಸತು ಮಾರುಕಟ್ಟೆಗೆ ಬರುವ ಈ ಸಮಯಕ್ಕೆ  ಹಳೆ ಅಡಿಕೆಗೆ ದರ ಸ್ವಲ್ಪವಾದರೂ ಹೆಚ್ಚಾಗಬೇಕಿತ್ತು. ಆದರೆ  ಹಳೇ (ಡಬ್ಬಲ್) ಅಡಿಕೆಗೆ ಬೇಡಿಕೆಯೇ ಇಲ್ಲದ ಸ್ಥಿತಿ ಉಂಟಾಗಿದೆ. ಎಲ್ಲೋ ಒಂದೆಡೆ ಅಡಿಕೆ ಧಾರಣೆ ಕುಸಿಯುವ ಸುಳಿವು…

Read more
ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗ

ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗಳು.

ಬೆಳೆಗಳಿಗೆ ಹಾನಿ ಮಾಡುವ ಕೀಟ – ರೋಗ ನಿಯಂತ್ರಣಕ್ಕೆ ವಿಷ ರಾಸಾಯನಿಕಗಳೇ ಅಂತಿಮ ಅಲ್ಲ. ಅದರ ಬದಲಿಗೆ ಜೈವಿಕ ಕೀಟ –ರೋಗ ನಿಯಂತ್ರಕಗಳು ಇವೆ. ಇವು ಉತ್ತಮವಾಗಿ ಕೆಲಸ ಮಾಡುತ್ತವೆ. ರಾಸಾಯನಿಕ ಕೀಟ ರೋಗ ನಿಯಂತ್ರಗಳಿಗೆ ಇವು ಪರ್ಯಾಯ.ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ ಮಾಡಿದರೆ ಕೆಲವು ಸರಳ , ಸುರಕ್ಷಿತ ಉಪಾಯಗಳು ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕ ಉಪಾಯಗಳಿಂದಲೇ ನಿಯಂತ್ರಿಸಬಹುದು ಎಂದು ಕಂಡುಕೊಳ್ಳಲಾಗಿದೆ. ಇದನ್ನು…

Read more
ಸೂಕ್ತವಾದ ನಾಟಿ ವಿಧಾನ

ಕರಿಮೆಣಸು ಬಳ್ಳಿ/ಸಸಿ ಹೇಗೆ ನೆಡಬೇಕು?

ಕರಿಮೆಣಸು ಬೆಳೆಸಲು ಕೆಲವರು ಬಳ್ಳಿ ತುಂಡುಗಳನ್ನು ನಾಟಿ ಮಾಡುತ್ತಾರೆ. ಮತ್ತೆ ಕೆಲವರು ಪ್ಯಾಕೆಟ್  ಸಸಿ ನಾಟಿ ಮಾಡುತ್ತಾರೆ. ಎರಡೂ ಉತ್ತಮ. ಬಳ್ಳಿ ನಾಟಿ ಮಾಡುವವರಿಗೆ ಮುಂಗಾರು ಮಳೆ ಪ್ರಾರಂಭವಾಗುವ ಈ ಸಮಯ ಉತ್ತಮ. ಸಸಿ ನಾಟಿಯನ್ನು  ಯಾವಾಗಲೂ ಮಾಡಬಹುದು. ಬಳ್ಳಿ ತುಂಡುಗಳನ್ನು ನಾಟಿ ಮಾಡಿದರೆ ಅದು  ಮಣ್ಣಿನಲ್ಲಿ ಬೇರು ಬಿಡುವ ತನಕ ಒಣಗದೆ ಇರಬೇಕು. ಹಾಗಾಗಬೇಕಾದರೆ ಬಿಸಿಲು ಇರಬಾರದು. ಹೆಚ್ಚು ಮಳೆಯೂ ಇರಬಾರದು.  ಅದಕ್ಕೇ ಈ ಸಮಯ ಸೂಕ್ತ. ಈಗ ನೆಟ್ಟರೆ ಅನುಕೂಲ ಏನು? ಹಿತಮಿತವಾದ ಮಳೆ…

Read more
error: Content is protected !!