ಟೆಂಡರ್ ನಲ್ಲಿ ಅಡಿಕೆ ಪ್ರದರ್ಶನ

12-10-2021 ರ ಅಡಿಕೆ, ಕರಿಮೆಣಸು,ಕೊಬ್ಬರಿ ಕಾಫೀ ಧಾರಣೆ.

ಕಳೆದ ಎರಡು ವಾರದಿಂದ ರಾಶಿ ಅಡಿಕೆ ಮತ್ತು ಚಾಲಿ ದರಗಳು ಇಳಿಮುಖ ಹಾದಿಯಲ್ಲಿ  ಸಾಗುತ್ತಿರುವ ಕಾರಣ, ಬೆಳೆಗಾರರು ಮಾರಾಟಕ್ಕೆ ಮುಂದಾಗಿದ್ದಾರೆ. ಸಹಜವಾಗಿ ಬೆಲೆ ಇಂದು 12-10-2021 ರಂದು ಇಳಿಕೆಯೇ. ಕರಿಮೆಣಸಿನ ಬೆಲೆ ಏರುವ ಕಾರಣ ಕೊಡುವವರು ಕಡಿಮೆ.ಬೆಳೆಗಾರರ ನಡೆಯ ಮೇಲೆ ಮಾತ್ರ ಬೆಲೆ ಸ್ಥಿತರೆ ಹಾಗೂ ಏರಿಕೆ ಆಗಲು ಸಾಧ್ಯ ಇದನ್ನು ಬೆಳೆಗಾರರು ಅರ್ಥ ಮಾಡಿಕೊಳ್ಳಬೇಕಾಗಿದೆ. ದರ ಇಳಿಕೆಯಾದ ತಕ್ಷಣ ಅಧಿಕ ಪ್ರಮಾಣದಲ್ಲಿ  ರೈತರು ಮಾರಾಟಕ್ಕೆ ಮುಂದಾಗುತ್ತಾರೆಯೋ  ತಿಳಿಯುತ್ತಿಲ್ಲ. ಯಾವ ಬೆಳೆಗಾರನಿಗೂ ಮಾರುಕಟ್ಟೆಯಲ್ಲಿ ಗರಿಷ್ಟ ಬೆಲೆ ಬಂದು…

Read more
Nut meg mace

ಅಡಿಕೆ ತೋಟಕ್ಕೆ ಅತ್ಯುತ್ತಮ ಮಿಶ್ರ ಬೆಳೆ ಜಾಯೀಕಾಯಿ.

ಅಡಿಕೆ ತೋಟದಲ್ಲಿ ವಾರ್ಷಿಕ ಮಿಶ್ರ ಬೆಳೆಗಳಿಗಿಂತ  ಬಹುವಾರ್ಷಿಕ ಮಿಶ್ರ ಬೆಳೆಗಳಿದ್ದರೆ ತಲೆಬಿಸಿ ಇಲ್ಲ. ಮರ ಸಾಂಬಾರವಾದ ಜಾಯೀಫಲ ಎಂಬುದು  ಅಡಿಕೆ ಮರಗಳ ಜೊತೆಗೆ ಯಾವುದೇ ಸ್ಪರ್ಧೆ ನಡೆಸದೆ, ಒಂದೆಡೆ ಆದಾಯ ಮತ್ತೊಂದೆಡೆ ಗಾಳಿ ಮತ್ತು ಬಿಸಿಲು ತಡೆಗೆ ಸಹಕರಿಸುವ  ಧೀರ್ಘಾವಧಿಯ ಬೆಳೆ. ಅಡಿಕೆ ತೋಟಕ್ಕೆ ಹೊಂದುವ ಮಿಶ್ರ ಬೆಳೆಗಳಲ್ಲಿ ಕರಿಮೆಣಸು, ಕೊಕ್ಕೋ ಬಹುವಾರ್ಷಿಕ ಮಿಶ್ರ ಬೆಳೆಗಳು. ಆದರೆ ಅವುಗಳ ರಕ್ಷಣೆ, ನಿರ್ವಹಣೆಯ ತೆಲೆಬಿಸಿ ದೊಡ್ಡದು. ಮರ ಸಾಂಬಾರವಾದ  ಜಾಯೀ ಫಲಕ್ಕೆ ಇದೆಲ್ಲಾ ಯಾವುದೂ ಇಲ್ಲ. ನೆಟ್ಟರೆ ಬೆಳೆಯುತ್ತಿರುತ್ತದೆ….

Read more
ಅಲಸಂದೆ ಇಳುವರಿ

ಅಲಸಂದೆ ಬೆಳೆದರೆ ಎಕ್ರೆಗೆ ₹ 7.8 ಲಕ್ಷ ಆದಾಯ.

ತರಕಾರಿ ಬೆಳೆ ಒಂದು ತಪಸ್ಸು. ಶ್ರದ್ಧೆಯಿಂದ ಮಾಡಿದರೆ ಅದು ಒಲಿಯುತ್ತದೆ. ಹೆಚ್ಚು ಕಾಲಾವಧಿ ಬೇಕಾಗಿಲ್ಲ. ತಪಸ್ಸು ಮಾಡಿ ಫಲ ಪಡೆಯಲು ಋಷಿ ಮುನಿಗಳು ವರ್ಷಾನು ವರ್ಷ ಕಷ್ಟಪಡಬೇಕು. ಆದರೆ ಕೃಷಿಯಲ್ಲಿ ತಪಸ್ಸು ಮಾಡಲು ವರ್ಷ ಗಟ್ಟಲೆ ಕಾಯಬೇಕಾಗಿಲ್ಲ.  ಮಾಡಬೇಕಾದುದು ಒಂದೇ, ಸರಿಯಾದ   ಹೆಚ್ಚು ಆದಾಯ ಕೊಡಬಲ್ಲ  ಬೆಳೆಯ  ಆಯ್ಕೆ .. ತರಕಾರಿ ಬೆಳೆಯ ಅನುಕೂಲಗಳು: ಧೀರ್ಘಾವಧಿ ಬೆಳೆಗಳಿಗೆ ಹೆಚ್ಚು ಸಮಯ  ಕಾಯಬೇಕು. ಆದರೆ ತರಕಾರಿಗೆ ಹಾಗಿಲ್ಲ. ಬೇಗ ಇಳುವರಿ- ಬೇಗ ಆದಾಯ. ಬಹುತೇಕ ತರಕಾರಿ ಬೆಳೆಗಳು ನಾಟಿ…

Read more
ಕೆಂಪಡಿಕೆ ಮಾಡಲು ಹೊಂದಿಕೆಯಾಗುವ ಹೊಸ ತಳಿ ಮಧುರ ಮಂಗಳ

ಕೆಂಪಡಿಕೆ ಮಾಡಲು ಸೂಕ್ತವಾದ ವಿವಿಧ ತಳಿಗಳು.

ಅಡಿಕೆ ಬೆಳೆಯುವ ಕೆಲವು ಪ್ರದೇಶಗಳಲ್ಲಿ ಬೇಯಿಸಿ ಕೆಂಪಡಿಕೆ ಮಾಡುವುದು ಅಲ್ಲಿನ ಪರಂಪರಾಗತ ಕ್ರಮ. ಬೇಯಿಸಲು ಅದಕ್ಕೆಂದೇ ಸೂಕ್ತವಾದ ತಳಿಗಳನ್ನು ಮಾತ್ರ ಬೆಳೆಸಬೇಕು. ಕೆಂಪಡಿಕೆ  ಮಾಡಲು ಹೊಂದುವ ಅಡಿಕೆ ಬಿಸಿಲಿನಲ್ಲಿ ಒಣಗಿಸಿ ಮಾಡುವ ಚಾಲಿ ಅಡಿಕೆಗೆ ಸೂಕ್ತವಲ್ಲ. ಚಾಲಿ ಮಾಡುವ ಅಡಿಕೆ ಕೆಂಪಡಿಕೆ ಮಾಡಲೂ ಸೂಕ್ತವಲ್ಲ. ಆಯಾಯಾ ಪ್ರದೇಶಕ್ಕೆ ಹೊಂದಿಕೆಯಾಗುವ ರೂಡಿಯ ತಳಿಗಳನ್ನು ಬೆಳೆಸುವುದು ಎಲ್ಲದಕ್ಕಿಂತ ಉತ್ತಮ. ಕರಾವಳಿಯ ಪ್ರದೇಶವನ್ನು  ಹೊರತಾಗಿಸಿ ರಾಜ್ಯದ ಉಳಿದ 6  ಜಿಲ್ಲೆಗಳಲ್ಲಿ ಅಡಿಕೆಯನ್ನು ಬೇಯಿಸುತ್ತಾರೆ. ಇದನ್ನು ಕೆಂಪಡಿಕೆ ಎನ್ನುತ್ತಾರೆ. ಈ ಉದ್ದೇಶಕ್ಕೆ  ಎಲ್ಲಾ…

Read more

ಸಾರಜನಕ ಗೊಬ್ಬರ ನಮ್ಮ ಹೊಲದಲ್ಲೇ ಇದೆ ಗೊತ್ತೇ?

ಸಾರಜನಕ  ಗೊಬ್ಬರವಾಗಿ ರಾಸಾಯನಿಕ ರೂಪದ ಯೂರಿಯಾ, ಅಮೋನಿಯಂ ಸಲ್ಫೇಟ್ ಅಥವಾ ನೈಟ್ರೇಟ್ ಮುಂತಾದವುಗಳನ್ನೇ  ಬಳಸಬೇಕಾಗಿಲ್ಲ. ನಿಸರ್ಗ ಸಾರಜನಕ ಸತ್ವದ ಖಣಜ. ನಮ್ಮ ತುರ್ತು ಅವಶ್ಯಕತೆಗಾಗಿ ರಾಸಾಯನಿಕ ವಿಧಾನದ ಮೂಲಕ ಸಾರಜನಕ ಗೊಬ್ಬರವನ್ನು ಉತ್ಪಾದಿಸಿದ್ದು. ನಮ್ಮ ಸುತ್ತಮುತ್ತ ಇರುವ ಸಸ್ಯ ಮತ್ತು ಸಾವಯವ ವಸ್ತುಗಳಲ್ಲಿ  ನೈಸರ್ಗಿಕ ಸಾರಜನಕ ಸಾಕಷ್ಟು ಇದೆ. ಮಣ್ಣಿನಲ್ಲಿ ಸಾಕಷ್ಟು ಸಾರಜನಕದ ಅಂಶ ಇದೆಯಾದರೂ ನಾವು ಯಾಕೆ ಬೇರೆ ಮೂಲದಿಂದ ಸಾರಜನಕವನ್ನು ಬಳಸುತ್ತಿದ್ದೇವೆ ಎಂಬುದು ಎಲ್ಲರ ಭಾವನೆ. ಇದು ಸತ್ಯ. ಕಾರಣ ಇಷ್ಟೇ ಇವು ಬೇರೆ…

Read more
sprinkler installation

ಸ್ಪ್ರಿಂಕ್ಲರ್ ನೀರಾವರಿ ಮಾಡುವವರು ತಿಳಿಯಬೇಕಾದ ಮಾಹಿತಿ.

ಬಹುತೇಕ ಕರಾವಳಿ ಮಲೆನಾಡಿನ ಅಡಿಕೆ ತೋಟದ ಬೆಳೆಗಾರರ ಮೊದಲ ಆಯ್ಕೆ ಸ್ಪ್ರಿಂಕ್ಲರ್. ಈ  ವ್ಯವಸ್ಥೆ ಹೇಗಿದ್ದರೆ ಉತ್ತಮ ಇಲ್ಲಿದೆ ಮಾಹಿತಿ. ಸ್ಪ್ರಿಂಕ್ಲರ್ ನೀರಾವರಿ ಎಂದರೆ ಹೇಳಿದಷ್ಟು ಸರಳ ಅಲ್ಲ. ಈ ನೀರಾವರಿ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿದರೆ ಮಾತ್ರ ಅದರಲ್ಲಿ ಫಲ.ಹೆಸರೇ ಹೇಳುವಂತೆ ನೀರು ಮಳೆಯಂತೆ ಎಲ್ಲಾ ಕಡೆಗೂ ಸಿಂಚನವಾಗಬೇಕು. ಎಲ್ಲಾ ಭಾಗವೂ ಒದ್ದೆಯಾಗಬೇಕು. ಹೀಗೆ ಆಗಬೇಕಿದ್ದರೆ ಅದಕ್ಕೂ ಒಂದು ಡಿಸೈನ್ ಎಂಬುದು ಇದೆ. ಆ ಡಿಸೈನ್ ಪ್ರಕಾರ ಮಾಡಿದ್ದೇ ಆದರೆ ಸ್ರಿಂಕ್ಲರ್ ನೀರಾವರಿ ಉತ್ತಮ ಫಲ ಕೊಡುತ್ತದೆ.  ಹರಿ…

Read more
ಅತ್ಯುತ್ತಮ ಕರಿಮೆಣಸು

ಕರಿಮೆಣಸು –ಧೀರ್ಘ ಕಾಲ ದಾಸ್ತಾನು ಇಡಲು ಹೇಗೆ ಸಂಸ್ಕರಿಸಬೇಕು?

ಕರಿಮೆಣಸು ಎಂಬ ಸಾಂಬಾರ ಬೆಳೆ ವರ್ಷವೂ ಒಂದೇ ರೀತಿ ಇಳುವರಿ ಕೊಡುವುದಿಲ್ಲ. ಬೆಲೆಯೂ  ಆಗಾಗ ಭಾರೀ ಏರಿಕೆ – ಇಳಿಕೆ ಆಗುತ್ತಾ ಇರುತ್ತದೆ. ರೋಗಗಳೂ ಹೆಚ್ಚು. ಈ ಬೆಳೆಯನ್ನು  ಎಲ್ಲಾ ಬೆಳೆಗಾರರೂ ಆಪತ್ಕಾಲದ ನಿಧಿಯಾಗಿ ಉಳಿಸಿಕೊಂಡು ಉತ್ತಮ ಬೆಲೆ ಬಂದಾಗ ಮಾರಾಟ ಮಾಡಬೇಕು. ಧೀರ್ಘ ಕಾಲ ದಾಸ್ತಾನು ಇಟ್ಟರೂ ಹಾಳಾಗಲಾರದ ಏಕೈಕ ಕೃಷಿ ಉತ್ಪನ್ನ ಇದು. ಧೀರ್ಘ ಕಾಲ ದಾಸ್ತಾನು ಇಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಹೀಗೆ ಸಂಸ್ಕರಿಸಬೇಕು. ಕರಿಮೆಣಸು ಕೊಯಿಲು ಪ್ರಾರಂಭವಾಗಿದೆ. ದಾಸ್ತಾನು ಇಡುವವರು…

Read more
ಅಡಿಕೆ ಧಾರಣೆ ಏರುತ್ತದೆಯೇ ? ಹೀಗೆಯೋ ಮುಂದುವರಿಯುತ್ತದೆಯೋ?

ಅಡಿಕೆ ದರ ಏರುತ್ತದೆಯೇ ? ಹೀಗೆಯೋ ಮುಂದುವರಿಯುತ್ತದೆಯೋ?

ಕಳೆದ ವರ್ಷದ ಅಡಿಕೆ ಬೆಳೆಯ ಸ್ಥಿತಿ ನೋಡಿದರೆ ದರ ಇನ್ನೂ ಏರಿಕೆಯಾಗಬೇಕಿತ್ತು. ವ್ಯಾಪಾರಿಗಳು, ಅಡಿಕೆಯ ಸಿದ್ದ ಉತ್ಪನ್ನ ತಯಾರಿಕ ಉದ್ದಿಮೆಗಳು ದರ ಎಷ್ಟಾದರೂ ಆಗಲಿ, ನಮಗೆ ಅಡಿಕೆ ಬೇಕಾಗಿದೆ. ಕಳುಹಿಸಿ ಎಂಬ ಸೂಚನೆ ಕೊಡಬೇಕಿತ್ತು. ಆದರೆ ಅಂತಹ ಬೇಡಿಕೆಯೂ ಇಲ್ಲ. ದರ ಏರಿಕೆಯೂ ಆಗಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಸ್ವಲ್ಪ ಪರವಾಗಿಲ್ಲವಾದರೂ ಬೆಳೆ ಲೆಕ್ಕಾಚಾರ ನೋಡಿದರೆ ಬೇಡಿಕೆಯೋ ಬೇಡಿಕೆ ಆಗಬೇಕಿತ್ತು. ಕಾರಣ ಏನಿರಬಹುದು? ಕಳೆದ ವರ್ಷ 50%ದಷ್ಟು ಬೆಳೆ ನಷ್ಟವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅರ್ಧದಷ್ಟೂ ಇಲ್ಲ….

Read more
areca nut palm with full yield

ಅಡಿಕೆ – ಉತ್ತಮ ಫಲ ಕೊಡುವ ಮರದ ಲಕ್ಷಣ ಹೇಗಿರಬೇಕು.

ಇತ್ತೀಚೆಗಿನ ಅಡಿಕೆ ತೋಟಗಳಲ್ಲಿ ಶೇ.50 ಮಾತ್ರ ಉತ್ತಮ ಫಲನೀಡಿ, ಉಳಿದವು ಅನುತ್ಪಾದಕ ಮರಗಳಂತೆ ಇರುವ ಕಾರಣ ತೋಟಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದರೂ ಉತ್ಪಾದನೆ ಆ ಮಟ್ಟಕ್ಕೆ ಏರುತ್ತಿಲ್ಲ. ಬೆಳೆಗಾರರು ಹೆಚ್ಚು ಹೆಚ್ಚು ಸಸಿ ನೆಡುವ ಬದಲು ಇರುವ ತೋಟದಲ್ಲೇ ಬಹುತೇಕ ಉತ್ಪಾದಕ ಮರಗಳಿರುವಂತೆ ತೋಟವನ್ನು ಪುನಃಶ್ಚೇತನ ಮಾಡುವುದು ಎಲ್ಲಾ ದೃಷ್ಟಿಯಿಂದ ಉತ್ತಮ. ಸ್ವಲ್ಪ ಬಿಡುವು ಮಾಡಿಕೊಂಡು ತೋಟ ಸುತ್ತುತ್ತಾ ಬನ್ನಿ. ಹಿಂದೆ ಸುತ್ತುದಾಗ ಗಮನಿಸಿದ ಮರ, ಕಳೆದ ವರ್ಷ ಸುತ್ತುವಾಗ ಗಮನಿಸಿದ ಮರ , ಅದಕ್ಕಿಂತ ಹಿಂದಿನ…

Read more
ಆರೋಗ್ಯವಂತ ಅಡಿಕೆ ಮರ

ಅಡಿಕೆ ಮರದ ಆರೋಗ್ಯ –ಅದರ ಬೇರು ವ್ಯವಸ್ಥೆ.

ಯಾವುದೇ ಸಸ್ಯವಿರಲಿ, ಬೇರು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರುತ್ತದೆ. ಸಸ್ಯಕ್ಕೆ ಬೇರು ಮುಖ್ಯ ಆಧಾರ ಸ್ಥಂಭ.  ಇದು ಮಣ್ಣು, ನೀರು, ಕೀಟಗಳು ಮತ್ತು ಪೋಷಕಗಳ ಅಸಮತೋಲನದಿಂದ ತೊಂದರೆಗೆ ಒಳಗಾಗುತ್ತದೆ. ಇದನ್ನು ಪ್ರತೀಯೊಬ್ಬ ರೈತರೂ ಗಮನಿಸಿ ಅದನ್ನು ಸರಿಪಡಿಸಿದರೆ ಮರ ಆರೋಗ್ಯವಾಗಿರುತ್ತದೆ. ಅಡಿಕೆ ಮರ, ತೆಂಗಿನ ಮರ ಮುಂತಾದ ಎಲ್ಲಾ ಏಕದಳ ಸಸ್ಯಗಳ ಬೇರುಗಳು ತಳಕ್ಕೆ ಇಳಿಯದೇ ಮೇಲ್ಭಾಗದಲ್ಲೇ ಪೋಷಕಗಳನ್ನು ಹುಡುಕುತ್ತಾ ಪಸರಿಸುತ್ತಿರುತ್ತವೆ. ಇವು ಸಸ್ಯದ ಕಾಂಡದಿಂದ ಹುಟ್ಟಿಕೊಂಡು ಬೆಳವಣಿಗೆಯಾಗುತ್ತದೆ. ಸಸ್ಯದ ಸುತ್ತಲೂ ಇದು ಪಸರಿಸಿರುತ್ತದೆ.  Monocot roots are…

Read more
error: Content is protected !!