ಭಾರತದ ಕೃಷಿಗೆ TATA ದವರ ಕೊಡುಗೆ

ಭಾರತದ ಕೃಷಿಗೆ TATA ದವರ ಕೊಡುಗೆ.  

ಭಾರತದ ಕೃಷಿಗೆ TATA ದವರ ಕೊಡುಗೆ ಏನು ಎಂದರೆ TATA ಉತ್ಪನ್ನಗಳು.RATHAN TATA ಅವರ ಯುಗ ಅಂತ್ಯವಾಗಿದೆ. ಆದರೆ ಅವರ ಕೊಡುಗೆ ಅಜರಾಮರವಾಗಿದೆ. ಕೃಷಿಕರಿಗೂ ಟಾಟಾ ಸಂಸ್ಥೆ  ಬಹಳಷ್ಟು  ಕೊಡುಗೆಯನ್ನು ಕೊಟ್ಟಿರುವುದನ್ನು ಇಲ್ಲಿ ಸ್ಮರಿಸಬೇಕು. Tata Trust  ಮೂಲಕ ಭಾತರದ ರೈತರಿಗೆ ಟಾಟಾ ಸಂಸ್ಥೆ ಭಾರೀ ಕೊಡುಗೆಯನ್ನು ಕೊಟ್ಟಿದೆ. ಒಮ್ಮೊಮ್ಮೆ ಹೀಗೆ ಅನ್ನಿಸುತ್ತದೆ. ರತನ್ ಟಾಟಾ ರಂತಹ ನಿಸ್ವಾರ್ಥ ವ್ಯಕಿಗಳಿಗೆ ಆಯುಸ್ಸು ಕೊಡುವವರು ಚಿರಂಜೀವಿಯಾಗಿ ಬದುಕುವ ಆಯುಸ್ಸು ಕೊಡುವುದಿಲ್ಲ ಎಂದು.  ಸುಮ್ಮನೆ ಅನ್ನದಂಡ  ಭೂಮಿಗೆ ಭಾರ ಎಂಬಂತಿರುವವರಿಗೆ…

Read more
ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ತೋಟ ಮಾಡುವವರು  ಹಿಂದೆ ಇಂತಹ ಸಸಿ ಒಳ್ಳೆಯಯದು, ಇದನ್ನು ಆಯ್ಕೆ ಮಾಡಬೇಕು ಎಂದೆಲ್ಲಾ ಮುಂಜಾಗ್ರತಾ ಕ್ರಮ ಅನುಸರಿಸುತ್ತಿದ್ದರು. ಈಗಿನ ಪರಿಸ್ಥಿತಿಯಲ್ಲಿ ಗಮನಿಸಬೇಕಾದದ್ದು ಗಿಡದ ತಳಿ, ಬೆಳವಣಿಗೆ ಲಕ್ಷಣ ಮಾತ್ರವಲ್ಲದೆ ಗಿಡದ ಆರೋಗ್ಯವೂ ಸಹ. ಎಳೆ ಗಿಡಗಳ ಆರೋಗ್ಯ ಹೇಗಿದೆ ಎಂಬುದನ್ನು ಕೂಲಂಕುಶವಾಗಿ ನೋಡಿ ನಂತರ ಆಯ್ಕೆ ಮಾಡಿ ನೆಡಬೇಕು. ಬರೇ ಅಡಿಕೆ ಮಾತ್ರವಲ್ಲ ತೆಂಗಿನ ಸಸಿಯೂ ಹಾಗೆಯೇ.  ಅಡಿಕೆ ಸಸಿ ನೆಡುವವರು ಅದು ಅವರೇ ಮಾಡಿದ ಗಿಡ ಇರಬಹುದು ಅಥವಾ ನರ್ಸರಿಯಿಂದ ಖರೀದಿ ಮಾಡಿ ನೆಡುವುದೇ…

Read more
ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿನ ಮರ, ಗಿಡಗಳಿಗೆ ಇತ್ತೀಚೆಗೆ ಕೆಂಪು ಮೂತಿ ಕೀಟದ ಹಾವಳಿ ಭಾರೀ ಹೆಚ್ಚಾಗುತ್ತಿದೆ. ರೈತರು ತೆಂಗು ಬೆಳೆಯುವುದೇ ಅಸಾಧ್ಯ ಎನ್ನಲಾರಂಭಿಸಿದ್ದಾರೆ. ಹೀಗೇ ಮುಂದುವರಿದರೆ ರೈತರಿಗೆ ಸಸಿ ನೆಡುವುದೇ ಕೆಲಸವಾದರೂ ಅಚ್ಚರಿ ಇಲ್ಲ. ಇದನ್ನು ಸರಿಯಾಗಿ ಹದ್ದುಬಸ್ತಿಗೆ ತಾರದೆ ಇದ್ದರೆ ಮುಂದೆ ರೈತರು ತೆಂಗು ಬೆಳೆಸುವುದನ್ನೇ ಬಿಡುವ ಸ್ಥಿತಿ ಬಂದರೂ ಅಚ್ಚರಿ ಇಲ್ಲ. ಯಾವ ಕಾರಣಕ್ಕೆ ಈ ದುಂಬಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣ ಹೇಗೆ? ತೆಂಗಿನ ಮರಗಳಿಗೆ ಬರುವ ಎಲ್ಲಾ ರೋಗಗಳಿಂದಲೂ, ಕೀಟಗಳಿಂದಲೂ  ಪ್ರಭಲವಾದದ್ದು  ಕೆಂಪು ಮೂತಿ ದುಂಬಿ…

Read more
ಕರಿಮೆಣಸು ಬೆಳೆಗೆ ಭಾರೀ ರೋಗ- ತಕ್ಷಣದ ಪರಿಹಾರಗಳು

ಕರಿಮೆಣಸು ಬೆಳೆಗೆ ಭಾರೀ ರೋಗ- ತಕ್ಷಣದ ಪರಿಹಾರಗಳು ಏನು?

ಕರಿಮೆಣಸಿಗೂ ಅತಿಯಾದ ಮಳೆಗೂ  ಬಾರೀ ವಿರೋಧ. ನೀರು ಮೆಣಸಿಗೆ ಆಗದೆಂದಲ್ಲ. ಬಳ್ಳಿಯ ಬುಡದಲ್ಲಿ ನೀರು ಹರಿದು ಹೋದರೂ ಬಳ್ಳಿ ಸಾಯಲಾರದು. ಆದರೆ ನೀರು ಬಳ್ಳಿ ಬುಡದಲ್ಲಿ 20 ನಿಮಿಷಕ್ಕಿಂತ ಹೆಚ್ಚು ಸಮಯ ನಿಂತಿರಬಾರದು. ಮಳೆಗೆ ನೀರು ಸರಿಯಾಗಿ ಬಸಿಯಲಾರದ ಕಡೆಗಳಲ್ಲಿ ರೋಗ ಬರುವುದು ಗ್ಯಾರಂಟಿ. ಈಗಾಗಲೇ ಬಹಳಷ್ಟು ಕಡೆಗಳಲ್ಲಿ ರೋಗ ಬಂದಿದ್ದು, ಬಳ್ಳಿಯಲ್ಲಿ ಎಲೆ ಹಳದಿಯಾಗಿದೆ. ಕೆಲವು ರೋಗದ ಅಮಲಿನಲ್ಲಿವೆ. ಈ ಸಮಯದಲ್ಲಿ ತಕ್ಷಣ ಯಾವ ಪರಿಹಾರ ಕ್ರಮ ಕೈಗೊಂಡರೆ ಅಲ್ಪ ಸ್ವಲ್ಪ ರೋಗ ರೋಗ ಸೋಂಕು ತಗಲಿದ…

Read more
ಮ್ಯೂರಿಯೇಟ್ ಆಫ್ ಪೊಟಾಶ್

MOP Fertilizer: A Mineral Gift from the Earth, Not a Factory Chemical

Many farmers and common people often believe that Muriate of Potash (MOP) is a chemical fertilizer this is not true, it is A Mineral Gift from the Earth. It will not harms soil health and beneficial microbes. MOP is actually a natural mineral obtained from the earth, not a product of chemical factories like urea…

Read more
ತೆಂಗಿನ ಮರದ ಸುಳಿ ಕೊಳೆ

ತೆಂಗಿನ ಮರದ ಸುಳಿ ಕೊಳೆಯುವುದು ಯಾಕೆ? ಪರಿಹಾರ ಏನು?

ತೆಂಗಿನ ಮರದ ಶಿರ ಹೋಗುವುದಕ್ಕೆ ವಾತಾವರಣ ಕಾರಣ. ಇದು ಯಾವ ಪಕ್ಷಿ, ಪ್ರಾಣಿಯಿಂದಾಗಿ ಆಗುವುದಲ್ಲ. ಇದಕ್ಕೆ ಪ್ರಾರಂಭಿಕ ಹಂತದಲ್ಲಿ ಮಾತ್ರ ಚಿಕಿತ್ಸೆ   ಫಲಕಾರಿ. ಹಳ್ಳಿಯ ಜನ ಈಗಲೂ ಕುಪುಳು ಹಕ್ಕಿ Greater Coucal (ಬಾರದ್ವಾಜ ಪಕ್ಷಿ) ತೆಂಗಿನ ಗರಿಯಲ್ಲಿ ಕುಳಿತು ಮೂತ್ರ ಮಾಡಿದರೆ ತೆಂಗಿನ ಮರವೇ ಸತ್ತು ಹೋಗುತ್ತದೆ ಎಂದು ತಿಳಿದಿದ್ದಾರೆ. ಇದು ಈ ಹಕ್ಕಿಯಿಂದಾಗಿ ಆಗುವುದಲ್ಲ. ಹಕ್ಕಿಗಳು ಮೂತ್ರವನ್ನೇ ಮಾಡಲಾರವು. ಇದು ವಾತಾವರಣದ ಅನುಕೂಲ ಸ್ಥಿತಿ ಒದಗಿದಾಗ ಕೊಳೆತಿನಿ ಶಿಲೀಂದ್ರ ಬಾಧಿಸಿ ಉಂಟುಮಾಡುವ ರೋಗ.  ಸುಳಿ…

Read more
coconut tree full of nuts

ತೆಂಗಿನ ತೋಟ – ಬೇಸಿಗೆಯಲ್ಲಿ ತೇವಾಂಶ ರಕ್ಷಣೆಗೆ ಹೀಗೆ ಮಾಡಿ.

ಬೇಸಿಗೆಯ ಕಾಲದಲ್ಲಿ ತೆಂಗಿನ ಮರ/ ಸಸಿಯ ಬೇರುಗಳಿರುವ ಭಾಗ ತೇವಾಂಶದಿಂದ ಕೂಡಿದ್ದರೆ ಇಳುವರಿ ಹೆಚ್ಚುತ್ತದೆ.ತೇವಾಂಶ ರಕ್ಷಣೆಗೆ ಹೀಗೆ ಮಾಡಬಹುದು. ಬೇಸಿಗೆಯ ಸಮಯದಲ್ಲಿ ನೀರಾವರಿ ಅತೀ ಪ್ರಾಮುಖ್ಯ ಕೆಲಸ. ಅದರ ಜೊತೆಗೆ ಮಣ್ಣಿನಲ್ಲಿ ಸೂಕ್ಷ್ಮಾಣು ಜೀವಿಗಳ ಚಟುವಟಿಕೆಯೂ ನಡೆಯುತ್ತಿರಬೇಕು. ಹೀಗೆ ಆಗಲು ಬೆಳೆಗಾರರು ಮಾಡಬೇಕಾದ ಕೆಲವು ಅಗತ್ಯ ಕೆಲಸಗಳು ಹೀಗಿವೆ. ತೆಂಗಿನ ಮರ ಎಂದರೆ ನಾವು ಅದಕ್ಕೆ ಎಲ್ಲಾ ಸಾವಯವ ತ್ಯಾಜ್ಯಗಳನ್ನು ಬುಡಕ್ಕೆ ಹಾಕುತ್ತೇವೆ. ಅವು ಮಳೆಗಾಲದಲ್ಲಿ ಕರಗಿ ಬುಡದಲ್ಲಿ ಗೊಬ್ಬರವಾಗುತ್ತದೆ. ಬೇಸಿಗೆಯಲ್ಲಿ ಬಿಸಿಲಿಗೆ ಒಣಗುತ್ತಾ ಇರುತ್ತದೆ. ಬೇಸಿಗೆ…

Read more
ಕುರಿ – ಕೋಳಿ ಗೊಬ್ಬರ ಸದ್ಯಕ್ಕೆ ಬಳಸಬೇಡಿ

ಕುರಿ – ಕೋಳಿ ಗೊಬ್ಬರ ಸದ್ಯಕ್ಕೆ ಬಳಸಬೇಡಿ. ಎಲೆ ಚುಕ್ಕೆಗೆ ಇದೂ ಕಾರಣವಾಗಬಹುದು

ಕರಾವಳಿ ಮಲೆನಾಡಿನಲ್ಲಿ ಈಗ ಕೊಟ್ಟಿಗೆ ಗೊಬ್ಬರದ ಬದಲಿಗೆ ಕುರಿ ಗೊಬ್ಬರ, ಕೋಳಿ ಗೊಬ್ಬರ ಬಳಕೆ ಮಾಡುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಈ ಗೊಬ್ಬರವನ್ನು ಬಳಕೆ ಮಾಡದೆ ಇರುವುದು ಒಳ್ಳೆಯದು. ಎಲೆ ಚುಕ್ಕೆ ರೋಗ ಬರೇ ಅಡಿಕೆಗೆ ಮಾತ್ರವಲ್ಲ, ಬೇರೆ ಬೇರೆ ಬೆಳೆಗೂ ಬರುತ್ತದೆ. ಅದು ಸಸ್ಯ ಶೇಷಗಳ ಮೂಲಕ ಪ್ರದೇಶದಿಂದ ಪ್ರದೇಶಕ್ಕೆ ಹರಡುವ ಸಾಧ್ಯತೆ ಇದೆ. ರೋಗಗಳು , ಕೀಟಗಳು ಪ್ರದೇಶದಿಂದ ಪ್ರದೇಶಕ್ಕೆ ಹರಡುದಕ್ಕೆ ಹಲವಾರು ಕಾರಣಗಳಿವೆ. ಸಸ್ಯ ಸಾಮಾಗ್ರಿಯನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸುವಾಗ ಅದರ…

Read more
vertical farming

ಕಡಿಮೆ ಸ್ಥಳದಲ್ಲಿ ಹೆಚ್ಚು ಬೆಳೆ ಬೆಳೆಯಬಹುದಾದ ವರ್ಟಿಕಲ್ ಕೃಷಿ.

ಕೃಷಿ ದಿನದಿಂದ ದಿನಕ್ಕೆ ಬದಲಾವಣೆಯ ಮೆಟ್ಟಲೇರುತ್ತಾ ಇರುತ್ತದೆ. ಇನ್ನು ಮುಂದಿನ ದಿನಗಳಲ್ಲಿ ಅತೀ ಕಡಿಮೆ ಸ್ಥಳಾವಕಾಶದಲ್ಲಿ ಅಧಿಕ ಬೆಳೆ ಬೆಳೆಸಿ, ಅಧಿಕ ಇಳುವರಿ ಪಡೆಯುವುದೇ ಆಗಿರುತ್ತದೆ. ಸುಮಾರು 30-40 ವರ್ಷದ ಹಿಂದೆ ನಮ್ಮ ಕೃಷಿ ಹೇಗಿತ್ತು ಎಂಬುದನ್ನು ಆ ವಯೋಮಾನದವರು ಒಮ್ಮೆ ನೆನಪಿಸಿಕೊಳ್ಳಿ. ಅದೇ ರೀತಿ ತುಂಬಾ ಹಿರಿಯರಿದ್ದರೆ ಅವರ ಕಾಲದಲ್ಲಿ ಸುಮಾರು 50-60 ವರ್ಷಗಳ ಹಿಂದೆ ಹೇಗಿತ್ತು ಎಂಬುದನ್ನು ಒಮ್ಮೆ ಕೇಳಿ ನೋಡಿ ಈಗಿನದ್ದು   ನಮಗೆಲ್ಲಾ ಗೊತ್ತಿದೆ ತಾನೇ? ಎಲ್ಲವೂ ಭಾರೀ ಬದಲಾವಣೆ ಆಗಿದೆ. ಆಗುತ್ತಲೇ…

Read more
ಅಡಿಕೆ ಗರಿ ತಿನ್ನುವ ತಿಗಣೆಯ ಹಾನಿ

ಅಡಿಕೆ ಗರಿಗಳು ಯಾಕೆ ಹೀಗಾಗುತ್ತವೆ- ಪರಿಹಾರ ಏನು?

ಅಡಿಕೆಯ  ಸಸ್ಯದ ಎಲೆಗಳು ಗುಚ್ಚದ ತರಹ ಆಗುವ, ಸಸ್ಯ  ಬೆಳವಣಿಗೆಯನ್ನು ಹತ್ತಿಕ್ಕುವ  ಕೆಲವು ರಸ ಹೀರುವ ಕೀಟಗಳನ್ನು ನಿಯಂತ್ರಿಸದಿದ್ದರೆ  ಸಸಿ ಏಳಿಗೆ ಆಗುವುದೇ ಇಲ್ಲ. ಅಡಿಕೆ ಸಸಿ/ ಮರದ ಎಲೆ ಹಾಳಾದರೆ ಅದರ ಏಳಿಗೆಯೇ ಆಗುವುದಿಲ್ಲ. ಎಲೆಯ ರಸ ಹೀರಿ ತೊಂದರೆ ಮಾಡುವ ಕೆಲವು ತಿಗಣೆಗಳು ಇತ್ತೀಚಿನ ದಿನಗಳಲ್ಲಿ ಭಾರೀ  ತೊಂದರೆ ಮಾಡುತ್ತಿವೆ. ಒಂದು ಅಡಿಕೆ ನೆಟ್ಟು ಸುಮಾರು 5 ವರ್ಷಕ್ಕೆ ಅದು ಫಲ ಕೊಡಲು ಪ್ರಾರಂಭವಾಗಬೇಕು. ಆದರೆ ಇಂತಹ  ಕೀಟಗಳು ಧಾಳಿ ಮಾಡಿದವೆಂದರೆ ಅದರ ಬೆಳವಣಿಗೆಯೇ…

Read more
error: Content is protected !!