“ಟ್ರೈಕೋಡರ್ಮಾ’ ರೋಗ ನಿರೋಧಕ ಶಕ್ತಿಗೆ ಸಂಜೀವಿನಿ
ಟ್ರೈಕೋಡರ್ಮಾ ಅಥವಾ ಇನ್ಯಾವುದೇ ಜೀವಾಣುಗಳನ್ನು ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಜೈವಿಕ ಗುಣಧರ್ಮ ಬದಲಾಗುತ್ತದೆ. ಎಲ್ಲಾ ಜೀವಾಣುಗಳೂ ಮಣ್ಣು ಮೂಲದವುಗಳೇ ಆಗಿದ್ದು, ಅವುಗಳನ್ನು ಸಂಸ್ಲೇಶಿಸಿ ಕೃತಕವಾಗಿ ಬೆಳೆಸಿ ಸೂಕ್ತ ಮಾದ್ಯಮದಲ್ಲಿ ಸೇರಿಸಿ ರೈತರಿಗೆ ಬೇರೆ ಬೇರೆ ಬೆಳೆಗೆ ಬಳಕೆ ಮಾಡಲು ಕೊಡಲಾಗುತ್ತದೆ. ಇದು ಸಸ್ಯಗಳಿಗೆ ರೋಗ ನಿರೋಧಕ ಶಕ್ತಿಯನ್ನು ಕೊಡಬಲ್ಲ ಮತ್ತು ರೋಗಕಾರಕ ಸೂಕ್ಷ್ಮಾಣು ಜೀವಿಗಳ ಜೊತೆಗೆ ಬದುಕಿ ಅದನ್ನು ನಿಶ್ಕ್ರಿಯಗೊಳಿಸುವ ಶಕ್ತಿಯನ್ನು ಹೊಂದಿದೆ. ಟ್ರೈಕೋಡರ್ಮಾ ಎಂಬ ಶಿಲೀಂದ್ರವನ್ನು ಬಹಳ ಹಿಂದೆಯೇ ಸೂಕ್ಷ್ಮಾಣು ಜೀವಿ ಶಾಸ್ತ್ರಜ್ಞರು (1974)ಮಣ್ಣಿನಲ್ಲಿರುವುದನ್ನು ಗುರುತಿಸಿದ್ದಾರೆ….
ಮಾವಿನ ಹೂವು ರಕ್ಷಣೆ: ಹೂ ಉದುರುವಿಕೆ ಕಡಿಮೆ ಮಾಡಿ ಉತ್ತಮ ಫಲಪಡೆಯುವ ಸಂಪೂರ್ಣ ಮಾರ್ಗದರ್ಶಿ.
ಮಾವಿನ ಬೆಳೆಯಲ್ಲಿ ಹೂವು ಬಿಡುವ ಹಂತ (Flowering stage) ಎನ್ನುವುದು ಇಡೀ ಬೆಳೆಯ ಉತ್ಪಾದನೆಯನ್ನು ನಿರ್ಧರಿಸುವ ಅತ್ಯಂತ ಮುಖ್ಯ ಹಂತವಾಗಿದೆ. ಈ ವರ್ಷ ಬಹುತೇಕ ತೋಟಗಳಲ್ಲಿ ಹೆಚ್ಚು ಹೂ ಬಿದ್ದಿರುವುದು ಕಂಡುಬರುತ್ತಿದೆ. ಆದರೆ ರೈತರಿಗೆ ಗೊತ್ತಿರಬೇಕಾದ ಮುಖ್ಯ ವಿಚಾರವೇನೆಂದರೆ, ಹೂ ಹೆಚ್ಚು ಇದ್ದರೆ ಫಲವೂ ಹೆಚ್ಚು ಬರುತ್ತದೆ ಎಂಬುದು ತಪ್ಪು ಕಲ್ಪನೆ. ಮಾವಿನ ಉತ್ಪಾದನೆ ನೇರವಾಗಿ ಹೂಗಳ ಸಂಖ್ಯೆಯಿಂದ ಅಲ್ಲ, ಆದರೆ ಫಲಕಚ್ಚುವುದು (Fruit set) ಮತ್ತು ಫಲಧಾರಣೆ (Fruit retention) ಮೇಲೆ ಅವಲಂಬಿತವಾಗಿರುತ್ತದೆ. ಮಾವು ಹೂ…
ಇಲಾಖೆಗಳ ಮುಖಾಂತರ ಕೀಟನಾಶಕ ಮಾರಾಟ!.
ಬೆಳೆಒಳಸುರಿಗಳಾದ ಕೀಟನಾಶಕ – ರೋಗನಾಶಕ- ಕಳೆನಾಶಕ ಬಳಸಿ ಕೃಷಿಕರ ಆರೋಗ್ಯ ಕೆಡುತ್ತದೆ. ಪರಿಸರದ ಜೀವ ವೈವಿಧ್ಯಗಳ ಮೇಲೆ ತುಂಬಾ ತೊಂದರೆ ಆಗುತ್ತದೆ. ಇದನ್ನು ಹಿತ ಮಿತ ಬಳಸಲು ನಮ್ಮ ದೇಶದ ಕೃಷಿಕರಿಗೆ ವೈಜ್ಞಾನಿಕ ಶಿಕ್ಷಣ ಇಲ್ಲ. ಕಾನೂನು ಕಟ್ಟು ನಿಟ್ಟು ಮಾಡಿದರೆ , ಮದುವೆಯಾಗಿ ಮಕ್ಕಳನ್ನು ಮಾಡಬಾರದು ಎಂದು ತಾಕೀತು ಮಾಡಿದಂತಾತ್ತದೆ. ಇದೆಲ್ಲಕ್ಕೂ ಪರಿಹಾರ ನಮ್ಮ ದೇಶದ ಕೃಷಿ ತೋಟಗಾರಿಕೆ ಅಭಿವೃದ್ದಿ ಇಲಾಖೆಗಳೇ ಇದನ್ನು ರೈತರಿಗೆ ಮಾರಾಟ ಮಾಡುವುದು ಸರಿಯಲ್ಲವೇ?. ಹೊಸ ಮಸೂದೆ: ಭಾತರ ಸರಕಾರ ಕಳಪೆ…
ತರಕಾರಿ ಬೀಜಗಳು ಈಗ ತ್ವರಿತವಾಗಿ ಲಭ್ಯ
ರೈತರ ಬದುಕು ಸಕಾಲದಲ್ಲಿ ಮಳೆ ಮತ್ತು ಸಕಾಲದಲ್ಲಿ ಬೀಜದ ಲಭ್ಯತೆ ಮೇಲೆ ನಿಂತಿದೆ. ಗುಣಮಟ್ಟದ ಬೀಜಗಳನ್ನು ತ್ವರಿತವಾಗಿ ತಲುಪಿಸಲು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜೊತೆಯಾಗಿ ಹೊಸ ವ್ಯವಸ್ಥೆಯನ್ನು ಹಾಕಿಕೊಂಡಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಎಂಬಂತೆ ಬೆಂಗಳೂರಿನ ಹೇಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ IIHR ತನ್ನ ಸೀಡ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಇದನ್ನು ರೈತರಿಗೆ ನೇರವಾಗಿ ತಲುಪಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಯೇನೋ ಅಗ್ರಿಕಲ್ಚರ್ ಜೊತೆ…
ಅಡಿಕೆ ಮರದಲ್ಲಿ ನಳ್ಳಿಗಳು ಯಾಕೆ ಉದುರುತ್ತವೆ?
ಅಡಿಕೆ ಮರದ ಹೂ ಗೊಂಚಲಿನಲ್ಲಿ ಇರುವ ಎಲ್ಲಾ ಮಿಡಿಗಳೂ ಕಾಯಿ ಕಚ್ಚಿಕೊಳ್ಳುವುದಿಲ್ಲ. ಸ್ವಲ್ಪ ಉದುರುತ್ತವೆ. ಹೆಚ್ಚಿನವು ಉಳಿಯುತ್ತದೆ. ಎಲ್ಲವೂ ಉದುರಿದರೆ , ಲೆಕ್ಕಕ್ಕಿಂತ ಹೆಚ್ಚು ಉದುರಿದರೆ ಆಗ ತಲೆ ಬಿಸಿ ಮಾಡುವ ಬದಲಿಗೆ ಕೆಲವು ನಿರ್ವಹಣೆ ಮಾಡಿ ಉಳಿಸುವ ಪ್ರಯತ್ನ ಮಾಡಬೇಕು. ಅಡಿಕೆ ಮರದ ಹೂ ಗೊಂಚಲಿನಲ್ಲಿ ಅಕ್ಕಿಯ ತರಹ ಇರುವಂತದ್ದು, ಗಂಡು ಹೂವು. ಕಡಲೆ ಗಾತ್ರದ ತರಹ ಇರುವಂತದ್ದು ಹೆಣ್ಣು ಹೂವು. ಹೂ ಗೊಂಚಲು ಅರಳಿದ ತಕ್ಷಣದಿಂದಲೇ ಗಂಡು ಹೂವು ಅರಳಲಾರಂಭಿಸುತ್ತದೆ. ಅದು ಸುಮಾರು 24…
ಅಡಿಕೆ ಬೆಲೆ ಕುಸಿಯುವ ಆತಂಕ ಇದೆ.
ಕ್ಯಾಂಪ್ಕೋ ಸಂಸ್ಥೆ, ಹಾಗೂ ಕೆಲವು ಖಾಸಗಿ ವ್ಯಾಪಾರಿಗಳು ಚಾಲಿ ಅಡಿಕೆ ಖರೀದಿಯ ಉತ್ಸಾಹದಲ್ಲಿದ್ದಾರೆ. ಅತ್ತ ಕೆಂಪಡಿಕೆ ವ್ಯವಹಾರದಲ್ಲಿ ಶಿರಸ್ಸಿಯ TSS ವ್ಯಾಪಾರಕ್ಕೆ ಇಳಿದು ಚಾಲಿಗೆ 32,000 ದಾಟಿಸಿ ಕೆಲವೇ ದಿನಗಳಲ್ಲಿ ಮತ್ತೆ 26,000 ಕ್ಕೆ ಇಳಿಸಿದೆ. ಎಲ್ಲಿಯೂ ಅಡಿಕೆ ಟೆಂಡರ್ ಆಗಿ ಮಾರಾಟ ಆಗಿಲ್ಲ. ಇದು ಬೆಲೆ ಸ್ಥಿತರೆಯ ಬಗ್ಗೆ ಆತಂಕ ಉಂಟು ಮಾಡುತ್ತಿದೆ. ಕೆಂಪಡಿಕೆಗೆ ನಾಲ್ಕು ದಿನಕ್ಕೆ ಹಿಂದೆ 32,000 ಕ್ಕೆ ಒಂದು ಬಿಡ್ಡಿಂಗ್ ನಡೆಯುವುದರಲ್ಲಿತ್ತು. ಆದರೆ ಕೆಲವು ದೊಡ್ಡ ವ್ಯಾಪಾರೀ ಕುಳಗಳ ಒತ್ತಡದಿಂದ ಅದು…
ಅಡಿಕೆ ಮರದ ಆರೋಗ್ಯ –ಅದರ ಬೇರು ವ್ಯವಸ್ಥೆ.
ಯಾವುದೇ ಸಸ್ಯವಿರಲಿ, ಬೇರು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರುತ್ತದೆ. ಸಸ್ಯಕ್ಕೆ ಬೇರು ಮುಖ್ಯ ಆಧಾರ ಸ್ಥಂಭ. ಇದು ಮಣ್ಣು, ನೀರು, ಕೀಟಗಳು ಮತ್ತು ಪೋಷಕಗಳ ಅಸಮತೋಲನದಿಂದ ತೊಂದರೆಗೆ ಒಳಗಾಗುತ್ತದೆ. ಇದನ್ನು ಪ್ರತೀಯೊಬ್ಬ ರೈತರೂ ಗಮನಿಸಿ ಅದನ್ನು ಸರಿಪಡಿಸಿದರೆ ಮರ ಆರೋಗ್ಯವಾಗಿರುತ್ತದೆ. ಅಡಿಕೆ ಮರ, ತೆಂಗಿನ ಮರ ಮುಂತಾದ ಎಲ್ಲಾ ಏಕದಳ ಸಸ್ಯಗಳ ಬೇರುಗಳು ತಳಕ್ಕೆ ಇಳಿಯದೇ ಮೇಲ್ಭಾಗದಲ್ಲೇ ಪೋಷಕಗಳನ್ನು ಹುಡುಕುತ್ತಾ ಪಸರಿಸುತ್ತಿರುತ್ತವೆ. ಇವು ಸಸ್ಯದ ಕಾಂಡದಿಂದ ಹುಟ್ಟಿಕೊಂಡು ಬೆಳವಣಿಗೆಯಾಗುತ್ತದೆ. ಸಸ್ಯದ ಸುತ್ತಲೂ ಇದು ಪಸರಿಸಿರುತ್ತದೆ. Monocot roots are…
ಹಲ್ಲಿಲ್ಲದ್ದ ರೈತನಿಗೆ ಕಡಲೆ ತಿನ್ನಿಸುವ ವೆಬಿನಾರ್ ಗಳು.
ಮಾರ್ಚ್ ತಿಂಗಳ ನಂತರ ಬಂದ ಒಂದು ಹೊಸ ಅವತಾರ, ವೆಬಿನಾರ್ ಗಳು. ಬೇರೆ ಕ್ಷೇತ್ರಗಳ ವಿಷಯ ನಮಗೆ ಅನಗತ್ಯ. ಆದರೆ ಕೃಷಿ ಕ್ಷೇತ್ರದಲ್ಲಿ ಈ ವೆಬಿನಾರ್ಗಳ ಬಗ್ಗೆ ಕೆಲವೊಂದು ವಿಚಾರಗಳನ್ನು ರೈತರಿಗೆ ತಿಳಿಯಬಯಸುತ್ತೇವೆ. ಇದು ರೋಗಿ ಬಯಸಿದ್ದೂ ಹಾಲು, ವೈದ್ಯ ಕೊಟ್ಟದ್ದೂ ಹಾಲು ಎಂಬಂತಾಗಿದೆ. ಮೇಲುನೋಟಕ್ಕೆ ಇದು ರೈತರ ಸೇವೆ ಎಂದು ಕಂಡರೂ ಇದರಲ್ಲಿ ಕೆಲವು ಪೇಪರ್ ವರ್ಕ್ ಮತ್ತು ಹಣ ಖರ್ಚು ಮಾಡುವ ದಂಧೆ ಇರಲೂ ಬಹುದು. ವೆಬಿನಾರ್ ಎಂದರೆ ಕೇವಲ ಸಂಬಂಧಿಸಿದವರು ಮಾತ್ರ ತಮ್ಮ…
ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ ಇದು.
ಕೆಲವೊಂದು ಮರಮಟ್ಟುಗಳು ಅವುಗಳ ವಂಶ ಗುಣಕ್ಕನುಗುಣವಾಗಿ ಚೆನ್ನಾಗಿ ಬೆಳೆಯುತ್ತದೆ. ಕೆಲವು ಎಷ್ಟೇ ಪಾಲನೆ ಪೋಷಣೆ ಮಾಡಿದರೂ ಬೆಳವಣಿಗೆ ಕಡಿಮೆ. ತಳಿ ಆಯ್ಕೆ ಮಾಡುವಾಗ ಯಾವಾಗಲೂ ಉತ್ತಮ ವಂಶ ಗುಣದ ತಳಿಯನ್ನೇ ಆಯ್ಕೆ ಮಾಡುವುದು ಕ್ರಮ. ಕೇರಳದ ನಿಲಂಬೂರು ಎಂಬಲ್ಲಿ ಇಂತಹ ವಂಶ ಗುಣದ ಸಾಗುವಾನಿ ತಳಿಯನ್ನು ಬ್ರಿಟೀಷರೇ ಆಯ್ಕೆ ಮಾಡಿದ್ದಾರೆ. ಸ್ವಾತಂತ್ರ್ಯಾ ನಂತರ ನಾವೂ ಅದನ್ನು ಮುಂದುವರಿಸಿದ್ದೇವೆ. ಪ್ರಪಂಚದಲ್ಲೇ ಅತ್ಯುತೃಷ್ಟ ಸಾಗುವಾನಿ ಎಂದು ಇದ್ದರೆ ಅದು ಯಾವುದೇ ಒಂದು ಸಸ್ಯ- ಪ್ರಾಣಿ ಅದರ ಉತ್ಕೃಷ್ಟ ಗುಣಮಟ್ಟಕ್ಕೆ ಅದರ…
