ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ತೋಟ ಮಾಡುವವರು  ಹಿಂದೆ ಇಂತಹ ಸಸಿ ಒಳ್ಳೆಯಯದು, ಇದನ್ನು ಆಯ್ಕೆ ಮಾಡಬೇಕು ಎಂದೆಲ್ಲಾ ಮುಂಜಾಗ್ರತಾ ಕ್ರಮ ಅನುಸರಿಸುತ್ತಿದ್ದರು. ಈಗಿನ ಪರಿಸ್ಥಿತಿಯಲ್ಲಿ ಗಮನಿಸಬೇಕಾದದ್ದು ಗಿಡದ ತಳಿ, ಬೆಳವಣಿಗೆ ಲಕ್ಷಣ ಮಾತ್ರವಲ್ಲದೆ ಗಿಡದ ಆರೋಗ್ಯವೂ ಸಹ. ಎಳೆ ಗಿಡಗಳ ಆರೋಗ್ಯ ಹೇಗಿದೆ ಎಂಬುದನ್ನು ಕೂಲಂಕುಶವಾಗಿ ನೋಡಿ ನಂತರ ಆಯ್ಕೆ ಮಾಡಿ ನೆಡಬೇಕು. ಬರೇ ಅಡಿಕೆ ಮಾತ್ರವಲ್ಲ ತೆಂಗಿನ ಸಸಿಯೂ ಹಾಗೆಯೇ.  ಅಡಿಕೆ ಸಸಿ ನೆಡುವವರು ಅದು ಅವರೇ ಮಾಡಿದ ಗಿಡ ಇರಬಹುದು ಅಥವಾ ನರ್ಸರಿಯಿಂದ ಖರೀದಿ ಮಾಡಿ ನೆಡುವುದೇ…

Read more
ದಿನಾಂಕ:13-12-2022 ಚಾಲಿ, ಕೆಂಪುಅಡಿಕೆ, ಕರಿಮೆಣಸು, ರಬ್ಬರ್ , ಕಾಫೀ

ದಿನಾಂಕ:13-12-2022 ಚಾಲಿ,ಕೆಂಪುಅಡಿಕೆ, ಕರಿಮೆಣಸು, ರಬ್ಬರ್ , ಕಾಫೀ ಧಾರಣೆ.

ಚಾಲಿ ದರ ಭಾರೀ ಕುಸಿತ ಆಗಲಿಲ್ಲ.ಏರಿಕೆಯ ಸೂಚನೆಯೂ ಇಲ್ಲ.ಕೆಂಪುಅಡಿಕೆ ಧಾರಣೆ ಮಾತ್ರ ಯಾವ ಬೆಳೆಗಾರನೂ ಕಲ್ಪಿಸಿರದ ಮಟ್ಟಕ್ಕೆ ಬಂದಿದೆ.ಯಾಕೆ ಎಂಬ ಕಾರಣ ಯಾರಿಗೂ ಗೊತ್ತಿಲ್ಲ. ಗುಟ್ಕಾ ತಿನ್ನುವುದು ಕಡಿಮೆಯಾಗಿಲ್ಲ.ಗುಟ್ಕಾ ತಯಾರಿಕೆ ನಿಂತಿಲ್ಲ. ಆದರೆ ಅಡಿಕೆಗೆ ಬೆಲೆ ಇಲ್ಲ. ಕರಿಮೆಣಸು ಒಮ್ಮೆ ಚೇರಿಸಿಕೊಂಡರೂ  ಮತ್ತೆ ಮುಗ್ಗರಿಸಿದೆ. ರಬ್ಬರ್ ಬೆಲೆ ಏರಿಕೆ ಸಾಧ್ಯತೆ ಇಲ್ಲ.ಕೊಬ್ಬರಿಯೂ ಸಹ ನೆಲಕಚ್ಚಿದ ಸ್ಥಿತಿಯಲ್ಲಿದೆ. ಒಟ್ಟಿನಲ್ಲಿ ಕೃಷಿ ಉತ್ಪನ್ನಗಳ ಬೆಲೆ ಭಾರೀ ಅಸ್ತಿರವಾಗಿದೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ಕಳೆದ ವಾರದಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಮಾರುಕಟ್ಟೆಗೆ ಬರುತ್ತಿದೆ. ಸಾಗರ,…

Read more

ಅಡಿಕೆ ಧಾರಣೆ ಕುಸಿಯುತ್ತಿದೆ – ಏನು ಕಾರಣ ಇರಬಹುದು? ಯಾವಾಗ ಏರಬಹುದು?

ಕಳೆದ ಒಂದು ತಿಂಗಳಿಂದ ಕೆಂಪಡಿಕೆ ಧಾರಣೆ ಶೇ.40 ರಷ್ಟು ಕಡಿಮೆಯಾಗಿದೆ. ಸಪ್ಟೆಂಬರ್ ತಿಂಗಳಲ್ಲಿ ಹಸಿ ಅಡಿಕೆ ಕ್ವಿಂಟಾಲಿಗೆ 7200 ತನಕ ಇದ್ದುದು, ಇಳಿಕೆಯಾಗುತ್ತಾ ಸಪ್ಟೆಂಬರ್ ಕೊನೆಗೆ 6600 ಕ್ಕೆ ಕುಸಿಯಿತು. ಹಾಗೆಯೇ ಕಡಿಮೆಯಾಗುತ್ತಾ  ಈಗ 5200-5000 ಕ್ಕೆ ಇಳಿದಿದೆ.ವರ್ತಮಾನ ಪರಿಸ್ಥಿತಿಯಲ್ಲಿ ಇನ್ನೂ ಇಳಿಕೆಯ ಸಾದ್ಯತೆಗಳು ಕಾಣಿಸುತ್ತಿದೆ. ಹಾಗೆಯೇ ಧಾರಣೆ 55,000 ಕ್ಕೆ ಏರಿದ್ದು, ಈಗ ಸರಾಸರಿ-40,000 ದ ಸಮೀಪಕ್ಕೆ ಬಂದಿದೆ. ಎಲ್ಲಾ ಅಡಿಕೆ ಬೆಳೆಗಾರರ ಕುತೂಹಲ ಧಾರಣೆ ಯಾವಾಗ ಏರಬಹುದು ಎಂಬುದು ಒಂದೇ. ಅಡಿಕೆ ಚೇಣಿ ವಹಿಸಿಕೊಳ್ಳುವವರು…

Read more
ಗೇರು - ಹೆಚ್ಚಿನ ಆದಾಯಕ್ಕೆ- ಇದನ್ನು ತಪ್ಪದೆ ಮಾಡಿ

ಗೇರು – ಹೆಚ್ಚಿನ ಆದಾಯಕ್ಕೆ- ಇದನ್ನು ತಪ್ಪದೆ ಮಾಡಿ.

ಗೇರು ಬೆಳೆ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ನವೆಂಬರ್ ತಿಂಗಳಿನಿಂದ ಪ್ರಾರಂಭವಾಗಿ  ಫೆಬ್ರವರಿ – ಮಾರ್ಚ್  ತನಕ ಸ್ವಲ್ಪ ಆರೈಕೆ  ಮಾಡಿದರೆ ಮರವೊಂದರ ಸರಾಸರಿ 1000 ರೂ. ಗಳಷ್ಟು ಆದಾಯ ತಂದು ಕೊಡಬಲ್ಲ ನಿರಾಯಾಸದ ಬೆಳೆ. ಈ ಬೆಳೆ ಈಗ ಕರಾವಳಿಯಲ್ಲಿ ಸ್ಥಳ ಇಲ್ಲದೆ ಮಲೆನಾಡು, ಅರೆಮಲೆನಾಡು, ಬಯಲು ಸೀಮೆಯ ತನಕ ವಿಸ್ತಾರವಾಗಿದೆ. ಇದು ಈಗಿನ ಜ್ವಲಂತ ಸಮಸ್ಯೆಯಾದ  ನೀರಿನ ಕೊರೆತೆಯನ್ನು ತಡೆದುಕೊಂಡು ಬೆಳೆಯಬಲ್ಲ ಬೆಳೆ. ಮಳೆ ಕಳೆದು ಚಳಿ ಬಂದಾಕ್ಷಣ  ಗೇರು ಮರ ಚಿಗುರಿ ಹೂ ಮೊಗ್ಗು…

Read more
ಅಲೋಪತಿಯಲ್ಲೂ ಸಿಗಲಾರದ ಉಪಶಮನ ಈ ಸಸ್ಯದ ಎಲೆ ಕೊಡುತ್ತದೆ

ಅಲೋಪತಿಯಲ್ಲೂ ಸಿಗಲಾರದ ಉಪಶಮನ ಈ ಸಸ್ಯದ ಎಲೆ ಕೊಡುತ್ತದೆ.

ಈ ಸಸ್ಯದ ಸೊಪ್ಪಿಗೆ ಒಂದು ವಿಶೇಷ ಶಕ್ತಿ ಇದ್ದು, ಅಲರ್ಜಿಗೆ ಇದು ನೀಡುವ ತಕ್ಷಣದ ಉಪಶಮನ ಆಧುನಿಕ ಅಲೋಪತಿ ಔಷದೋಪಚಾರದಲ್ಲೂ ಇಲ್ಲ. ಅನಾದಿ ಕಾಲದಿಂದಲೂ ನಮ್ಮ ಹಿರಿಯರು ಇದನ್ನು ಬಳಸುತ್ತಾ ಬಂದಿದ್ದಾರೆ, ಕಿರಿಯ ತಲೆಮಾರಿನವರಿಗೆ ಈ ಜ್ಞಾನ ವರ್ಗಾವಣೆಯಾಗದೆ  ಅಲರ್ಜಿಯಂತಹ Alarge healing herb ಸಮಸ್ಯೆಗೆ ತಕ್ಷಣ ವೈದ್ಯರಲ್ಲಿಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ನಾವು ಯಾವುದೇ ಕೃಷಿ ಕೆಲಸ ಮಾಡುವಾಗ ತೀರಾ ಜಾಗರೂಕರಾಗಿ ಇರುವುದಿಲ್ಲ. ಒಮ್ಮೊಮ್ಮೆ ನೆಲದಲ್ಲಿ ಬೆಳೆಯುವ  ತುರಿಕೆ ಉಂಟುಮಾಡುವ ಸಸ್ಯಗಳಾದ ಗಿಡ ತುರುಚೆ (Choriyanam…

Read more
ಅಡಿಕೆ ಮಾರುಕಟ್ಟೆ - ಚಾಲಿ, ಕೆಂಪು ಯಾವುದು ಏರಬಹುದು? ಕರಿಮೆಣಸು ಏರಲಿದೆಯೇ?

ಅಡಿಕೆ ಮಾರುಕಟ್ಟೆ- ಚಾಲಿ, ಕೆಂಪು ಯಾವುದು ಏರಬಹುದು? ಕರಿಮೆಣಸು ಏರಲಿದೆಯೇ?

ಚಾಲಿ ಮಾರುಕಟ್ಟೆ ದರ ಸ್ವಲ್ಪ ಏರಿಕೆ ಆಗುವ ಮುನ್ಸೂಚನೆ ಕಾಣಿಸುತ್ತದೆ. ಕೆಂಪು ಸ್ವಲ್ಪ ಸಮಯದ ತನಕ ಅಸ್ಥಿರವಾಗಿ ಮುಂದುವರಿಯಬಹುದು. ಹಾಗೆಯೇ ಕರಿಮೆಣಸು ಮತ್ತೆ ಚೇತರಿಕೆ ಆಗುವ ಮುನ್ಸೂಚನೆ ಇದೆ. ಖಾಸಗಿಯವರು ಸಾಂಸ್ಥಿಕ ಖರೀದಿದಾರರಿಗಿಂತ ಸ್ವಲ್ಪ ಮುಂದೆ ಇದ್ದಾರೆ. ಹಾಗೆಯೇ ಗುಜರಾತ್ ಚುನಾವಣೆ ಇನ್ನೇನು ಎರಡು ದಿನಗಳಲ್ಲಿ ಮುಗಿಯಲಿದೆ. ಆ ನಂತರ ಬೇಡಿಕೆ ಹೆಚ್ಚಾಗಬಹುದು ಎಂಬ ನಿರೀಕ್ಷೆಯಲ್ಲಿ ವ್ಯಾಪಾರಿಗಳು ಚಾಲಿ ದಾಸ್ತಾನಿಗೆ ಮುಂದಾಗಿದ್ದಾರೆ. ಕೆಂಪಡಿಕೆ ಇನ್ನು 1-2 ತಿಂಗಳು ಸ್ವಲ್ಪ ಇಳಿಕೆಯಾಗಬಹುದು. ಕರಿಮೆಣಸು ಈ ತಿಂಗಳಲ್ಲಿ ಮತ್ತೆ 52500…

Read more
ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ

ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ?

ಬಸಿಗಾಲುವೆ  ಇಲ್ಲದ ಅಡಿಕೆ, ತೆಂಗಿನ ತೋಟದಲ್ಲಿ ಯಾವಾಗಲೂ ಒಂದಿಲ್ಲೊಂದು ಸಮಸ್ಯೆ ಇದ್ದೇ ಇರುತ್ತದೆ. ನೆಲಕ್ಕೆ ಮಳೆಯ ಮೂಲಕ ಸೇರುವ ನೀರು ಮಣ್ಣನ್ನು ತೇವವಷ್ಟೇ ಮಾಡಿ  ಸರಾಗವಾಗಿ ಹರಿದು ಹೋಗುತ್ತಿರಬೇಕು. ಆಗ ಸಸ್ಯಗಳ ಆರೋಗ್ಯಕ್ಕೆ ಅದು ಅನುಕೂಲಕರ. ಅಡಿಕೆ ತೆಂಗು, ತಾಳೆ, ಬಾಳೆ, ಕರಿಮೆಣಸು ಮುಂತಾದ ಏಕದಳ ಸಸ್ಯಗಳ ಬೇರು ನೀರಿಗೆ ಸೂಕ್ಷ್ಮ ಗ್ರಾಹಿಯಾಗಿದ್ದು, ಸ್ವಲ್ಪ ಹೆಚ್ಚಾದರೂ ತೊಂದರೆ ಉಂಟುಮಾಡುತ್ತದೆ. ಸಸ್ಯಗಳಿಗೆ ನೀರು ಬೇಕೇ? ಬೇಡ. ಸಸ್ಯಗಳಿಗೆ ಅವು ಬೇರು ಬಿಟ್ಟಿರುವ ಮಣ್ಣು ಎಂಬ ಮಾಧ್ಯಮ ತೇವಾಂಶದಿಂದ ಕೂಡಿದ್ದರೆ…

Read more
ಅಡಿಕೆ ಧಾರಣೆ ಹಿಂದೆ- ಕಾರಣ ಏನು? ಯಾವಾಗ ಚೇತರಿಕೆ

ಅಡಿಕೆ ಧಾರಣೆ ಹಿಂದೆ- ಕಾರಣ ಏನು? ಯಾವಾಗ ಚೇತರಿಕೆ ಆಗಬಹುದು?

ಬೆಳೆಗಾರರ ಬಹು ನಿರೀಕ್ಷೆಯ ಉತ್ತಮ ಧಾರಣೆ ಯಾಕೋ ಈ ವರ್ಷ ಈಡೇರಲಿಲ್ಲ. ಕಳೆದ ವರ್ಷ ಇದೇ ಸಮಯದಲ್ಲಿ ಇದ್ದ ಧಾರಣೆಗಿಂತ ಈ ವರ್ಷ ಕಡಿಮೆ. ಕಾರಣ ಎನಿರಬಹುದು? ಯಾವಾಗ ಚೇತರಿಕೆ ಆಗಬಹುದು ಎಂಬ ನಿರೀಕ್ಷೆಯಲ್ಲಿರುವ ಬೆಳೆಗಾರರಿಗೆ ಇಲ್ಲಿದೆ ಕೆಲವು ಅಗತ್ಯ ಮಾಹಿತಿ. ಈ ವರ್ಷ ಅಡಿಕೆ ಧಾರಣೆ ಕಳೆದ ವರ್ಷದಷ್ಟು ಏರಿಕೆ ಆಗುವ ನಿರೀಕ್ಷೆ ಸದ್ಯಕ್ಕೆ ಇಲ್ಲ. ಚಾಲಿ ಅಡಿಕೆ ಧಾರಣೆ ಮತ್ತೆ ಕ್ವಿಂಟಾಲಿಗೆ ರೂ.1000 ಕಡಿಮೆಯಾಗಿದೆ. ಡಬ್ಬಲ್ ಚೋಲ್ ಸಹ 1000 ದಷ್ಟು ಕಡಿಮೆಯಾಗಿದೆ. ಕೆಂಪಡಿಕೆಗೂ…

Read more
ಜೀವವೈವಿಧ್ಯಗಳಿಗೆ ಉರುಳಾಗುತ್ತಿರುವ ರಬ್ಬರ್ ತೋಟದ ಬಳ್ಳಿಗಳು

ಜೀವವೈವಿಧ್ಯಗಳಿಗೆ ಉರುಳಾಗುತ್ತಿರುವ  ರಬ್ಬರ್ ತೋಟದ ಬಳ್ಳಿಗಳು.

ರಬ್ಬರ್ ತೋಟ ಇರುವ ಕಡೆ ಸಂಚರಿಸುವಾಗ ಕಂಡುಬರುವ ಬಳ್ಳಿ ಸಸ್ಯ ಜೀವವೈವಿಧ್ಯಗಳನ್ನು ಸಾಕಷ್ಟು ನಾಶ ಮಾಡಿವೆ, ಇನ್ನೂ ಮಾಡುತ್ತಿವೆ. ರಬ್ಬರ್ ಬೆಳೆಯುವಾಗ ಮೊದಲ ಮೂರು ನಾಲ್ಕು ವರ್ಷ ಮಣ್ಣು ಸವಕಳಿ ತಡೆಗೆ ಅಗತ್ಯವೆಂದು ಬೆಳೆಸಿದ  ಈ ಬಳ್ಳಿ ಮರ ಬೆಳೆದ ನಂತರ  ತೋಟದಿಂದ ಹೊರಬಂದು ಇಡೀ ಸಸ್ಯವರ್ಗಗಳನ್ನು ಆಪೋಶಣ ತೆಗೆದುಕೊಳ್ಳುತ್ತಿದೆ. ಅದು ರಸ್ತೆ ಬದಿ, ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬಿ ಅಲ್ಲಿನ ಸಸ್ಯಗಳು, ಮರಗಳ ಮೇಲೆ ಏರಿ ಅದರ ಬೆಳವಣಿಗೆಯನ್ನು ಹತ್ತಿಕ್ಕುವ ಮೂಲಕ ಜೀವವೈವಿಧ್ಯಕ್ಕೆ ಕುತ್ತು ತರುತ್ತದೆ. ಸರಕಾರ,…

Read more
error: Content is protected !!