ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ

ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ ಕಡಿಮೆ -ಮಾರುಕಟ್ಟೆಗೆ ಮಾಲು ಇಲ್ಲ.

ಕೆಂಪು ರಾಶಿ ಅಡಿಕೆ ಮಾರುಕಟ್ಟೆ ಹೇಗಾದರೂ ಒಮ್ಮೆ 55,000 ತಲುಪಿತು. ಆದರೆ ಶುಕ್ರವಾರದ ಮಾರುಕಟ್ಟೆ, ಭಾನುವಾರದ ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಹಾಗೂ ಇಂದು 12-09-2022 ಸಾಗರ, ಶಿವಮೊಗ್ಗದಲ್ಲಿನ ವ್ಯವಹಾರ ನೋಡುವಾಗ ಸ್ವಲ್ಪ ಸ್ವಲ್ಪ ಹಿಂದೆ ಬರುವ ಲಕ್ಷಣ ಕಾಣಿಸುತ್ತಿದೆ.  ನಿಖರವಾಗಿ ಹಿಂದೆ ಬಂತು ಎಂಬಂತಿಲ್ಲ. ಇನ್ನೂ ಒಂದೆರಡು ದಿನಗಳ ಮಾರುಕಟ್ಟೆ ಸ್ಥಿತಿ ನೋಡಿ ಅಂದಾಜು ಮಾಡಬಹುದಷ್ಟೇ. ಚಾಲಿ ಮಾರುಕಟ್ಟೆಯಲ್ಲಿ ಖಾಸಗಿಯವರು ಸ್ವಲ್ಪ ಮುಂದೆ ಬಂದಿದ್ದಾರೆ. ಅಡಿಕೆ ಬರುತ್ತಿಲ್ಲ ಎಂಬ ಕಾರಣಕ್ಕೆ ದರ ಏರಿಸಲಾಗಿದೆ ಎನ್ನುತ್ತಾರೆ. ಚಾಲಿ ದರ ಏರಿಕೆ-…

Read more
ಎನ್ ಸಿ ಪಟೇಲ್ ರವರಿಗೆ ಗೌರವ ಡಾಕ್ಟರೇಟ್

ಎನ್ ಸಿ ಪಟೇಲ್ ರವರಿಗೆ ಗೌರವ ಡಾಕ್ಟರೇಟ್ – ಯೋಗ್ಯ ವ್ಯಕ್ತಿಗೆ ಯೋಗ್ಯ ಪುರಸ್ಕಾರ.

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇವರು ತಮ್ಮ  56 ನೇ ಘಟಿಕೋತ್ಸವದಲ್ಲಿ ಎನ್ ಸಿ ಪಟೇಲ್  ಎಂಬ  ಅ ತ್ಯುತ್ತಮ ಕೃಷಿಕರಿಗೆ ಗೌರವ ಡಾಕ್ಟರೇಟ್ ನೀಡಿದ್ದು ಯೋಗ್ಯ ವ್ಯಕ್ತಿಗೆ ಯೋಗ್ಯ ಪುರಸ್ಕಾರ ಎನ್ನಿಸಿದೆ. ಶ್ರಿಯುತ  ಎನ್ ಸಿ ಪಟೇಲ್ ಇವರು ತಮ್ಮ ಇಡೀ ಜೀವಮಾನವನ್ನೇ ಕೃಷಿಗಾಗಿ ಮುಡಿಪಾಗಿಟ್ಟವರು. ತೋಟಗಾರಿಕಾ ಬೆಳೆಗಳಾದ ಮಾವು, ದ್ರಾಕ್ಷಿ, ದಾಳಿಂಬೆ, ಸೀಬೆ, ನೇರಳೆ ಮುಂತಾದ ಬೆಳೆಗಳನ್ನು ಅಚ್ಚುಕಟ್ಟಾಗಿ ಬೆಳೆಯುತ್ತಿರುವ ಮಾದರಿ ರೈತ. ನಾಗದಾಸನಹಳ್ಳಿ ಚಿಕ್ಕಕೆಂಪಣ್ಣ ಪಟೇಲ್ (Nagadasanahalli Chikakempanna patel) ಬೆಂಗಳೂರು ಹೊರವಲಯದ ಯಲಹಂಕದ…

Read more
ರಬ್ಬರ್ ಬೆಳೆಯನ್ನು ಕೇಳುವವರೇ ಇಲ್ಲದಾಯಿತಾ

ರಬ್ಬರ್ ಬೆಳೆಯನ್ನು ಕೇಳುವವರೇ ಇಲ್ಲದಾಯಿತಾ? ಎಲ್ಲಿ ಹೋಯಿತು ರಬ್ಬರ್ ಬೋರ್ಡ್?

ರಬ್ಬರ್ ಬೆಳೆ ನಮ್ಮ ಅಡಿಕೆ ತೆಂಗಿನಂತಲ್ಲ. ಈ ಬೆಳೆಗೆ ಇರುವ  ಅವಕಾಶ ಅಪಾರ. ಆದರೆ ರಬ್ಬರ್ ಬೆಳೆಯನ್ನು ಕೇಳುವವರೇ ಇಲ್ಲ. ರಬ್ಬರ್ ಬೆಳೆಗಾರರಿಗೆ ಬೆಂಬಲವಾಗಿ ಇರಲಿ ಎಂದು ಸ್ಥಾಪಿಸಲಾದ ರಬ್ಬರ್  ಬೋರ್ಡ್ ಸಹ ಬೆಳೆಗಾರರ ನೆರವಿಗೆ ಬರುವುದು ಕಾಣಿಸುತ್ತಿಲ್ಲ.ರಬ್ಬರ್ ಬೆಲೆ ಕುಸಿಯಲಾರಂಭಿಸಿ ಸುಮಾರು 9-10 ವರ್ಷಗಳಾಗಿದೆ. ಒಮ್ಮೆ ಪಾತಾಳಕ್ಕೆ, ಮತ್ತೆ ಸ್ವಲ್ಪ ಆಸೆ ಹುಟ್ಟಿಸಿ  ಪುನಹ ಪಾತಾಳಕ್ಕೇ ಇಳಿಯುತ್ತಿದೆ. ಬಹುಷಃ ಶೇರು ಮಾರುಕಟ್ಟೆಯಲ್ಲಿ ಶೇರು ಮಾರಿದ ನಂತರ ಬೆಲೆ ಏರಲಾರಂಭಿಸಿದಂತೆ  ರಬ್ಬರ್ ಮರಗಳನ್ನು ಎಲ್ಲರೂ ಕಡಿದು ಮುಗಿದ…

Read more
miracle weed Sphagneticola trilobata

Nature protect its resources! How this  miracle weed Sphagneticola trilobata protected our soil

Nature will protect  its resources  by its own way!. Imagine the heavy rainfall and afforestation in recent years. What happens if there is an absence of this weed Sphagneticola trilobata? Can weeds help farmers? Or does it suppresses the yield?   If you think weed is an enemy you will lose soil fertility. If you consider…

Read more
ನೇಂದ್ರ ಬಾಳೆ

ನೇಂದ್ರ ಬಾಳೆ – ಕೈಹಿಡಿದರೆ ಭಾರೀ ಲಾಭದ ಬೆಳೆ.

ಒಂದು  ಬಾಳೆಗೊನೆಯಲ್ಲಿ ಸರಾಸರಿ 30  ಕಾಯಿಗಳು ಸರಾಸರಿ 20  ಕಿಲೋ ತೂಕ, ಸರಾಸರಿ  ಕಿಲೊ 30 ರೂ. ಬೆಲೆ ಇರುವ ಬಹು ಉಪಯೋಗಿ ಬಾಳೆ ಎಂಬುದು ಇದ್ದರೆ ಅದು ನೇಂದ್ರ ಬಾಳೆ ಒಂದೇ. ಇದನ್ನು ಹಣ್ಣಾಗಿಯೂ ತಿನ್ನಬಹುದು.  ಕರಿದು ಚಿಪ್ಸ್  ತಯಾರಿಸಬಹುದು.  ಹಣ್ಣಿನ ಹಲ್ವಾ, ಪಾಯಸ, ಹೀಗೆ ಹಲವಾರು ಅಡುಗೆ ಗಳಲ್ಲೂ ಇದರ ಬಳಕೆ ಇದೆ. ಇದು ಕೇರಳ ಅಲ್ಲದೆ ಕರ್ನಾಟಕ,ಮಹಾರಾಷ್ಟ್ರದ ಬಹುತೇಕ ಪ್ರದೇಶಗಳಲ್ಲಿ ಬೆಳೆಯಲ್ಪಡುತ್ತದೆ. ನೇಂದ್ರದ ಮೂಲ: ನೇಂದ್ರ ಬಾಳೆ ಅಥವಾ ನೇಂದ್ರನ್ ಇದು ಕೇರಳ…

Read more
cashew

ಗೇರು – ಈಗ ಮರಗಳ ಮೇಲೆ ಒಮ್ಮೆ ದೃಷ್ಟಿ ಹರಿಸುತ್ತಿರಿ

ಈ ಸಮಯದಲ್ಲಿ ಗೇರು ಮರಗಳಲ್ಲಿ ಗೇರು ಬೀಜದ ಕೊಯಿಲು ನಡೆಯುತ್ತಿರುತ್ತದೆ. ಗೇರು ಬೀಜ ಕೊಯಿಲಿಗೆ ಹೋಗುವ ಸಮಯದಲ್ಲಿ ಬುಡ ಭಾಗವನ್ನು ತಪ್ಪದೇ ಗಮನಿಸಿರಿ. ಈ ಸಮಯದಲ್ಲಿ ಬುಡದ ಕಾಂಡಕ್ಕೆ ಕಾಂಡ ಕೊರಕ ಹುಳು ಬಾಧಿಸುತ್ತದೆ. ಈ ಹುಳು ಬಾಧಿಸಿದ ಸಮಯದಲ್ಲಿ ಉಪಚಾರ ಮಾಡಿದರೆ  ಮಾತ್ರ ಅದನ್ನು ಬದುಕಿಸಲು ಸಾಧ್ಯ.  ಪತ್ತೆ ಕ್ರಮ: ಗೇರು ಮರಕ್ಕೆ ಮಾರಣಾಂತಿಕವಾಗಿ ಹಾನಿ ಮಾಡುವ ಕೀಟ ಕಾಂಡ ಕೊರಕ (Stem borer of cashew). ಈ ಸಮಯದಲ್ಲಿ ಕಾಂಡ ಕೊರಕ ಕೀಟ ಕಾಡದ…

Read more
ಗೇರು ಮರಕ್ಕೆ ಪುನಃಶ್ಚೇತನ

ಗೇರು – ಮಾವು- ಹಲಸು ಹಳೆ ಮರಗಳಿಗೆ ಪುನಃಶ್ಚೇತನ.

ನಮ್ಮಲ್ಲಿ ಇರುವಂತಹ ಹಳೆಯ ಮಾವು- ಗೇರು-ಹಲಸು ಇನ್ಯಾವುದೇ ಹಣ್ಣಿನ  ತೊಟಗಳಲ್ಲಿ ಹೆಚ್ಚಿನವುಗಳು ಅನಾಮಧೇಯ ತಳಿಯ ಬೀಜಗಳಿಂದ ಆದವುಗಳು. ಇವು ಈಗಲೇ  ಹಳೆಯದಾಗಿ ಅನುತ್ಪಾದಕವೂ ಆಗಿರಬಹುದು. ಇಂತಹ ಮರಗಳು ಹೆಚ್ಚಾಗಿ ನಿರ್ವಹಣೆ ಇಲ್ಲದೇ ನಿರ್ಲಕ್ಷ್ಯದಿಂದ ಬೆಳೆದಿರುತ್ತವೆ. ಇವುಗಳನ್ನು ಇಳುವರಿ ಅಭಿವೃದ್ಧಿಯ ದೃಷ್ಟಿಯಿಂದ ಪುನಶ್ಚೇತನ ಮಾಡುವುದು ಉತ್ತಮ.  ಹಳೆಯ ಅಥವಾ ಕಡಿಮೆ ಇಳುವರಿ ಕೊಡುವಂತಹ ಮರಗಳನ್ನು ಸವರುವಿಕೆಯಿಂದ ಹಾಗು ಕಸಿ ವಿಧಾನದ ಮೂಲಕ ಪುನಶ್ಚೇತನಗೊಳಿಸಿದರೆ  ಹೊಸ ಮರವನ್ನಾಗಿ ಪರಿವರ್ತಿಸಬಹುದು. ಪುನಶ್ಚೇತನದ ಉದ್ದೇಶಗಳು : ಹಳೆಯ ಹಾಗೂ ಕಡಿಮೆ ಇಳುವರಿಯ ಗಿಡಗಳ…

Read more
ಚಾಲಿ ಅಡಿಕೆ ತುಸು ಹಿಮ್ಮುಖ- ಕೆಂಪು ರಾಶಿ ಮಾರುಕಟ್ಟೆ ಸ್ಥಿರ

ಚಾಲಿ ಅಡಿಕೆ ತುಸು ಹಿಮ್ಮುಖ- ಕೆಂಪು ರಾಶಿ ಮಾರುಕಟ್ಟೆ ಸ್ಥಿರ.

ಚಾಲಿ ಅಡಿಕೆ ಧಾರಣೆಯಲ್ಲಿ ಸ್ವಲ್ಪ ಹಿಮ್ಮುಖವಾಗಿದೆ ಎಂಬ ಸುದ್ದಿ. ಹಾಗೆಂದು ದೊಡ್ಡ ಇಳಿಕೆ ಆಗಿಲ್ಲ. ದರ ಮೇಲೆ ಏರಲಿಲ್ಲ ಎಂದಷ್ಟೇ ಹೇಳಬಹುದು. ಕ್ಯಾಂಪ್ಕೋ ತನ್ನ ಸೂಚಿತ ಮಾಮೂಲಿ ದರವನ್ನೇ ಮುಂದುವರಿಸಿದೆ. ಆದರೆ ಗುಣಮಟ್ಟದ ಹೆಸರಿನಲ್ಲಿ ಅಡಿಕೆ ಖರೀದಿಯಲ್ಲಿ  ಸ್ವಲ್ಪ ಹಿಮ್ಮುಖ ಅಷ್ಟೇ. ಒಳ್ಳೆಯ ಅಡಿಕೆಗೆ ಖಾಸಗಿಯವರು 48,000-48500  ತನಕ ಖರೀದಿ ಮಾಡುತ್ತಿದ್ದಾರೆ. ಪರಿಸ್ಥಿತಿ  ಪಿತೃ ಪಕ್ಷ ಮುಗಿಯುವ ತನಕ ಹೀಗೇ ಮುಂದುವರಿಯಲಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಬೆಳೆಗಾರರು ನಿರಾಶರಾಗಬೇಕಾಗಿಲ್ಲ. ಅಡಿಕೆಗೆ ಬೇಡಿಕೆ ಇದೆ. ಬೆಲೆಯೂ ಬರುತ್ತದೆ….

Read more
ಸಕ್ಕರೆ ಹೆಚ್ಚಾಗಿದೆ- ರೈತರು ಕಬ್ಬು ಬೆಳೆಯಬೇಡಿ

ಸಕ್ಕರೆ ಉತ್ಪಾದನೆ ಹೆಚ್ಚಿದೆ- ರೈತರು ಕಬ್ಬು ಬೆಳೆಯಬೇಡಿ. ಸರಕಾರದ ಹೇಳಿಕೆ.

ದೇಶದಲ್ಲಿ ಸಕ್ಕರೆ ಉತ್ಪಾದನೆ ಹೆಚ್ಚಾಗಿದೆ. ಹಾಗಾಗಿ ಕಬ್ಬು ಬೆಳೆಯುವ ರೈತರು ಇನ್ನು ಬೆಳೆಯಬೇಡಿ. ಬೆಳೆ ಪರಿವರ್ತನೆ ಮಾಡಿ, ಇಂಧನ ಮತ್ತು ಶಕ್ತಿ ಉತ್ಪಾದನೆ ಕಡೆಗೆ ಗಮನಹರಿಸಬೇಕು ಎಂಬುದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಮಂತ್ರಿಗಳಾದ ನಿಥಿನ್ ಗಡ್ಕರಿಯವರ ಮಾತು.  ಭಾರತ ದೇಶದಲ್ಲಿ ಕಬ್ಬು ಬೆಳೆ ಹೆಚ್ಚಾಗುತ್ತಿದ್ದು, ಎಲ್ಲರೂ ಸಕ್ಕರೆ ಕಾರ್ಖಾನೆಗೆ ಕಬ್ಬು ಹಾಕುತ್ತಾರೆ. ಉತ್ಪಾದಿಸಿದ ಸಕ್ಕರೆ ಮಿಗತೆಯಾಗಿ ಕಾರ್ಖಾನೆಗಳು ನಷ್ಟಕ್ಕೊಳಗಾಗುತ್ತಿವೆಯಂತೆ. ನಮ್ಮ ದೇಶದಲ್ಲಿರುವ ಬಹುತೇಕ ಸಕ್ಕರೆ ಕಾರ್ಖಾನೆಗಳು ಈಗ ಸಕ್ಕರೆ ಉತ್ಪಾದನೆಗಾಗಿ ಕೆಲಸ ಮಾಡುತ್ತಿಲ್ಲ. ಬದಲಿಗೆ…

Read more
ಡಿಜಿಟಲೀಕರಣದ ಪ್ರಯೋಜನ ಪಡೆಯುತ್ತಿರುವವರಲ್ಲಿ ವಯಸ್ಕರೂ ಇದ್ದಾರೆ.

ಡಿಜಿಟಲೀಕರಣದಲ್ಲಿ ಹೊಸ ಆಯಾಮವನ್ನು ಸೃಷ್ಟಿಸಿದ ನಮ್ಮ ದೇಶದ ಜನಸಮೂಹ.

ಭಾರತ ಸರಕಾರದ ಡಿಜಿಟಲೀಕರಣ  ದೇಶದಲ್ಲಿಹೊಸ ಆಯಾಮವನ್ನು ಸೃಷ್ಟಿಸಿದೆ. ನಮ್ಮ ಜನ ಇದಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ನಮ್ಮೂರಿನ ಜನ ತರಕಾರಿ ಅಂಗಡಿಗೆ ಹೋದರೂ ಈಗ ಕೇಳುತ್ತಾರೆ, ಪೆಟಿಯಂ ಇದೆಯಾ,ಎಂದು.ಅಂಗಡಿಯವನಿಗೂ ಇದು ಒಂದು ಘನತೆಯ ವಿಷಯವಾಗಿದೆ.ಪಾನ್ ಬೀಡಾ ಅಂಗಡಿಯಲ್ಲೂ ಆನ್ ಲೈನ್ ಪೇಮೆಂಟ್.  ಒಂದಲ್ಲ ಎರಡು ಮೂರು ಕಡೆ QR ಕೋಡ್ ಹಾಳೆ ನೇತಾಡಿಸಿರುತ್ತಾರೆ. ಅಂಗಡಿಯವರು ಹೇಳುತ್ತಾರೆ, ಹಿಂದೆ ನಾಳೆ ಕೊಡುತ್ತೇನೆ ಎಂದು ಸಾಲ ಕೊಂಡೋಗುವ ಪ್ರಶ್ಣೆ ಇಲ್ಲ.  ಫೋನ್ ಹಿಡಿದು ತಟ್ಟನೆ ಹಣ ಹಾಕುತ್ತಾರೆ. ನಿಜ ಹಿಂದೆ ನಾವೆಲ್ಲಾ ಅಂಗಡಿಯಿಂದ…

Read more
error: Content is protected !!