pest problem

ಅಡಿಕೆ ಹೂಗೊಂಚಲು ಒಣಗುತ್ತಿದೆಯೇ ? ಯಾವ ಕಾರಣ- ಪರಿಹಾರ.

ಅಧಿಕ ಆದಾಯದ ಅಡಿಕೆ ಬೆಳೆಯಲ್ಲಿ ಹೂಗೊಂಚಲು ಒಣಗುವ ಸಮಸ್ಯೆ ಅತೀ ದೊಡ್ಡದು. ಇದಕ್ಕೆ ಪರಿಹಾರ ಸಿಂಗಾರಕ್ಕೆ ಸಿಂಪರಣೆ ಒಂದೇ.ರಾಸಾಯನಿಕ ಸಿಂಪರಣೆ ಇಷ್ಟವಿಲ್ಲದವರು ಮರದಲ್ಲಿ ಒಣಗಿದ ಹೂಗೊಂಚಲು ಶೇಷವನ್ನು ಸಂಪೂರ್ಣವಾಗಿ ತೆಗೆದು ಸ್ವಲ್ಪ ಮಟ್ಟಿಗೆ ನಷ್ಟದಿಂದ ಪಾರಾಗಬಹುದು. ಕಳೆದ ವರ್ಷ ಅಡಿಕೆ ಬೆಳೆಗಾರರು ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟ ಮಾಡಿಕೊಂಡಿದ್ದಾರೆ. ಕಾರಣ ಉತ್ತಮ ಹೂ ಗೊಂಚಲು ಇತ್ತು. ಆದರೆ ಹೂ ಗೋಂಚಲೆಲ್ಲಾ ಒಣಗಿ ಹಾಳಾಗಿದೆ. ಇದರಿಂದಾಗಿ ಬೆಳೆ ಸುಮಾರು 30% ನಷ್ಟವಾಗಿದೆ. ಈ ವರ್ಷ ಹಾಗಾಗಬಾರದು ಎಂದು ಬೆಳೆಗಾರರು…

Read more
ಅಡಿಕೆ- ಕರಿಮೆಣಸು ಬೆಳೆಗಳ ತೋಟಕ್ಕೆ ಅಗತೆ ವರ್ಜ್ಯ

ಅಡಿಕೆ- ಕರಿಮೆಣಸು ಬೆಳೆಗಳ  ತೋಟಕ್ಕೆ ಅಗತೆ, ಉಳುಮೆ ವರ್ಜ್ಯ.

ಅಡಿಕೆ ಮರಗಳ ಬೇರುಗಳು ಮೆತ್ತನೆಯ ಮೇಲ್ಮಣ್ಣಿನಲ್ಲಿ ಹರಡಿ ಬೆಳೆಯುವ ಗುಣದ ಸಸ್ಯಗಳು. ಆದ ಕಾರಣ ಮೇಲು ಭಾಗವನ್ನು ಅಗತೆ, ಉಳುಮೆ ಮಾಡುವುದರಿಂದ  ಬೇರಿಗೆ ಹಾನಿಯಾಗುತ್ತದೆ. ಅಲ್ಲದೆ ಬೇರೆ ಬೇರೆ ತೊಂದರೆಗಳೂ ಉಂಟಾಗುತ್ತವೆ.ಅಡಿಕೆ ಮರದ ಬುಡದಲ್ಲಿ ಕರಿಮೆಣಸು ಇದ್ದರೆ ಯಾವ ಕಾರಣಕ್ಕೂ ಬುಡ ಭಾಗವನ್ನು  ಕೆರೆಯುವುದೂ ಸಹ ಮಾಡಬಾರದು. ಇದರಿಂದ ಕರಿಮೆಣಸಿನ ಬಳ್ಳಿ ಸಾಯಬಹುದು, ಅಥವಾ ಸೊರಗಬಹುದು. ಬುಡ ಬುಡಿಸುವುದು ಹಳೆ ಪದ್ದತಿ: ನಮ್ಮ ಹಿರಿಯರು ತಿಳಿದೋ ತಿಳಿಯದೆಯೋ ಕೆಲವು ಬೇಸಾಯ ಕ್ರಮಗಳನ್ನು ಅನುಸರಿಸುತ್ತಿದ್ದರು. ಅದರಲ್ಲಿ ಒಂದು ಬುಡ…

Read more
Characteristics of good mother palm.

HOW TO SELECT QUALITY COCONUT SEED NUTS .

COCONUT IS PERENIAL LONG LIFE CROP, SO WE HAVE TO TAKE MUCH CARE IN SELECTING GOOD YIELDING QUALITY SEED NUTS. Good genetic quality is the main factor in selecting any seeds. The quality of the planting material is very important in the success of coconut farming. While selecting the good planting material one should see…

Read more
ಹೂ ಬಿಟ್ಟದ್ದೆಲ್ಲಾ ಕಾಯಿಯಾಗುವ ಉತ್ತಮ ತರಕಾರಿ ತೊಂಡೆ

ಮಂಗಗಳ ಕಾಟ ಇಲ್ಲದ ಲಾಭದ ತರಕಾರಿ ಬೆಳೆ ಇದು.

ಬಹುತೇಕ ತರಕಾರಿಗಳಲ್ಲಿ ಗಂಡು ಹೂವು, ಹೆಣ್ಣು ಹೂವು ಗಳಿರುತ್ತವೆ. ಗಂಡಿನ ಮೂಲಕ ಪರಾಗಸ್ಪರ್ಶ ಆಗಿ ಕಾಯಿ ಕಚ್ಚಬೇಕು. ಆದರೆ ತೊಂಡೆ ಕಾಯಿ ಹಾಗಲ್ಲ. ಎಲ್ಲಾ ಹೂವುಗಳೂ ಕಾಯಿಯಾಗುತ್ತದೆ. ತೊಂಡೆ ಕಾಯಿ ಬೇಡಿಕೆಯ ತರಕಾರಿ. ರಾಜ್ಯದ ಎಲ್ಲಾ ಕಡೆ  ಬೆಳೆಸಬಹುದು. ಒಮ್ಮೆ ತೊಂಡೆ ಬೆಳೆಸಿದವರು ಮತ್ತೆ  ಆ ಕೃಷಿ ಬಿಡುವುದಿಲ್ಲ. ಮಳೆ ಕಡಿಮೆ ಇರುವ ಕಡೆ ಇದನ್ನು ವರ್ಷದುದ್ದಕ್ಕೂ ಬೆಳೆಸಬಹುದು.  ಮಳೆ ಹೆಚ್ಚು ಇರುವಲ್ಲಿ ನವೆಂಬರ್ ತಿಂಗಳ ನಂತರ ಜೂನ್  ತನಕ ಬೆಳೆ  ಬೆಳೆಸಬಹುದು. 100 ಚದರ ಅಡಿಯ…

Read more
ಹಲಸಿನ ಕಾಯಿಯಾಗುವ ಕೌತುಕ

ಹಲಸು ಹೇಗೆ ಕಾಯಿಯಾಗುತ್ತದೆ. ಅದರ ಕೌತುಕ ಏನು?

ಹಲಸಿನ ಮರದಲ್ಲಿ ಹೂವು ಬಿಡುವುದು ಹಲಸಿನ ಕಾಯಿಯಾಗಲು. ಹಲಸಿನ ಕಾಯಿಯ ಮಿಡಿಯೇ ಅದರ ಹೂವು.  ಕಳ್ಳಿಗೆ ಮತ್ತು ಮೈ ಕಳ್ಳಿಗೆ ಎಂದು ಕರೆಯುವ ಇದು ಹೆಣ್ಣು ಮತ್ತು ಗಂಡು ಹೂವುಗಳು. ಚಳಿಗಾಲ ಪ್ರಾರಂಭವಾಗುವ ಸಮಯದಿಂದ ಆರಂಭವಾಗಿ ಶಿವರಾತ್ರೆ  ತನಕ ಹಲಸಿನ ಮರ ಹೂವು ಬಿಡುವ ಕಾಲ. ಈ ಸಮಯದಲ್ಲಿ ಕೆಲವು ಬೇಗ ಹೂವು ಬಿಟ್ಟರೆ ಮತ್ತೆ  ಕೆಲವು ನಿಧಾನವಾಗಿ ಶಿವರಾತ್ರೆ  ನಂತರವೂ ಹೂವು ಬಿಡುತ್ತವೆ. ಗಾಳಿ  ಬಂದಾಗ ಹೂವು ಬಿಡುವಿಕೆ ಜಾಸ್ತಿ ಎನ್ನುತ್ತಾರೆ. ವಾಸ್ತವವಾಗಿ ಹಾಗಲ್ಲ. ಶುಷ್ಕ…

Read more
ಮ್ಯುರೇಟ್ ಆಫ್ ಪೊಟ್ಯಾಶ್ ಎಲ್ಲಾ ಕಡೆ ಸಿಗುವಂತದ್ದು

ಪೊಟ್ಯಾಶ್ ಇಲ್ಲವೇ? ಚಿಂತಿಸಬೇಡಿ. ಪೊಟ್ಯಾಶ್ ಇಲ್ಲದೆಯೂ ಬೆಳೆ ತೆಗೆಯಬಹುದು!

ಮಾರುಕಟ್ಟೆಯಲ್ಲಿ ಪೊಟ್ಯಾಶ್ ಇಲ್ಲ ಎಂದು ಕಾಳಸಂತೆಯಲ್ಲಿ ಸಿಗುವ ಪೊಟ್ಯಾಶ್ ಖರೀದಿಗೆ ಹೋಗಬೇಡಿ. ಪೊಟ್ಯಾಶ್ ಗೊಬ್ಬರ ಶಾಶ್ವತವಾಗಿ  ಲಭ್ಯವಿಲ್ಲ ಎಂದು ಯಾರೂ ಹೇಳಿಲ್ಲ. ಆಮದು ಪ್ರಕ್ರಿಯೆ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಬರಲಿದೆ. ಆ ತನಕ ರೈತರು ಪೊಟ್ಯಾಶ್ ಗಾಗಿ ಏನು ಮಾಡಬೇಕು ಇಲ್ಲಿದೆ ಮಾಹಿತಿ. ಸಸ್ಯಗಳಿಗೆ ಬೆಳವಣಿಗೆಯ ವಿವಿಧ ಹಂತಕ್ಕನುಗುಣವಾಗಿ ಪೊಟ್ಯಾಶಿಯಂ ಸತ್ವ ಬೇಕಾಗುತ್ತದೆ. ಪೊಟ್ಯಾಶ್ ಬರೇ ಮ್ಯುರೇಟ್ ಆಫ್ ಪೊಟ್ಯಾಶ್ ನಲ್ಲಿ ಮಾತ್ರ ಇರುವುದಲ್ಲ. ಬೇರೆ ಗೊಬ್ಬರಗಳಲ್ಲೂ ಇದೆ. ಹೆಚ್ಚಾಗಿ ನಾವು ಬೆಳೆಗಳಿಗೆ  ಬಳಸುವ ಪೊಟ್ಯಾಶ್ ಗೊಬ್ಬರ…

Read more
ಅಡಿಕೆಗೆ ಸಿಂಪರಣೆ

ಅಡಿಕೆಗೆ ಬಳಸುತ್ತಿರುವ ಕೀಟ- ಶಿಲೀಂದ್ರ ನಾಶಕ ಕೆಲಸ ಮಾಡುವುದಿಲ್ಲವಂತೆ. 

ಭಾರತ ಸರಕಾರದ ಕೃಷಿ ಮಂತ್ರಾಲಯವು ಕೆಲವು ಕೀಟನಾಶಕಗಳನ್ನು ಬ್ಯಾನ್ ಮಾಡುವ ಬಗ್ಗೆ ಪ್ರಸ್ತಾಪ ಎತ್ತಿದೆ. ಕಾರಣ ಅವು ಕೆಲಸ ಮಾಡುವುದಿಲ್ಲವಂತೆ. ಸುಮಾರು 27 ಬೆಳೆಸಂರಕ್ಷಗಳನ್ನು ಬ್ಯಾನ್ ಮಾಡಲು ಮುಂದಾಗಿದೆ. ಹೌದು ನಾವು ಅಡಿಕೆ ಮಿಳ್ಳೆ ಉದುರದಂತೆ ತಡೆಯಲು ಬಳಸುವ ಕೆಲವು ಕೀಟನಾಶಕ, ಶಿಲೀಂದ್ರ ನಾಶಕಗಳೂ ಸೇರಿದಂತೆ  ಬಹಳಷ್ಟು ಕೃಷಿ ಒಳಸುರಿಗಳು ಬಳಸಿಯೂ  ಕೆಲಸ ಮಾಡದೆ ನಮ್ಮ ಜೇಬು ಖಾಲಿ ಮಾಡಿದ್ದಷ್ಟೇ. ಅದೆಷ್ಟೋ ರೈತರು ಬೆಳೆಗಳಿಗೆ ಬರುವ ರೋಗಕ್ಕೆ, ಕೀಟಕ್ಕೆ ಔಷಧಿ ಸಿಂಪಡಿಸುತ್ತಾರೆ. ಒಂದನ್ನು ಸಿಂಪಡಿಸಿ ಫಲಿತಾಂಶ ಸಿಗದಿದ್ದರೆ…

Read more
ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ

ಹಾಲಿ ವರ್ಷದಲ್ಲಿ 50% ಅಡಿಕೆ ಉತ್ಪಾದನೆ ಕೊರತೆ. ಬೆಲೆ ಏರುವ ಸಾಧ್ಯತೆ.

ಹಾಲೀ ವರ್ಷದ ಹವಾಮಾನ ವೈಪರೀತ್ಯದ ಕಾರಣ ಅಡಿಕೆಯ ಸಾಂಪ್ರದಾಯಿಕ ಬೆಳೆ ಪ್ರದೇಶಗಳಲ್ಲಿ 50% ಫಸಲು ನಷ್ಟವಾಗಿದ್ದು, ಈ ನಷ್ಟ ಇನ್ನೂ ಒಂದೆರಡು ಮುಂದುವರಿಯುವ ಸಾಧ್ಯತೆ ಇದೆ.ಈಗಾಗಲೇ ಅಡಿಕೆ ತೋಟಗಳು ನೀರಿಲ್ಲದೆ, ನೀರು ಇದ್ದೂ ಹಾಳಾಗಿದೆ. ಅಡಿಕೆ ಮರಗಳಲ್ಲಿ ಗರಿಗಳು ಒಣಗಿವೆ. ಹೂಗೊಂಚಲು ಕರಟಿ ಹೋಗಿವೆ, ಬೆಳೆಗಾರರು ಮರ ಉಳಿದರೆ ಸಾಕು ಎನ್ನುವ ಸ್ಥಿತಿಗೆ ಬಂದಿದ್ದಾರೆ. ಅಡಿಕೆ ಬೆಳೆಗಾರರ ಪಾಲಿಗೆ ಈ ವರ್ಷದ ಹವಾಮಾನ ವೈಪರೀತ್ಯ ಅತೀ ದೊಡ್ಡ ನಷ್ಟವನ್ನು ಉಂಟುಮಾಡಿದೆ. ದಕ್ಷಿಣ ಕನ್ನಡ, ನೆರೆಯ ಕಾಸರಗೋಡು, ಉಡುಪಿ,…

Read more
Good Source of Potash in Horticulture

Which is the Good Source of Potash in Horticulture Crops?

Potash is one of the most essential macronutrients required for healthy plant growth and quality yield in horticulture crops. But farmers often get confused between the two major forms of potash fertilizers available in the market: Muriate of Potash (MOP) and Sulphate of Potash (SOP). Choosing the right source of potassium is key to achieving…

Read more
ಆರೋಗ್ಯವಂತ ಅಡಿಕೆ ಮರ

ಅಡಿಕೆ ಮರದ ಆರೋಗ್ಯ –ಅದರ ಬೇರು ವ್ಯವಸ್ಥೆ.

ಯಾವುದೇ ಸಸ್ಯವಿರಲಿ, ಬೇರು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರುತ್ತದೆ. ಸಸ್ಯಕ್ಕೆ ಬೇರು ಮುಖ್ಯ ಆಧಾರ ಸ್ಥಂಭ.  ಇದು ಮಣ್ಣು, ನೀರು, ಕೀಟಗಳು ಮತ್ತು ಪೋಷಕಗಳ ಅಸಮತೋಲನದಿಂದ ತೊಂದರೆಗೆ ಒಳಗಾಗುತ್ತದೆ. ಇದನ್ನು ಪ್ರತೀಯೊಬ್ಬ ರೈತರೂ ಗಮನಿಸಿ ಅದನ್ನು ಸರಿಪಡಿಸಿದರೆ ಮರ ಆರೋಗ್ಯವಾಗಿರುತ್ತದೆ. ಅಡಿಕೆ ಮರ, ತೆಂಗಿನ ಮರ ಮುಂತಾದ ಎಲ್ಲಾ ಏಕದಳ ಸಸ್ಯಗಳ ಬೇರುಗಳು ತಳಕ್ಕೆ ಇಳಿಯದೇ ಮೇಲ್ಭಾಗದಲ್ಲೇ ಪೋಷಕಗಳನ್ನು ಹುಡುಕುತ್ತಾ ಪಸರಿಸುತ್ತಿರುತ್ತವೆ. ಇವು ಸಸ್ಯದ ಕಾಂಡದಿಂದ ಹುಟ್ಟಿಕೊಂಡು ಬೆಳವಣಿಗೆಯಾಗುತ್ತದೆ. ಸಸ್ಯದ ಸುತ್ತಲೂ ಇದು ಪಸರಿಸಿರುತ್ತದೆ.  Monocot roots are…

Read more
error: Content is protected !!