ಆಷಾಢದಲ್ಲಿ (ಆಟಿ) ಇದನ್ನು ಯಾವ ಉದ್ದೇಶಕ್ಕೆ ತಪ್ಪದೆ ತಿನ್ನಬೇಕು?
ಆಷಾಢ ಮಾಸದಲ್ಲಿ ಕೆಲವು ಆಹಾರ ವಸ್ತುಗಳನ್ನು ತಪ್ಪದೆ ತಿನ್ನಬೇಕು, ಇದರಲ್ಲಿ ಸಾಕಷ್ಟು ಆರೋಗ್ಯ ಗುಣಗಳಿವೆ ಎಂಬುದೇ ನಮ್ಮ ಹಿರಿಯರು ಹೇಳಿರುವ ಉದ್ದೇಶ. ಇದರಲ್ಲಿ ಬಾಳೆ ದಂಡು ಒಂದು. ಬಾಳೆ ದಂಡನ್ನು ಬೇರೆ ಬೇರೆ ಅಡುಗೆಗಳ ಮೂಲಕ ಬಳಸಬಹುದಾಗಿದ್ದು , ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಈ ದಂಡಿನಲ್ಲಿ ಹಲವಾರು ಪೋಷಕಾಂಶಗಳಿರುವ ಕಾರಣ ದೇಹಕ್ಕೆ ಶಕ್ತಿ ಕೊಡುತ್ತದೆ. ಆಷಾಢ ಮಾಸದಲ್ಲಿ ಮಳೆ ಹೆಚ್ಚು. ಹಿಂದೆಲ್ಲಾ ಈ ತಿಂಗಳಲ್ಲಿ ವಾರಗಟ್ಟಲೆ ನಿರಂತರ ಮಳೆ ಬರುವುದು, ಮನೆಯಿಂದ ಹೊರಗೆ ತಲೆ ಹಾಕುವುದಕ್ಕೂ…
