ಅಡಿಕೆ ಯಾಕೆ ಸುರಿ ಬೀಳುತ್ತದೆ

ಅಡಿಕೆ ಯಾಕೆ ಸುರಿ ಬೀಳುತ್ತದೆ? – ಪರಿಹಾರ.

ದಾಸ್ತಾನು ಇಟ್ಟ ಧವಸ ಧಾನ್ಯ ಏನೇ ಇದ್ದರೂ ಸಮರ್ಪಕವಾಗಿ ಇಲ್ಲದಿದರೆ ಅದಕ್ಕೆ ದಾಸ್ತಾನು ಕೀಟ (Storage pest) ಬಂದು ಸುರಿ ಬೀಳುವುದು  ಸಾಮಾನ್ಯ. ಈ ಕೀಟಗಳಲ್ಲಿ ಹಲವು ವಿಧಗಳು ಇದ್ದು, ಅಕ್ಕಿಗೆ ಬರುವ ಗುಗ್ಗುರು,ಅಡಿಕೆಗೆ ಬರುವ ಡಂಕಿ ಬೇರೆ ಹೀಗೆ ಬೇರೆ  ಬೇರೆ ಇದೆ. ಸಾಮಾನ್ಯವಾಗಿ ಸುಲಿದು ದಾಸ್ತಾನು ಇಡುವ ಅಡಿಕೆಗೆ ಈ ಸಮಸ್ಯೆ ಹೆಚ್ಚು. ಹಾಗೆಂದು ಸುಲಿಯದೇ ಇಡುವಲ್ಲಿಯೂ ಇಲ್ಲದಿಲ್ಲ. ಇದು ಮಹಾ ಮಾರಿ ಶತೃ ಎಂತಲೇ ಹೇಳಬಹುದು. ಒಮ್ಮೆ ಈ ಕೀಟ ಬಂದರೆ ಅದನ್ನು ಓಡಿಸುವುದೂ…

Read more

ಬೀಜ ಜನ್ಯ ರೋಗಗಳು ಬಾರದಂತೆ ತಡೆಯುವ ವಿಧಾನ.

ಎಲ್ಲದಕ್ಕೂ ಮೂಲ ಬೀಜ. ಉತ್ತಮ ಗುಣದ ಬೀಜಗಳನ್ನು ಆಯ್ಕೆ ಮಾಡಿ, ಅದನ್ನು ಬೆಳೆಸಿದರೆ ಅದರ ಪೀಳಿಗೆಯೂ ಆರೋಗ್ಯವಾಗಿರುತ್ತದೆ. ಬಹಳಷ್ಟು ರೋಗಗಳಿಗೆ ನಾವು ಬಳಸುವ ಬೀಜಗಳೇ ಕಾರಣ. ಬೀಜದಲ್ಲಿ ರೋಗದ ಗುಣ ಸೇರಿಕೊಂಡಿದ್ದು, ಅದು ಸಸಿಯಾದಾಗ ಯಾವಾಗಲಾದರೂ ತೋರಿಕೆಗೆ ಬರಬಹುದು. ಇಂಥಹ ವೈಪರೀತ್ಯಗಳು ಈಗೀಗ ಹೆಚ್ಚಲಾರಂಭಿಸಿದೆ. ರೈತರು ಇದಕ್ಕೆ  ಔಷಧಿ ಹೊಡೆಯುವುದು ಅಷ್ಟು ಫಲಕಾರಿ ಅಲ್ಲ. ನೀವು ಯಾವುದೋ ಬೀಜ ಕಂಪೆನಿಯಿಂದ ಉತ್ತಮ ಸೌತೇ ಕಾಯಿ ಬೀಜ ತಂದು ಬಿತ್ತಿ, ಬೆಳೆಸಿ. ಸಸಿ ಚೆನ್ನಾಗಿ ಬೆಳೆಯುತ್ತದೆ. ಇನ್ನೇನು ಹೂ…

Read more
Farmer showing the sheep

ತಿಂಗಳಿಗೆ 30,000 ಸಂಪಾದನೆ ಮಾಡುವ ಸರಳ ವೃತ್ತಿ.

ಜನ ಕೆಲಸ ಇಲ್ಲ. ಸಂಪಾದನೆ ಇಲ್ಲ. ಸರಕಾರ ನಮ್ಮ ನೆರವಿಗೆ ಬರಬೇಕು. ನಮಗೆ ಅದು ಕೊಡಬೇಕು. ಇದು ಕೊಡಬೇಕು ಎಂದು ಹರಟೆ ಹೊಡೆಯುತ್ತಾ ಕಾಲ ಹರಣ ಮಾಡಬೇಕಾಗಿಲ್ಲ. ಅತೀ ಕಡಿಮೆ ಬಂಡವಾಳದಲ್ಲಿ  ತಿಂಗಳಿಗೆ 30,000 ಸಂಪಾದನೆ ಮಾಡಬಹುದು. ಇದು ಚಿತ್ರದುರ್ಗ ಜಿಲ್ಲೆ, ಹೊಸದುರ್ಗದ ಜಾನಕಲ್  ಸೇವನಗರ ಗ್ರಾಮದ  ಪ್ರಿಯಾಂಕ್ ಎಂಬ 22 ವರ್ಷದ  ಯುವಕ ಹೇಳುವ ಮಾತು. ಇವರು  ಬಿ ಬಿ ಎಂ ವ್ಯಾಸಂಗ ಮಾಡುತ್ತಲೇ ಟಗರು ಸಾಕಣೆ ಮಾಡಿ ತಿಂಗಳಿಗೆ 30,000 ರೂ ಸಂಪಾದನೆ ಮಾಡುತ್ತಿದ್ದಾರೆ….

Read more

ಈ ಹಣ್ಣು ತಿಂದರೆ ಆರೋಗ್ಯ ನಿಮ್ಮ ಹತೋಟಿಯಲ್ಲಿರುತ್ತದೆ.

ಪ್ಯಾಶನ್ ಪ್ರುಟ್ Passiflora ಎಂಬ ಹಣ್ಣನ್ನು ಬಹಳ ಹಿಂದಿನಿಂದಲೂ ತಜ್ಞರು ಬಹಳ ಆರೋಗ್ಯಕರ ಹಣ್ಣು ಎಂದು ಹೇಳುತ್ತಾ ಬಂದಿದ್ದಾರೆ. ಇದನ್ನು ಮೈನರ್ ಪ್ರೂಟ್  ವಿಭಾಗದಲ್ಲಿ ಸೇರಿಸಿ ಅದರ ಆರೋಗ್ಯ ಗುಣ, ಬೆಳೆ ಕ್ರಮ, ಮೌಲ್ಯ ವರ್ಧನೆ ಇತ್ಯಾದಿಗಳ ಬಗ್ಗೆ ಸಂಶೋಧನೆ ನಡೆದಿದೆ. ಬೆಂಗಳೂರಿನ ಹೇಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ಇದರ ಬಗ್ಗೆ ಸಂಶೋಧನೆಗಳು ನಡೆಯುತ್ತಿದೆ. ಇಲ್ಲಿ ಅರ್ಕಾ ಕಾವೇರಿ ಎಂಬ ನೇರಳೆ ಬಣ್ಣದ  ಹಣ್ಣಿನ ತಳಿಯನ್ನೂ ಅಭಿವೃದಿ ಮಾಡಲಾಗಿದೆ. ಈ ಹಣ್ಣು  ಬೆಳೆಸಲು ಯಾವುದೇ ಕಷ್ಟವಿಲ್ಲ….

Read more
ಸಾಂಬಾರ ಬೆಳೆಗಳ ಸಂಶೊಧನಾ ಸಂಸ್ಥೆ ಅಪ್ಪಂಗಳ ಮಡಿಕೇರಿ

ನೀವು ಸಾಂಬಾರ ಬೆಳೆಗಾರರೇ? ಇಲ್ಲಿಗೆ ಒಮ್ಮೆ ಭೇಟಿ ಕೊಡಬಹುದು.

ಸಾಂಬಾರ ಬೆಳೆಗಳಾದ ಏಲಕ್ಕಿ, ಕರಿಮೆಣಸು ಅರಶಿನ, ಶುಂಠಿ ಮುಂತಾದ ಬೆಳೆ ಬೆಳೆಯುವ ರೈತರು ವೈಜ್ಞಾನಿಕ ಬೆಳೆ ಮಾಹಿತಿ, ತಳಿ ಮಾಹಿತಿ ಬಯಸುವುದೇ ಆದರೆ ಕರ್ನಾಟಕದ ಮಡಿಕೇರಿಯಲ್ಲಿರುವ ಪ್ರಾದೇಶಿಕ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಗೆ ಒಮ್ಮೆ ಭೇಟಿ ಕೊಡಿ. ಇಲ್ಲಿ ನಿಮಗೆ  ಬೇಕಾದ ಮಾಹಿತಿಗಳು ಲಭ್ಯವಿದೆ. ಮಡಿಕೇರಿಯ ಅಪ್ಪಂಗಳದ ಏಲಕ್ಕಿ ಸಂಶೋಧನಾ ಕೇಂದ್ರವನ್ನು 1961 ರಲ್ಲಿ ಮೈಸೂರು ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲಾಯಿತು. ಕೇಂದ್ರದ ಆಡಳಿತಾತ್ಮಕ ನಿಯಂತ್ರಣವನ್ನು 1976 ರಲ್ಲಿ ಕಾಸರಗೋಡ್‍ನ ಕೇಂದ್ರ ತೋಟ ಬೆಳೆಗಳ ಸಂಶೋಧನಾ ಸಂಸ್ಥೆಗೆ ಹಸ್ತಾಂತರಿಸಲಾಯಿತು….

Read more
ಕೆಂಪು ಅಡಿಕೆ

ಚಾಲಿ ದರ ಹಿಂದೆ- ಕೆಂಪು ಸ್ಥಿರ: ದಿನಾಂಕ:21-12-2021 ರ ಧಾರಣೆ.

ಹೊಸ ಚಾಲಿ ಮಾರುಕಟ್ಟೆಗೆ   ಬರಲಾರಂಭಿಸಿದೆ. ಚಾಲಿಯ ಗುಣ ಮಟ್ಟದ ಮೇಲೆ ಬೆಳೆಗಾರರಿಗೆ ಹೆಚ್ಚು ಖಾತ್ರಿ ಇಲ್ಲದ ಕಾರಣ ಬಿದ್ದ ಒದ್ದೆಯಾದ ಅಡಿಕೆಯನ್ನು ಹೇಗೂ ದರ ಒಳ್ಳೆಯದಿದೆಯಲ್ಲಾ ಎಂದು ಮಾರಾಟ ಮಾಡುತ್ತಿದ್ದಾರೆ. ಮೊದಲೇ ಹೇಳಿದಂತೆ ಚಾಲಿಗೆ ಖಾಸಗಿ ವ್ಯಾಪಾರಸ್ಥರಲ್ಲಿ ದರ ಕಡಿಮೆ, ಸಹಕಾರಿಗಳಲ್ಲಿ ಸ್ಥಿರವಾಗಿಯೂ ಇದೆ. ನಾಳೆ ನಾಡಿದ್ದಿನಲ್ಲಿ ಸಾಂಸ್ಥಿಕ ಖರೀದಿದಾರರೂ ಸ್ವಲ್ಪ ದರ ಇಳಿಸುವ ಮುನ್ಸೂಚನೆ ಇದೆ. ಕೆಂಪು ಅಡಿಕೆ ಬೆಳೆಗಾರರಲ್ಲಿ ದೊಡ್ಡ ಬೆಳೆಗಾರರು ಮತ್ತು ಚೇಣಿಯವರು ಮಾರಾಟಕ್ಕೆ  ದರ ಯಾವಾಗ ಏರುತ್ತದೆ ಎಂದು ಕಾಯುತ್ತಿದ್ದಾರೆ. ಈ…

Read more
ತೆಂಗಿನ ಸಸಿ ಆರೋಗ್ಯವಾಗಿದ್ದರೆ ಹೀಗೆ ಇರುತ್ತದೆ.

ತೆಂಗಿನ ಸಸಿ ಬೇಗ ಫಲಕೊಡಬೇಕಾದರೆ ಮಾಡಬೇಕಾದ ಅಗತ್ಯ ಕೆಲಸ.

ತೆಂಗಿನ ಸಸಿ ಹಾಗೂ ತಾಳೆ ಜಾತಿಯ ಎಲ್ಲಾ ಮರಗಳಿಗೂ ಕುರುವಾಯಿ ದುಂಬಿ ಕಾಟ ಇಲ್ಲದಿದ್ದರೆ, ಸಸಿ ಆರೋಗ್ಯವಾಗಿ ಬೆಳೆದು ಬೇಗ ಫಲ ಕೊಡುವುದರಲ್ಲಿ ಅನುಮಾನ ಇಲ್ಲ. ತೆಂಗು ಜಾತಿಯ ಮರಗಳಲ್ಲಿ ಒಂದೇ ಮೊಳಕೆ (Bud) ಇರುವುದು. ಇವುಗಳ ತಲೆ ಕಡಿದರೆ ಅವು ಮತ್ತೆ ಇತರ ಮರಗಳಂತೆ ಚಿಗುರಿ ಬೆಳೆಯಲಾರದು. ಆದರೆ ಇತರ ಮರ ಮಟ್ಟುಗಳ  ಎಲ್ಲಾ ಎಲೆ ಗೆಲ್ಲು ಕಡಿದರೂ ಅದು ಮತ್ತೆ ಚಿಗುರಿ ಬೆಳೆಯುತ್ತದೆ. ಆದ ಕಾರಣ ತೆಂಗಿನಂತಹ ಮರಗಳಿಗೆ ಎಲೆಯೇ ಆಧಾರ. ಕೆಲವು ಸಂದರ್ಭಗಳಲ್ಲಿ…

Read more
ರೋಗ ಸೋಂಕಿತ ಮರ

ತೆಂಗು- ಅಡಿಕೆ ಮರಗಳಿಗೆ ಬಂದಿದೆ ಹೊಸ ಮಾರಣಾಂತಿಕ ಸಾಂಕ್ರಾಮಿಕ ರೋಗ.

ತೆಂಗು ಅಡಿಕೆ ಬೆಳೆ ಬೆಳೆಯುವುದು ಈಗ ಹಿಂದಿನಷ್ಟು ಸುಲಭವಾಗಿಲ್ಲ. ಹಿಂದೆ ಸಸಿ ನೆಟ್ಟರೆ ಅದು ನೀರಾವರಿ ಗೊಬ್ಬರ ಕೊಟ್ಟರೆ ಚೆನ್ನಾಗಿಯೇ ಬೆಳೆಯುತ್ತಿತ್ತು. ಈಗ ಹಾಗಿಲ್ಲ. ನೀರು, ಗೊಬ್ಬರ ಎರಡನ್ನು ಕೊಡಲು ನಾವು ಜಿಪುಣತನ ಮಾಡುವುದಿಲ್ಲ. ಆದರೆ ವಾತಾವರಣ ನಮಗೆ ಸಹಕಾರ ಕೊಡುತ್ತಿಲ್ಲ. ಹಿಂದೆ ಮೈನರ್ ರೋಗ ಕಾರಕಗಳಾಗಿದ್ದವು, ಈಗ ಪ್ರಭಲರೋಗಗಳಾಗುತ್ತಿವೆ. ಅದೇ ರೀತಿಯಲ್ಲಿ ಕೀಟಗಳೂ. ಕೀಟ – ರೋಗ ನಾಶಕಕ್ಕೆ ಬಗ್ಗದ ಸ್ಥಿತಿ  ಉಂಟಾಗಿದೆ. ಬಹುಷಃ ಇನ್ನು ಮುಂದಿನ ದಿನಗಳು ಅಡಿಕೆ ತೆಂಗು ಬೆಳೆಗಾರರಿಗೆ ರೋಗ –…

Read more

ಹಲ್ಲಿಲ್ಲದ್ದ ರೈತನಿಗೆ ಕಡಲೆ ತಿನ್ನಿಸುವ ವೆಬಿನಾರ್ ಗಳು.

ಮಾರ್ಚ್ ತಿಂಗಳ ನಂತರ ಬಂದ ಒಂದು ಹೊಸ ಅವತಾರ, ವೆಬಿನಾರ್ ಗಳು. ಬೇರೆ ಕ್ಷೇತ್ರಗಳ ವಿಷಯ ನಮಗೆ ಅನಗತ್ಯ. ಆದರೆ ಕೃಷಿ ಕ್ಷೇತ್ರದಲ್ಲಿ ಈ ವೆಬಿನಾರ್ಗಳ ಬಗ್ಗೆ ಕೆಲವೊಂದು ವಿಚಾರಗಳನ್ನು ರೈತರಿಗೆ ತಿಳಿಯಬಯಸುತ್ತೇವೆ. ಇದು ರೋಗಿ ಬಯಸಿದ್ದೂ ಹಾಲು, ವೈದ್ಯ ಕೊಟ್ಟದ್ದೂ ಹಾಲು ಎಂಬಂತಾಗಿದೆ. ಮೇಲುನೋಟಕ್ಕೆ ಇದು ರೈತರ ಸೇವೆ ಎಂದು ಕಂಡರೂ ಇದರಲ್ಲಿ ಕೆಲವು ಪೇಪರ್ ವರ್ಕ್ ಮತ್ತು ಹಣ ಖರ್ಚು ಮಾಡುವ ದಂಧೆ ಇರಲೂ ಬಹುದು. ವೆಬಿನಾರ್ ಎಂದರೆ ಕೇವಲ ಸಂಬಂಧಿಸಿದವರು  ಮಾತ್ರ ತಮ್ಮ…

Read more
ಉತ್ಕೃಷ್ಟ ಗುಣಮಟ್ಟದ ಕರಿಮೆಣಸು ಉತ್ಪಾದನೆ

ಉತ್ಕೃಷ್ಟ ಗುಣಮಟ್ಟದ ಕರಿಮೆಣಸು ಉತ್ಪಾದನೆ.

ಹೆಸರು ಕರಿಮೆಣಸು- ಕಪ್ಪಗಿದ್ದರೆ  ಮಾರುಕಟ್ಟೆಯಲ್ಲಿ ಉತ್ತಮ ಬೆಲೆ – ಬೇಡಿಕೆ. ಬೆಳೆಗಾರರು ಅದನ್ನು ಮನಬಂದಂತೆ ಸಂಸ್ಕರಣೆ  ಮಾಡಿದರೆ ಗುಣಮಟ್ಟ ಬರಲಾರದು. ಸೂಕ್ತ ಸಂಸ್ಕರಣಾ ವಿಧಾನವನ್ನು ಪಾಲಿಸಿದರೆ ಮಾತ್ರ ಗುಣಮಟ್ಟದ ಉತ್ಪನ್ನ ಪಡೆಯಬಹುದು. ಮೆಣಸಿನ ಗುಣಮಟ್ಟದ ಬಗ್ಗೆ ಹೇಳುವುದಾದರೆ ಒಂದು ಲೀ. ಹಿಡಿಯುವ ಪಾತ್ರೆಯಲ್ಲಿ  ಒಣಗಿಸಿದ ಮೆಣಸನ್ನು ಹಾಕಿ ಅದನ್ನು ತೂಗಿದಾಗ ಅದು 600  ಗ್ರಾಂ ನಷ್ಟು ತೂಗಬೇಕು. ತೇವಾಂಶ ಮಾಪಕದಲ್ಲಿ ಹಾಕಿದಾಗ ಅದರಲ್ಲಿ 10 %  ತೇವಾಂಶಕ್ಕಿಂತ ಕಡಿಮೆ ಇರಬೇಕು. ಇದಕ್ಕಿಂತ ಹೆಚ್ಚಾದರೆ ಅದು ಒಣಗಲಿಲ್ಲ ಎಂದರ್ಥ….

Read more
error: Content is protected !!