ಸಸ್ಯಗಳ ಬೇರಿನಲ್ಲಿ ಈ ಗಂಟುಗಳು ಯಾಕೆ ಬೆಳೆಯುತ್ತವೆ? ಇದರ ಪ್ರಯೋಜನಗಳೇನು

ಸಸ್ಯಗಳ ಬೇರಿನಲ್ಲಿ ಹೀಗೆ ಗಂಟುಗಳು ಯಾಕೆ ಬೆಳೆಯುತ್ತವೆ? ಇದರ  ಪ್ರಯೋಜನಗಳೇನು?  

ಕೆಲವು ಸಸ್ಯಗಳ ಬೇರಿನ ಮೇಲೆ ಗಂಟು ಗಂಟು ರಚನೆ ಕಾಣಿಸುತ್ತದೆ. ಇದು  ಏನು? ಯಾಕೆ ಆಗುತ್ತದೆ?ಇದರಿಂದ ಪ್ರಯೋಜನ ಏನು ಎಂಬುದನ್ನು ತಿಳಿದುಕೊಳ್ಳೋಣ. ಕೆಲವು ನಿರ್ದಿಷ್ಟ ಸಸ್ಯಗಳಲ್ಲಿ  ಮಾತ್ರ  ಬೇರಿನ ಸನಿಹದಲ್ಲಿ  ಗಂಟುಗಳನ್ನು ಕಾಣಬಹುದು. ಇವು ಪ್ರಕೃತಿಯ ಕೊಡುಗೆ. ದ್ವಿದಳ ಸಸ್ಯಗಳಲ್ಲಿ ಮಾತ್ರ ಇಂತಹ ಗಂಟು Root Nodules ರಚನೆಗಳನ್ನು ಕಾಣಬಹುದು. ಬೇರಿನಲ್ಲಿ ಬರುವ ಎಲ್ಲಾ ಗಂಟುಗಳೂ  ಒಂದೇ ಅಲ್ಲ. ಕೆಲವು ಜಂತುಹುಳುಗಳ (root-knot nematode) ಕಾಟದಿಂದಲೂ ಆಗುತ್ತದೆ. ಜಂತು ಹುಳುಗಳಾಗಿದ್ದರೆ ಬೇರಿನ ಬೆಳವಣಿಗೆ ಕುಂಠಿತವಾಗುತ್ತದೆ. ಸಸ್ಯದ ಬೆಳವಣಿಗೆ…

Read more
method of green leaf mulching

ಹೊಲಕ್ಕೆ ಈ ಸೊಪ್ಪುಗಳನ್ನು ಹಾಕಿದರೆ ಗೊಬ್ಬರ ಉಳಿಸಬಹುದು.

ಮೆದು ಸ್ವರೂಪದ ಹಸುರು ಸೊಪ್ಪು ಅಧಿಕ ಸಾರಗಳನ್ನು ಒಳಗೊಂಡಿರುತ್ತದೆ. ಹೆಚ್ಚಾಗಿ ದ್ವಿದಳ ಜಾತಿಯವು ಉತ್ಕೃಷ್ಟ. ಇಂತಹ ಸಸ್ಯಗಳಲ್ಲಿ ಕೆಲವು ಅಲ್ಪಾವಧಿಯ ಸಸ್ಯಗಳು  ಮತ್ತು ಕೆಲವು ಧೀರ್ಗಾವಧಿಯ ಮರಮಟ್ಟುಗಳು. ಇದನ್ನು ನಾವು ಗುರುತಿಸಿ ಬೆಳೆಸಿ ಬಳಸಬೇಕು. ಇವು ಮಣ್ಣಿಗೆ ಹೊಸ ಜೀವ ಚೈತನ್ಯವನ್ನು ಕೊಡುತ್ತವೆ. ಬೆಳೆ ಉತ್ತಮವಾಗುತ್ತದೆ. ಬಹಳ ಜನ ತಮ್ಮ ಹೊಲಕ್ಕೆ ಬೇರೆ ಬೇರೆ ಸಾವಯವ ಗೊಬ್ಬರಗಳನ್ನು ಬಳಕೆ ಮಾಡುತ್ತಾರೆ. ಕೆಲವರು ಒಣ ತರೆಗೆಲೆ ಹಾಗೂ ಒಣ ತ್ಯಾಜ್ಯಗಳನ್ನು ಬಳಕೆ ಮಾಡುತ್ತಾರೆ. ಇದರಲ್ಲಿ ಹಾನಿ ಏನೂ ಇಲ್ಲವಾದರೂ…

Read more
ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ ಸಾಧ್ಯತೆ.

ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ  ಸಾಧ್ಯತೆ.

ಅಡಿಕೆ ಮಾರುಕಟ್ಟೆಯಲ್ಲಿ ದರ ಕುಸಿತದ ಸುದ್ದಿ ಹಬ್ಬುತ್ತಿದೆ. ಕೆಂಪಡಿಕೆ  ಕೊಯಿಲು ಪ್ರಾರಂಭವಾಗಿದೆ. ಚಾಲಿ ಅಡಿಕೆ ಮಾಡುವ ಪ್ರದೇಶಗಳಲ್ಲೂ  ಒಂದು ಕೊಯಿಲಿನ ಅಡಿಕೆ  ಹಣ್ಣಾಗಿ ಅಗಿದೆ. ಹೊಸತು ಹಳತಾಗಿದೆ. ಹೊಚ್ಚ ಹೊಸತು ಬರಲಾರಂಭಿಸಿದೆ. ಈ ಮಧ್ಯೆ ಅಡಿಕೆ ಧಾರಣೆ ಏರಿಕೆ ಆಗುವ ಸುಳಿವು ಇಲ್ಲ. ಹೊಸತು ಮಾರುಕಟ್ಟೆಗೆ ಬರುವ ಈ ಸಮಯಕ್ಕೆ  ಹಳೆ ಅಡಿಕೆಗೆ ದರ ಸ್ವಲ್ಪವಾದರೂ ಹೆಚ್ಚಾಗಬೇಕಿತ್ತು. ಆದರೆ  ಹಳೇ (ಡಬ್ಬಲ್) ಅಡಿಕೆಗೆ ಬೇಡಿಕೆಯೇ ಇಲ್ಲದ ಸ್ಥಿತಿ ಉಂಟಾಗಿದೆ. ಎಲ್ಲೋ ಒಂದೆಡೆ ಅಡಿಕೆ ಧಾರಣೆ ಕುಸಿಯುವ ಸುಳಿವು…

Read more
Trichoderma Packet

ಟ್ರೈಕೋಡರ್ಮಾ ಬಳಸುವವರಿಗೆ ಉಪಯುಕ್ತ ಮಾಹಿತಿ.

ರೈತರು ತಮ್ಮ ಬೆಳೆಗಳಿಗೆ ಬರುವ ಶಿಲೀಂದ್ರ ರೋಗಗಳನ್ನು ಧೀರ್ಘಾವಧಿ ತನಕ  ನಿಯಂತ್ರಣಕ್ಕೆ ತರಲು ಟ್ರೈಕೋಡರ್ಮಾ ಬಳಸಬಹುದು.  ಇದು  ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಸಂಶೋಧನಾ ಕೇಂದ್ರ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳಲ್ಲಿ ಲಭ್ಯ ಇರುತ್ತದೆ. ಇತ್ತಿಚೀನ ದಿನಗಳಲ್ಲಿ ಸಾವಯವ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಶಿಲೀಂದ್ರ , ಕೀಟ ನಾಶಕಗಳ  ಬಳಕೆ ಹೆಚ್ಚುತ್ತಿದೆ. ಸಸ್ಯಗಳಲ್ಲಿ ಕಂಡು ಬರುವರೋಗದ ಹತೋಟಿಯನ್ನು ರಾಸಾಯನಿಕ ಶಿಲೀಂಧ್ರನಾಶಕಗಳಿಂದ ಮಾಡುವುದು ಒಂದು. ಆದರೆ ಅದರಲ್ಲಿ  ರಾಸಾಯನಿಕ ಶೇಷ ವಸ್ತುಗಳು ಮಣ್ಣಿನಲ್ಲಿ ಹಾಗೂ ಸಸ್ಯ ಭಾಗಗಳಲ್ಲಿ…

Read more

ಗುಲಾಬಿ ಬೆಳೆದು, ಸಾಪ್ಟ್ ವೇರ್ ಉದ್ಯೋಗದ ಸಂಪಾದನೆ.

ಕೆಲವು ಬೆಳೆಗಳು ನಮಗೆ ಉತ್ತಮ ವರಮಾನ ತಂದು ಕೊಡುತ್ತವೆ. ಸೂಕ್ತ ಮಾರ್ಗದರ್ಶನ ಇಲ್ಲದೆ ನಾವು ಯಾವ್ಯಾವುದೋ ಬೆಳೆಗಳ ಹಿಂದೆ ಹೋಗುತ್ತೇವೆ. ಮಲೆನಾಡಿನಲ್ಲಿ ಏನು ಬೆಳೆ ಬೆಳೆಯಬಹುದು. ಅಡಿಕೆ, ತೆಂಗು, ತಪ್ಪಿದರೆ ಇನ್ನೇನಾದರೂ ವಾರ್ಷಿಕ ಬೆಳೆಗಳನ್ನು ಬೆಳೆಯಬಹುದು ಎಂಬುದು ಎಲ್ಲರ ತಿಳುವಳಿಕೆ. ಆದರೆ ಇಲ್ಲೊಬ್ಬರು ಇದಕ್ಕಿಂತೆಲ್ಲಾ ಭಿನ್ನವಾದ ಪುಷ್ಪ ಬೆಳೆಯನ್ನು ಬೆಳೆದು ಉತ್ತಮ ವರಮಾನ ಪಡೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕಿನ ನಾಡಕಲಸಿ ಊರಿನಲ್ಲಿ ಶ್ರಿಯುತ ಹುಚ್ಚಪ್ಪ ಎಂಬವರೇ ಈ ಚಾಲೆಂಜಿಂಗ್ ಕೃಷಿಕ. ಇವರು ತಮ್ಮ ಇತರ ಬೆಳೆಗಳ…

Read more
border crops to pest attraction

ಕೀಟಗಳ ನಿಯಂತ್ರಣಕ್ಕೆ ಇದು ಸುರಕ್ಷಿತ ವಿಧಾನ.

ಕೀಟನಾಶಕ ಬಳಕೆಯಿಂದ ತಿನ್ನುವವರಿಗಿಂತ ಬಳಸುವವರಿಗೆ ತೊಂದರೆ ಜಾಸ್ತಿ. ಅದ ಕಾರಣ ಸಾಧ್ಯವಾದಷ್ಟು ಅದರ ಬಳಕೆ ಕಡಿಮೆ ಮಾಡಿ.  ಬಲೆ ಬೆಳೆ ಎಂದರೆ ಒಂದು ಬೆಳೆಗೆ ಬರುವ ಕೀಟವನ್ನು ಮತ್ತೊಂದು ಬೆಳೆಯ ಮೂಲಕ ಆಕರ್ಷಿಸುವುದು. ಮತ್ತು ಮುಖ್ಯ ಬೆಳೆಯನ್ನು ರಕ್ಷಿಸುವುದು.ಎಲ್ಲದಕ್ಕೂ ಕೀಟ  ನಾಶಕ ಪರಿಹಾರ ಅಲ್ಲ. ಅದು ಸಮಂಜಸ ಪರಿಹಾರವೂ ಅಲ್ಲ.  ಸುಲಭದಲ್ಲಿ  ಕೊಯ್ಯುವುದು ಸಾಧ್ಯವಿದ್ದರೆ ಅದರಿಂದಲೇ  ಕೊಯಿಲು ಮಾಡಬೇಕು. ಅಲ್ಲಿಗೆ ಕೊಕ್ಕೆ ಬೇಡ. ನಾವು ಈಗ ಕೊಕ್ಕೆ ಅನಿವಾರ್ಯವಾದಂತೆ  ವರ್ತಿಸುತ್ತೇವೆ. ಹುಳ ಬಿದ್ದಿದೆ ಯಾವ ಕೀಟ ನಾಶಕ…

Read more
ಎಲೆ ಹಳದಿಯಾಗುವುದಕ್ಕೆ ಒಂದು ಕಾರಣ ಗಂಧಕದ ಕೊರತೆ.Yellowing of leaves is one of sulphur deficiency symptom

ಗಂಧಕ- ಬೆಳೆಗಳಿಗೆ ಅಗತ್ಯವಾಗಿ ಬೇಕಾಗುವ ಪೋಷಕಾಂಶ.

ಬಹಳ ರೈತರು ತಮ್ಮ ಅಡಿಕೆ ಮರದ ಗರಿಗಳು ಹಳದಿಯಾಗಿವೆ, ಮರದ ಸುಳಿಗಳು ಸಣ್ಣದಾಗುತ್ತಿವೆ. ತೆಂಗಿನ  ಮರದಲ್ಲಿ ಕಾಯಿ ಆಗುತ್ತಿಲ್ಲ. ರಸ ಹೀರುವ ಕೀಟಗಳ ಸಮಸ್ಯೆ ಎಂದೆಲ್ಲಾ  ಹೇಳುತ್ತಾರೆ. ಇದಕ್ಕೆ ಒಂದದು ಕಾರಣ ಗಂಧಕ ಎಂಬ ಅಗತ್ಯ ಪೋಷಕದ ಕೊರತೆ. ಬೆಳೆಗಳಲ್ಲಿ ಎಲೆಗಳು (Chlorosis)ಹಳದಿಯಾಗುವುದು, ಬೇರಿನ ಬೆಳವಣಿಗೆ ಕುಂಠಿತವಾಗುವುದು, ರೋಗ, ಕೀಟಗಳಿಗೆ ಬೇಗ ತುತ್ತಾಗುವುದು ಮುಂತಾದ ಕೆಲವು ಸಮಸ್ಯೆಗಳಿಗೆ  ಗಂಧಕದ ಕೊರತೆಯು ಒಂದು ಕಾರಣ. ಪ್ರತೀಯೊಂದು ಬೆಳೆಯೂ ಗಂಧಕವನ್ನು  ಅಪೇಕ್ಷಿಸುತ್ತದೆ. ರೈತರು ಸಲ್ಫೇಟ್ ರೂಪದ ಗೊಬ್ಬರವನ್ನು ಬೆಳೆಗಳಿಗೆ ಕೊಡುತ್ತಿದ್ದರೆ…

Read more
ಹಸುಗಳು ಹುಲ್ಲು ಆಹಾರ ತಿನ್ನುವುದು

ಹಸುಗಳಿಗೂ ಬರಲಿದೆ ಚಾಕಲೇಟುಗಳು.

ಹೈನುಗಾರಿಕೆ ಮಾಡುವರು ಎದುರಿಸುವ ಕಡಿಮೆ ಹಾಲಿನ ಇಳುವರಿ ಹಾಗೂ ಪೌಷ್ಟಿಕ ಆಹಾರದ ಕೊರೆತೆ ನೀಗಿಸಲು ಈಗ ವಿಜ್ಞಾನಿಗಳು ಚಾಕಲೇಟನ್ನು ಒಂದರ ಸಂಯೋಜನೆಯನ್ನು  ಪರಿಚಯಿಸಿದ್ದಾರೆ. ಇದು ಪ್ರೋಟೀನು , ಶಕ್ತಿ ಎಲ್ಲವನ್ನೂ ಒಳಗೊಂಡಿರುತ್ತದೆ. ಮನುಷ್ಯರು ಚಾಕಲೇಟ್ ತಿಂದರೆ ಶಕ್ತಿ ಹೆಚ್ಚುತ್ತದೆ. ಚಾಕಲೇಟಿನಲ್ಲಿರುವ ಸಕ್ಕರೆ  ಹಾಗೂ ಇನ್ನಿತರ ಶಕ್ತಿ ವರ್ಧಕ  ವಸ್ತುಗಳಿಂದಾಗಿ  ಗಾತ್ರ ಸಣ್ಣದಾದರೂ ಅದರಿಂದ ಲಭ್ಯವಾಗುವ ಶಕ್ತಿ ಹೆಚ್ಚು.  ಅದೇ ತತ್ವದಲ್ಲಿ  ಪಶುಗಳಿಗೂ ಚಾಕಲೇಟು ತಯಾರಿಸಬಹುದಂತೆ. ಈ ಚಾಕಲೇಟುಗಳನ್ನು  ಪಶುಗಳಿಗೆ ತಿನ್ನಿಸಿದರೆ ಅವುಗಳು ಹೆಚ್ಚು ಹಾಲು ಕೊಡಬಲ್ಲವು. ಶಾರೀರಿಕವಾಗಿ…

Read more
ಬಟರ್ ಫ್ರೂಟ್ ಸ್ಥಳೀಯ

ಬಟರ್ ಫ್ರೂಟ್ ಹೇಗೆ ಬೆಳೆದರೆ ಉತ್ತಮ ಇಳುವರಿ ಪಡೆಯಬಹುದು?– ಇಲ್ಲಿದೆ ಮಾಹಿತಿ.

ಒಂದು ಬೆಳೆಗೆ ಹೆಚ್ಚಿನ ಬೆಲೆ, ಬೇಡಿಕೆ ಇದೆ ಎಂದಾಕ್ಷಣ ಎಲ್ಲರೂ ಆ ಬೆಳೆ ಬೆಳೆಸಬೇಕು ಎಂದು ಉತ್ಸುಕರಾಗುತ್ತಾರೆ. ಅದಕ್ಕನುಗುಣವಾಗಿ ಪ್ರಚಾರಗಳೂ ಜನರನ್ನು  ಗೊಂದಲಕ್ಕೀಡು ಮಾಡುತ್ತವೆ. ಸಸ್ಯೋತ್ಪಾದಕರೂ ಹೆಚ್ಚಾಗುತ್ತಾರೆ. ಎಲ್ಲವೂ ಎಷ್ಟು ಉತ್ತಮವೋ ಅಷ್ಟೇ ಅಪಾಯಕಾರಿಯೂ ಅಗಿರುತ್ತದೆ. ಈ ಸಂದರ್ಭದಲ್ಲಿ ರೈತರಿಗೆ ಬಟರ್ ಫ್ರೂಟ್ ಹೇಗೆ ಬೆಳೆದರೆ ಉತ್ತಮ ಇಳುವರಿ ಪಡೆಯಬಹುದು ಎಂಬ ಮಾರ್ಗದರ್ಶನ ಅತ್ಯಗತ್ಯವಾಗಿ ಬೇಕಾಗುತ್ತದೆ. ಯಾವುದೇ ಬೆಳೆ ಇರಲಿ. ಅದನ್ನು ಬೆಳೆಸುವ ಮುಂಚೆ ಅದರ ಪೂರ್ವಾಪರ ವನ್ನು ಕೂಲಂಕುಶವಾಗಿ ತಿಳಿದುಕೊಳ್ಳಬೇಕು. ಆ ಬೆಳೆಯ ಬಗ್ಗೆ ಸ್ಥಳೀಯವಾಗಿ…

Read more
ಹೊಗೆ” ಬೆಳೆ ಸಂರಕ್ಷಣೆ ಪರಿಸರ ಸ್ನೇಹೀ ವಿಧಾನ.

Guarding Fields with Smoke

Smoke spreading (also called smoke fumigation or smoke sanitation) is one of the oldest and most practical field techniques used in plantation crops to reduce pest activity, suppress fungal diseases, and improve carbon dioxide circulation within the crop canopy. Although modern farming relies heavily on chemicals and biologicals, controlled smoke remains an effective, low-cost support…

Read more
error: Content is protected !!