fruit

ಇದು ಆರೋಗ್ಯ ರಕ್ಷಕ ಹಣ್ಣು ಗೊತ್ತೇ?

ದಾರೆ ಹುಳಿ ಎಂದು ಸಾಮಾನ್ಯ ಆಡು ಭಾಷೆಯಲ್ಲಿ ಕರೆಯಲ್ಪಡುವ  ಈ ಹಣ್ಣು ಹುಳಿ ಮತ್ತು ಸಿಹಿ ರುಚಿಯಲ್ಲಿ  ಇರುತ್ತದೆ. ಸಾಮಾನ್ಯವಾಗಿ ಇದನ್ನು ಹಳ್ಳಿಗಳಲ್ಲಿ  ಬೆಳೆಸಿ ಅದನ್ನು ಹುಳಿಯ ಬದಲಿಗೆ  ಉಪಯೋಗ ಮಾಡುತ್ತಾರೆ. ಇದು ಆರೋಗ್ಯಕ್ಕೆ ಉತ್ತಮ ಹಣ್ಣು.  ಬಹಳಷ್ಟು ಔಷಧೀಯ ಗುಣಗಳನ್ನು  ಹೊಂದಿದೆ.ನಾವು ಸಣ್ಣವರಿದ್ದಾಗ ಲಿಂಬೆ ಹುಳಿ ಶರಬತ್ತಿನ ಬದಲು ಇದನ್ನು ಹಿಚುಕಿ ಬೆಲ್ಲ ಹಾಕಿ ಕುಡಿಯುತ್ತಿದ್ದ ನೆನಪು ಈಗಲೂ ಇದೆ. ಸಸ್ಯ ಮೂಲ:  ಕನ್ನಡದಲ್ಲಿ ಇದನ್ನು ಕರಿಮಾದಲ,  ದಾರೆ ಹುಳಿ,  ಕಮ್ರ  ದ್ರಾಕ್ಷಿ,  ಕೊಮರಿಕೆ  ಆಂಗ್ಲ…

Read more
ಹೊಸ ಅಡಿಕೆ ತೋಟ

ಈಗ ಹೊಸ ಅಡಿಕೆ ತೋಟ ಮಾಡಬೇಡಿ- ಹಳೆ ತೋಟ ಚೆನ್ನಾಗಿ ಸಾಕಿ.

ಅಡಿಕೆಗೆ ದರ ಏರಿಕೆಯಾದಾಗ  ರೈತರು ಮಾಡಬೇಕಾಗ ಕೆಲಸ ಇರುವ ತೋಟಕ್ಕೆ ಹೆಚ್ಚು ಆರೈಕೆ ಮಾಡಿ, ಅದರಲ್ಲಿ ಹೆಚ್ಚು ಫಲಪಡೆಯುವುದು ಹೊರತು ಹೊಸ ತೋಟ ಮಾಡುವುದಲ್ಲ. ಅಡಿಕೆ ಬೆಳೆಯುವ ಆಸಕ್ತರಿಗಾಗಿ ಕೊಟ್ಯಾಂತರ ಸಂಖ್ಯೆಯ ಅಡಿಕೆ ಸಸಿಗಳು ಕಾಯುತ್ತಿವೆ. ಅಡಿಕೆ ಬೆಳೆಗಾರರನ್ನು ಗುರಿಯಾಗಿಟ್ಟುಕೊಂಡು  ನಾನಾನಮೂನೆಯ ಗೊಬ್ಬರ ತಯಾರಕರು ರಂಗಕ್ಕೆ ಇಳಿದಿದ್ದಾರೆ. ಬರೇ ಕರ್ನಾಟಕ ಮಾತ್ರವಲ್ಲ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಕೇರಳ, ಆಂದ್ರ ಪ್ರದೇಶಗಳ ರೈತರೂ  ಅಡಿಕೆ ಬೆಳೆಯಲು ಮುಂದಾಗಿದ್ದಾರೆ. ಈ ವರ್ಷದಷ್ಟು ಬಿತ್ತನೆ ಅಡಿಕೆ ಈ ತನಕ ಮಾರಾಟ ಆಗಲಿಲ್ಲ,…

Read more
ಬಳಕೆಗೆ ಸಿದ್ದವಾದ ಸುಡುಮಣ್ಣು – Sudumannu ready to use.

ಸುಡುಮಣ್ಣು – ಇದು ಮಣ್ಣಿನ ಆರೋಗ್ಯ ರಕ್ಷಕ ಡಾಕ್ಟರ್.

ಎಲ್ಲಾ  ತರಹದ ಮಣ್ಣು ಬೆಳೆಗಳಿಗೆ ಸೂಕ್ತವಲ್ಲ. ಕೆಲವು ಮಣ್ಣಿನಲ್ಲಿ ಬೆಳೆಗಳಿಗೆ  ಹಾನಿಕಾರಕ ರೋಗಾಣುಗಳು ಮತ್ತು ಕೀಟದ ಮೊಟ್ಟೆಗಳು ಇರಬಹುದು. ಅಂತಹ ಸಂಶಯ ಇರುವ ಮಣ್ಣನ್ನು ಸ್ವಲ್ಪ ಬಿಸಿ ಪ್ರಕ್ರಿಯೆಗೆ ಒಳಪಡಿಸಿ ಸುಡುಮಣ್ಣಾಗಿ ಪರಿವರ್ತಿಸಿದರೆ,  ಅದು ಪೂರ್ಣ ಸ್ಟೆರಿಲೈಸ್ ಮಾಡಿದ  ಸ್ವಚ್ಚ ಶುದ್ಧ ಮಣ್ಣಾಗುತ್ತದೆ. ಮಣ್ಣನ್ನು ಸ್ವಲ್ಪ ಬಿಸಿ ಮಾಡಿದಾಗ ಅದಕ್ಕೆ ಕರಕಲು ಸಾವಯವ ತ್ಯಾಜ್ಯ ಸೇರಿದಾಗ ಅದು ಸಾವಯವ ಇಂಗಾಲವನ್ನು (Carbon – bio char ) ಹೆಚ್ಚಿಸುವಲ್ಲಿ ಸಹಾಯಕವಾಗುತ್ತದೆ. ಸಾವಯವ ತ್ಯಾಜ್ಯಗಳು ಮಣ್ಣನ್ನು ಜೈವಿಕವಾಗಿ ಶ್ರೀಮಂತಿಕೆಗೆ…

Read more
ತೆಂಗಿನ ಸಸಿಯನ್ನು ಹೀಗೆ ನೆಡುವುದು ಬಹಳ ಉತ್ತಮ.

ತೆಂಗಿನ ಸಸಿಯನ್ನು ಹೀಗೆ ನೆಡುವುದು ಬಹಳ ಉತ್ತಮ.

ತೆಂಗು ಅಗಲಿ , ಅಡಿಕೆ ಅಗಲಿ, ನೆಡುವಾಗ ಅದರ ಬೇರುಗಳು ಚೆನ್ನಾಗಿ ಬೆಳೆಯುವಂತೆ ಅವಕಾಶ ಮಾಡಿಕೊಟ್ಟು ನೆಡಬೇಕು. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವರ್ಗಾವಣೆ ಆಗುವಾಗ ಬೇರುಗಳು ತ್ವರಿತವಾಗಿ ಆ ಮಣ್ಣಿಗೆ ಹೊಂದಿಕೊಳ್ಳಬೇಕು. ಹಾಗೆ ಆಗಬೇಕಾದರೆ ಹೀಗೆ ನೆಡಿ. ತೆಂಗಿನ ಸಸಿಯನ್ನು ನೆಡುವಾಗಲೇ  ಸರಿಯಾಗಿ ನೆಟ್ಟರೆ ಮಾತ್ರ  ತಕ್ಷಣ ಹೊಸ ಎಲೆ ಬಿಡುತ್ತದೆ. ಬೆಳೆಯುತ್ತದೆ ಹಾಗೆಯೇ ಮುಂದೆ ಅದು ಉತ್ತಮ ಇಳುವರಿ ಕೊಡಲು ಸಮರ್ಥವಾಗಿರುತ್ತದೆ. ತೆಂಗಿನ ಮರದ ವಾರ್ಷಿಕ  ಸರಾಸರಿ ಇಳುವರಿ ಎಷ್ಟು ? 50-100 ಕಾಯಿಯೇ. …

Read more
coconut in close dense

ತೆಂಗಿನ ಸಸಿ ನೆಡುವಾಗ ಎಲ್ಲಿ ಯಾವ ಅಂತರ ಸೂಕ್ತ?

ತೆಂಗನ್ನು 30 ಅಡಿ ಅಂತರದಲ್ಲೂ ಬೆಳೆಯಬಹುದು. ಹಾಗೆಯೇ 15 ಅಂತರದಲ್ಲೂ ಬೆಳೆಯಬಹುದು. ಅದು ಸ್ಥಳ ಮತ್ತು ಪರಿಸ್ಥಿತಿ ಯನ್ನು ಹೊಂದಿಕೊಂಡು. ತೆಂಗನ್ನು ಪ್ಲಾಂಟೇಶನ್ ಆಗಿ ಬೆಳೆಯಲಾಗುತ್ತದೆ. ಅದೇ ರೀತಿಯಲ್ಲಿ ಮನೆ ಹಿತ್ತಲ ಗಿಡವಾಗಿಯೂ, ರಸ್ತೆ ದಾರಿ ಮಗ್ಗುಲಿನ ಬೆಳೆಯಾಗಿಯೂ  ಬೆಳೆಯಲಾಗುತ್ತದೆ. ಇದು ಮುಖ್ಯ ಬೆಳೆಯೂ ಹೌದು. ಮಿಶ್ರ ಬೆಳೆಯೂ ಹೌದು. ತೆಂಗನ್ನು  ಬೆಳೆಸುವಾಗ ಎಲ್ಲಿ ಬೆಳೆಯುತ್ತೀರಿ ಅದರ ಮೇಲೆ ಅಂತರವನ್ನು ನಿರ್ಧರಿಸಿಕೊಳ್ಳಬೇಕು. ಪ್ಲಾಂಟೇಶನ್ ಬೆಳೆಯಾಗಿ: ತೆಂಗಿನ ತೋಟ ಮಾಡುತ್ತೀರೆಂದಾದರೆ  ಅಲ್ಲಿ ಪಾಲಿಸಬೇಕಾದ ಅಂತರ ಭಿನ್ನ. ಮರದಿಂದ ಮರಕ್ಕೆ…

Read more
ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ.

ರೈತರ ಮಕ್ಕಳಿಗೆ ಸ್ಕಾಲರ್ಶಿಪ್ ನೂತನ ಮುಖ್ಯ ಮಂತ್ರಿಗಳ ಕೊಡುಗೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರೇ  ರೈತರಿಗೆ ಕೊಡುವುದರಲ್ಲಿ ಎತ್ತಿದ  ಕೈಯಾದರೆ ಈಗಿನ ಹೊಸ ಮುಖ್ಯಮಂತ್ರಿಗಳಾಗಿ ಅಧಿಕಾರ  ಸ್ವೀಕರಿಸಿದ  ಬಸವರಾಜ ಬೊಮ್ಮಾಯಿಯವರೂ ಅವರಿಗಿಂತ ಏನೂ ಕಡಿಮೆ ಇಲ್ಲ. ಇಂದು (28-07-2021) ರಂದು ಕರ್ನಾಟಕದ ಮುಖ್ಯಮಂತ್ರಿ  ಸ್ಥಾನವನ್ನೇರಿದ  ಶ್ರೀ ಬಸವರಾಜ್ ಬೊಮ್ಮಾಯಿಯವರು  ರೈತರಿಗೆ ಏನು ಕೊಡುವುದು ಎಂದು ಯೋಚಿಸಿ ಹೊಸತಾಗಿ ಯಾರೂ ಕೊಡದೆ ಇರುವ ಹೊಸ ಯೋಜನೆಗೆ ಚಾಲನೆ ನೀಡಿದ್ದಾರೆ. ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ರೂ.1000 ಕೋಟಿಯನ್ನು  ಮಿಸಲಿಟ್ಟು ಹೊಸ ದಾಖಲೆ ಮಾಡಿದ್ದಾರೆ. ಶ್ರೀಯುತ  ಎಸ್…

Read more
Well managed areca garden

ಅಡಿಕೆಮರಗಳಿಗೆ ಈಗ ಯಾಕೆ, ಮತ್ತು ಯಾವ ಗೊಬ್ಬರ ಹಾಕಬೇಕು?

ಅಡಿಕೆ ಮರಗಳಿಗೆ ಮುಂಗಾರು ಪೂರ್ವದಲ್ಲಿ ಗೊಬ್ಬರ ಹಾಕಿದರೆ ಅದರ ಫಲಿತಾಂಶ ಅಪಾರ. ಮುಂಗಾರು ಪೂರ್ವದಲ್ಲಿ ಗೊಬ್ಬರ  ಹಾಕಲು ಮಿಸ್ ಮಾಡಿಕೊಳ್ಳಬೇಡಿ. ಇದರಿಂದ ಮುಂದಿನ ವರ್ಷದ ಬೆಳೆಗೆ ತೊಂದರೆ ಆಗುತ್ತದೆ. ಬೇಸಿಗೆ ಕಾಲ ಕಳೆದು ಮಳೆಗಾಲ ಪ್ರಾರಂಭವಾಗುವ ಈ ಸಮಯದಲ್ಲಿ  ಋತುಮಾನದ ಬದಲಾವಣೆ ಉಂಟಾಗುತ್ತದೆ. ಆಗ ಸಸ್ಯಗಳ ಬೆಳೆವಣಿಗೆಯಲ್ಲಿ ಒಂದು ಬದಲಾವಣೆಯೂ ಆಗುತ್ತದೆ. ಈ ಸಮಯದಲ್ಲಿ ಎಲ್ಲಾ ಸಸ್ಯಗಳಲ್ಲೂ  ಬೇರಿನ ಬೆಳವಣಿಗೆ, ಹೊಸ ಬೇರು ಮೂಡುವುದು, ಸಸ್ಯದ ಎಲೆಗಳು ಹೆಚ್ಚು ಚಟುವಟಿಕೆಯಲ್ಲಿ ಇರುತ್ತವೆ. ಬೇಸಿಗೆಯಲ್ಲಿ ಭಾಗಶಃ ಒಣಗಿದ್ದರೂ ಸಹ…

Read more
ಮೆಣಸಿನ ಬಳ್ಳಿಯ ವಿಹಂಗಮ ನೊಟ

ವಿಯೆಟ್ನಾಂ ಮೀರಿಸುವ ಕರಿಮೆಣಸು ಬೆಳೆಗಾರರು ಇವರು.

ವಿಯೆಟ್ನಾಂ ದೇಶದಲ್ಲಿ ಕರಿಮೆಣಸು, ಗೋಡಂಬಿ ಬೆಳೆಯನ್ನು ತೀರಾ ವಾಣಿಜ್ಯಿಕವಾಗಿ ಬೆಳೆದು ಗರಿಷ್ಟ ಇಳುವರಿ ಪಡೆಯುತ್ತಾರಂತೆ.  ಅಲ್ಲಿರುವ  ಎಲ್ಲಾ ಅನುಕೂಲಗಳು ನಮಲ್ಲೂ ಇದ್ದಿದ್ದರೆ  ನಮ್ಮ ರೈತರೂ ಅವರನ್ನು ಮೀರಿಸುತ್ತಿದ್ದರು. ಆದರೂ ನಮ್ಮ ರೈತರು ಹಿಂದೆ ಬಿದ್ದಿಲ್ಲ. ಅಂದು -ಇಂದು: ಹಿಂದೆ ನಮಗೆ ನಮ್ಮ ಊರು, ಹೆಚ್ಚೆಂದರೆ ರಾಜ್ಯ , ಹೊರಗಡೆಯ ಪರಿಚಯ ಇರಲಿಲ್ಲ. ಹೆಚ್ಚೇಕೆ ಬೆಂಗಳೂರಿಗೆ ಹೋಗಿ  ಎನಾದರೂ ತಿಳಿದುಕೊಳ್ಳುವುದೂ ಸಹ ಕಷ್ಟವಿತ್ತು. ಸ್ಥಳೀಯ  ಬೆಳೆ ಮಾಹಿತಿಗಳಲ್ಲೇ ಕೃಷಿ ಮಾಡುತ್ತಿದ್ದೆವು. ಕೃಷಿ ವಿಜ್ಞಾನ, ತಂತ್ರಜ್ಞಾನಗಳು ಇದ್ದವಾದರೂ ಅದನ್ನು ಪಡೆದುಕೊಳ್ಳಲು…

Read more
root puller

ಕಳೆ ಗಿಡಗಳನ್ನು ಬೇರು ಸಮೇತ ತೆಗೆಯಬಹುದಾದ ಸಾಧನ.

    ಕೃಷಿ ಹೊಲದಲ್ಲಿ ಯಾವಾಗಲೂ ಕಳೆ ಸಸ್ಯಗಳು ಸಹಜವಾಗಿ ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಬೆಳೆದಂತೆ ಅದನ್ನು ಬೇರು ಸಹಿತ ತೆಗೆಯಲು ಸಾಧ್ಯವಾಗುವುದಿಲ್ಲ. ಅಂಥಹ ಕಳೆ ಸಸ್ಯಗಳನ್ನು ಬೇರು ಸಹಿತ ಯಾವ ಶ್ರಮದ ಅಗತ್ಯವೂ ಇಲ್ಲದೆ ತೆಗೆಯಬಹುದಾದ ಸಾಧನವನ್ನು  ಸಾಗರದ ಹೆಗಡೆ ಡೈನಾಮಿಕ್ಸ್ ಪ್ರೈ ಲಿಮಿಟೆಡ್ ಇವರು ಅಭಿವೃದ್ಧಿಪಡಿಸಿದ್ದಾರೆ. ಕೆಲವು ಸಾಧಾರಣ ಗಾತ್ರದ ಗಿಡಗಳನ್ನು ಕೀಳಲು ಹಾರೆ, ಗುದ್ದಲಿ ಮುಂತಾದ ಸಾಧನಗಳು ಬೇಕಾಗಿಲ್ಲ. ಇವುಗಳಿಂದ ಕೀಳಿಸುವ ಶ್ರಮಕ್ಕಿಂತ ತುಂಬಾ ಕಡಿಮೆ ಶ್ರಮದಲ್ಲಿ ಯುಕ್ತಿ ಆಧಾರಿತ ಸಾಧನದಲ್ಲಿ ಅದನ್ನ್ನು ತೆಗೆಯಬಹುದು. ಮುಖ್ಯವಾಗಿ…

Read more
error: Content is protected !!