ಸಾವಯವ ಇಂಗಾಲ- ಇದು ಇದ್ದರೆ ಮಣ್ಣಿಗೆ ಬೇರೆ ಹೆಚ್ಚೇನೂ ಬೇಡ.

ಮಣ್ಣು ವಿಜ್ಞಾನಿಗಳು ಮಣ್ಣು ನೋಡಿ ಮೊದಲು ಹೇಳುವುದು ಈ ಮಣ್ಣಿನಲ್ಲಿ ಸಾವಯವ ಇಂಗಾಲ ಎಷ್ಟು ಇದೆ ಎಂಬುದನ್ನು. ಇದನ್ನು ಅನುಸರಿಸಿ ನಂತರದ ಸಲಹೆಗಳು. ಮಣ್ಣು ಯಾವ ಪೋಷಕಾಂಶ  ಹಾಕಿದರೂ ಅದು ಸಸ್ಯ ಸ್ವೀಕರಿಸಬೇಕಾದರೆ ಆದರಲ್ಲಿ ಇಂಗಾಲದ ಅಂಶ ಹೆಚ್ಚಿನ ಪ್ರಮಾಣದಲ್ಲಿ  ಇರಬೇಕು. ಈಗ ನಮ್ಮ ಸುತ್ತಮುತ್ತ ಮಾರಾಟವಾಗುತ್ತಿರುವ ವಿವಿಧ ಹೆಸರಿನ ಜೈವಿಕ ಗೊಬ್ಬರಗಳೂ ಕೆಲಸ ಮಾಡಿ ನಮಗೆ ತೃಪ್ತಿಕರ ಫಲಿತಾಂಶ ಕೊಡಬೇಕಿದ್ದರೆ ಮಣ್ಣಿನಲ್ಲಿ  ಕಾರ್ಬನ್ ( ಇಂಗಾಲ) ಅಂಶ ಹೇರಳವಾಗಿ ಇರಬೇಕು. ಹೀಗಿರುವಾಗ ನಾವು ಗೊಬ್ಬರ ಹಾಕುವುದಕ್ಕಿಂತ…

Read more
good yielded plant

ಬೀಜಕ್ಕಾಗಿ ಅಡಿಕೆ ಹಣ್ಣು ( ಗೋಟು) ಅಯ್ಕೆ ಮಾಡುವ ಸೂಕ್ತ ವಿಧಾನ.

ಈಗ ಎಲ್ಲರೂ ಬೀಜಕ್ಕಾಗಿ ಅಡಿಕೆ ಹಣ್ಣು ( ಗೋಟು) ಅಯ್ಕೆ ಮಾಡುವ (ಬೀಜದ ಅಡಿಕೆ) ಅವಸರದಲ್ಲಿದ್ದಾರೆ. ಉತ್ತಮ ಇಳುವರಿ ಕೊಡುವ ತಳಿ ಬೇಕು ಎಂಬುದು ಎಲ್ಲರ ಆಕಾಂಕ್ಷೆ . ಬೀಜದ ಅಡಿಕೆ ಹುಡುಕಾಟದ ಭರದಲ್ಲಿ ತಮ್ಮ ಕಾಲ ಬುಡದಲ್ಲೇ ಇರುವ  ಉತ್ಕೃಷ್ಟ ತಳಿಯ ಅಡಿಕೆಯನ್ನು ಗಮನಿಸುವುದೇ ಇಲ್ಲ.  ನಿಜವಾಗಿ ಹೇಳಬೇಕೆಂದರೆ ಅವರವರ ಹೊಲದಲ್ಲಿ  ಅಥವಾ ಅವರ ಸುತ್ತಮುತ್ತಲಿನ ಪ್ರದೇಶದಲ್ಲಿ ಇರುವ ತಳಿಗಳೇ  ಉತ್ಕೃಷ್ಟ ತಳಿಯಾಗಿರುತ್ತದೆ. ಯಾವುದೇ ಬೆಳೆಯಲ್ಲಿ ಬೀಜದ ಆಯ್ಕೆ ಎಂಬುದು ಪ್ರಾಮುಖ್ಯ ಘಟ್ಟ. ಬೀಜದ ಗುಣದಲ್ಲೇ…

Read more
ಅಡಿಕೆ ಬೆಳೆಯಲ್ಲಿ ಹೆಚ್ಚಳವಾಗುತ್ತಿರುವ ಸಮಸ್ಯೆ

ಅಡಿಕೆ ಬೆಳೆಯಲ್ಲಿ ಈ ಸಮಸ್ಯೆ ಬಾರೀ ಹೆಚ್ಚಳವಾಗಲು ಕಾರಣ.

ಇತ್ತೀಚೆಗೆ ಬಹುತೇಕ ಎಲ್ಲಾ ಅಡಿಕೆ ಬೆಳೆಗಾರರಲ್ಲೂ ಈ ಸಮಸ್ಯೆ ಹೆಚ್ಚಾಗುತ್ತಿದೆ. ಎಲ್ಲರೂ ಇದಕ್ಕೆ ಏನು ಪರಿಹಾರ ಎಂದು ಕೇಳುವವರು. ಆದರೆ ಯಾಕಾಗಿ ಈ  ಸಮಸ್ಯೆ ಹೆಚ್ಚಾಯಿತು ಎಂದು ಯಾರೂ ಹೇಳುತ್ತಿಲ್ಲ.ಇದು ಹೊಸ ಸಮಸ್ಯೆ ಅಲ್ಲ. ಅಡಿಕೆ ಬೆಳೆ ಪ್ರಾರಂಭವಾದಾಗಿನಿಂದಲೂ ಇದ್ದುದೇ. ಆದರೆ ಈಗ ಅದು ಮಿತಿ ಮೀರಿ ಹೆಚ್ಚಳವಾಗುತ್ತಿದೆ.ಎಲ್ಲಾ ಕಡೆಯಲ್ಲೂ ಇದು ಅಡಿಕೆ ಬೆಳೆಯನ್ನು ಪೀಡಿಸುತ್ತಿದೆ. ಅಡಿಕೆ ಮರ/ ಸಸಿಗಳ ಎಲೆಯನ್ನು ಹಾಳು ಮಾಡುವ ಒಂದು ರೀತಿಯ ತಿಗಣೆ ಇತ್ತೀಚಿನ ವರ್ಷಗಳಲ್ಲಿ  ಭಾರೀ ಸಮಸ್ಯೆ ಉಂಟು ಮಾಡುತ್ತಿದೆ….

Read more
ಅಡಿಕೆ ಬೇಯಿಸಿದ ರಾಸಿ

ಅಡಿಕೆಗೆ 2022 ಕ್ಕೆ ದಾಖಲೆಯ ಬೆಲೆ ಬರಲಿದೆ -ಅಡಿಕೆ ಧಾರಣೆ ದಿನಾಂಕ.16-12-2021.

ಹೊಸ ವರ್ಷ 2022 ಕ್ಕೆ ಅಡಿಕೆ ಧಾರಣೆ ಐತಿಹಾಸಿಕ ದಾಖಲೆಯನ್ನು ನಿರ್ಮಿಸುತ್ತದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಈಗಾಗಲೇ ಹೊಸ ಚಾಲಿಗೆ ರೂ.465 ದಾಟಿದೆ. ಹಳೆ ಚಾಲಿ 540-545 ಕ್ಕೆ ಮುಟ್ಟಿದೆ. ಕೆಂಪು ರಾಶಿ ಸರಾಸರಿ 47,000 ದ ಗಡಿ ದಾಟಿದೆ. ಈ ವರ್ಷದ ಕೊನೆ ಒಳಗೆ ಹೊಸ ಚಾಲಿ ದರ  47500 ದಾಟುವ ಎಲ್ಲಾ ಸಾಧ್ಯತೆಗಳಿದ್ದು, ಹಳೆ ಚಾಲಿ 55,000 ಮುಟ್ಟುವ ನಿರೀಕ್ಷೆ ಇದೆ. ಹೊಸ ವರ್ಷದಲ್ಲಿ ಕೆಂಪಡಿಕೆ ದರ ಮೇಲೇರಲಿದೆ. ಚಾಲಿಯೂ 50000 ಗಡಿ…

Read more
ಕೆಂಪು ಅಡಿಕೆ ಧಾರಣೆ

ಡಿಸೆಂಬರ್ ಎರಡನೇ ಶುಕ್ರವಾರ-10-12-2021.ಅಡಿಕೆ ಧಾರಣೆ.

ಅಡಿಕೆ ಬೆಳೆಗಾರರು  ಹೆಚ್ಚಾಗಿ  ವಾರದ ಮೊದಲ ದಿನ ಸೋಮವಾರದ ಧಾರಣೆ ಹೇಗಿರುತ್ತದೆ ಮತ್ತೆ ಶುಕ್ರವಾರದ ಧಾರಣೆ ಹೇಗಿರುತ್ತದೆ ಎಂದು ಗಮನಿಸಿ ಏರಿಳಿತವನ್ನು ಲೆಕ್ಕಾಚಾರ ಹಾಕುತ್ತಾರೆ. ಸೋಮವಾರ ಏರಿಕೆಯಾದರೆ ಇಡೀ ವಾರ  ಹಾಗೆಯೇ ಮುಂದುವರಿಯುತ್ತದೆ. ಶುಕ್ರವಾರದ ದರ ಮುಂದಿನ ವಾರದ ದರವನ್ನು ಅಂದಾಜು ಮಾಡಲು ಸಹಾಯಕ. ಇಂದು ದಿನಾಂಕ 10-12-2021 ಶುಕ್ರವಾರ ದರ ಇಳಿಕೆಯಾಗದೆ ಸ್ವಲ್ಪ ಏರಿಕೆಯೇ ಆದ ಕಾರಣ ಮುಂದಿನ ವಾರವೂ ಹೀಗೆ ಮುಂದುವರಿಯಬಹುದು, ಇಂದು ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಚಾಲಿ ಹೊಸತು 43,500-45200 ತನಕ, ಹಳೆ…

Read more
ಗೋಬರ್ ಗ್ಯಾಸ್ ಸ್ಥಾವರ

ಗೋಬರ್ ಗ್ಯಾಸ್ ಸ್ಲರಿಯಲ್ಲಿ ಸತ್ವ ಇದೆ.

ಸಗಣಿಯನ್ನು ಹಾಗೆಯೇ ಬೆಳೆಗಳಿಗೆ ಹಾಕುವುದಕ್ಕಿಂತ ಅದನ್ನು ದ್ರವೀಕರಿಸಿ ಕೊಡುವುದರಿಂದ ಅದರ ಪೂರ್ಣ ಸತ್ವಗಳು  ಬೆಳೆಗಳಿಗೆ  ದೊರೆಯುತ್ತದೆ. ಅನಿಲ ಉತ್ಪಾದನೆ ಅಗುವಾಗ ಸಗಣಿಯ ಸಾರ ಕಡಿಮೆಯಾಗುತ್ತದೆ ಎಂಬುದು ನಿಜವಲ್ಲ. ಅನಿಲ ಉತ್ಪಾದನೆಗೆ ಬೇಕಾಗುವ ಅಂಶವೇ ಬೇರೆ. ಬೆಳೆಗಳಿಗೆ ಬೇಕಾಗುವುವಂತದ್ದು ಅದರಲ್ಲೇ ಉಳಿಯುತ್ತದೆ.ಪ್ರತೀಯೊಬ್ಬ ಗೋಬರ್ ಗ್ಯಾಸ್ ಸ್ಲರಿ ಬಳಕೆದಾರ ತಿಳಿಯಬೇಕಾದ  ಮಾಹಿತಿ ಇಲ್ಲಿದೆ. ಹಳ್ಳಿಯಲ್ಲಿ ಕೃಷಿಕರ ಮನೆಯಲ್ಲಿ ಬಯೋಗ್ಯಾಸ್ ಅಥವಾ ಗೋಬರ್ ಗ್ಯಾಸ್ ಇದ್ದರೆ ಸಿದ್ದ ಗೊಬ್ಬರ ಇದ್ದಂತೆ. ಒಂದೆರಡು ದನ ಇದ್ದವರೂ ಗೋಬರ್ ಗ್ಯಾಸ್ ಮಾಡಿಕೊಳ್ಳಬಹುದು. ಹೆಚ್ಚು ದನ…

Read more
ಕೆಂಪಡಿಕೆ ರಾಸೀ ಶ್ರಿಂಗೇರಿ

ಕೆಂಪಡಿಕೆ- ಸುಪಾರಿ ಎರಡೂ ಏರಿಕೆ- ಸೋಮವಾರ 06-12-2021 ರ ಧಾರಣೆ.

ಕರಾವಳಿಯಲ್ಲಿ ಅಡಿಕೆ ಖರೀದಿಯ ಪ್ರಮುಖ ಸಂಸ್ಥೆ ಕ್ಯಾಂಪ್ಕೋ ಇಂದು ಹಳೆ ಸುಪಾರಿ, ಡಬ್ಬಲ್ ಚೋಲ್ ಗಳಿಗೆ ಏಕಾಏಕಿ 10 ರೂ. ಏರಿಸಿ ಅಡಿಕೆ ಮಾರುಕಟ್ಟೆಯಲ್ಲಿ ಸಂಚಲನವನ್ನು ಉಂಟುಮಾಡಿದೆ.  ಖಾಸಗಿಯವರು ನಾವೂ ಸ್ಪರ್ಧೆಗೆ ಸಿದ್ದರಿದ್ದೇವೆ ಎಂದು ತೋರಿಸಿದ್ದಾರೆ. ಕ್ಯಾಂಪ್ಕೋ ಹೊಸ ಸುಪಾರಿ ಕ್ವಿಂಟಾಲಿಗೆ 43,500, ಖಾಸಗಿ 45,000, ಹಳೆ ಅಡಿಕೆ ಕ್ಯಾಂಪ್ಕೋ 42,500- ಡಬ್ಬಲ್ ಚೋಲ್ 43,000 ಖಾಸಗಿ 54,000 ದರದಲ್ಲಿ ಖರೀದಿ ನಡೆದಿದೆ. ಶಿರಸಿಯಲ್ಲಿ ಕೆಂಪಡಿಕೆ (ರಾಶಿ) ಮತ್ತೆ ಬೆಲೆ ಏರಿಕೆಯಾಗಿದೆ. ಬಹುಷಃ ಈ ವಾರ ಮತ್ತೆ…

Read more
ಬಟರ್ ಪ್ರೂಟ್ ಕಾಂಡ ಕೊರಕ ದುಂಬಿ ಕೊರೆದ ಭಾಗ

ಬಟರ್ ಫ್ರೂಟ್ ಮರಗಳು ಸಾಯುವುದಕ್ಕೆ ಕಾರಣ ಮತ್ತು ಪರಿಹಾರ.

ಬಟರ್ ಫ್ರೂಟ್ ಬೆಳೆ ಈಗ ಎಲ್ಲೆಂದರಲ್ಲಿ ಭಾರೀ ಪ್ರಮಾಣದಲ್ಲಿ ಬೆಳೆಯುತ್ತಿರುವ ಬೆಳೆಯಾಗಿದ್ದು, ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೂ ಈ ಬೆಳೆಯ ಬಗ್ಗೆ ಜನ ಉತ್ಸುಕರಾಗಿದ್ದಾರೆ. ಬಹಳಷ್ಟು ಜನ  ಬೆಳೆ ಬೆಳೆಯಲು ಮುಂದಾಗಿದ್ದಾರೆ. ಆದರೆ ಬಹಳಷ್ಟು ಜನ ಬೆಳೆಸಿದ ಸಸಿ/ ಫಲ ಕೊಡುತ್ತಿರುವ  ಮರ ಕಾಣು ಕಾಣುತ್ತಿದ್ದಂತೆ  ಸಾಯುತ್ತಿವೆ.  ಮರಗಳು ಸಾಯುವುದಕ್ಕೆ ಕಾರಣ ಕಾಂಡ ಕೊರಕ ಕೀಟ. ಇದನ್ನು ನಿಯಂತ್ರಿಸದೆ ಇದ್ದರೆ ಆಕಾಂಕ್ಷೆಯಲ್ಲಿ ಬೆಳೆದ ಬೆಳೆ ನಾಶವಾಗುತ್ತದೆ. ಇದರ ನಿಯಂತ್ರಣ ವಿಧಾನ ಹೀಗೆ. ಬಟರ್ ಫ್ರೂಟ್ (Avocado) ಸಸ್ಯ ಸ್ವಲ್ಪ…

Read more
ಬಿಲಿ ಚಾಲಿ ಸುಪಾರಿ ಅಡಿಕೆ

ಶುಕ್ರವಾರದ ಅಡಿಕೆ ಧಾರಣೆ-ದಿನಾಂಕ 03-12-2021

ಅಡಿಕೆ ಬೆಳೆಗಾರರಿಗೆ 2021 ವರ್ಷ ಅಂತಹ ನಿರಾಸೆಯನ್ನೆನೂ ಮಾಡಲಿಲ್ಲ.  ವರ್ಷದ ಹೆಚ್ಚಿನ ಸಮಯದಲ್ಲಿ ಉತ್ತಮ ಬೆಲೆ ಇತ್ತು.  ಕಳೆದ ವರ್ಷ ಮತ್ತು ಈ ವರ್ಷ ಅಡಿಕೆಗೆ ಬೇಡಿಕೆ ಎಷ್ಟು ಇದೆ ಎಂಬುದರ ಪೂರ್ಣ ಚಿತ್ರಣ ಸಿಕ್ಕಿದೆ. ಆಮದು ಮಾಡುತ್ತಾ ದೇಶದ ಅಡಿಕೆ ಬೆಳೆಗಾರರ ಮೇಲೆ ಕಲ್ಲು ಹೊತ್ತು ಹಾಕುತ್ತಾ ಈ ತನಕ ನಮ್ಮನ್ನು ಮೋಸವೇ ಮಾಡಲಾಗಿತ್ತು. ಇದೆಲ್ಲವೂ ಈಗ ಜನತೆಗೆ ಗೊತ್ತಾಗಿದೆ. ವರ್ಷದ ಕೊನೆ ತಿಂಗಳು, ಮೊದಲ ವಾರ ಶುಕ್ರವಾರ ಅಡಿಕೆ ಬೆಳೆಗಾರರ ಪಾಲಿಗೆ ಉತ್ತಮ ಧಾರಣೆ…

Read more
ರೈತರ ಹೊರಾಟ- PTI image

ರೈತ ಹೋರಾಟದಲ್ಲಿ ಸತ್ತವರಿಗೆ ಪರಿಹಾರವೇ ಇಲ್ಲವಂತೆ.

ಕೇಂದ್ರದ ಕೃಷಿ ಕಾಯಿದೆಯ ವಿರುದ್ದ ಹಗಲು ರಾತ್ರೆ ಎನ್ನದೆ  ಒಂದು ವರ್ಷಕ್ಕೂ ಹೆಚ್ಚಿನ ಕಾಲ ಧರಣಿ ಪ್ರತಿಭಟನೆ ಮಾಡಿದ ರೈತರ ಪೈಕಿಯಲ್ಲಿ ಸುಮಾರು 700 ಮಂದಿ ಸತ್ತಿದ್ದಾರೆ ಎಂಬುದಾಗಿ ಸುದ್ದಿಗಳಿತ್ತು. ಸತ್ತವರಿಗೆ ಪರಿಹಾರ ಕೊಡಬೇಕು ಎಂಬುದಾಗಿ ವಿರೋಧ ಪಕ್ಷಗಳು ಬೊಬ್ಬಿಟ್ಟರೂ ಪ್ರಯೋಜನ ಆಗಲಿಲ್ಲ. ಸತ್ತವರು ಬೀದಿ ನಾಯಿ ಸತ್ತಂತೆ ಆಯಿತಲ್ಲಾ ದುರ್ಗತಿ! ಈ ತನಕ ಭಾರತದ ಇತಿಹಾಸದಲ್ಲೇ ನಡೆದಿರದ ಸುಧೀರ್ಘ ರೈತ ಹೋರಾಟ ಜಯವನ್ನೇನೋ ಪಡೆಯಿತು. ಆದರೆ ರೈತರೆಂದು ಹೋರಾಟದಲ್ಲಿ ಭಾಗವಹಿಸಿದವರು ಸತ್ತರೆ ಅವರ ದಾಖಲೆಯೇ ಇಲ್ಲವೆಂದರೆ…

Read more
error: Content is protected !!