ಇವರಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗಿಲ್ಲ

ಬೇಸಿಗೆಯಲ್ಲಿ ನೀರಿನ ಕೊರತೆಗೆ ಪರಿಹಾರ ಕಂಡುಕೊಂಡ ಕೃಷಿಕ.

ಬೇಸಿಗೆಯ ಕಾಲದಲ್ಲಿ ಎಲ್ಲರೂ ನೀರಿನ ಕೊರತೆ ಅನುಭವಿಸುತ್ತಾರೆ. ಆದರೆ ಇಲ್ಲೊಬ್ಬರು ರೈತರು ಮಳೆಗಾಲದಲ್ಲಿ ಮಳೆ ನೀರನ್ನು  ಒಂದೆಡೆ ಕೂಡಿಹಾಕಿದ್ದಾರೆ. ಅದನ್ನು ಮಣ್ಣು ಸ್ಪಂಜಿನಂತೆ ಹೀರಿಕೊಂಡು ಬೇಸಿಗೆಯ ಸಮಯದುದ್ದಕ್ಕೂ ತಗ್ಗು ಪ್ರದೇಶಕ್ಕೆ ಬಿಡುಗಡೆ ಮಾಡುತ್ತದೆ. ಹಾಗಾಗಿ ಇವರಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗಿಲ್ಲ. ಬೇಸಿಗೆಯಲ್ಲಿ  ಎಲ್ಲಾ ಕೃಷಿಕರಿಗೂ ನೀರಿನದ್ದೇ ಸಮಸ್ಯೆ. ಬೆಳೆಗಳು ನೀರನ್ನು ಹೆಚ್ಚು ಅಪೇಕ್ಷಿಸುತ್ತವೆ. ಮಣ್ಣು ಹೆಚ್ಚು ನೀರು ಕುಡಿಯುತ್ತದೆ. ಆದರೆ ಮೂಲಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುತ್ತದೆ. ಕೊಳವೆ ಬಾವಿಗಳೂ ಸಹ  ಕೈಕೊಡುವುದು ಇದೇ ಸಮಯದಲ್ಲಿ. ಇದಕ್ಕೆ…

Read more
tender arecanut

ಅಡಿಕೆ ಬೆಳೆಗಾರರಿಗೆ ವರ – ಅಡಿಕೆ ಮಿಲ್.

ಅಡಿಕೆ ಬೆಳೆಯಲ್ಲಿ ಎಲ್ಲಾ ಕಡೆ ಒಂದೇ ಸಮಯದಲ್ಲಿ ಅಡಿಕೆ ಕೊಯಿಲು ಆದಾಗ ಸುಲಿಯುವ ಕೆಲಸ ದೊಡ್ಡ ಕಷ್ಟ. ಜನ ಸಿಗುವುದಿಲ್ಲ. ಆ ಸಮಯದಲ್ಲಿ ಒಮ್ಮೆಗೇ ಟನ್ ಗಟ್ಟಲೆ ಅಡಿಕೆ ಸಿಪ್ಪೆ ತೆಗೆಯುವ ವ್ಯವಸ್ಥೆ ಎಂದರೆ ಅಡಿಕೆ ಮಿಲ್ ಗಳು. ಇದು ಬಾಡಿಗೆಯ ಆಧಾರದಲ್ಲಿ ಕೆಲಸ ಮಾಡಿ ಬೆಳೆಗಾರರಿಗೆ ತುಂಬಾ ಸಹಕಾರಿಯಾಗುತ್ತದೆ. ಭತ್ತವನ್ನು ಗದ್ದೆಯಿಂದ ಕೊಯಿಲು ಮಾಡಿ ಮಿಲ್ ಗೆ ಒಯ್ದರೆ ಅಲ್ಲಿ ಅದನ್ನು ಅಕ್ಕಿ ಮಾಡಿಕೊಡುವಂತೆ, ಅಡಿಕೆಗೂ ಇಂತಹ  ಒಂದು ವ್ಯವಸ್ಥೆ ಬಂದಿದೆ. ಈ ಯಾಂತ್ರಿಕ ವ್ಯವಸ್ಥೆಯಲ್ಲಿ…

Read more
flood in channel

ಅಕಾಲಿಕ ಮಳೆ- ಮುಂದಿನ ತೊಂದರೆಗಳು ಮತ್ತು ಮುಂಜಾಗ್ರತೆ.

ಯಾರೂ ಗ್ರಹಿಸಿರದ ಈ ಸಮಯದಲ್ಲಿ ಮಳೆಯಾಗಿದೆ. ರೈತರಿಗೆ ಬಹಳ ತೊಂದರೆ ಆಗಿದೆ. ಕರ್ನಾಟಕದಲ್ಲಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಲ್ಲೆಲ್ಲಾ ಅಕಾಲಿಕ ಮಳೆಯಾಗುತ್ತಿದೆ.ಬರೇ ಕರ್ನಾಟಕ ಮಾತ್ರವಲ್ಲ  ಮಹಾರಾಷ್ಟ್ರ, ತಮಿಳುನಾಡು, ಕೇರಳ, ಮುಂತಾದ ರಾಜ್ಯಗಳಲ್ಲಿಯೂ ಮಳೆ ಸುರಿಯುತ್ತಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಇದಕ್ಕೆ ಕಾರಣವಾಗಿದ್ದು, ಈ ಮಳೆ ಇನ್ನೂ ಮುಂದಿನ 3 ದಿನಗಳ ತನಕ ವೂ ಮುಂದುವರಿದು ಪ್ರಮಾಣ ಹೆಚ್ಚಾಗಲಿದೆ. The weather is expected to remain more or less the same for…

Read more
water over flow

ಬೋರ್ ವೆಲ್ ಗೆ ನೀರು ಹುಡುಕುವಲ್ಲಿ ಇವರದ್ದೇ ಮೇಲುಗೈ

ಇವರು ಭೂ ವಿಜ್ಞಾನ ಅಧ್ಯಯನ ಮಾಡಿದವರಲ್ಲ. ಆದರೆ ಇವರಿಗೆ ಭೂ ಗರ್ಭದಲ್ಲಿರುವ ಜಲ ಶೋಧನೆ ಕಲೆ ಗೊತ್ತಿದೆ. ಪ್ರಪಂಚದಾದ್ಯಂತ ಭೂ ಗರ್ಭ ಜಲ ಶೊಧನೆಯಲ್ಲಿ ಇವರದ್ದೇ ಮೇಲುಗೈ. ವಿಜ್ಞಾನ ಒಪ್ಪದಿದ್ದ ಪಾರಂಪರಿಕ ಜಲ ಶೋಧನಾ ವಿದ್ಯೆಯನ್ನು ಸಮಾಜ ಒಪ್ಪಿದೆ ಮತ್ತು ಗೌರವಿಸಿದೆ. ಅನಾದಿ ಕಾಲದಿಂದಲೂ ನೀರಿನ ಶೋಧನೆ ಎಂಬುದು ಕೆಲವು ಸಾಂಪ್ರದಾಯಿಕ ವಿಧಾನಗಳ ಮೂಲಕ ನಡೆಯುತ್ತಾ ಬಂದಿದೆ. ಈಗಲೂ ಇದರ ಸ್ಥಾನವನ್ನು ವೈಜ್ಞಾನಿಕ ವಿಧಾನ ಓವರ್ ಟೇಕ್ ಮಾಡಿಲ್ಲ. ಪ್ರತೀ ಹಳ್ಳಿಗಳಲ್ಲೂ ನೀರಿನ ಸೆಳೆಯನ್ನು ಗುರುತಿಸಿ ಇಲ್ಲಿ ಬಾವಿ…

Read more
spider nest in soil surface

ಜೇಡರ ಬಲೆಗಳು ನಮಗೆಷ್ಟು ಉಪಕಾರ ಮಾಡುತ್ತವೆ ಗೊತ್ತೇ?

ಸೃಷ್ಟಿಯ ವ್ಯವಸ್ಥೆಗಳನ್ನು ನಾವು ಕಲ್ಪನೆ ಮಾಡುವುದೂ  ಸಾಧ್ಯವಿಲ್ಲ ಸೃಷ್ಟಿಗೆ ಸೃಷ್ಟಿಯೇ ಸರಿಸಾಠಿ. ಇದರ ಕುರಿತಾದ ಕೆಲವು ಸಾಕ್ಷ್ಯಗಳು ಇಲ್ಲಿವೆ. ಹೀಗೇ ಒಮ್ಮೆ ಬಿಡುವು ಮಾಡಿಕೊಂಡು ಕತ್ತೆಲೆ ಆದ ನಂತರ ನಿಮ್ಮ ಹೊಲಕ್ಕೆ ಹೋಗಿ ನೆಲಮಟ್ಟದಲ್ಲಿ ಟಾರ್ಚ್ ಲೈಟ್ ಬಿಟ್ಟು ನೋಡಿ, ಸ್ವಲ್ಪ ಹೊತ್ತು ಗಮನ ಇಟ್ಟು ಟಾರ್ಚ್ ಬೆಳೆಕು ಬೀಳುವ  ಕಡೆಯೆಲ್ಲಾ ನೋಡಿ. ಏನು ಕಾಣುತ್ತದೆ ಎಂದು ಗಮನಿಸಿ. ಮತ್ತೇನೂ ಕಾಣುವುದಿಲ್ಲ. ನೆಲದಲ್ಲಿ ಟಾರ್ಚ್ ಲೈಟಿನ ಬೆಳೆಕಿಗೆ  ಪ್ರತಿಫಲನ ಕೊಡುವ ಮಿಣುಕು ಕಾಣಿಸುತ್ತದೆ. ಹಾಗೆಯೇ ಒಂದು ಮಿಣುಕಿನ…

Read more
sprinkler installation

ಸ್ಪ್ರಿಂಕ್ಲರ್ ನೀರಾವರಿ ಮಾಡುವವರು ತಿಳಿಯಬೇಕಾದ ಮಾಹಿತಿ.

ಬಹುತೇಕ ಕರಾವಳಿ ಮಲೆನಾಡಿನ ಅಡಿಕೆ ತೋಟದ ಬೆಳೆಗಾರರ ಮೊದಲ ಆಯ್ಕೆ ಸ್ಪ್ರಿಂಕ್ಲರ್. ಈ  ವ್ಯವಸ್ಥೆ ಹೇಗಿದ್ದರೆ ಉತ್ತಮ ಇಲ್ಲಿದೆ ಮಾಹಿತಿ. ಸ್ಪ್ರಿಂಕ್ಲರ್ ನೀರಾವರಿ ಎಂದರೆ ಹೇಳಿದಷ್ಟು ಸರಳ ಅಲ್ಲ. ಈ ನೀರಾವರಿ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿದರೆ ಮಾತ್ರ ಅದರಲ್ಲಿ ಫಲ.ಹೆಸರೇ ಹೇಳುವಂತೆ ನೀರು ಮಳೆಯಂತೆ ಎಲ್ಲಾ ಕಡೆಗೂ ಸಿಂಚನವಾಗಬೇಕು. ಎಲ್ಲಾ ಭಾಗವೂ ಒದ್ದೆಯಾಗಬೇಕು. ಹೀಗೆ ಆಗಬೇಕಿದ್ದರೆ ಅದಕ್ಕೂ ಒಂದು ಡಿಸೈನ್ ಎಂಬುದು ಇದೆ. ಆ ಡಿಸೈನ್ ಪ್ರಕಾರ ಮಾಡಿದ್ದೇ ಆದರೆ ಸ್ರಿಂಕ್ಲರ್ ನೀರಾವರಿ ಉತ್ತಮ ಫಲ ಕೊಡುತ್ತದೆ.  ಹರಿ…

Read more
coconut tree full of nuts

ತೆಂಗಿನ ತೋಟ – ಬೇಸಿಗೆಯಲ್ಲಿ ತೇವಾಂಶ ರಕ್ಷಣೆಗೆ ಹೀಗೆ ಮಾಡಿ.

ಬೇಸಿಗೆಯ ಕಾಲದಲ್ಲಿ ತೆಂಗಿನ ಮರ/ ಸಸಿಯ ಬೇರುಗಳಿರುವ ಭಾಗ ತೇವಾಂಶದಿಂದ ಕೂಡಿದ್ದರೆ ಇಳುವರಿ ಹೆಚ್ಚುತ್ತದೆ.ತೇವಾಂಶ ರಕ್ಷಣೆಗೆ ಹೀಗೆ ಮಾಡಬಹುದು. ಬೇಸಿಗೆಯ ಸಮಯದಲ್ಲಿ ನೀರಾವರಿ ಅತೀ ಪ್ರಾಮುಖ್ಯ ಕೆಲಸ. ಅದರ ಜೊತೆಗೆ ಮಣ್ಣಿನಲ್ಲಿ ಸೂಕ್ಷ್ಮಾಣು ಜೀವಿಗಳ ಚಟುವಟಿಕೆಯೂ ನಡೆಯುತ್ತಿರಬೇಕು. ಹೀಗೆ ಆಗಲು ಬೆಳೆಗಾರರು ಮಾಡಬೇಕಾದ ಕೆಲವು ಅಗತ್ಯ ಕೆಲಸಗಳು ಹೀಗಿವೆ. ತೆಂಗಿನ ಮರ ಎಂದರೆ ನಾವು ಅದಕ್ಕೆ ಎಲ್ಲಾ ಸಾವಯವ ತ್ಯಾಜ್ಯಗಳನ್ನು ಬುಡಕ್ಕೆ ಹಾಕುತ್ತೇವೆ. ಅವು ಮಳೆಗಾಲದಲ್ಲಿ ಕರಗಿ ಬುಡದಲ್ಲಿ ಗೊಬ್ಬರವಾಗುತ್ತದೆ. ಬೇಸಿಗೆಯಲ್ಲಿ ಬಿಸಿಲಿಗೆ ಒಣಗುತ್ತಾ ಇರುತ್ತದೆ. ಬೇಸಿಗೆ…

Read more
ಅಡಿಕೆ ಗರಿ ತಿನ್ನುವ ತಿಗಣೆಯ ಹಾನಿ

ಅಡಿಕೆ ಗರಿಗಳು ಯಾಕೆ ಹೀಗಾಗುತ್ತವೆ- ಪರಿಹಾರ ಏನು?

ಅಡಿಕೆಯ  ಸಸ್ಯದ ಎಲೆಗಳು ಗುಚ್ಚದ ತರಹ ಆಗುವ, ಸಸ್ಯ  ಬೆಳವಣಿಗೆಯನ್ನು ಹತ್ತಿಕ್ಕುವ  ಕೆಲವು ರಸ ಹೀರುವ ಕೀಟಗಳನ್ನು ನಿಯಂತ್ರಿಸದಿದ್ದರೆ  ಸಸಿ ಏಳಿಗೆ ಆಗುವುದೇ ಇಲ್ಲ. ಅಡಿಕೆ ಸಸಿ/ ಮರದ ಎಲೆ ಹಾಳಾದರೆ ಅದರ ಏಳಿಗೆಯೇ ಆಗುವುದಿಲ್ಲ. ಎಲೆಯ ರಸ ಹೀರಿ ತೊಂದರೆ ಮಾಡುವ ಕೆಲವು ತಿಗಣೆಗಳು ಇತ್ತೀಚಿನ ದಿನಗಳಲ್ಲಿ ಭಾರೀ  ತೊಂದರೆ ಮಾಡುತ್ತಿವೆ. ಒಂದು ಅಡಿಕೆ ನೆಟ್ಟು ಸುಮಾರು 5 ವರ್ಷಕ್ಕೆ ಅದು ಫಲ ಕೊಡಲು ಪ್ರಾರಂಭವಾಗಬೇಕು. ಆದರೆ ಇಂತಹ  ಕೀಟಗಳು ಧಾಳಿ ಮಾಡಿದವೆಂದರೆ ಅದರ ಬೆಳವಣಿಗೆಯೇ…

Read more
ಹುಳ ತಿಂದು ಸತ್ತ ತೆಂಗಿನ ಮರ

ತೆಂಗಿನ ಮರಗಳು ಸಾಯುತ್ತಿರುವುದಕ್ಕೆ ಕಾರಣ ಏನು?

ಸಿಡಿಲು, ಸುಳಿ ಕೊಳೆ, ಅಥವಾ ಇನ್ನೇನಾದರೂ ಕೀಟ ಬಾಧೆಯಿಂದ ತೆಂಗಿನ ಮರ ಸತ್ತರೆ ಅದನ್ನು ತಕ್ಷಣ ಕಡಿದು ಏನಿಲ್ಲವಾದರೂ ಸೌದೆ ಮಾಡಿಯಾದರೂ ವಿಲೇವಾರಿ ಮಾಡಿ. ಹೆಚ್ಚಿನ ರೈತರು  ತೆಂಗಿನ ಮರ ಸತ್ತು ಹೋದರೆ ಅದರಿಂದ ನಮಗೇನು ನಷ್ಟ ಎಂದು ಅದನ್ನು ಹಾಗೆ  ಬಿಡುತ್ತಾರೆ. ಸತ್ತು ಒಣಗಿ ಶಿಥಿಲವಾದ ಮೇಲೆ ವಿಲೇವಾರಿ ಸುಲಭ ಎಂಬ ಕಾರಣಕ್ಕೆ ಹೀಗೆ ಮಾಡುತ್ತಾರೆ. ಆದರೆ ಸತ್ತ ಮರವನ್ನು ಹಾಗೇ ಬಿಟ್ಟರೆ ಮತ್ತೆ ಒಂದೆರಡು ಮರ ಸಸಿ ಸಾಯುತ್ತದೆ ಏಕೆ ಗೊತ್ತೇ? ನಮ್ಮಲ್ಲಿ ಹಿರಿಯರು…

Read more
ತೆಂಗು-ಉತ್ತಮ ಆರೈಕೆಯಲ್ಲಿ ಬೆಳೆದ 4 ವರ್ಷದ ತೆಂಗು- 4 year yielding plant

ತೆಂಗು- 4 ವರ್ಷಕ್ಕೆ ಇಳುವರಿ ಪ್ರಾರಂಭವಾಗಲು ಹೇಗೆ ಸಾಕಬೇಕು?

ತೆಂಗಿನ ಸಸಿ ನೆಟ್ಟು ನಂತರ ಎಲ್ಲಾ ನಿರ್ವಹಣೆಯನ್ನೂ ಚಾಚೂ ತಪ್ಪದೆ ಮಾಡುತ್ತಾ ಬಂದರೆ ಅದು 4 ನೇ ವರ್ಷಕ್ಕೆ ಹೂ ಬಿಟ್ಟು 5 ವರ್ಷಕ್ಕೆ ಕಾಯಿ ಬಿಡಲು ಪ್ರಾರಂಭವಾಗುತ್ತದೆ. ಹೈಬ್ರೀಡ್ ತಳಿಗಳು ನಾಲ್ಕನೇ ವರ್ಷಕ್ಕೇ ಫಲ ಕೊಡಲು ಪ್ರಾರಂಭವಾಗುತ್ತದೆ.  ನಾವೆಲ್ಲಾ ತೆಂಗಿನ ಸಸಿ ನೆಡುತ್ತೇವೆ. ಫಲ ಬರುವ ತನಕ ಆರೈಕೆ ಮಾಡಲು ಉದಾಸೀನ ಮಾಡುತ್ತೇವೆ. ಫಲ ಬಂದ ನಂತರ ಹೆಚ್ಚು ಇಳುವರಿ ಬೇಕು ಎಂದು ಗೊಬ್ಬರ ಕೊಡುವ ಉತ್ಸಾಹ ತೋರುತ್ತೇವೆ. ಆದರೆ ಇದು ಸೂಕ್ತ ಕ್ರಮ ಅಲ್ಲ. ಸಸಿ ನೆಟ್ಟಾದಾಗಿನಿಂದ…

Read more
error: Content is protected !!