tulasi tip

ತುಳಿಸಿ ಗಿಡ ಈಗ ಒಣಗುವುದೇಕೆ?

ತುಳಿಸಿ ಗಿಡಕ್ಕೆ ಸುತ್ತು ಬರಬೇಕು ಎನ್ನುತ್ತಾರೆ ಹಿರಿಯರು. ಬೆಳೆಗಳ ಬುಡಕ್ಕೆ ದಿನಾ ಹೋಗಬೇಕು ಎನ್ನುತ್ತಾರೆ  ಕೃಷಿ ವಿಜ್ಞಾನಿಗಳು. ಇದಕ್ಕೆ ಕಾರಣ ಇಲ್ಲಿದೆ. ತುಳಸಿ ಗಿಡದ ಸುತ್ತ ಒಂದು ಸುತ್ತು ಬಂದಾಗ ಎಲೆಗಳೆಲ್ಲಾ ಕಳೆಗುಂದಿರುವುದು ಕಂಡರೆ , ಎರಡನೇ ಸುತ್ತಿಗೆ ಎಲೆಯಲ್ಲಿ ಏನೋ ಇರುವುದೂ, ಮೂರನೇ ಸುತ್ತಿಗೆ ಮತ್ತೂ ಸ್ಪಷ್ಟತೆ, ಹೀಗೇ ಹತ್ತು ಸುತ್ತು ಬರುವಾಗ ಅಲ್ಲಿ ಏನಾಗಿದೆ ಎಂಬುದರ ಪೂರ್ಣ ಚಿತ್ರಣ ನಮಗೆ  ತಿಳಿಯುತ್ತದೆ. ತುಳಸಿ ಗಿಡಕ್ಕೆ ಸುತ್ತು ಬಂದಾಗ ಅದಕ್ಕೆ ಏನಾಗಿದೆ ಎಂಬುದನ್ನು ನೀವೇ ತಿಳಿದುಕೊಳ್ಳಬಹುದು. ತುಳಸಿ…

Read more
farmers grow but price fixed by others

ಕೃಷಿಕರ ಆದಾಯ ದ್ವಿಗುಣವಾಗಲೇ ಇಲ್ಲ –ಯಾಕೆ?

ಸರಕಾರ ಕೃಷಿಕರ ಆದಾಯ ದುಪ್ಪಟ್ಟಾಗಬೇಕು ಎಂದು ಕಾರ್ಯಕ್ರಮಗಳನ್ನು ಹಾಕಿಕೊಂದಂತೆ ದೇಶದಲ್ಲಿ ರೈತರ ಆದಾಯ ಕುಂಠಿತವಾಗುತ್ತಲೇ  ಬರುತ್ತಿದೆ. ಇತ್ತೀಚೆಗೆ ಎಲ್ಲೋ ಖ್ಯಾತ ರೈತ ಪರ ಹೋರಾಟಗಾರರಾದ ಶ್ರೀ ದೇವೇಂದ್ರ ಶರ್ಮ ಇವರು ಹೇಳಿಕೆಕೊಟ್ಟದ್ದು ಗಮನಿಸಿದ್ದೆ. ಇವರು ಹೇಳುತ್ತಾರೆ ಸರಕಾರ ಗ್ರಹಿಸಿದಂತೆ ಆದಾಯ ಹೆಚ್ಚಳವಾಗುವ ಬದಲಿಗೆ ಕಡಿಮೆಯೇ ಆಗುತ್ತಿದೆಯಂತೆ. ಅಷ್ಟೇ ಅಲ್ಲ. ಕೃಷಿಕರ ಆದಾಯವನ್ನು ಕೃಷಿ ನಿರ್ವಹಣೆಯೇ ತಿಂದು ಹಾಕುತ್ತಿದೆಯಂತೆ. ಈ ಬಗ್ಗೆ ಅವರು ಕೊಡುವ ಕೆಲವು ಲೆಕ್ಕಾಚಾರಗಳು ಹೀಗಿವೆ. ನಮ್ಮ ದೇಶದಲ್ಲಿ ಕೃಷಿ ಹೊಲದ ಮಾಲಿಕನಿಗಿಂತ ಕೃಷಿ ಕೂಲಿ…

Read more
ಗೋಲ್ಡನ್ ಫ಼್ಹಿಶ್ ಅಕ್ವೇರಿಯಂ ಮೀನು

ಬಣ್ಣದ ಮೀನು ಸಾಕಾಣಿಕೆ -ಅದಾಯ ಕೊಡುವ ವೃತ್ತಿ.

ಅಲಂಕಾರಕ್ಕಾಗಿ ಮೀನು ಸಾಕುವುದೇ ಅಕ್ವೇರಿಯಂ. ಇದು ಕೃಷಿಕರಿಗೆ  ಹೊಂದುವ ಉಪ ವೃತ್ತಿ. ಪುರಾತನ ಕಾಲದಿಂದಲೂ ಜನ ಆನಂದಕ್ಕಾಗಿ ಮೀನು ಸಾಕಣೆ ಮಾಡುತ್ತಿದ್ದರು. ರಾಜ ಮಹಾರಾಜರ ಕಾಲದಿದಲೂ ಇದು ಇತ್ತು ಎನುತ್ತಾರೆ. ಈಗ ಅಕ್ವೇರಿಯಂ ಮನೆಗೆ ಒಂದು ವಾಸ್ತು ಜೊತೆಗೆ ಪ್ರತಿಷ್ಟೆಯ ವಿಚಾರ. ಅಕ್ವೇರಿಯಂ ಅಥವಾ ಬಣ್ಣದ ಮೀನಿನ ವ್ಯವಹಾರ ಎಂದರೆ  ಸಣ್ಣದೇನಲ್ಲ. ಪ್ರಪಂಚದಲ್ಲಿ ಇದು  30,000 ಕೋಟಿಯ ವ್ಯವಹಾರ. ಇದರಲ್ಲಿ ಭಾರತದ ಪಾಲು 0.008 % ಮಾತ್ರ.  ಅವಕಾಶ ಮಾತ್ರ. ನಮ್ಮ ದೇಶದಲ್ಲಿ  ಅಕ್ವೇರಿಯಂ ಒಳಗೆ ಸಾಕಬಹುದಾದ…

Read more
hibiscus flower

ತೋಟದ ಬೇಲಿಯಲ್ಲಿ ದಾಸವಾಳ ನೆಟ್ಟರೆ ಭಾರೀ ಅನುಕೂಲ.

ಹಿಂದಿನವರು ತಮ್ಮ ಅಡಿಕೆ ತೋಟದ ಬೌಂಡ್ರಿಯ ಸುತ್ತ ದಾಸವಾಳದ ಗಿಡ ನೆಡುತ್ತಿದ್ದರು. ಇದರ ಹಿಂದೆ ಸಾಕಷ್ಟು ವೈಜ್ಞಾನಿಕತೆ ಅಡಗಿದೆ.  ವಿಟ್ಲ, ಪುತ್ತೂರು, ಸುಳ್ಯ , ಕಾಸರಗೋಡು, ಹಾಗೆಯೇ ಶ್ರಿಂಗೇರಿ, ಕೊಪ್ಪ, ಸಾಗರ, ಶಿರಸಿ  ಕಡೆಯ  ಹಳೆಯ ಅಡಿಕೆ ಕೃಷಿಕರ ತೋಟದ ಸುತ್ತ ಬೇಲಿಗಳಲ್ಲಿ ದಾಸವಾಳದ ಸಸ್ಯ ಇರುತ್ತದೆ. ದಾಸವಾಳ ಸಸಿ ಬೆಳೆಸುವುದು ಸುಲಭ. ಅಂದಕ್ಕೆ ಹೂವೂ ಆಗುತ್ತದೆ. ಬೇಲಿ ಧೀರ್ಘ ಕಾಲದ ತನಕ ಹಾಳಾಗುವುದಿಲ್ಲ. ಇದು ಬೇಲಿ ಮಾಡುವವರಿಗೆ ತಿಳಿದಿರುವ ಸಂಗತಿ. ತಮ್ಮ ಹಿರಿಯರು ಇದನ್ನು ಅನುಸರಿಸುತ್ತಿದ್ದರು….

Read more
ಇವರಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗಿಲ್ಲ

ಬೇಸಿಗೆಯಲ್ಲಿ ನೀರಿನ ಕೊರತೆಗೆ ಪರಿಹಾರ ಕಂಡುಕೊಂಡ ಕೃಷಿಕ.

ಬೇಸಿಗೆಯ ಕಾಲದಲ್ಲಿ ಎಲ್ಲರೂ ನೀರಿನ ಕೊರತೆ ಅನುಭವಿಸುತ್ತಾರೆ. ಆದರೆ ಇಲ್ಲೊಬ್ಬರು ರೈತರು ಮಳೆಗಾಲದಲ್ಲಿ ಮಳೆ ನೀರನ್ನು  ಒಂದೆಡೆ ಕೂಡಿಹಾಕಿದ್ದಾರೆ. ಅದನ್ನು ಮಣ್ಣು ಸ್ಪಂಜಿನಂತೆ ಹೀರಿಕೊಂಡು ಬೇಸಿಗೆಯ ಸಮಯದುದ್ದಕ್ಕೂ ತಗ್ಗು ಪ್ರದೇಶಕ್ಕೆ ಬಿಡುಗಡೆ ಮಾಡುತ್ತದೆ. ಹಾಗಾಗಿ ಇವರಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗಿಲ್ಲ. ಬೇಸಿಗೆಯಲ್ಲಿ  ಎಲ್ಲಾ ಕೃಷಿಕರಿಗೂ ನೀರಿನದ್ದೇ ಸಮಸ್ಯೆ. ಬೆಳೆಗಳು ನೀರನ್ನು ಹೆಚ್ಚು ಅಪೇಕ್ಷಿಸುತ್ತವೆ. ಮಣ್ಣು ಹೆಚ್ಚು ನೀರು ಕುಡಿಯುತ್ತದೆ. ಆದರೆ ಮೂಲಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುತ್ತದೆ. ಕೊಳವೆ ಬಾವಿಗಳೂ ಸಹ  ಕೈಕೊಡುವುದು ಇದೇ ಸಮಯದಲ್ಲಿ. ಇದಕ್ಕೆ…

Read more
tender arecanut

ಅಡಿಕೆ ಬೆಳೆಗಾರರಿಗೆ ವರ – ಅಡಿಕೆ ಮಿಲ್.

ಅಡಿಕೆ ಬೆಳೆಯಲ್ಲಿ ಎಲ್ಲಾ ಕಡೆ ಒಂದೇ ಸಮಯದಲ್ಲಿ ಅಡಿಕೆ ಕೊಯಿಲು ಆದಾಗ ಸುಲಿಯುವ ಕೆಲಸ ದೊಡ್ಡ ಕಷ್ಟ. ಜನ ಸಿಗುವುದಿಲ್ಲ. ಆ ಸಮಯದಲ್ಲಿ ಒಮ್ಮೆಗೇ ಟನ್ ಗಟ್ಟಲೆ ಅಡಿಕೆ ಸಿಪ್ಪೆ ತೆಗೆಯುವ ವ್ಯವಸ್ಥೆ ಎಂದರೆ ಅಡಿಕೆ ಮಿಲ್ ಗಳು. ಇದು ಬಾಡಿಗೆಯ ಆಧಾರದಲ್ಲಿ ಕೆಲಸ ಮಾಡಿ ಬೆಳೆಗಾರರಿಗೆ ತುಂಬಾ ಸಹಕಾರಿಯಾಗುತ್ತದೆ. ಭತ್ತವನ್ನು ಗದ್ದೆಯಿಂದ ಕೊಯಿಲು ಮಾಡಿ ಮಿಲ್ ಗೆ ಒಯ್ದರೆ ಅಲ್ಲಿ ಅದನ್ನು ಅಕ್ಕಿ ಮಾಡಿಕೊಡುವಂತೆ, ಅಡಿಕೆಗೂ ಇಂತಹ  ಒಂದು ವ್ಯವಸ್ಥೆ ಬಂದಿದೆ. ಈ ಯಾಂತ್ರಿಕ ವ್ಯವಸ್ಥೆಯಲ್ಲಿ…

Read more
flood in channel

ಅಕಾಲಿಕ ಮಳೆ- ಮುಂದಿನ ತೊಂದರೆಗಳು ಮತ್ತು ಮುಂಜಾಗ್ರತೆ.

ಯಾರೂ ಗ್ರಹಿಸಿರದ ಈ ಸಮಯದಲ್ಲಿ ಮಳೆಯಾಗಿದೆ. ರೈತರಿಗೆ ಬಹಳ ತೊಂದರೆ ಆಗಿದೆ. ಕರ್ನಾಟಕದಲ್ಲಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಲ್ಲೆಲ್ಲಾ ಅಕಾಲಿಕ ಮಳೆಯಾಗುತ್ತಿದೆ.ಬರೇ ಕರ್ನಾಟಕ ಮಾತ್ರವಲ್ಲ  ಮಹಾರಾಷ್ಟ್ರ, ತಮಿಳುನಾಡು, ಕೇರಳ, ಮುಂತಾದ ರಾಜ್ಯಗಳಲ್ಲಿಯೂ ಮಳೆ ಸುರಿಯುತ್ತಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಇದಕ್ಕೆ ಕಾರಣವಾಗಿದ್ದು, ಈ ಮಳೆ ಇನ್ನೂ ಮುಂದಿನ 3 ದಿನಗಳ ತನಕ ವೂ ಮುಂದುವರಿದು ಪ್ರಮಾಣ ಹೆಚ್ಚಾಗಲಿದೆ. The weather is expected to remain more or less the same for…

Read more
water over flow

ಬೋರ್ ವೆಲ್ ಗೆ ನೀರು ಹುಡುಕುವಲ್ಲಿ ಇವರದ್ದೇ ಮೇಲುಗೈ

ಇವರು ಭೂ ವಿಜ್ಞಾನ ಅಧ್ಯಯನ ಮಾಡಿದವರಲ್ಲ. ಆದರೆ ಇವರಿಗೆ ಭೂ ಗರ್ಭದಲ್ಲಿರುವ ಜಲ ಶೋಧನೆ ಕಲೆ ಗೊತ್ತಿದೆ. ಪ್ರಪಂಚದಾದ್ಯಂತ ಭೂ ಗರ್ಭ ಜಲ ಶೊಧನೆಯಲ್ಲಿ ಇವರದ್ದೇ ಮೇಲುಗೈ. ವಿಜ್ಞಾನ ಒಪ್ಪದಿದ್ದ ಪಾರಂಪರಿಕ ಜಲ ಶೋಧನಾ ವಿದ್ಯೆಯನ್ನು ಸಮಾಜ ಒಪ್ಪಿದೆ ಮತ್ತು ಗೌರವಿಸಿದೆ. ಅನಾದಿ ಕಾಲದಿಂದಲೂ ನೀರಿನ ಶೋಧನೆ ಎಂಬುದು ಕೆಲವು ಸಾಂಪ್ರದಾಯಿಕ ವಿಧಾನಗಳ ಮೂಲಕ ನಡೆಯುತ್ತಾ ಬಂದಿದೆ. ಈಗಲೂ ಇದರ ಸ್ಥಾನವನ್ನು ವೈಜ್ಞಾನಿಕ ವಿಧಾನ ಓವರ್ ಟೇಕ್ ಮಾಡಿಲ್ಲ. ಪ್ರತೀ ಹಳ್ಳಿಗಳಲ್ಲೂ ನೀರಿನ ಸೆಳೆಯನ್ನು ಗುರುತಿಸಿ ಇಲ್ಲಿ ಬಾವಿ…

Read more
spider nest in soil surface

ಜೇಡರ ಬಲೆಗಳು ನಮಗೆಷ್ಟು ಉಪಕಾರ ಮಾಡುತ್ತವೆ ಗೊತ್ತೇ?

ಸೃಷ್ಟಿಯ ವ್ಯವಸ್ಥೆಗಳನ್ನು ನಾವು ಕಲ್ಪನೆ ಮಾಡುವುದೂ  ಸಾಧ್ಯವಿಲ್ಲ ಸೃಷ್ಟಿಗೆ ಸೃಷ್ಟಿಯೇ ಸರಿಸಾಠಿ. ಇದರ ಕುರಿತಾದ ಕೆಲವು ಸಾಕ್ಷ್ಯಗಳು ಇಲ್ಲಿವೆ. ಹೀಗೇ ಒಮ್ಮೆ ಬಿಡುವು ಮಾಡಿಕೊಂಡು ಕತ್ತೆಲೆ ಆದ ನಂತರ ನಿಮ್ಮ ಹೊಲಕ್ಕೆ ಹೋಗಿ ನೆಲಮಟ್ಟದಲ್ಲಿ ಟಾರ್ಚ್ ಲೈಟ್ ಬಿಟ್ಟು ನೋಡಿ, ಸ್ವಲ್ಪ ಹೊತ್ತು ಗಮನ ಇಟ್ಟು ಟಾರ್ಚ್ ಬೆಳೆಕು ಬೀಳುವ  ಕಡೆಯೆಲ್ಲಾ ನೋಡಿ. ಏನು ಕಾಣುತ್ತದೆ ಎಂದು ಗಮನಿಸಿ. ಮತ್ತೇನೂ ಕಾಣುವುದಿಲ್ಲ. ನೆಲದಲ್ಲಿ ಟಾರ್ಚ್ ಲೈಟಿನ ಬೆಳೆಕಿಗೆ  ಪ್ರತಿಫಲನ ಕೊಡುವ ಮಿಣುಕು ಕಾಣಿಸುತ್ತದೆ. ಹಾಗೆಯೇ ಒಂದು ಮಿಣುಕಿನ…

Read more
sprinkler installation

ಸ್ಪ್ರಿಂಕ್ಲರ್ ನೀರಾವರಿ ಮಾಡುವವರು ತಿಳಿಯಬೇಕಾದ ಮಾಹಿತಿ.

ಬಹುತೇಕ ಕರಾವಳಿ ಮಲೆನಾಡಿನ ಅಡಿಕೆ ತೋಟದ ಬೆಳೆಗಾರರ ಮೊದಲ ಆಯ್ಕೆ ಸ್ಪ್ರಿಂಕ್ಲರ್. ಈ  ವ್ಯವಸ್ಥೆ ಹೇಗಿದ್ದರೆ ಉತ್ತಮ ಇಲ್ಲಿದೆ ಮಾಹಿತಿ. ಸ್ಪ್ರಿಂಕ್ಲರ್ ನೀರಾವರಿ ಎಂದರೆ ಹೇಳಿದಷ್ಟು ಸರಳ ಅಲ್ಲ. ಈ ನೀರಾವರಿ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿದರೆ ಮಾತ್ರ ಅದರಲ್ಲಿ ಫಲ.ಹೆಸರೇ ಹೇಳುವಂತೆ ನೀರು ಮಳೆಯಂತೆ ಎಲ್ಲಾ ಕಡೆಗೂ ಸಿಂಚನವಾಗಬೇಕು. ಎಲ್ಲಾ ಭಾಗವೂ ಒದ್ದೆಯಾಗಬೇಕು. ಹೀಗೆ ಆಗಬೇಕಿದ್ದರೆ ಅದಕ್ಕೂ ಒಂದು ಡಿಸೈನ್ ಎಂಬುದು ಇದೆ. ಆ ಡಿಸೈನ್ ಪ್ರಕಾರ ಮಾಡಿದ್ದೇ ಆದರೆ ಸ್ರಿಂಕ್ಲರ್ ನೀರಾವರಿ ಉತ್ತಮ ಫಲ ಕೊಡುತ್ತದೆ.  ಹರಿ…

Read more
error: Content is protected !!