ಗೇರು ಮರಕ್ಕೆ ಗೊಬ್ಬರ ಕೊಡುವ ವಿಧಾನ

ಗೇರು – ಗೊಬ್ಬರ ಕೊಟ್ಟರೆ ಬಂಪರ್ ಇಳುವರಿ ಪಡೆಯಬಹುದು.

ಗೇರು ಬೆಳೆಗೆ ವರ್ಷದಲ್ಲಿ 3 ತಿಂಗಳು ಮಾತ್ರ ಕೆಲಸ, ನೀರಾವರಿ ಬೇಡ. ಉತ್ತಮವಾಗಿ ಗೊಬ್ಬರ ಕೊಟ್ಟು ನಿಗಾ ವಹಿಸಿ ಬೆಳೆದರೆ 5-6  ವರ್ಷದ ಮರದಲ್ಲಿ 10 ಕಿಲೋ ತನಕ ಇಳುವರಿ ಪಡೆಯಬಹುದು. ಕನಿಷ್ಟ 1000 ರೂ ಆದಾಯಕ್ಕೆ ತೊಂದರೆ ಇಲ್ಲ ಎಂಬ ಕಾರಣಕ್ಕೆ ರೈತರು ತಮ್ಮಲ್ಲಿ ಖಾಲಿ ಇರುವ ಸ್ಥಳದಲ್ಲಿ ಗೇರು ಬೆಳೆ ಬೆಳೆಸಿದ್ದಾರೆ. ಬರೇ ನೆಟ್ಟರೆ ಸಾಲದು ಅದಕ್ಕೆ ಅಗತ್ಯ ಪೊಷಕಗಳನ್ನು ಕಾಲ ಕಾಲಕ್ಕೆ ಕೊಟ್ಟರೆ ಉತ್ತಮ ಇಳುವರಿ ಪಡೆಯಲು ಸಾಧ್ಯ.     ಗೇರು ಮರ ಚೆನ್ನಾಗಿ…

Read more

ಸಿರ್ಸಿ ಅಡಿಕೆ ಎಂಬ ವಿಶಿಷ್ಟ ಅಡಿಕೆ ತಳಿ.

ಮನುಷ್ಯರೆಲ್ಲರೂ ಒಂದೇ. ಆದರೆ  ಗುಣಗಳು ಮಾತ್ರ ಭಿನ್ನ. ಕೆಲವರು ಬಹಳ ಚುರುಕು. ಮತ್ತೆ ಕೆಲವರು ಮಂದ. ಹಾಗೆಯೇ ಫಲ ಕೊಡುವ ಸಸ್ಯಗಳಲ್ಲೂ ಇದೆ. ಕೆಲವು ಉತ್ತಮ ಗುಣವನ್ನು ತಮ್ಮ ಜೀನ್ ನಲ್ಲೇ ಒಳಗೊಂಡಂತದ್ದನ್ನು ಆಯ್ಕೆ  ಮಾಡಿ ಅದನ್ನು ಅಭಿವೃದ್ದಿಪಡಿಸಿ ಬೆಳೆಸಬಹುದಾದ್ ಅತಳಿಯಾಗಿ ಬಿಡುಗಡೆ ಮಾಡಲಾಗುತ್ತದೆ. ಅಂತದ್ದೇ ಇದು ಶಿರಸಿಯ ಆಕೆ ತಳಿ ಅಡಿಕೆ.(SAS). ಎಕ್ರೆಗೆ 28 ಕ್ವಿಂಟಾಲು ಅಡಿಕೆ: ಶಿರ್ಸಿಯ ಆಯ್ಕೆ ಅಡಿಕೆ  ( Sirsi areca selection 1 )  ಉತ್ತರಕನ್ನಡ ಜಿಲ್ಲೆಯ ಶಿರಸಿ ಭಾಗದ…

Read more
ನೀರಿಗೆ ಬರ ಬಂದರೆ ? -. ಕಡಿಮೆ ನೀರಿನಲ್ಲಿ ಹೇಗೆ ಬೆಳೆ ಉಳಿಸಿಕೊಳ್ಳುವುದು

ನೀರಿಗೆ ಬರ ಬಂದರೆ ? ಕಡಿಮೆ ನೀರಿನಲ್ಲಿ ಹೇಗೆ ಬೆಳೆ ಉಳಿಸಿಕೊಳ್ಳುವುದು?  

2023 ನೇ ಇಸವಿ ನಮಗೆ ಮಳೆ ಇಲ್ಲದೆ ಬರಗಾಲದ ಸನ್ನಿವೇಶವನ್ನು ತೋರಿಸಿಯೇ ಬಿಡುತ್ತದೆಯೋ ಎಂಬ ಅನುಮಾನ ಮೂಡುತ್ತಿದೆ. ಜುಲೈ ತಿಂಗಳ ಕೊನೆಗೆ ಕಾಣೆಯಾದ ಮಳೆ ಮತ್ತೆ ಬಂದುದು ಆಗಾಗ ನೆಂಟರಂತೆ.  ಹೀಗೆ ಮುಂದುವರಿದರೆ ಬರಗಾಲ ಗ್ಯಾರಂಟಿ. ಯಾವುದಕ್ಕೂ ನಾವು ಸಿದ್ದರಾಗಿರಬೇಕು. ಕೆಲವು ಮೂಲಗಳ ಪ್ರಕಾರ ಇನ್ನು ಬರುವ  ಮಳೆ ಅಲ್ಪ ಸ್ವಲ್ಪ ಪ್ರಮಾಣದ್ದೇ ಹೊರತು, ತಳಕ್ಕಿಳಿದ ನೀರಿನ ಮಟ್ಟವನ್ನು ಮತ್ತೆ ಮೇಲಕ್ಕೇರಿಸುವಷ್ಟು  ಬಲವಾಗಿರುವುದಿಲ್ಲ. ಹಾಗಾಗಿ ನೀರಿನ ಕ್ಷಾಮ ಉಂಟಾಗಲೂಬಹುದು. ಅದಕ್ಕಾಗಿ ಈಗಲೇ ಸಿದ್ದರಾಗೋಣ. ಪ್ರಕೃತಿಯ ಮುಂದೆ ಮಾನವ…

Read more
ಅಡಿಕೆ ಮರಗಳಿಗೆ ಸುಣ್ಣ ಬಳಿದು ಬಿಸಿಲಿನಿಂದ ರಕ್ಷಣೆ

ಅಡಿಕೆ ಮರಕ್ಕೆ ಸುಣ್ಣ ಯಾಕೆ ಕೊಡಲೇ ಬೇಕು? ಇದರಿಂದಾಗಿ ಲಾಭ ಎಷ್ಟು?

ಅಡಿಕೆ ಮರದ ಕಾಡಕ್ಕೆ ನಿರಂತರ ಬಿಸಿಲಿನ ಹೊಡೆತ ಬೀಳುವುದರಿಂದ ಆ ಭಾಗ ಬಿಸಿಯಾಗುತ್ತದೆ. ಮೊದಲಿಗೆ ಬಿಸಿಲು ತಾಗಿದ ಭಾಗ ಹಳದಿ ಮಿಶ್ರ ಕೆಂಪು ಬಣ್ಣದಲ್ಲಿ ಕಾಣಿಸುತ್ತದೆ. ವರ್ಷ ಕಳೆದಾಗ ಅಲ್ಲಿ ಸಣ್ಣ ಒಡಕು ಕಾಣಿಸುತ್ತದೆ. ಎರಡು ಮೂರು ವರ್ಷ ಕಳೆದಾಗ ಆ ಭಾಗ ನಿರ್ಜೀವವಾಗುತ್ತದೆ. ಅದು ಎದ್ದು ಬರಲೂ ಬಹುದು. ಗಾಳಿಗೆ ಬೀಳಲೂ ಬಹುದು. ಇದನ್ನು ತಡೆಯುವ ಉಪಾಯ ಮರದ ಕಾಂಡಕ್ಕೆ ಎಅರಡನೇ ವರ್ಷದಿಂದ ಸಾದ್ಯವಾದಷ್ಟು ವರ್ಷದ ತನಕ ಸುಣ್ಣದ ಲೇಪನ ಒಂದೇ. ಚಳಿಗಾಲ ಪ್ರಾರಂಭವಾಗುವ ಕಾರ್ತಿಕ…

Read more
tasty vegetable grown with out manure

ನಾವು ತಿನ್ನುವ ಆಹಾರ ರುಚಿ ಇರುವುದಿಲ್ಲ ಕಾರಣ ಇಷ್ಟೇ

ಮಣ್ಣು ಫಲವತ್ತಾಗಿದ್ದರೆ ಅದರಲ್ಲಿ ಬೆಳೆದ ಬೆಳೆಯ ಗುಣಮಟ್ಟ ಉತ್ತಮವಾಗಿರುತ್ತದೆ. ಅದಕ್ಕೆ ರುಚಿಯೂ ಇರುತ್ತದೆ. ಆರೋಗ್ಯಕ್ಕೂ ಉತ್ತಮ. ಮಣ್ಣಿಗೆ ಜೀವ ಇದೆ.ಇದು ಕೃಷಿಗೆ ಜೀವ ಕೊಡುತ್ತದೆ . ಮಣ್ಣಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಕಣ್ಣಿಗೆ ಕಾಣದ ಸೂಕ್ಷ್ಮ ಜೀವಿಗಳು ಸೇರಿಕೊಂಡಿವೆ . ಮಣ್ಣು ಇಲ್ಲದೆ ಯಾವುದೇ ಜೀವಿ ಬದುಕಲು ಸಾಧ್ಯವಿಲ್ಲ. ಅದೇ ರೀತಿ ಯಾವುದೇ ಜೀವಿ ಇಲ್ಲದೇ ಮಣ್ಣು ಆಗಲು ಸಾಧ್ಯವಿಲ್ಲ. ಒಂದು ಇಂಚು ಮಣ್ಣು ಆಗಬೇಕಾದರೆ ಸಾವಿರಾರು ವರ್ಷಗಳೇ ಬೇಕಾಗುತ್ತದೆ. ಇಂದು ಅವೈಜ್ಞಾನಿಕ ರಾಸಾಯನಿಕಗಳ ಬಳಕೆಯಿಂದ ಮಣ್ಣು,…

Read more
ಒಂದೆಲಗ

ಒಂದೆಲಗಕ್ಕೆ ಭಾರಿ ಬೇಡಿಕೆ ಮತ್ತು ಬೆಲೆ ಇದೆ.

ಒಂದೆಲಗ ಇನ್ನೊಂದು ದಿನ ಕಾಣುವುದಕ್ಕೇ ಸಿಗದ ಸ್ಥಿತಿ ಉಂಟಾದರೂ ಅಚ್ಚರಿ ಇಲ್ಲ. ಈಗ ಹಿಂದಿನಂತೆ ಇದು ಕಾಣಸಿಗುತ್ತಿಲ್ಲ. ಬೆಳೆಸಿ ಉಳಿಸದಿದ್ದರೆ ಇನ್ನು ಕೆಲವೇ ವರ್ಷ . ಕಳೆ ನಾಶಕಗಳು, ಮಣ್ಣು ಅಗೆಯುವ ಯಂತ್ರಗಳು ಇದನ್ನು  ಬಲಿ ತೆಗೆದುಕೊಂಡಾವು. ಇದು ಇಂದಿನ ಅತೀ ದೊಡ್ಡ ಸಮಸ್ಯೆಯಾದ  ಬೊಜ್ಜು ಕರಗಳು ಉತ್ತಮ ಔಷಧಿ. ಜೊತೆಗೆ  ಬೇಡಿಕೆ. ಒಂದೆಲಗ  ಒಂದು ಅತ್ಯುತ್ತಮ ಮೂಲಿಕಾ ಸಸ್ಯ. ಇದು ಎಲ್ಲರ ಹೊಲಗಳಲ್ಲಿ ಕಂಡು ಬರುವ ಒಂದು ನೆಲದಲ್ಲಿ ಹಬ್ಬಿ ಬೆಳೆಯುವ  ಬಳ್ಳಿ ಸಸ್ಯ. ಇದರ…

Read more
ಬಟರ್ ಫ್ರೂಟ್ ಸ್ಥಳೀಯ

ಬಟರ್ ಫ್ರೂಟ್ ಹೇಗೆ ಬೆಳೆದರೆ ಉತ್ತಮ ಇಳುವರಿ ಪಡೆಯಬಹುದು?– ಇಲ್ಲಿದೆ ಮಾಹಿತಿ.

ಒಂದು ಬೆಳೆಗೆ ಹೆಚ್ಚಿನ ಬೆಲೆ, ಬೇಡಿಕೆ ಇದೆ ಎಂದಾಕ್ಷಣ ಎಲ್ಲರೂ ಆ ಬೆಳೆ ಬೆಳೆಸಬೇಕು ಎಂದು ಉತ್ಸುಕರಾಗುತ್ತಾರೆ. ಅದಕ್ಕನುಗುಣವಾಗಿ ಪ್ರಚಾರಗಳೂ ಜನರನ್ನು  ಗೊಂದಲಕ್ಕೀಡು ಮಾಡುತ್ತವೆ. ಸಸ್ಯೋತ್ಪಾದಕರೂ ಹೆಚ್ಚಾಗುತ್ತಾರೆ. ಎಲ್ಲವೂ ಎಷ್ಟು ಉತ್ತಮವೋ ಅಷ್ಟೇ ಅಪಾಯಕಾರಿಯೂ ಅಗಿರುತ್ತದೆ. ಈ ಸಂದರ್ಭದಲ್ಲಿ ರೈತರಿಗೆ ಬಟರ್ ಫ್ರೂಟ್ ಹೇಗೆ ಬೆಳೆದರೆ ಉತ್ತಮ ಇಳುವರಿ ಪಡೆಯಬಹುದು ಎಂಬ ಮಾರ್ಗದರ್ಶನ ಅತ್ಯಗತ್ಯವಾಗಿ ಬೇಕಾಗುತ್ತದೆ. ಯಾವುದೇ ಬೆಳೆ ಇರಲಿ. ಅದನ್ನು ಬೆಳೆಸುವ ಮುಂಚೆ ಅದರ ಪೂರ್ವಾಪರ ವನ್ನು ಕೂಲಂಕುಶವಾಗಿ ತಿಳಿದುಕೊಳ್ಳಬೇಕು. ಆ ಬೆಳೆಯ ಬಗ್ಗೆ ಸ್ಥಳೀಯವಾಗಿ…

Read more
ಕರಿಮೆಣಸಿನ ಬೆಲೆ ಭಾರೀ ಏರಿಕೆ ಸಂಭವ

ಕರಿಮೆಣಸಿನ ಬೆಲೆ ಭಾರೀ ಏರಿಕೆ ಸಂಭವ –ಬೆಳೆಗಾರರು ಎಚ್ಚರಿಕೆಯಿಂದಿರಿ.

ಕಳೆದ ವಾರ 50000 ದ ಆಸುಪಾಸಿನಲ್ಲಿದ್ದ  ಕರಿಮೆಣಸಿನ ಬೆಲೆ ದಿಡೀರ್ ಆಗಿ ಒಂದೇ ವಾರದಲ್ಲಿ 56,000 ಕ್ಕೆ ಏರಿಕೆಯಾಗಿದೆ. ಕರಿಮೆಣಸು ಇದೆಯೇ ಎಂದು ಕೇಳುವ ಸ್ಥಿತಿ ಉಂಟಾಗಿದೆ. ಖಾಸಗಿ ಮಾರುಕಟ್ಟೆಯಲ್ಲಿ ದರ 60,000 ತನಕ ಏರಿದೆ. ಇನ್ನೂ ಏರಿಕೆ ಆಗಬಹುದು ಎಂಬ ಸುದ್ದಿ ಕೇಳಿಬರುತ್ತಿದೆ. ಮೆಣಸು ಬೆಳೆಯುವ ದೇಶಗಳಲ್ಲಿ ಉತ್ಪನ್ನದ ಕೊರೆತೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಕಳೆದ 5-6 ವರ್ಷಗಳಿಂದ ನೆಲಕಚ್ಚಿದ ಕರಿಮೆಣಸಿನ  ಬೆಲೆ ಕಳೆದ ವರ್ಷ 50,000 ದ ಆಸು ಪಾಸಿಗೆ ಬಂದಿತ್ತು.  ಒಮ್ಮೆ 55,000…

Read more

ಅಡಿಕೆಯ ಮಿಡಿಗಳು ಯಾಕೆ ಉದುರುತ್ತವೆ?

ಬೇಸಿಗೆಯಲ್ಲಿ ಏನೇನೋ ಕಸರತ್ತು ಮಾಡಿ ಹೂಗೊಂಚಲಿನಲ್ಲಿ ಮಿಡಿಗಳನ್ನು ಉಳಿಸಿರುತ್ತೇವೆ. ಆದರೆ ಅದು ಒಂದೆರಡು ಮಳೆ ಬಂದ ತಕ್ಷಣ ಉದುರಲಾರಂಭಿಸುತ್ತದೆ. ಕೆಲವು ಮುಂಚೆಯೇ ಉದುರುತ್ತದೆ. ಇದಕ್ಕೆ ಹಲವು ಕಾರಣಗಳಿದ್ದು, ರೈತರು ತಮ್ಮಲ್ಲಿ ಯಾವ ಸ್ಥಿತಿ ಇದೆಯೋ ಅದಕ್ಕನುಗುಣವಾಗಿ ಉಪಚಾರ ಮಾಡಿ ಅದನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಬಹುದು. ಮಳೆ ಒಂದು ಬಂದರೆ ಸಾಕು, ಅಡಿಕೆ ಮರದಲ್ಲಿ ಮಿಡಿಗಳು ಉದುರುತ್ತವೆ. ಕೆಲವೊಮ್ಮೆ ಒಂದೆರಡು  ಸಂಖ್ಯೆಯಲ್ಲಿ ಉದುರಿದರೆ  ಕೆಲವೊಮ್ಮೆ ಬಹುತೇಕ ಉದುರುತ್ತದೆ. ಅಂತಹಹ ಮಿಡಿಗಳಲ್ಲಿ ಆ ದಿನ ಉದುರಿದ ಮಿಡಿಯನ್ನು ಒಮ್ಮೆ ಸರಿಯಾಗಿ…

Read more
ಕುರಿ – ಕೋಳಿ ಗೊಬ್ಬರ ಸದ್ಯಕ್ಕೆ ಬಳಸಬೇಡಿ

ಕುರಿ – ಕೋಳಿ ಗೊಬ್ಬರ ಸದ್ಯಕ್ಕೆ ಬಳಸಬೇಡಿ. ಎಲೆ ಚುಕ್ಕೆಗೆ ಇದೂ ಕಾರಣವಾಗಬಹುದು

ಕರಾವಳಿ ಮಲೆನಾಡಿನಲ್ಲಿ ಈಗ ಕೊಟ್ಟಿಗೆ ಗೊಬ್ಬರದ ಬದಲಿಗೆ ಕುರಿ ಗೊಬ್ಬರ, ಕೋಳಿ ಗೊಬ್ಬರ ಬಳಕೆ ಮಾಡುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಈ ಗೊಬ್ಬರವನ್ನು ಬಳಕೆ ಮಾಡದೆ ಇರುವುದು ಒಳ್ಳೆಯದು. ಎಲೆ ಚುಕ್ಕೆ ರೋಗ ಬರೇ ಅಡಿಕೆಗೆ ಮಾತ್ರವಲ್ಲ, ಬೇರೆ ಬೇರೆ ಬೆಳೆಗೂ ಬರುತ್ತದೆ. ಅದು ಸಸ್ಯ ಶೇಷಗಳ ಮೂಲಕ ಪ್ರದೇಶದಿಂದ ಪ್ರದೇಶಕ್ಕೆ ಹರಡುವ ಸಾಧ್ಯತೆ ಇದೆ. ರೋಗಗಳು , ಕೀಟಗಳು ಪ್ರದೇಶದಿಂದ ಪ್ರದೇಶಕ್ಕೆ ಹರಡುದಕ್ಕೆ ಹಲವಾರು ಕಾರಣಗಳಿವೆ. ಸಸ್ಯ ಸಾಮಾಗ್ರಿಯನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸುವಾಗ ಅದರ…

Read more
error: Content is protected !!