ಕಬ್ಬು ಸಸ್ಯ -sugarcane plants

ಕಬ್ಬು ಬೆಳೆಯಲ್ಲಿ ದಂಟು ಕೊರಕ ಕೀಟದ ನಿಯಂತ್ರಣ ಹೇಗೆ?

ಕಬ್ಬಿನ ಬೆಳೆ ಉಳಿದೆಲ್ಲಾ ವಾಣಿಜ್ಯ ಬೆಳೆಗಳಿಗಿಂತ ಸುಲಭದ ಬೆಳೆ.ಆದಾಗ್ಯೂ ಇದಕ್ಕೆ ಕೆಲವು ಕೀಟ ರೋಗ ಸಮಸ್ಯೆಗಳು ಇಲ್ಲದಿಲ್ಲ. ಬೇರು ಹುಳದಂತ ಸಮಸ್ಯೆ ಕೆಲವು ಭಾಗಗಳಲ್ಲಿ ಕಬ್ಬು ಬೆಳೆಯಲೇ ಸಾಧ್ಯವಿಲ್ಲ ಎಂಬ ಮಟ್ಟಕ್ಕೆ ಬಂದರೆ, ಗಂಟು ಕೊರೆಯುವ ಹುಳವೂ (Internode borer) ಬಹುತೇಕ ಎಲ್ಲಾ ಕಡೆ ಇದೆ. ನಿಯಂತ್ರಣ ಮಾಡದಿದ್ದರೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಾ ಹೋಗುತ್ತದೆ. ಕರ್ನಾಟಕದ ಬಹುತೇಕ ಕಬ್ಬು ಬೆಳೆಯುವ ಭಾಗಗಳಲ್ಲಿ ಈ ಕೀಟದ ತೊಂದರೆ ಹೆಚ್ಚಾಗಿದ್ದು, ಗಂಟುಗಳು ಹತ್ತಿರವಾಗಿ(ಕಿರಿದಾಗಿ), ಗುಣಮಟ್ಟ ಕುಂಠಿತವಾಗಿ ಕಬ್ಬಿನ ರಿಕವರಿ ನಷ್ಟ…

Read more
ಅಲಸಂಡೆ ಬೆಳೆ

ರೋಗ- ಕೀಟಗಳ ಹಾನಿ ಕಡಿಮೆ ಮಾಡಲು ತರಕಾರಿ ಬೆಳೆಗೆ ಮಲ್ಚಿಂಗ್ ಶೀಟು ಹಾಕಿ.

ಇಂದು ನಾವು ಹೇರಳವಾಗಿ ತರಕಾರಿಗಳನ್ನು ಬೆಳೆದು ಬಳಸುತ್ತಿದ್ದರೆ, ಆ ಯಶಸ್ಸಿನ ಹಿಂದೆ ಮಲ್ಚಿಂಗ್ ಶೀಟು ಎಂಬ ತಂತ್ರಜ್ಞಾನದ ಕೊಡುಗೆ ಬಹಳ ಇದೆ. ಇದು ಇಲ್ಲವಾಗಿದ್ದರೆ ಬಹುಶಃ 25-30% ಬೆಳೆ ಕಡಿಮೆಯಾಗಿ, ರೈತರಿಗೆ ಲಾಭವೂ ಕಡಿಮೆಯಾಗುತ್ತಿತ್ತು. ಪ್ರತೀ ವರ್ಷವೂ ತರಕಾರಿ ಬೆಳೆಯುವರಿಗೆ ಒಂದಿಲ್ಲೊಂದು ತೊಂದರೆ.  ಬಾರೀ ಪ್ರಮಾಣದಲ್ಲಿ  ಮಳೆ ಹೊಡೆತಕ್ಕೆ ಸಿಕ್ಕಿ ಬೆಳೆ ಹಾಳಾಗುತ್ತದೆ. ಬೇಸಿಗೆಯಲ್ಲಿ ನೀರೊತ್ತಾಯವಾಗುತ್ತದೆ. ಕಳೆ ಬರುತ್ತದೆ. ಹುಳ ಬರುತ್ತದೆ. ಇದಕ್ಕೆಲ್ಲಾ ಮಲ್ಚಿಂಗ್ ಶೀಟು ಹಾಕಿ ಬೆಳೆದರೆ ಅಷ್ಟೊಂದು ಹಾನಿಇಲ್ಲ. ಕಾರಣ ಇಷ್ಟೇ. ಅಧಿಕ ತೇವಾಂಶವಾಗುವುದನ್ನು…

Read more
vertical farming

ಕಡಿಮೆ ಸ್ಥಳದಲ್ಲಿ ಹೆಚ್ಚು ಬೆಳೆ ಬೆಳೆಯಬಹುದಾದ ವರ್ಟಿಕಲ್ ಕೃಷಿ.

ಕೃಷಿ ದಿನದಿಂದ ದಿನಕ್ಕೆ ಬದಲಾವಣೆಯ ಮೆಟ್ಟಲೇರುತ್ತಾ ಇರುತ್ತದೆ. ಇನ್ನು ಮುಂದಿನ ದಿನಗಳಲ್ಲಿ ಅತೀ ಕಡಿಮೆ ಸ್ಥಳಾವಕಾಶದಲ್ಲಿ ಅಧಿಕ ಬೆಳೆ ಬೆಳೆಸಿ, ಅಧಿಕ ಇಳುವರಿ ಪಡೆಯುವುದೇ ಆಗಿರುತ್ತದೆ. ಸುಮಾರು 30-40 ವರ್ಷದ ಹಿಂದೆ ನಮ್ಮ ಕೃಷಿ ಹೇಗಿತ್ತು ಎಂಬುದನ್ನು ಆ ವಯೋಮಾನದವರು ಒಮ್ಮೆ ನೆನಪಿಸಿಕೊಳ್ಳಿ. ಅದೇ ರೀತಿ ತುಂಬಾ ಹಿರಿಯರಿದ್ದರೆ ಅವರ ಕಾಲದಲ್ಲಿ ಸುಮಾರು 50-60 ವರ್ಷಗಳ ಹಿಂದೆ ಹೇಗಿತ್ತು ಎಂಬುದನ್ನು ಒಮ್ಮೆ ಕೇಳಿ ನೋಡಿ ಈಗಿನದ್ದು   ನಮಗೆಲ್ಲಾ ಗೊತ್ತಿದೆ ತಾನೇ? ಎಲ್ಲವೂ ಭಾರೀ ಬದಲಾವಣೆ ಆಗಿದೆ. ಆಗುತ್ತಲೇ…

Read more
ಗೇರು ಮರಕ್ಕೆ ಗೊಬ್ಬರ ಕೊಡುವ ವಿಧಾನ

ಗೇರು – ಗೊಬ್ಬರ ಕೊಟ್ಟರೆ ಬಂಪರ್ ಇಳುವರಿ ಪಡೆಯಬಹುದು.

ಗೇರು ಬೆಳೆಗೆ ವರ್ಷದಲ್ಲಿ 3 ತಿಂಗಳು ಮಾತ್ರ ಕೆಲಸ, ನೀರಾವರಿ ಬೇಡ. ಉತ್ತಮವಾಗಿ ಗೊಬ್ಬರ ಕೊಟ್ಟು ನಿಗಾ ವಹಿಸಿ ಬೆಳೆದರೆ 5-6  ವರ್ಷದ ಮರದಲ್ಲಿ 10 ಕಿಲೋ ತನಕ ಇಳುವರಿ ಪಡೆಯಬಹುದು. ಕನಿಷ್ಟ 1000 ರೂ ಆದಾಯಕ್ಕೆ ತೊಂದರೆ ಇಲ್ಲ ಎಂಬ ಕಾರಣಕ್ಕೆ ರೈತರು ತಮ್ಮಲ್ಲಿ ಖಾಲಿ ಇರುವ ಸ್ಥಳದಲ್ಲಿ ಗೇರು ಬೆಳೆ ಬೆಳೆಸಿದ್ದಾರೆ. ಬರೇ ನೆಟ್ಟರೆ ಸಾಲದು ಅದಕ್ಕೆ ಅಗತ್ಯ ಪೊಷಕಗಳನ್ನು ಕಾಲ ಕಾಲಕ್ಕೆ ಕೊಟ್ಟರೆ ಉತ್ತಮ ಇಳುವರಿ ಪಡೆಯಲು ಸಾಧ್ಯ.     ಗೇರು ಮರ ಚೆನ್ನಾಗಿ…

Read more
ಮಂಗಳ ಆಡಿಕೆ

ಜಲ್ಲಿ ಮಂಗಳ ಎಂಬ ಹೊಸ ತಳಿ ಇದೆಯೇ?

ಮಂಗಳ ಎಂಬ ತಳಿಯನ್ನು ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯು 1972 ರಲ್ಲಿ ಚೀನಾ ದಿಂದ ಮೂಲ ತಂದು ಇಲ್ಲಿ ಅಭಿವೃದ್ದಿಪಡಿಸಿದ್ದು ಬಿಟ್ಟರೆ, ಈ ತನಕ ಬೇರೆ ಮಂಗಳ ತಳಿಯನ್ನು ಬಿಡುಗಡೆ ಮಾಡಿಲ್ಲ. ಅದರ ಮೂಲ ಗುಣ ಕ್ಷೀಣವಾದುದಕ್ಕೆ ಅದರಲ್ಲೇ ಆಂತರಿಕ ಕ್ರಾಸಿಂಗ್  ಮಾಡಿ ಇಂಟರ್ ಮಂಗಳವನ್ನು 1984 ರಲ್ಲಿ ಪಡೆಯಯಲಾಗಿದೆ.  ಚೀನಾದಲ್ಲಿ ಇದಕ್ಕೆ ಯಾವ ಹೆಸರಿತ್ತೋ ಗೊತ್ತಿಲ್ಲ. ಇಲ್ಲಿ ಅಭಿವೃದ್ದಿಪಡಿಸಿ ಬಿಡುಗಡೆ ಮಾಡುವಾಗ ಮಂಗಳ ಹೆಸರನ್ನು ನೀಡಲಾಗಿದೆ. ಹಾಗೆ ನೋಡಿದರೆ ಕೆಲವು ಚಾಲಿ ಅಡಿಕೆಗೆ ಹೊಂದುವ…

Read more

ಕಾಡು ಪ್ರಾಣಿಗಳಿಗೆ ಇನ್ನು ಹೊಲವೇ ಖಾಯಂ ವಾಸ್ತವ್ಯ!

ಸರಕಾರ ಈಗ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದ್ದ ಸುಮಾರು 23 ಲಕ್ಷ ಎಕ್ರೆ ಅರಣ್ಯ ( ಡೀಮ್ದ್ ಫೋರೆಸ್ಟ್ )ನಲ್ಲಿ 15 ಲಕ್ಷ ಎಕರೆ  ಭೂಮಿಯನ್ನು ಸರಕಾರ ಕಂದಾಯ ಇಲಾಖೆಗೆ ವರ್ಗಾಯಿಸಲು ನಿರ್ಧರಿಸಿದೆ. ಈಗಲೇ ಅರಣ್ಯ ನಾಶದಿಂದ  ಕೃಷಿಕರ 10- 20 % ದಷ್ಟು ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದೆ. ಒಂದು ವೇಳೆ ಇನ್ನೂ ಕಾಡು ಕಡಿಮೆಯಾದರೆ  ಕೃಷಿಕರ ಹೊಲದಲ್ಲೇ ಕಾಡು ಪ್ರಾಣಿಗಳು ವಾಸಮಾಡಬಹುದು. ಬೆಳೆಗಳು ಕೋತಿ, ಆನೆ ಕಾಡೆಮ್ಮೆಗಳ ಪಾಲಾಗಬಹುದು. ಹಟ್ಟಿಯಲ್ಲಿರುವ ಹಸುಗಳು ಹುಲಿ, ಚಿರತೆಯ ಪಾಲಾದರೂ…

Read more
ಶುದ್ಧ ತೆಂಗಿನ ಎಣ್ಣೆ

ಶುದ್ಧ ತೆಂಗಿನೆಣ್ಣೆಯಲ್ಲಿದೆ – ಅಪರಿಮಿತ ಆರೋಗ್ಯ ಗುಣಗಳು

ಪ್ರಕೃತಿ ಸೃಷ್ಟಿಸಿದ ಹಲವಾರು ಔಷಧೀಯ ಸಸ್ಯ , ಮೂಲಿಕೆಗಳಲ್ಲಿ ತೆಂಗು ಒಂದು. ಇದು ಇಂದು ನಿನ್ನೆಯ ವಿಚಾರ ಅಲ್ಲ. ಅನಾದಿ ಕಾಲದಿಂದಲೂ ಇದ್ದದ್ದು. ಆದರೆ ಗೊತ್ತೀದ್ದೋ ಗೊತ್ತಿಲ್ಲದೆಯೋ ನಾವು ಬಳಸುವುದು ಕಡಿಮೆ ಮಾಡುತ್ತಿದೇವೆ.ತೆಂಗಿನ ಎಣ್ಣೆ ತಿಂದವರಿಗೆ ರೋಗ ಇಲ್ಲ.  ಕೊಬ್ಬರಿ ಎಣ್ಣೆ ಎಂಬುದು ಹಸುವಿನ ತುಪ್ಪಕ್ಕೆ ಸರಿಸಾಟಿಯಾದ ವಸ್ತು ಎನ್ನುತ್ತಾರೆ. ಇದು ಸಸ್ಯಜನ್ಯ ಎಣ್ಣೆಯಾಗಿದ್ದು, ತುಪ್ಪಕ್ಕಿಂತಲೂ ಮಿಗಿಲಾದ ಔಷಧೀಯ ಗುಣವನ್ನು ಪಡೆದಿದೆ. ನಮ್ಮಲ್ಲಿ ಈಗಲೂ ಹಳ್ಳಿಯ ಜನ ಕಣ್ಣು ತುರಿಕೆ, ಮೈ ತುರಿಕೆ ಆದರೆ ಆ ಭಾಗಕ್ಕೆ…

Read more
ಸುಣ್ಣದ ಹುಡಿ ಚೆಲ್ಲುವುದು

ಸುಣ್ಣ ಹಾಕುತ್ತಿರಾ? ಈ ಮಾಹಿತಿಯನ್ನುಮೊದಲು ತಿಳಿದಿರಿ.

ಸುಣ್ಣ ಹಾಕುವುದರಿಂದ ಮಣ್ಣಿನ ರಸಸಾರ ತಟಸ್ಥ ಸ್ಥಿತಿಯತ್ತ ತಲುಪುತ್ತದೆ, ಅಥವಾ ಸ್ವಲ್ಪ ಕ್ಷಾರೀಯವೂ ಆಗುತ್ತದೆ. ಮಣ್ಣಿನ ಸ್ಥಿತಿ  ಹುಳಿಯಿಂದ ಕ್ಷಾರದತ್ತ ಬದಲಾವಣೆ ಆದ ನಂತರ ಗೊಬ್ಬರ ಬಳಸಿದರೆ ಅದನ್ನು ಸಸ್ಯಗಳು ಸುಭೋಜ್ಯವಾಗಿ ಬಳಸಿಕೊಳ್ಳುತ್ತವೆ. ಜೀರ್ಣ ಶಕ್ತಿ ಸರಿಯಾಗಿ  ಇರುವಾಗ ಆಹಾರ ತಿಂದರೆ ಅದು ಶರೀರಕ್ಕೆ ಚೆನ್ನಾಗಿ ತೆಗೆದುಕೊಳ್ಳುತ್ತದೆ ಹಾಗೆಯೇ ಇದೂ ಸಹ. ಮಣ್ಣಿನ ಜೀರ್ಣ ಶಕ್ತಿಯನ್ನು ಉತ್ತಮಪಡಿಸಿ ಪೋಷಕಾಂಶ ನೀಡುವುದು ಒಳ್ಳೆಯ ಕ್ರಮ. ಸಾಗುವಳಿಗೆ ಒಳಪಟ್ಟ ಅಥವಾ ಬೆಳೆ ಬೆಳೆಯುವ ಭೂಮಿಯ ಸಾರಾಂಶಗಳನ್ನು ಬೆಳೆಗಳು ಬಳಕೆ ಮಾಡಿಕೊಂಡಾಗ…

Read more

ಜೈವಿಕ ಗೊಬ್ಬರವನ್ನು ಹೀಗೆ ಬಳಸಿದರೆ ಹೆಚ್ಚು ಫಲ ಸಿಗುತ್ತದೆ?

ಬೇರೆ ಬೇರೆ ಜೀವಾಣುಗಳ ಸಹಾಯದಿಂದ ಬೆಳೆ ಪೋಷಣೆ ಮತ್ತು ಬೆಳೆ ಸಂರಕ್ಷಣೆ ಮಾಡಬಹುದು. ಈ ಜೀವಾಣುಗಳನ್ನು ಹುಡಿ, ದ್ರವ ರೂಪದಲ್ಲಿ ರೈತರಿಗೆ ಒದಗಿಸಲಾಗುತ್ತದೆ. ಇದರ ಸಮರ್ಪಕ ಫಲಿತಾಂಶ ಯಾವ ಸಂದರ್ಭದಲ್ಲಿ ಚೆನ್ನಾಗಿ ನಡೆಯುತ್ತದೆ ಎಂಬುದು ಎಲ್ಲರೂ ತಿಳಿದಿರಬೇಕು. ಜೀವಾಣುಗಳನ್ನು ಬಳಸುವ ಮುನ್ನ ಅದರ ಬಗ್ಗೆ ರೈತರು ತಿಳಿದುಕೊಳ್ಳಬೇಕು. ಅದು ಜೀವಾಣು ಎಂದಲ್ಲ. ಯಾವುದೇ ಬೆಳೆ ಪೋಷಕ ಇರಲಿ ಬೆಳೆ ಸಂರಕ್ಷಕ ಇರಲಿ, ಬಳಸುವ ಮುನ್ನ ಅದರಲ್ಲಿ ಯಾವ ಅಂಶ ಇದೆ ಎಂಬುದನ್ನು ಯಾರು ಬಹಿರಂಗ ಗೊಳಿಸುತ್ತಾರೆಯೋ ಅವರಿಂದ…

Read more
green leaf carrying

ತೋಟಕ್ಕೆ ಈಗ ಹಸಿ ಸೊಪ್ಪು ಹಾಕಿದರೆ ತುಂಬಾ ಅನುಕೂಲ. ಯಾಕೆ?

ತೋಟಕ್ಕೆ ಹಸಿ ಸೊಪ್ಪುಗಳನ್ನು ಬಳಸುವ ಸರಿಯಾದ ಸಮಯ ಮಳೆಗಾಲದ ಪ್ರಾರಂಭದ ದಿನಗಳು. ಈ ಸಮಯದಲ್ಲಿ ಹಸಿ ಸೊಪ್ಪು ಹಾಕಿದರೆ ಅದು ಕರಗಿಸಿಕೊಡುವ ಜೀವಿಗಳಿಂದ ಚೆನ್ನಾಗಿ ಕರಗುತ್ತದೆ.  ಮಳೆಗಾಲ ಪ್ರಾರಂಭದಿಂದ ಕೊನೆತನಕವೂ ಮಣ್ಣು ತೇವ ಭರಿತವಾಗಿರುತ್ತದೆ, ವಾತಾವರಣ ತಂಪಾಗಿರುತ್ತದೆ. ಇವೆಲ್ಲದರ ಅನುಕೂಲ ಬಳಸಿಕೊಂಡು ಮಣ್ಣಿನಲ್ಲಿ ಇರುವ ಬಹುತೇಕ ಎಲ್ಲಾ ಸೂಕ್ಷ್ಮಾಣು ಜೀವಿಗಳೂ ಹೆಚ್ಚು ಚಟುವಟಿಕೆಯಲ್ಲಿರುತ್ತವೆ. ಈಗ ನೀವು ಏನೇ ಸಾವಯವ ತ್ಯಾಜ್ಯ ಹಾಕಿದರೂ ಅದು ತ್ವರಿತವಾಗಿ ಕರಗಿ ಮಣ್ಣಾಗುತ್ತದೆ. ಈಗ ಸೊಪ್ಪು ಸದೆ ಹಾಕಿದರೆ ಮಳೆ ಹನಿಗಳಿಂದಾಗುವ ಮಣ್ಣು ಸವಕಳಿಯನ್ನೂ ತಡೆಯುತ್ತದೆ. ಕಳೆ ನಿಯಂತ್ರಣಕ್ಕೂ ಸಹಕಾರಿ….

Read more
error: Content is protected !!