ರೈತರ ಆದಾಯಕ್ಕೆ ಬ್ಲೇಡ್ ಹಾಕದಿದ್ದರೆ ಅದಾಯ ತಕ್ಷಣ ದ್ವಿಗುಣ.

ಭಾರತ ಸರಕಾರವು 2022 ವೇಳೆಗೆ  ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಗುರಿಯನ್ನು ಹೊಂದಿರುವುದು ನಮೆಗೆಲ್ಲಾ ಗೊತ್ತಿದೆ. ಇದಕ್ಕೆ ಸಾಕಷ್ಟು ತಯಾರಿಗಳು ಆಗುತ್ತಿದೆ. ಈಗ ನಡೆಯುತ್ತಿರುವ ಪೂರ್ವ ತಯಾರಿಯಲ್ಲಿ ಯಾಕೋ ಭಾರತ ರೈತರ ಆದಾಯವು ದ್ವಿಗುಣಗೊಂಡರೂ ಸಹ ಅದು ಅವನಿಗೆ ಉಳಿಯಲಿಕ್ಕಿಲ್ಲವೇನೋ ಅನ್ನಿಸುತ್ತಿದೆ. ರೈತರ ಆದಾಯ ದ್ವಿಗುಣವಾಗುವುದು (doubling farmers‘ income) ಅನಿವಾರ್ಯ. ಅದರ ಅಗತ್ಯ ಆಡಳಿತ ನಡೆಸುವ ನಮ್ಮ ಮುಖಂಡರಿಗೆ ತಿಳುವಳಿಕೆಗ ಬಂದುದೂ ಸಹ ಸ್ವಾಗತಾರ್ಹ. ಯಾವಾಗಲೋ  ಅದನ್ನು ಸರಕಾರ  ಗಮನಿಸಿ ಅದಕ್ಕೆ ಬೇಕಾದ ಕಾರ್ಯಕ್ರಮಗಳನ್ನು  ಹಾಕಿಕೊಳ್ಳಬೇಕಿತ್ತು. ಈಗಲಾದರೂ…

Read more

ಹ್ಯೂಮಸ್ ಹೆಚ್ಚಿಸಿ ಅಧಿಕ ಫಸಲು ಪಡೆಯಿರಿ.

ಎಲ್ಲರೂ ಹ್ಯೂಮಸ್ ಎಂಬ ಶಬ್ಧವನ್ನು ಕೇಳಿರುತ್ತಾರೆ.ಆದರೆ ಇದು ಏನು, ಹೇಗೆ ಉತ್ಪಾದನೆಯಾಗುತ್ತದೆ ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಹ್ಯೂಮಸ್ ಎಂದರೆ ಮಣ್ಣಿನಲ್ಲಿ ಜೀವ ರಾಸಾಯನಿಕ ಕ್ರಿಯೆಯಿಂದ ಉತ್ಪಾದನೆಯಾಗುವ ಆಕಾರ ರಹಿತ, ಒಂದು ವಸ್ತು. ಇದು ಮಣ್ಣಿನ ಸ್ಥಿತಿಯನ್ನು ಫಲವತ್ತಾಗಿ ಇಡಲು ನೆರವಾಗುವ ಅಂಶ. ನಾವು ಮಣ್ಣಿಗೆ ಸೇರಿಸುವ ಕೃಷಿ ತ್ಯಾಜ್ಯಗಳು, ಮಣ್ಣಿನಲ್ಲೇ ಇರುವ ಕೆಲವು ಜೀವಿಗಳು ತಮ್ಮ ಆಯುಸ್ಸನ್ನು ಮುಗಿಸಿ ಮತ್ತೆ ಮಣ್ಣಿಗೇ ಸೇರುತ್ತವೆ. dead plant and animals and ferns etc.  ಅದು ಮಣ್ಣಿನಲ್ಲಿ ವಿಘಟನೆಯಾಗುವಾಗ…

Read more
areca nut palm with full yield

ಅಡಿಕೆ – ಉತ್ತಮ ಫಲ ಕೊಡುವ ಮರದ ಲಕ್ಷಣ ಹೇಗಿರಬೇಕು.

ಇತ್ತೀಚೆಗಿನ ಅಡಿಕೆ ತೋಟಗಳಲ್ಲಿ ಶೇ.50 ಮಾತ್ರ ಉತ್ತಮ ಫಲನೀಡಿ, ಉಳಿದವು ಅನುತ್ಪಾದಕ ಮರಗಳಂತೆ ಇರುವ ಕಾರಣ ತೋಟಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದರೂ ಉತ್ಪಾದನೆ ಆ ಮಟ್ಟಕ್ಕೆ ಏರುತ್ತಿಲ್ಲ. ಬೆಳೆಗಾರರು ಹೆಚ್ಚು ಹೆಚ್ಚು ಸಸಿ ನೆಡುವ ಬದಲು ಇರುವ ತೋಟದಲ್ಲೇ ಬಹುತೇಕ ಉತ್ಪಾದಕ ಮರಗಳಿರುವಂತೆ ತೋಟವನ್ನು ಪುನಃಶ್ಚೇತನ ಮಾಡುವುದು ಎಲ್ಲಾ ದೃಷ್ಟಿಯಿಂದ ಉತ್ತಮ. ಸ್ವಲ್ಪ ಬಿಡುವು ಮಾಡಿಕೊಂಡು ತೋಟ ಸುತ್ತುತ್ತಾ ಬನ್ನಿ. ಹಿಂದೆ ಸುತ್ತುದಾಗ ಗಮನಿಸಿದ ಮರ, ಕಳೆದ ವರ್ಷ ಸುತ್ತುವಾಗ ಗಮನಿಸಿದ ಮರ , ಅದಕ್ಕಿಂತ ಹಿಂದಿನ…

Read more

ಬಯೋ NPK ಒಂದೇ ಸಾಕು? ಇದೆಷ್ಟು ನಿಜ.

ಬಹುತೇಕ  ರೈತರ ಬಳಿಗೆ ಕೆಲವು ನೆಟ್ ವರ್ಕ್ ಸಂಘಟನೆಗಳು, ಹಾಗೆಯೇ ಕೆಲವು ಸಾವಯವ ಗೊಬ್ಬರ ಪ್ರಚಾರಕರು ಒಂದೆರಡೂ ಬಾಟಲಿಗಳನ್ನು ಅಥವಾ ಪ್ಯಾಕೆಟುಗಳನ್ನು  ಪರಿಚಯಿಸಿ ಈ ಪ್ಯಾಕೇಟ್/ಬಾಟಲಿಯ ದ್ರಾವಣ ಹಾಕಿದರೆ ಬೇರೆ ಗೊಬ್ಬರ ಬೇಕಾಗಿಲ್ಲ. ಭಾರೀ ಫಸಲು ಎಂದು  ಹೇಳುತ್ತಾರೆ. ಇದು ಬಯೋ( ಜೈವಿಕ) ಗೊಬ್ಬರ ಎಂಬುದಾಗಿಯೂ ಹೇಳುತ್ತಾರೆ. ಅಧಿಕ ಇಳುವರಿಯ ಆಶೆಯಲ್ಲಿ ಜನ ಖರೀದಿಸಿ ಬಳಸುತ್ತಾರೆ. ಇಂತಹ ಜೈವಿಕ ಗೊಬ್ಬರಗಳ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ. ಬಯೋ NPK ಗೊಬ್ಬರ ಎಂದರೆ ಜೈವಿಕವಾಗಿ ಸಾರಜನಕ , ರಂಜಕ…

Read more
ಗಡ್ದೆ ಕಸಿಯ ಗಿಡ

ಗಡ್ಡೆಯಿಂದ ಅಂಗಾಂಶ ಕಸಿ- ನೀವೇ ಮಾಡಬಹುದು ಹೇಗೆ?

ನಿಮಗೆ ಖುಷಿ ಕಂಡ ಬಾಳೆಯನ್ನು ಎಲ್ಲೇ ಕಂಡರೂ ಅದರ ಒಂದು ಗಡ್ಡೆ ತಂದರೆ ಸಾಕು, ಆ ಒಂದು  ಗಡ್ಡೆಯ ಮೂಲದಲ್ಲಿ 4 ತಿಂಗಳೊಳಗೆ 50 ಕ್ಕೂ ಹೆಚ್ಚು ಸಸಿಗಳನ್ನು  ಪಡೆಯಬಹುದು. ಈ ತಂತ್ರಜ್ಞಾನವನ್ನು ತಿರುಚಿನಾಪಳ್ಳಿಯ ರಾಷ್ಟ್ರೀಯ ಬಾಳೆ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಪ್ರಚಾರಕ್ಕೆ ತಂದಿದ್ದಾರೆ. ಬಾಳೆಯ ಅಧಿಕ ಸಸಿಗಾಗಿ ಅಂಗಾಂಶ ಕಸಿ ಮಾಡಬೇಕು. ಇಲ್ಲವೇ ಅಧಿಕ ತೂಕದ ಗಡ್ಡೆಯನ್ನು ತರಬೇಕು. ಅದರ ಬದಲಿಗೆ ಒಂದು ಗಡ್ಡೆ ಇದ್ದರೆ ನಿಮ್ಮ ಮನೆಯಲ್ಲೇ ಅಧಿಕ ಸಂಖ್ಯೆಯ ಬಾಳೆ ಸಸಿಯನ್ನು ಉತ್ಪಾದಿಸಲು…

Read more
brinja

ಬಿಟಿ ಬದನೆ ಬಂದರೆ ಕೀಟನಾಶಕ ಬಳಸದ ಬದನೆ ತಿನ್ನಬಹುದು.

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿಟಿ ಬದನೆಯ ಬೇಸಾಯ ಸದ್ದಿಲದ್ದೆ ಕರ್ನಾಟಕದಲ್ಲಿ ರೈತರು ಎಚ್ಚರದಿಂದಿರಿ ಎಂಬ    ವಿರೋಧಿ ಹೋರಾಟದ ಸಂದೇಶಗಳು ರವಾನೆಯಾಗುತ್ತಿವೆ. ಯಾಕೆ ಬಿಟಿ ಬದನೆ ಬೇಡ ಎಂದು ತಿಳಿಯುತ್ತಿಲ್ಲ. ವೈಜ್ಞಾನಿಕ ಮೂಲಗಳು ಬಿಟಿಯಿಂದ ತೊಂದರೆ ಇಲ್ಲ ಎಂಬುದನ್ನು ಆದಾರ ಸಹಿತ ಹೇಳಿದರೆ  ಬಿಟಿ ಬೇಡ ಎನ್ನುವವರು ತಮ್ಮದೇ ಆದ ವಾದಗಳಿಂದ ಜನರನ್ನು ಅಂಜಿಸುತ್ತಿದ್ದಾರೆ. ವಿಜ್ಞಾನ ಹೇಳುತ್ತದೆ ಹೀಗೆ: ಬಿಟಿ ಎಂದರೆ ವಂಶವಾಹಿ ಮಾರ್ಪಾಡು ಮಾಡಲಾದ ತಳಿ. ಮಾರ್ಪಾಡು ಎಂದರೆ ಕೆಲವು ಅವಗುಣಗಳನ್ನು ತೆಗೆದು ಅಗತ್ಯ ಗುಣಗಳನ್ನು ಅದರ…

Read more
ಕೃಷಿ ಮತ್ತು ಅರಣ್ಯ

ಕೃಷಿಯೊಂದಿಗೆ ಅರಣ್ಯ ಬೇಡ – ಸೊಪ್ಪು ಕಟ್ಟಿಗೆ ಮಾತ್ರ ಇರಲಿ..

ಮರಮಟ್ಟಿಗಾಗಿ (ನಾಟಾ) ಉದ್ದೇಶಕ್ಕಾಗಿ ಸಸಿ ನೆಟ್ಟು ಬೆಳೆಸುವುದೇ ಆಗಿದ್ದರೆ , ಅದು ಕೃಷಿಯ ಜೊತೆಗೆ ಇದ್ದರೆ ಆಗುವುದಿಲ್ಲ. ಮರಮಟ್ಟುಗಳನ್ನು ಪ್ರತ್ಯೇಕ ಜಾಗದಲ್ಲಿ ಬೆಳೆಸಿದರೆ ಮಾತ್ರ ಅದು ಲಾಭದಾಯಕ. ಸರಕಾರ ರೈತರಿಗೆ ಹುಡಿಗಾಸಿನ ಆಸೆ ತೋರಿಸು ಕೃಷಿ ಅರಣ್ಯವನ್ನು ಪ್ರೋತ್ಸಾಹಿಸುತ್ತಿದೆ. ಭಾರೀ ಪ್ರಚಾರವನ್ನೂ ಮಾಡುತ್ತಿವೆ. ಕೆಲವು ರೈತರು  ಹಣದ ಆಸೆಗೆ ಒಂದಷ್ಟು ಮರಮಟ್ಟಿನ ಸಸ್ಯಗಳನ್ನು  ಬದುಗಳಲ್ಲಿ, ಖಾಲಿ ಜಾಗದಲ್ಲಿ ಬೆಳೆಸುತ್ತಿದ್ದಾರೆ.  ಕೃಷಿ ಹೊಲದಲ್ಲಿ ಮರಮಟ್ಟುಗಳು ಇದ್ದರೆ ಭವಿಷ್ಯದಲ್ಲಿ  ಬಹಳ ಅನುಕೂಲ ಇರಬಹುದು. ಆದರೆ ವರ್ತಮಾನದಲ್ಲಿ ಅನನುಕೂಲತೆಯೇ ಹೆಚ್ಚು ಹೇಗೆ…

Read more

ಸರಕಾರೀ ವ್ಯವಸ್ಥೆಗಳಲ್ಲೂ ಇಷ್ಟು ವ್ಯಾಪಾರ ಬೇಕೇ?

ಮೊನ್ನೆ ಸುಬ್ರಮಣ್ಯ ಸಮೀಪದ ನೆಟ್ಟಣದ ಕೇಂದ್ರೀಯ ತೋಟದ ಬೆಳೆಗಳ ಸಂಶೊಧಾನ ಸಂಸ್ಥೆಯ  ಬೀಜ ಕೇಂದ್ರಕ್ಕೆ ತೆಂಗಿನ ಸಸಿ ತರಲು ಹೋಗಿದ್ದೆ. ಇಲ್ಲಿ ಆದ ಅನುಭವ ಯಾಕೋ ರೈತರ ಜೊತೆ ಹಂಚಿಕೊಳ್ಳಬೇಕೆನಿಸುತ್ತಿದೆ.  ಸರಕಾರೀ ವ್ಯವಸ್ಥೆಗಳಲ್ಲಿ ಇಷ್ಟೊಂದು ವ್ಯಾಪಾರ ಬೇಕಾ?. ಬೀಜ- ಸಸಿ ಎಂಬ ರೈತರ ಭವಿಷ್ಯದ ಇನ್ವೆಸ್ಟ್ಮೆಂಟ್ ನಲ್ಲಿ ಯಾರೂ ಮಕ್ಕಳಾಟಿಕೆ ಮಾಡಬಾರದು.  ಒಂದು ಕುಬ್ಜ ತಳಿಯ ಬೀಜದ ತೆಂಗಿನ ಕಾಯಿ. ಬೆಲೆ ಎಷ್ಟು ಗೊತ್ತೇ? ಬರೋಬ್ಬರಿ 120 ರೂ. ಒಂದು ಸಸಿಯ ಬೆಲೆ ಎಷ್ಟು ಗೊತ್ತೇ 210…

Read more
ಅಡಿಕೆ ಗರಿ ತಿನ್ನುವ ಹುಳದ ವಾಸಸ್ಥಾನ

ಅಡಿಕೆಗೆ ಹರಿತ್ತು ತಿನ್ನುವ ಹುಳುವಿನ ತೊಂದರೆ ಮತ್ತು ಪರಿಹಾರ.

ಅಡಿಕೆಯ ಮರದ ಗರಿಗಳನ್ನು ಹಾನಿಮಾಡುವ ಕೀಟಗಳಲ್ಲಿ ಮುಖ್ಯವಾಗಿ ಸುಳಿ ತಿಗಣೆ ಒಂದು ಎಂದು ನಾವು ತಿಳಿದಿದ್ದೇವೆ, ಆದರೆ ಇದನ್ನು ಸಿಂಗಾರ ತಿನ್ನುವ  ಹುಳದ ತರಹವೇ ಇರುವ ಇನ್ನೊಂದು ಎಲೆ ತಿನ್ನುವ ಹುಳ ಸಹ ಅಡಿಕೆಯ ಎಳೆಯ ಗರಿಗಳನ್ನು ತಿನ್ನುತ್ತವೆ. ಇದರಿಂದ ಬಹಳ ಹಾನಿ ಉಂಟಾಗುತ್ತಿದೆ. ದಾವಣಗೆರೆ ಸುತ್ತಮುತ್ತ ಹಲವು ರೈತರ ಹೊಲದಲ್ಲಿ ಈ ಕೀಟದ  ಹಾವಳಿ ಹೆಚ್ಚಾಗಿದ್ದು, ಹೆಚ್ಚು ಹೆಚ್ಚು ಪ್ರದೇಶಕ್ಕೆ ವ್ಯಾಪಿಸುತ್ತಿದೆ. ಅಡಿಕೆಯ ಮರದ ಗರಿಗಳಿಗೆ ಆಗುವ ಹಾನಿ ಇಳುವರಿಯ ಮೇಲೆ ಪ್ರತಿಕೂಲ ಪರಿಣಾಮವನ್ನು ಉಂಟು…

Read more
ತೆಂಗಿನ ನೈಸರ್ಗಿಕ ಹೈಬ್ರೀಡ್ ತಳಿ

ತೆಂಗು ಬೆಳೆಸುವವರೆಲ್ಲರೂ ತಿಳಿದಿರಬೇಕಾದ ಪ್ರಮುಖ ವಿಚಾರ.

ಜಗತ್ತಿನ ಸುಮಾರು 80 ಕ್ಕೂ ಹೆಚ್ಚಿನ ದೇಶಗಳಲ್ಲಿ  ಬೆಳೆಸಲ್ಪಡುತ್ತಿರುವ  ತೆಂಗಿಗೆ ಬೆಳೆಯಲ್ಲದೆ ದೈವಿಕ ಸ್ಥಾನವನ್ನೂ ನೀಡಲಾಗಿದೆ. ನಮ್ಮ ಪೂರ್ವಜರಿಂದ ಲಾಗಾಯ್ತು ಈಗಿನವರೆಗೂ ಜನ ತೆಂಗನ್ನು ನಂಬಿದ್ದಾರೆ. ನಂಬಿಕೆಗೆ ಯಾವಾಗಲೂ ಕುಂದು ತಾರದ ಬೆಳೆ ಎಂದರೆ ತೆಂಗು ಎನ್ನಬಹುದು. ತೆಂಗಿನ ಮೂಲ  ಯಾವುದು: ಕೆಲವು ಪ್ರಕೃತಿಯ ನಿಘೂಢಗಳಲ್ಲಿ ತೆಂಗೂ ಒಂದು. ಇದು ಮೂಲತಹ ಎಲ್ಲಿ ಬೆಳೆಯುತ್ತಿತ್ತು, ಹೇಗೆ ಇದು ಬೆಳೆಯ ಸ್ಥಾನವನ್ನು ಪಡೆಯಿತು ಎಂಬ ಬಗ್ಗೆ ನಿಖರ ಉಲ್ಲೇಖ ಇಂದಿನ ತನಕವೂ ಇಲ್ಲ. ಭಾರತ ದೇಶದಲ್ಲಿ ವೇದಗಳ ಕಾಲದಿಂದಲೂ…

Read more
error: Content is protected !!