ಕೊಕ್ಕೋ ಗಿಡ – ಪ್ರೂನಿಂಗ್ ಮಾಡುವ ವಿಧಾನ.

ಕೊಕ್ಕೋ ಸಸ್ಯ ಬೆಳೆಯಲು ಬಿಟ್ಟರೆ ಮರವೇ ಆಗಬಹುದು. ಹಾಗೆಂದು ಯಾವ ಬೆಳೆಗೂ ತೊಂದರೆ ಇಲ್ಲವಾದರೆ  ಅದನ್ನು ಅದರಷ್ಟಕ್ಕೇ ಬೆಳೆಯಲು ಬಿಡಿ. ಇಳುವರಿ ಹೆಚ್ಚುತ್ತದೆ. ಮಿಶ್ರ ಬೆಳೆಯಾಗಿ ಅಡಿಕೆ ತೋಟದಲ್ಲಿ ಬೆಳೆಸುವಾಗ ನಿಮ್ಮ ಒಡಾಟಕ್ಕೆ,ನೀರಾವರಿ, ಕೊಯಿಲು ಮತ್ತು ಇನ್ನಿತರ ಅನುಕೂಲಕ್ಕೆ ಸಮರ್ಪಕವಾಗಿ ಪ್ರೂನಿಂಗ್ ಮಾಡಬೇಕು. ಕೊಕ್ಕೋ ಬೆಳೆ ಕರಾವಳಿ, ಮಲೆನಾಡು, ಅರೆ ಮಲೆನಾಡು, ಹಾಗೆಯೇ  ಅಡಿಕೆ ತೆಂಗು ಬೆಳೆಯುವ ಬಯಲು ನಾಡಿಗೂ ಇದು  ಉತ್ತಮ ಅದಾಯದ  ಬೆಳೆ. ಕೊಕ್ಕೋವನ್ನು  ಅಡಿಕೆ, ತೆಂಗಿನ ತೋಟದಲ್ಲಿ ಮಿಶ್ರ ಬೆಳೆಯಾಗಿ ಬೆಳೆಯಬಹುದು. ಕೊಕ್ಕೋ…

Read more
ರೋಗ ಸೋಂಕು ರಹಿತ ಬಳ್ಳಿ

ಕರಿಮೆಣಸು – ಯಾವ ಬಳ್ಳಿ ಸಾಯುತ್ತದೆ- ಯಾವುದನ್ನು ಉಳಿಸಬಹುದು?

ಮಳೆಗಾಲ ಮೆಣಸಿನ ಬಳ್ಳಿಗೆ ತೀವ್ರವಾದ ತೊಂದರೆಯನ್ನು ಉಂಟು ಮಾಡುತ್ತದೆ. ಮಳೆಗಾಲ ಪ್ರಾರಂಭವಾದಾಗಿನಿಂದ ಮುಗಿಯುವ ತನಕ ಯಾವಾಗಲೂ ಬರಬಹುದಾದ ಬಳ್ಳಿ ಕೊಳೆ ರೋಗವನ್ನು (Phytophthora foot rot) ಪ್ರಾರಂಭಿಕ ಹಂತದಲ್ಲಿ ಗುರುತಿಸಿದರೆ ಬಳ್ಳಿಯನ್ನು ಬದುಕಿಸಬಹುದು. ರೋಗ  ಪ್ರಾರಂಭವಾಗುವಾಗ ಬಳ್ಳಿ ಯಾವ ಲಕ್ಷಣಗಳನ್ನು ತೋರಿಸುತ್ತದೆ ಎಂಬುದನ್ನು ನಮಗೆ ಗುರುತಿಸಲು ಸಾಧ್ಯವಿದ್ದರೆ ಮಾತ್ರ ನಿವಾರಣೆ ಮಾಡಲು ಸಾಧ್ಯ. ಬುಡ ಭಾಗದಲ್ಲಿ ಎಲೆ ಉದುರಿದೆಯೇ: ಆದಾರ ಮರಕ್ಕೆ ಹಬ್ಬಿದ ಬಳ್ಳಿಯ ಎಲೆಗಳಲ್ಲಿ ಮೊದಲ ಲಕ್ಷಣ ಕಂಡು ಬರುತ್ತದೆ. ರೋಗವು ಮೊದಲಾಗಿ ಬಳ್ಳಿಯ ಬೇರಿಗೆ…

Read more
ತೋಟದಲ್ಲಿ ಫಸಲು ಕಡಿಮೆ- ರೋಗ ಹೆಚ್ಚಾಗಲು ಕಾರಣ

ತೋಟದಲ್ಲಿ ಫಸಲು ಕಡಿಮೆ- ರೋಗ ಹೆಚ್ಚಾಗಲು ಕಾರಣ ಏನು? .

ಹೆಚ್ಚಿನ ಫಸಲು  ಪಡೆಯಲು ಕೇವಲ ಗೊಬ್ಬರ,ನೀರಾವರಿ ಮಾಡಿದರೆ ಸಾಲದು.  ಬೆಳೆಯ ಉತ್ಪಾದನೆ ಮತ್ತು ಆರೋಗ್ಯಕ್ಕಾಗಿ ಭೂಮಿಯನ್ನು ಸದಾ ಸುಸ್ಥಿತಿಯಲ್ಲಿ  ಇಟ್ಟುಕೊಳ್ಳಲೇ ಬೇಕು. ನೀರು ಹೆಚ್ಚಾಗುವುದರಿಂದ ಮಣ್ಣಿನ ಆರೋಗ್ಯ ಕೆಡುತ್ತದೆ. ಮಣ್ಣಿನ ಸ್ವಾಸ್ತ್ಥ್ಯ ಸುಧಾರಣೆಗೆ ನಾವು ಗೊಬ್ಬರ ಹಾಕುತ್ತೇವೆ, ಉಳುಮೆ ಮಾಡುತ್ತೇವೆ. ಆದರೆ ಇದರಿಂದ ಮಣ್ಣಿನ ಆರೋಗ್ಯ ಸುಧಾರಿಸುತ್ತದೆ ಎಂಬುದು ಭ್ರಮೆ. ಮಣ್ಣಿನಲ್ಲಿ ಸಮರ್ಪಕ ಹಬೆಯಾಡುವಿಕೆ, ಉಷ್ಣತೆಯ  ಸಮತೋಲನ, ಇದ್ದರೆ ಮಾತ್ರ ನಾವು ಕೊಡುವ ನೀರು, ಗೊಬ್ಬರ ಫಲ ಕೊಡುತ್ತದೆ. ಬಹಳ ಜನ ನನ್ನ ತೋಟದಲ್ಲಿ ನೀರು ನಿಲ್ಲುವುದಿಲ್ಲ,…

Read more
ಅಡಿಕೆ ಗರಿಯಲ್ಲಿ ಸೂಕ್ಷ್ಮ ಪೋಷಕದ ಕೊರತೆ ಲಕ್ಷಣ

ಮೈಕ್ರೋ ನ್ಯೂಟ್ರಿಯೆಂಟ್ ಬಳಸಿದರೆ ಅಚ್ಚರಿಯ ಇಳುವರಿ.

ಭಾರತ ದೇಶದ ಬಹುತೇಕ ಮಣ್ಣಿನಲ್ಲಿ ಸೂಕ್ಷ್ಮಪೋಷಕಾಂಶಗಳ ಕೊರತೆ ಇದೆ. ಒಟ್ಟು ಕೃಷಿ ಭೂಮಿಯಲ್ಲಿ 49% ಸತುವಿನ ಕೊರತೆಯನ್ನೂ , 12% ಕಬ್ಬಿಣದ ಕೊರತೆಯನ್ನೂ , 5% ಮ್ಯಾಂಗನೀಸ್, ಮತ್ತು 3% ದಷ್ಟು ತಾಮ್ರದ ಕೊರತೆಯನ್ನು 33% ಬೋರಾನ್ ಮತ್ತು 11%  ಮಾಲಿಬ್ಡಿನಂ ಕೊರತೆಯನ್ನು ಹೊಂದಿದೆ ಎಂಬುದಾಗಿ ಅಧ್ಯಯನ ಹೇಳುತ್ತದೆ. ನಿಮ್ಮ ಯಾವುದೇ ಬೆಳೆಗೆ 1 ಲೀ. ನೀರಿಗೆ 1  ಗ್ರಾಂ ಪ್ರಮಾಣದಲ್ಲಿ ಮೈಕ್ರೋ ನ್ಯೂಟ್ರಿಯೆಂಟ್ ಮಿಶ್ರಣ ಮಾಡಿ ಸಿಂಪರಣೆ ಮಾಡಿ.ಆಗ ತಿಳಿಯುತ್ತದೆ ಅದರ ಮಹಿಮೆ ಏನು ಎಂಬುದು….

Read more
red gram

ತೊಗರಿ ಬೆಳೆಯಲ್ಲಿ 20% ಅಧಿಕ ಇಳುವರಿಗೆ ಹೊಸ ತಂತ್ರಜ್ಞಾನ.

ತೊಗರಿಯ ತವರು ಭಾರತವಾಗಿದ್ದು ಜಗತ್ತಿನ ಶೇಕಡಾ 90 ರಷ್ಟು ತೊಗರಿಯನ್ನು ಇಲ್ಲಿ ಬೆಳೆಯಲಾಗುತ್ತಿದೆ. ತೊಗರಿ ಬೆಳೆಯು ಕಲಬುರಗಿ ಜಿಲ್ಲೆಯ ಒಟ್ಟು ಕ್ಷೇತ್ರದ ಅರ್ಧದಷ್ಟನ್ನು ಹೊಂದಿರುವುದರಿಂದ ಇದನ್ನು “ತೊಗರಿಯ ಕಣಜ” ಎಂದು ಕರೆಯಲಾಗುತ್ತದೆ. ಈ ಕಾರಣಕ್ಕಾಗಿಯೇ ಜಿಯೋ ಟ್ಯಾಗ್‍ನ್ನು ಕೂಡಾ ಪಡೆದುಕೊಂಡು ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಹಿರಿಮೆಯನ್ನು ತಂದುಕೊಟ್ಟಿದೆ. ತೊಗರಿ ಬೆಳೆಯುವ ರೈತರು ವೈಜ್ಞಾನಿಕವಾಗಿ ಸಾಬೀತಾದ  ಕೆಲವು ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡರೆ ಕಡಿಮೆ ಖರ್ಚಿನಲ್ಲಿ ಪೋಷಕಾಂಶಗಳ ನಿರ್ವಹಣೆಯ ಜೊತೆಗೆ 20%  ಅಧಿಕ ಇಳುವರಿಯನ್ನು ಪಡೆಯಬಹುದು. ಕರ್ನಾಟಕ ರಾಜ್ಯದಲ್ಲಿ ಬೆಳೆಯುವ ಬೇಳೆಕಾಳು…

Read more
ಹತ್ತಿ ಕೋಡು- Cotton bulb

ಹತ್ತಿಯ ಎಲೆ ಕೆಂಪಗಾಗುವುದಕ್ಕೆ ಕಾರಣ ಮತ್ತು ಪರಿಹಾರ.

ಉತ್ತರ ಕರ್ನಾಟಕದ ಬಹುತೇಕ ಹತ್ತಿ ಬೆಳೆಯಲಾಗುವ ಪ್ರದೇಶಗಳಲ್ಲಿ ಎಲೆ ಕೆಂಪಾಗುವ ಸಮಸ್ಯೆ  ಹೆಚ್ಚುತಿದ್ದು, ರೈತರು ಇದು ರೋಗವೇ , ಯಾವ ರೋಗ ಎಂಬ ಆತಂಕದಲ್ಲಿ ಸ್ಥಳೀಯ ಬೀಜ, ಕೀಟನಾಶಕ ಮಾರಾಟಗಾರರ ಸಲಹೆ ಮೇರೆಗೆ ಅನವಶ್ಯಕ ಕೀಟ, ರೋಗನಾಶಕ ಬಳಸುತ್ತಿದ್ದಾರೆ. ವಾಸ್ತವವಾಗಿ ಇದು ರೋಗ , ಕೀಟ ಯಾವುದೂ ಅಲ್ಲ. ಬೇಸಾಯ ಕ್ರಮದಲ್ಲಿ ಇದನ್ನು ಸರಿ ಮಾಡಬಹುದು. ನಿರಂತರವಾಗಿ ಬೆಳೆ ಬೆಳೆಯುತ್ತಾ ಇರುವ ಪ್ರದೇಶಗಳಲ್ಲಿ ಸಹಜವಾಗಿ ಕೆಲವು ಪೊಷಕಾಂಶಗಳ ಕೊರತೆ ಕಂಡು ಬರುತ್ತದೆ. ಇದು ಆ ಬೆಳೆ ಈ…

Read more

ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಕೃಷಿ ಶಿಕ್ಷಣದ ಅವಕಾಶಗಳು

ನಾಳೆಯೇ CET ಫಲಿತಾಂಶ. ಪಿಯುಸಿ ಪರೀಕ್ಷೆ ಬರೆದು ಸಿಇಟಿ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳ  ಉನ್ನತ ವ್ಯಾಸಂಗದ ಆಯ್ಕೆಗೆ  ಇರುವ ಹಲವಾರು ಅವಕಾಶಗಳಲ್ಲಿ  ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ವಿಷಯಗಳು  ಜಾಗತಿಕ ಮನ್ನಣೆಯನ್ನು ಪಡೆದಿವೆ. ಇದರಲ್ಲಿ ಕೃಷಿಕರ ಮಕ್ಕಳಿಗೆ ಮೀಸಲಾತಿಯೂ ಇದೆ. ಈ ವರ್ಷ ಅದಕ್ಕಾಗಿಯೇ  ಇರುವ ಪರೀಕ್ಷೆಯೂ ಇಲ್ಲ. ಅದುದರಿಂದ ಈ ಕ್ಷೇತ್ರವು ನಿಮ್ಮ ಆಯ್ಕೆಗೆ ಸೂಕ್ತ ಎನ್ನಿಸುತ್ತದೆ. ನಮ್ಮ ಮಕ್ಕಳನ್ನು ಯಾವ ದಾರಿಯಲ್ಲಿ ಮುನ್ನಡೆಸುವುದು ಎಂದು    ಪೋಷಕರು ಗೊಂದಲದಲ್ಲಿದ್ದಾರೆ. ಪಡೆದಿರುವ ಅಂಕಗಳ ಕೊರತೆಯಿಲ್ಲದಿದ್ದರೂ…

Read more

ಅಡಿಕೆ- ಈ ರೀತಿಯಾಗಿ ಯಾಕೆ ಉದುರುತ್ತಿದೆ?

ಈ ವರ್ಷ ಅಡಿಕೆ ಬೆಳೆಗಾರರು ಬಹಳ ಸಮಸ್ಯೆಯನ್ನು  ಅನುಭವಿಸಿದ್ದಾರೆ. ಮೊದಲು ಸಿಂಗಾರ ಒಣಗುವ ಸಮಸ್ಯೆ , ನಂತರ ಮಿಡಿ ಕಾಯಿ ಉದುರುವುದು, ಈಗ ಮತ್ತೆ ಬಲಿಯುತ್ತಿರುವ (ಹಸ) ಕಾಯಿಗಳ ಉದುರುವಿಕೆ. ಬರೇ ಉದುರುವುದು ಮಾತ್ರವಲ್ಲ. ಕಾಯಿಯಲ್ಲಿ  ಸುಟ್ಟಂತಹ ಕಪ್ಪು ಕಲೆಗಳಿವೆ. ಕೊಳೆತ ಇಲ್ಲ. ಇದು ಯಾವ ಸಮಸ್ಯೆ ಎಂಬುದು ನಿಘೂಢವಾಗಿದೆ. ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ಹೇಳುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ  ಅದೇನೂ ಮಹಾ ಮಳೆಯೋ, ಅಡಿಕೆಗೆ ಭಾರೀ ಕೊಳೆ ರೋಗ ಬಂತು. ಸುಮಾರು 25-30% ಬೆಳೆ ನಷ್ಟವಾಯಿತು. ಈ…

Read more

ಬಯೋಗ್ಯಾಸ್ ನಿಂದ ಸಿಲಿಂಡರ್ ಗ್ಯಾಸ್- ಸರಕಾರದ ಇಂಗಿತ.

ಭಾರತ ಪೆಟ್ರೋಲಿಯಂ ಇಂಧನ ಕ್ಷೇತ್ರದಲ್ಲಿ ಸ್ವಾವಲಂಭಿಯಲ್ಲ. ಇಲ್ಲಿಗೆ ಬೇಕಾಗುವ ಎಲ್ಲಾ ನಮೂನೆಯ ಇಂಧನಕ್ಕೂ  ಬೇರೆ ದೇಶಗಳ ಅವಲಂಬನೆ ಆಗಲೇ ಬೇಕು. ಸ್ವಾವಲಂಭಿ ಭಾರತದ ಕನಸನ್ನು ಹೊತ್ತ ಕೇಂದ್ರ ಸರಕಾರ, ಇಂಧನ ಕ್ಷೇತ್ರದಲ್ಲಿ ಪರಾವಲಂಭನೆ ಕಡಿಮೆ ಮಾಡಲು ಬಯೋಗ್ಯಾಸ್ (Bio gas with natural gas) ಅನ್ನು ನೈಸರ್ಗಿಕ ಗ್ಯಾಸ್ ಆಗಿ ಪರಿವರ್ತಿಸಲು  ಚಿಂತನೆ ನಡೆಸಿದೆ. ಜೈವಿಕ ಇಂಧನಗಳಲ್ಲಿ ಮೂರು ವಿಧಗಳು. ಒಂದು ಇಥೆನಾಲ್ ಇದು ಸಕ್ಕರೆ ಕಾರ್ಖಾನೆಯಲ್ಲಿ ಲಭ್ಯ. ಇಮ್ಮೊಂದು ಜೈವಿಕ ಸಸ್ಯ ಜನ್ಯ ಇಂಧನಗಳು. ಇವೆರದನ್ನೂ…

Read more
error: Content is protected !!