ರಂಜಕ ಗೊಬ್ಬರವನ್ನು ಹೀಗೆ ಕೊಟ್ಟರೆ ಉತ್ತಮ.

ರಂಜಕ ಎಂಬುದು ಚಲಿಸುವ ಪೋಷಕವಲ್ಲ. ಕೆಲವು ನೀರಿನಲ್ಲಿ ಕರಗುತ್ತದೆ. ಇನ್ನು ಕೆಲವು  ಕರಗುವುದಿಲ್ಲ. ಹೊಲದ ಮಣ್ಣಿನ ಗುಣ ಹೇಗಿದೆ ಎಂಬುದರ ಮೇಲೆ ಅದಕ್ಕೆ ಹೊಂದುವ ರಂಜಕ ಗೊಬ್ಬರವನ್ನು ಕೊಡಬೇಕು. ಹಾಗೆಯೇ ಕೊಟ್ಟ ರಂಜಕವು ಬೆಳೆಗೆ ಲಭ್ಯವಾಗುವ ಸ್ಥಿತಿಯನ್ನು ಉಂಟುಮಾಡಬೇಕು. ಬಹಳಷ್ಟು  ರೈತರು ರಂಜಕ ಪೋಷಕದ ಬಳಕೆಯನ್ನು ಕಡಿಮೆ ಮಾಡುವುದಿಲ್ಲ. ಡಿಎಪಿ ಹಾಕಿದ್ದೇನೆ ಎನ್ನುತ್ತಾರೆ. ಆದರ ಬಹಳಷ್ಟು ರೈತರ ಹೊಲದ ಮಣ್ಣು ಪರೀಕ್ಷೆಯಲ್ಲಿ ರಂಜಕ ಪೋಷಕದ ಕೊರತೆ ಕಂಡು ಬರುತ್ತದೆ. ಇದಕ್ಕೆ ಕಾರಣ ಬಳಕೆ ಕ್ರಮ ಸರಿಯಿಲ್ಲದಿರುವಿಕೆ. ಹೇಗೆ…

Read more
ರಾಸಾಯನಿಕ + ಸಾವಯವ ಎರಡು ಬಳಸಿ ಇಳುವರಿ

ರಾಸಾಯನಿಕ + ಸಾವಯವ = ಇಳುವರಿ ಉತ್ತಮ.

ನಾನು ರಾಸಾಯನಿಕ ಬಿಟ್ಟು ಬೇರೆ ಬಳಸುವುದೇ ಇಲ್ಲ. ನಾನು ಗೊಬ್ಬರಕ್ಕಾಗಿ ಹಸು ಸಾಕುವುದೇ ಇಲ್ಲ. ಕಡಿಮೆ ಖರ್ಚಿನಲ್ಲಿ ಗೊಬ್ಬರ ಆಗುತ್ತದೆ. ನನಗೆ ಇಳುವರಿಗೆ ಯಾವ ತೊಂದರೆಯೂ ಆಗಿಲ್ಲ ಎಂಬ ತರ್ಕ ಮಾಡುವ ರೈತರು ಒಂದಲ್ಲ ಒಂದು ದಿನ ತಮ್ಮ ಈ ಮನೋಭಾವನೆಯನ್ನು ಬದಲಿಸುತ್ತಾರೆ. ಈ ರಾಸಾಯನಿಕ ಗೊಬ್ಬರಗಳು ಮಣ್ಣಿನ ಧಕ್ಕೆ ಸಹನೆ ಇರುವಷ್ಟು ಸಮಯ ಮಾತ್ರ ಪ್ರಯೋಜನಕಾರಿ. ನಂತರ ಅದು ಕೆಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಸಾವಯವ ತ್ಯಾಜ್ಯಗಳನ್ನು ಮಣ್ಣಿಗೆ ಸೇರಿಸುತ್ತಾ ಇದ್ದರೆ ಮಣ್ಣಿನ ರಚನೆ ಉತ್ತಮವಾಗಿ ರಸಗೊಬ್ಬರ…

Read more

ನಿಮ್ಮ ಹೊಲದಲ್ಲಿ ರಂಜಕ ಎಷ್ಟು ಲಭ್ಯ ಸ್ಥಿತಿಯಲ್ಲಿದೆ- ತಿಳಿಯುವುದು ಹೀಗೆ.

ಎಲ್ಲದಕ್ಕೂ ತಜ್ಞರನ್ನು ಸಂಪರ್ಕಿಸಿ  ಮಾರ್ಗದರ್ಶನ ಪಡೆಯುವ ಬದಲು  ನಾವೇ ಒಂದಷ್ಟು ತಜ್ಞತೆಯನ್ನು ಸಂಪಾದಿಸುವುದು ಉತ್ತಮ. ಈ ನಿಟ್ಟಿನಲ್ಲಿ ನಾವು ಬೆಳೆಗಳಿಗೆ ಬಳಕೆ ಮಾಡುವ ರಂಜಕ ಗೊಬ್ಬರ  ಸಸ್ಯಗಳಿಗೆ ದೊರೆಯುತ್ತದೆಯೇ ಎಂದು ತಿಳಿಯುವ ಸರಳ ವಿಧಾನಗಳು ಇವೆ. ನಿಮ್ಮ ಹೊಲದ ದ್ವಿದಳ ಸಸ್ಯಗಳು, ಅಧಿಕ ಪ್ರಮಾಣದಲ್ಲಿ ಹುಲ್ಲು ಬೆಳೆಯುತ್ತದೆಯೋ ಅಲ್ಲಿ ರಂಜಕ ಅಂಶ ಇದೆ ಎಂದರ್ಥ. ಇದು ನಿಖರವಾದ ಲಕ್ಷಣ ಅಲ್ಲದಿದ್ದರೂ ಬಹುತೇಕ ಇದು ರಂಜಕದ ಲಭ್ಯತೆಯನ್ನು ಸೂಚಿಸುತ್ತದೆ. ರಂಜಕಾಂಶ ಎಂಬುದು ಫಲಾಪೇಕ್ಷೆ ಇದ್ದು ಬೆಳೆ ಬೆಳೆಯುವಾಗ ನಿರೀಕ್ಷಿತ…

Read more

ಹಳ್ಳಿಯ ಯುವಕರಿಗೆ ಉದ್ಯೋಗ ಕೊಡಬಲ್ಲ ಅಣಬೆ ಕೃಷಿ.

 ಆರ್ಥಿಕ ಸಂಕಷ್ಟದಿಂದ ಪಟ್ಟಣ ತೊರೆದು ಜನ ಹಳ್ಳಿಯೆಡೆಗೆ ಮುಖಮಾಡಿದ್ದಾರೆ. ಕೆಲವರಿಗೆ ಇನ್ನು ಪಟ್ಟಣದ ಸಹವಾಸವೇ ಬೇಡ ಎಂಬಂತಾಗಿದೆ.   ವೃತಿ ಅರಸುವ ಆಸಕ್ತರಿಗೆ  ಮನೆಯ ಕಡಿಮೆ ಸ್ಥಳಾವಕಾಶದಲ್ಲೂ  ಮಾಡಬಹುದಾದ ಲಾಭದ ಉದ್ದಿಮೆ ಅಣಬೆ ಬೇಸಾಯ. ವಿಶೇಷ ವಿಧ್ಯಾವಂತರೂ ಅಗಬೇಕಾಗಿಲ್ಲ. ಭಾರೀ ಬಂಡವಾಳವೂ ಬೇಕಾಗಿಲ್ಲ. ಇನ್ನೂ ಇದರೊಂದಿಗೆ ಜೇನು ಸಾಕಣೆಯಂತ ವೃತ್ತಿ ಮಾಡಿದರೆ ಮತ್ತೂ ಅನುಕೂಲ.     ಅಣಬೆ ಬೆಳೆಸಲು ಹೆಚ್ಚು ಬಂಡವಾಳ ಬೇಡ. ವೃತ್ತಿಯಲ್ಲಿ ಸ್ವಲ್ಪ ಶ್ರದ್ಧೆ ಇದ್ದರೆ ಸಾಕು. ಸೂಕ್ತ ತರಬೇತಿಯನ್ನು ಪಡೆದು ಪ್ರಾರಂಭಿಸಿದರೆ ಇದರಲ್ಲಿ ಹಿಂತಿರುಗಿ…

Read more
cotton

ಹತ್ತಿ ಬೆಳೆಯ ಗುಲಾಬಿ ಕಾಯಿ ಕೊರಕ ನಿಯಂತ್ರಣ.

ಹತ್ತಿ ಬೆಳೆಗಾರರಿಗೆ ಗಣನೀಯ ಬೆಳೆ ನಷ್ಟ ಮಾಡುವ ಕೀಟ ಎಂದರೆ  ಗುಲಾಬಿ ಕಾಯಿ ಕೊರಕ. ಹತ್ತಿಯ ಕಾಯಿಗಳು ಬೆಳೆಯುತ್ತಿದ್ದಂತೆ ಇದು ಪ್ರವೇಶವಾಗಿ  ಒಳಗಿನ ಹತ್ತಿಯ ಅರಳನ್ನು ಹಾನಿ ಮಾಡುತ್ತದೆ. ಮಾರುಕಟ್ಟೆಯಲ್ಲಿ ಈ ಹತ್ತಿಗೆ ಬೆಲೆಯೇ ಇರುವುದಿಲ್ಲ.  ಈ ಕೀಟದ ನಿಯಂತ್ರಣಕ್ಕಾಗಿ ಅತ್ಯಧಿಕ ಕೀಟನಾಶಕ ಬಳಕೆ ಮಾಡಲಾಗುತ್ತದೆ. ಇದರಿಂದಾಗಿಯೇ ಕಳೆದ ವರ್ಷ ಕೆಲವು ರೈತರು ಜೀವ ಕಳೆದುಕೊಂಡದ್ದೂ ಇದೆ.  ಸರಳ ಮತ್ತು ಮಿತವ್ಯಯದ ಬೇಸಾಯ ಕ್ರಮದಲ್ಲಿ ಇದನ್ನು ಗಣನೀಯ ಪ್ರಮಾಣದಲ್ಲಿ ನಿಯಂತ್ರಣ ಮಾಡಬಹುದು. ಜೀವನ ಚಕ್ರ ಹೀಗಿರುತ್ತದೆ: ಗುಲಾಬಿ…

Read more
ಗಗನ ಚುಂಬಿ ಮದ್ದಾಲೆ ಮರ

ಮದ್ದಾಲೆ ಮರದ ಚೆಕ್ಕೆ ತಿನ್ನಿ- ಆರೋಗ್ಯವಾಗಿರುತ್ತೀರಿ.

ಆಷಾಢ ಅಮವಾಸ್ಯೆಯ ದಿನ ಮದ್ದಾಲೆ ಮರದ ಬುಡಕ್ಕೆ ಬೆಳಗ್ಗಿನ ಜಾವದಲ್ಲಿ ಹೋಗಿ ಕತ್ತಿ ಇತ್ಯಾದಿ ಆಯುಧಗಳ ಸಹಾಯವಿಲ್ಲದೇ ಕಲ್ಲಿನಲ್ಲಿ ಮರದ ತೊಗಟೆಯನ್ನು ಜಜ್ಜಿ ತೆಗೆದು ಚೂರು ಚೆಕ್ಕೆಯನ್ನು ಜಗಿದು ಸೇವಿಸುವುದು ತುಳು ನಾಡಿನಲ್ಲಿ ಪ್ರತೀತಿ. ಈ ಮರದ ತೊಗಟೆಯ ರಸಕ್ಕೆ ಅನಾರೋಗ್ಯ ನಿವಾರಣೆ ಶಕ್ತಿ ಇದೆ. ಜೊತೆಗೆ ಈ ಮರವನ್ನು ಪೂಜನೀಯವಾಗಿಯೂ ಕಾಣಲಾಗುತ್ತದೆ. ಮದ್ದಾಲೆಗೆ ಇದೆ ದೈವಿಕತೆ:  ಪೆರಿಯಾಕುಳು ಎಂಬ ಯಮಳ ವೀರರು ಬೈಲಬೀಡು ಬಳಿಯ ಮದ್ದಾಲೆ ಅಥವಾ  ಪಾಲೆ ಮರದ ಬುಡದಲ್ಲಿ ಮಾಯವಾದರು ಎಂಬ ಐತಿಹ್ಯವಿದೆ….

Read more

ಕಡಿಮೆ ಬೆಲೆಯ ಉತ್ತಮ ಜೈವಿಕ ಗೊಬ್ಬರಗಳು.

ಕೃಷಿ ಪದ್ಧತಿಯನ್ನು ಸುಸ್ಥಿರಗೊಳಿಸಲು ರಾಸಾಯನಿಕ ಗೊಬ್ಬರಗಳ ಬಳಕೆ ಮತ್ತು ಅವುಗಳ ಮೇಲಿನ ಅವಲಂಬನೆಯು ದೀರ್ಘ ಕಾಲದವರೆಗೂ ಮುಂದುವರೆಯಲು ಅಸಾಧ್ಯ.  ಸುಸ್ಥಿರ ಕೃಷಿಗೆ  ಮಣ್ಣಿನ ಆರೋಗ್ಯ ಅತ್ಯಗತ್ಯ. ಇದನ್ನು ಕಾಪಾಡುವಲ್ಲಿ ಹಸಿರು ಎಲೆ ಗೊಬ್ಬರ, ಜೈವಿಕ ಮತ್ತು ಸಾವಯವ ಗೊಬ್ಬರಗಳು ಪ್ರಮುಖ ಪಾತ್ರ ವಹಿಸುತ್ತವೆ. ಇಂದು ಹಲವಾರು ಖಾಸಗಿ ಜೈವಿಕ ಗೊಬ್ಬರ ಪೂರೈಕೆದಾರರು ಇದರ  ಸದುಪಯೋಗ  ಮಾಡಿಕೊಳ್ಳುತ್ತಿದ್ದಾರೆ. ಅದರೆ ಭಾರತೀಯ ತೋಟಗಾರಿಕಾ ಸಂಶೋಧನಾ  ಕೇಂದ್ರದಲ್ಲಿ ಇಂತಹ ಹಲವಾರು  ಸೂಕ್ಷ್ಮಾಣು ಜೀವಿಗಳ  ಉತ್ಪನ್ನಗಳನ್ನು ತಯಾರಿಕೆ ನಡೆಯುತ್ತಿದ್ದು, ಅರ್ಕಾ ಹೆಸರಿನಲ್ಲಿ ಇದು…

Read more

ಹಲ್ಲಿಲ್ಲದ್ದ ರೈತನಿಗೆ ಕಡಲೆ ತಿನ್ನಿಸುವ ವೆಬಿನಾರ್ ಗಳು.

ಮಾರ್ಚ್ ತಿಂಗಳ ನಂತರ ಬಂದ ಒಂದು ಹೊಸ ಅವತಾರ, ವೆಬಿನಾರ್ ಗಳು. ಬೇರೆ ಕ್ಷೇತ್ರಗಳ ವಿಷಯ ನಮಗೆ ಅನಗತ್ಯ. ಆದರೆ ಕೃಷಿ ಕ್ಷೇತ್ರದಲ್ಲಿ ಈ ವೆಬಿನಾರ್ಗಳ ಬಗ್ಗೆ ಕೆಲವೊಂದು ವಿಚಾರಗಳನ್ನು ರೈತರಿಗೆ ತಿಳಿಯಬಯಸುತ್ತೇವೆ. ಇದು ರೋಗಿ ಬಯಸಿದ್ದೂ ಹಾಲು, ವೈದ್ಯ ಕೊಟ್ಟದ್ದೂ ಹಾಲು ಎಂಬಂತಾಗಿದೆ. ಮೇಲುನೋಟಕ್ಕೆ ಇದು ರೈತರ ಸೇವೆ ಎಂದು ಕಂಡರೂ ಇದರಲ್ಲಿ ಕೆಲವು ಪೇಪರ್ ವರ್ಕ್ ಮತ್ತು ಹಣ ಖರ್ಚು ಮಾಡುವ ದಂಧೆ ಇರಲೂ ಬಹುದು. ವೆಬಿನಾರ್ ಎಂದರೆ ಕೇವಲ ಸಂಬಂಧಿಸಿದವರು  ಮಾತ್ರ ತಮ್ಮ…

Read more
ಮಣ್ಣಿನ ಆರೋಗ್ಯ ತಿಳಿಯಲು ಅದರ ಪರೀಕ್ಷೆ

ಮಣ್ಣಿನ ಆರೋಗ್ಯ ತಿಳಿಯಲು ಅದರ ಪರೀಕ್ಷೆ .

ಮಣ್ಣು ಅದರಷ್ಟಕ್ಕೇ ಇದ್ದರೆ ಅಂದರೆ ಕಾಡು , ಮರಮಟ್ಟು ಬೆಳೆಯುತ್ತಾ ಇದ್ದರೆ ಅದರ ಆರೋಗ್ಯ ಸ್ಥಿತಿ ವ್ಯತ್ಯಾಸ ಆಗುವುದಿಲ್ಲ. ಬೆಳೆ ಬೆಳೆಸುವಾಗ ಬಳಸುವ ಬೆಳೆ ಪೋಷಕಗಳು ಮಣ್ಣಿನ ಗುಣವನ್ನು ಸ್ವಲ್ಪ ಮಟ್ಟಿಗೆ ವ್ಯತ್ಯಾಸ ಮಾಡುತ್ತವೆ. ಇದನ್ನು ಮಣ್ಣಿನ ಆರೋಗ್ಯ ಕೆಡುವುದು ಎಂದು ಹೇಳಬಹುದು. ಮಣ್ಣಿನ ಆರೋಗ್ಯ ಗುಣದ ಮೇಲೆ ನಾವು ಬೆಳೆಸುವ ಬೆಳೆಯ ಪ್ರತಿಫಲ ಇರುತ್ತದೆ. ಇದನ್ನು ತಿಳಿದು ಕೃಷಿ ಮಾಡಿದರೆ ನಿರೀಕ್ಷೆಯ ಫಲಿತಾಂಶ ಲಭ್ಯವಾಗುತ್ತದೆ. ಮಣ್ಣು ಸೃಷ್ಠಿಯ ಅತ್ಯದ್ಬುತ ಕೊಡುಗೆ. ಮಣ್ಣಿಲ್ಲದೆ ಯಾವಜೀವಿಯೂ ಬದುಕಲಾರದು, ಮಣ್ಣಿನಿಂದ…

Read more
method of green leaf mulching

ಹೊಲಕ್ಕೆ ಈ ಸೊಪ್ಪುಗಳನ್ನು ಹಾಕಿದರೆ ಗೊಬ್ಬರ ಉಳಿಸಬಹುದು.

ಮೆದು ಸ್ವರೂಪದ ಹಸುರು ಸೊಪ್ಪು ಅಧಿಕ ಸಾರಗಳನ್ನು ಒಳಗೊಂಡಿರುತ್ತದೆ. ಹೆಚ್ಚಾಗಿ ದ್ವಿದಳ ಜಾತಿಯವು ಉತ್ಕೃಷ್ಟ. ಇಂತಹ ಸಸ್ಯಗಳಲ್ಲಿ ಕೆಲವು ಅಲ್ಪಾವಧಿಯ ಸಸ್ಯಗಳು  ಮತ್ತು ಕೆಲವು ಧೀರ್ಗಾವಧಿಯ ಮರಮಟ್ಟುಗಳು. ಇದನ್ನು ನಾವು ಗುರುತಿಸಿ ಬೆಳೆಸಿ ಬಳಸಬೇಕು. ಇವು ಮಣ್ಣಿಗೆ ಹೊಸ ಜೀವ ಚೈತನ್ಯವನ್ನು ಕೊಡುತ್ತವೆ. ಬೆಳೆ ಉತ್ತಮವಾಗುತ್ತದೆ. ಬಹಳ ಜನ ತಮ್ಮ ಹೊಲಕ್ಕೆ ಬೇರೆ ಬೇರೆ ಸಾವಯವ ಗೊಬ್ಬರಗಳನ್ನು ಬಳಕೆ ಮಾಡುತ್ತಾರೆ. ಕೆಲವರು ಒಣ ತರೆಗೆಲೆ ಹಾಗೂ ಒಣ ತ್ಯಾಜ್ಯಗಳನ್ನು ಬಳಕೆ ಮಾಡುತ್ತಾರೆ. ಇದರಲ್ಲಿ ಹಾನಿ ಏನೂ ಇಲ್ಲವಾದರೂ…

Read more
error: Content is protected !!