
ಹುತ್ತಗಳಿಂದ ಕೃಷಿಕರಿಗೆ ಏನು ಲಾಭ? ಕಡಿಮೆಯಾಗಲು ಕಾರಣ ಏನು?
ನಮ್ಮ ಸುತ್ತಮುತ್ತ ಎಲ್ಲಾ ಕಡೆಯಲ್ಲಿ ಕಾಣಸಿಗುತ್ತಿದ್ದ ಹುತ್ತಗಳು ಈಗ ಅಪರೂಪವಾಗಲಾರಂಭಿಸಿದೆ. ಇದು ನಮ್ಮ ಹೊಲದ ಮಣ್ಣು ಸಾವಯವ ಅಂಶ ಕಳೆದುಕೊಡಿರುವುದರ ಸೂಚನೆ. ಬಯಲು ಸೀಮೆಯ ಕಡೆ, ಕಾಡು ಇರುವಲ್ಲಿ ಮಾನವ ಹಸ್ತಕ್ಷೇಪ ಇಲ್ಲದ ಕಡೆ ಸ್ವಲ್ಪ ಮಟ್ಟಿಗೆ ಹುತ್ತಗಳು ಕಾಣಸಿಕ್ಕರೆ ಉಳಿದೆಡೆ ಹುತ್ತಗಳಿಲ್ಲ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹುತ್ತಗಳ ಸಂಖ್ಯೆಯೇ ಕ್ಷೀಣಿಸುತ್ತಿದೆ! ಹುತ್ತಗಳು ಇಲ್ಲದಿದ್ದರೆ ಗೆದ್ದಳು ಇಲ್ಲವಲ್ಲಾ ಒಳ್ಳೆಯದೇ ಅಯಿತಲ್ಲಾ ಎಂದು ಭಾವಿಸಬೇಡಿ. ಹುತ್ತಗಳು ನಮ್ಮ ಭೂಮಿಯ ಫಲವತ್ತತೆಯ ಸಂಕೇತ. ಹುತ್ತಗಳು ಬೆಳೆಯುವುದು ಭೂಮಿಯಲ್ಲಿರುವ ಸಾವಯವ…