ತೋಟಕ್ಕೆ ಮಣ್ಣು ಹಾಕಲು ಸಿದ್ದತೆ

ತೋಟಕ್ಕೆ ಮಣ್ಣು ಹಾಕುವುದರಿಂದ ಪ್ರಯೋಜನಗಳು

ಹೆಚ್ಚಿನವರು ತೋಟಕ್ಕೆ ಬಹಳ ಖರ್ಚು ಮಾಡಿ ಹೊರಗಡೆಯಿಂದ ಮಣ್ಣು  ತರಿಸಿ ಹಾಕುತ್ತಾರೆ.  ಹೊಸ ಮಣ್ಣು ಫಲವತ್ತಾಗಿದ್ದು, ಹೊಲದ ಸ್ಥಿತಿ ಸರಿಯಾಗಿದ್ದರೆ ಇದು ಬಹಳ ಒಳ್ಳೆಯದು. ಅಂಟು , ಜಿಗುಟು ಮಣ್ಣು ದಪ್ಪಕ್ಕೆ ಹಾಸಿದರೆ   ಬೇರಿಗೆ ಉಸಿರು ಕಟ್ಟಿದಂತಾಗಬಹುದು. ಬಹಳಷ್ಟು ಕಡೆ ಮಳೆಗಾಲದ ಮಳೆ ಹನಿಗಳ ಹೊಡೆತಕ್ಕೆ ಮಣ್ಣು ಸವಕಳಿಯಾಗಿ ಫಲವತ್ತತೆ ಕಡಿಮೆಯಾಗುತ್ತದೆ. ತೋಟದಲ್ಲಿ ಕಲ್ಲುಗಳೇ ಹೆಚ್ಚು ಇರುತ್ತವೆ. ಅದಕ್ಕಾಗಿ ಹೊಸ ಮಣ್ಣು ಹಾಕಿ ಅದನ್ನು ಮತ್ತೆ ಪುನಃಶ್ಚೇತನ ಮಾಡುವುದು  ಬಹಳ ಹಿಂದಿನಿಂದಲೂ ನಡೆದು ಬಂದ ಪದ್ದತಿ. ಇದರಲ್ಲಿ…

Read more
ಬೋರ್ಡೋ ದ್ರಾವಣ ಸಿಂಪರಣೆ

ಬೋರ್ಡೋ ದ್ರಾವಣ ಸಿಂಪರಣೆ ಮತ್ತು ಕೆಲವು ಸೂಕ್ಷ್ಮಗಳು.

ಅಡಿಕೆಯ ಕೊಳೆ ರೋಗ ನಿಯಂತ್ರಿಸುವ ಉಪಚಾರವಾಗಿ ಬೋರ್ಡೋ ದ್ರಾವಣದ ಸಿಂಪರಣೆಯನ್ನು ಮಾಡಲಾಗುತ್ತದೆ. ವಿವಿಧ ನಮೂನೆಯ ತುತ್ತೆ, ಸುಣ್ಣ, ಗಮ್ ಗಳು ಇರುವಾಗ ರೈತರಿಗೆ ದ್ವಂದ್ವ ಉಂಟಾಗುವುದು ಸಹಜ. ಈ ನಿಟ್ಟಿನಲ್ಲಿ ಕೆಲವು ಸೂಕ್ಷ್ಮ ವಿಚಾರಗಳೊಳಗೊಂಡ ಮಾಹಿತಿ ಇಲ್ಲಿದೆ. ಬೊರ್ಡೋ ದ್ರಾವಣವನ್ನು ಪ್ರಪ್ರಥಮವಾಗಿ,  ಪ್ರಾನ್ಸ್ ದೇಶದ ಬೋರ್ಡೋ ಎಂಬ ಪ್ರಾಂತದಲ್ಲಿ ದ್ರಾಕ್ಷಿ ಬೆಳೆಗೆ ಶಿಲೀಂದ್ರಗಳಿಂದ ಉಂಟಾಗುವ ರೋಗ ನಿಯಂತ್ರಣಕ್ಕೆ ಬಳಸುತ್ತಿದ್ದರಂತೆ. ಅದನ್ನು ಬ್ರಿಟೀಷರ ಕಾಲದಲ್ಲಿ ಆಗಿನ ಮೈಸೂರು ಸರಕಾರದ ಕೃಷಿ ಅಧಿಕಾರಿಯಾಗಿದ್ದ ಲೆಸ್ಲಿ ಸಿ ಕೋಲ್ಮನ್ ಇವರು  ನಮ್ಮ…

Read more
ಅಡಿಕೆ ಸಸಿ ನೆಡುವ ಕ್ರಮ

ಅಡಿಕೆ ಸಸಿ ನೆಡುವವರು ಗಮನಿಸಿ- ಹೇಗೆ ನೆಡಬೇಕು- ಹೇಗೆ ರಕ್ಷಿಸಬೇಕು?

ಅಡಿಕೆ ಸಸ್ಯ ಏಕದಳ ಸಸ್ಯವಾಗಿದ್ದು, ಇದಕ್ಕೆ ತಾಯಿ ಬೇರು ಇಲ್ಲ. ಕವಲು ಬೇರುಗಳಿರುವ ಏಕದಳ ಸಸ್ಯದ, ಬೇರಿನ ಗುಣ ಮೇಲು ಭಾಗದಲ್ಲಿ ಪಸರಿಸುತ್ತಾ  ಬೆಳೆಯುವುದಾಗಿರುತ್ತದೆ. ಮೊದಲಾಗಿ ಎಲ್ಲಾ ಅಡಿಕೆ ಬೆಳೆಸುವ ರೈತರು ಸಸ್ಯ ಬೆಳವಣಿಗೆಯ ಕ್ರಮವನ್ನು  ತಿಳಿದು, ಅದಕ್ಕನುಗುಣವಾದ ಬೇಸಾಯ ಕ್ರಮವನ್ನು ಅನುಸರಿಸಬೇಕು. ಅಡಿಕೆ ಸಸಿ ನೆಡುವ ಹೊಂಡ ಹೇಗಿರಬೇಕು, ಹೇಗೆ ನೆಡಬೇಕು- ಹೇಗೆ ರಕ್ಷಿಸಬೇಕು? ಎಂಬುದರ ಫೂರ್ತಿ ಮಾಹಿತಿ ಇಲ್ಲಿದೆ. ಎಳವೆಯಲ್ಲಿ ಒಂದು ಗಿಡವನ್ನು  ಸರಿಯಾಗಿ ಪೋಷಣೆ ಮಾಡಿದರೆ ಮಾತ್ರ ಅದರ ಮುಂದಿನ ಬೆಳವಣಿಗೆಗೆ ಅಡಿಪಾಯ…

Read more
ಮಳೆಗಾಲಕ್ಕೆ ಮುಂಚೆ ಬಸಿಗಾಲುವೆ ಸ್ವಚ್ಚ ಮಾಡಬೇಕಾದದ್ದು ಅಗತ್ಯ ಕೆಲಸ

ಮಳೆಗಾಲಕ್ಕೆ ಮುಂಚೆ ಅಡಿಕೆ ತೋಟದಲ್ಲಿ ಮಾಡಬೇಕಾದ ಅಗತ್ಯ ಕೆಲಸಗಳು.

ಇನ್ನೇನು ಮಳೆಗಾಲ ಬರುವುದಕ್ಕೆ ಹೆಚ್ಚು ಸಮಯ ಇಲ್ಲ. ಅಡಿಕೆ ತೋಟದಲ್ಲಿ ಈಗ ನೀವು ಮಾಡಬೇಕಾದ ಕೆಲವು ಕೆಲಸಗಳು ತೋಟದ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಮಳೆಗಾಲದಲ್ಲಿ ಯಾವ ಕೆಲಸವನ್ನೂ ಓರಣವಾಗಿ ಮಾಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ಕೆಲಸಗಾರರ ಲಭ್ಯತೆಯೂ ಕಡಿಮೆ ಇರುತ್ತದೆ. ಇದಕ್ಕಿಂತೆಲ್ಲಾ ಮುಖ್ಯವಾಗಿ ಮಳೆಗಾಲದಲ್ಲಿ ಮಾಡಲೇ ಬಾರದ ಕೆಲವು ಕೆಲಸಗಳಿವೆ ಅದನ್ನು ಈಗಲೇ ಮಾಡುವುದು ಬಹಳ ಒಳ್ಳೆಯದು. ಈ ಸಮಯದಲ್ಲಿ  ಕಳೆ ತೆಗೆಯುವುದು, ಬಸಿ ಗಾಲುವೆ ಸ್ವಚ್ಚ ಮಾಡುವುದು ಮಾಡಿದರೆ ಉದುರಿ ಹೆಕ್ಕಲು ಸಿಕ್ಕದ ಅಡಿಕೆ ಸಿಗುತ್ತದೆ. ಅದರಿಂದ…

Read more
ಅಡಿಕೆಯ ಬಳಕೆಯ ಚೂರುಗಳು

ನಾವು ಬೆಳೆಯುವ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಗೊತ್ತೇ?

ನಾವೆಲ್ಲಾ ಅಡಿಕೆ ಬೆಳೆಗಾರರು. ಆದರೆ ನಮಗೆ ಇನ್ನೂ ಸ್ಪಷ್ಟವಾಗಿ  ನಾವು ಬೆಳೆದ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಎಂದು ಗೊತ್ತೇ ಇಲ್ಲ.ನಾವು ಬೆಳೆಯುವ ಅಡಿಕೆ ಸಧ್ಯದ ಮಟ್ಟಿಗೆ ಬಳಕೆಯಾಗುವುದು ಈ ಎಲ್ಲಾ ರೂಪಗಳಲ್ಲಿ ಜಗಿದು ಉಗುಳುವುದಕ್ಕೆ ಮಾತ್ರ. ಅಡಿಕೆ ಎಂದರೆ ಅದು ಟ್ಯಾನಿನ್ (ಚೊಗರು) ಒಳಗೊಂಡ ಒಂದು ಬೀಜ ಎಂದು ವ್ಯಾಖ್ಯಾನಿಸಬಹುದು. ಅಡಿಕೆ ಕಾಯಿ  ಬೆಳೆದು ಹಣ್ಣಾದ ಮೇಲೆ ಕೊಯಿಲು ಮಾಡಿ  ನಿರ್ದಿಷ್ಟ ದಿನಗಳ ವರೆಗೆ  ಸೂರ್ಯನ ಬೆಳಕಿನಲ್ಲಿ ಒಣಗಿಸಿ, ಸಿಪ್ಪೆ ಸುಲಿದಾಗ  ದೊರೆಯುವುದು ಚಾಲಿ ಅಥವಾ ಸುಪಾರಿ…

Read more
ಅಡಿಕೆ ಮರದ ಸುಳಿ ಭಾಗಕ್ಕೆ ಹಾನಿ

ಅಡಿಕೆ ಮರಗಳು ಸಾಯುತ್ತಿವೆಯೇ? ಒಮ್ಮೆ ಸುಳಿ ಭಾಗವನ್ನು ಪರೀಕ್ಷಿಸಿರಿ.

ಅಡಿಕೆ ಮರದ ಸುಳಿ  ಏನೋ  ವ್ಯತ್ಯಾಸವಾದಂತೆ ಕಂಡರೆ,  ಕೆಂಪು ಮೂತಿ ಹುಳವೂ ಉಪಟಳ  ಇರಬಹುದು. ಮರದ ಸುಳಿ ಭಾಗ ಬಾಡಿದಂತೆ ಕಂಡರೆ, ಅಥವಾ ಕಾಂಡದಲ್ಲಿ  ಸುಳಿಭಾಗದಿಂದ ಪ್ರಾರಂಭಗೊಂಡು ರಸ ಇಳಿದಂತೆ ಕಂಡರೆ , ಸುಳಿ ಭಾಗ ಸ್ವಲ್ಪ ಹರಿದಂತೆ ಕಂಡರೆ ಮರ ಏರಿ ಸುಳಿ ಭಾಗವನ್ನು ಒಮ್ಮೆ ಪರಿಶೀಲಿಸಿರಿ. ಸುಳಿಯಲ್ಲಿ ಏನೋ ಆಗಿದೆ ಎಂಬುದು ಈ ಮೇಲಿನ ಲಕ್ಷಣಗಳು ಹೇಳುತ್ತವೆ. ಕಳೆದ ಎರಡು ವರ್ಷಗಳಿಂದ ಅಡಿಕೆ  ಮರಗಳು ಸುಳಿ ಕೊಳೆತು ಸಾಯುತ್ತಿವೆ. ರೈತರು ಅದನ್ನು ಕಡಿಯದೇ ಹಾಗೇ…

Read more
ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ

ಈಗ ಅಡಿಕೆಗೆ ಬೋರ್ಡೋ ಸಿಂಪರಣೆ ಮಾಡಬಹುದೇ?

ಮಳೆಗಾಲದಲ್ಲಿ ಕೊಳೆ ನಿವಾರಣೆಗೆ ಸಿಂಪಡಿಸುವ ಬೋರ್ಡೋ ದ್ರಾವಣವನ್ನು ಈಗ ಸಿಂಪಡಿಸುವುದರಿಂದ ಅನುಕೂಲ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ. ಕೊಳೆ ರೋಗಕ್ಕೆ ಸಿಂಪಡಿಸುವ ಮೈಲುತುತ್ತೆ ಮತ್ತು ಸುಣ್ಣ ಇವುಗಳ ಸಮತೋಲಿತ ಮಿಶ್ರಣಕ್ಕೆ ಬೋರ್ಡೋ ದ್ರಾವಣ Bordeaux mixture ಎನ್ನುತ್ತಾರೆ. ಈ ದ್ರಾವಣವು ಶೇ. 1  ರ ಪ್ರಮಾಣದಲ್ಲಿ ಸಿಂಪಡಿಸಬೇಕು ಎಂಬುದು ಶಿಫಾರಸು. ಇದು ತಟಸ್ಥ ಮಿಶ್ರಣವಾಗಿರಬೇಕು. ಇದರಿಂದ ಫಲ ಹೆಚ್ಚು. ಇದನ್ನು ಮಳೆ ಬಂದ ನಂತರವೇ ಸಿಂಪಡಿಸಬೇಕಾಗಿಲ್ಲ. ಮಳೆ ಬರುವ ಮುಂಚೆಯೂ ಇದನ್ನು ಸಿಂಪರಣೆ ಮಾಡಬಹುದು. ಈಗಾಗಲೇ ಅಡಿಕೆ…

Read more
ಆರೋಗ್ಯವಂತ ಅಡಿಕೆ ಮರ

ಅಡಿಕೆ ಮರದ ಆರೋಗ್ಯ –ಅದರ ಬೇರು ವ್ಯವಸ್ಥೆ.

ಯಾವುದೇ ಸಸ್ಯವಿರಲಿ, ಬೇರು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರುತ್ತದೆ. ಸಸ್ಯಕ್ಕೆ ಬೇರು ಮುಖ್ಯ ಆಧಾರ ಸ್ಥಂಭ.  ಇದು ಮಣ್ಣು, ನೀರು, ಕೀಟಗಳು ಮತ್ತು ಪೋಷಕಗಳ ಅಸಮತೋಲನದಿಂದ ತೊಂದರೆಗೆ ಒಳಗಾಗುತ್ತದೆ. ಇದನ್ನು ಪ್ರತೀಯೊಬ್ಬ ರೈತರೂ ಗಮನಿಸಿ ಅದನ್ನು ಸರಿಪಡಿಸಿದರೆ ಮರ ಆರೋಗ್ಯವಾಗಿರುತ್ತದೆ. ಅಡಿಕೆ ಮರ, ತೆಂಗಿನ ಮರ ಮುಂತಾದ ಎಲ್ಲಾ ಏಕದಳ ಸಸ್ಯಗಳ ಬೇರುಗಳು ತಳಕ್ಕೆ ಇಳಿಯದೇ ಮೇಲ್ಭಾಗದಲ್ಲೇ ಪೋಷಕಗಳನ್ನು ಹುಡುಕುತ್ತಾ ಪಸರಿಸುತ್ತಿರುತ್ತವೆ. ಇವು ಸಸ್ಯದ ಕಾಂಡದಿಂದ ಹುಟ್ಟಿಕೊಂಡು ಬೆಳವಣಿಗೆಯಾಗುತ್ತದೆ. ಸಸ್ಯದ ಸುತ್ತಲೂ ಇದು ಪಸರಿಸಿರುತ್ತದೆ.  Monocot roots are…

Read more
areca nut palm with full yield

ಅಡಿಕೆ – ಉತ್ತಮ ಫಲ ಕೊಡುವ ಮರದ ಲಕ್ಷಣ ಹೇಗಿರಬೇಕು.

ಇತ್ತೀಚೆಗಿನ ಅಡಿಕೆ ತೋಟಗಳಲ್ಲಿ ಶೇ.50 ಮಾತ್ರ ಉತ್ತಮ ಫಲನೀಡಿ, ಉಳಿದವು ಅನುತ್ಪಾದಕ ಮರಗಳಂತೆ ಇರುವ ಕಾರಣ ತೋಟಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದರೂ ಉತ್ಪಾದನೆ ಆ ಮಟ್ಟಕ್ಕೆ ಏರುತ್ತಿಲ್ಲ. ಬೆಳೆಗಾರರು ಹೆಚ್ಚು ಹೆಚ್ಚು ಸಸಿ ನೆಡುವ ಬದಲು ಇರುವ ತೋಟದಲ್ಲೇ ಬಹುತೇಕ ಉತ್ಪಾದಕ ಮರಗಳಿರುವಂತೆ ತೋಟವನ್ನು ಪುನಃಶ್ಚೇತನ ಮಾಡುವುದು ಎಲ್ಲಾ ದೃಷ್ಟಿಯಿಂದ ಉತ್ತಮ. ಸ್ವಲ್ಪ ಬಿಡುವು ಮಾಡಿಕೊಂಡು ತೋಟ ಸುತ್ತುತ್ತಾ ಬನ್ನಿ. ಹಿಂದೆ ಸುತ್ತುದಾಗ ಗಮನಿಸಿದ ಮರ, ಕಳೆದ ವರ್ಷ ಸುತ್ತುವಾಗ ಗಮನಿಸಿದ ಮರ , ಅದಕ್ಕಿಂತ ಹಿಂದಿನ…

Read more

ಅಡಿಕೆಯ ಗೊನೆ ಕಳಚಿ ಬೀಳುವುದಕ್ಕೆ ಕಾರಣ ಇದು.

ಅಡಿಕೆ  ಬೆಳೆಯುವವರು  ತಾವು ಬೆಳೆಸಿದ ಸಸಿಗಳ ಚೊಚ್ಚಲ ಫಸಲನ್ನು  ನೋಡಿ ಖುಷಿ ಪಡುತ್ತಾರೆ. ಅದರೆ  ಕೆಲವೊಮ್ಮೆ ಮಳೆಗಾಲದಲ್ಲಿ ಈ ಹೊಸ ಫಸಲು ಗೊನೆ ಸಮೇತ ಕೆಳಗೆ ಬೀಳುತ್ತದೆ.   ಯಾಕೆ ಹೀಗಾಯಿತು. ಯಾವ ರೋಗ ಎಂದು ಸಿಕ್ಕ ಸಿಕ್ಕವರ ಜೊತೆಯಲ್ಲಿ ಸಲಹೆ , ಔಷಧಿ ಕೇಳಬೇಡಿ. ಇದು ಮೊದಲ ಫಸಲಿನಲ್ಲಿ ಸಾಮಾನ್ಯ. ಇದಕ್ಕೆ ಯಾವ ಔಷಧಿಯೂ ಬೇಕಾಗಿಲ್ಲ. ಪೋಷಕಾಂಶಗಳ ಬಳಕೆಯಲ್ಲಿ ಸಮತೋಲನ ಕಾಯ್ದುಕೊಳ್ಳಿ. ಯಾಕೆ ಗೊನೆ ಬೀಳುತ್ತದೆ: ಅಡಿಕೆ ಸಸಿಗಳಲ್ಲಿ ಫಸಲು ಪ್ರಾರಂಭವಾಗಲು ಮೂರು-ನಾಲ್ಕು- ಐದು ವರ್ಷ  ಬೇಕಾಗುತ್ತದೆ…

Read more
error: Content is protected !!