ಕುಬ್ಜ ತಳಿಯ ಅಡಿಕೆ ಮರ

ಕುಬ್ಜ ತಳಿಯ ಅಡಿಕೆ-ಹೇಗೆ ಬೆಳೆಸುವುದು? ಏನು ಅನುಕೂಲ?

ಕುಬ್ಜ ತಳಿಯ ಅಡಿಕೆಯನ್ನು ಬೆಳೆಸುವ ಬಗ್ಗೆ ರೈತರರಲ್ಲಿ ಇರುವ ಸಂದೇಹಗಳಿಗೆ ಇಲ್ಲಿದೆ ಸಮಂಜಸ  ಉತ್ತರ. ಕುಬ್ಜ ತಳಿಯ ಅಡಿಕೆಯನ್ನು ವಿಟ್ಲದ CPCRI ಪ್ರಾದೇಶಿಕ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯು  ಹೈಬ್ರೀಡೀಕರಣದ ಮೂಲಕ  ಅಭಿವೃದ್ದಿಪಡಿಸಿದೆ. ಈಗಾಗಲೇ ಇದು ಹಲವು ರೈತರಲ್ಲಿ  ಮಿತ ಸಂಖ್ಯೆಯಲ್ಲಿ ಬೆಳೆಯುತ್ತಿದೆ. ಸಂಸ್ಥೆಯಲ್ಲದೆ ಕೆಲವು ಖಾಸಗಿ ವ್ಯಕ್ತಿಗಳೂ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಬೆಳೆಸಿದ್ದೂ ಇದೆ.  ಕುಬ್ಜ ತಳಿ ಬೆಳೆಸಿದರೆ ನಿರ್ವಹಣೆ ಸುಲಭ ಎಂದು ಹೊಸಬರು ಅಂದುಕೊಂಡರೆ, ಕೆಲವರು. ಇದರಲ್ಲಿ  ಇತರ ತಳಿಯಷ್ಟು ಇಳುವರಿ ದೊರೆಯುವುದಿಲ್ಲ…

Read more

ಬೂದು ಕುಂಬಳ -ಸರ್ವ ರೋಗ ನಿವಾರಕ.

ಶರೀರದಲ್ಲಿ ಬೊಜ್ಜು ಇದೆಯೇ, ರಕ್ತದೊತ್ತಡ, ಮಧು ಮೇಹ , ಅಲ್ಲದೇ ಹೊಟ್ಟೆ ಸಂಬಂಧಿತ ತಾವುದೇ ಸಮಸ್ಯೆಗಳಿದ್ದರೂ ಕುಂಬಳ ಕಾಯಿಗೆ ಅದನ್ನು ಸರಿಪಡಿಸುವ ಶಕ್ತಿ ಇದೆ. ಇದರ ಜ್ಯೂಸ್ ದಿನಾ ಒಂದು ಲೋಟ ಕುಡಿದರೆ ನೀವು ಧೀರ್ಘಾಯುಶಿಗಳಾಗುತ್ತೀರಿ. ಬೂದಿ ಕುಂಬಳದ ರಸವನ್ನು ಕುಡಿಸಿ ಪ್ರಕೃತಿ ಚಿಕಿತ್ಸೆಯಲ್ಲಿ ಆರೋಗ್ಯ ಸಮಸ್ಯೆ ಸರಿಪಡಿಸಲಾಗುತ್ತದೆ. ಏಷ್ಯಾದ  ಜಾವಾ ಮೂಲದ ತರಕಾರಿ ಇದು. ತರಕಾರಿಯೂ ಧೀರ್ಘಾಯುಶಿ. ತಿಂದವರೂ ಧೀರ್ಘಾಯುಶಿಗಳು. ಚಪ್ಪರದ ಮೇಲೆ, ನೆಲದ ಮೇಲೆ  ಹಬ್ಬಿ ಬೆಳೆಯುವ ಬಳ್ಳಿ ಸಸ್ಯ. ಸೋರೆಕಾಯಿ ಕುಟುಂಬಕ್ಕೆ ಸೇರಿರುವ…

Read more
ಸಂಪಧ್ಭರಿತ ಕಾಂಪೋಸ್ಟ್ ಗೊಬ್ಬರ ಹೇಗೆ ತಯಾರಿಸುವುದು

ಸಂಪಧ್ಭರಿತ ಕಾಂಪೋಸ್ಟ್ ಗೊಬ್ಬರ ಹೇಗೆ ತಯಾರಿಸುವುದು?

ಸಾವಯವ ಗೊಬ್ಬರದ ಪ್ರಮುಖ ಮೂಲ ಕಾಂಪೋಸ್ಟ್. ಬಹುತೇಕ ಎಲ್ಲಾ ಕೃಷಿಕರೂ ಸಾವಯವ ಗೊಬ್ಬರ ತಯಾರಿಸುತ್ತಾರೆ. ಆದರೆ ಹೆಚ್ಚಿನವರು ವೈಜ್ಞಾನಿಕವಾಗಿ ಹೇಗೆ ತಯಾರಿಸಬೇಕೋ ಹಾಗೆ ತಯಾರಿಸದ ಕಾರಣ ಅದರ ಬಳಕೆಯಿಂದ ಸರಿಯಾದ ಫಲವನ್ನು ಪಡೆಯುತ್ತಿಲ್ಲ.  ವೈಜ್ಞಾನಿಕವಾಗಿ  ತಯಾರಿಸಿದ ಕಾಂಪೋಸ್ಟ್ ಗೊಬ್ಬರ ಎರೆಹುಳು ಗೊಬ್ಬರದಷ್ಟೇ ಸತ್ವವನ್ನು ಒಳಗೊಂಡಿರುತ್ತದೆ ಹಾಗೆಯೇ  ಕೊಂಡು ತರುವ ಚೀಲದಲ್ಲಿ ತುಂಬಿದ ಸಾವಯವ ಗೊಬ್ಬರಕ್ಕಿಂತ  ಅದೆಷ್ಟೋ ಪಾಲು  ಫಲಿತಾಂಶವನ್ನು  ಕೊಡುತ್ತದೆ. ಇದನ್ನು ಮಾಡುವುದಕ್ಕೆ ಕಷ್ಟ ಏನೂ ಇಲ್ಲ. ಬರೇ ಸರಳ.ಆದರೆ ನಾವು ಅಜ್ಜ ನೆಟ್ಟ ಆಲದ ಮರಕ್ಕೆ…

Read more

ಗುಳ್ಳಕ್ಕೆ ಇದು ಬದಲಿ ತಳಿ.

ಬದನೆ ಬೆಳೆಸುವ ರೈತರು ಬೆಳೆ ಉಳಿಸಿಕೊಳ್ಳುವುದಕ್ಕಾಗಿ ಮಾಡುವ ಖರ್ಚು ಅತೀ ಹೆಚ್ಚು. ಸಾಕಷ್ಟು ಕೀಟನಾಶಕ – ರೋಗ ನಾಶಕ ಬಳಸಿ  ಬೆಳೆ ಉಳಿಸಿಕೊಳ್ಳುತ್ತಾರೆ. ಇಷ್ಟೆಲ್ಲಾ ಖರ್ಚು ಮಾಡಿದಾಗ ರೈತರಿಗೆ ಉಳಿಯುವುದು ಅಷ್ಟಕ್ಕಷ್ಟೇ.  ಖರ್ಚು ಕಡಿಮೆ ಮಾಡಿ ಬೆಳೆ ಬೆಳೆಸಬೇಕಿದ್ದರೆ ಇರುವುದು ರೋಗ ನಿರೋಧಕ ಶಕ್ತಿ ಪಡೆದ ತಳಿಯನ್ನು ಆಯ್ಕೆ ಮಾಡುವುದು ಒಂದೇ. ಗುಳ್ಳ ಬದನೆಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ. ಆದರೆ ಈಗಿತ್ತಲಾಗಿ ಗುಳ್ಳ ಬದನೆ ಬೆಳೆಸುವುದೇ ಕಷ್ಟವಾಗುತ್ತಿದೆ. ಬೆಳೆಸು ರೈತರು ಗುಳ್ಳ ತಿನ್ನುವುದನ್ನೇ ಕಡಿಮೆ ಮಾಡಿದ್ದೂ ಇದೆ….

Read more
1 ಎಕ್ರೆಗೆ 1000 ಅಡಿಕೆ ಸಸಿ-ವಿಶಿಷ್ಟ ವಿಧಾನದ ಅಡಿಕೆ ಬೇಸಾಯ.

1 ಎಕ್ರೆಗೆ 1000 ಅಡಿಕೆ ಸಸಿ-ವಿಶಿಷ್ಟ ವಿಧಾನದ ಅಡಿಕೆ ಬೇಸಾಯ.

1 ಎಕ್ರೆ ಅಡಿಕೆ ಬೆಳೆಸುವವರು ಸಾಮಾನ್ಯವಾಗಿ 500 ಅಡಿಕೆ ಸಸಿಗಳನ್ನು ನೆಡುತ್ತಾರೆ. ಅದರ ಬದಲು ಈ ರೀತಿಯ ವಿಶೇಷ ಅಂತರದ ಅಡಿಕೆ ಬೇಸಾಯದಲ್ಲಿ ಹೆಚ್ಚು ವಿಸ್ತೀರ್ಣ ಇಲ್ಲದೆ ಅಡಿಕೆ ಸಸಿಗಳನ್ನು ಹಿಡಿಸಿ ಅಧಿಕ ಫಸಲು ಪಡೆಯಬಹುದು. ಇಲ್ಲಿ ನೀರು, ಗೊಬ್ಬರ, ಶ್ರಮ ಉಳಿತಾಯವಾಗುತ್ತದೆ. ಮುಂದಿನ ದಿನಗಳಲ್ಲಿ ಎದುರಾಗುವ ತೋಟ ನಿರ್ವಹಣೆ ಮೇಲ್ವಿಚಾರಣೆ ಸಮಸ್ಯೆಗೆ ಇದು ಉತ್ತಮ ಬೇಸಾಯ ವಿಧಾನ ಎನ್ನಿಸಬಲ್ಲದು. ಅಡಿಕೆ ತೋಟ ಎಂದರೆ ಸಾಲಾಗಿ ಸಸಿಗಳನ್ನು ನೆಡುವುದು, ಪರಸ್ಪರ ನಿರ್ಧಿಷ್ಟ ಅಂತರ. ಅದರಲ್ಲೂ ಚದರ ಚೌಕ…

Read more
ಗ್ಲೆರಿಸೀಡಿಯಾ ಆಧಾರದಲ್ಲಿ ಕರಿಮೆಣಸಿನ ಬಳ್ಳಿ ಬೆಳೆಸಬಹುದು.

ಗ್ಲೆರಿಸೀಡಿಯಾ  ಆಧಾರದಲ್ಲಿ ಕರಿಮೆಣಸಿನ ಬಳ್ಳಿ ಬೆಳೆಸಬಹುದು.

ಗ್ಲೆರಿಸೀಡಿಯಾ ಗೆಲ್ಲು ನೆಟ್ಟು ಕರಿಮೆಣಸಿನ ಬಳ್ಳಿಯನ್ನು  ಬಿಟ್ಟರೆ ಚೆನ್ನಾಗಿ ಬೆಳೆಯುತ್ತದೆ. ಇದರಿಂದ ಕೊಯಿಲು ಮಾಡಲು ಕಷ್ಟವಿಲ್ಲ. ಹಿಂದೆ ನಮ್ಮಲ್ಲಿ ಹಾಲುವಾಣ ಮರಗಳಿಗೆ ಮೆಣಸಿನ ಬಳ್ಳಿ ಹಬ್ಬಿಸುತ್ತಿದ್ದರು. ಕ್ರಮೇಣ ಅಡಿಕೆ, ತೆಂಗಿನ ಮರ ಹಾಗೆಯೇ ಇನ್ನಿತರ  ಕಾಡು ಮರಮಟ್ಟುಗಳಿಗೆ ಬಳ್ಳಿ ಹಬ್ಬಿಸುವುದು ಪ್ರಾರಂಭವಾಯಿತು. ಈ ಮರಮಟ್ಟುಗಳಲ್ಲಿ ಬಳ್ಳಿ  ಉತ್ತಮವಾಗಿ ಹಬ್ಬುತ್ತದೆಯಾದರೂ ಕೊಯಿಲು ಕೆಲಸ ಕಷ್ಟವಾಗಲಾರಂಭಿಸಿದೆ. ಅದಕ್ಕೊಂದು ಪರಿಹಾರ ಹುಡುಕುವ ನಿಟ್ಟಿನಲ್ಲಿ ಬೇರೆ ಬೇರೆ ಪ್ರಯೋಗಗಳು ನಡೆಯುತ್ತಿವೆ. ಅವುಗಳಲ್ಲಿ ಒಂದು ಗ್ಲೆರಿಸೀಡಿಯಾ ಸಸ್ಯ. ಈ ಸಸ್ಯಕ್ಕೆ ಕರಿಮೆಣಸಿನ ಬಳ್ಳಿ ಹಬ್ಬಿಸುವುದರಿಂದ…

Read more
ಮಂಗಳ ಆಡಿಕೆ

ಜಲ್ಲಿ ಮಂಗಳ ಎಂಬ ಹೊಸ ತಳಿ ಇದೆಯೇ?

ಮಂಗಳ ಎಂಬ ತಳಿಯನ್ನು ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯು 1972 ರಲ್ಲಿ ಚೀನಾ ದಿಂದ ಮೂಲ ತಂದು ಇಲ್ಲಿ ಅಭಿವೃದ್ದಿಪಡಿಸಿದ್ದು ಬಿಟ್ಟರೆ, ಈ ತನಕ ಬೇರೆ ಮಂಗಳ ತಳಿಯನ್ನು ಬಿಡುಗಡೆ ಮಾಡಿಲ್ಲ. ಅದರ ಮೂಲ ಗುಣ ಕ್ಷೀಣವಾದುದಕ್ಕೆ ಅದರಲ್ಲೇ ಆಂತರಿಕ ಕ್ರಾಸಿಂಗ್  ಮಾಡಿ ಇಂಟರ್ ಮಂಗಳವನ್ನು 1984 ರಲ್ಲಿ ಪಡೆಯಯಲಾಗಿದೆ.  ಚೀನಾದಲ್ಲಿ ಇದಕ್ಕೆ ಯಾವ ಹೆಸರಿತ್ತೋ ಗೊತ್ತಿಲ್ಲ. ಇಲ್ಲಿ ಅಭಿವೃದ್ದಿಪಡಿಸಿ ಬಿಡುಗಡೆ ಮಾಡುವಾಗ ಮಂಗಳ ಹೆಸರನ್ನು ನೀಡಲಾಗಿದೆ. ಹಾಗೆ ನೋಡಿದರೆ ಕೆಲವು ಚಾಲಿ ಅಡಿಕೆಗೆ ಹೊಂದುವ…

Read more
ಕೀಟ-ರೋಗನಾಶಕ ಸಿಂಪರಣೆ

ಕೀಟನಾಶಕಗಳು ಮೈಗೆ ಕೈಗೆ ತಾಗಿದರೆ ಏನು ಮಾಡಬೇಕು?

ಬೆಳೆ ರಕ್ಷಣೆಯಲ್ಲಿ ರೈತರು ಕೀಟನಾಶಕಗಳನ್ನು ಬಳಸಿದಾಗ ಕೆಲವೊಮ್ಮೆ ಅಪ್ಪಿ ತಪ್ಪಿ ಅದು ಚರ್ಮ, ಕಣ್ಣು, ಬಾಯಿ ಮುಂತಾದ ಭಾಗಗಳಿಗೆ ತಾಗುತ್ತದೆ. ಅದರ ವಾಸನೆ ಉಸಿರಾಟದ ಮೂಲಕ ದೇಹದ ಒಳಗೆ ಸೇರುತ್ತದೆ.  ಹೀಗಾದಾಗ ಅದನ್ನು ನಿರ್ಲಕ್ಷ್ಯ ಮಾಡಬಾರದು.ಪ್ರಥಮ ಚಿಕಿತ್ಸೆ ಅಥವಾ ಹೆಚ್ಚು ತೊಂದರೆಗಳಿದ್ದರೆ ತಜ್ಞ ವೈದ್ಯರಲ್ಲಿಗೆ ಹೋಗಿ ಚಿಕಿತ್ಸೆ ಮಾಡಿಸಿಕೊಳ್ಳಬೇಕು. ಇದು ನಮ್ಮ ದೇಹವನ್ನು ನಿಧಾನ ವಿಷಕ್ಕೆ ಬಲಿಯಾಗುವಂತೆ ಮಾಡುತ್ತದೆ.  ರೈತರ ಮತ್ತು ಕೃಷಿಕಾರ್ಮಿಕರು ಕೀಟನಾಶಕಗಳನ್ನು ಮತ್ತು ಸಿಂಪರಣೆ ಯಂತ್ರಗಳನ್ನು ಸಮರ್ಪಕವಾಗಿ ಉಪಯೋಗ ಮಾಡಿದಾಗ ಮಾತ್ರ ಅದು ಸುರಕ್ಷಿತ….

Read more
Kare Ishaad

ಉತ್ತರ ಕನ್ನಡದ ವಿಶೇಷ ಮಾವು- ಕರೇ ಈಶಾಡ್.

ಕುಮಟಾ ಅಂಕೋಲಾ ಮಧ್ಯೆ ಹೆಚ್ಚಿನವರ ಮನೆ ಬಾಗಿಲಿನಲ್ಲಿ ಒಂದೆರಡು ಮಾವಿನ ಮರ ಇದ್ದೇ ಇರುತ್ತದೆ. ಇಲ್ಲಿ ಜನ ಯಾವುದಾದರೂ ಮರ ಕಡಿದಾರು ಆದರೆ ಮನೆ ಹಿತ್ತಲಿನಲ್ಲಿರುವ ಕರೇ ಈಶಾಡ್ ಮಾವಿನ ಮರಕ್ಕೆ  ಕೊಡಲಿ ಇಡಲಾರರು. ಕಾರಣ ಇದು ಆ ಪ್ರದೇಶದ ಪ್ರಸಿದ್ದ ಮಾವಿನ ತಳಿ. ಜೊತೆಗೆ ಹಣ್ಣಿನ ಸೀಸನ್‍ನಲ್ಲಿ ಸ್ವಲ್ಪ ಉತ್ಪತ್ತಿ ತಂದುಕೊಡುವ ಬೆಳೆ.    ಕರೇ ಈಶಾಡ್ ಎಂಬುದು ಕುಮಟಾ ಅಂಕೋಲಾ ಮಧ್ಯದ ಪ್ರದೇಶಗಳಲ್ಲಿ ಬೆಳೆಯಲ್ಪಡುವ ಸ್ಥಳೀಯ ಮಾವಿನ ತಳಿ. ಸುಮಾರಾಗಿ ಮುಂಡಪ್ಪದ ಗಾತ್ರದಲ್ಲಿರುವ ಈ…

Read more

ಈ ಕಳೆ ಸಸ್ಯ ನಿಯಂತ್ರಿಸಲು ಕೆಲವು ಸರಳ ಉಪಾಯ.

ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ಮಾತಿನಂತೆ ಕಳೆ ಗಿಡವನ್ನು ಇನ್ನೊಂದು ಗಿಡದ ಸಹಾಯದಿಂದ ತೆಗೆಯಲು ಸಾಧ್ಯ. ಅಂಥಹ ಗಿಡಗಳು ನಮ್ಮಲ್ಲಿ ಹಲವು ಇವೆ. ಒಂದು ಸಸ್ಯವನ್ನು ಮತ್ತೊಂದು ಸಸ್ಯದಿಂದ ನಿಯಂತ್ರಿಸಬಹುದು ಎಂಬುದು ಮನಗೆಲ್ಲಾ ಗೊತ್ತಿದೆ. ರಬ್ಬರ್ ಬೆಳೆಗಾರರು  ತೋಟದಲ್ಲಿ ಇತರ ಸಸ್ಯಗಳು ಬೆಳೆಯದೆ ಇರುವ ಸಲುವಾಗಿ ಮುಚ್ಚಲು ಬೆಳೆಯನ್ನು ಬೆಳೆಸುತ್ತಾರೆ. ಅದೇ ಸಿದ್ದಾಂತದಲ್ಲಿ  ಹಳದಿ ಸೇವಂತಿಕೆ ಹೂವಿನ ಸಸ್ಯ (Singapore daisy) Scientific name : Sphagneticola trilobata  ವನ್ನು ನಿಯಂತ್ರಿಸಬಹುದು. ದ್ವಿದಳ ಜಾತಿಯ ಸಸ್ಯಗಳನ್ನು ಹಳದಿ ಹೂವಿನ…

Read more
error: Content is protected !!